Author: AIN Author

ಚಿತ್ರದುರ್ಗ: ಕೆ ಆರ್ ಪುರಂ ಠಾಣೆ PSI ಕಲ್ಲಪ್ಪ ಬಳಿಯಿದ್ದ ಪಿಸ್ತೂಲ್ ನಾಪತ್ತೆ ಆಗಿರುವ ಘಟನೆ ಜರುಗಿದೆ. ಬೆಂಗಳೂರಿನ ಕೆ ಆರ್ ಪುರಂ ಠಾಣೆಯ PSI ಕಲ್ಲಪ್ಪ ಅವರ ಪಿಸ್ತೂಲ್ ಕಾಣೆಯಾಗಿದೆ. ಜಾನಕೊಂಡ ಗ್ರಾಮದ ಬಳಿಯ ರೆಸ್ಟೋರೆಂಟ್ ನಲ್ಲಿ ಘಟನೆ ಜರುಗಿದೆ. ಚಿತ್ರದುರ್ಗ ತಾಲೂಕಿನ ಜಾನಕೊಂಡ ಬಳಿಯ ಬಾರ್& ರೆಸ್ಟೋರೆಂಟ್ ಗೆ PSI ಕಲ್ಲಪ್ಪ ಊಟಕ್ಕೆ ಬಂದಿದ್ದಾಗ ಘಟನೆ ಜರುಗಿದೆ. ಊಟ ಮುಗಿಸಿ ಕೈತೊಳೆದು ಬರುವಷ್ಟರಲ್ಲಿ ಪಿಸ್ತೂಲ್ ನಾಪತ್ತೆ? ಆಗಿದೆ. ಶಿವಮೊಗ್ಗ ಕಡೆಯಿಂದ ಬೆಂಗಳೂರಿಗೆ PSI ತೆರಳುತ್ತಿದ್ದ. ಮಾರ್ಗ ಮದ್ಯೆ ಜಾನಕೊಂಡ ಬಳಿ ಊಟಕ್ಕೆ ತೆರಳಿದ್ದರು. ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರಿಂದ ಪರಿಶೀಲನೆ ನಡೆಯುತ್ತಿದೆ. ಘಟನೆ ಕುರಿತು ಚಿತ್ರದುರ್ಗ ಪೊಲೀಸ್ ಮೂಲಗಳಿಂದ ಮಾಹಿತಿ ನೀಡಲಾಗಿದೆ. ಈವರೆಗೆ ಈ ಬಗ್ಗೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿಲ್ಲ ಎನ್ನಲಾಗಿದೆ.

Read More

ಧಾರವಾಡ:- ಜಿಲ್ಲೆಯಲ್ಲಿ ಖಾಸಗಿ ಬಸ್‌ಗೆ ಲಾರಿ ಡಿಕ್ಕಿ ಹೊಡೆದು ಭಾರೀ ದೂರಂತವೊಂದು ತಪ್ಪಿದ ಘಟನೆ ಧಾರವಾಡದಲ್ಲಿ ನಡೆದಿದೆ. ಪ್ರಯಾಣಿಕರನ್ನು ತುಂಬಿಕೊಂಡ ಹೋಗುತ್ತಿದ್ದ ಸಾರಿಗೆ ಬಸ್‌ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದಿದೆ. ಘಟನೆ ಪರಿಣಾಮ ಇಬ್ಬರು ಪ್ರಯಾಣಿಕರಿಗೆ ಗಾಯವಾಗಿದ್ದು, ಹುಬ್ಬಳ್ಳಿ ಧಾರವಾಡ ರಸ್ತೆಯ ಎಸ್‌ಡಿಎಂ ಆಸ್ಪತ್ರೆ ಬಳಿ ನಡೆದ ಘಟನೆ ಜರುಗಿದೆ. ಓರ್ವ ಪುರುಷ ಹಾಗೂ ಓರ್ವ ಮಹಿಳಾ ಪ್ರಾಣಿಕರಿಗೆ ಗಾಯವಾಗಿದ್ದು, ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಲೆ ಧಾರವಾಡ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಧಾರವಾಡ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ. ಖಾಸಗಿ ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಬಾರಿ ದುರಂತ ಸಂಭವಿಸಿದೆ. ಹಿಂದಿಯಿಂದ ಲಾರಿ ಡಿಕ್ಕಿ ಬಳಿಕ ಸಿಗ್ನಲ್ ಕಂಬಕ್ಕೆ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. 20 ಅಧಿಕ ಪ್ರಯಾಣಿಕರನ್ನು ಕರೆದುಕೊಂಡು ಈ ಖಾಸಗಿ ಸಾರಿಗೆ ಬಸ್ ಹೋಗುತ್ತಿತ್ತು ಎನ್ನಲಾಗಿದೆ. ಅದೃಷ್ಟವಶಾತ್ ಯಾವುದೇ ಒ್ರಾಣ ಹಾನಿ ಸಂಭವಿಸಿಲ್ಲ ಎಂದು…

Read More

ಬೆಂಗಳೂರು:- ಮುಂಬೈ ಕ್ರೈಂ ಬ್ರಾಂಚ್ ಪೊಲೀಸರ ಸೋಗಿನಲ್ಲಿ ವಂಚಿಸ್ತಿದ್ದ ಆರೋಪಿಗಳನ್ನು ಬೆಂಗಳೂರಿನಲ್ಲಿ ಅರೆಸ್ಟ್ ಮಾಡಲಾಗಿದೆ. ವಸೀಂ‌, ಹಬೀಬುಲ್ಲ, ನಿಝಾಮುದ್ದೀನ್, ಮುಶ್ರಫ್ ಖಾನ್, ನೂರುಲ್ಲ ಖಾನ್,‌ ಮೊಹಮದ್‌ ಉಮರ್, ಸೈಯದ್ ಅಹ್ಮದ್, ಸೈಯದ್ ಹುಸೇನ್ ಬಂಧಿತ ಆರೋಪಿಗಳು. ಫೆಡೆಕ್ಸ್ ಕೊರಿಯರ್ ಪಾರ್ಸಲ್ ಹೆಸರಿನಲ್ಲಿ ಸೈಬರ್ ವಂಚನೆ ಮಾಡುತ್ತಿದ್ದರು. ಫೆಡೆಕ್ಸ್ ಕೊರಿಯರ್ ನಲ್ಲಿ ಕಾನೂನು ಬಾಹಿರ ಪಾರ್ಸಲ್ ಬಂದಿದೆ ಎಂದು ಬೆದರಿಕೆ ಹಾಕುತ್ತಿದ್ದರು. ನಿಮ್ಮ ಅಕೌಂಟ್ ನಲ್ಲಿ ಮನಿ‌ಲ್ಯಾಂಡ್ರಿಂಗ್ ಆಗುತ್ತಿರುವ ಮಾಹಿತಿ ಸಿಕ್ಕಿದೆ ಎಂದು ತಲೆಗೆ ಹುಳ ಬಿಡುತ್ತಿದ್ದರು. ಆರ್ ಬಿ ಐ ನವರು ನಿಮ್ಮ ಅಕೌಂಟ್‌ ಫ್ರೀಝ್ ಮಾಡುವ ಸಾಧ್ಯತೆ ಇದೆ. ನಿಮ್ಮ ಬ್ಯಾಂಕ್ ಸ್ಟೇಟ್ಮೆಂಟ್ ನ್ನು ತನಿಖೆಗೆ ಒಳಪಡಿಸಬೇಕಿದೆ. ತನಿಖೆ ನಂತರ ನಿಮ್ಮ ಹಣ ವಾಪಾಸ್ ಕೊಡ್ತಿವಿ ಎಂದು ಬೆದರಿಕೆ ಹಾಕುತ್ತಿದ್ದರು. ಹೆಚ್ ಡಿ ಎಫ್ ಸಿ ಅಕೌಂಟ್ ನಿಂದ 66 ಲಕ್ಷ, ಸ್ಮಾಲ್ ಫೈನಾನ್ಸ್ ಬ್ಯಾಂಕ್ ನಿಂದ 42 ಲಕ್ಷ ಹಣ ಹಾಕಿಸಿಕೊಂಡಿದ್ದ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ ಪೊಲೀಸರು. ಈ…

Read More

ಹಾಸನ:- ವಿಶ್ವದ ಅಗ್ರಗಣ್ಯ ನಾಯಕನಾಗಿ ಬೆಳೆದಿರುವ ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಬೇಕಿದೆ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಹಿಂದೆ ಬಿಜೆಪಿ ವಿರುದ್ಧ ಹೋರಾಟ ಮಾಡಿದು ಸತ್ಯ ಆದರೆ ಈಗ ಅದನ್ನೆಲ್ಲ ಮರೆತು ಒಟ್ಟಾಗಿ ಕೆಲಸ ಮಾಡಿ ಲೋಕ ಸಭಾ ಚುನಾವಣೆಯಲ್ಲಿ ಗೆದ್ದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕೈ ಬಲಪಡಿಸಬೇಕೆಂದು ಕರೆ ನೀಡಿದರು. ಪ್ರಧಾನಿ ಮೋದಿಯವರು ದೊಡ್ಡ ವ್ಯಕ್ತಿಯಾಗಿ ಬೆಳೆದಿದ್ದಾರೆ, ಕೇವಲ ಭಾರತ ಮಾತ್ರವಲ್ಲ ಇಡೀ ವಿಶ್ವದಲ್ಲೇ ಅಗ್ರಗಣ್ಯ ನಾಯಕನೆಂದು ಗುರುತಿಸಿಕೊಂಡಿದ್ದಾರೆ ಎಂದು ದೇವೇಗೌಡ ಹೇಳಿದರು. ಬಿಜೆಪಿಯ ರಾಜ್ಯಾಧ್ಯಕ್ಷನಾಗಿ ಆಯ್ಕೆಯಾದ ಬಳಿಕ ಬಿಎಸ್ ಯಡಿಯೂರಪ್ಪನವರ ಮಗ ಬಿವೈ ವಿಜಯೇಂದ್ರ ಮತ್ತು ವಿರೋಧ ಪಕ್ಷದ ನಾಯಕರಾಗಿ ನೇಮಕಗೊಂಡ ಮೇಲೆ ಆರ್ ಅಶೋಕ ಬಂದು ತಮ್ಮೊಂದಿಗೆ ಮಾತಾಡಿದ್ದಾರೆ. ಹಾಗಾಗಿ, ಹಿಂದಿನ ದ್ವೇಷ, ಅಸೂಯೆ ಕೋಪ-ತಾಪ, ಅಸಮಾಧಾನ ಎಲ್ಲವನ್ನು ಮರೆತು ಒಂದಾಗಿ, ಒಟ್ಟಾಗಿ ಹೊರಾಡೋಣ ಎಂದು ಮಾಜಿ ಪ್ರಧಾನಿ ಹೆಚ್ ಜಿ ದೇವೇಗೌಡ ಹೇಳಿದರು.

Read More

ಬೆಂಗಳೂರು: ಸೌತ್ ಎಂಡ್ ಸರ್ಕಲ್ ನಲ್ಲಿರುವ ಕೆಂಪೇಗೌಡ ನಗರದ ಸಹಕಂದಾಯ ಅಧಿಕಾರಿ ಕಛೇರಿಗೆ ಶುಕ್ರವಾರ ಸಂಜೆ ಭೇಟಿ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಆಸ್ತಿ ದಾಖಲೆಗಳ ಡಿಜಿಟೈಸೇಷನ್ ವ್ಯವಸ್ಥೆ ಪರಿಶೀಲನೆ ನಡೆಸಿದರು. ಸಹ ಕಂದಾಯ ಅಧಿಕಾರಿ ಕಛೇರಿಯಲ್ಲಿ ನಡೆಯುತ್ತಿರುವ ಆಸ್ತಿ ಪುಸ್ತಕಗಳ ಸ್ಕಾನಿಂಗ್ ಅನ್ನು ವೀಕ್ಷಿಸಿದರು. ಮಾಹಿತಿ ಪಡೆದರು. ಮುಖ್ಯ ಆಯುಕ್ತರು ಪ್ರತಿಕ್ರಿಯಿಸಿ, ರಿಜಸ್ಟರ್ ಪುಸ್ತಕದಲ್ಲಿ ಬರೆದಿರುವುದನ್ನು ಸ್ಕ್ಯಾನಿಂಗ್ ಮಾಡಿ, ಸ್ಕ್ಯಾನಿಂಗ್ ಆಗಿರುವ ಗುಣಮಟ್ಟವನ್ನು ಪರಿಶೀಲಿಸಲಾಗುತ್ತದೆ. ತದನಂತರ ಮಾಹಿತಿಯನ್ನು ಟೈಪ್ ಮಾಡಿ ವೆರಿಫಿಕೇಷನ್ ಮಾಡಿದ ನಂತರ ಸಾಪ್ಟ್ ವೇರ್ ನಲ್ಲಿ ಪ್ರತಿಯೊಂದು ಆಸ್ತಿಯನ್ನು ಗಣಕಯಂತ್ರದ ಮೂಲಕ ಡಿಜಿಟೈಸೇಷನ್ ಮಾಡಲಾಗುತ್ತದೆ. ಇದನ್ನು ಯಾರೂ ನಕಲು ಮಾಡಲು ಸಾಧ್ಯವಿಲ್ಲ. ಒಮ್ಮೆ ಡಿಜಿಟೈಸೇಷನ್ ಮಾಡಿದ ನಂತರ ಆಸ್ತಿ ಖಾತಾವನ್ನು ಆನ್ ಲೈನ್ ಮೂಲಕ ಎಲ್ಲಿ ಬೇಕಾದರೂ ನೋಡಬಹುದು ಎಂದು ಮಾಹಿತಿ ನೀಡಿದರು. ಡಿಸಿಎಂ ಪಾಲಿಕೆ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿ ನಗರದಾದ್ಯಂತ ತ್ವರಿತಗತಿಯಲ್ಲಿ ಎಲ್ಲಾ ಆಸ್ತಿಗಳನ್ನು ಡಿಜಿಟೈಸೇಷನ್ ಮಾಡಲು ಸೂಚನೆ ನೀಡಿದರು. ಎಸ್.ಜೆ.ಪಿ ರಸ್ತೆ…

Read More

ಹುಬ್ಬಳ್ಳಿ, ಡಿ.01: ಹೊರಗಿನ ಕತ್ತಲೆ ಕಳೆಯಲು ದೀಪಬೇಕು. ಅಜ್ಞಾನವೆಂಬ ಕತ್ತಲೆ ಕಳೆಯಲು ಗುರುಬೇಕು. ಅರಿವು, ಆದರ್ಶಗಳ ಪರಿಪಾಲನೆಯಿಂದ ಜೀವನ ಉಜ್ವಲಗೊಳ್ಳುತ್ತದೆಂದು ಬಾಳೆಹೊನ್ನುರು ಶ್ರೀ ರಂಭಾಪುರಿ ಡಾ‌. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು. ಅವರು ಇಂದು ಸಂಜೆ ಹುಬ್ಬಳ್ಳಿ ವಿದ್ಯಾನಗರದ ಶ್ರೀ ರಂಭಾಪುರಿ ಜಗದ್ಗುರು ವೀರ ಗಂಗಾಧರ ಸಮುದಾಯ ಭವನದಲ್ಲಿರುವ ಶ್ರೀ ಜಗದ್ಗುರು ರೇಣುಕ ಮಂದಿರದಲ್ಲಿ ಜರುಗಿದ ಕಾರ್ತೀಕ ದೀಪೋತ್ಸವ ಸಮಾರಂಭದ ಸಾನಿಧ್ಯವಹಿಸಿ, ಆಶಿರ್ವಚನ ನೀಡಿದರು. ಮನುಷ್ಯನಿಗೆ ಅರಿವು, ಆರೋಗ್ಯ ಮತ್ತು ಆಯುಷ್ಯ ಬಹು ಮುಖ್ಯ. ಭೌತಿಕ ಬದುಕು ಸಂಪತ್ತಿನಷ್ಟೆ ಉಜ್ವಲಗೊಳ್ಳುವುದು. ಸಂಪತ್ತಿನ ಜೊತೆ ಶಿವ ಜ್ಞಾನದ ಅರಿವು ಸಂಪಾದಿಸಿಕೊಂಡು ಬಾಳ ಬೇಕಾಗುತ್ತದೆ ಎಂದು ಅವರು ಹೇಳಿದರು. ಶ್ರೀ ಜಗದ್ಗುರು ರೇಣುಕಾಚಾರ್ಯರು ಮೌಲ್ಯ ಆಧಾರಿತ ಬದುಕಿಗೆ ಧರ್ಮದ ದಶವಿಧ ಸೂತ್ರಗಳನ್ನು ಬೋಧಿಸಿದ್ದಾರೆ. ಅಹಿಂಸಾ, ಸತ್ಯ,ಅಸ್ತೇಯ, ಬ್ರಹ್ಮಚರ್ಯ, ದಯಾ, ಕ್ಷಮಾ, ದಾನ, ಪೂಜಾ, ಜಪ, ಧ್ಯಾನ ಎಂಬ ಹತ್ತು ಸೂತ್ರಗಳು ಸಕಲರ ಬಾಳಿನ ಶ್ರೇಯಸ್ಸಿಗೆ ಕಾರಣವಾಗಿವೆ. ಮಾತು ಮತ್ತು ಕೃತಿ ಒಂದಾಗಿ ಬಾಳಿದಾಗ ಯಶಸ್ಸು ಕಟ್ಟಿಟ್ಟ…

Read More

ಬೆಂಗಳೂರು:- ಬಾಂಬ್ ಬೆದರಿಕೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುತ್ತೇವೆ ಎಂದು ಡಿಸಿಎಂ ಶಿವಕುಮಾರ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ನಗರದ ವಿವಿಧ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಹಾಕಿರುವುದನ್ನು ನಿರ್ಲಕ್ಷಿಸದೆ ಗಂಭೀರವಾಗಿ ಪರಿಗಣಿಸುವಂತೆ ಪೊಲೀಸರಿಗೆ ಸೂಚಿಸಲಾಗಿದೆ ಎಂದರು. ಎಂಟತ್ತು ಕಡೆ ಹುಸಿ ಬಾಂಬ್ ಬೆದರಿಕೆ ಹಾಕಿ, ಒಂದು ಕಡೆ ಟಾರ್ಗೆಟ್ ಮಾಡುವ ಸಾಧ್ಯತೆ ಇರುವುದರಿಂದ ಇಂಥ ಬೆದರಿಕೆಯನ್ನು ನಿರ್ಲಕ್ಷಿಸಲಾಗುವುದಿಲ್ಲ ಎಂದರು. ನಾನು ಮನೆಯಲ್ಲಿ ಬೆಳಗ್ಗೆ ವ್ಯಾಯಾಮ ಮಾಡುತ್ತಿದ್ದಾಗ ಸುದ್ದಿ ತಿಳಿದು ಗಾಬರಿಯಾದೆ. ತಕ್ಷಣ ಪರಿಚಯಸ್ಥರು ಮತ್ತು ಇತರೆ ಶಾಲೆಗಳಿಗೆ ಬೆದರಿಕೆ ಬಂದಿರುವ ಬಗ್ಗೆ ಪೊಲೀಸರಿಂದ ಮಾಹಿತಿ ಪಡೆದಿದ್ದೇನೆ. ಇಮೇಲ್ ಮೂಲಕ ಮಾಹಿತಿ ಬಂದಿರುವುದು ಗೊತ್ತಾಗಿದೆ ಎಂದು ಹೇಳಿದರು. ಇದು ಮೇಲ್ನೋಟಕ್ಕೆ ಹುಸಿ ಬೆದರಿಕೆಯಾಗಿದ್ದರೂ ನಾವು ನಿರ್ಲಕ್ಷ್ಯ ಮಾಡಲು ಆಗುವುದಿಲ್ಲ. ಒಮ್ಮೆ ಗಂಭೀರ ಪ್ರಯತ್ನವನ್ನು ಮಾಡುತ್ತಾರೆ. ಪೆÇಲೀಸರು ಎಲ್ಲಾ ಪರಿಶೀಲನೆ ನಡೆಸಿದ್ದು, ಬೆದರಿಕೆ ಹಾಕಿದವರನ್ನು ಪತ್ತೆಹಚ್ಚುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ತಕ್ಷಣ ಎಲ್ಲಾ ಶಾಲೆಗಳಿಗೆ ಮುಂಜಾಗ್ರತಾ ಕ್ರಮವಾಗಿ ಪರಿಶೀಲನೆ ನಡೆಸುತ್ತಿದ್ದು, ಈವರೆಗೂ ಯಾವುದೇ ರೀತಿಯ…

Read More

ವಿಜಯಪುರ:- ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ತನ್ನ ಅನುಕೂಲಕ್ಕೆ ತಕ್ಕಂತೆ ಬಳಸಿಕೊಳ್ಳುತ್ತಿದೆ ಎಂದು ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಆರೋಪಿಸಿದರು. ಗುರುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸಿಬಿಐ, ಇಡಿ, ಐಟಿಗಳನ್ನು ತನ್ನ ಪಕ್ಷದ ಮೋರ್ಚಾಗಳಂತೆ ಮಾಡಿಕೊಂಡಿದೆ. ವಿರೋಧ ಪಕ್ಷಗಳನ್ನು ಹತ್ತಿಕ್ಕಲು, ವಿರೋಧಿ ನಾಯಕರಿಗೆ ಚಿತ್ರಹಿಂಸೆ ಕೊಡಲು ಅವುಗಳನ್ನು ಬಳಸುತ್ತಿದೆ. ಪಕ್ಷಗಳಲ್ಲಿ ಹೇಗೆ ಯುವ ಮೋರ್ಚಾ, ಮಹಿಳಾ ಮೋರ್ಚಾ ಇರುತ್ತದೆಯೋ ಅದೇ ರೀತಿ ಬಿಜೆಪಿ ಸಿಬಿಐ ಮೋರ್ಚಾ, ಇಡಿ ಮೋರ್ಚಾ ಅಂತ ಮಾಡಿಕೊಂಡು ಆಟ ಆಡುತ್ತಿದೆ ಎಂದು ವ್ಯಂಗ್ಯವಾಡಿದರು. ಬಿಜೆಪಿ ಆಳ್ವಿಕೆಯ ರಾಜ್ಯಗಳಲ್ಲಿ ಭ್ರಷ್ಟಾಚಾರ ಇಲ್ಲವೆ? ಎಲ್ಲರೂ ಅವರು ಸತ್ಯಹರಿಶ್ಚಂದ್ರರಿದ್ದಾರಾ? ಯಾಕೆ ಒಬ್ಬರ ಮೇಲೂ ದಾಳಿಯಾಗಿಲ್ಲ, ಬಂಧನವಾಗಿಲ್ಲ? ಎಲ್ಲವೂ ವಿರೋಧ ಪಕ್ಷಗಳ ಮೇಲೆ ಬಳಸಿಕೊಳ್ಳಲಾಗುತ್ತಿದೆ? ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಿಜೆಪಿ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ದೂರಿದರು. ಡಿಕೆಶಿ ಅವರ ಕಾಲ ಕೆಳಗೆ ಸಿಎಂ ಇದ್ದಾರೆ ಎನ್ನುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಟೀಕೆಗೆ ಪ್ರತಿಕ್ರಿಯಿಸಿದ ಅವರು, ಕಾನೂನಾತ್ಮಕವಾಗಿಯೇ ಡಿ.ಕೆ.ಶಿವಕುಮಾರ ಅವರ ಸಿಬಿಐ…

Read More

ಬೆಂಗಳೂರು:- ನಗರವನ್ನು ಮಾಲಿನ್ಯ ಮುಕ್ತವಾಗಿರಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಶುಕ್ರವಾರ ನೃಪತುಂಗ ರಸ್ತೆಯ ಯವನಿಕ ಸಭಾಂಗಣದಲ್ಲಿ ಸಾರಿಗೆ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾದ ವಾಯು ಮಾಲಿನ್ಯ ನಿಯಂತ್ರಣ ಮಾಸಾಚರಣೆ ಸಮಾರೋಪ ಸಮಾರಂಭ-2023 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ನಗರವನ್ನು ಮಾಲಿನ್ಯ ಮುಕ್ತವನ್ನಾಗಿ ಮಾಡಿ ಮುಂದಿನ ಯುವ ಪೀಳಿಗೆಗೆ ಉತ್ತಮ ವಾತವರಣ ನಿರ್ಮಿಸುವುದು ನಮ್ಮ ನಿಮ್ಮೆಲ್ಲರ ಕರ್ತವ್ಯ. ಬೆಂಗಳೂರಿನಲ್ಲಿ ಜಲ ಮಾಲಿನ್ಯ, ವಾಯುಮಾಲಿನ್ಯ ಹಾಗೂ ಶಬ್ದಮಾಲಿನ್ಯವೂ ಹೆಚ್ಚುತ್ತಿದೆ. ನಗರೀಕರಣ, ಹೆಚ್ಚುತ್ತಿರುವ ವಾಹನಗಳು, ಜನಸಂಖ್ಯೆಯಿಂದ ವಾಯುಮಾಲಿನ್ಯ ಉಂಟಾಗುತ್ತಿದೆ. ನಾವು ಆದಷ್ಟು ವಿದ್ಯುತ್ ಚಾಲಿತ ವಾಹನಗಳ ಬಳಕೆಯನ್ನು ಉತ್ತೇಜಿಸಬೇಕು ಎಂದು ಸಲಹೆ ನೀಡಿದರು. ಸಾರಿಗೆ ಇಲಾಖೆ ಕಾರ್ಯದರ್ಶಿ ಎನ್.ವಿ.ಪ್ರಸಾದ್, ರಸ್ತೆ ಸುರಕ್ಷತೆ ಕಾರ್ಯದರ್ಶಿ ಎ.ಎಂ.ಯೋಗೀಶ್, ಅಪರ ಸಾರಿಗೆ ಆಯುಕ್ತ ಬಿ.ಪಿ.ಉಮಾಶಂಕರ್, ಜೆ. ಜ್ಞಾನೇಂದ್ರ ಕುಮಾರ್, ಜೆ.ಪುರುಷೋತ್ತಮ್, ಸಿ.ಮಲ್ಲಿಕಾರ್ಜುನ್, ಜಂಟಿ ಸಾರಿಗೆ ಆಯುಕ್ತ ಎಂ.ಶೋಭ ಸೇರಿದಂತೆ ಉಪಸ್ಥಿತರಿದ್ದರು.

Read More

ಮಸ್ಕಿ:- ಗುಡದೂರು ಗ್ರಾಮ ಪಂಚಾಯತ್ ಅಲ್ಲಿ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಬರುವ sc st ವಿದ್ಯಾರ್ಥಿಗಳಿಗೆ 25% ಅನುದಾನದಲ್ಲಿ ಪುಸ್ತಕ ವಿತರಣೆ ಮಾಡಬೇಕು ಅಧಿಕಾರಿಗಳು ಅದರ ಪ್ರತಿಗಳು ಇಲ್ಲ ಸರಿ ಇದ್ದರು ನೀರಿನ ಕರ ಕಟ್ಟಿದ ರಶೀದಿ ಹಾಗೂ ಮನೆ ಕರ ಕಟ್ಟಿದ ರಶೀದಿ ಕಡ್ಡಾಯಗೋಳಿಸಿದ್ದು sc st ವಿದ್ಯಾರ್ಥಿಗಳಿಗೆ ತುಂಬಾ ಕಷ್ಟವಾಗಿದೆ ವಿದ್ಯಾರ್ಥಿಗಳ ಹತ್ತಿರ ಕರ ಕಟ್ಟಿದ ರಶೀದಿ ಇಲ್ಲದ ಕಾರಣ ವಿದ್ಯಾರ್ಥಿಗಳನ್ನು ಸುಮಾರು 1 ತಿಂಗಳಿಂದ ವಿದ್ಯಾರ್ಥಿಗಳಿಗೆ ಪ್ರತಿಗಳು ಸರಿಯಾಗಿ ಇಲ್ಲ ಅಂತ ಹೇಳಿ ಹೊಡಡಿಸಿದ್ದಾರೆ. ಗ್ರಾಮ ಅಭಿವೃದ್ಧಿ ಅಧಿಕಾರಿಗಳ ವರ್ಗ ವಿದ್ಯಾರ್ಥಿಗಳು ಪಂಚಾಯತ್ ಗೆ ಬಂದು ಕೇಳಿದರೆ.. ಅವರು ಕಡ್ಡಾಯವಾಗಿ ರಶೀದಿ ಕಟ್ಟಲೆ ಬೇಕು ಅಂತ ಹೇಳಿ ವಾಪಸ್ಸು ಕಳಿಸುತ್ತಿದ್ದರು… ವಿದ್ಯಾರ್ಥಿಗಳಿಂದ 500 ರೂ ಗಳನ್ನು ಇಸುಕೊಂಡು ಅವರಿಗೆ ರಶೀದಿ ಕೊಟ್ಟು… ವಿದ್ಯಾರ್ಥಿಗಳಿಗೆ 800 ರೂ ಗಳ ಚೆಕ್ ಅನ್ನು ಕೊಡುತ್ತಾರೆ… ಬರುವ 800 ಹಣದಲ್ಲಿ 500 ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಕೊಟ್ಟರೆ ಇನ್ನು 300 ರೂ ಉಳಿಯುತ್ತೆ…

Read More