Author: AIN Author

ಹಾಸನ : ಹೊಸ ತಾಂತ್ರಿಕತೆ, ವಿಷಯಗಳ ಅಧ್ಯಯನಕ್ಕೆ ಹಾಗೂ ಹೊಸ ಅವಿಷ್ಕಾರಗಳ ಮಂಡನೆಗೆ ಮೈಸೂರ್ ಕಾನ್‌ನಂತಹ ಕಾರ್ಯ ಕ್ರಮಗಳು ಸಹಕಾರಿಯಾಗಲಿದೆ ಎಂದು ಜೈನ್ ವಿಶ್ವವಿದ್ಯಾಲಯ ಮುಖ್ಯಸ್ಥರು ಸ್ಪೇನ್ ದೇಶದ ಡಾ. ರೋಸಿಯೊ ಫೆರಜ್ ಪರಡೋ ತಿಳಿಸಿದರು. ನಗರದ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ಐಇಇಇ ಮೈ ಸೂರು ಉಪ ವಿಭಾಗದವರು ಹಾಗೂ ಮಲೆನಾಡು ಇಂಜಿನೀ ಯರಿಂಗ್ ಕಾಲೇಜಿನ ಎಲೆಕ್ಟ್ರಾನಿಕ್ಸ್ ವಿಭಾಗದ ವತಿಯಿಂದ ಆಯೋಜಿ ಸಲಾಗಿದ್ದ ಸ್ಮಾರ್ಟ್ ಸಿಟಿಗಳ ಕುರಿತು ಮೈಸೂರ್ ಕಾನ್-೨೦೨೩ ಎಂಬ ಅಂತಾ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಈ ರೀತಿಯ ಅಂತಾ ರಾಷ್ಟ್ರೀಯ ಸಮ್ಮೇಳನದಿಂದ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವುದರ ಜೊತೆಗೆ ಹೆಚ್ಚಿನ ರೀತಿ ಮಾಹಿತಿ ದೊರೆಯುತ್ತದೆ. ವಿದ್ಯಾರ್ಥಿ ಗಳ ಮುಂದಿನ ಅಧ್ಯಾಯದಲ್ಲಿ ಸಹಕಾರಿಯಾಗಲಿದೆ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಲೆನಾಡು ತಾಂತ್ರಿಕ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಆರ್.ಟಿ. ದ್ಯಾವೇಗೌಡ ಮಾತ ನಾಡಿ, ಅಂತಾರಾಷ್ಟ್ರೀಯ ಸಮ್ಮೇಳ ನವನ್ನು ಮಲೆನಾಡು ಇಂಜಿನೀ ಯರಿಂಗ್ ಕಾಲೇಜಿನ ವತಿಯಿಂದ ಏರ್ಪಡಿಸಲು ಅವಕಾಶ ಸಿಕ್ಕಿರು…

Read More

ಕನಕಪುರ:- ಬೆಳಗಾವಿ ಅಧಿವೇಶನದ ಕಲಾಪದಲ್ಲಿ ಸರ್ಕಾರ ಕಟ್ಟಿಹಾಕಲು ನಾನೇ ಹಗ್ಗ ಕಳಿಸಿಕೊಡುವೆ ಎಂದು DCM ಡಿಕೆಶಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ನಮ್ಮಲ್ಲಿ ಒಳ್ಳೆ ತೆಂಗಿನ ನಾರಿನ ಹಗ್ಗ ಸಿಗುತ್ತದೆ. ಬೇಕಾದರೆ ವಿಪಕ್ಷಗಳಿಗೆ ಕಳುಹಿಸಿಕೊಡುತ್ತೇನೆ. ಅದರಲ್ಲಿ ನಮ್ಮನ್ನು ಕಟ್ಟಿ ಹಾಕಲಿ ಎಂದರು. ನಮ್ ಮನೆಯವ್ರಿಗೆ ಮತ್ತು ಕ್ಷೇತ್ರದ ಜನರಿಗೆ ಟೈಮ್ ಕೊಡಲು ಆಗುತ್ತಿಲ್ಲ. ಅಷ್ಟೊಂದು ಕೆಲಸದ ಒತ್ತಡ ಇದೆ. ಈಗ ಅಧಿವೇಶನಕ್ಕೆ ಬೆಳಗಾವಿಗೆ 10 ದಿನ ಹೋಗುತ್ತೇವೆ. ಅದರ ಜೊತೆಗೆ ರಾಜಕೀಯ ಜಂಜಾಟ ಬೇರೆ ಇದೆ. ಕ್ಷೇತ್ರದಲ್ಲಿನ ಕೆಲ ಕೆಲಸಗಳ ಪ್ರಗತಿ ಬಗ್ಗೆ ಸಂಸದ ಡಿ.ಕೆ.ಸುರೇಶ್ ನಿಗಾ ವಹಿಸಿದ್ದಾರೆ ಎಂದರು.

Read More

ರೈತರ ಜಮೀನಿಗೆ ತೆರಳುವ ದಾರಿಗೆ ಅನ್ಯಭೂಮಾಲೀಕರು ಇನ್ನುಮುಂದೆ ಅಡ್ಡಿಪಡಿಸುವಂತಿಲ್ಲ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹೊಸ ಸುತ್ತೋಲೆಯನ್ನು ಹೊರಡಿಸಿದೆ. ರಾಜ್ಯಾದ್ಯಂತ ರೈತರಿಂದ ಈ ಸಂಬಂಧ ದೂರು ಬಂದ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮ ಕೈಗೊಂಡಿದೆ. ರಾಜ್ಯದಲ್ಲಿ ರೈತರು ವ್ಯವಸಾಯದ ಉದ್ದೇಶಗಳಿಗಾಗಿ ಬಳಸುವ ಕೃಷಿ ಸಲಕರಣೆಗಳನ್ನು ಸಾಗಿಸಲು ಅನ್ಯ ಭೂಮಾಲೀಕರ ಖಾಸಗಿ ಜಮೀನುಗಳಲ್ಲಿ ತಿರುಗಾಡಲು ದಾರಿಯ ಸಮಸ್ಯೆ ಇದೆ. ಇದರಿಂದ ರೈತರಿಗೆ ತೊಂದರೆಗಳಾಗುತ್ತಿರುವ ಬಗ್ಗೆ ಹಲವು ದೂರುಗಳು ಬಂದಿದ್ದವು. ಸರ್ಕಾರಕ್ಕೆ ಬಂದ ದೂರುಗಳು ಅಕ್ಕಪಕ್ಕದ ಜಮೀನುಗಳ ರೈತರು ಕೆಲವು ಖಾಸಗಿ ಜಮೀನುಗಳನ್ನು ದಾಟಿಕೊಂಡು ಕೃಷಿ ಪೂರಕ ಚಟುವಟಿಕೆಗಳನ್ನು ಮಾಡಲು ಹಾಗೂ ಬೆಳೆದ ಫಸಲನ್ನು ಹೊರತರಲಾಗದೆ ನಷ್ಟ ಹೊಂದುತ್ತಿರುವುದು ಸಾರ್ವಜನಿಕರಿಂದ ಮನವಿ/ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮ ಕೈಗೊಂಡಿದೆ ರಿಜಿಸ್ಟರ್‌ನಲ್ಲಿ ನಮೂದಿಗೂ ಅವಕಾಶ ಕರ್ನಾಟಕ ಭೂ ಕಂದಾಯ ನಿಯಮಗಳು, 1966ರ ನಿಯಮ 59 ರಲ್ಲಿ ದಾರಿಯ ಹಕ್ಕುಗಳು ಮತ್ತು ಇತರ, ಅನುಭೋಗದ ಹಕ್ಕುಗಳ ಬಗ್ಗೆ ತಿಳಿಸಲಾಗಿದ್ದು, ಸಂಬಂಧಪಟ್ಟ ಜಮೀನುಗಳ ಭಾಗಿದಾರರು ಒಪ್ಪಿರುವಂತಹ ಸಂದರ್ಭದಲ್ಲಿ…

Read More

ಕನಕಪುರ:- ಬೆಳಗಾವಿ ಅಧಿವೇಶನದ ಕಲಾಪದಲ್ಲಿ ಸರ್ಕಾರ ಕಟ್ಟಿಹಾಕಲು ನಾನೇ ಹಗ್ಗ ಕಳಿಸಿಕೊಡುವೆ ಎಂದು DCM ಡಿಕೆಶಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ನಮ್ಮಲ್ಲಿ ಒಳ್ಳೆ ತೆಂಗಿನ ನಾರಿನ ಹಗ್ಗ ಸಿಗುತ್ತದೆ. ಬೇಕಾದರೆ ವಿಪಕ್ಷಗಳಿಗೆ ಕಳುಹಿಸಿಕೊಡುತ್ತೇನೆ. ಅದರಲ್ಲಿ ನಮ್ಮನ್ನು ಕಟ್ಟಿ ಹಾಕಲಿ ಎಂದರು. ನಮ್ ಮನೆಯವ್ರಿಗೆ ಮತ್ತು ಕ್ಷೇತ್ರದ ಜನರಿಗೆ ಟೈಮ್ ಕೊಡಲು ಆಗುತ್ತಿಲ್ಲ. ಅಷ್ಟೊಂದು ಕೆಲಸದ ಒತ್ತಡ ಇದೆ. ಈಗ ಅಧಿವೇಶನಕ್ಕೆ ಬೆಳಗಾವಿಗೆ 10 ದಿನ ಹೋಗುತ್ತೇವೆ. ಅದರ ಜೊತೆಗೆ ರಾಜಕೀಯ ಜಂಜಾಟ ಬೇರೆ ಇದೆ. ಕ್ಷೇತ್ರದಲ್ಲಿನ ಕೆಲ ಕೆಲಸಗಳ ಪ್ರಗತಿ ಬಗ್ಗೆ ಸಂಸದ ಡಿ.ಕೆ.ಸುರೇಶ್ ನಿಗಾ ವಹಿಸಿದ್ದಾರೆ ಎಂದರು.

Read More

ಮೈಸೂರು: ಕಾಂತರಾಜ್ ವರದಿ ಜಾರಿಗೆ ವಿಳಂಬ ವಿಚಾರಕ್ಕೆ ಸಂಬಂಧಿಸಿದಂತೆ ಸಿ.ಟಿ ರವಿ, ಸರ್ಕಾರದ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.ಮೈಸೂರಲ್ಲಿ ಸುದ್ದಿ ಗೋಷ್ಠಿ ನಡೆಸಿ ಮಾತಾಡಿದ ಅವರು, ,ಕೆರೆ ಕಲಕಿ ಮೀನು ಹಿಡಿಯುವ ಕೆಲಸವನ್ನ ಕಾಂಗ್ರೆಸ್ ಮಾಡುತ್ತಿದೆ. ಇದರಲ್ಲಿ ಕಾಂಗ್ರೆಸ್ ನಡೆ ಅನುಮಾನ ಮೂಡಿಸುತ್ತಿದೆ‌. 2014 ರಲ್ಲಿ ಕಾಂಗ್ರೆಸ್ ಸರ್ಕಾರವೇ ಕಾಂತರಾಜ್ ಸಮಿತಿ ನೇಮಕ ಮಾಡಿತ್ತು. 3 ವರ್ಷಗಳಲ್ಲಿ ವರದಿ ರೆಡಿ ಆಗಿತ್ತು. https://ainlivenews.com/witchcraft-in-the-prestigious-karnataka-university-professors-chamber/ ಇವರಿಗೆ ವರದಿ ಜಾರಿ ಮಾಡುವ ಉದ್ದೇಶವೇ ಕಾಣುತ್ತಿಲ್ಲ. ಇದನ್ನು ಮುಂದಿಟ್ಟುಕೊಂಡು ಜಾತಿ ಜಾತಿ ನಡುವೆ ಕಲಹ ತರುವ ಕೆಲಸ ಮಾಡುತ್ತಿದ್ದಾರೆ.ಆ ಮೂಲಕ ಜಾತಿ, ಜಾತಿ ಕಲಕಿ ಮತ ಎಂಬ ಮೀನನ್ನು ಪಡೆಯುವ ಕೆಲಸ ಮಾಡುತ್ತಿದೆ. ಜನ ಹಿಂದೂ ಎಂದರೆ ಬಿಜೆಪಿಗೆ ಮತ ಹಾಕಿಬಿಡುತ್ತಾರೆ. ಹಾಗಾಗಿ ನಿಮ್ಮ ಜಾತಿಗೆ ಅನ್ಯಾಯ ಆಗುತ್ತೆ ಎಂದು ಬಿಂಬಿಸಿ ಮತ ಪಡೆಯಲು ಹೊರಟಿದ್ದಾರೆ ಎಂದು ಸಿಟಿ ರವಿ ಕಿಡಿಕಾರಿದರು.  

Read More

ಮುಂಬೈ: ಇತ್ತೀಚಿನ ದಿನಗಳಲ್ಲಿ ಮಾದಕ ವ್ಯಸನಕ್ಕೆ ಬಲಿಯಾಗುವವರ ಸಂಖ್ಯೆ ಹೆಚ್ಚಾಗುತ್ತಿದೆ. ಅದೇ ರೀತಿ ಡ್ರಗ್ಸ್‌ ಖರೀದಿಸಲು ಹೆತ್ತ ಮಕ್ಕಳನ್ನೇ ಮಾರಾಟ ಮಾಡಿದ ಆರೋಪದ ಮೇಲೆ ದಂಪತಿ ಸೇರಿದಂತೆ ಮೂವರನ್ನು ಮುಂಬೈ ಕ್ರೈಂ ಬ್ರಾಂಚ್ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಪೋಷಕರಾದ ಶಬ್ಬೀರ್‌, ಸಾನಿಯಾ ಮತ್ತು ಶಕೀಲ್‌ ಮಕ್ರಾನಿ ಬಂಧಿತ ಆರೋಪಿಗಳು. ಅಲ್ಲದೇ ಮಾರಾಟದಿಂದ ಕಮಿಷನ್ ಪಡೆದ ಆರೋಪಿ ಉಷಾ ರಾಥೋಥ್‌ ಎಂಬಾಕೆಯನ್ನೂ ಮುಂಬೈ ಪೊಲೀಸರು ಬಂಧಿಸಿದ್ದಾರೆ. ಅಂಧೇರಿಯಲ್ಲಿ ಒಂದು ತಿಂಗಳ ಒಂದು ಮಗುವನ್ನು ರಕ್ಷಣೆ ಮಾಡಿದ್ದು, 2 ವರ್ಷದ ಮತ್ತೊಂದು ಮಗುವಿಗಾಗಿ ಹುಡುಕಾಟ ನಡೆಯುತ್ತಿದೆ. ಮಾದಕ ವ್ಯಸನಿಗಳಾಗಿದ್ದ ದಂಪತಿ ಅಂಧೇರಿಯಲ್ಲಿ ತಮ್ಮ ಇಬ್ಬರು ಮಕ್ಕಳನ್ನು ಮಾರಾಟ ಮಾಡಿ ಹಣ ಸಂಪಾದಿಸಿದ್ದಾರೆ. ಗಂಡು ಮಗುವನ್ನು 60 ಸಾವಿರ ರೂ.ಗೆ, ಒಂದು ತಿಂಗಳ ಹೆಣ್ಣು ಮಗುವನ್ನು 14 ಸಾವಿರ ರೂ.ಗಳಿಗೆ ಮಾರಾಟ ಮಾಡಿದ್ದಾರೆ. https://ainlivenews.com/witchcraft-in-the-prestigious-karnataka-university-professors-chamber/  ಕುಟುಂಬಕ್ಕೆ ತಿಳಿದು ತಕ್ಷಣ ಡಿ.ಎನ್.ನಗರ ಪೊಲೀಸ್ ಠಾಣೆಗೆ ದೂರು ನೀಡಿದ ಬಳಿಕ ಪ್ರಕರಣ ಬೆಳಿಕಿಗೆ ಬಂದಿದ್ದು, ಬಂಧಿಸಲಾಗಿದೆ ಎಂದು ಮುಂಬೈ ಅಪರಾಧ…

Read More

ಬೆಂಗಳೂರು:- T20 ಕ್ರಿಕೆಟ್ ಹಿನ್ನೆಲೆ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಬಿಎಂಟಿಸಿ ಹೆಚ್ಚುವರಿ ಬಸ್‌ಗಳನ್ನು ಓಡಿಸಲಿದೆ. ಇಂದು ಭಾರತ-ಆಸ್ಟ್ರೇಲಿಯಾ ಟಿ 20 ಪಂದ್ಯ ನಡೆಯಲಿದೆ. ಚಿನ್ನಸ್ವಾಮಿ ಕ್ರೀಡಾಂಗಣದಿಂದ ಎಚ್‌ಎಎಲ್‌ ರಸ್ತೆ ಮೂಲಕ ಕಾಡುಗೋಡಿ, ಚಿನ್ನಸ್ವಾಮಿ ಕ್ರೀಡಾಂಗಣದಿಂದ ಹೂಡಿ ರಸ್ತೆ ಮೂಲಕ ಕಾಡುಗೋಡಿ ಬಸ್ ನಿಲ್ದಾಣ, ಚಿನ್ನಸ್ವಾಮಿ ಕ್ರೀಡಾಂಗಣದಿಂದ ಅಗರ, ದೊಮ್ಮಸಂದ್ರ ಮಾರ್ಗವಾಗಿ ಸರ್ಜಾಪುರ, ಚಿನ್ನಸ್ವಾಮಿ ಕ್ರೀಡಾಂಗಣದಿಂದ ಹೊಸೂರ ರಸ್ತೆ ಮಾರ್ಗವಾಗಿ ಎಲೆಕ್ಟ್ರಾನಿಕ್‌ ಸಿಟಿಗೆ ಬಸ್‌ ವ್ಯವಸ್ಥೆ ಮಾಡಲಾಗಿದೆ. ಇದಲ್ಲದೆ ಚಿನ್ನಸ್ವಾಮಿ ಕ್ರೀಡಾಂಗಣದಿಂದ ಜಯದೇವ ಆಸ್ಪತ್ರೆ ಮೂಲಕ ಬನ್ನೇರುಘಟ್ಟ ನ್ಯಾಷನಲ್‌ ಪಾರ್ಕ್‌, ಚಿನ್ನಸ್ವಾಮಿ ಕ್ರೀಡಾಂಗಣದಿಂದ ಎಂಸಿಟಿಸಿ ನಾಯಂಡನಹಳ್ಳಿ ಮಾರ್ಗವಾಗಿ ಕೆಂಗೇರಿ ಕೆಎಚ್‌ಬಿ ಕಾಲೋನಿ, ಚಿನ್ನಸ್ವಾಮಿ ಕ್ರೀಡಾಂಗಣದಿಂದ ಮಾಗಡಿ ರಸ್ತೆ ಮಾರ್ಗವಾಗಿ ಜನಪ್ರಿಯ ಟೌನ್‌ಶಿಪ್‌, ಚಿನ್ನಸ್ವಾಮಿ ಕ್ರೀಡಾಂಗಣದಿಂದ ಯಶವಂತಪುರ ಮಾರ್ಗವಾಗಿ ನೆಲಮಂಗಲಕ್ಕೆ ಬಸ್‌ ವ್ಯವಸ್ಥೆ ಮಾಡಲಾಗಿರುತ್ತದೆ. ಚಿನ್ನಸ್ವಾಮಿ ಕ್ರೀಡಾಂಗಣದಿಂದ ಹೆಬ್ಬಾಳ ಮಾರ್ಗವಾಗಿ ಯಲಹಂಕ 5ನೇ ಹಂತ, ನಾಗವಾರ, ಟ್ಯಾನರಿ ರಸ್ತೆ ಮೂಲಕ ಆರ್‌ಕೆ ಹೆಗಡೆ ನಗರ ಯಲಹಂಕ, ಹೆಣ್ಣೂರು ರಸ್ತೆ ಮಾರ್ಗವಾಗಿ ಬಾಗಲೂರು, ಟಿನ್‌ ಫ್ಯಾಕ್ಟರಿ ಮಾರ್ಗವಾಗಿ…

Read More

ಬಿಗ್ ಬಿ ಅಮಿತಾಭ್ ಬಚ್ಚನ್ (Amitabh Bachchan) ನಡೆಸಿಕೊಡುವ ಕೌನ್ ಬನೇಗಾ ಕರೋಡ್ ಪತಿ (Kaun Banega Crorepati) ಶೋ ಇದೀಗ 15ನೇ ಆವೃತ್ತಿ ಪ್ರಸಾರವಾಗಿದೆ. ಇದೇ ಮೊದಲ ಬಾರಿಗೆ ಈ ಶೋನಲ್ಲಿ 14 ವರ್ಷದ ಹುಡುಗನ ಕೋಟಿ ರೂಪಾಯಿ ಸಿಕ್ಕಿದೆ. 16 ನೇ ಪ್ರಶ್ನೆಗೆ ಸರಿಯಾಗಿ ಉತ್ತರಿಸುವ ಮೂಲಕ ಒಂದು ಕೋಟಿ ರೂಪಾಯಿ ಪಡೆದಿದ್ದಾನೆ ಹರಿಯಾಣದ ಮಹೇಂದ್ರ ಗಡ್ ಮಾಯಾಂಕ್. ಮಾಯಾಂಕ್ (Mayank) ಸದ್ಯ 8ನೇ ತರಗತಿ ಓದುತ್ತಿದ್ದಾನೆ. ಈ ಸೀಸನ್ ನಲ್ಲಿ ಒಂದು ಕೋಟಿ ರೂಪಾಯಿ ಪಡೆಯುವ ಮೂಲಕ ದಾಖಲೆ ಬರೆದಿದ್ದಾನೆ. ಒಂದು ಕೋಟಿ ರೂಪಾಯಿ ಪಡೆದ ಅತ್ಯಂತ ಕಿರಿಯ ವಯಸ್ಸಿನ ಸ್ಪರ್ಧಿ ಅವನಾಗಿದ್ದಾನೆ. ಲೀಲಾ ಜಾಲವಾಗಿ 15 ಪ್ರಶ್ನೆಗಳಿಗೆ ಉತ್ತರಿಸುವ ಮೂಲಕ ಅಚ್ಚರಿ ಮೂಡಿಸಿದ್ದಾನೆ. ಕೇವಲ ಒಂದು ಕೋಟಿಗೆ ಮಾತ್ರವಲ್ಲ, ಏಳು ಕೋಟಿಗೂ ಗುರಿಯಿಟ್ಟು ಆಟವಾಡಲು ಮುಂದಾದ. ಆದರೆ, ಏಳು ಕೋಟಿ ಪ್ರಶ್ನೆಗೆ ಉತ್ತರಿಸೋಕೆ ಆಗದೇ ಆಟದಿಂದ ವಾಪಸ್ಸಾದ. ಈ ಹುಡುಗನ ಸಾಧನೆಗೆ ಹರ್ಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್…

Read More

ಬೆಂಗಳೂರು:- ಬೆಂಗಳೂರು ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್‌ನ ಸಂದೇಶ ನೋಡಿದರೆ ಇದೊಂದು ಭಯೋತ್ಪಾದಕರ ಕೆಲಸದಂತೆ ಕಾಣುತ್ತಿದೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಈ ಬಾಂಬ್‌ ಬೆದರಿಕೆ ಇ-ಮೇಲ್‌ನಲ್ಲಿ ಮುಸ್ಲಿಂ, ಅಲ್ಲಾಹು, ದೇವಸ್ಥಾನ, ಮುಂಬೈ ಹೋಟೆಲ್‌ ಮೇಲಿನ ದಾಳಿ ಬಗ್ಗೆ ಪ್ರಸ್ತಾಪಿಸಲಾಗಿದೆ. ಬೆಂಗಳೂರನ್ನು ಭಯ ಬೀಳಿಸುವ ಹಾಗೂ ದೇಶಕ್ಕೆ ಬೆದರಿಕೆ ಹಾಕುವ ಉದ್ದೇಶದಿಂದ ಇದನ್ನು ಮಾಡಲಾಗಿದೆ. ಇದನ್ನು ಖಂಡಿಸುತ್ತೇನೆ’ ಎಂದರು. ಮಕ್ಕಳ ಜೀವ ಮುಖ್ಯ. ಪೋಷಕರು ಬಹಳ ಆತಂಕದಲ್ಲಿದ್ದಾರೆ. ಈ ಬೆದರಿಕೆ ಹಿಂದೆ ಭಯೋತ್ಪಾದನೆ ಹಿನ್ನೆಲೆಯುಳ್ಳವರ ಕೈವಾಡ ಇರುವಂತಿದೆ. ಬೆಂಗಳೂರು ನಗರದಲ್ಲಿ ಪದೇ ಪದೇ ಈ ರೀತಿ ಆದರೆ ಬೆಂಗಳೂರು ಬ್ರಾಂಡ್‌ಗೆ ತೊಂದರೆಯಾಗುತ್ತದೆ. ಇದರ ಹಿಂದೆ ದೊಡ್ಡ ಜಾಲ ಇರುವ ಸಾಧ್ಯತೆಯಿದ್ದು, ಪೊಲೀಸರು ತನಿಖೆ ನಡೆಸಿ ಪತ್ತೆಹಚ್ಚಬೇಕು ಎಂದು ಆಗ್ರಹಿಸಿದರು.

Read More

ಟೆಲ್‌ ಅವೀವ್‌: ಕಳೆದ ಒಂದು ವಾರದಿಂದ ಇಸ್ರೇಲ್‌-ಹಮಾಸ್‌ (Israel Hamas War) ನಡುವೆ ಕದನ ವಿರಾಮ ಏರ್ಪಟ್ಟಿದೆ. ಒತ್ತೆಯಾಳುಗಳ (Hostages) ಬಿಡುಗಡೆಯಾಗಿ 4 ದಿನಗಳಿಗೆ ಸೀಮಿತವಾಗಿದ್ದ ಕದನ ವಿರಾಮ ಅವಧಿ ವಿಸ್ತರಣೆಗೊಂಡಿದೆ. ಈ ನಡುವೆಯೂ ಗಾಜಾಪಟ್ಟಿಯಲ್ಲಿ ಐವರು ಒತ್ತೆಯಾಳುಗಳು ಮೃತಪಟ್ಟಿದ್ದಾರೆ. ಐವರು ಒತ್ತೆಯಾಳುಗಳು ಸಾವನ್ನಪ್ಪಿರುವುದಾಗಿ ಇಸ್ರೇಲ್‌ ಸೇನೆ (Israel Army) ಖಚಿತಪಡಿಸಿದ್ದು, ಮೃತರ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದೆ. ಒತ್ತೆಯಾಳುಗಳಾದ ಎಲಿಯಾಹು ಮಾರ್ಗಲಿಟ್, ಮಾಯಾ ಗೊರೆನ್, ರೋನೆನ್ ಎಂಗಲ್ ಮತ್ತು ಆರ್ಯೆ ಜಲ್ಮನೋವಿಟ್ಜ್ ಅವರ ಸಾವಿನ ಬಗ್ಗೆ ಕುಟುಂಬದವರಿಗೆ ಇಸ್ರೇಲ್‌ ರಕ್ಷಣಾ ಪಡೆ ಹಾಗೂ ಪೊಲೀಸ್‌ ಅಧಿಕಾರಿಗಳು ಮಾಹಿತಿ ನೀಡಿರುವುದಾಗಿ ಸೇನಾ ವಕ್ತಾರ ಡೇನಿಯಲ್ ಹಗರಿ ತಿಳಿಸಿದ್ದಾರೆ. ಒಫಿರ್‌ ತ್ಸರ್ಪಾತಿ ಎಂದು ಗುರುತಿಸಲಾದ 5ನೇ ವ್ಯಕ್ತಿಯ ಮೃತದೇಹವನ್ನು ಇಸ್ರೇಲ್‌ ಸೇನೆ ಮರಳಿ ಪಡೆದಿದೆ. https://ainlivenews.com/witchcraft-in-the-prestigious-karnataka-university-professors-chamber/ ಇಸ್ರೇಲ್‌ ಮತ್ತು ಹಮಾಸ್‌ ನಡುವೆ ಕದನ ವಿರಾಮ ಏರ್ಪಟ್ಟಿದ್ದು, 3 ಬ್ಯಾಚ್‌ನಲ್ಲಿ 40ಕ್ಕೂ ಹೆಚ್ಚು ಒತ್ತೆಯಾಳುಗಳನ್ನ ಹಮಾಸ್‌ ಬಿಡುಗಡೆ ಮಾಡಿದೆ. ಇನ್ನಷ್ಟು ಒತ್ತೆಯಾಳುಗಳ ಬಿಡುಗಡೆಗಾಗಿ ಕದನ ವಿರಾಮ ವಿಸ್ತರಿಸಿದೆ.…

Read More