ಸಾಮಾನ್ಯವಾಗಿ ಮನೆಗಳಲ್ಲಿ ಮನೆಯವರೆಲ್ಲಾ ಒಂದೇ ಸಾಬೂನನ್ನು ಬಳಸುತ್ತಾರೆ. ಇದು ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಅಭ್ಯಾಸವಾಗಿದೆ. ಆದರೆ ಇತ್ತೀಚೆಗೆ ಆರೋಗ್ಯದ ಬಗ್ಗೆ ಕಾಳಜಿ ವಹಿಸಿರುವ, ವೈಯಕ್ತಿಕ ನೈರ್ಮಲ್ಯದ ಬಗ್ಗೆ ಕಾಳಜಿ ಹೊಂದಿರುವ ವ್ಯಕ್ತಿಗಳು ತಮ್ಮದೇ ಆದ ಸಾಬೂನನ್ನು ಬಳಸಲು ಇಷ್ಟಪಡುತ್ತಾರೆ. ತಮ್ಮ ಸಾಬೂನನ್ನು ಇತರರೊಂದಿಗೆ ಹಂಚಿಕೊಳ್ಳಲು ಇಷ್ಟಪಡುವುದಿಲ್ಲ. ಈ ಅಭ್ಯಾಸ ಆರೋಗ್ಯಕರವಲ್ಲ ಮನೆಯವರೆಲ್ಲಾ ಒಂದೇ ಸಾಬೂನನ್ನು ಬಳಸುವುದು ಉತ್ತಮ ಅಭ್ಯಾಸವಲ್ಲ ಎಂದು ಚರ್ಮ ತಜ್ಞರು ಎಚ್ಚರಿಸುತ್ತಾರೆ. ಸಾಬೂನುಗಳಿಂದ ಹೆಚ್ಚಿನ ಚರ್ಮ ರೋಗಗಳು ಹರಡಲು ಪ್ರಾರಂಭಿಸಬಹುದು, ಇದು ಚರ್ಮದ ಸೋಂಕುಗಳಿಗೆ ಕಾರಣವಾಗಬಹುದು ಎಂದು ಅವರು ಹೇಳುತ್ತಾರೆ. ಹೆಚ್ಚಿನ ಸಂದರ್ಭಗಳಲ್ಲಿ ಗುಣಪಡಿಸಬಹುದಾದರೂ, ಈ ಸೋಂಕುಗಳು ಹಾನಿಕಾರಕವಾಗಿ ವಿಕಸನಗೊಳ್ಳುವ ಸಾಧ್ಯತೆ ಇದೆ. ಬಳಸುವ ಮೊದಲು ಸೋಪ್ ಅನ್ನು ತೊಳೆಯಿರಿ ನೀವು ಸ್ನಾನಕ್ಕಾದರೂ ಬಳಸಿ ಅಥವಾ ಬರೀ ಕೈ ತೊಳೆಯಲಾದರೂ ಇತರರ ಸೋಪು ಬಳಸಿದರೂ ಸೂಕ್ಷ್ಮ ಜೀವಿಗಳ ಹರಡುವ ಸಾಧ್ಯತೆ ಹೆಚ್ಚಿರುತ್ತದೆ. ಸಾಬೂನಿನಲ್ಲಿ ಇರುವ ಜಿಗುಟಾದ ಪದರವು ಬ್ಯಾಕ್ಟೀರಿಯಾದ ಬೆಳವಣಿಗೆಗೆ ಸಂಭಾವ್ಯ ವಾತಾವರಣವಾಗಿದೆ. ಆದ್ದರಿಂದ, ಸೋಪ್ ಅನ್ನು ಇತರರೊಂದಿಗೆ…
Author: AIN Author
ಚಾಮರಾಜನಗರ: ರಾಜ್ಯ ಸರ್ಕಾರವು ಕರ್ನಾಟಕ ಸುವರ್ಣ ಸಂಭ್ರಮದ ಅಂಗವಾಗಿ ವರ್ಷವಿಡಿ ನಾಡು ನುಡಿ ಕುರಿತು ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ರೇಷ್ಮೆ, ಪಶುಸಂಗೋಪನೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ವೆಂಕಟೇಶ್ ಅವರು ತಿಳಿಸಿದರು. ನಗರದ ಚಾಮರಾಜೇಶ್ವರ ದೇವಾಲಯ ಮುಂಭಾಗದಲ್ಲಿ ಇಂದು ಜಿಲ್ಲಾಡಳಿತದ ವತಿಯಿಂದ ಕರ್ನಾಟಕ ಸುವರ್ಣ ಸಂಭ್ರಮದ ಅಂಗವಾಗಿ ಖ್ಯಾತ ಕನ್ನಡ ಚಲನಚಿತ್ರ ಗಾಯಕರು,ಸಂಗೀತ ನಿರ್ದೇಶಕರ ಸಂಗೀತೋತ್ಸವ ಹಾಗೂ ಹಾಸ್ಯ ಕಲಾವಿದರ ಹಾಸ್ಯೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯವು ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷ ಪೂರೈಸಿದ್ದು ಇದರ ಸಂಭ್ರಮವನ್ನು ರಾಜ್ಯ ಸರ್ಕಾರ ವರ್ಷವಿಡೀ ಅನೇಕ ಕನ್ನಡ ಕಾರ್ಯಕ್ರಮಗಳ ಮೂಲಕ ಆಚರಿಸುತ್ತಿದೆ.ಮುಖ್ಯಮಂತ್ರಿಗಳು ಸುವರ್ಣ ಕರ್ನಾಟಕ ಸಂಭ್ರಮ ಕಾರ್ಯಕ್ರಮ ಅದ್ದೂರಿ ಆಚರಣೆಗೆ ಘೋಷಣೆ ಮಾಡಿದ್ದು ಇದರ ಅಂಗವಾಗಿ ರಾಜ್ಯದ ಎಲ್ಲೆಡೆ ವಿವಿಧ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದರು. ಇದೇ ಆಗಸ್ಟ್ 8 ರಂದು ಜಿಲ್ಲೆಗೆ ಕನ್ನಡ ರಥ ಆಗಮಿಸಲಿದ್ದು ಎಲ್ಲಾ ತಾಲೂಕುಗಳಲ್ಲಿ ಸಂಚರಿಸಲಿದೆ.ಕನ್ನಡದ ಬಗೆಗಿನ ಪ್ರೇಮ,ನಾಡು,ನುಡಿ ಜಾಗೃತಿ ಮೂಡಿಸಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು…
ಯಾದಗಿರಿ:- ಮಂಡ್ಯದಲ್ಲಿ ಹನುಮಧ್ವಜ ತೆರವು ವಿಚಾರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಿಡಿಕಾರಿದ್ದಾರೆ ಈ ಸಂಬಂಧ ಮಾತನಾಡಿದ ಅವರು,ಕೆರಗೋಡು ಗ್ರಾಮ ಪಂಚಾಯಿತಿ ಸದಸ್ಯರು 108 ಅಡಿಯ ಧ್ವಜಸ್ಥಂಭದಲ್ಲಿ ಹನುಮಧ್ವಜ ಹಾರಿಸಲು ತೀರ್ಮಾನಿಸಿದ್ದರು. ಪೊಲೀಸರು ನುಗ್ಗಿ ಗ್ರಾಮಸ್ಥರ ಮೇಲೆ ಲಾಠಿ ಚಾರ್ಜ್ ಮಾಡಿ ಧ್ವಜ ಇಳಿಸಿದ್ದಾರೆ. ಸರ್ಕಾರ ಪೊಲೀಸರಿಂದ ರಾಜ್ಯದಲ್ಲಿ ಗೂಂಡಾಗಿರಿ ನಡೆಸುತ್ತಿದೆ. ಅಮಾಯಕರ ಮೇಲೆ ಇವತ್ತು ಲಾಠಿ ಚಾರ್ಜ್ ಮಾಡಿದ್ದಾರೆ ಇದು ಖಂಡನೀಯ ಎಂದಿದ್ದಾರೆ ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಪ್ರೀತಂ ಗೌಡ ಅವರು ಭೇಟಿ ನೀಡಿದಾಗ ಮತ್ತೊಮ್ಮೆ ಲಾಠಿ ಚಾರ್ಜ್ ಮಾಡಿಸಿದ್ದಾರೆ. ಅವರನ್ನು ಅರೆಸ್ಟ್ ಮಾಡಿಸಿರೋದು ಖಂಡನೀಯ. ಈ ಘಟನೆ ಖಂಡಿಸಿ ನಾಳೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ಪ್ರತಿಭಟನೆ ನಡೆಸಲಿದೆ. ಬಳಿಕ ಜಿಲ್ಲಾಧಿಕಾರಿಗಳ ಮೂಲಕ ಮನವಿ ಕೊಡಲಿದ್ದೇವೆ. ಮುಂದಿನ ದಿನಗಳಲ್ಲಿ ಯಾವ ರೀತಿ ಹೋರಾಟ ಕೈಗೊಳ್ಳಬೇಕು ಎಂಬುದನ್ನ ಚರ್ಚಿಸುತ್ತೇವೆ ಎಂದಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ. ಪೊಲೀಸರು ಹೋಗಿ ಏಕಾಏಕಿ ಲಾಠಿ…
ಶಿವಮೊಗ್ಗ:- ಜಿಂಕೆ ಪ್ರತಿಮೆ ಉರುಳಿಬಿದ್ದು 6 ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ತಾಲೂಕಿನ ಮುದ್ದಿನಕೊಪ್ಪದ ಟ್ರೀ ಪಾರ್ಕ್ನಲ್ಲಿ ಜರುಗಿದೆ. ಹರೀಶ್, ಲಕ್ಷ್ಮೀ ದಂಪತಿ ಪುತ್ರಿ ಸಮೀಕ್ಷಾ ಮೃತ ರ್ದುದೈವಿ ಎಂದು ಹೇಳಲಾಗಿದೆ. ಭಾನುವಾರ ಹಿನ್ನೆಲೆ ಕುಟುಂಬಸ್ಥರು ಮಕ್ಕಳೊಂದಿಗೆ ಟ್ರೀ ಪಾರ್ಕ್ಗೆ ತೆರಳಿದ್ದರು. ಈ ವೇಳೆ ಆಟವಾಡುತ್ತಿದ್ದಾಗ ಏಕಾಏಕಿ ಜಿಂಕೆ ಪ್ರತಿಮೆ ಉರುಳಿಬಿದ್ದು ಬಾಲಕಿ ಕೊನೆಯುಸಿರೆಳೆದಿದ್ದಾರೆ. ಈ ಕುರಿತು ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಬೆಂಗಳೂರು: ಸಿಮೆಂಟ್ ಮಿಕ್ಸರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ನೈಸ್ ರಸ್ತೆಯಲ್ಲಿ ನಡೆದಿದೆ. ಜೆ.ಪಿ.ನಗರದ ನಿವಾಸಿ ಸಾಯಿಮೆನನ್(30) ಮೃತ ಬೈಕ್ ಸವಾರ. ಇನ್ನು ಅಪಘಾತ ಬಳಿಕ ಸ್ಥಳದಲ್ಲೇ ಲಾರಿ ನಿಲ್ಲಿಸಿ ಚಾಲಕ ಪರಾರಿಯಾಗಿದ್ದಾನೆ. ಡಿಯೋ ಕಂಪನಿಯಲ್ಲಿ ಸೌಂಡ್ ಇಂಜಿನಿಯರ್ ಆಗಿದ್ದ ಸಾಯಿಮೆನನ್ ರಜೆ ಹಿನ್ನೆಲೆ ಬೈಕ್ನಲ್ಲಿ ಉಡುಪಿ ಪ್ರವಾಸಕ್ಕೆ ತೆರಳಿದ್ದ ಸಾಯಿಮೆನನ್, ಇಂದು ಬೆಂಗಳೂರಿಗೆ ಹಿಂದಿರುಗುವಾಗ ನೈಸ್ ರಸ್ತೆಯಲ್ಲಿ ಈ ದುರ್ಘಟನೆ ನಡೆದಿದೆ. ಈ ಕುರಿತು ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ವಾಷಿಂಗ್ಟನ್: ಅಮೆರಿಕದ (America) ಅಲಬಾಮಾ (Alabama) ರಾಜ್ಯವು ನೈಟ್ರೋಜನ್ ಅನಿಲವನ್ನು (Nitrogen Gas) ಬಳಸಿ ಅಪರಾಧಿ ಕೊಲೆಗಾರನನ್ನು ಮರಣದಂಡನೆಗೆ (Execution) ಒಳಪಡಿಸಿದೆ. ಮಾರಣಾಂತಿಕ ಚುಚ್ಚುಮದ್ದಿನ ನಂತರ ಇದೇ ಮೊದಲ ಬಾರಿಗೆ ಅಮೆರಿಕದಲ್ಲಿ ಹೊಸ ಮರಣದಂಡನೆ ವಿಧಾನವನ್ನು ಬಳಸಲಾಗಿದೆ. ಕೆನ್ನೆತ್ ಯುಜೀನ್ ಸ್ಮಿತ್ನನ್ನು (Kenneth Eugene Smith) ಅಲಬಾಮಾದ ಹಾಲ್ಮನ್ ಜೈಲಿನಲ್ಲಿ ನೈಟ್ರೋಜನ್ ಹೈಪೋಕ್ಸಿಯಾದಿಂದ ಗಲ್ಲಿಗೇರಿಸಲಾಯಿತು. ನೈಟ್ರೋಜನ್ ಹೈಪೋಕ್ಸಿಯಾದಿಂದ ಕೆನ್ನೆತ್ ಯುಜೀನ್ ಸ್ಮಿತ್ ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ. ಒಕ್ಲಹೋಮ ಮತ್ತು ಮಿಸ್ಸಿಸ್ಸಿಪ್ಪಿ ಜೊತೆಗೆ ಸಾರಜನಕ ಹೈಪೋಕ್ಸಿಯಾವನ್ನು ಮರಣದಂಡನೆಯ ವಿಧಾನವಾಗಿ ಬಳಸಲು ಅನುಮೋದಿಸಿದ ಮೂರು ಯುಎಸ್ ರಾಜ್ಯಗಳಲ್ಲಿ ಅಲಬಾಮಾ ಒಂದಾಗಿದೆ. 1999ರಲ್ಲಿ ಕೊನೆಯದಾಗಿ ಹೈಡ್ರೋಜನ್ ಸೈನೈಡ್ ಅನಿಲವನ್ನು ಬಳಸಿಕೊಂಡು ಅಪರಾಧಿ ಕೊಲೆಗಾರನನ್ನು ಮರಣದಂಡನೆಗೆ ಒಳಪಡಿಸಲಾಗಿತ್ತು. ಇದು ಹೇಗೆ ಕೆಲಸ ಮಾಡುತ್ತದೆ? ನೈಟ್ರೋಜನ್ ಹೈಪೋಕ್ಸಿಯಾವು ವ್ಯಕ್ತಿಯನ್ನು ಸಾರಜನಕವನ್ನು ಮಾತ್ರ ಉಸಿರಾಡುವಂತೆ ಮಾಡುತ್ತದೆ. ಮಾನವ ದೇಹಕ್ಕೆ ದೈಹಿಕ ಕಾರ್ಯಗಳನ್ನು ನಿರ್ವಹಿಸಲು ಅಗತ್ಯವಾದ ಆಮ್ಲಜನಕವನ್ನು ವ್ಯಕ್ತಿಯಿಂದ ಕಸಿದುಕೊಳ್ಳುತ್ತದೆ. ಮರಣದಂಡನೆಯ ಈ ವಿಧಾನದಲ್ಲಿ, ಕೈದಿಗಳ ಮುಖದ ಮೇಲೆ ಉಸಿರಾಟದ ಮುಖವಾಡವನ್ನು ಇರಿಸಲಾಗುತ್ತದೆ.…
ಬೆಂಗಳೂರು:- ಸಿಎಂ ಸಿದ್ದರಾಮಯ್ಯ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮುರನ್ನು ಏಕವಚನದಲ್ಲಿ ಸಂಬೋಧಿಸಬಾರದಿತ್ತು. ಅಚಾತುರ್ಯದಿಂದ ಆಗಿರುವ ಈ ಪ್ರಮಾದಕ್ಕೆ ವಿಷಾದ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ X ಮಾಡಿರುವ ಅವರು, ಗ್ರಾಮೀಣ ಪ್ರದೇಶದಿಂದ ಬಂದ ನನ್ನಂತಹವರು ಅಪ್ಪ-ಅಮ್ಮ ಸೇರಿದಂತೆ ಹಿರಿಯರನ್ನು ಕೂಡಾ ಏಕವಚನದಲ್ಲಿ ಸಂಭೋದಿಸುವುದು ರೂಢಿ. ಗೌರವಾನ್ವಿತ ರಾಷ್ಟ್ರಪತಿಗಳು ನನ್ನಂತೆಯೇ ಶೋಷಿತ ಸಮಾಜದಿಂದ ಬಂದವರು, ಅವರ ಬಗ್ಗೆ ಅಪಾರ ಗೌರವವಿದೆ. ಅವರನ್ನು ಏಕವಚನದಲ್ಲಿ ಸಂಬೋಧಿಸಬಾರದಿತ್ತು ಎಂದು ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕಾಗಿ ರಾಷ್ಟ್ರಪತಿಗಳಾಗಿರುವ ದ್ರೌಪದಿ ಮುರ್ಮು ಅವರಿಗೆ ಸಂಸತ್ ಭವನ ಉದ್ಘಾಟನೆಗೆ ಆಹ್ವಾನ ನೀಡದೆ ಬಿಜೆಪಿ ನಾಯಕರು ಅವಮಾನಿಸಿರುವುದು ನನಗೆ ತೀವ್ರ ನೋವು ಉಂಟುಮಾಡಿದ್ದು ಮಾತ್ರವಲ್ಲ ನನ್ನಲ್ಲಿ ಆಕ್ರೋಶ ಹುಟ್ಟಿಸಿತ್ತು. ಶೋಷಿತರ ಜಾಗೃತಿ ಸಮಾವೇಶದಲ್ಲಿ ಸ್ವಲ್ಪ ಭಾವುಕನಾಗಿ ಈ ಆಕ್ರೋಶವನ್ನು ಹೊರಹಾಕುವ ಭರದಲ್ಲಿ ಬಾಯ್ತಪ್ಪಿನಿಂದ ರಾಷ್ಟ್ರಪತಿಗಳನ್ನು ಏಕವಚನದಲ್ಲಿ ಸಂಭೋದಿಸಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಬಿಗ್ಬಾಸ್ಕನ್ನಡ 10ನೇ ಸೀಸನ್ನಲ್ಲಿ ಕಾರ್ತಿಕ್ ಮಹೇಶ್ ಅವರು ವಿನ್ನರ್ ಆಗಿ ಹೊರಹೊಮ್ಮಿದ್ದಾರೆ. ಮೊದಲಿನಿಂದಲೂ ಆತ್ಮವಿಶ್ವಾಸದಿಂದಲೇ ಇದ್ದ ಕಾರ್ತಿಕ್ ಅವರು ಕೊನೆಯ ಕ್ಷಣದಲ್ಲಿ ಟೆನ್ಷನ್ಗೆ ಒಳಗಾದಂತೆ ಕಾಣಿಸುತ್ತಿದ್ದರು. ವರ್ತೂರು ಸಂತೋಷ್ ಮತ್ತು ವಿನಯ್ ಗೌಡ ಅವರು ಕ್ರಮವಾಗಿ ಮನೆಯಿಂದ ಹೊರಹೋಗುತ್ತಿದ್ದಂತೆಯೇ ಮನೆಯಲ್ಲಿ ಉಳಿದಿದ್ದವರು ಕಾರ್ತಿಕ್, ಸಂಗೀತಾ ಮತ್ತು ಪ್ರತಾಪ್. ಸ್ವತಃ ಕಿಚ್ಚ ಸುದೀಪ್ ಮನೆಯೊಳಗೆ ಹೋಗಿ, ಕಾಫಿ ಕುಡಿದು ಹರಟಿ ನಂತರ ಬಿಗ್ಬಾಸ್ ಮನೆಯಿಂದ ಬೀಳ್ಕೊಟ್ಟು ಮೂವರೂ ಸ್ಪರ್ಧಿಗಳನ್ನು ಮುಖ್ಯವೇದಿಕೆಗೆ ಕರೆತಂದರು. ಮುಖ್ಯವೇದಿಕೆಯಲ್ಲಿ ಸಂಗೀತಾ ಶೃಂಗೇರಿ ಎರಡನೇ ರನ್ನರ್ ಅಪ್ ಆಗಿದ್ದಾರೆ ಎಂದು ಕಿಚ್ಚ ಘೋಷಿಸಿದರು. ನಂತರ ವೇದಿಕೆಯ ಮೇಲೆ ಉಳಿದಿದ್ದು ಕಾರ್ತಿಕ್ ಮತ್ತು ಡ್ರೋಣ್ ಪ್ರತಾಪ್. ಕಿಚ್ಚನ ಒಂದು ಕೈಯಲ್ಲಿ ಕಾರ್ತಿಕ್ ಕೈ ಮತ್ತೊಂದು ಕೈಯಲ್ಲಿ ಪ್ರತಾಪ್ ಕೈ ಇತ್ತು. ಆ ಟೆನ್ಷನ್ ಅನ್ನು ಮಾತುಗಳಲ್ಲಿ ಹಿಡಿದಿಡಲು ಸಾಧ್ಯವಿಲ್ಲ. ಇಡೀ ಕರ್ನಾಟಕವೇ ಉಸಿರು ಬಿಗಿಹಿಡಿದು ಕಾಯುತ್ತಿದ್ದ ಗಳಿಗೆ ಅದು. ಇಬ್ಬರ ಕೈಯಲ್ಲಿ ಕಿಚ್ಚ ಕಾರ್ತಿಕ್ ಅವರ ಕೈ ಎತ್ತಿ ಹಿಡಿದರು. ಅದು…
ಕಂಡಕ್ಟರ್, ಸ್ಟಾಫ್ ನರ್ಸ್ ಹುದ್ದೆಗಳಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸುವಂತೆ BMTC ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 2503 ಕಂಡಕ್ಟರ್, ಸ್ಟಾಫ್ ನರ್ಸ್ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಕಂಡಕ್ಟರ್, ಸ್ಟಾಫ್ ನರ್ಸ್ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಿದೆ. ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. BMTC ಹುದ್ದೆಯ ಅಧಿಸೂಚನೆ ಸಂಸ್ಥೆಯ ಹೆಸರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಹುದ್ದೆಗಳ ಸಂಖ್ಯೆ: 2503 ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ ಹುದ್ದೆಯ ಹೆಸರು: ಕಂಡಕ್ಟರ್, ಸ್ಟಾಫ್ ನರ್ಸ್ ಸಂಬಳ: BMTC ನಿಯಮಗಳ ಪ್ರಕಾರ BMTC ಹುದ್ದೆಯ ವಿವರಗಳು ಕಂಡಕ್ಟರ್: 2500 ಸಹಾಯಕ ಲೆಕ್ಕಾಧಿಕಾರಿ: 1 ಸ್ಟಾಫ್ ನರ್ಸ್: 1 ಔಷಧಿಕಾರ: 1 BMTC ನೇಮಕಾತಿ 2024 ಅರ್ಹತಾ ವಿವರಗಳು ಶೈಕ್ಷಣಿಕ ಅರ್ಹತೆ ಮತ್ತು ವಯಸ್ಸಿನ ಮಿತಿ: BMTC ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ…
ಸಾಮಾನ್ಯವಾಗಿ ನಿದ್ದೆ ಬರುವಾಗ ಪ್ರತಿಯೊಬ್ಬರಿಗೂ ಬಾಯಿ ಆಕಳಿಸುತ್ತದೆ. ಕೆಲವೊಮ್ಮೆ ನಿಮಗೆ ಯಾವುದೇ ವಿಷ್ಯದಲ್ಲಿ ಆಸಕ್ತಿ ಇಲ್ಲದಿದ್ದರೆ ಬೋರ್ ಆಗಿ ಆಕಳಿಕೆ ಬರುತ್ತದೆ. ಆಕಳಿಕೆಯು ಆಯಾಸ ಅಥವಾ ಬೇಸರದ ಭಾವನೆಯ ಸಾಮಾನ್ಯ ಲಕ್ಷಣವಾಗಿದೆ. ಆದರೆ ಕೆಲವರಂತೂ ಯಾವಾಗ ನೋಡಿದರೂ ಆಕಳಿಸುತ್ತಾ ಇರುತ್ತಾರೆ. ಇದಕ್ಕೆ ಕಾರಣಗಳೇನಿರಬಹುದು ಗೊತ್ತಾ? ಆಕಳಿಕೆಯ ಹಿಂದಿರುವ ಅನಾರೋಗ್ಯ ಸ್ಥಿತಿಗಳು ಈ ಸರಳವಾದ ದೈಹಿಕ ಪ್ರತಿಕ್ರಿಯೆಯು ಕೆಲವು ಆರೋಗ್ಯ ಸಮಸ್ಯೆಗಳನ್ನು ಸೂಚಿಸುತ್ತದೆ, ಆರೋಗ್ಯ ತಜ್ಞರ ಪ್ರಕಾರ ನೀವು ಅತಿಯಾಗಿ ಆಕಳಿಸಿದರೆ, ನೀವು ಆಗಾಗ್ಗೆ ಆಕಳಿಕೆ ಮಾಡುತ್ತಿದ್ದರೆ ಮತ್ತು ಅದು ಸಾಮಾನ್ಯಕ್ಕಿಂತ ಭಿನ್ನವಾಗಿದ್ದರೆ ಗಮನ ಕೊಡುವುದು ಮುಖ್ಯ. ಅತಿಯಾದ ಆಕಳಿಕೆಯ ಹಿಂದಿರುವ 5 ಆರೋಗ್ಯ ಸಮಸ್ಯೆಗಳು ಇಲ್ಲಿವೆ. ಔಷಧಿಯ ಅಡ್ಡಪರಿಣಾಮಗಳು ಕೆಲವರು ತೆಗೆದುಕೊಳ್ಳುತ್ತಿರುವ ಯಾವುದೇ ನಿರ್ದಿಷ್ಟ ಔಷಧಿಗಳಿಂದಾಗಿಯೂ ಅತಿಯಾದ ಆಕಳಿಕೆ ಉಂಟಾಗಬಹುದು. ಕೆಲವು ಆಂಟಿ ಸೈಕೋಟಿಕ್ಸ್ ಅಡ್ಡ ಪರಿಣಾಮವಾಗಿ ಅತಿಯಾದ ಆಕಳಿಕೆಗೆ ಕಾರಣವಾಗಬಹುದು. ಪ್ರಿಸ್ಕ್ರಿಪ್ಷನ್ ಇಲ್ಲದೆ ನೀವು ಅಂತಹ ಯಾವುದೇ ಔಷಧಿಗಳನ್ನು ಸೇವಿಸುವುದಿಲ್ಲ ಎಂದು ಖಚಿತಪಡಿಸಿಕೊಳ್ಳಿ, ನಿಮ್ಮ ವೈದ್ಯರ ನಿರ್ದೇಶನದಂತೆ ಸೇವನೆಗೆ ಅಂಟಿಕೊಳ್ಳಿ…