ಟೆಲ್ ಅವೀವ್: ಗಾಜಾದ (Gaza) ಮೇಲೆ ಇಸ್ರೇಲ್ (Israel) ನಡೆಸಿದ ವೈಮಾನಿಕ ದಾಳಿಯಲ್ಲಿ ಒತ್ತೆಯಾಳಾಗಿದ್ದ 10 ತಿಂಗಳ ಮಗು ಸಾವಿಗೀಡಾಗಿದೆ ಎಂದು ಹಮಾಸ್ (Hamas) ಆರೋಪ ಮಾಡಿದೆ. ಕೆಫೀರ್ ಬಿಬಾಸ್ (9 ತಿಂಗಳು) ಮಗುವನ್ನು ಅಕ್ಟೋಬರ್ 7 ರಂದು ಇಸ್ರೇಲ್ನಲ್ಲಿರುವ ಮನೆಯಿಂದ ಸೆರೆ ಹಿಡಿಯಲಾಗಿತ್ತು. ಹಠಾತ್ ದಾಳಿಯ ಸಂದರ್ಭದಲ್ಲಿ ಆತನ ತಾಯಿ ಮತ್ತು ನಾಲ್ಕು ವರ್ಷದ ಸಹೋದರನನ್ನು ಸಹ ಒತ್ತೆಯಾಳಾಗಿ ಇರಿಸಲಾಗಿತ್ತು. ಬುಧವಾರ ಮೂವರೂ ಗಾಜಾದಲ್ಲಿ ಕೊಲ್ಲಲ್ಪಟ್ಟಿದ್ದಾರೆ ಎಂದು ಹಮಾಸ್ ಹೇಳಿದೆ. ಈ ಬಗ್ಗೆ ಇಸ್ರೇಲಿ ಸೇನೆಯು ತನಿಖೆ ನಡೆಸುತ್ತಿದೆ. https://ainlivenews.com/residents-own-property-in-bangalore-heres-the-good-news/ ಗಾಜಾ ಪಟ್ಟಿಯಲ್ಲಿರುವ ಎಲ್ಲಾ ಒತ್ತೆಯಾಳುಗಳ ಭದ್ರತೆಗೆ ಹಮಾಸ್ ಸಂಪೂರ್ಣ ಜವಾಬ್ದಾರವಾಗಿದೆ. ಹಮಾಸ್ನ ಕ್ರಮಗಳು ಒತ್ತೆಯಾಳುಗಳಿಗೆ ಅಪಾಯವನ್ನುಂಟುಮಾಡುವುದನ್ನು ಮುಂದುವರೆಸಿದೆ. ಅಪಾಯದಲ್ಲಿ 9 ಮಕ್ಕಳಿದ್ದಾರೆ ಎಂದು ಇಸ್ರೇಲ್ ಸೇನೆ ತಿಳಿಸಿದೆ. ಕದನ ವಿರಾಮ ಜಾರಿಗೆ ಬರುವ ಕೆಲವೇ ದಿನಗಳ ಮೊದಲು ಇಸ್ರೇಲಿ ಬಾಂಬ್ ದಾಳಿಯಲ್ಲಿ ಮಗು ಕೆಫೀರ್, ಆತನ ಸಹೋದರ ಏರಿಯಲ್ ಮತ್ತು ಅವರ ತಾಯಿ ಶಿರಿ ಸಾವನ್ನಪ್ಪಿದ್ದಾರೆ ಎಂದು ಹಮಾಸ್ ಹೇಳಿದೆ.…
Author: AIN Author
ರಾಯ್ಪುರ: ಆಸ್ಟ್ರೇಲಿಯಾ (Australia) ವಿರುದ್ಧ ಟಿ20 ಸರಣಿ ಗೆಲುವಿನ ಮೇಲೆ ಕಣ್ಣಿಟ್ಟಿರುವ ಟೀಂ ಇಂಡಿಯಾ (Team India) ಯುವ ಪಡೆ, ಶುಕ್ರವಾರ (ಇಂದು) 4ನೇ ಟಿ20 ಪಂದ್ಯದಲ್ಲಿ ಕಣಕ್ಕಿಳಿಯಲಿದೆ. 5 ಪಂದ್ಯದ ಸರಣಿಯಲ್ಲಿ 2-1ರಲ್ಲಿ ಮುನ್ನಡೆ ಸಾಧಿಸಿರುವ ಭಾರತ, ಕೊನೆಯ ಪಂದ್ಯದವರೆಗೂ ಕಾಯದೆ ಸರಣಿ ಗೆಲ್ಲಲು ಎದುರು ನೋಡುತ್ತಿದ್ದರೆ, ಆಸೀಸ್ ಸರಣಿ ಸಮಬಲದ ಕಾಯ್ದುಕೊಳ್ಳುವ ವಿಶ್ವಾಸದಲ್ಲಿದೆ ಮೊದಲೆರಡು ಪಂದ್ಯ ಗೆದ್ದಿದ್ದ ಭಾರತ 3ನೇ ಟಿ20 ಪಂದ್ಯವನ್ನು ಪಂದ್ಯವನ್ನು ಮ್ಯಾಕ್ಸ್ವೆಲ್ ಅವರ ಸಾಹಸದ ಮುಂದೆ ಕೈಚೆಲ್ಲಿತ್ತು. ಮೂರೂ ಪಂದ್ಯಗಳಲ್ಲಿ ಟೀಂ ಇಂಡಿಯಾ ಬೌಲರ್ಗಳ (Bowlers) ಪ್ರದರ್ಶನ ಅತ್ಯಂತ ಕಳಪೆಯಾಗಿತ್ತು. ಆಸೀಸ್ ವಿರುದ್ಧ ಕ್ರಮವಾಗಿ 209, 191 ಹಾಗೂ 225 ರನ್ ಬಿಟ್ಟುಕೊಟ್ಟಿತು. ಆದ್ದರಿಂದ ಟೀಂ ಇಂಡಿಯಾಕ್ಕೆ ಬ್ಯಾಟಿಂಗ್ನಷ್ಟೇ ಬೌಲಿಂಗ್ನಲ್ಲೂ ಬಲ ಬೇಕಿದೆ ಪ್ರಸಿದ್ ಕೃಷ್ಣ ಗಾಯದಿಂದ ಚೇತರಿಸಿ ತಂಡಕ್ಕೆ ಮರಳಿದ ಬಳಿಕ ದುಬಾರಿಯಾಗುತ್ತಿದ್ದು, ಇತರರಿಂದಲೂ ಆಸೀಸ್ ಬ್ಯಾಟರ್ಗಳನ್ನು ಕಟ್ಟಿಹಾಕಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಶ್ರೇಯಸ್ ಅಯ್ಯರ್, ದೀಪಕ್ ಚಹಾರ್ 4ನೇ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆಗಳಿವೆ. ತಿಲಕ್…
ದೆಹಲಿ: ಭಾರತವನ್ನು ಕಟ್ಟಲು ಯುವಜನರು ವಾರಕ್ಕೆ 70 ಗಂಟೆ ದುಡಿಯಬೇಕು ಎಂಬ ಇನ್ಫೋಸಿಸ್ (Infosys) ಸಂಸ್ಥಾಪಕ ಎನ್.ಆರ್.ನಾರಾಯಣ ಮೂರ್ತಿ ನೀಡಿದ್ದ ಹೇಳಿಕೆ ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಈಗ ಮತ್ತೊಂದು ಹೇಳಿಕೆ ಮೂಲಕ ನಾರಾಯಣ ಮೂರ್ತಿ (Narayana Murthy) ಅವರು ಚರ್ಚೆ ಹುಟ್ಟುಹಾಕಿದ್ದಾರೆ. ಬೆಂಗಳೂರು ಟೆಕ್ ಶೃಂಗಸಭೆಯಲ್ಲಿ (Bengaluru Tech Summit 2023) ಝಿರೋಧಾ ಸಹ-ಸಂಸ್ಥಾಪಕ ನಿಖಿಲ್ ಕಾಮತ್ ಅವರೊಂದಿಗೆ ಫೈರ್ಸೈಡ್ ಚಾಟ್ನಲ್ಲಿ ನಾರಾಯಣ ಮೂರ್ತಿ ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ಅವರು, ಉಚಿತ ಕೊಡುಗೆಗಳನ್ನು ನೀಡಬಾರದು ಎಂದು ತಿಳಿಸಿದ್ದಾರೆ. ಸಬ್ಸಿಡಿ ದರದಲ್ಲಿ ಸರ್ಕಾರದಿಂದ ಸೇವೆಗಳನ್ನು ಪಡೆದ ನಂತರ ಸಮಾಜಕ್ಕೆ ಮರಳಿ ನೀಡುವಂತೆ ಜನರನ್ನು ಒತ್ತಾಯಿಸಿದ್ದಾರೆ. ಉಚಿತ ಸೇವೆ ಒದಗಿಸುವುದನ್ನು ನಾನು ವಿರೋಧಿಸುವುದಿಲ್ಲ. ಅದನ್ನು ನಾನು ಅರ್ಥ ಮಾಡಿಕೊಂಡಿದ್ದೇನೆ. ಏಕೆಂದರೆ ನಾನು ಒಂದು ಕಾಲದಲ್ಲಿ ಬಡತನದ ಹಿನ್ನೆಲೆಯಿಂದ ಬಂದವನು. ಆದರೆ ಆ ಉಚಿತ ಸಬ್ಸಿಡಿಗಳನ್ನು ಪಡೆದ ಜನರಿಂದ ಏನನ್ನಾದರೂ ನಿರೀಕ್ಷಿಸಬೇಕು ಎಂದು ತಿಳಿಸಿದ್ದಾರೆ.
ತೆಲುಗಿನ ಖ್ಯಾತ ಹಿರಿಯ ನಟ ನರೇಶ್ ಮತ್ತು ಪವಿತ್ರಾ ಲೋಕೇಶ್ ಥಾಯ್ಲೆಂಡ್ (Thailand)ಗೆ ಹಾರಿದ್ದಾರೆ. ವಿದೇಶದಲ್ಲಿ ಎಂಜಾಯ್ ಮಾಡ್ತಿರೋ ಫೋಟೋವನ್ನು ಸ್ವತಃ ಲೋಕೇಶ್ ಅವರೇ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಸಿನಿಮಾ ರಂಗಕ್ಕೆ ಬಂದು ಐವತ್ತು ವರ್ಷಗಳು ತುಂಬಿರುವ ಈ ಸಂದರ್ಭದಲ್ಲಿ ತಮಗೆ ಸಹಾಯಕ್ಕೆ ನಿಂತ ಎಲ್ಲರಿಗೂ ಧನ್ಯವಾದಗಳು ಅರ್ಪಿಸಿದ್ದಾರೆ. ನರೇಶ್ (Naresh) ಹಾಗೂ ಕನ್ನಡದ ನಟಿ ಪವಿತ್ರಾ ಲೋಕೇಶ್ (Pavitra Lokesh) ನಡುವಿನ ಸಂಬಂಧವೇನು ಎನ್ನುವ ಕುರಿತು ಹಲವು ದಿನಗಳಿಂದ ಚರ್ಚೆ ನಡೆಯುತ್ತಲೇ ಇದೆ. ಪರೋಕ್ಷವಾಗಿ ಅವರಿಬ್ಬರೂ ಲಿವ್ ಇನ್ ರಿಲೇಷನ್ ಶಿಪ್ ನಲ್ಲಿದ್ದಾರೆ ಎನ್ನುವಂತೆ ತೋರಿಸುತ್ತಲೇ ಬಂದರು. ಈ ಹಿಂದೆಯಷ್ಟೇ ತಮ್ಮಿಬ್ಬರ ನಡುವಿನ ಸಂಬಂಧವನ್ನು ಬಹಿರಂಗ ಪಡಿಸಿದ್ದಾರೆ. ತಮ್ಮ ಸಿನಿಮಾ ಪ್ರಚಾರಕ್ಕಾಗಿ ಬೆಂಗಳೂರಿಗೆ ಬಂದಿದ್ದ ಅವರು, ತಾವು ಸಹಜೀವನ ನಡೆಸುತ್ತಿದ್ದೇವೆ ಎಂದು ಹೇಳಿದ್ದರು. ಮಾಧ್ಯಮಗಳೊಂದಿಗೆ ಮಾತನಾಡಿದ ನರೇಶ್, ‘ಸುಪ್ರೀಂಕೋರ್ಟ್ ಕೂಡ ಲೀವ್ ಇನ್ ರಿಲೇಶನ್ ಶಿಪ್ (Live in relationship) ಅನ್ನು ಮದುವೆಗೆ ಸಮ ಎಂದು ಹೇಳಿದೆ. ಹಾಗಾಗಿ ನಾವು…
ವಾಷಿಂಗ್ಟನ್: ನೋಬೆಲ್ ಶಾಂತಿ ಪುರಸ್ಕೃತ ಹಾಗು ಅಮೇರಿಕಾದ ಮಾಜಿ ವಿದೇಶಾಂಗ ಕಾರ್ಯದರ್ಶಿ, ರಾಜತಾಂತ್ರಿಕ ಹೆನ್ರಿ ಕಿಸಿಂಜರ್ ನಿಧರಾಗಿದ್ದಾರೆ. ದಶಕಗಳ ಸುದೀರ್ಘ ವೃತ್ತಿಜೀವನದಲ್ಲಿ ಅವರು ರಿಚರ್ಡ್ ನಿಕ್ಸನ್ ಮತ್ತು ಜೆರಾಲ್ಡ್ ಫೋರ್ಡ್ (ಅಮೆರಿಕಾದ ಮಾಜಿ ಅಧ್ಯಕ್ಷರು) ಅವಧಿಯಲ್ಲಿ ಅಮೆರಿಕದ ಉನ್ನತ ರಾಜತಾಂತ್ರಿಕ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದರು. ಜರ್ಮನ್ ಮೂಲದವರಾದ ಕಿಸ್ಸಿಂಜರ್ ಅವರ ಮನೆಯಲ್ಲಿ ಬುಧವಾರ ನಿಧನರಾದರು ಎಂದು ರಾಜಕೀಯ ಸಲಹಾ ಸಂಸ್ಥೆ ಕಿಸ್ಸಿಂಜರ್ ಅಸೋಸಿಯೇಟ್ಸ್ ಹೇಳಿಕೆಯಲ್ಲಿ ತಿಳಿಸಿದೆ. ಹೆನ್ರಿ ಕಿಸಿಂಜರ್ 1923ರಲ್ಲಿ ಜರ್ಮನಿಯಲ್ಲಿ ಜನಿಸಿದರು. 1938ರಲ್ಲಿ ಕಿಸ್ಸಿಂಜರ್ ಕುಟುಂಬದೊಂದಿಗೆ ಅಮೆರಿಕಾಕ್ಕೆ ಬಂದು ನೆಲೆಸಿ, 1943ರಲ್ಲಿ ಅಲ್ಲಿನ (ಅಮೆರಿಕಾ) ಪೌರತ್ನ ಪಡೆದರು. ಬಳಿಕ ಯುಎಸ್ ಸೈನ್ಯದಲ್ಲಿ ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದರು. ನಂತರ ಕೌಂಟರ್ ಇಂಟೆಲಿಜೆನ್ಸ್ ಕಾರ್ಪ್ಸ್ನಲ್ಲಿ ಸೇವೆ ಸಲ್ಲಿಸಿದರು. 1969ರಲ್ಲಿ, ಆಗಿನ ಅಧ್ಯಕ್ಷ ರಿಚರ್ಡ್ ನಿಕ್ಸನ್, ಕಿಸ್ಸಿಂಜರ್ ಅವರನ್ನು ರಾಷ್ಟ್ರೀಯ ಭದ್ರತಾ ಸಲಹೆಗಾರರನ್ನಾಗಿ ನೇಮಿಸಿದರು. ಇದು ಯುಎಸ್ ವಿದೇಶಾಂಗ ನೀತಿಯ ಮೇಲೆ ಅಗಾಧವಾದ ಪ್ರಭಾವ ಬೀರಿತು. 100 ವರ್ಷ ವಯಸ್ಸಾದರೂ…
ಮಹೇಂದ್ರ ಸಿಂಗ್ ಧೋನಿ (MS Dhoni) ವಾಹನ ಪ್ರಿಯ ಎಂಬುದು ಎಲ್ಲರಿಗೂ ತಿಳಿದಿದೆ. ಅವರ ಬಳಿ 70ಕ್ಕೂ ಅಧಿಕ ಬೈಕ್ಗಳಿವೆ, ಕಾರುಗಳ ಕಲೆಕ್ಷನ್ ಕೂಡ ತುಂಬಾ ಇದೆ.ವಿಶ್ವದ ಅತಿ ಹೆಚ್ಚು ಐಷಾರಾಮಿ ಬೈಕ್ ಮತ್ತು ಕಾರು ಸಂಗ್ರಹವನ್ನು ಎಂಎಸ್ ಧೋನಿ ಹೊಂದಿದ್ದಾರೆ. ಮಾಜಿ ಭಾರತೀಯ ಕ್ರಿಕೆಟ್ ತಂಡದ ನಾಯಕ ಮತ್ತು ಐದು ಬಾರಿ ಐಪಿಎಲ್ ವಿಜೇತ, ದೊಡ್ಡ ಪೆಟ್ರೋಲ್ ಹೆಡ್ ಆಗಿರುವ ಮಹೇಂದ್ರ ಸಿಂಗ್ ಧೋನಿ ಅವರು ತಮ್ಮ ಐಷಾರಾಮಿ ಗ್ಯಾರೇಜ್ಗೆ ಮತ್ತೊಂದು ಅದ್ಭುತವಾದ SUV ಅನ್ನು ಸೇರಿಸಿದ್ದಾರೆ. 42 ವರ್ಷ ವಯಸ್ಸಿನವರು ಇತ್ತೀಚೆಗೆ 3.30 ಕೋಟಿ ರೂಪಾಯಿ ಮೌಲ್ಯದ AMG G63 SUV ಅನ್ನು ಯಾವುದೇ ಕಸ್ಟಮೈಸ್ ಮಾಡದೆಯೇ ಎಕ್ಸ್ ಶೋರೂಂ ಅನ್ನು ತಮ್ಮ ಮೋಟಾರು ಸೈಕಲ್ಗಳು ಮತ್ತು ಕಾರುಗಳ ಭವ್ಯವಾದ ಸಂಗ್ರಹಕ್ಕೆ ಸೇರಿಸಿದ್ದಾರೆ. https://www.instagram.com/reel/C0MucqxslQC/?utm_source=ig_web_copy_link ಇದೀಗ ಧೋನಿಯ ಹೊಸ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಧೂಳೆಬ್ಬಿಸುತ್ತಿದೆ. ಧೋನಿ ಅವರು 0007 ನಂಬರ್ ಪ್ಲೇಟ್ನ ಮರ್ಸಿಡಿಸ್-ಎಎಂಜಿ ಜಿ63 ಕಾರನ್ನು ಖರೀದಿಸಿದ್ದಾರೆ.…
ಚೆಂಡು ಹೂವಿನ ಮಾರುಕಟ್ಟೆ ಬೇಡಿಕೆಯನ್ನು ಗಮನಿಸಿದರೆ, ರೈತರು ಅದನ್ನು ಉತ್ಪಾದಿಸುವ ಮೂಲಕ ಉತ್ತಮ ಲಾಭ ಗಳಿಸಬಹುದು. ಕಡಿಮೆ ಜಾಗದಲ್ಲಿಯೂ ಇದರ ಕೃಷಿಯನ್ನು ಸುಲಭವಾಗಿ ಮಾಡಬಹುದು. ಒಂದು ಹೆಕ್ಟೇರ್ ಭೂಮಿಯಲ್ಲಿ ಇದನ್ನು ಬೆಳೆಸುವುದರಿಂದ ಪ್ರತಿ ವರ್ಷ ಸುಮಾರು 3 ಲಕ್ಷ ರೂಪಾಯಿ ಆದಾಯ ಪಡೆಯಬಹುದು. ಕೃಷಿ ವಿಧಾನ ಮಣ್ಣು: ಚೆಂಡು ಹೂವಿನ ಕೃಷಿಗೆ ಲೋಮಿ ಮತ್ತು ಮರಳು ಮಿಶ್ರಿತ ಮಣ್ಣು ಒಳ್ಳೆಯದು. ಈ ಮಣ್ಣಿನಲ್ಲಿ ನೀರು ಚೆನ್ನಾಗಿ ಬರಿದಾಗಬಹುದು. ಅದರ ಬಿತ್ತನೆಯ ಮೊದಲು, ಹೊಲವನ್ನು ಉಳುಮೆ ಮಾಡಿ ಮತ್ತು ಅದನ್ನು ಸಮತಟ್ಟಾಗಿ ಮಾಡಿ ಮತ್ತು ಕನಿಷ್ಠ ಮೂರರಿಂದ ನಾಲ್ಕು ಬಾರಿ ಮಣ್ಣನ್ನು ಕೃಷಿಕದಿಂದ ಉಳುಮೆ ಮಾಡಿ, ಇದರಿಂದ ಮಣ್ಣು ಸಂಪೂರ್ಣವಾಗಿ ಸಡಿಲವಾಗುತ್ತದೆ. ಗೊಬ್ಬರ: ಚೆಂಡು ಉತ್ತಮ ಇಳುವರಿ ಪಡೆಯಲು ಒಂದು ಎಕರೆ ಜಮೀನಿನಲ್ಲಿ 200 ಕ್ವಿಂಟಾಲ್ ಗೊಬ್ಬರ ಬೇಕಾಗುತ್ತದೆ. ಇದಲ್ಲದೆ ರಂಜಕ ಮತ್ತು ಪೊಟ್ಯಾಷ್ ಅನ್ನು ಸಹ ಮಣ್ಣಿನಲ್ಲಿ ಬೆರೆಸಬೇಕು. ನೀರಾವರಿ: ಈ ಗಿಡಗಳಿಗೆ ನಿರಂತರ ತೇವಾಂಶ ಬೇಕಾಗುತ್ತದೆ, ಆದ್ದರಿಂದ ಹೊಲದ ತೇವಾಂಶವನ್ನು ಕಾಪಾಡಿಕೊಳ್ಳಲು, 10 ರಿಂದ…
ಮಂಡ್ಯ : ಲೋಕಸಭಾ ಚುನಾವಣೆಗೆ ಜೆಡಿಎಸ್ ತಯಾರಿ ನಡೆಸಿದ್ದು ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಾರಾ ಮಾಜಿ ಸಚಿವ ಪುಟ್ಟರಾಜು ಎಂಬುದು ಬಲ್ಲ ಮೂಲಗಳಿಂದ ಮಾಹಿತಿ ದೊರೆತಿದೆ. ನಿಖಿಲ್ಗೆ ಆಹ್ವಾನ ನೀಡಿದ್ದ ಪುಟ್ಟರಾಜು ಆದರೆ ಮಂಡ್ಯ ಲೋಕಸಭಾ ಚುನಾವಣೆಗೆ ಬರಲು ನಿಖಿಲ್ ನಿರಾಕರಣೆ ವ್ಯಕ್ತಪಡಿಸಿದ್ದು ದೇವೇಗೌಡರಿಂದ ಪುಟ್ಟರಾಜುಗೆ ಗ್ರೀನ್ ಸಿಗ್ನಲ್ ಕೂಡ ಸಿಕ್ಕಿದೆ. ಇದರ ಬೆನ್ನಲ್ಲೆ ಚುನಾವಣೆಗೆ ಪುಟ್ಟರಾಜು ತಯಾರಿ ನಡೆಸಿದ್ದು ಸ್ವಕ್ಷೇತ್ರದ ಮೂಲಕವೇ ಲೋಕಸಭಾ ಅಭ್ಯರ್ಥಿಯ ಸಿಗ್ನಲ್ ನೀಡುತ್ತಿರೋ ಪುಟ್ಟರಾಜು ಬೃಹತ್ ಕಾರ್ಯಕ್ರಮ ಆಯೋಜನೆ ಮೂಲಕ ಎಲೆಕ್ಷನ್ ಪ್ರಿಪ್ರೇಷನ್.? ಹುಟ್ಟು ಹಬ್ಬದ ನೆಪದಲ್ಲಿ ಸಾವಿರು ಜನರನ್ನು ಸೇರಿಸಿ ಕಾರ್ಯಕ್ರಮ ಮಾಡಲಾಗಿದ್ದು ಜೆಡಿಎಸ್ ವರಿಷ್ಠರ ಸೂಚನೆಯಂತೆ ಸಿದ್ಧತೆ ಆರಂಭ ಕೂಡ ಕೈಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಅದ್ದೂರಿಯಾಗಿ 60ನೇ ವರ್ಷದ ಹುಟ್ಟು ಹಬ್ಬ ಹಾಗೂ ಕನ್ನಡ ರಾಜ್ಯೋತ್ಸವಕಾರ್ಯಕ್ರಮ ಮಾಡಿಕೊಟ್ಟಿದ್ದು ಹಾಗೆ ಖ್ಯಾತ ಮ್ಯೂಸಿಕ್ ಡೈರೆಕ್ಟರ್ ಅರ್ಜುನ್ ಜನ್ಯ ನೇತೃತ್ವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿಸಿದರು. ಅದ್ದೂರಿ ಕಾರ್ಯಕ್ರಮದ ಮೂಲಕ ಎಂಪಿ ಚುನಾವಣೆ ಸ್ಪರ್ಧಿಸುವ ಸಂದೇಶ ರವಾನೆ ಕೊಟ್ರಾ…
ಬಾಲಿವುಡ್ ನ ಖ್ಯಾತನಟ ರಣ್ ದೀಪ್ ಹೂಡಾ (Randeep Hooda) ನಿನ್ನೆಯಷ್ಟೇ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಹುಕಾಲದ ಗೆಳತಿ ಹಾಗೂ ಮಾಡೆಲ್ ಆಗಿರುವ ಲಿನ್ ಲೈಸ್ರಾಮ್ (Lin Laisram) ಜೊತೆ ಅವರು ದಾಂಪತ್ಯ (Marriage) ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಜೋಡಿಯ ಮದುವೆ ಮಣಿಪುರ ಸಂಪ್ರದಾಯದಂತೆ ನಡೆದಿದ್ದು, ಮದುವೆಯ ಫೋಟೋಗಳನ್ನು ರಣ್ ದೀಪ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ವಧು ವರರಿಗೆ ಹಾರೈಸಿ ಎಂದು ಕೇಳಿದ್ದಾರೆ. ಮಣಿಪುರದ ಮೈಥಿಯಿ ಸಂಪ್ರದಾಯದಂತೆ ನಡೆದ ಮದುವೆಯಲ್ಲಿ ರಣ್ ದೀಪ್ ಕ್ರೀಮ್ ಬಣ್ಣದ ಧಿರಿಸಿನಲ್ಲಿ ಮಿಂಚುತ್ತಿದ್ದರು. ಮಾಡೆಲ್ ಲಿನ್ ಮೂಲತಃ ಮಣಿಪುರದವರು ಆಗಿದ್ದು, ಮಾಡೆಲಿಂಗ್ ಕ್ಷೇತ್ರದಲ್ಲಿ ದೊಡ್ಡ ಹೆಸರು ಮಾಡಿದ್ದಾರೆ. ಜೊತೆಗೆ ನಟಿಯಾಗಿಯೂ ಗುರುತಿಸಿಕೊಂಡಿದ್ದಾರೆ. ಹೂಡಾಗೆ 47 ವರ್ಷ ವಯಸ್ಸಾಗಿದ್ದರೂ, ಮಣಿಪುರದ ಬೆಡಗಿ ಮೆಚ್ಚಿ ಮದುವೆಯಾಗಿದ್ದಾರೆ ಎನ್ನುವುದು ವಿಶೇಷ.
ಮುಂಬೈ: ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ (Hardik Pandya) ಮತ್ತೆ ತವರು ಮುಂಬೈ ಇಂಡಿಯನ್ಸ್ (Mumbai Indians) ಸೇರ್ಪಡೆಗೊಂಡ ಬಳಿಕ ಗುಜರಾತ್ ಟೈಟಾನ್ಸ್ ಯುವ ಆರಂಭಿಕ ಆಟಗಾರ ಶುಭಮನ್ ಗಿಲ್ (Shubman Gill) ಹೆಗಲಿಗೆ ನಾಯಕತ್ವದ ಹೊಣೆ ನೀಡಲಾಗಿದೆ. ಈ ಬಗ್ಗೆ ಗುಜರಾತ್ ಟೈಟಾನ್ಸ್ (GujaratTaitans) ತನ್ನ X ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ಶುಭಮನ್ ಗಿಲ್ ಸಹ ನಾಯಕತ್ವದ ಹೊಣೆ ನೀಡಿದ ಫ್ರಾಂಚೈಸಿಗೆ ಧನ್ಯವಾದ ತಿಳಿಸಿದ್ದಾರೆ. ಗುಜರಾತ್ ಟೈಟಾನ್ಸ್ನ ನಾಯಕತ್ವ ವಹಿಸಿಕೊಳ್ಳಲು ನಾನು ಹೆಮ್ಮೆಪಡುತ್ತೇನೆ. ಇಂತಹ ಉತ್ತಮ ತಂಡವನ್ನು ಮುನ್ನಡೆಸಲು ಫ್ರಾಂಚೈಸಿ ನನ್ನ ಮೇಲೆ ನಂಬಿಕೆಯಿಟ್ಟು ನಾಯಕತ್ವದ ಹೊಣೆ ನೀಡಿದೆ. ಇದನ್ನು ಕೇವಲ ಧನ್ಯವಾದ ಹೇಳಿ ಮುಗಿಸಲಾರೆ. ಈ ಟೂರ್ನಿಯನ್ನು ಸ್ಮರಣೀಯವಾಗಿಸೋಣ ಎಂದು ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ ಶುಭಮನ್ ಗಿಲ್ ಗುಜರಾತ್ ಟೈಟಾನ್ಸ್ ಪರ ಆಡಿರುವ 2 ಆವೃತ್ತಿಯ 33 ಇನ್ನಿಂಗ್ಸ್ಗಳಲ್ಲಿ, 47.34 ಸರಾಸರಿಯಲ್ಲಿ 1,373 ರನ್ ಬಾರಿಸಿದ್ದಾರೆ. ಅದರಲ್ಲೂ 2023ರ 16ನೇ ಆವೃತ್ತಿಯ ಐಪಿಎಲ್ನಲ್ಲಿ 17 ಪಂದ್ಯಗಳಿಂದ 59.33 ಸರಾಸರಿಯಲ್ಲಿ ಒಟ್ಟು…