Author: AIN Author

ಮಾಗಡಿ:- ಬರ ಪರಿಹಾರ ಕೇಳಿದ ರೈತನ ಮೇಲೆ ಡಿಕೆ ಸುರೇಶ್ ಸಿಟ್ಟು ಮಾಡಿಕೊಂಡಿದ್ದಾರೆ. ಅಲ್ಲದೇ ನಿನೆಷ್ಟು ಟ್ಯಾಕ್ಸ್ ಕಟ್ಟುತ್ತಿದ್ದೀಯಾ ಹೇಳು ಎಂದು ಹೇಳಿ ಗರಂ ಆಗಿದ್ದಾರೆ. ಜನಸಂಪರ್ಕ ಸಭೆಯಲ್ಲಿ ರೈತ ಪರಿಹಾರದ ಬಗ್ಗೆ ಮಾತನಾಡಿದ್ದು, ಈ ವೇಳೆ ಸಂಸದರು ಸಿಟ್ಟಾಗಿದ್ದಾರೆ. ರಾಜ್ಯ ಸರ್ಕಾರ 5 ಕೆಜಿ ಅಕ್ಕಿ ಕೊಡ್ತಿದೆ, ಇನ್ನುಳಿದ 5ಕೆಜಿಗೆ ಹಣ ಕೊಡ್ತಿದೆ. ರೈತರ ಪಂಪ್ ಸೆಟ್ ಗೆ ವಿದ್ಯುತ್ ಖರೀದಿ ಮಾಡ್ತಿದೆ. ನಾವು ದಿನಾ ಬೆಳಗಾದ್ರೆ ಜೆಡಿಎಸ್ ನವ್ರು, ಬಿಜೆಪಿ ಅವ್ರ ಕೈಯಲ್ಲಿ ಬೈಸಿಕೊಳ್ಳುತ್ತಿದ್ದೇವೆ. ನೀನಿನ್ನೂ ಅದು ಕೊಡಿ, ಇದು ಕೊಡಿ ಅಂತಿದ್ದೀಯಾ? ನೀನು‌ ಎಷ್ಟು ಟ್ಯಾಕ್ಸ್ ಕಟ್ಟುತ್ತಿದ್ದೀಯ ಹೇಳು ಎಂದು ಪ್ರಶ್ನಿಸಿದ ಸಂಸದ ಮುಂದುವರಿದು, ನೀನು ಟ್ಯಾಕ್ಸ್ ಕಟ್ಟೋದಿಲ್ಲ. ಟ್ಯಾಕ್ಸ್ ಕಟ್ಟದೇ ಇರೋರಿಗೆಲ್ಲ ಯಾಕೆ ಫ್ರೀ ಕೊಡುತ್ತೀಯಾ ಅಂತಾ ಮೋದಿ ಕೇಳ್ತಿದ್ದಾರೆ. ಮೋದಿ ಯಾರ ಹತ್ತಿರನೂ ಮಾತನಾಡಲ್ಲ‌, ಅವನು ಹೇಳಿದನ್ನ ನೀನು ಕೇಳಿಕೊಳ್ಳಬೇಕು. ನೀನು ಮೋದಿ‌ನೇ ಸರಿ ಅಂದರೆ ನಾನು‌ ಏನು‌ ಮಾಡೋಕಾಗುತ್ತೆ ಎಂದರು. ವ್ಯವಸ್ಥೆಯನ್ನು ಅರ್ಥ…

Read More

ಬೆಂಗಳೂರು: ವಿರಾಟ್ ಕೊಹ್ಲಿ.. ವಿರಾಟ್ ಕೊಹ್ಲಿ.. ಏಕದಿನ ವಿಶ್ವಕಪ್ ಟೂರ್ನಿಯ ವೇಳೆ ಸೋಷಿಯಲ್ ಮೀಡಿಯಾ ಸೇರಿದಂತೆ ಇಡೀ ಇಂಟರ್ ನೆಟ್ ಜಗತ್ತನ್ನೇ ಬೆಚ್ಚಿಬೀಳಿಸಿದ ಹೆಸರು. ವಿಶ್ವಕಪ್‌ನಲ್ಲಿ ಆಡಿದ ಪ್ರತಿ ಪಂದ್ಯದಲ್ಲೂ ದಾಖಲೆ ಬರೆದ ಕಿಂಗ್ ಕೊಹ್ಲಿ, ಕೊನೆಗೂ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ಅತಿ ಹೆಚ್ಚು ಒಡಿಐ ಶತಕಗಳ ದಾಖಲೆಯನ್ನು ಮುರಿದಿದ್ದರು. ಈ ಟೂರ್ನಿಯಲ್ಲಿ ಕೊಹ್ಲಿ ಮೂರು ಶತಕಗಳೊಂದಿಗೆ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್‌ ಎನಿಸಿಕೊಂಡರು ಹಾಗೂ ಟೂರ್ನಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಪ್ರಸ್ತುತ ಭಾರತ ಮತ್ತು ಆಸ್ಟ್ರೇಲಿಯಾ ಟಿ20 ಸರಣಿ ನಡೆಯುತ್ತಿದೆ. ಈ ಸರಣಿಯಲ್ಲಿ ಕೊಹ್ಲಿ, ರೋಹಿತ್ ಶರ್ಮಾ ಮತ್ತು ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ಇದಾದ ಬಳಿಕ ಟೀಮ್‌ ಇಂಡಿಯಾ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದೆ. ಈ ಸರಣಿಯಲ್ಲಿ ಮೂರು ಟಿ20, ಮೂರು ಏಕದಿನ ಹಾಗೂ ಎರಡು ಟೆಸ್ಟ್ ಪಂದ್ಯಗಳನ್ನು ಆಡಲಿದೆ. ಈ ಪ್ರವಾಸದ ಸೀಮಿತ ಓವರ್‌ಗಳ ಸರಣಿಗಳಿಗೆ ವಿರಾಮ ಪಡೆಯಲು ವಿರಾಟ್‌ ಕೊಹ್ಲಿ ಬಯಸಿದ್ದಾರೆ. ಭಾರತ ಮತ್ತು…

Read More

ಬೆಂಗಳೂರು:- ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇಂದು ತೆಲಂಗಾಣ ಪ್ರವಾಸ ಕೈಗೊಳ್ಳಲಿದ್ದಾರೆ. ತೆಲಂಗಾಣ ವಿಧಾನಸಭೆ ಚುನಾವಣೆ ಫಲಿತಾಂಶ ಡಿ.3ರ ಭಾನುವಾರ ಹೊರಬೀಳುತ್ತಿರುವ ಹಿನ್ನೆಲೆಯಲ್ಲಿ ಅತಂತ್ರ ಫಲಿತಾಂಶ ಉಂಟಾದರೆ ಕಾಂಗ್ರೆಸ್‌ ಶಾಸಕರನ್ನು ನಿಭಾಯಿಸಲು ಶನಿವಾರವೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತೆಲಂಗಾಣಕ್ಕೆ ತೆರಳಲಿದ್ದಾರೆ. ಚುನಾವಣೋತ್ತರ ಸಮೀಕ್ಷೆಗಳಲ್ಲಿ ಕಾಂಗ್ರೆಸ್‌ ಮೇಲುಗೈ ಸಾಧಿಸಿದ್ದು, ಒಂದೊಮ್ಮೆ ಅತಂತ್ರ ಫಲಿತಾಂಶ ಉಂಟಾದರೆ ಕಾಂಗ್ರೆಸ್‌ ಶಾಸಕರನ್ನು ಆಪರೇಷನ್‌ ಮಾಡುವ ಸಾಧ್ಯತೆಯಿದೆ. ಹೀಗಾಗಿ ಕಾಂಗ್ರೆಸ್‌ ಶಾಸಕರಿಗೆ ರಕ್ಷಣೆ ನೀಡಿ ತೆಲಂಗಾಣದಲ್ಲೂ ಕಾಂಗ್ರೆಸ್‌ ಸರ್ಕಾರ ರಚನೆಗೆ ಕಾರ್ಯತಂತ್ರ ರೂಪಿಸುವ ಸಲುವಾಗಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಕಾಂಗ್ರೆಸ್‌ ಪಾಲಿನ ಟ್ರಬಲ್ ಶೂಟರ್‌ ಡಿ.ಕೆ. ಶಿವಕುಮಾರ್ ತೆರಳಲಿದ್ದಾರೆ. 119 ವಿಧಾನಸಭೆ ಸದಸ್ಯರನ್ನು ಹೊಂದಿರುವ ತೆಲಂಗಾಣದ ಫಲಿತಾಂಶ ಕಾಂಗ್ರೆಸ್‌ ಪಾಲಿಗೆ ಮಹತ್ವದ್ದಾಗಿದೆ.

Read More

ದುಬೈ: 2028 ರಲ್ಲಿ ಭಾರತದಲ್ಲಿ (India) COP33 ಶೃಂಗಸಭೆಯನ್ನು ಆಯೋಜಿಸಲು ಪ್ರಧಾನಿ ನರೇಂದ್ರ ಮೋದಿ (Narendra Modi) ಪ್ರಸ್ತಾಪಿಸಿದ್ದಾರೆ. ದುಬೈನಲ್ಲಿ (Dubai) ನಡೆಯುತ್ತಿರುವ ಸಿಒಪಿ-28 ವಿಶ್ವ ಹವಾಮಾನ ಕ್ರಿಯಾ ಶೃಂಗಸಭೆಯಲ್ಲಿ ಪಾಲ್ಗೊಂಡಿರುವ ಮೋದಿ, ಭಾರತದ ಜನಸಂಖ್ಯೆಯು ಜಾಗತಿಕ ಜನಸಂಖ್ಯೆಯ ಶೇ.17 ರಷ್ಟಿದೆ. ಆದರೆ ಜಾಗತಿಕ ಇಂಗಾಲದ ಹೊರಸೂಸುವಿಕೆಯಲ್ಲಿ ಭಾರತದ ಪಾತ್ರ ಕೇವಲ 4% ನಷ್ಟಿದೆ ಎಂದು ಹೇಳಿದ್ದಾರೆ. ಜನಸಂಖ್ಯೆಯು ತುಂಬಾ ಕಡಿಮೆ ಇರುವ ಇತರ ರಾಷ್ಟ್ರಗಳಿಗೆ ಹೋಲಿಸಿದರೆ ಭಾರತದ ಹೊರಸೂಸುವಿಕೆ ತುಂಬಾ ಕಡಿಮೆಯಾಗಿದೆ. ಜಾಗತಿಕ ಹೊರಸೂಸುವಿಕೆಯನ್ನು ತೀವ್ರವಾಗಿ ಕಡಿತಗೊಳಿಸಲು ಎಲ್ಲಾ ರಾಷ್ಟ್ರಗಳು ಒಟ್ಟಾಗಿ ಕೆಲಸ ಮಾಡಬೇಕು ಎಂದು ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಇಂದು ಕರೆ ನೀಡಿದ್ದಾರೆ. https://ainlivenews.com/ms-dhoni-bought-a-car-worth-3-30-crores-full-viral-on-social-media/ NDC ಗುರಿಗಳನ್ನು ಸಾಧಿಸುವಲ್ಲಿ ನಾವು ವೇಗವಾಗಿ ಸಾಗುತ್ತಿದ್ದೇವೆ. ವಾಸ್ತವವಾಗಿ, ನಾವು ಗಡುವಿನ ಒಂಬತ್ತು ವರ್ಷಗಳ ಮೊದಲು ನಮ್ಮ ಪಳೆಯುಳಿಕೆಯಲ್ಲದ ಇಂಧನ ಗುರಿಗಳನ್ನು ತಲುಪಿದ್ದೇವೆ ಎಂದು ತಿಳಿಸಿದ್ದಾರೆ. ವಿಶ್ವ ಹವಾಮಾನ ಕ್ರಿಯಾ ಶೃಂಗಸಭೆ ಸಿಒಪಿ 28ರ ಉನ್ನತ ಮಟ್ಟದ ವಿಭಾಗವಾಗಿದೆ. ಹಸಿರುಮನೆ ಅನಿಲ ಹೊರಸೂಸುವಿಕೆಯನ್ನು ಕಡಿಮೆ…

Read More

ತುಮಕೂರು:- ಭ್ರೂಣ ಲಿಂಗ ಹತ್ಯೆ ತಡೆಗಟ್ಟಲು ಇಲಾಖೆ ಗಮನ ಹರಿಸುತ್ತೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಹೆಣ್ಣು ಭ್ರೂಣ ಹತ್ಯೆ ಬಗ್ಗೆ ಗೃಹ ಸಚಿವರ ಜೊತೆಯೂ ಚರ್ಚಿಸಿದ್ದೇನೆ. ಪೊಲೀಸ್ ಇಲಾಖೆ ಈ ಜಾಲವನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳುತ್ತಿದೆ. ಈ ಪ್ರಕರಣವನ್ನು ವಿಸ್ತೃತವಾಗಿ ತನಿಖೆ ಆಗಬೇಕು ಎಂದು ಹೇಳಿದ್ದೆವು. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಜಿ. ಪರಮೇಶ್ವರ್​ ಚರ್ಚಿಸಿ ಸಿಐಡಿಗೆ ವಹಿಸಿದ್ದಾರೆ ಎಂದರು. ಲಿಂಗಾನುಪಾತ ನೋಡಿದಾಗ ಹೆಣ್ಣುಮಕ್ಕಳ ಸಂಖ್ಯೆಯೂ ಕಡಿಮೆ ಇದೆ. ಸಮಾಜದಲ್ಲಿ ಹೆಣ್ಣುಮಗು ಅಂದಾಕ್ಷಣ ಬೇಡ ಅನ್ನೋ ಪರಿಸ್ಥಿತಿ ಇದೆ. ಭ್ರೂಣ ಲಿಂಗ ಹತ್ಯೆ ತಡೆಗಟ್ಟಲು ಇಲಾಖೆ ಹೆಚ್ಚು ಗಮನ ಹರಿಸುತ್ತದೆ. ಪ್ರಕರಣ ಸಂಬಂಧ ಇಬ್ಬರು ಅಧಿಕಾರಿಗಳನ್ನ ಅಮಾನತು ಮಾಡಲಾಗಿದೆ ಎಂದು ಹೇಳಿದ್ದಾರೆ.

Read More

ಬೆಂಗಳೂರು:- ಮುಂದಿನ 5 ವರ್ಷದಲ್ಲಿ ಕರ್ನಾಟಕ ಏಡ್ಸ್‌ಮುಕ್ತ ಮಾಡುವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಸಂಬಂಧ ವಿಧಾನಸೌಧದಲ್ಲಿ ಆರೋಗ್ಯ ಇಲಾಖೆ ವತಿಯಿಂದ ಆಯೋಜಿಸಲಾದ ವಿಶ್ವ ಏಡ್ಸ್‌ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮುಂದಿನ ಐದು ವರ್ಷಗಳಲ್ಲಿ ದೇಶ ಮತ್ತು ರಾಜ್ಯವನ್ನು ಏಡ್ಸ್ ಮುಕ್ತಗೊಳಿಸಬೇಕಾಗಿದ್ದು, ಈ ನಿಟ್ಟಿನಲ್ಲಿ ಎಲ್ಲರೂ ಒಟ್ಟಾಗಿ ಕಾರ್ಯಪ್ರವೃತ್ತರಾಗಬೇಕು ಎಂದರು. ಎಚ್‌ಐವಿ ಮಾರಕ ಸಾಂಕ್ರಾಮಿಕ ರೋಗವಾಗಿದ್ದು, ಇದನ್ನು ತಡೆಗಟ್ಟುವುದು ಎಲ್ಲರ ಜವಾಬ್ದಾರಿಯಾಗಿದೆ. 1981ರಲ್ಲಿ ಮೊದಲು ಇದು ಕಾಣಿಸಿಕೊಂಡಿತ್ತು. 1986ರಲ್ಲಿ ಭಾರತದಲ್ಲಿ, 1996ರಲ್ಲಿ ರಾಜ್ಯದಲ್ಲಿ ಕಾಣಿಸಿಕೊಂಡಿತು. ಇತ್ತೀಚಿನ ದಿನಗಳಲ್ಲಿ ಎಚ್‌ಐವಿಪೀಡಿತರ ಸಂಖ್ಯೆ ಹಾಗೂ ಅದರ ಹರಡುವಿಕೆಯೂ ಕಡಿಮೆಯಾಗುತ್ತಿದೆ. ಇದು ಒಳ್ಳೆಯ ಬೆಳವಣಿಗೆಯಾಗಿದೆ ಎಂದು ಹೇಳಿದರು. ನಮ್ಮ ಸಮಾಜವನ್ನು ಎಚ್‌ಐವಿ ಮುಕ್ತ ಸಮಾಜವನ್ನಾಗಿ ಮಾಡಬೇಕು. ಇದಕ್ಕಾಗಿ ಜನರಲ್ಲಿ ಮತ್ತು ಯುವಜನರಲ್ಲಿ ಈ ಬಗ್ಗೆ ಜಾಗೃತಿ ಮೂಡಬೇಕು. 2015-2020ರವರೆಗೆ ಏಡ್ಸ್‌ಪೀಡಿತರ ಸಂಖ್ಯೆಯನ್ನು ಸೊನ್ನೆಗೆ ತನ್ನಿ ಎಂಬ ಘೋಷವಾಕ್ಯವಿತ್ತು. ಆದರೆ ಈ ಗುರಿಯನ್ನು ಇನ್ನೂ ಸಾಧಿಸಲಾಗಿಲ್ಲ. ಈ ಘೋಷಣೆಯನ್ನು ಕಾರ್ಯರೂಪಕ್ಕೆ ತರುವುದು ಕೇವಲ…

Read More

ಸ್ಮಾರ್ಟ್‌ ಫೋನ್‌ಗಳು ಈಗ ಬಹುತೇಕರ ಬದುಕಿನ ಅವಿಭಾಜ್ಯ ಅಂಗವಾಗಿ ಹೋಗಿವೆ. ಈ ಫೋನ್‌ಗಳು ಈಗ ಬರೀ ಕರೆ ಮಾಡುವ ಸಾಧನವಾಗಿ ಮಾತ್ರ ಉಳಿದಿಲ್ಲ. ಹಣ ಪಾವತಿ, ಹಣ ವರ್ಗಾವಣೆ, ಮನರಂಜನೆ, ಮಾಹಿತಿ ಹೀಗೆ ನಮ್ಮ ಬಹುತೇಕ ದೈನಂದಿನ ಚಟುವಟಿಕೆಗಳಿಗೆ ಸ್ಮಾರ್ಟ್‌ ಫೋನ್‌ಗಳು ಆಧಾರವಾಗಿವೆ‌ ಲಾವಾ ಬ್ಲೇಜ್ 5ಜಿ ಲಾವಾ ಬ್ಲೇಜ್ 5ಜಿ ಫೋನ್‌ನ ಬೆಲೆ 11,999 ರೂಪಾಯಿ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 700 ಪ್ರೊಸೆಸರ್‌ನಿಂದ ಚಾಲಿತವಾಗಿದ್ದು, 5000mAh ಬ್ಯಾಟರಿ ಹಾಗೂ 3.5 ಎಂಎಂ ಆಡಿಯೋ ಜಾಕ್‌ನೊಂದಿಗೆ ಬರುತ್ತದೆ. ನೋಕಿಯಾ ಜಿ42 5ಜಿ ನೋಕಿಯಾ ಜಿ42 5ಜಿ ಸ್ಮಾರ್ಟ್‌ ಫೋನ್‌ನ ಬೆಲೆ 12,999 ರೂಪಾಯಿ. ಇದು ಸ್ನಾಪ್‌ಡ್ರಾಗನ್ 480+ ಪ್ರೊಸೆಸರ್‌ನಿಂದ ಚಾಲಿತವಾಗಿದೆ. ಈ ಫೋನ್‌ ಕೂಡಾ 5000mAh ಬ್ಯಾಟರಿ ಹೊಂದಿದ್ದು, ಇದು 3.5 ಎಂಎಂ ಆಡಿಯೋ ಜಾಕ್‌ನೊಂದಿಗೆ ಲಭ್ಯವಿದೆ. ಟೆಕ್ನೋ ಪೋವಾ 5 ಪ್ರೋ ಪ್ರಸಿದ್ಧ ಟೆಕ್ನೋ ಕಂಪನಿಯ ಟೆಕ್ನೋ ಪೋವಾ 5 ಪ್ರೋ ಸ್ಮಾರ್ಟ್‌ಫೋನ್ 14,999 ರೂಪಾಯಿಗೆ ಸಿಗುತ್ತದೆ. ಈ ಫೋನ್…

Read More

ತಿರುವನಂತಪುರಂ: ಈ ಹಿಂದೆ ಪರೀಕ್ಷೆ ಬರೆಯಲು ಹೋಗಿದ್ದಾಗ ಅಳುತ್ತಿದ್ದ ಪುಟ್ಟ ಕಂದಮ್ಮನನ್ನ ಮಹಿಳಾ ಪೊಲೀಸ್ ಸಮಾಧಾನ ಮಾಡಿದ್ದ ಸುದ್ದಿಯನ್ನು ಓದಿದ್ದೇವೆ. ಇದೀಗ ಅಂಥದ್ದೇ ಮನಸ್ಸಿಗೆ ಮುಟ್ಟುವಂತಹ ಘಟನೆಯೊಂದು ಕೇರಳದಲ್ಲಿ ನಡೆದಿದೆ. ಕೇರಳದ ಕೊಚ್ಚಿಯಲ್ಲಿ (Kochi Kerala) ಈ ಘಟನೆ ನಡೆದಿದ್ದು, ನಾಲ್ಕು ತಿಂಗಳ ಮಗುವಿಗೆ ಸ್ವತಃ ತಾವೇ ಎದೆ ಹಾಲುಣಿಸುವ ಮೂಲಕ ತಾಯಿ ಪ್ರೀತಿ ತೋರಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ಮಹಿಳಾ ಪೊಲೀಸ್ ಅಧಿಕಾರಿಗೆ ಇಲಾಖೆ ಮತ್ತು ಸಾರ್ವಜನಿಕರು ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.  https://twitter.com/RMahatej/status/1727649899133739272?ref_src=twsrc%5Etfw%7Ctwcamp%5Etweetembed%7Ctwterm%5E1727649899133739272%7Ctwgr%5E5510b323ad7f75a9de14b76b7f2a6de2fb704f77%7Ctwcon%5Es1_&ref_url=https%3A%2F%2Ftv9kannada.com%2Ftrending%2Fviral-video-kochi-police-officer-breastfeeds-ailing-woman-4-months-old-baby-sct-724770.html ಘಟನೆ ಏನು..?: ಬಿಹಾರ (Bihar) ಮೂಲದ ಮಗುವಿನ ತಾಯಿಗೆ ಶಸ್ತ್ರಚಿಕಿತ್ಸೆಯೊಂದು ನಡೆದಿತ್ತು. ಆ ಬಳಿಕ ಆಕೆ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಆ ತಾಯಿಯನ್ನು ಎರ್ನಾಕುಲಂ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಪುಟ್ಟ ಕಂದಮ್ಮನ ಆರೈಕೆಗೆ ಎರ್ನಾಕುಲಂ ವನಿತಾ ಪೊಲೀಸ್ ಠಾಣೆಯ ಸಿವಿಲ್ ಪೊಲೀಸ್ ಅಧಿಕಾರಿ ಆರ್ಯ ಅವರು ಮುಂದಾಗಿದ್ದಾರೆ. ಸದ್ಯ ಆರ್ಯ ಅವರ ಈ ಕಾರ್ಯಕ್ಕೆ ಸಹ ಅಧಿಕಾರಿಗಳು ಮತ್ತು ಸಾರ್ವಜನಿಕರು ಭೇಷ್ ಎಂದಿದ್ದಾರೆ.  ಈ…

Read More

ಸಾಮಾನ್ಯವಾಗಿ 3-4 ದಿನಗಳಲ್ಲಿ ಕಡಿಮೆಯಾಗುತ್ತದೆ, ಆದರೆ ಕಫ, ಕೆಮ್ಮು ಒಮ್ಮೆ ಶುರುವಾದರೆ 15-20 ದಿನಗಳಾದರೂ ಹೋಗುವುದಿಲ್ಲ. ನಿರಂತರ ಕೆಮ್ಮು ಸಾಕಷ್ಟು ಅಸ್ವಸ್ಥತೆಯನ್ನು ಉಂಟುಮಾಡುತ್ತದೆ, ಇದಕ್ಕೆ ಒಣ ಕಫವೇ ಕಾರಣ. ಇದು ನಿದ್ರೆಯನ್ನು ದುರ್ಬಲಗೊಳಿಸುತ್ತದೆ ಮತ್ತು ಆಹಾರವನ್ನು ನುಂಗಲು ಕಷ್ಟವಾಗುತ್ತದೆ. ಹಾಗಾಗಿ ಮಾತ್ರೆ ಔಷಧಿಗಳಿಗಿಂತ ಮನೆಮದ್ದು ತೆಗೆದುಕೊಂಡರೆ ಒಣ ಕಫವನ್ನು ಕಡಿಮೆ ಮಾಡಬಹುದು. ಹಾಗಾದರೆ ಒಣ ಕೆಮ್ಮನ್ನು ಕಡಿಮೆ ಮಾಡುವುದು ಹೇಗೆ ಎಂಬುದರ ಕುರಿತು ಮಾಹಿತಿ ಇಲ್ಲಿದೆ ಸೋಂಪು: ಇದು ಒಣ ಕೆಮ್ಮಿನ ಸಮಸ್ಯೆಯನ್ನು ತೆಗೆದುಹಾಕುತ್ತದೆ. ಹೊಟ್ಟೆ ನೋವು, ಗ್ಯಾಸ್ ಇತ್ಯಾದಿ ಸಮಸ್ಯೆಗಳನ್ನು ಇದು ನಿವಾರಿಸುತ್ತದೆ ಎಂದು ತಿಳಿದಿದೆ. ಜೊತೆಗೆ ಇದನ್ನು ಶೀತ ಮತ್ತು ಕೆಮ್ಮಿನ ಸಂದರ್ಭದಲ್ಲಿಯೂ ಪ್ರಯತ್ನಿಸಬಹುದು. ಸೋಂಪು ಗಂಟಲಿನ ಸ್ನಾಯುಗಳನ್ನು ಸಡಿಲಗೊಳಿಸುತ್ತದೆ. ಅದಕ್ಕಾಗಿ ಸೋಂಪು ಚಹಾವನ್ನು ತಯಾರಿಸಬಹುದು ಮತ್ತು ಕುಡಿಯಬಹುದು. ಈ ಚಹಾದಲ್ಲಿ, ಅದರ ಕೆಲವು ಎಲೆಗಳು ಹೂವುಗಳು, ಜೇನು ತುಪ್ಪವನ್ನು ಸಹ ಸೇರಿಸಬಹುದು. ಕರಿಮೆಣಸು: ಒಣ ಕೆಮ್ಮಿಗೆ ಕರಿಮೆಣಸು ಜೇನುತುಪ್ಪದೊಂದಿಗೆ ಬೆರೆಸಿ ಸೇವಿಸಬಹುದು. ಕರಿಮೆಣಸಿನಲ್ಲಿ  ವಿಟಮಿನ್ ಸಿ, ಆಂಟಿ-ಬಯೋಟಿಕ್ ಗುಣಗಳಿವೆ, ಇದು ಒಣ ಕೆಮ್ಮು, ಶೀತವನ್ನು…

Read More

ಬೆಂಗಳೂರು:- ಈತ ಓದಿದ್ದು ಬರೀ SSLC, ಆದ್ರೆ ಇವನು ವೃತ್ತಿಯಲ್ಲಿ ಡಾಕ್ಟರ್‌. ಅರೆ ಹೇಗೆ ಅಂತೀರಾ!? ಈ ಸ್ಟೋರಿ ಪೂರ್ತಿ ಓದಿ. ಹಸುಗೂಸು ಮಾರಾಟ ಹಗರಣದಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಈಗಾಗಲೇ ಒಂಬತ್ತು ಮಂದಿಯನ್ನು ಬಂಧಿಸಲಾಗಿದೆ. ಅವರಲ್ಲಿ ಒಬ್ಬ ನಕಲಿ ವೈದ್ಯನೂ ಇದ್ದಾನೆ. ಅವನೇ ಕೆವಿನ್‌ ಅಲಿಯಾಸ್‌ ಕರಣ್‌. ಬಡ ಕುಟುಂಬಗಳ ಗರ್ಭಿಣಿಯರನ್ನು ಮೊದಲೇ ಗೊತ್ತು ಮಾಡಿಕೊಂಡು ಅವರಿಗೆ ಹಣದ ಆಮಿಷ ಒಡ್ಡಿ, ಹೆರಿಗೆಯಾಗುತ್ತಿದ್ದಂತೆಯೇ ಮಗುವನ್ನು ಬೇರೆಯವರಿಗೆ ಮಾರಾಟ ಮಾಡುವ ಜಾಲ ಇದಾಗಿದೆ. ಐವಿಎಫ್‌ ನಂಥ ಕೃತಕ ಗರ್ಭಧಾರಣಾ ವಿಧಾನದ ಮೂಲಕವೂ ಮಕ್ಕಳನ್ನು ಸೃಷ್ಟಿಸಿ ಮಾರಾಟ ಮಾಡಲಾಗುತ್ತಿತ್ತು. ಪ್ರಕರಣದಲ್ಲಿ ಕಣ್ಣನ್ ರಾಮಸ್ವಾಮಿ, ಮುರುಗೇಶ್ವರಿ, ಸುಹಾಸಿನಿ, ಶರಣ್ಯ, ಹೇಮಲತಾ, ಮಹಾಲಕ್ಷ್ಮಿ, ಗೋಮತಿ, ರಾಧಾಮಣಿ ಮೊದಲ ಹಂತದಲ್ಲಿ ಬಂಧಿತರಾದರೆ ಬಳಿಕ ಕೆವಿನ್‌ ಅಲಿಯಾಸ್‌ ಮತ್ತು ರಮ್ಯ ಎಂಬವರನ್ನು ಬಂಧಿಸಲಾಗಿತ್ತು. ಎರಡನೇ ಹಂತದಲ್ಲಿ ಸಿಕ್ಕಿಬಿದ್ದಿರುವ ಕೆವಿನ್‌ ಅಲಿಯಾಸ್‌ ಕರಣ್‌ ಒಬ್ಬ ನಕಲಿ ವೈದ್ಯ. ಅವನು ಓದಿದ್ದು ಬರೀ ಎಸ್‌ಎಸ್‌ಎಲ್‌ಸಿ. ಆದರೆ, ತಾನೊಬ್ಬ ಡಾಕ್ಟರ್‌ ಎಂದು ಪೋಸ್‌ ಕೊಟ್ಟು…

Read More