Author: AIN Author

ವೈವಿಧ್ಯಮಯ ಮತ್ತು ಪ್ರಾದೇಶಿಕ ಪ್ರಾತಿನಿಧ್ಯವನ್ನು ಹೊಂದಿರುವ ಕಂಟೆಂಟ್‌ ಅನ್ನು ಜನರಿಗೆ ನೀಡುವಲ್ಲಿ JioCinema ಮುಂಚೂಣಿಯಲ್ಲಿದೆ. ಆ ಪ್ರಯತ್ನದ ಭಾಗವಾಗಿ ಇದೀಗ, ಮುತ್ತಯ್ಯ ಮುರಳೀಧರನ್‌ ಅವರ ಜೀವನವನ್ನಾಧರಿಸಿದ, ಎಂ.ಎಸ್‌. ಶ್ರೀಪತಿ ನಿರ್ದೇಶಿಸಿರುವ ‘800’ ಸಿನಿಮಾ JioCinemaದಲ್ಲಿ ಬಿಡುಗಡೆಗೊಳ್ಳುತ್ತಿದೆ. ಇದೇ ಡಿಸೆಂಬರ್ 2ರಂದು JioCinema ಒಟಿಟಿ ವೇದಿಕೆಯಲ್ಲಿ ಬಿಡುಗಡೆಗೊಳ್ಳುತ್ತಿರುವ ಈ ಸಿನಿಮಾ, ಶ್ರೀಲಂಕಾದ ಖ್ಯಾತ ಕ್ರಿಕೆಟ್ ಆಟಗಾರ ಮುತ್ತಯ್ಯ ಮುರಳೀಧರನ್ ಅವರ ಬದುಕು ಮತ್ತು ಸಾಧನೆಗಳನ್ನು ಆಧರಿಸಿದ್ದು. ಟೆಸ್ಟ್‌ ಕ್ರಿಕೆಟ್‌ನಲ್ಲಿ 800 ವಿಕೆಟ್‌ಗಳನ್ನು ಪಡೆದುಕೊಂಡು ದಾಖಲೆ ನಿರ್ಮಿಸಿದ್ದ ಬೌಲರ್ ಬದುಕಿನ ತೆರೆ-ಮರೆಯ ಕಥೆಯನ್ನು ಹೇಳುವ ಈ ಸಿನಿಮಾ, ಕ್ರಿಕೆಟ್ ಪ್ರಿಯರಿಗಂತೂ ಮನರಂಜನೆಯ ಮೃಷ್ಟಾನ್ನವನ್ನೇ ಉಣಿಸುತ್ತದೆ. ವಿವೇಕ್‌ ರಂಗಾಚಾರಿ ನಿರ್ಮಾಣದ ಈ ಸಿನಿಮಾ ತಮಿಳು, ತೆಲುಗು, ಮಲಯಾಳಂ, ಹಿಂದಿ, ಬೆಂಗಾಲಿ ಭಾಷೆಗಳ ಜೊತೆಗೆ ಕನ್ನಡದಲ್ಲಿಯೂ ವೀಕ್ಷಣೆಗೆ ಲಭ್ಯವಿರುವುದು ವಿಶೇಷ. ಸ್ಪಿನ್ನರ್ ಬದುಕಿನ ಸ್ಟನ್ನಿಂಗ್ ಸ್ಟೋರಿ!: ಖ್ಯಾತ ಸ್ಪಿನ್ನರ್ ಮುತ್ತಯ್ಯ ಮುರಳೀಧರನ್ ಕ್ರಿಕೆಟ್‌ ಬದುಕಿನ ಸಾಧನೆಗಳನ್ನು ಹೇಳುವ ‘800’ ಸಿನಿಮಾ, ಅವರ ಖಾಸಗಿ ಬದುಕಿನ ಸಂಕಷ್ಟಗಳನ್ನೂ ನೋಡುಗರ…

Read More

ಕೋಲ್ಕತಾ: ಓಲೈಕೆ, ಒಳನುಸುಳುವಿಕೆ, ಭ್ರಷ್ಟಾಚಾರ ಮತ್ತು ರಾಜಕೀಯ ಹಿಂಸಾಚಾರ ವಿಚಾರಗಳ ಕುರಿತು ಬಂಗಾಳ ಸಿಎಂ ಹಾಗೂ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಅವರ ವಿರುದ್ಧ ಅಮಿತ್ ಶಾ ವಾಗ್ದಾಳಿ ನಡೆಸಿದರು. ರಾಜ್ಯದಲ್ಲಿನ ಟಿಎಂಸಿ ಸರ್ಕಾರವನ್ನು ಕಿತ್ತು ಹಾಕಬೇಕು ಮತ್ತು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕು ಎಂದು ಜನರಿಗೆ ಮನವಿ ಮಾಡಿದರು. ಸಭೆಯಲ್ಲಿ ಅಪಾರ ಸಂಖ್ಯೆಯನ್ನು ಜನರು ಸೇರಿರುವುದನ್ನು ಶ್ಲಾಘಿಸಿದ ಅಮಿತ್ ಶಾ, ಇದು ಜನರ ಭಾವನೆಯನ್ನು ಸೂಚಿಸುತ್ತದೆ. 2026ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತ ಪಡೆದು ರಾಜ್ಯದಲ್ಲಿ ಅಧಿಕಾರ ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. https://ainlivenews.com/ms-dhoni-bought-a-car-worth-3-30-crores-full-viral-on-social-media/  “ಬಂಗಾಳವು ಒಳನುಸುಳುವಿಕೆ, ಓಲೈಕೆ, ರಾಜಕೀಯ ಹಿಂಸಾಚಾರ ಮತ್ತು ಭ್ರಷ್ಟಾಚಾರದಿಂದ ನಲುಗುತ್ತಿದೆ. ಇಡೀ ದೇಶದಲ್ಲಿ ಚುನಾವಣೆ ಸಂಬಂಧಿ ಹಿಂಸಾಚಾರವು ಅತ್ಯಧಿಕವಾಗಿರುವುದು ಬಂಗಾಳದಲ್ಲಿ. ಪಶ್ಚಿಮ ಬಂಗಾಳದಲ್ಲಿ 212 ಬಿಜೆಪಿ ಕಾರ್ಯಕರ್ತರನ್ನು ಕೊಲ್ಲಲಾಗಿದೆ. 2026ರ ವಿಧಾನಸಭೆ ಚುನಾವಣೆಯಲ್ಲಿ ಜನರು ತಮ್ಮ ಮತಗಳ ಮೂಲಕ ಈ ಕೊಲೆಗಳಿಗೆ ನ್ಯಾಯ ಕೇಳಲಿದ್ದಾರೆ” ಎಂದು ಅಮಿತ್ ಶಾ ಹೇಳಿದರು.

Read More

ಬೆಂಗಳೂರು:- ಬಿಜೆಪಿಗೆ ಮುಸ್ಲಿಂ ಮತ ಬೇಡ ಎಂಬ ಹೇಳಿಕೆ ನೀಡಿದ್ದ ಮಾಜಿ ಸಚಿವ ಈಶ್ವರಪ್ಪ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್​ ತಡೆ ನೀಡಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ , ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿ, ವಿಚಾರಣೆಯನ್ನು ಡಿ.15ಕ್ಕೆ ಮುಂದೂಡಿತು. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಪ್ರಕರಣ ದಾಖಲಾಗಿದ್ದಾಗ ಅರ್ಜಿದಾರರು ಹಾಲಿ ಶಾಸಕರಾಗಿದ್ದರು. ಹಾಗಾಗಿ ಜನಪ್ರತಿನಿಧಿಗಳ ವಿರುದ್ಧ ತನಿಖೆಗೆ ಅನುಮತಿ ನೀಡಲು ಮ್ಯಾಜಿಸ್ಟ್ರೇಟ್‌ಗೆ ಅಧಿಕಾರ ವ್ಯಾಪ್ತಿ ಇಲ್ಲ. ಅದರಂತೆ ಪೊಲೀಸರು ಪಡೆದುಕೊಂಡ ಅನುಮತಿ ಊರ್ಜಿತವಾಗುವುದಿಲ್ಲ. ಈ ಪ್ರಕರಣದಲ್ಲಿ ಜನಪ್ರತಿನಿಧಿಗಳ ಕಾಯ್ದೆಯ ಸೆಕ್ಷನ್ 125ರ ಉಲ್ಲಂಘನೆಯ ಪ್ರಶ್ನೆ ಉದ್ಭವಿಸುವುದಿಲ್ಲ. ಶಿವಮೊಗ್ಗದ ಮ್ಯಾಜಿಸ್ಟ್ರೇಟ್‌ನಿಂದ ಅನುಮತಿ ಪಡೆದು ದಾಖಲಿಸಿಕೊಂಡಿರುವ ಎಫ್‌ಐಆರ್ ಆಧರಿಸಿ ನಡೆದ ತನಿಖೆಯ ಅಂತಿಮ ವರದಿಯನ್ನು ಬೆಂಗಳೂರಿನಲ್ಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಾಯಾಲಯಕ್ಕೆ ಸಲ್ಲಿಸಲಾಗಿದೆ. ಖಾಸಗಿ ಸುದ್ದಿ ಸಂಸ್ಥೆಯ ಎಕ್ಸ್​ ಖಾತೆಯಲ್ಲಿ ಬಂದ ಮಾಹಿತಿ ಆಧರಿಸಿ ದೂರು ದಾಖಲಿಸಲಾಗಿದೆ. ಉಳಿದಂತೆ ಪ್ರಕರಣದಲ್ಲಿ ಯಾವುದೇ ಬಲವಾದ ಸಾಕ್ಷಿ-ಪುರಾವೆಗಳಿಲ್ಲ. ಆದ್ದರಿಂದ ಇಂತಹ ಪ್ರಕರಣದ ತನಿಖೆ ಕಾನೂನಿನ…

Read More

ರಾಯಚೂರು:- ಎಂಪಿ ಚುನಾವಣೆಯ ಉದ್ದೇಶದಿಂದ ನಗರ ಬಿಜೆಪಿ ಶಾಸಕರ ವಿರುದ್ಧ ಕೋಮುಗಲಭೆ ಮಾಡುತ್ತಿರುವ ಆರೋಪ ಕೇಳಿ ಬಂದಿದೆ ಅಲ್ಲಾವುದ್ದೀನ್ ದರ್ಗಾದ ಹತ್ತಿರ ಸ್ವಾಗತಕಮಾನಗೆ ಟೆಂಡರ್ 15ನೇ ಹಣಕಾಸು ಯೋಜನೆ ಅಡಿಯಲ್ಲಿ ನಗರಸಭೆಯಿಂದ ಟೆಂಡರ್ ಕರೆಯಲಾಗಿತ್ತು. ಬಳಿಕ ಕಾಮಗಾರಿ ನಡಿತಿರುವ ವೇಳೆ ಅರ್ಧಕ್ಕೆ ನಿಂತಿಿದ್ದು, ಕೆಲಸ ನಿಲ್ಲಿಸಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ಮುಸ್ಲಿಂ ಯುವಕರು ಗರಂ ಆಗಿದ್ದಾರೆ. ಅಲ್ಲಾಹು ಅಕ್ಬರ್,ಜೈ ಶ್ರೀ ರಾಮ್ ಪರಸ್ಪರ ಘೋಷಣೆ ಕೂಗಿ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದಾರೆ. ಬಿಜೆಪಿಯ ನಗರ ಶಾಸಕ ಶಿವರಾಜ್ ಪಾಟೀಲ್ ವಿರುದ್ಧ ಕಾಂಗ್ರೆಸ್ ಮುಖಂಡ ಬಸಿರುದ್ದೀನ್ ಫುಲ್ ಗರಂ ಆಗಿದ್ದಾರೆ ಬಿಜೆಪಿಯವರು ನಡಿತಿರುವ ಕಾಮಗಾರಿ ತಡೆಗಟ್ಟಿ ಗುಂಡಾಗಿರಿ ಮಾಡುತ್ತಿದ್ದಾರೆ. ನಗರ ಶಾಸಕರು ಇಂತಹ ನೀಚ ಕೆಲಸಕ್ಕೆ ಕೈ ಹಾಕಬಾರದು ಶಾಂತಿ ಸೌಹಾರ್ತೆ ಕಾಪಾಡುವ ಒಬ್ಬ ಜನಪ್ರತಿನಿಧಿಯ ಕೆಲಸ. ತಾವೇ ಮುಂದೆ ಬಂದು ಕೋಮುಗಲಭೆ ಸೃಷ್ಟಿ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಗರಂ ಆಗಿದ್ದಾರೆ. ಲೋಕಸಭಾ ಚುನಾವಣೆ ಹತ್ತಿರ ಬಂದಿರುವುದರಿಂದ ಜಗಳ ಹಚ್ಚುವ ಬೆಂಕಿ…

Read More

ಆಸ್ಟ್ರೇಲಿಯಾ ವಿರುದ್ಧ ಮೂರನೇ ಟಿ20 ಪಂದ್ಯದಲ್ಲಿ ತಮ್ಮ ವೃತ್ತಿ ಜೀವನದ ಶ್ರೇಷ್ಠ ಬ್ಯಾಟಿಂಗ್‌ ಪ್ರದರ್ಶನ ತೋರಿದ ಭಾರತ ತಂಡದ ಆರಂಭಿಕ ಋತುರಾಜ್‌ ಗಾಯಕ್ವಾಡ್‌, ಅಂತಾರಾಷ್ಟ್ರೀಯ ಚುಟುಕು ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕವನ್ನು ಪೂರ್ಣಗೊಳಿಸಿದರು. ಅಷ್ಟೇ ಅಲ್ಲದೆ ಆಸ್ಟ್ರೇಲಿಯಾ ಎದುರು ಅವರು ವಿಶೇಷ ದಾಖಲೆಯನ್ನು ಬರೆದಿದ್ದಾರೆ. ಇಲ್ಲಿನ ಬರ್ಸಪರ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡುವಂತಾಗಿದ್ದ ಭಾರತ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಯಶಸ್ವಿ ಜೈಸ್ವಾಲ್‌ ಮತ್ತು ಇಶಾನ್‌ ಕಿಶನ್‌ ಬಹುಬೇಗ ವಿಕೆಟ್‌ ಒಪ್ಪಿಸಿದರು. ಆದರೆ, ಒಂದು ತುದಿಯಲ್ಲಿ ಕೊನೆಯವರೆಗೂ ದೀರ್ಘಾವಧಿ ಬ್ಯಾಟ್‌ ಮಾಡಿದ ಋತುರಾಜ್‌ ಗಾಯಕ್ವಾಡ್‌ ಆಸೀಸ್‌ ಬೌಲರ್‌ಗಳಿಗೆ ಬೆವರಿಳಿಸಿದರು. ಕೇವಲ 52 ಎಸೆತಗಳಲ್ಲಿಯೇ ಗಾಯಕ್ವಾಡ್‌ ಶತಕವನ್ನು ಪೂರ್ಣಗೊಳಿಸಿದರು. ತಮ್ಮ ಚೊಚ್ಚಲ ಟಿ20ಐ ಶತಕದ ಮೂಲಕ ಋತುರಾಜ್‌ ಗಾಯಕ್ವಾಡ್‌ ಭಾರತದ ಪರ ಇತಿಹಾಸ ಸೃಷ್ಟಿಸಿದರು. ಆಸ್ಟ್ರೇಲಿಯಾ ವಿರುದ್ದ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಶತಕ ಸಿಡಿಸಿದ ಮೊದಲ ಭಾರತೀಯ ಬ್ಯಾಟ್ಸ್‌ಮನ್‌ ಎಂಬ ದಾಖಲೆಯನ್ನು ಬಲಗೈ ಆಟಗಾರ ಬರೆದಿದ್ದಾರೆ. ವಿರಾಟ್‌ ಕೊಹ್ಲಿ, ರೋಹಿತ್‌…

Read More

ಬೆಂಗಳೂರು: ಅರ್ಹ ಪತ್ರಕರ್ತರಿಗೆ ಪ್ರಶಸ್ತಿ ಅರಸಿ ಬಂದಿರುವುದು ಶ್ಲಾಘನೀಯ ಎಂದು ಬಸವರಾಜ ಹೊರಟ್ಟಿ ಹೇಳಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ವತಿಯಿಂದ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿ ಮಾತನಾಡಿದ ಅವರು, ಪತ್ರಕರ್ತರು ಸಮಾಜದ ಮತ್ತು ಸರ್ಕಾರದ ಅಂಕು-ಡೊಂಕುಗಳನ್ನು ತಿದ್ದುವವರಾಗಿದ್ದು, ವೃತ್ತಿ ಬದ್ಧತೆ ಕಾಪಾಡಿಕೊಳ್ಳಬೇಕು. ಈ ಬಾರಿ ಸಮರ್ಥ ಪತ್ರಕರ್ತರಿಗೆ ಪ್ರಶಸ್ತಿಗಳು ಅರಸಿ ಬಂದಿರುವುದು ನಿಜಕ್ಕೂ ಶ್ಲಾಘನೀಯ ಎಂದರು. ಇಂದಿನ ಸಮಾಜದಲ್ಲಿ ಪತ್ರಕರ್ತರು ದಿಟ್ಟತನದಿಂದ ಕಾರ್ಯ ನಿರ್ವಹಿಸಬೇಕಾದುದು ಅತ್ಯಗತ್ಯ. ಹಾಗಾಗಿ ಸಮರ್ಥರಿಗೆ ಮನ್ನಣೆ ನೀಡಬೇಕಾದುದು ಎಲ್ಲರ ಕರ್ತವ್ಯ ಎಂದು ಅವರು ಹೇಳಿದರು. ನಾನು ಸದನಕ್ಕೆ ಬಂದ ಹೊಸದರಲ್ಲಿ ಏನೇನು ತಪ್ಪು ಮಾಡಿದೆ ಎನ್ನುವುದನ್ನು ಹಿರಿಯ ಪತ್ರಕರ್ತರೇ ತಿದ್ದಿ ಹೇಳುತ್ತಿದ್ದರು. ಹಾಗಾಗಿ ಬಹಳ ಕಲಿಯಲು ಸಾಧ್ಯವಾಯಿತು. ವೃತ್ತಿಪರವಾಗಿ ಅಷ್ಟು ಪ್ರಬುದ್ಧತೆ ಹೊಂದಿದ ಪತ್ರಕರ್ತರು ಇದ್ದರು. ಈಗ ಆ ಸಂಖ್ಯೆ ಇಳಿಮುಖವಾಗುತ್ತಿದೆ ಎಂದರು.

Read More

ಇದೀಗ ಚಳಿಯ ವಾತಾವರಣ ಹೆಚ್ಚಿರುವ ಕಾಲವಾದ್ದರಿಂದ, ನೆಗಡಿ, ಗಂಟಲುನೋವು ಸಾಮಾನ್ಯವಾಗಿ ಕಂಡುಬರುತ್ತದೆ. ಈ ಸಂದರ್ಭ ನೀವು ಆರೋಗ್ಯ ಹಾಗೂ ದೇಹವನ್ನು ಸಮತೋಲನದಲ್ಲಿಟ್ಟುಕೊಳ್ಳಬೇಕೆಂದರೆ ಉತ್ತಮ ಆಹಾರಾಭ್ಯಸವನ್ನು ಮೈಗೂಡಿಸಿಕೊಳ್ಳುವುದೂ ಅಗತ್ಯ. ನಾವಿಂದು ಚಹಾ ಅಥವಾ ಕಾಫಿ ಬದಲಿಗೆ ಸವಿಯಬಹುದಾದ ಆರೋಗ್ಯಕರ ಕಷಾಯ ಮಾಡುವುದು ಹೇಗೆಂದು ಹೇಳಿಕೊಡುತ್ತೇವೆ. ನೆಗಡಿ ಮಾತ್ರವಲ್ಲದೇ ಜೀರ್ಣಕ್ರಿಯೆ ಒಳ್ಳೆಯ ಮದ್ದು! ಒಮ್ಮೆ ಟ್ರೈ ಮಾಡಿ! ಬೇಕಾಗುವ ಪದಾರ್ಥಗಳು: ಕಷಾಯ ಪುಡಿ ತಯಾರಿಸಲು: ಕೊತ್ತಂಬರಿ ಬೀಜ – 1 ಕಪ್ ಜೀರಿಗೆ – ಅರ್ಧ ಕಪ್ ಸೋಂಪು – 3 ಟೀಸ್ಪೂನ್ ಮೆಂತ್ಯ – 2 ಟೀಸ್ಪೂನ್ ಕರಿ ಮೆಣಸು – 2 ಟೀಸ್ಪೂನ್ ಲವಂಗ – 10 ಏಲಕ್ಕಿ – 5 ಜಾಯಿಕಾಯಿ – 1 ಅರಿಶಿನ – 2 ಟೀಸ್ಪೂನ್ ಒಣ ಶುಂಠಿ ಪುಡಿ – 2 ಟೀಸ್ಪೂನ್ ಕಷಾಯ ಮಾಡಲು: ನೀರು – 1 ಕಪ್ ಹಾಲು – 1 ಕಪ್ ಕಷಾಯ ಪುಡಿ – 1-2 ಟೀಸ್ಪೂನ್…

Read More

ಸ್ಯಾಂಡಲ್‌ವುಡ್ ನಟಿ ಚೈತ್ರಾ ಆಚಾರ್ (Chaithra Achar) ಸದಾ ಒಂದಲ್ಲಾ ಒಂದು ಶೈಲಿಯ ಫೋಟೋಶೂಟ್ ಮೂಲಕ ಗಮನ ಸೆಳೆಯುತ್ತಲೇ ಇರುತ್ತಾರೆ. ಇದೀಗ ಬಿಳಿ ಬಣ್ಣದ ಉಡುಗೆಯಲ್ಲಿ ‘ಟೋಬಿ’ (Toby) ಬ್ಯೂಟಿ ಚೈತ್ರಾ ಆಚಾರ್ ಮಿಂಚಿದ್ದಾರೆ. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿವೆ. ಬಿಳಿ ಬಣ್ಣದ ಉಡುಗೆಯಲ್ಲಿ ಮಸ್ತ್ ಆಗಿ ‘ಟೋಬಿ’ ಸುಂದರಿ ಫೋಟೋಶೂಟ್ ಮಾಡಿಸಿದ್ದಾರೆ. ಕ್ಯಾಮೆರಾ ಕಣ್ಣಿಗೆ ಬಗೆ ಬಗೆಯ ಪೋಸ್ ಕೊಡುತ್ತಾ ನಗು ಚೆಲ್ಲಿದ್ದಾರೆ. ನಟಿಯ ನಯಾ ಲುಕ್ ನೋಡಿ ಪಡ್ಡೆಹುಡುಗರು ಫಿದಾ ಆಗಿದ್ದಾ ಬೋಲ್ಡ್ & ಬ್ಯೂಟಿಫುಲ್ ನಟಿ ಚೈತ್ರಾ ಫೋಟೋಶೂಟ್‌ನಲ್ಲಿ ಅಷ್ಟೇ ಮಿಂಚೋದು ಅಲ್ಲ. ಹೊಸ ಬಗೆಯ ಪಾತ್ರಗಳ ಮೂಲಕ ಕೂಡ ಗಮನ ಸೆಳೆಯುತ್ತಿದ್ದಾರೆ. ಇತ್ತೀಚೆಗೆ ರಿಲೀಸ್ ಆದ ‘ಟೋಬಿ’ ಮತ್ತು ‘ಸಪ್ತಸಾಗರದಾಚೆ ಎಲ್ಲೋ ಸೈಡ್ ಬಿ’ ಚಿತ್ರಕ್ಕೆ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ.

Read More

ಶ್ರೀಲೀಲಾ (Sreeleela) ಅಭಿಮಾನಿಗಳು ಕಂಗಾಲಾಗಿದ್ಧಾರೆ. ಇದೇನಾಗುತ್ತಿದೆ ನಮ್ಮ ದೇವತೆ ಬದುಕಿನಲ್ಲಿ? ನಾಯಕಿ ಪಟ್ಟ ಕಳೆದುಕೊಳ್ಳುತ್ತಾರಾ ಲೀಲಾ. ಅವಸರಕ್ಕೆ ಬಿದ್ದು ಅವಲಕ್ಷಣ ಮಾಡಿಸಿಕೊಂಡರಾ, ಪ್ರಿನ್ಸ್ ಹಾಗೂ ಪವನ್ ಕಲ್ಯಾಣ್ (Pawan Kalyan) ಸಿನಿಮಾ ಕೈ ಹಿಡಿಯದಿದ್ದರೆ ಭವಿಷ್ಯದ ಗತಿ ಏನು? ಇದು ಖುದ್ದು ಶ್ರೀಲೀಲಾಗೂ ಕಂಗಾಲು ಮಾಡಿದೆ. ಏನದು ಸೀಕ್ರೆಟ್. ಶ್ರೀಲೀಲಾ ಅಭಿನಯದ ಮೂರು ಸಿನಿಮಾ ಬ್ಯಾಕ್ ಟು ಬ್ಯಾಕ್ ಬಿಡುಗಡೆಯಾದವು. ಅದರಲ್ಲಿ ಬಾಲಕೃಷ್ಣ (Balayya) ಜೊತೆ ನಟಿಸಿದ, ಅಂದರೆ ಮಗಳಾಗಿ ಕಾಣಿಸಿದ್ದ ಭಗವಂತ ಕೇಸರಿ ಹಿಟ್ ಆಯಿತು. ಆದರೆ ಕ್ರೆಡಿಟ್ ಪೂರ್ತಿ ಬಾಲಯ್ಯ ನುಂಗಿ ನೀರು ಕುಡಿದರು. ಶ್ರೀಲೀಲಾ ಗೆದ್ದೂ ಸೋತರು. ಈ ನಡುವೆ ‘ಸ್ಕಂದ’ (Skanda) ಹಾಗೂ ‘ಆದಿಕೇಶವ’ ಬಂತು ನೋಡಿ. ‘ಸ್ಕಂದ’ ಚಿತ್ರದಲ್ಲಿ ಹಾಡು ಕೆಲವು ದೃಶ್ಯ ಅಷ್ಟೇ ಪಾಲಿಗೆ ಬಂದ ಪಂಚಾಮೃತ. ಹತ್ತತ್ತು ಸಿನಿಮಾ ಕೈಯಲ್ಲಿವೆ. ಹ್ಯಾಪ್‌ನಿಂಗ್ ಸ್ಟಾರ್ ಶ್ರೀಲೀಲಾಗೆ ಪ್ರಿನ್ಸ್ ಹಾಗೂ ಪವನ್ ಜೊತೆ ಅವಕಾಶ ಸಿಕ್ಕಿದೆ. ಈಗಾಗಲೇ ಶ್ರೀಲೀಲಾ ಫ್ಯಾನ್ಸ್ ದಿಕ್ಕೆಟ್ಟಿದ್ದಾರೆ. ‘ಗುಂಟೂರು ಖಾರಂ’…

Read More

ಹೆಚ್ಚಿನ ಹೂಡಿಕೆದಾರರು ಡಾಲರ್ ಬಿಟ್ಟು ಚಿನ್ನ ಹಾಗೂ ಷೇರುಗಳತ್ತ ಮುಗಿಬೀಳುತ್ತಿದ್ದಾರೆ. ಇದು ಚಿನ್ನಕ್ಕೆ ಬೇಡಿಕೆ ಹೆಚ್ಚಿಸಿದೆ. ಮೇಲಾಗಿ ಭಾರತದಲ್ಲಿ ಈಗ ಮದುವೆ ಸೀಸನ್ ಕೂಡ ಹೌದು. ಇದು ಹೆಚ್ಚಿನ ಬೇಡಿಕೆ ಸೃಷ್ಟಿಸುತ್ತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,850 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,950 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 57,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,800 ರುಪಾಯಿಯಲ್ಲಿ ಇದೆ. ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಡಿಸೆಂಬರ್ 2ಕ್ಕೆ): 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,700 ರೂ 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,950 ರೂ ಬೆಳ್ಳಿ ಬೆಲೆ 10 ಗ್ರಾಂಗೆ: 795 ರೂ ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ 22 ಕ್ಯಾರಟ್​ನ 10…

Read More