Author: AIN Author

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ  ಸಾಗರ ತಾಲ್ಲೂಕು ಹಳ್ಳಿಯೊಂದರಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ನಡೆದಿದೆ ಎನ್ನಲಾದ ಅಶ್ಲೀಲ ನೃತ್ಯದ ವಿಡಿಯೋ ಇದೀಗ ಎಲ್ಲೆಡೆ ಹರಿದಾಡುತ್ತಿದೆ.  ಮುಖ್ಯವಾಗಿ ಸಭ್ಯ ಕಾರ್ಯಕ್ರಮವಾಗಬೇಕಿದ್ದ ಕನ್ನಡ ರಾಜ್ಯೋತ್ಸವದಲ್ಲಿ ಅರೆಬರೆ ಬಟ್ಟೆ ತೊಟ್ಟ ಯುವತಿಯನ್ನು ಕುಣಿಸಿದ್ದು ವಿರೋಧಕ್ಕೆ ಕಾರಣವಾಗಿದೆ. ಇದಕ್ಕಿಂತ ಹೆಚ್ಚಾಗಿ ಒಬ್ಬ ಅಪ್ರಾಪ್ತ ಬಾಲಕನನ್ನ ಬಳಸಿಕೊಂಡು ಅಶ್ಲೀಲ ಭಂಗಿಗಳಲ್ಲಿ ಯುವತಿ ಕುಣಿದಿದ್ದಾಳೆ. ಇದು ಆಕ್ರೋಶಕ್ಕೆ ಗುರಿಯಾಗಿದೆ. ಎರಡುವರ ನಿಮಿಷದ ಮೊಬೈಲ್ ದೃಶ್ಯಾವಳಿಯಲ್ಲಿ ಯುವತಿಯು ಬಾಲಕನನ್ನ ಒಬ್ಬ ಪುರುಷನ ರೀತಿಯಲ್ಲಿ ಬಳಸಿಕೊಂಡು ಆತನ ಜೊತೆಗೆ ಸೆಕ್ಸ್​​ ಓರಿಯೆಂಟೆಡ್​ ಸ್ಟೆಪ್​ಗಳನ್ನು ಹಾಕುತ್ತಿದ್ದಾಳೆ. ಇನ್ನೂ ದೃಶ್ಯದ ಹಿಂದೆ ಕಾಣುವ ಬ್ಯಾನರ್​ ನಲ್ಲಿ ಶಿವಮೊಗ್ಗ ಜಿಲ್ಲೆ ಎಂದು ಸ್ಪಷ್ಟವಾಗಿ ಬರೆಯಲಾಗಿದೆ. ಭದ್ರಾವತಿ ಮೂಲದ ಆಕ್ರೆಸ್ಟ್ರಾ ಎಂಬ ಬರಹ ಕೂಡ ಕಾಣುತ್ತಿದೆ. https://ainlivenews.com/residents-own-property-in-bangalore-heres-the-good-news/ ಮೂಲಗಳ ಪ್ರಕಾರ, ಕನ್ನಡ ಸಂಘಟನೆಯೊಂದರ ಕಾರ್ಯಕ್ರಮ ಇದಾಗಿತ್ತು ಎನ್ನಲಾಗಿದ್ದು ಸದ್ಯ ವಿಡಿಯೋ ವೈರಲ್ ಆಗುತ್ತಿದ್ದು, ಬಾಲಕನೊಬ್ಬನನ್ನ ಅಸಭ್ಯ ರೀತಿಯಲ್ಲಿ ಕುಣಿಸುತ್ತಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ ಪೊಲೀಸ್​ ಇಲಾಖೆಗೆ ಮಾಹಿತಿ…

Read More

ಬೆಂಗಳೂರು: ನಗರದ CAR ಮೈದಾನದಲ್ಲಿ ಮಾಸಿಕ ಪೊಲೀಸ್ ಕವಾಯತು ನಡೆದಿದ್ದು  ಇದೇ ಮೊದಲ ಬಾರಿಗೆ ಲಾಠಿ ಡ್ರಿಲ್ ಪ್ರಾತ್ಯಕ್ಷಿಕತೆ ನಡೆದಿದೆ. ಬೆಂಗಳೂರು ನಗರ ಪೊಲೀಸರಿಂದ ಲಾಠಿ ಡ್ರಿಲ್  ನಡೆದಿದ್ದು ಸಿವಿಲ್, ಮಹಿಳಾ, CAR, ಟ್ರಾಫಿಕ್,   ವಿಭಾಗದ ಸಿಬ್ಬಂದಿಯಿಂದ ಲಾಠಿ ಡ್ರಿಲ್ 330 ಸಿಬ್ಬಂದಿಯಿಂದ ಲಾಠಿ ಡ್ರಿಲ್ ಪ್ರಾತ್ಯಕ್ಷಿಕತೆ  ನಡೆದಿದ್ದು ಕವಾಯತು ಕಾರ್ಯಕ್ರಮದಲ್ಲಿ ಪೊಲೀಸ್ ಕಮಿಷನರ್ ಬಿ.ದಯಾನಂದ್ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು.

Read More

ಬೆಂಗಳೂರು/ ಬೀದರ್ : ನಾಳೆ  ಬೀದರ್  ಜಿಲ್ಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡುತ್ತಿದ್ದಾರೆ ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯ ಅಧಿಕಾರಿ ಕೆ.ಚಿರಂಜೀವಿ ಮಾಹಿತಿ ನೀಡಿದ್ದಾರೆ. ಬೆಳಗ್ಗೆ 11ಕ್ಕೆ ಬೆಂಗಳೂರಿನಿಂದ ಹೊರಟು ಮಧ್ಯಾಹ್ನ 12.15ಕ್ಕೆ ಬೀದರ್‌ ವಿಮಾನ ನಿಲ್ದಾಣಕ್ಕೆ ಬಂದಿಳಿಯುವ ಸಿಎಂ ಸಿದ್ದರಾಮಯ್ಯ ಮಧ್ಯಾಹ್ನ 12.20ಕ್ಕೆ ಬೀದರ್’ನಿಂದ  ಹೆಲಿಕ್ಯಾಪ್ಟರ್‌ ಮೂಲಕ ಭಾಲ್ಕಿಗೆ ತೆರಳುವರು ನಂತರ ಭಾಲ್ಕಿ ಪಟ್ಟಣದ ಬಿಕೆಐಟಿ ಕಾಲೇಜಿನಲ್ಲಿ ನಡೆಯಲಿರುವ ಮಾಜಿ ಸಚಿವ ಭೀಮಣ್ಣ ಖಂಡ್ರೆ ಜನ್ಮ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಲೋಕನಾಯಕ ಅಭಿನಂದನ ಗ್ರಂಥ ಬಿಡುಗಡೆಗೊಳಿಸುವರು. ಸಂಜೆ 4ಕ್ಕೆ ಭಾಲ್ಕಿಯಿಂದ ಬೀದರ್‌ಗೆ ಬಂದು, ಅಲ್ಲಿಂದ ವಿಶೇಷ ವಿಮಾನದ ಮ‌ೂಲಕ ಬೆಂಗಳೂರಿಗೆ ವಾಪಸ್  ಪ್ರಯಾಣ ಬೆಳಸಲಿದ್ದಾರೆ.

Read More

ಮಂಗಳೂರು : ಹಿಂದು ಯುವತಿಯ ಜೊತೆಗೆ ಮುಸ್ಲಿಂ ಯುವಕನೊಬ್ಬ ಸುತ್ತಾಡುವುದನ್ನು ಗಮನಿಸಿದ ಬಜರಂಗದಳ ಕಾರ್ಯಕರ್ತರು ಬೈಕಿನಲ್ಲಿ ಬೆನ್ನಟ್ಟಿ ಹಲ್ಲೆಗೆ ಯತ್ನಿಸಿದ ಘಟನೆ ನಗರದ ಮೋರ್ಗನ್ಸ್ ಗೇಟ್ ಬಳಿಯ ಮಂಕಿ ಸ್ಟಾಂಡ್ ನಲ್ಲಿ ನಡೆದಿದೆ.‌  ಹಿಂದು ಯುವತಿಯ ಜೊತೆಗೆ ಮುಸ್ಲಿಂ ಯುವಕನೊಬ್ಬ ಸುತ್ತಾಡುವುದನ್ನು ಗಮನಿಸಿದ ಬಜರಂಗದಳ ಕಾರ್ಯಕರ್ತರು ಬೈಕಿನಲ್ಲಿ ಬೆನ್ನಟ್ಟಿ ಹಲ್ಲೆಗೆ ಯತ್ನಿಸಿದ ಘಟನೆ ನಗರದ ಮೋರ್ಗನ್ಸ್ ಗೇಟ್ ಬಳಿಯ ಮಂಕಿ ಸ್ಟಾಂಡ್ ನಲ್ಲಿ ನಡೆದಿದೆ.‌ https://ainlivenews.com/residents-own-property-in-bangalore-heres-the-good-news/ ಮಂಕಿ ಸ್ಟಾಂಡ್ ನಲ್ಲಿ ಮಳಿಗೆ ಒಂದರಲ್ಲಿ ಕೆಲಸಕ್ಕಿದ್ದ ಅನ್ಯಕೋಮಿನ ಯುವಕ ಹಾಗೂ ಚಿಕ್ಕಮಗಳೂರಿನ‌ ಯುವತಿ ಜೊತೆಯಾಗಿ ಸುತ್ತಾಡುತ್ತಿದ್ದರು.‌ ಸ್ಕೂಟರ್ ನಲ್ಲಿ ಜೋಡಿಯ ಸುತ್ತಾಟ ಗಮನಿಸಿ ಬಜರಂಗದಳ ಕಾರ್ಯಕರ್ತರು ಬೈಕ್ ನಲ್ಲಿ ಬೆನ್ನಟ್ಟಿದ್ದಾರೆ.‌ ಬಳಿಕ ಸ್ಕೂಟರ್ ಗೆ ಅಡ್ಡ ಹಾಕಿ ಜೋಡಿಯನ್ನು ಸ್ಥಳದಲ್ಲಿ ಎರಡು ಕೋಮಿನ‌ ಯುವಕರು ಜಮಾಯಿಸಿದ್ದು ತಂಡಗಳ ನಡುವೆ ಮಾತಿನ ಚಕಮಕಿಯಾಗಿದೆ. ಪರಿಸ್ಥಿತಿ ವಿಕೋಪಕ್ಕೆ ತೆರಳುತಿದ್ದಂತೆ ಮಧ್ಯ ಪ್ರವೇಶಿಸಿದ ಪಾಂಡೇಶ್ವರ ಠಾಣೆ ಪೊಲೀಸರು ಗುಂಪನ್ನು ಚದುರಿಸಿದ್ದಾರೆ. ಅನ್ಯಕೋಮಿನ ಜೋಡಿಯನ್ನು ವಶಕ್ಕೆ ಪಡೆದು ತನಿಖೆ‌…

Read More

ಮುಂಬೈ: ಅಗ್ನಿವೀರ್ (Agniveer) ತರಬೇತಿ ಪಡೆಯುತ್ತಿದ್ದ 20 ವರ್ಷದ ಯುವತಿ (Woman) ಮುಂಬೈನ ಹಾಸ್ಟೆಲ್ ಕೊಠಡಿಯಲ್ಲಿ ಆತ್ಮಹತ್ಯೆ (Suicide) ಮಾಡಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಯುವತಿ ಕೇರಳದ ನಿವಾಸಿಯಾಗಿದ್ದು ನೌಕಾಪಡೆ ತರಬೇತಿ ಪಡೆಯಲು 2 ವಾರಗಳ ಹಿಂದೆ ಮುಂಬೈಗೆ ಬಂದಿದ್ದಳು. ಬೆಳಗ್ಗೆ ಯುವತಿ ಹಾಗೂ ಆಕೆಯ ಗೆಳೆಯ ಜಗಳವಾಡಿಕೊಂಡಿದ್ದು, ಬಳಿಕ ಆತ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾನೆ. ಇದಾದ ಕೆಲವೇ ಹೊತ್ತಿನಲ್ಲಿ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. https://ainlivenews.com/residents-own-property-in-bangalore-heres-the-good-news/ ಯುವತಿಯ ಶವ ಮಲಾಡ್ ವೆಸ್ಟ್‌ನ ಐಎನ್‌ಎಸ್ ಹಮ್ಲಾ ಬೇಸ್‌ನಲ್ಲಿರುವ ಆಕೆಯ ಕೋಠಡಿಯಲ್ಲಿ ಪತ್ತೆಯಾಗಿದೆ. ಈ ಬಗ್ಗೆ ವೈದ್ಯರಿಗೆ ಮಾಹಿತಿ ನೀಡಿದ ಬಳಿಕ ಆಕೆ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಮಾಳವಾನಿ ಪೊಲೀಸರು ಇದನ್ನು ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಅಗ್ನಿಪಥ ಯೋಜನೆಯಡಿ ‘ಅಗ್ನಿವೀರ್’ ಸೈನಿಕರು 4 ವರ್ಷಗಳ ಕಾಲ ಸೇವೆ ಸಲ್ಲಿಸುತ್ತಾರೆ. ಇದರಲ್ಲಿ 6 ತಿಂಗಳ ತರಬೇತಿ ಮತ್ತು ಮೂರುವರೆ ವರ್ಷಗಳ ಕಾಲ ಕರ್ತವ್ಯದಲ್ಲಿರಬೇಕು. ಇದರ ಬಳಿಕ…

Read More

ಹೆಚ್​ಐವಿ ಅಥವಾ ಏಡ್ಸ್​ ವಿರುದ್ಧದ ಹೋರಾಟದಲ್ಲಿ ವಿಶ್ವವು ಸಾಧಿಸಿದ ಪ್ರಗತಿಯನ್ನು ಬಿಂಬಿಸಲು ಈ ದಿನವನ್ನು ವಿಶ್ವ ಏಡ್ಸ್ ದಿನ ಎಂದು ಆಚರಣೆ ಮಾಡಲಾಗುತ್ತದೆ. ಹೌದು, ಏಡ್ಸ್​ಯೆಂದರೆ ಸಾಕು ಎಲ್ಲಾರಿಗೂ ಭಯವಿತ್ತು ಅದೊಂದು ಗಂಭೀರ ಮತ್ತು ಗುಣಪಡಿಲಾಗದ ಕಾಯಿಲೆಯೆಂದು ಆತಂತದಲ್ಲಿ ಜನರು ಇದ್ದರೂ ಅಂದ್ರೆ ದಿನಕಳೆದಂತೆ ಅದರ ಬಗ್ಗೆ ಅರಿವು ಮತ್ತು ಜಾಗೃತಿಯನ್ನು ಜನರಿಗೆ ಮೂಡಿಸಿ ತಪ್ಪು ಕಲ್ಪನೆಯನ್ನ ಹೋಗಲಾಡಿಸಿದೆ. ಏಡ್ಸ್​ ಹೇಗೆ ಹರಡುತ್ತದೆ..? ಹ್ಯೂಮನ್ ಇಮ್ಯೂನೊ ಡಿಫಿಷಿಯೆನ್ಸಿ ವೈರಸ್ (H.I.V) ನಿಂದ ಉಂಟಾಗುವ ಈ ರೋಗವು ಸೋಂಕಿತ ವ್ಯಕ್ತಿಯ ಜೀವಕ್ಕೆ ಮಾರಕವಾಗಿ ಪರಿಣಾಮಿಸಬಹುದು. ಈ ಕಾಯಿಲೆ ಪ್ರತಿರಕ್ಷಣಾ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತದೆ ಮತ್ತು ಈ ಕಾರಣದಿಂದ ಈ ವೈರಸ್ ದೇಹದಲ್ಲಿ ವೇಗವಾಗಿ ಹರಡಲು ಪ್ರಾರಂಭಿಸುತ್ತದೆ. ಆರಂಭಿಕ ಹಂತದಲ್ಲಿ ಚಿಕಿತ್ಸೆ ನೀಡದಿದ್ದರೆ, ಈ ಕಾಯಿಲೆ ಮಾರಣಾಂತಿಕವಾಗಿ ಪರಿಣಮಿಸುತ್ತದೆ. ಅಸುರಕ್ಷಿತ ಲೈಂಗಿಕತೆ, ಸೋಂಕಿತ ರಕ್ತದ ವರ್ಗಾವಣೆಯ ಮೂಲಕ ಅಥವಾ ಸೋಂಕಿತ ವ್ಯಕ್ತಿಯ ಚುಚ್ಚು ಮದ್ದಿನ ಹಂಚಿಕೆಯ ಮೂಲಕ ಈ ಸೋಂಕು ಒಬ್ಬ ವ್ಯಕ್ತಿಯಿಂದ  ಇನ್ನೊಬ್ಬ ವ್ಯಕ್ತಿಗೆ…

Read More

ಮೈಸೂರು ಸಮೀಪದ ಚಿಕ್ಕಕಾನ್ಯ ಬಳಿ ಹುಲಿ(tiger) ಪ್ರತ್ಯಕ್ಷಗೊಂಡಿದ್ದು ಟಿವಿಎಸ್ ಪ್ಯಾಕ್ಟರಿ ಬಳಿ ಹುಲಿ ತಿರುಗಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಗ್ರಾಮದಲ್ಲಿನ ಜನರು ಭಯಭೀತರಾಗಿದ್ದಾರೆ. ಸ್ಥಳಕ್ಕೆ ಶಾಸಕ  ಜಿ.ಟಿ.ದೇವೇಗೌಡ ಭೇಟಿ ಪರಿಶೀಲನೆ ನಡೆಸಿದ್ದು ಅರಣ್ಯ ಇಲಾಖೆ ಅಧಿಕಾರಿಗಳ ಬಳಿ ಮಾಹಿತಿ ಪಡೆದ ಶಾಸಕರು ಹುಲಿ ಸೆರೆಹಿಡಿಯುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಶಾಸಕ ಜಿ.ಟಿ.ಡಿ ಸೂಚನೆ. ಜಯಪುರ ಹೋಬಳಿ ಸಿಂಧುವಳ್ಳಿ, ಬ್ಯಾತಹಳ್ಳಿ, ಚಿಕ್ಕಕಾನ್ಯ, ದೊಡ್ಡಕಾನ್ಯ ಗ್ರಾಮಗಳಲ್ಲಿ ಕಾಣಿಸಿಕೊಂಡ ಹುಲಿ. ಗ್ರಾಮಸ್ಥರು ರಾತ್ರಿ ವೇಳೆಯಲ್ಲಿ ಅನಾವಶ್ಯಕವಾಗಿ ಓಡಾಡದಂತೆ ಮನವಿ ಕೂಡ ಮಾಡಲಾಗಿದೆ. ಗ್ರಾಮಸ್ಥರು ಅನಾವಶ್ಯಕ ವದ್ದಂತಿಗಳಿಗೆ ಭಯಭೀತರಾಗಬಾರದು. ಹುಲಿ ಕಾರ್ಯಚರಣೆ ಮುಗಿಯುವವರೆಗೆ ಜನರು ಸಹಕರಿಸಬೇಕು. ಟಿ.ವಿ.ಎಸ್. ಕಂಪನಿಯ ನೌಕರರು ರಾತ್ರಿಪಾಳಿ ಮುಗಿಸಿ ಹೋಗುವಾಗ ಎಚ್ಚರಿಕೆಯಿಂದಿರಿ. ಹಾಗೆ ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಶಾಸಕ ಜಿಟಿ ದೇವೇಗೌಡ ಮನವಿ. ಈ ವೇಳೆ ಎ.ಸಿ.ಎಫ್. ಲಕ್ಷ್ಮಿಕಾಂತ್, ಆರ್.ಎಫ್.ಒ.ಸುರೇಂದ್ರ, ಸ್ಥಳೀಯ ಮುಖಂಡರಾದ ಗೆಜ್ಜಗಳ್ಳಿ ಲೋಕೇಶ್, ಕೃಷ್ಣ ಸಿಂಧುವಳ್ಳಿ, ಚಿಕ್ಕಕಾನ್ಯ ಮಹದೇವಸ್ವಾಮಿ, ಹಾರೋಹಳ್ಳಿ ಸುರೇಶ್ ಸೇರಿದಂತೆ ಮತ್ತಿತರರು ಹಾಜರು.

Read More

ರಾಜ್ಯದಾದ್ಯಂತ ಬಿಡುಗಡೆಗೊಂಡಿದ್ದ  ಬ್ಯಾಡ್ ಮ್ಯಾನರ್ಸ್ ಚಿತ್ರ ಎಲ್ಲೆಡೆ ಭರ್ಝರಿ ಪ್ರದರ್ಶನ ಕಂಡುಬಂದಿದ್ದು ಈ ಚಿತ್ರವನ್ನು ಎಲ್ಲರು ಮೆಚ್ಚಿಕೊಂಡಿದ್ದಾರೆ ಹಾಗೆ ಯಶಸ್ವಿಯಾಗಿ ಸಹ ಪ್ರದರ್ಶನ ಕಾಣುತ್ತಿದೆ. ಹಾಗೆ ಬ್ಯಾಡ್ ಮ್ಯಾನರ್ಸ್ ಚಿತ್ರ ಹಾಗೂ ಅಭಿಷೇಕ್ ಅಂಬರೀಶ್ ರವರ ಅಭಿನಯವನ್ನು ಮೆಚ್ಚಿ ತುಂಬು ಹೃದಯದಿಂದ ಅಶ್ವಿನಿ ಪುನೀತ್ ರಾಜಕುಮಾರ್ ಪ್ರಶಂಸೆಯನ್ನು ವ್ಯಕ್ತಪಡಿಸಿದರು. ಬ್ಯಾಡ್​ ಮ್ಯಾನರ್ಸ್​ ಚಿತ್ರದ ನಿರ್ಮಾಣ ಸುಧೀರ್ ಕೆ.ಎಂ,  ನಿರ್ದೇಶನ ದುನಿಯಾ ಸೂರಿ ಮಾಡಿದ್ದು  ಅಭಿಷೇಕ್​ ಅಂಬರೀಷ್​, ರಚಿತಾ ರಾಮ್​, ತಾರಾ ಅನುರಾಧಾ, ದತ್ತಣ್ಣ, ಶರತ್​ ಲೋಹಿತಾಶ್ವ, ರೋಚಿತ್​, ತ್ರಿವಿಕ್ರಮ್​, ಸಚ್ಚಿದಾನಂದ, ಪ್ರಶಾಂತ್​ ಸಿದ್ಧಿ, ಪೂರ್ಣಚಂದ್ರ ಮೈಸೂರು ಮುಂತಾದವರು ಚಿತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾದಲ್ಲಿ ಅದ್ದೂರಿತನ ಕಾಣಿಸುತ್ತದೆ. ಮಾಸ್​ ಪ್ರೇಕ್ಷಕರಿಗೆ ಬೇಕಾದ ಭರ್ಜರಿ ಫೈಟಿಂಗ್​ ದೃಶ್ಯಗಳು ಇಲ್ಲಿವೆ. ಆದರೆ ಹೆಚ್ಚು ಲಾಜಿಕ್​ ಹುಡುಕುವಂತಿಲ್ಲ. ಚರಣ್​ ರಾಜ್​ ಅವರು ಸಂಗೀತದ ಮೂಲಕ ಸಿನಿಮಾದ ತೂಕ ಹೆಚ್ಚಿಸಲು ಪ್ರಯತ್ನಿಸಿದ್ದಾರೆ. ಹಾಡುಗಳು ಚೆನ್ನಾಗಿದ್ದರೂ ಕಥೆಯ ಮಧ್ಯೆ ಬಲವಂತಕ್ಕೆ ತುರುಕಿದಂತಿವೆ. ಶೇಖರ್​ ಎಸ್​. ಅವರ ಛಾಯಾಗ್ರಹಣ ಚೆನ್ನಾಗಿದೆ

Read More

ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಮಂದಿ ಅಪರಿಚಿತ ಸಂಖ್ಯೆಗಳಿಂದ ಬರುವ ವಾಟ್ಸಾಪ್ ಕರೆಗಳಿಂದ ನೊಂದು ಹೋಗಿದ್ದಾರೆ. ನಿಮಗೆ ಕೂಡಾ ಇಂತಹ ಅನುಭವವಾಗಿದೆಯೇ…? ನೀವೂ ಇಂತಹ ಕರೆಗಳಿಂದ ಬೇಸತ್ತು ಹೋಗಿದ್ದೀರಾ ಇಲ್ಲಿದೆ ಸರಳ ಉಪಾಯ! ಅಪರಿಚಿತ ಕರೆಗಳನ್ನು ಮ್ಯೂಟ್ ಮಾಡುವುದು ಹೇಗೆ…? ಆಂಡ್ರಾಯ್ಡ್‌, ಐಫೋನ್ ಅಥವಾ ಇತರ ಪ್ಲಾಟ್‌ಫಾರ್ಮ್‌ಗಳಲ್ಲಿ ವಾಟ್ಸಾಪ್ ಅಪ್ಲಿಕೇಷನ್ ತೆರೆಯಿರಿ `ಸೆಟ್ಟಿಂಗ್ಸ್‌’ ಮೆನುವಿಗೆ ಹೋಗಿ. ಆಂಡ್ರಾಯ್ಡ್‌ನಲ್ಲಿ ಸೆಟ್ಟಿಂಗ್ ಮೆನುವಿಗಾಗಿ ಮೇಲಿನ ಬಲಭಾಗದಲ್ಲಿರುವ ಮೂರು ಚುಕ್ಕೆಗಳ ಮೆನು ಐಕಾನ್ ಅನ್ನು ಟ್ಯಾಪ್ ಮಾಡಿ. ಐಓಎಸ್‌ನಲ್ಲಿ, ನೀವು ಕೆಳಗಿನ ಎಡಮೂಲೆಯಲ್ಲಿರುವ ಸೆಟ್ಟಿಂಗ್ಸ್‌ ಐಕಾನ್‌ ಅನ್ನು ಟ್ಯಾಪ್ ಮಾಡಬೇಕಾಗುತ್ತದೆ. ಪ್ರೈವೆಸಿ ಅಂದರೆ ಗೌಪ್ಯತೆ ಆಯ್ಕೆಯನ್ನು ಟ್ಯಾಪ್ ಮಾಡಿ `ಕರೆಗಳು’ (Calls) ಇದನ್ನು ಟ್ಯಾಪ್ ಮಾಡಿ ಮತ್ತು ನಂತರ `ಸೈಲೆಂಟ್ ಅನ್‌ನ್ನೋನ್ ಕಾಲರ್ಸ್’ ಎಂಬ ಆಯ್ಕೆಯನ್ನು ಟ್ಯಾಪ್ ಮಾಡಿ

Read More

ಸೌತ್ ನಟಿ ಕೀರ್ತಿ ಸುರೇಶ್ (Keerthy Suresh) ಅವರು ‘ಭೋಲಾ ಶಂಕರ್’ ಸೋಲಿನ ನಂತರ ಮತ್ತೆ ಆ್ಯಕ್ಟೀವ್ ಆಗಿದ್ದಾರೆ. ಒಟಿಟಿಯಲ್ಲಿ ಮೂಡಿ ಬರಲಿರುವ ಪ್ಯಾನ್ ಇಂಡಿಯಾ ಚಿತ್ರಕ್ಕೆ ಕೀರ್ತಿ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ‘ಭೋಲಾ ಶಂಕರ್’ ಚಿತ್ರದಲ್ಲಿ ಮೆಗಾಸ್ಟಾರ್ ಚಿರಂಜೀವಿಗೆ ಕೀರ್ತಿ ತಂಗಿಯಾಗಿ ನಟಿಸಿದ್ದರು. ಅವಕಾಶಗಳು ಕಮ್ಮಿಯಾಗ್ತಿದ್ಯಾ? ಎಂಬ ಗುಸು ಗುಸು ಸುದ್ದಿ ನಡುವೆ ಈಗ ಒಟಿಟಿಯತ್ತ ನಟಿ ಮುಖ ಮಾಡಿರೋದು ಮತ್ತಷ್ಟು ಸುದ್ದಿಯಾಗುತ್ತಿದೆ. ಹಿಂದಿ ನಿರ್ಮಾಪಕ ಆದಿತ್ಯ ಚೋಪ್ರಾ (Adithya Chopra) ನಿರ್ಮಾಣದ ವೆಬ್ ಸಿರೀಸ್‌ನಲ್ಲಿ ಕೀರ್ತಿ ಸುರೇಶ್ ಮತ್ತು ರಾಧಿಕಾ ಅಪ್ಟೆ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಧರ್ಮರಾಜ್ ಶೆಟ್ಟಿ ಒಟಿಟಿ ಈ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಕೀರ್ತಿ ಸುರೇಶ್ ಅವರು ನಟಿಸುತ್ತಿರುವ ಚಿತ್ರಗಳು ಇತ್ತೀಚಿನ ದಿನಗಳಲ್ಲಿ ಚಿತ್ರಮಂದಿರದಲ್ಲಿ ಮಕಾಡೆ ಮಲಗುತ್ತಿವೆ. ಅವರ ಸಿನಿಮಾಗಳು ಅಷ್ಟಾಗಿ ವರ್ಕ್ ಆಗದ ಕಾರಣ, ಒಟಿಟಿಯತ್ತ ಮುಖ ಮಾಡಿದ್ರಾ? ಎಂಬ ಪ್ರಶ್ನೆ ಅನೇಕರಲ್ಲಿ ಮೂಡಿದೆ.

Read More