Author: AIN Author

ಡಾರ್ಲಿಂಗ್ ಪ್ರಭಾಸ್ (Prabhas) ನಟನೆಯ ಬಹುನಿರೀಕ್ಷಿತ ‘ಸಲಾರ್’ (Salaar) ಟ್ರೈಲರ್ ರಿಲೀಸ್ ಆಗಿದೆ. ಫ್ರೆಂಡ್‌ಶಿಪ್ ಜೊತೆ ಸೇಡಿನ ಕಥೆ ಹೊಂದಿರುವ ಈ ಸಿನಿಮಾದಲ್ಲಿ ರಕ್ತ ಸಿಕ್ತವಾಗಿ ಪ್ರಭಾಸ್ ಖಡಕ್ ಆಗಿ ಕಾಣಿಸಿಕೊಂಡಿದ್ದಾರೆ. 3 ನಿಮಿಷ 47 ಸೆಕೆಂಡ್ ಇರುವ ಈ ಟ್ರೈಲರ್‌ಗೆ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ಹೊಂಬಾಳೆ ಸಂಸ್ಥೆ ನಿರ್ಮಾಣದ ಸಲಾರ್ ಚಿತ್ರದಲ್ಲಿ ಪ್ರಭಾಸ್ ಮತ್ತು ಪೃಥ್ವಿರಾಜ್ ಜುಗಲ್‌ಬಂದಿಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಅದರಲ್ಲೂ ಪ್ರಭಾಸ್ ಖಡಕ್ ಲುಕ್, ಪೃಥ್ವಿರಾಜ್ ರಗಡ್ ಡೈಲಾಗ್ ಎಲ್ಲವೂ ಟ್ರೈಲರ್‌ನ ಹೈಲೈಟ್ ಆಗಿದೆ. ಚಿತ್ರದಲ್ಲಿ ಕನ್ನಡದ ಗುಳ್ಟು ನವೀನ್ ಶಂಕರ್, ಪ್ರಮೋದ್, ಜಗಪತಿ ಬಾಬು, ಶ್ರುತಿ ಹಾಸನ್ ಸೇರಿದಂತೆ ಅನೇಕರು ನಟಿಸುವ ಮೂಲಕ ಗಮನ ಸೆಳೆದಿದ್ದಾರೆ. ಇದೇ ಡಿಸೆಂಬರ್‌ 22ಕ್ಕೆ ಬಹುಭಾಷೆಗಳಲ್ಲಿ ‘ಸಲಾರ್‌’ ರಿಲೀಸ್‌ ಆಗುತ್ತಿದೆ. ಸಲಾರ್ ಸಿನಿಮಾದ ಕಥೆಯ ಬಗ್ಗೆ ಸಾಕಷ್ಟು ಚರ್ಚೆ ನಡೆದಿತ್ತು. ಪ್ರಶಾಂತ್ ನೀಲ್ ಈ ಹಿಂದೆ ಕನ್ನಡದಲ್ಲಿ ಮಾಡಿದ್ದ ಉಗ್ರಂ ಸಿನಿಮಾವನ್ನೇ ಕೊಂಚ ಬದಲಿಸಿಕೊಂಡು ಚಿತ್ರ ಮಾಡಿದ್ದಾರೆ ಎಂದು ಹೇಳಲಾಗಿತ್ತು.…

Read More

ಚಾಮರಾಜನಗರ:- ನಗರದಲ್ಲಿ ರಾತ್ರೋರಾತ್ರಿ 7 ಲಕ್ಷ ಹಣ ಕಳ್ಳತನ ನಡೆದಿರುವ ಘಟನೆ ಚಾಮರಾಜನಗರದ ಸಂತೇಮರಳ್ಳಿ ವೃತ್ತದ ಬಳಿ ಇರುವ ನಂದಿನಿ ಹಾಲಿನ ಮುಖ್ಯ ಕೇಂದ್ರದಲ್ಲಿ ಜರುಗಿದೆ. ಶುಕ್ರವಾರ ರಾತ್ರಿ 1.30 ರಲ್ಲಿ ಕಳ್ಳತನ ನಡೆದಿದೆ. ಇಬ್ಬರು ಯುವಕರಿಂದ ಕಳ್ಳತನ ನಡದಿದೆ. ನಗರದ ಚಿಕ್ಕ ಅಂಗಡಿ ಬೀದಿಯಲ್ಲಿರುವ ನಂದಿನಿ ಹಾಲಿನ ಕೇಂದ್ರ. ಒಬ್ಬ ಕಳ್ಳ ಹೊರಗಿದ್ದು ಮತ್ತೊಬ್ಬ ಕಳ್ಳ ಒಳಗೆ ನುಗ್ಗಿ ಕಂತೆ ಕಂತೆ ಹಣ ಲಪಟಾಯಿಸಿದ್ದಾನೆ. ಹಣ ಕಳವು ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಘಟನಾ ಸ್ಥಳಕ್ಕೆ ಶ್ವಾನ ದಳದೊಂದಿಗೆ ಪೋಲೀಸರು ದೌಡಾಯಿಸಿ ಪರಿಶೀಲನೆ ಮಾಡಿದ್ದಾರೆ.

Read More

ಬಿಗ್ ಬಾಸ್ ಮನೆಯಿಂದ ಹೊರ ಬಂದಿರುವ ನೀತು ವನಜಾಕ್ಷಿ ಅವರು ಬಿಗ್​ ಮನೆಯೊಳಗಿನ ಹಲವಾರು ಸಂಗತಿಗಳನ್ನು ನೇರವಾಗಿ ಹಂಚಿಕೊಂಡಿದ್ದು, ಡ್ರೋನ್ ಪ್ರತಾಪ್​ ಇರುವಿಕೆ ಹಾಗೂ ಇರುವ ರೀತಿಯ ಕುರಿತಂತೆ ಮನಬಿಚ್ಚಿ ಮಾತನಾಡಿದ್ದಾರೆ. ಬಿಗ್ ಬಾಸ್​ ಮನೆಯಲ್ಲಿ ಎಲ್ಲರೂ ಕೂಡ ನನ್ನ ನೆಚ್ಚಿನ ಸ್ಪರ್ಧಿಯೇ ಆಗಿದ್ದರು. ಯಾಕಂದ್ರೆ ಪ್ರತಿಯೊಬ್ಬರು ಅವರದ್ದೇ ಆಟವಾಡುತ್ತಿದ್ದಾರೆ. ಜತೆಗೆ ವೀಕ್ಷಕರ ಗಮನ ಸೆಳೆಯುತ್ತಿದ್ದಾರೆ. ತುಂಬ ಇಷ್ವವಾದಂತ ವ್ಯಕ್ತಿಗಳು ಅಂದ್ರೆ ಅದು ಡ್ರೋನ್ ಪ್ರತಾಪ್ ಮತ್ತು ವರ್ತೂರು ಸಂತೋಷ್. ಇವರಿಬ್ಬರು ಬಹಳ ಟ್ರೂ ಅನಿಸುತ್ತಿತ್ತು. ಇಬ್ಬರೊಂದಿಗೂ ಸಹ ಉತ್ತಮ ಸಂಬಂಧವಿತ್ತು. ನಾನು ಮನೆಯಿಂದ ಹೊರಬರುವಾಗ ಪ್ರತಾಪ್​ ಕಣ್ಣೀರಿಟ್ಟ. ಅವನು ಯಾವುದೇ ನಿರ್ಧಾರ ಕೈಗೊಳ್ಳುವ ಮುನ್ನ ಯೋಚಿಸಿ ತೆಗೆದುಕೊಳ್ಳುತ್ತಾನೆ’ ಎಂದರು. ‘ಪ್ರತಾಪ್​ ಮಾತಿನಲ್ಲಿ ಸ್ಪಷ್ಟತೆ ಇದೆ. ಅವನು ಯಾವುದೇ ನಿರ್ಧಾರ ತೆಗೆದುಕೊಂಡರೂ ಅದನ್ನು ಸರಿಯಾಗಿ ಪರಿಗಣಿಸುತ್ತಾನೆ ಎಂದಿದ್ದಾರೆ.

Read More

ಚಾಮರಾಜನಗರ:- ಅಪಘಾತದಲ್ಲಿ ಮೆದುಳು ನಿಷ್ಕ್ರೀಯವಾಗಿ ಸಾವಪ್ಪಿದ ಯುವಕ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಘಟನೆ ಜರುಗಿದೆ. ಚಾಮರಾಜನಗರ ಜಿಲ್ಲೆಯ ಹನೂರು ಪಟ್ಟಣದ ವಾಸಿ ದರ್ಶನ್ ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ ಎಂದು ಗುರುತಿಸಲಾಗಿದೆ. ದರ್ಶನಗೆ ಅಪಘಾತವಾಗಿ ಮೆದುಳು ಪೆಟ್ಟಾಗಿತ್ತು. ಪೆಟ್ಟಾದ ಹಿನ್ನೆಲೆ ಅಂಗಾಂಗ ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಹನೂರು ಪಟ್ಟಣದ ನಿವಾಸಿಗಳಾದ ಶಶಿ ಮತ್ತು ಸುಶೀಲಾ ದಂಪತಿ ಪುತ್ರ ದರ್ಶನ್ ಎನ್ನಲಾಗಿದೆ. ರಸ್ತೆ ಅಪಘಾತವಾದ ಹಿನ್ನಲೆ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ನಂತರ ಆಸ್ಪತ್ರೆಯಲ್ಲಿ ಚಿಕಿತ್ಸೆ ಫ‌ಲಕಾರಿಯಾಗದೇ ಸಾವನ್ನಪ್ಪಿದರು ಎನ್ನಲಾಗಿದೆ. ನಂತರ ಪೋಷಕರು ತಮ್ಮ ಪುತ್ರನ ಅಂಗಾಂಗ ದಾನ ಮಾಡಲು ಒಪ್ಪಿಗೆ ಸೂಚಿಸಿ ಮಾನವೀಯತೆ ಮೆರೆದಿದ್ದಾರೆ. ಈ ಮೂಲಕ ದರ್ಶನ್ ತನ್ನ ಸಾವಿನಲ್ಲಿ ಅಂಗಾಂಗ ದಾನ ಮಾಡುವ ಮೂಲಕ ಸಾರ್ಥಕತೆ ಮೆರೆದು ಇತರರಿಗೆ ಮಾದರಿಯಾಗಿದ್ದಾರೆ. ಮೈಸೂರಿನ ಅಪೋಲೋ ಆಸ್ಪತ್ರೆಗೆ ದರ್ಶನ್ ಹೃದಯ ಮತ್ತು ಹೃದಯದ ನಾಳ, ಶ್ವಾಸಕೋಸ ನಾಶಗಳು, ಪಿತ್ತಕೋಂಶ(ಲಿವರ್‌), ಮೂತ್ರಪಿಂಡ(ಕಿಡ್ನಿ), ಕಣ್ಣು, ದಾನ…

Read More

ಚಿಕ್ಕಬಳ್ಳಾಪುರ: ತನ್ನ ಅನೈತಿಕ ಸಂಬಂಧಗಳಿಗೆ ತನ್ನ ತಂಗಿ ಅಡ್ಡಿಯಾಗಿದ್ದಾಳೆ ಅಂತ ಕೋಪಗೊಂಡ ಅಕ್ಕ, ತಂಗಿಯ 6 ವರ್ಷದ ಮಗನನ್ನು ಕೊಂದು ಶವವನ್ನು ಹೂತು ಹಾಕಿ ಏನು ಆಗಿಲ್ಲ ಎನ್ನುವ ಹಾಗೆ ಇನ್ನೊಬ್ಬ ಮಗಳ ಜೊತೆ ಎಸ್ಕೇಪ್ ಆಗಿದ್ದಳು, ಆದ್ರೆ ಆಟೊ ಚಾಲಕನ ಸಮಯ ಪ್ರಜ್ಞೆಯಿಂದ ಕ್ರಿಮಿನಲ್ ಲೇಡಿ ನೇರವಾಗಿ ಪೊಲೀಸ್ ಠಾಣೆ ಸೇರಿದ್ದಾಳೆ. ಅಷ್ಟಕ್ಕೂ ಅದೇಲ್ಲಿ ಅಂತೀರಾ ಈ ವರದಿ ನೋಡಿ!!  ಹೀಗೆ… ಮಾವಿನ ತೋಪಿನಲ್ಲಿ, ಪೊಲೀಸರು ಹಾಗೂ ಸ್ಥಳಿಯರು ಆರು ವರ್ಷದ ಕಂದನ ಕಳೆಬರಹಕ್ಕಾಗಿ ಶೋಧಕಾರ್ಯ ನಡೆಸಿರುವುದು ಚಿಕ್ಕಬಳ್ಳಾಪುರ ತಾಲೂಕುನ ಮುತ್ತಕದಹಳ್ಳಿ ಗ್ರಾಮದ ಬಳಿ ಇರುವ ಮಾವಿನ ತೋಪಿನಲ್ಲಿ. ಮುತ್ತಕದಹಳ್ಳಿ ಗ್ರಾಮದ ಅನಿತಾಳ 8 ವರ್ಷದ ಮನುಶ್ರೀ ಹಾಗೂ 6 ವರ್ಷದ ಬಾಲಕ ಮಧು ನಿನ್ನೆ ಮದ್ಯಾನ್ಹ ಗ್ರಾಮದಿಂದ ನಾಪತ್ತೆಯಾಗಿದ್ರು. ಇತ್ತ ಪೆರೇಸಂದ್ರ ಪೊಲೀಸರು ಹಾಗೂ ಮಕ್ಕಳ ಸಂಬಂಧಿಗಳು ಮಕ್ಕಳಿಗಾಗಿ ಶೋಧಕಾರ್ಯ ನಡೆಸಿರುವಾಗಲೇ… ಅತ್ತ ಬೆಂಗಳೂರಿನ ಕಬ್ಬನ್ ಪಾರ್ಕ ಠಾಣೆ ಪೊಲೀಸರು,  ಠಾಣೆಗೆ ಮುತ್ತಕದಹಳ್ಳಿ ಗ್ರಾಮದ ನಿವಾಸಿ ಅಂಬಿಕಾ ಹಾಗೂ…

Read More

ಬೆಂಗಳೂರು:- ಬಿಜೆಪಿಯ ಪಕ್ಷ ಕುಟುಂಬ ರಾಜಕಾರಣ ಮಾಡ್ತಿದೆ ಎಂದು ಕೆಪಿಸಿಸಿ ಸೆಂಟ್ರಲ್ ಎಸ್.ಸಿ.ವಿಂಗ್ ಮಾಧ್ಯಮ ವಕ್ತಾರ ಹೆಣ್ಣೂರು ಹರೀಶ್ ಬಾಬು ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ದೇಶಕ್ಕಾಗಿ ಕಾಂಗ್ರೆಸ್ ಕುಟುಂಬ ಬಲಿದಾನ ಮಾಡಿದೆ. ಇಂದಿರಾ-ರಾಜೀವ್ ದೇಶಕ್ಕೆ ಪ್ರಾಣ ಬಲಿದಾನ ಮಾಡಿದ್ದಾರೆ. ಬಿಜೆಪಿಯ ಪಕ್ಷ ಕುಟುಂಬ ರಾಜಕಾರಣ ಮಾಡ್ತಿದೆ. ಬಿಜೆಪಿಯರ್ವಿಗೆ ಮುಸ್ಲಿಂರನ್ನ‌ ಕಂಡ್ರೆ ಆಗಲ್ಲ. ಕ್ರಿಶ್ಚಿಯನ್ಸ್ ನ ಕ್ರಿಮಿನಲ್ಸ್ ಅಂತಾರೆ. ದಲಿತರನ್ನ ದರಿದ್ರರೂ ಅಂತಾರೆ. ಅಂಬೇಡ್ಕರ್ ಎಲ್ಲಾ‌ ವಿಷ ಕುಡಿದು ನಮಗೆ ಸಂವಿಧಾನ‌ ನೀಡಿದ ವಿಶಕಂಠ. ಸಂವಿಧಾನವನ್ನು ತಿರುಚುವ ಕೆಲಸ ಬಿಜೆಪಿ ಪಕ್ಷ ಮಾಡ್ತಿದೆ. ಜಾತಿ ಜಾತಿಗಳ ನಡುವೆ, ಧರ್ಮಗಳ ನಡುವೆ ಬಿಜೆಪಿ ವಿಷ ಬೀಜ‌ ಬಿತ್ತುತ್ತಿದೆ. ಸಂವಿಧಾನದ ಆಶಯದಂತೆ ಮನುಷ್ಯ, ಮನುಷ್ಯನನ್ನ ಮನುಷ್ಯನ ರೀತಿ ನೋಡಬೇಕಿದೆ ಎಂದು ಕೆಪಿಸಿಸಿ ಸೆಂಟ್ರಲ್ ಎಸ್.ಸಿ.ವಿಂಗ್ ಮಾಧ್ಯಮ ವಕ್ತಾರ ಹೆಣ್ಣೂರು ಹರೀಶ್ ಬಾಬು ಸ್ಪಷ್ಟನೆ ನೀಡಿದ್ದಾರೆ.

Read More

ವಿಜಯಪುರ: ಕಲಬುರಗಿ ಜಿಲ್ಲೆಯ ಆಳಂದ ಕಾಂಗ್ರೆಸ್ ಶಾಸಕ ಬಿ. ಆರ್. ಪಾಟೀಲ ಅವರು ತಮ್ಮ ವಿರುದ್ಧ ಬರೆದಿರುವ ಪತ್ರದ ಕುರಿತು ಮುಖ್ಯಮಂತ್ರಿಗಳೇ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಕಂದಾಯ ಸಚಿವ ಕೃಷ್ಠ ಭೈರೇಗೌಡ ತಿಳಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶಾಸಕ ಬಿ. ಆರ್. ಪಾಟೀಲ ಅವರು ಮುಖ್ಯಮಂತ್ರಿಗೆ ಪತ್ರ ಬರೆದ ವಿಚಾರ ಕುರಿತು ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದರು. ಶಾಸಕರು ಸಿಎಂಗೆ ಪತ್ರ ಬರೆದಿದ್ದಾರೆ. ಈ ಪತ್ರದ ಬಗ್ಗೆ ಮುಖ್ಯಮಂತ್ರಿಗಳು ತೀರ್ಮಾನ ತೆಗೆದುಕೊಳ್ಳುತ್ತಾರೆ. ನಾನು ಸದನದಲ್ಲಿ ಏನು ಉತ್ತರ ಕೊಟ್ಟಿದ್ದೇನೆ ಎಂಬುದರ ಕುರಿತು ಮಾಹಿತಿಯನ್ನು ಮಾಧ್ಯಮದವರಿಗೆ ನೀಡುತ್ತೇನೆ. ಅದರಲ್ಲಿ ಏನು ಹೇಳಿದ್ದೀವಿ? ಏನು ಬಿಟ್ಟಿದೀವಿ ಎಂಬುದನ್ನು ನೀವೇ ತೀರ್ಮಾನ ಮಾಡಬಹುದು. ಅಂತಿಮವಾಗಿ ಅದರ ಬಗ್ಗೆ ಮುಖ್ಯಮಂತ್ರಿಗಳು ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಅವರು ಹೇಳಿದರು. https://ainlivenews.com/ms-dhoni-bought-a-car-worth-3-30-crores-full-viral-on-social-media/ ರಾಜ್ಯದಲ್ಲಿ ಉಂಟಾಗಿರುವ ಬರ ಹಾಗೂ ಜನರ ಸಮಸ್ಯೆಗಳನ್ನು ಪ್ರತಿಯೊಂದು ಜಿಲ್ಲೆಗೆ ಹೋಗಿ ಅಲ್ಲಿಯೇ ಪರಿಹಾರ ಒದಗಿಸಬೇಕು ಎಂಬ ಉದ್ದೇಶದಿಂದ ವಿಜಯಪುರ ಜಿಲ್ಲೆಗೆ ಬಂದಿದ್ದೇನೆ. ಜನಗಳ ವಿಷಯವಿದ್ದರೆ ನಾನು ತಮ್ಮ…

Read More

ಬೆಂಗಳೂರು:- ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಟಿ -20 ಪಂದ್ಯಾವಳಿಯ 5 ನೇ ಪಂದ್ಯವು ನಾಳೆ ನಡೆಯಲಿದೆ. ಹೀಗಾಗಿ ಮೆಟ್ರೋ ಸಂಚಾರ ಸೌಲಭ್ಯವನ್ನು ವಿಸ್ತರಣೆ ಮಾಡಿದೆ. ಈ ಕುರಿತು ಮಾಹಿತಿ ನೀಡಿರುವ ಬಿಎಂಆರ್‌ಸಿಎಲ್‌, ” ಟಿ-20 ಕ್ರಿಕೆಟ್ ಪಂದ್ಯದ ಪ್ರಯುಕ್ತ 3ನೇ ಡಿಸೆಂಬರ್ 2023 ರಂದು ಮೆಟ್ರೋ ರೈಲು ಸೇವೆಗಳ ವಿಸ್ತರಣೆ ಮಾಡಲು ನಿರ್ಧರಿಸಲಾಗಿದೆ. ನಿತ್ಯ 11 ಗಂಟೆಗೆ ಕೊನೆಯ ರೈಲು ಹೊರಡುತ್ತಿತ್ತು. ಸದ್ಯ ನೇರಳ ಮತ್ತು ಹಸಿರು ಮಾರ್ಗಗಳಲ್ಲಿರುವ ನಾಲ್ಕು ಟರ್ಮಿನಲ್ ಮೆಟ್ರೋ ನಿಲ್ದಾಣಗಳಿಂದ ಹೊರಡುವ ರೈಲು ಸೇವೆಗಳನ್ನು ರಾತ್ರಿ 11.45 ರವರೆಗೆ ವಿಸ್ತರಿಸಲಾಗಿದೆ ” ಎಂದು ತಿಳಿಸಿದೆ. ರಿಟರ್ನ್ ಜರ್ನಿ ಪೇಪರ್ ಟಿಕೆಟ್ ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಭಾನುವಾರ ಮಧ್ಯಾಹ್ನ 2.00 ಗಂಟೆಯಿಂದ ಮಾರಾಟಕ್ಕೆ ಲಭ್ಯವಿರುತ್ತದೆ. ಸದರಿ ಪೇಪರ್ ಟಿಕೆಟ್‌ಗಳು ರಾತ್ರಿ 8 ಗಂಟೆಯಿಂದ, ಕಬ್ಬನ್ ಪಾರ್ಕ್ ಮತ್ತು ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣದಿಂದ ಯಾವುದೇ ಇತರ ಮೆಟ್ರೋ ನಿಲ್ದಾಣಕ್ಕೆ ದಿನದ ವಿಸ್ತ್ರತ ಅವಧಿಯಲ್ಲಿ…

Read More

ಧಾರವಾಡ: ಕಂಟೇನರ್ ಲಾರಿವೊಂದರಲ್ಲಿ ಇದಕ್ಕಿಂದಂತೆ ಬೆಂಕಿ ಹೊತ್ತಿಕೊಂಡು ರಸ್ತೆಯ ಮಧ್ಯೆ ಹೊತ್ತಿ ಉರಿದಿರುವ ಘಟನೆ ಧಾರವಾಡ ಹೊರವಲಯದ ಮಂಡಿಹಾಳ ಗ್ರಾಮದ ಕ್ರಾಸ್ ಬಳಿ ಮಧ್ಯ ರಾತ್ರಿ ನಡೆದಿದೆ. ಧಾರವಾಡ ಗೋವಾ ರಸ್ತೆಯ ಮಂಡಿಹಾಳ ಗ್ರಾಮದ ಕ್ರಸ್ ಬಳಿ ಈ ದುರ್ಘಟನೆ ಸಂಭವಿಸಿದ್ದು, ಬೆಂಕಿಯ ನರ್ತನಕ್ಕೆ ಲಾರಿ ಸಂಪೂರ್ಣ ಸುಟ್ಟು ಹೋಗಿದೆ. ಗೋವಾದಿಂದ ಧಾರವಾಡಕ್ಕೆ ಈ ಕಂಟೇನರ್ ಲಾರಿ ಬರುತ್ತಿತ್ತು ಎಂದು ತಿಳಿದು ಬಂದಿದೆ. ಧಾರವಾಡ ತಾಲೂಕಿನ ಮಂಡಿಹಾಳ ಗ್ರಾಮದ ಹತ್ತಿರ ಬರುತ್ತಿದಂತೆ ಇದಕ್ಕಿದಹಾಗೇ ಲಾರಿಯಲ್ಲಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಲಾರಿಯ ಚಾಲಕ ತನ್ನ ವಾಹನವನ್ನು ರಸ್ತೆ ಪಕ್ಕ ನಿಲ್ಲಿಸಿ ಹೊರ ಬಂದಿದ್ದಾನೆ. ರಸ್ತೆಯಲ್ಲಿ ಧಗ ಧಗನೆ ಹೊತ್ತಿ ಉರಿಯುತ್ತಿರುವುದನ್ನು ನೋಡಿದ ಸ್ಥಳೀಯ ವಾಹನ ಸವಾರರಲ್ಲಿ ಕೆಕಾಲ ಆತಂಕದ ವಾತವರಣ ಸೃಷ್ಟಿಯಾಗಿತ್ತು.‌ ಚಾಲಕನ ಮಾಹಿತಿ ಮೇರೆಗೆ ಸ್ಥಳಕ್ಕೆ ಅಗ್ನಿ ಶಾಮಕದಳದ ಸಿಬ್ಬಂದಿ ಹಾಗೂ ಪೊಲೀಸರು ಭೇಟ್ಟಿ ನೀಡಿ ಬೆಂಕಿ ನಂದಿಸಿದ್ದಾರೆ.‌ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ…

Read More

ಬೆಂಗಳೂರು:- ಸಚಿವ ಬೈರತಿ ವಿರುದ್ಧದ ದೋಷಾರೋಪ ಪಟ್ಟಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಒಂಬತ್ತು ವರ್ಷಗಳ ಹಿಂದೆ ಖರೀದಿಸಿದ್ದ ವಾಣಿಜ್ಯ ಕಟ್ಟಡದಲ್ಲಿ ಕರ್ನಾಟಕ ಅಗ್ನಿಶಾಮಕ ದಳ ಕಾಯ್ದೆ-1964ರ ಕಲಂ 13ರಡಿ ಬರುವ ಸುರಕ್ಷತಾ ಕ್ರಮಗಳನ್ನು ಉಲ್ಲಂಘಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಅವರ ವಿರುದ್ಧ ಸಲ್ಲಿಸಲಾಗಿರುವ ದೋಷಾರೋಪ ಪಟ್ಟಿಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಈ ಸಂಬಂಧ ನಗರದ 10ನೇ ಎಸಿಎಂಎಂ ಕೋರ್ಟ್‌ನಲ್ಲಿ ನಡೆಯುತ್ತಿರುವ ವಿಚಾರಣೆ ರದ್ದುಪಡಿಸಬೇಕು ಎಂದು ಕೋರಿ ಬಿ.ಎಸ್. ಸುರೇಶ್ ಸಲ್ಲಿಸಿರುವ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು. ಅರ್ಜಿದಾರರ ಪರ ವಕೀಲೆ ಲೀಲಾ ಪಿ.ದೇವಾಡಿಗ ಅವರ ವಾದ ಆಲಿಸಿದ ನ್ಯಾಯಪೀಠ, ಬೈರತಿ ಸುರೇಶ್ ಹಾಗೂ ಇತರರ ವಿರುದ್ಧ ಇಂದಿರಾನಗರ ಪೊಲೀಸರು 10ನೇ ಎಸಿಎಂಎಂ ಕೋರ್ಟ್‌ಗೆ ಸಲ್ಲಿಸಿರುವ ದೋಷಾರೋಪ ಪಟ್ಟಿಗೆ ಮಧ್ಯಂತರ ತಡೆ ನೀಡಿ ವಿಚಾರಣೆಯನ್ನು ಇದೇ 15ಕ್ಕೆ ಮುಂದೂಡಿತು

Read More