Author: AIN Author

ಬಳ್ಳಾರಿ : ಲೈಂಗಿಕ ಕಿರುಕುಳದ ಆರೋಪದ ಹಿನ್ನೆಲೆ ವಿಮ್ಸ್ ನಿರ್ದೇಶಕ ಡಾ.ಗಂಗಾಧರ ಗೌಡ ಸೇರಿ ಮೂವರ ವಿರುದ್ಧ ದೂರು ದಾಖಲಾಗಿರುವುದು ತಡವಾಗಿ ಬೆಳಕಿಗೆ ಬಂದಿದೆ. ವಿಮ್ಸ್ ಆಸ್ಪತ್ರೆಯ ಟ್ರಾಮಾಕೇರ್‌ನಲ್ಲಿ ಸಿಸ್ಟಂ ಇನ್‌ಚಾರ್ಜ್ ಆಗಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರಿಗೆ ಮಾನಸಿಕ ಮತ್ತು ಲೈಂಗಿಕ ಕಿರುಕುಳ ನೀಡಿದ್ದಾರೆನ್ನುವ ಮಾಹಿತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. https://ainlivenews.com/case-of-sale-of-cow-children-the-woman-who-was-selling-vegetables-is-a-billionaire/ ನೇಮಕಾತಿ ಆದೇಶ ಪ್ರತಿ ನೀಡುವಂತೆ ನಿರ್ದೇಶಕರ ಕಚೇರಿಗೆ ಹೋಗಿದ್ದ ಮಹಿಳೆಗೆ ಪತ್ರ ನೀಡುವ ವೇಳೆ ಕೈ ಚಾಚಿ ಅಪ್ಪಿಕೊಳ್ಳಲು ಪ್ರಯತ್ನಿಸಿದ ವೇಳೆ ಹೊರಗಡೆ ಓಡಿ ಬಂದಿರುವುದಾಗಿ ಮಹಿಳೆ ದೂರಿನಲ್ಲಿ ದಾಖಲಿಸಿದ್ದಾರೆ. ಅಲ್ಲದೆ ಟ್ರಾಮಾಕೇರ್ ಸೂಪರಿಡೆಂಟ್ ಡಾ.ಶಿವುನಾಯ್ಕ, ಟ್ರಾಮಾ ಕೇರ್‌ನಲ್ಲಿ ಕೆಲಸಮಾಡುತ್ತಿರುವ ಮಹಿಳೆಯೊಬ್ಬರ ಮೇಲೂ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಬಳ್ಳಾರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ನ.27ರಂದು ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Read More

ಬೆಂಗಳೂರು: ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆಗಳಿರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಹಗುರದಿಂದ ಸಾಧಾರಣ ಮಳೆಯಾಗುವ (Rain In Karnataka) ಸಂಭವವಿದೆ ಎಂದು ಇಲಾಖೆ ತಿಳಿಸಿದೆ. https://ainlivenews.com/good-news-from-state-govt-for-applicants-for-new-ration-card/ ತಮಿಳುನಾಡಿನ ಕರಾವಳಿ ಭಾಗಕ್ಕೆ ವಾಯುಭಾರ ಕುಸಿತ ಬಂದು ತಲುಪಲಿದೆ. ಈ ಹಿನ್ನೆಲೆ ಮಳೆಯಾಗಲಿದ್ದು, ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಬೆಂಗಳೂರಿನಲ್ಲೂ ನಾಲ್ಕು ದಿನಗಳ ಕಾಲ ಮಳೆ ಇರಲಿದೆ. ಬೆಳ್ಳಂಬೆಳ್ಳಗ್ಗೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇದ್ದು ಮಳೆಯಾಗುವ ಸಾಧ್ಯತೆ ಇದೆ ತಮಿಳುನಾಡಿನ ಚೆನ್ನೈ ಮತ್ತು ಅದರ ನೆರೆಯ ಜಿಲ್ಲೆಗಳಲ್ಲಿ ಗುರುವಾರ ಭಾರೀ ಮಳೆಯಾಗಿದ್ದು, ಅನೇಕ ತಗ್ಗು ಪ್ರದೇಶಗಳಲ್ಲಿ ಜಲಾವೃತವಾಗಿದೆ ಮತ್ತು ಟ್ರಾಫಿಕ್ ಜಾಮ್ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಇಂದು ಕೂಡ ಮಳೆ ಮುಂದುವರೆಯಲಿದ್ದು, ತಿರುವಳ್ಳೂರು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ.

Read More

ವಿಜಯಪುರ: ನಾನು ಆಳಂದ ಶಾಸಕ ಬಿ. ಆರ್. ಪಾಟೀಲ ಜೊತೆ ಮಾತನಾಡಿಲ್ಲ. ನನಗೆ ಆ ವಿಷಯ ಗೊತ್ತೂ ಇಲ್ಲ. ನಾನು ಎರಡ್ಮೂರು ದಿನಗಳಿಂದ ಮತಕ್ಷೇತ್ರದಲ್ಲಿ ಇರಲಿಲ್ಲ. ತಿಳಿದುಕೊಂಡು ಹೇಳುತ್ತೇನೆ ಎಂದು ಶಾಸಕ ಬಿಆರ್ ಪಾಟೀಲ ಅವರ ಪತ್ರದ ಕುರಿತು ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕಾಂಗ ಪಕ್ಷದ ಸಭೆಯಲ್ಲಿ ಮತ್ತು ವಿಧಾನ ಸಭೆಯಲ್ಲಿ ಈ ವಿಷಯ ಪ್ರಸ್ತಾಪವಾಗಿತ್ತು. ನಾನು ಓರ್ವ ಹಿರಿಯ ಶಾಸಕರು ವ್ಯಕ್ತಪಡಿಸಿರುವ ಆತಂಕಗಳ ಹಿನ್ನೆಲೆಯಲ್ಲಿ ಬಹಳ ಜನ ಶಾಸಕರೂ ಸಹಮತ ವ್ಯಕ್ತಪಡಿಸಿದ್ದರು. https://ainlivenews.com/residents-own-property-in-bangalore-heres-the-good-news/  ಅಂದು ಬಿಆರ್ ಪಾಟೀಲ ಅವರು ಮಾತನಾಡಿರುವುದಕ್ಕೆ ನನ್ನ ಬೆಂಬಲ ಇದೆ ಎಂದರು. ಪ್ರತಿಯೊಂದಕ್ಕೂ ಮಾಧ್ಯಮಗಳ ಬಳಿ ಹೋಗುವುದು ಬೇಡ. ಅಂದು ಅವರು ಮಾತನಾಡಿದ್ದನ್ನು ನಾನು ಹೇಳಿದ್ದೇನೆ. ಅದನ್ನು ಬಿಟ್ಟು ಗೊತ್ತಿರದ ವಿಷಯದ ಕುರಿತು ನಾನು ಮಾತನಾಡುವುದಿಲ್ಲ ಎಂದು ಹೇಳಿದರು.

Read More

ಬೆಂಗಳೂರು: ಹೆಣ್ಣು ಭ್ರೂಣ ಹತ್ಯೆ ಅಕ್ಷಮ್ಯ, ಹೀನಾಯ ಕೆಲಸ ಎಂದು ಕೈಗಾರಿಕಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ ಪಾಟೀಲ್​ ಕಿಡಿಕಾರಿದ್ದಾರೆ. https://ainlivenews.com/good-news-from-state-govt-for-applicants-for-new-ration-card/ ಮೈಸೂರು ಹಾಗೂ ಮಂಡ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಹಾಗೂ ಮಕ್ಕಳ ಮಾರಾಟ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವರು, ಇದು ಅತ್ಯಂತ ಅಕ್ಷಮ್ಯ ಹಾಗೂ ಹೀನಾಯ ಕೆಲಸ. ಇದನ್ನು ವೈದ್ಯರು ಕೂಡಾ ಶಾಮೀಲಾಗಿ ಮಾಡುತ್ತಿರುವುದು ಅಪರಾಧ. ಯಾವುದೇ ಸರ್ಕಾರವಿದ್ದರೂ ಇಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಬೇಕು. ಇಂಥ ಕೆಲಸ ಮಾಡುವವರ ಮೇಲೆ ಕ್ರಮ ತೆಗೆದುಕೊಳ್ಳಬೇಕು. ಇದನ್ನು ತಡೆಗಟ್ಟಲು ಸರ್ಕಾರ ಬದ್ಧ. ಯಾರೇ ಹೆಣ್ಣು ಭ್ರೂಣ ಹತ್ಯೆ ಮಾಡಿದರೂ ಅವರಿಗೆ ಕಠಿಣ ಶಿಕ್ಷೆಯಾಗಬೇಕೆಂದು ಹೇಳಿದರು. 12ನೇ ಶತಮಾನದಲ್ಲೇ ಬಸವಣ್ಣ ಹಾಗೂ ಶರಣರು ಗಂಡು ಹೆಣ್ಣು ಭೇದಭಾವ ಅಳಿಸಿ ಹಾಕಿದ್ದರು. ಹೆಣ್ಣು ಲಕ್ಷ್ಮೀ ಇದ್ದಂಗೆ. ಗಂಡು ಮಕ್ಕಳಿಗಿಂತ ಹೆಣ್ಣುಮಕ್ಕಳೇ ಒಳ್ಳೆಯವರು. ತಂದೆ ತಾಯಂದಿರನ್ನು ಸಾಕುವವರು ಅವರೇ ಎಂದು ಹೇಳಿದರು. ವಿಜಯಪುರ ಜಿಲ್ಲೆಯಲ್ಲಿಯೂ ಇಂಥ ಕೆಲಸ ಮಾಡಲು ಬಿಡಲ್ಲ. ಜನರಲ್ಲೂ ಜಾಗೃತಿ ಮೂಡಬೇಕಿದೆ. ಇಂಥ…

Read More

ಹುಬ್ಬಳ್ಳಿ: ಬೆಳಗಾವಿಯಲ್ಲಿ ಡಿಸೆಂಬರ್ 4 ರಿಂದ 14 ವರೆಗೆ ನಡೆಯಲಿರುವ  ಚಳಿಗಾಲ ಅಧಿವೇಶನದಲ್ಲಿ  10 ಮಹತ್ವದ ಬಿಲ್ ಮಂಡನೆ ಮಾಡಲಾಗುವುದು ಎಂದು ಕಾನೂನು ಹಾಗೂ ಪ್ರವಾಸೋದ್ಯಮ ಸಚಿವ ಎಚ್ ಕೆ ಪಾಟೀಲ್ ಹೇಳಿದರು. ಶುಕ್ರವಾರ ನಗರದಲ್ಲಿ ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು,ಡಿಸೆಂಬರ್ 4 ರಂದು ನಮ್ಮ ಬಿಸಿನೆಸ್ ಅಡ್ವಸರಿ ಸಮಿತಿ ಸಭೆ ನಡೆಯಲಿದ್ದು 10 ಪ್ರಮುಖ ಬಿಲ್ ಗಳ ಮಂಡನೆ ಮಾಡಲಾಗುವ ಕುರಿತು ಸಲಹೆ ಸೂಚನೆಗಳನ್ನು ಪಡೆಯಲಾಗುವುದು ಜೊತೆಗೆಆ ಸಭೆಯಲ್ಲಿ ಯಾವ ಬಿಲ್ ಮಂಡನೆ ಆಗಬೇಕು ಎಂಬ ಸುದೀರ್ಘವಾದ ಚರ್ಚೆ ನಡೆಸುತ್ತೇವೆ ಅಧಿವೇಶನದಲ್ಲಿ ಬರಗಾಲ ಕುರಿತು ಹೆಚ್ಚು ಚರ್ಚೆ ಆಗಲಿದ್ದು ಪ್ರಮುಖ ಸಮಸ್ಯೆ, ಅಭಿವೃದ್ಧಿ ವಿಚಾರಗಳು ಸಹ ಚರ್ಚೆ ನಡೆಸಲಾಗುವುದು. ಉತ್ತರ ಕರ್ನಾಟಕ ಭಾಗದಲ್ಲಿ ಅನೇಕ ಸಮಸ್ಯೆಗಳು ಬಗ್ಗೆ ಚರ್ಚೆಗೆ ಹೆಚ್ಚು ಮಹತ್ವ ಕೊಡಲಾಗಿದೆ ಎಂದರು. ಐದು ರಾಜ್ಯ ರಾಜ್ಯಗಳ ಚುನಾವಣೋತ್ತರ ಸಮೀಕ್ಷೆ ಕುರಿತು ಪ್ರತಿಕ್ರಿಯೆ ನೀಡಿದ ಅವರು ದೇಶದ ಐದು ರಾಜ್ಯಗಳಲ್ಲಿ ನಡೆದ ಮತದಾನ ನಂತರಈಗಾಗಲೇ ಮತದಾನೋತ್ತರ ಫಲಿತಾಂಶ ಬಂದಿದೆ.…

Read More

ಹಾಸನ: ದೇವೇಗೌಡ್ರು ಬಾಲಕೃಷ್ಣನ ಮಾತು ಕೇಳಿ ರಾಜಕೀಯ ಮಾಡಬೇಕಾಗಿಲ್ಲ. ಅವರ ಬಗ್ಗೆ ಮಾತಾಡಬೇಕಾದರೆ ಕೂತು ಮಲಗಿ ಯೋಚನೆ ಮಾಡಿ ಮಾತಾಡ್ಬೇಕು ಎಂದು ಹೇಳುವ ಮೂಲಕ ಮಾಗಡಿ ಶಾಸಕ ಬಾಲಕೃಷ್ಣ ಅವರ ವಿರುದ್ಧ ಶ್ರವಣಬೆಳಗೊಳ ಶಾಸಕ ಸಿಎನ್ ಬಾಲಕೃಷ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿದ ಅವರು, ಮಾಗಡಿ ಬಾಲಕೃಷ್ಣ ಯಾರ ಯಾರ ಆಶ್ರಯದಲ್ಲಿ ಬೆಳೆದಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ಮಾತಿಗೆ ಮಿತಿಯನ್ನು ಹಾಕದೆ ಮಾತನಾಡಿದ್ದಾರೆ. ಆಯಾ ಕಾಲಘಟ್ಟದಲ್ಲಿ ರಾಜಕೀಯದಲ್ಲಿ ಬದಲಾವಣೆಗಳು ಆಗುವುದು ಸಹಜ. ಮಾತನಾಡಬೇಕಾದರೆ ಆಚಾರ ವಿಚಾರಗಳನ್ನು ನೋಡಿಕೊಂಡು ಮಾತನಾಡಬೇಕು ಎಂದರು. https://ainlivenews.com/residents-own-property-in-bangalore-heres-the-good-news/ ದೇವೇಗೌಡರು ರಾಷ್ಟ್ರ ಮಟ್ಟದ ನಾಯಕರು, ಅವರು ರಾಜಕೀಯದಲ್ಲಿ ಆಗಲಿ ವೈಯಕ್ತಿಕ ಜೀವನದಲ್ಲಾಗಲಿ ಒಂದೇ ಒಂದು ಕಪ್ಪು ಚುಕ್ಕಿ ಇಲ್ಲದೆ ಇರುವ ಏಕೈಕ ರಾಜಕಾರಣಿ ದೇಶದ ಆಡಳಿತವನ್ನು ನಡೆಸಿದ್ದಾರೆ ಎಂದರೆ ಅದು ದೇವೇಗೌಡ್ರು ಎಂದು ಹೊಗಳಿದರು.

Read More

ತುಮಕೂರು:  ಡಿವೈಡರ್’ಗೆ ಲಾರಿ ಡಿಕ್ಕಿಯಾಗಿ ಮತ್ತೊಂದು ಲಾರಿಗೆ ಡಿಕ್ಕಿಯಾಗಿ ಲಾರಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ  ಶಿರಾ ತಾಲೂಕಿನ ಜೋಗಿಹಳ್ಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದಿದೆ. https://ainlivenews.com/good-news-from-state-govt-for-applicants-for-new-ration-card/ ಟೈಯರ್ ಗಳನ್ನ ತುಂಬಿಕೊಂಡು ಹೋಗ್ತಿದ್ದ ಲಾರಿ ನಿಯಂತ್ರಣ ತಪ್ಪಿ ಡಿವೈಡರ್ ಡಿಕ್ಕಿ ಹೊಡೆದಿದ್ದು ಬಳಿಕ ಮತ್ತೊಂದು ಲಾರಿಗೆ ಡಿಕ್ಕಿಯಾಗಿ ಅಪಘಾತ ಹೊಂದಿದೆ. ತುಮಕೂರು ಕಡೆಯಿಂದ ಶಿರಾದ ಕಡೆ ಹೋಗ್ತಿದ್ದ ಲಾರಿ ಹಾಗೆ ಶಿರಾ ಕಡೆಯಿಂದ ತುಮಕೂರು ಕಡೆಗೆ ಬರುತ್ತಿದ್ದ ಮತ್ತೊಂದು ಲಾರಿ ಎರಡು ಒಂದಕ್ಕೊಂದು ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ಭಯಂಕರ ಆಕ್ಸಿಡೆಂಟ್ ಆಗಿ ಟೈಯರ್ ತುಂಬಿಕೊಂಡು ಹೋಗ್ತಿದ್ದ ಲಾರಿ ಚಾಲಕ ಸಾವನ್ನಪ್ಪಿದ್ದಾನೆ. ಅದೃಷ್ಟಾವಶಾತ್ ಇನ್ನೊಂದು ಲಾರಿ ಚಾಲಕನಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾನೆ. ಘಟನೆ ಸಂಬಂಧ ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪರಿಶೀಲನೆ ನಡೆಯುತ್ತಿದೆ.

Read More

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ 15ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ಬಸವೇಶ್ವರ ನಗರದ ಖಾಸಗಿ ಶಾಲೆಗಳಿಗೆ ಹಾಗೂ ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಶಾಲೆಗೂ ಕಿಡಿಗೇಡಿಗಳು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ್ದಾರೆ. ಬಸವೇಶ್ವರ ನಗರದ ನ್ಯಾಪಲ್, ವಿದ್ಯಾಶಿಲ್ಪ ಸೇರಿದಂತೆ 7 ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದ್ದು, ಬೆದರಿಕೆ ಕರೆ ಹಿನ್ನೆಲೆಯಲ್ಲಿ ಮಕ್ಕಳನ್ನು ಶಾಲೆಯಿಂದ ಕಳುಹಿಸುತ್ತಿರುವ ಪೊಲೀಸರು, ಪೋಷಕರೆಲ್ಲರೂ ಆತಂಕಪಡುವ ಸ್ಥಿತಿ ಏನೂ ಆಗಿಲ್ಲವೆಂದು ತಿಳಿಸಿದ್ದಾರೆ. ಸ್ಥಳಕ್ಕೆ ಪೊಲೀಸರ ಹಾಗು ಬಾಂಬ್ ನಿಷ್ಕ್ರೀಯತಂಡ ದೌಡಾಯಿಸಿದ್ದು ಪರಿಶೀಲನೆ ನಡೆಸಲು ಮುಂದಾಗಿದೆ. ಕಳೆದ 1 ವರ್ಷದಿಂದ ನಿರಂತರವಾಗಿ ಬೆದರಿಕೆ ಹಾಕುತ್ತಿದ್ದಾರೆ ಎಂದು ತಿಳಿದುಬಂದಿದೆ. ಆದರೂ ಸಹ ಈವರೆಗೂ ಬಾಂಬ್ ಬೆದರಿಕೆ ಹಾಕಿರುವ ಆರೋಪಿಯ ಬಂಧನವಾಗಿಲ್ಲ. ಕಳೆದ ವರ್ಷ ಒಂದೇ ದಿನ 30 ಶಾಲೆಗಳಿಗೆ ಇ-ಮೇಲ್ ಬೆದರಿಕೆ ಹಾಕಲಾಗಿತ್ತು.

Read More

ಚಾಮರಾಜನಗರ: ಹುಡುಗರಿಗೆ ಹುಡುಗಿಯರೆ ಸಿಗದ ಈ ಕಾಲದಲ್ಲಿ ವಿದ್ಯಾವಂತೆ ಹಾಗೂ ಸ್ಪುರದ್ರೂಪಿ ಹುಡುಗಿಯನ್ನು ಗ್ರಾಂಡಾಗಿ ಮದುವೆ ಮಾಡಿಕೊಟ್ರೆ  ಇಲ್ಲೊಬ್ಬ ಹಣಬಾಕ,  ತನ್ನ ಪತ್ನಿಗೆ ಕೊಡಬಾರದ ಚಿತ್ರ ಹಿಂಸೆ ನೀಡಿ ಸಾವಿನ ಮನೆಗೆ ದೂಕಿರುವ ಘಟನೆ ನಡೆದಿದೆ ಅದು ಎಲ್ಲಿ ಅಂತೀರಾ ನೋಡಿ ಈ ಸ್ಟೋರಿನಾ… ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಬೇಗೂರು ಗ್ರಾಮದ 26 ವರ್ಷದ ಸ್ವಾತಿ ಗಂಡನ ಹಣ ದಾಹಕ್ಕೆ ಬಲಿಯಾದ ಸುಂದರ ಯುವತಿಯಾಗಿದ್ದಾಳೆ. ಸ್ವಾತಿ ಎಂ.ಎಸ್ಸಿತಿ ಓದಿದ್ದ ವಿದ್ಯಾವಂತೆ ಸ್ಪುರದ್ರೂಪಿಯಾಗಿದ್ದ  ಆಕೆ ನೂರಾರು ಕನಸು ಹೊತ್ತಿದ್ಲು. ಸರಳ ಹಾಗೂ ಮಿತಬಾಷಿ ಹಾಗೂ ಉತ್ತಮ ಗುಣಗಳುಳ್ಳ ಹುಡುಗಿಯಾಗಿದ್ಲು.  ಮದುವೆಗೆ ಮುಂಚೆ ಚಾಮರಾಜನಗರ ತಾಲೂಕಿನ ಹರವೆ ಗ್ರಾಮದ ಖಾಸಗಿ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡ್ತಾ ಇದ್ಲು. ಕಳೆದ 7 ತಿಂಗಳ ಹಿಂದೆ ಹಂಗಳ ಗ್ರಾಮದ ವಿನಯ್ ಎಂಬಾತ ತಾನು ಇಂಜಿನಿಯರ್ ತಿಂಗಳಿಗೆ ಲಕ್ಷ ಸಂಬಳ ಬರುತ್ತೆ ಎಂದು ಸ್ಚಾತಿ ಮನೆಯವರಿಗೆ ನಂಬಿಸಿದ್ದ . ಆದರೆ ನಿಶ್ಚಿತಾರ್ಥ ಮಾಡುವಾಗ  ಆತ ಬಿ.ಕಾಂ.…

Read More

ಕಲಬುರಗಿ: ಹಣ ಕೊಡಲಿಲ್ಲ ಅಂತ ಹೆತ್ತ ತಾಯಿಯನ್ನೇ ಕೊಲೆಗೈದು ಪರಾರಿಯಾಗಿದ್ದ ಆರೋಪಿಯನ್ನ ಬಂಧಿಸುವಲ್ಲಿ ಕಲಬುರಗಿ ಪೋಲೀಸರು ಸಕ್ಸಸ್ ಆಗಿದ್ದಾರೆ. https://ainlivenews.com/good-news-from-state-govt-for-applicants-for-new-ration-card/ ಪಾಪಿ ಪುತ್ರ ಬಸವರಾಜ್ ಆರೋಪಿಯಾಗಿದ್ದು ತನ್ನ ತಾಯಿ ರತ್ನಾಬಾಯಿಯನ್ನ ಕೊಲೆ ಮಾಡಿದ ಆರೋಪದ ಮೇಲೆ ರಾಘವೇಂದ್ರ ನಗರ ಪೋಲೀಸರು ಅರೆಸ್ಟ್ ಮಾಡಿದ್ದಾರೆ. ದೇವರ ಹೆಸರಲ್ಲಿ ಭವಿಷ್ಯ ಹೇಳ್ತಾ ಜೀವನ ಮಾಡ್ತಿದ್ದ ರತ್ನಾಬಾಯಿ ಕೆಲ ದಿನಗಳ ಹಿಂದಷ್ಟೇ ಕೊಲೆಯಾಗಿದ್ಲು. ಪ್ರಕರಣದ ಬೆನ್ನತ್ತಿದ ಪೋಲೀಸ್ರು ವೃದ್ಧೆಯ ಮಗ ಹಾಗು ಕೊಲೆಗೆ ಸಹಕಾರ ನೀಡಿದ ಶರ್ಫುದ್ದೀನ್ ಹೀಗೆ ಇಬ್ಬರನ್ನ ಬಂಧಿಸಿದ್ದಾರೆ…

Read More