Author: AIN Author

ಕಲಬುರಗಿ: -ಕೆಂಡ ಹಾಯುವಾಗ ಆಯತಪ್ಪಿ ಬಿದ್ದು ಮಹಿಳೆಯೊಬ್ರು ಗಂಭೀರವಾಗಿ ಗಾಯಗೊಂಡ ಘಟನೆ ಕಲಬುರಗಿಯಲ್ಲಿ ನಡೆದಿದೆ. ಚಿತ್ತಾಪುರ ತಾಲೂಕಿನ ಹಲಕರ್ಟಿಯ ವೀರಭದ್ರೇಶ್ವರ ಜಾತ್ರೆಯಲ್ಲಿ ಘಟನೆ ನಡೆದಿದ್ದು ಗಾಯಗೊಂಡ ಮಹಿಳೆ ಸೊಲ್ಲಾಪುರ ಮೂಲದವರು ಎನ್ನಲಾಗಿದೆ ಮಹಿಳೆ ಕೆಂಡದಲ್ಲಿ ಬೀಳುವ ದೃಶ್ಯ ಜಾತ್ರೆಗೆ ಬಂದಿದ್ದ ಭಕ್ತರೊಬ್ಬರ ಮೊಬೈಲಲ್ಲಿ ಸೆರೆಯಾಗಿದೆ. ಸರತಿ ಸಾಲಲ್ಲಿ ಬಂದು ಕೆಂಡ ಹಾಯುವಾಗ ಎಡವಿ ಬಿದ್ದ ಹಿನ್ನಲೆ ಮುಖ ಹಾಗು ಕುತ್ತಿಗೆಗೆ ಸುಟ್ಟ ಗಾಯಗಳಾಗಿವೆ..ಪ್ರತಿವರ್ಷ ಅನೇಕ ಭಕ್ತರು ಹರಕೆ ಹೊತ್ತು ಕೆಂಡ ಹಾಯುವುದು ಜಾತ್ರೆಯ ಸಂಪ್ರದಾಯ..

Read More

ಬೆಂಗಳೂರು:- ಶಾಲೆಗಳಿಗೆ ಬಾಂಬ್ ಬೆದರಿಕೆ ಹಿಂದೆ ಬಿಜೆಪಿ ಕೈವಾಡ ಇದೆ ಎಂದು ಬಿಕೆ ಹರಿಪ್ರಸಾದ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಬೆಂಗಳೂರು ನಗರ, ಗ್ರಾಮಾಂತರ ಶಾಲೆಗಳಿಗೆ ಬಂದಿರುವ ಬಾಂಬ್ ಬೆದರಿಕೆ ಹಿಂದೆ ಬಿಜೆಪಿ ಕೈವಾಡ ಇದೆ. ಬಿಜೆಪಿ ಯಾವಾಗ ಸೋಲುತ್ತದೆಯೋ ಅಥವಾ ಮುಂದೆ ಸೋಲಲಿದೆ ಎಂದು ಗೊತ್ತಾಗುತ್ತದೋ. ಆಗ ಹೀಗೆಲ್ಲಾ ಆಗುತ್ತದೆ. ಬಿಜೆಪಿ ಸೋಲುತ್ತದೆ ಎಂದು ಗೊತ್ತಾದಾಗ ಏನಾದರೂ ಒಂದು ಆಗುತ್ತದೆ. ಗೋಧ್ರಾ ಹತ್ಯಾಕಾಂಡ, ಪುಲ್ವಾಮಾದಂತಹ ಘಟನೆಗಳು ನಡೆಯುತ್ತವೆ. ಶಾಲೆಗಳಿಗೆ ಬಾಂಬ್‌ ಬೆದರಿಕೆ ಬಂದಿರುವುದು ಸಹ ಇದರ ಭಾಗವೇ. ಜನರ ಗಮನ ಬೇರೆಡೆ ಸೆಳೆಯಲು ಇಂತಹ ತಂತ್ರ ಮಾಡುತ್ತಾರೆ ಎಂದು ಹೇಳಿದ್ದಾರೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ 25 ಪ್ರಕರಣಗಳು ಇದ್ದವು. ಅದನ್ನು ವಾಪಸ್ ಪಡೆಯಲಾಗಿದೆ. ಈ ಬಗ್ಗೆ ಬಿಜೆಪಿಯವರು ಯಾಕೆ ಮಾತನಾಡಲ್ಲ ಪ್ರಶ್ನಿಸಿದರು.

Read More

ಭೋಪಾಲ್: ಅಪ್ರಾಪ್ತೆಯೊಬ್ಬಳನ್ನು ಆಕೆಯ ಫೇಸ್‍’ಬುಕ್ (Facebook) ಸ್ನೇಹಿತನೊಬ್ಬ ಕಾರಿನಲ್ಲಿ ಅಪಹರಿಸಿ ಬಳಿಕ ಇಬ್ಬರು ಸ್ನೇಹಿರೊಂದಿಗೆ ಸೇರಿ ಸಾಮೂಹಿಕ ಅತ್ಯಾಚಾರವೆಸಗಿದ ಘಟನೆ ಮಧ್ಯಪ್ರದೇಶದ (Madhya Pradesh) ಗ್ವಾಲಿಯರ್‌ನಲ್ಲಿ ನಡೆದಿದೆ. ಈ ಸಂಬಂಧ ಸ್ಥಳೀಯ ಮಾಜಿ ಶಾಸಕರ ಸಂಬಂಧಿ ಸೇರಿದಂತೆ ಇಬ್ಬರು ಶಂಕಿತರನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ರಾಮು ಮತ್ತು ಸರವಿಂದ್ ಎಂದು ಗುರುತಿಸಲಾಗಿದೆ. ಅಪ್ರಾಪ್ತ ಬಾಲಕಿ ಪ್ರಕರಣದ ಪ್ರಮುಖ ಆರೋಪಿ ರಾಮು ಕುಶ್ವಾಹ ಎಂಬವನ ಜೊತೆ ಫೇಸ್‍ಬುಕ್‍ನಲ್ಲಿ ಪರಿಚಯವಾಗಿದ್ದಳು. ನ.21 ರಂದು ಆಕೆ ಕೆಲಸಕ್ಕೆ ತೆರಳಿ ವಾಪಸ್ ಆಗುವಾಗ ಆರೋಪಿ ಜೊತೆ ಮಾತಾಡಿದ್ದಳು. ಈ ವೇಳೆ ಆಕೆ ಇರುವ ಸ್ಥಳ ತಿಳಿಸಿದಾಗ ಆತ ತನಗಾಗಿ ಕಾಯುವಂತೆ ತಿಳಿಸಿದ್ದ. ಬಳಿಕ ಪ್ರಮುಖ ಆರೋಪಿ ರಾಮು ಜೊತೆ ಇನ್ನಿಬ್ಬರು ಕಾರಿನಲ್ಲಿ ಬಂದು ಆಕೆಯನ್ನು ಅಪಹರಿಸಿದ್ದರು. ನಂತರ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾಳೆ. https://ainlivenews.com/witchcraft-in-the-prestigious-karnataka-university-professors-chamber/ ಅಲ್ಲದೇ ಬಾಲಕಿ ದೌರ್ಜನ್ಯದ ವೇಳೆ ಪ್ರಜ್ಞೆ ತಪ್ಪಿದ್ದು, ಆಕೆಗೆ ಪ್ರಜ್ಞೆ ಬಂದಾಗ ಪೊದೆ ಒಂದರ…

Read More

ಬ್ರೆಡ್ ಟೋಸ್ಟ್ ಮಾಡುವುದು ಸುಲಭ . ಇದು ಮಕ್ಕಳಿಗೆ ತುಂಬಾ ಇಷ್ಟ. ಅದರಂತೆ ಮೊಟ್ಟೆಯನ್ನು ಬಳಸಿ ಬ್ರೆಡ್ ಟೋಸ್ಟ್ ಮಾಡಿದರೆ ತಿನ್ನಲು ಚೆನ್ನಾಗಿರುತ್ತದೆ. ಇದನ್ನು ಮಕ್ಕಳು ಮತ್ತು ಮನೆಯರು ಇಷ್ಟಪಟ್ಟು ತಿನ್ನುತ್ತಾರೆ. ಇಲ್ಲಿದೆ ಸರಳ ರೆಸಿಪಿ. ಬೇಕಾಗಿರುವ ಪದಾರ್ಥಗಳು: * ಬ್ರೆಡ್ – 2 ಪೀಸ್ * ಮೊಟ್ಟೆ – 1 * ಕಟ್ ಮಾಡಿದ ಈರುಳ್ಳಿ – ಅರ್ಧ ಕಪ್ * ಹಸಿ ಮೆಣಸಿನಕಾಯಿ – 1 * ಕಟ್ ಮಾಡಿದ ಟೊಮೆಟೊ – ಅರ್ಧ ಕಪ್ * ಅರಿಶಿಣ – 1 ಟೀಸ್ಪೂನ್ * ಕೊತ್ತಂಬರಿ ಸೊಪ್ಪು – 2 ಟೀಸ್ಪೂನ್ * ಬೆಣ್ಣೆ – 2 ಟೀಸ್ಪೂನ್ * ಕರದ ಪುಡಿ – 1 ಟೀಸ್ಪೂನ್ * ತುರಿದ ಚೀಸ್ – ಅರ್ಧ ಕಪ್ * ರುಚಿಗೆ ತಕ್ಕಷ್ಟು ಉಪ್ಪು ಮಾಡುವ ವಿಧಾನ: * ಒಂದು ಬಟಲಿಗೆ ಕಟ್ ಮಾಡಿದ ಈರುಳ್ಳಿ, ಟೊಮೆಟೊ, ಕೊತ್ತಂಬರಿ ಸೊಪ್ಪು, ಅರಿಶಿಣ…

Read More

ಬೆಂಗಳೂರು:- ಶಿಕ್ಷಣ ಸಚಿವ ಜಿ ಮಧು ಬಂಗಾರಪ್ಪಗೆ ಅಹಂ ಜಾಸ್ತಿ ಆಗಿದೆ ಎಂದು ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ನಮ್ಮ ಉಸ್ತುವಾರಿ ಸಚಿವರಿಗೆ ಅಹಂ ಜಾಸ್ತಿ. ಎಲ್ಲಾ ವಿಚಾರದಲ್ಲಿ ಮೂಗು ತೂರಿಸುತ್ತಾರೆ. ನಾವು ಶಾಸಕರಲ್ವಾ ನಮಗೂ ಜವಾಬ್ದಾರಿ ಇಲ್ವಾ?. ನಾವು ಯಡಿಯೂರಪ್ಪನ ಮಕ್ಕಳನ್ನ ಸೋಲಿಸಬೇಕು. ರಾಘವೇಂದ್ರನನ್ನು ಸೋಲಿಸಬೇಕು ಅಂತ ಇದ್ದೇವೆ. ಆದರೆ ನಮ್ಮ ಸಚಿವರು ನಮ್ಮಲ್ಲೇ ಒಡಕು ಮೂಡಿಸ್ತಿದ್ದಾರೆ ಎಂದು ಕಿಡಿ ಕಾರಿದರು. ಮಾಜಿ ಮುಖ್ಯಮಂತ್ರಿ ಮಗ, ಅವರ ತಂದೆ ಗರಡಿಯಲ್ಲಿ ಪಳಗಿದವರು ನಾವು. ಎಲ್ಲರನ್ನು ಒಗ್ಗೂಡಿಸಿ ಕರೆದೊಯ್ಯಬೇಕು. ಅವರೇ ಪಕ್ಷವನ್ನು ಒಡೆಯುವುದಲ್ಲ. ಶಿವಮೊಗ್ಗದಲ್ಲಿ ಪಕ್ಷ ಒಡೆದು ಎರಡು ಬಣವಾಗಿದೆ. ಅವರೇ ಅದಕ್ಕೆ ಕುಮ್ಮಕ್ಕು ನೀಡುವುದಲ್ಲ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ಶಿವಮೊಗ್ಗ ಲೋಕಸಭಾ ಕ್ಷೇತ್ರ ಅಭ್ಯರ್ಥಿ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಯಾರು ಅನ್ನೋದು ಹೈ ಕಮಾಂಡ್ ತೀರ್ಮಾನ ಮಾಡುತ್ತದೆ. ನಾನು ಒಬ್ಬ ಪ್ರಬಲ ಆಕಾಂಕ್ಷಿ ಎಂದರು.

Read More

ಬೆಂಗಳೂರು:- ಸರ್ಕಾರ ಆರು ತಿಂಗಳಲ್ಲಿ ಜಾರಿಗೊಳಿಸಿದ ಅಭಿವೃದ್ಧಿ ಯೋಜನೆಗಳ ವರದಿ ನೀಡಲಿ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಆರು ತಿಂಗಳಲ್ಲಿ ಬಜೆಟ್​ನಲ್ಲಿ ಘೊಷಿಸಿರುವ ಎಷ್ಟು ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಿದೆ ಎಂದರು. ಈ ಸರ್ಕಾರ ಬಂದು ಆರು ತಿಂಗಳಾಯಿತು. ಈ ಸರ್ಕಾರದ ಬಗ್ಗೆ ಜನರು ಭ್ರಮ ನಿರಸನಗೊಂಡಿದ್ದಾರೆ‌. ಇವರು ಪದೇ ಪದೆ ಗ್ಯಾರಂಟಿಗಳ ಬಗ್ಗೆ ಪ್ರಚಾರ ಮಾಡಿಕೊಳ್ಳುತ್ತಿದ್ದಾರೆ‌. ವಾಸ್ತವದಲ್ಲಿ ಜನರಿಗೆ ಗ್ಯಾರಂಟಿ ಯೋಜನೆಗಳು ತಲುಪುತ್ತಿಲ್ಲ ಎಂದು ಆರೋಪಿಸಿದರು. ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಹತ್ತು ಕೆಜಿ ಅಕ್ಕಿ ಕೊಡುವ ಬದಲು ಕೇಂದ್ರ ಸರ್ಕಾರ ನೀಡುವ ಐದು ಕೆಜಿ ಅಕ್ಕಿಯನ್ನೂ ಕೊಡುತ್ತಿಲ್ಲ. ಅದರ ಹೊರತಾಗಿ ಕಾಳ ಸಂತೆಯಲ್ಲಿ ಮುಕ್ತವಾಗಿ ಮಾರಾಟ ಮಾಡುತ್ತಿದ್ದಾರೆ. ಅದನ್ನು ತಡೆಯಲು ಯಾವುದೇ ಕ್ರಮ ಕೈಗೊಳ್ಳದಿರುವುದು ಸರ್ಕಾರ ಶಾಮೀಲಾಗಿದೆ ಅಂತ ಅನುಮಾನ ಬರುತ್ತಿದೆ. ಗೃಹ ಲಕ್ಷ್ಮಿ ಯೋಜನೆ ಸಮೀಕ್ಷೆ ಮಾಡಿದರೆ ಮೊದಲ ತಿಂಗಳು ಕೇವಲ ಶೇ.35% ರಷ್ಟು ಮಹಿಳೆಯರಿಗೆ ಬಂದಿದೆ.…

Read More

ನಾನಿ ನಟನೆಯ ‘ಹಾಯ್ ನಾನ್ನ’ (Hi Nanna) ಸಿನಿಮಾ ಇದೇ ಡಿಸೆಂಬರ್ 7ರಂದು ರಿಲೀಸ್ ಸಜ್ಜಾಗಿದೆ. ಈ ಸಂದರ್ಭದಲ್ಲಿಯೇ ನಾನಿ ಟೀಮ್ ಯಡವಟ್ಟು ಮಾಡಿಕೊಂಡಿದೆ. ರಶ್ಮಿಕಾ ವೈಯಕ್ತಿಕ ವಿಚಾರವನ್ನ ತಮ್ಮ ಚಿತ್ರ ಪ್ರಚಾರಕ್ಕಾಗಿ ಬಳಸಿಕೊಂಡು ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ನಾನಿ- ಮೃಣಾಲ್ ನಟನೆಯ ‘ಹಾಯ್ ನಾನ್ನ’ ಚಿತ್ರ ಬಹುಭಾಷೆಗಳಲ್ಲಿ ತೆರೆ ಕಾಣುತ್ತಿದೆ. ಚಿತ್ರದ ಪ್ರಮೋಷನ್‌ಗಾಗಿ ಪ್ರಿ ರಿಲೀಸ್ ಕಾರ್ಯಕ್ರಮ ಕೂಡ ಅದ್ದೂರಿಯಾಗಿ ಮಾಡಿದ್ದಾರೆ. ರಶ್ಮಿಕಾ- ವಿಜಯ್ ದೇವರಕೊಂಡ ಮಾಲ್ಡೀವ್ಸ್ ಫೋಟೋವನ್ನ ತಮ್ಮ ಚಿತ್ರ ಪ್ರಚಾರಕ್ಕೆ ಬಳಸಿಕೊಂಡಿದ್ದಾರೆ. ಮಾಲ್ಡೀವ್ಸ್‌ ಫೋಟೋವನ್ನು ಬೇರೇ ಬೇರೇ ಸಮಯದಲ್ಲಿ ಇಬ್ಬರೂ ಹಂಚಿಕೊಂಡಿದ್ದರು. ಆದರೆ ರಶ್ಮಿಕಾ- ವಿಜಯ್ (Vijay Devarakonda) ಇಬ್ಬರೂ ಒಟ್ಟಿಗೆ ಮಾಲ್ಡೀವ್ಸ್‌ಗೆ ಹೋಗಿದ್ದಾರೆ ಎಂದೇ ಅಭಿಮಾನಿಗಳು ಊಹಿಸಿದ್ದರು. ಈಗ ಅದೇ ಫೋಟೋವನ್ನು ಬಳಸಿಕೊಂಡು ನಾನಿ ಟೀಮ್ ಗಿಮಿಕ್ ಮಾಡಿದೆ. https://ainlivenews.com/witchcraft-in-the-prestigious-karnataka-university-professors-chamber/  ಚಿತ್ರದ ಪ್ರಿ-ರಿಲೀಸ್ ಕಾರ್ಯಕ್ರಮದಲ್ಲಿ ಇಬ್ಬರ ಫೋಟೋ ಅಕ್ಕ-ಪಕ್ಕ ಇಟ್ಟು ಬಿತ್ತರ ಮಾಡಲಾಗಿದೆ. ಸಿನಿಮಾಗಾಗಿ ಬೇರೇ ಅವರ ವೈಯಕ್ತಿಕ ವಿಚಾರವನ್ನ ಬಳಕೆ ಮಾಡೋದು ಅದೆಷ್ಟರ ಮಟ್ಟಿಗೆ…

Read More

ಹುಬ್ಬಳ್ಳಿ: ಸದಾ ಸುಖಿ ಬದುಕಿಗೆ ಯಾವುದೇ ವಯಸ್ಸಿನ ಹಂಗಿಲ್ಲದೇ ಒಂದಲ್ಲ ಒಂದು ಕ್ರೀಡೆಯಲ್ಲಿ ಪಾಲ್ಗೊಳ್ಳಿ ಎಂದು ಹಿರಿಯ ಕ್ರೀಡಾಪಟು ವಿರುಪಾಕ್ಷಗೌಡ ಪಾಟೀಲ ಹೇಳಿದರು. ನಗರದ ಸಂಸ್ಕಾರ ಆಂಗ್ಲ ಮಾಧ್ಯಮ ಶಾಲೆಯಲ್ಲಿಂದು ಆಯೋಜಿಸಿದ್ದ ಸ್ಪೂರ್ತಿ ದಿನ-ವಾರ್ಷಿಕ ಕ್ರೀಡಾಕೂಟದ ಮುಕ್ತಾಯ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿದ ಅವರು, ಮನುಷ್ಯನ ಜೀವನದಲ್ಲಿ ದೈಹಿಕ ಆರೋಗ್ಯ ಬಹಳ ಮಹತ್ವದ್ದು. ಯಾವುದೇ ಕ್ರೀಡೆಯಲ್ಲಿ ಪಾಲ್ಗೊಂಡರು ದೈಹಿಕ ಮತ್ತು ಮಾನಸಿಕ ಆರೋಗ್ಯ ಸುಧಾರಿಸುತ್ತದೆ ಎಂದರು. ಅದೃಷ್ಯ ಬಾಗೇವಾಡಿ ಮಾತನಾಡಿ, ಸಂಸ್ಕಾರ ಶಾಲೆಯಲ್ಲಿ ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಿಗೂ ಮಹತ್ವ ನೀಡಲಾಗುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಶಾಲೆಯ ಸಂಸ್ಥಾಪಕ ಅಧ್ಯಕ್ಷ ಮಹೇಂದ್ರ ಸಿಂಘಿ, ಅಧ್ಯಕ್ಷ ಮಹಾವೀರ ಕುಂದೂರ, ಕಾರ್ಯದರ್ಶಿ ಸುಧೀರ ವೋರಾ, ಖಜಾಂಚಿ ಉಜ್ವಲ್ ಸಿಂಘಿ, ಇತರರು ಇದ್ದರು. ವಿದ್ಯಾರ್ಥಿ ತನ್ವಿ ಪಾರೇಖ್ ಸ್ವಾಗತಿಸಿದಳು. ಜಯ ಹಬೀಬ ವಂದಿಸಿದರು.

Read More

ಹುಬ್ಬಳ್ಳಿ: ಇಲ್ಲಿಯ ಉತ್ತರ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಸಭಾಭವನದಲ್ಲಿ ಕೈಗಾರಿಕಾ ವಸಾಹತು ಪ್ರದೇಶದಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಿಂದ ಮೂಲಸೌಕರ್ಯ ಕಲ್ಪಿಸುವ ಕುರಿತು ಚರ್ಚೆ ನಡೆಸಲಾಯಿತು. ಸಂಘದ ಸದಸ್ಯರು ಅಗತ್ಯ ಮೂಲಸೌಕರ್ಯ ಕಲ್ಪಿಸುವಂತೆ ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ ಅವರಲ್ಲಿ ಮನವಿ ಮಾಡಿದರು. ಕೈಗಾರಿಕಾ ವಸಾಹತು ಪ್ರದೇಶದ ಹಲವು ಘಟಕಗಳು ಮಹಾನಗರ ಪಾಲಿಕೆಗೆ ಬಹಳ ವರ್ಷಗಳಿಂದ ಆಸ್ತಿ ತೆರಿಗೆ ಪಾವತಿಸಿಲ್ಲ. ಪಾಲಿಕೆಯ ವತಿಯಿಂದ ಅಧಿಕಾರಿಗಳನ್ನು ಕಳುಹಿಸಿ ತೆರಿಗೆ ಸಂಗ್ರಹಣೆ ಮಾಡಲಾಗುವುದು. ಅಗತ್ಯ ಮೂಲಸೌಕರ್ಯಗಳ ಕುರಿತು ಮಾಹಿತಿ ನೀಡಿ. ಕಸ ವಿಲೇವಾರಿಗಾಗಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ ಹೇಳಿದರು. ಶಾಸಕ ಮಹೇಶ ಟೆಂಗಿನಕಾಯಿ ಹಾಗೂ ಮೇಯರ್ ವೀಣಾ ಬರದ್ವಾಡ ಮಾತನಾಡಿ ಅತಿ ಶೀಘ್ರದಲ್ಲಿ ಇಲ್ಲಿಯ ಕುಂದು ಕೊರತೆಗಳನ್ನು ನಿವಾರಿಸಲಾಗುವುದು ಎಂದು ಭರವಸೆ ನೀಡಿದರು. ಸಂಘದ ಅಧ್ಯಕ್ಷ ಗಿರೀಶ ನೆಲವಡಿ ಮಾತನಾಡಿ, ಕೈಗಾರಿಕಾ ವಲಯದಲ್ಲಿ ಬೀದೀಪ, ಯುಜಿಡಿ, ಹಾಗೂ ಘನತ್ಯಾಜ್ಯ ವಸ್ತು ಸಂಗ್ರಹಣೆಯಲ್ಲಿ ವ್ಯತ್ಯಯ ಉಂಟಾಗುತ್ತಿದ್ದು…

Read More

ಲಂಡನ್: ಕಳೆದ ತಿಂಗಳು ಯುಕೆಯಲ್ಲಿ ನಾಪತ್ತೆಯಾಗಿದ್ದ 23 ವರ್ಷದ ಭಾರತೀಯ ವಿದ್ಯಾರ್ಥಿ ಲಂಡನ್‌ನ (London) ಥೇಮ್ಸ್ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಮಿತ್‌ಕುಮಾರ್ ಪಟೇಲ್ ಸೆಪ್ಟೆಂಬರ್‌ನಲ್ಲಿ ಉನ್ನತ ವ್ಯಾಸಂಗಕ್ಕಾಗಿ ಯುಕೆಗೆ ಆಗಮಿಸಿದ್ದು, ನವೆಂಬರ್ 17 ರಂದು ನಾಪತ್ತೆಯಾಗಿದ್ದ. ಮೆಟ್ರೋಪಾಲಿಟನ್ ಪೊಲೀಸರು ನವೆಂಬರ್ 21 ರಂದು ಪೂರ್ವ ಲಂಡನ್‌ನ ಕ್ಯಾನರಿ ವಾರ್ಫ್ ಪ್ರದೇಶದ ಬಳಿ ಥೇಮ್ಸ್ ನದಿಯಲ್ಲಿ ಈತನ ದೇಹವನ್ನು ಪತ್ತೆ ಮಾಡಿದ್ದಾರೆ.  https://ainlivenews.com/witchcraft-in-the-prestigious-karnataka-university-professors-chamber/ ಪಟೇಲ್‌ ರೈತ ಕುಟುಂಬಕ್ಕೆ ಸೇರಿದಾತ. ಹಳ್ಳಿಯೊಂದರಲ್ಲಿ ವಾಸಿಸುತ್ತಿದ್ದ. ನವೆಂಬರ್ 17, 2023 ರಿಂದ ನಾಪತ್ತೆಯಾಗಿದ್ದ. ಈಗ ನವೆಂಬರ್ 21 ರಂದು ಪೊಲೀಸರು ಕ್ಯಾನರಿ ವಾರ್ಫ್‌ನಿಂದ ನೀರಿನಲ್ಲಿ ಆತನ ಮೃತದೇಹ ಹೊರತೆಗೆದಿದ್ದಾರೆ. ನಮ್ಮೆಲ್ಲರಿಗೂ ದುಃಖವಾಯಿತು. ಆದ್ದರಿಂದ, ನಾವು ಅವರ ಕುಟುಂಬಕ್ಕೆ ಸಹಾಯ ಮಾಡಲು ಮತ್ತು ಆತನ ದೇಹವನ್ನು ಭಾರತಕ್ಕೆ ಕಳುಹಿಸಲು ನಿಧಿ ಸಂಗ್ರಹಿಸಲು ನಿರ್ಧರಿಸಿದ್ದೇವೆ ಎಂದು ಸಂಬಂಧಿ ಪಾರ್ಥ್‌ ಪಟೇಲ್‌ ತಿಳಿಸಿದ್ದಾರೆ. ಈವ್ನಿಂಗ್ ಸ್ಟ್ಯಾಂಡರ್ಡ್ ಪತ್ರಿಕೆಯ ಪ್ರಕಾರ, ವಿದ್ಯಾರ್ಥಿಯು ನವೆಂಬರ್ 20 ರಂದು ಶೆಫೀಲ್ಡ್ ಹಾಲಮ್ ವಿಶ್ವವಿದ್ಯಾಲಯದಲ್ಲಿ ಪದವಿ ವಿದ್ಯಾಭ್ಯಾಸ ಆರಂಭಿಸಿದ್ದ.…

Read More