ಧಾರವಾಡ:- ದೇಶದ ಐದು ರಾಜ್ಯಗಳಲ್ಲಿ ನಡೆಯುತ್ತಿರುವ ವಿಧಾನ ಸಭೆ ಚುನಾವಣೆಗಳಲ್ಲಿ ಬಹುತೇಕ ರಾಜ್ಯಗಳಲ್ಲಿ ನಮ್ಮ ಪಕ್ಷಕ್ಕೆ ಬೆಂಬಲ ಸಿಗುತ್ತದೆ. ಹಾಗಾಗಿ ರಾಜಸ್ತಾನ ಸೇರಿ ಬಹುತೇಕ ರಾಜ್ಯಗಳಲ್ಲಿ ಮತದಾರ ನಮ್ಮಗೆ ಅಧಿಕಾರ ನೀಡುವ ವಿಶ್ವಾಸವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು. ಧಾರವಾಡ ಜಿಲ್ಲೆಯ ಕಲಘಟಗಿ ತಾಲ್ಲೂಕಿನ ದುಮ್ಮವಾಡ ಗ್ರಾಮದಲ್ಲಿ ಮಾಧ್ಯಮಕ್ಲೆ ಪ್ರತಿಕ್ರಿಯೆ ನೀಡಿದ ಅವರು, ನಾನು ರಾಜಸ್ತಾನದ ಚುನಾವಣೆ ಉಸ್ತುವಾರಿ ಆಗಿದೆ. ಅಲ್ಲಿಯ ವಾತವರಣವು ಬಿಜೆಪಿ ಪರ ಇದ್ದು, ನಮ್ಮಗೆ ರಾಜಸ್ತಾನದಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುವ ವಿಶ್ವಾಸ ಇದೆ. ಐದು ರಾಜ್ಯಗಳಲ್ಲಿಅಧಿಕಾರಕ್ಕೆ ಬರಬೇಕು ಎನ್ನುವ ನಿಟ್ಟಿನಲ್ಲಿ ನಾವು ನಮ್ಮ ಪಕ್ಷದ ನಾಯಕರೆಲ್ಲರು ಕೂಡಿ ಕೆಲಸ ಮಾಡುತ್ತಿದ್ದೇವೆ ಎಂದರು. ಇನ್ನೂ ದೇಶವ್ಯಾಪಿ ವಿಕಶಿತ ಭಾರತ ಸಂಕಲ್ಪ ಯಾತ್ರೆ ನಡೆಯುತ್ತಿದ್ದು, ಜನರು ಇದನ್ನು ಮೋದಿ ಗ್ಯಾರಂಟಿ ಗಾಡಿ ಎಂದು ಗುರುತ್ತಿಸುತ್ತಿದ್ದಾರೆ. ಈ ಯಾತ್ರೆಯ ಉದ್ದೇಶ, ಭಾರತ ಸರ್ಕಾರದ ಯೋಜನೆಗಳು ಎಷ್ಟರಮಟ್ಟಿಗೆ ಜನಗಳಿಗೆ ತಲುಪಿವೆ ಹಾಗೂ ಕೇಂದ್ರ ಸರ್ಕಾರ ಇದೂವರೆಗೂ…
Author: AIN Author
ಕೆ.ಆರ್.ಪುರ: -ಶಾಲೆಗಳಿಂದಲೇ ವಿದ್ಯಾರ್ಥಿಗಳಿಗೆ ನಾಡು,ನುಡಿ ಹಾಗೂ ಸಮಾಜಕ್ಕೆ ಶ್ರಮಿಸಿದ ಮಹನೀಯರ ಕುರಿತಾದ ವಿಷಯಗಳನ್ನು ತಿಳಿಸುವ ಪ್ರಯತ್ನ ಮಾಡಬೇಕಾಗಿದೆ ಎಂದು ಅಂಬೇಡ್ಕರ್ ನಗರ ಶಾಲೆಯ ಎಸ್ ಡಿಎಂಸಿ ಮುಖ್ಯಸ್ಥ ಮಂಜುನಾಥ್ ಅವರು ತಿಳಿಸಿದರು. ಕ್ಷೇತ್ರದ ರಾಮಮೂರ್ತಿನಗರದ ಸಮೀಪದ ಅಂಬೇಡ್ಕರ್ ನಗರ ಸರ್ಕಾರಿ ಶಾಲೆಯಲ್ಲಿ ಆಯೋಜಿಸಿದ್ದ ಸಂತಕವಿ ದಾಸ ಶ್ರೇಷ್ಠ ಭಕ್ತ ಕನಕದಾಸರ 536 ನೇ ಜಯಂತೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. 15 ನೇ ಶತಮಾನದಲ್ಲಿ ಕೀರ್ತನೆಗಳ ಮೂಲಕ ಸಮಾಜದ ಅಂಕುಡೊಕ್ಕನ್ನು ಹೋಗಲಾಡಿಸಲು ಅಗಲಿಗಳು ಶ್ರಮಿಸಿದ ಮಹಾನೀಯ ಕನಕದಾಸರು , ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರು ಪ್ರಮುಖರಾಗಿ ಗುರಿತಿಸಿಕೊಂಡವರು . ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನೆಗರಾಗಿ , ಪುರಂದರದಾಸರ ರೀತಿ ಕರ್ನಾಟಕ ಸಂಗೀತಕ್ಕೆ ಮತ್ತು ಮೂಲಭೂತ ಸಿದ್ಧಾಂತಗಳಿಗೆ ದೊಡ್ಡ ಕಾಣಿಕೆಯನ್ನು ನೀಡಿದವರು ಎಂದು ವಿವರಿಸಿದರು . ಇನ್ನೂ ಕನಕದಾಸರ ಜಯಂತಿ ಯಾವುದೇ ವ್ಯಕ್ತಿ ಹಾಗೂ ಸಮಾಜದ ಆಚರಣೆಯಾಗದೆ ಸಾರ್ವಜನಿಕರ ಆಚರಣೆ ಆಚರಣೆಯಾದಾಗ ಮಾತ್ರ ಸಮಾಜಕ್ಕೆ ಉತ್ತಮ ಸಂದೇಶ ರವಾನಿಸಬಹುದಾಗಿದೆ ಇಂತಹ ಮಹಾತ್ಮರ…
ಬೆಂಗಳೂರು:- ನಿಮ್ಹಾನ್ಸ್ನಲ್ಲಿ ಮಗು ಸಾವು ಘಟನೆ ಸಂಬಂಧ ವರದಿ ಕೇಳಿದ್ದು, ಬಳಿಕ ನಿರ್ಧಾರ ಕೈಗೊಳ್ಳುತ್ತದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ನಿಮ್ಹಾನ್ಸ್ನಲ್ಲಿ ಹಾಸನ ಮೂಲದ ಮಗು ಸಾವು ಮತ್ತು ಪ್ರತಿಭಟನೆ ವಿಚಾರವಾಗಿ ವರದಿ ಕೇಳಿದ್ದೇನೆ. ಅಧಿಕಾರಿಗಳು ವರದಿ ಕೊಟ್ಟ ನಂತರ ಮುಂದೇನು ಮಾಡಬೇಕೆಂದು ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದರು. ನಮ್ಮ ಕಡೆಯಿಂದ ಯಾವುದೇ ನಿರ್ಲಕ್ಷ್ಯ ಆಗಿಲ್ಲ ಅಂತ ವೈದ್ಯರು ಹೇಳಿದ್ದಾರೆ. ಎರಡೂ ಕಡೆಯವರ ಜೊತೆ ಮಾತನಾಡುತ್ತೇವೆ. ಲೋಪಗಳು ಆಗಿದ್ದರೆ ಕ್ರಮ ತೆಗೆದುಕೊಳ್ಳುತ್ತೇವೆ. ನಿಮ್ಹಾನ್ಸ್ ಮೇಲೆ ಬಹಳ ಒತ್ತಡ ಇದೆ. ಸಾಕಷ್ಟು ರೋಗಿಗಳು ರಾಜ್ಯಾದ್ಯಂತ ಬರುತ್ತಾರೆ. ಕೆಲವೊಮ್ಮೆ ಬೆಡ್ಗಳು ಸಿಗಲ್ಲ. ನಾನೂ ಕೆಲವೊಮ್ಮೆ ಪ್ರಯತ್ನ ಪಟ್ಟಾಗ ಬೆಡ್ ಸಿಕ್ಕಿಲ್ಲ. ಇದಕ್ಕೆ ಏನದರೂ ಪರ್ಯಾಯ ವ್ಯವಸ್ಥೆ ಕುರಿತು ಚರ್ಚೆ ಮಾಡುತ್ತೇವೆ ಎಂದರು. ಆರೋಗ್ಯ ಕವಚ ಸೇವೆ ಗುಣಮಟ್ಟದ ವೃದ್ಧಿಯಲ್ಲಿ ಕುಂಠಿತವಾಗಿರೋದು ನಿಜ. ಈ ಸೇವೆಯಲ್ಲಿ ಸಾಕಷ್ಟು ಕುಂದುಕೊರತೆಗಳಿವೆ. ಲೋಪದೋಷಗಳನ್ನು ಸರಿಪಡಿಸಲು ಆರೋಗ್ಯ ಇಲಾಖೆ ಕಟಿಬದ್ಧವಾಗಿದೆ. 262 ಹೊಸ ಆಂಬ್ಯುಲೆನ್ಸ್ ಆರೋಗ್ಯ…
ಬೆಂಗಳೂರು:- ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಡ್ರಗ್ ಪೆಡ್ಲಿಂಗ್ನಲ್ಲಿ ತೊಡಗಿದ್ದ ವಿದೇಶಿ ಪ್ರಜೆ ಸೇರಿ ಮೂವರನ್ನು ಅರೆಸ್ಟ್ ಮಾಡಲಾಗಿದೆ. 50 ಲಕ್ಷ ಮೌಲ್ಯದ 180 ಗ್ರಾಂ ಎಂ.ಡಿ.ಎಂ.ಎ ಕ್ರಿಸ್ಟೆಲ್, 58 ಗ್ರಾಂ 150 ಎಕ್ಸ್ಟಸಿ ಪಿಲ್ಸ್ ಗಳು ಮತ್ತು 15 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಮಾರತ್ಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಬಂಧಿತರಾಗಿರುವ ಒರಿಸ್ಸಾ ಮೂಲದ ಇಬ್ಬರು ಆರೋಪಿ ಗಳು ಸುಮಾರು 6 ತಿಂಗಳ ಹಿಂದೆ ಬೆಂಗಳೂರಿಗೆ ಬಂದು ಫುಟ್ಪಾತ್ ಮೇಲೆ ತಳ್ಳುವ ಗಾಡಿಯಲ್ಲಿ ತಿಂಡಿ-ತಿನಿಸುಗಳ ವ್ಯಾಪಾರ ಮಾಡಿಕೊಂಡಿದ್ದರು. ಸುಲಭವಾಗಿ ಹಣ ಸಂಪಾದನೆ ಮಾಡುವ ಸಲುವಾಗಿ ಒರಿಸ್ಸಾದಿಂದ ಕಡಿಮೆ ಬೆಲೆಗೆ ಗಾಂಜಾವನ್ನು ಖರೀದಿ ಮಾಡಿ ಸ್ಥಳೀಯ ಪರಿಚಯಸ್ಥ ಗಿರಾಕಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಅಕ್ರಮ ಹಣ ಸಂಪಾದನೆಯಲ್ಲಿ ತೊಡಗಿದ್ದರು. ಇವರಿಂದ 15 ಕೆಜಿ ಗಾಂಜಾ ಮತ್ತಿತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪೀಣ್ಯ ದಾಸರಹಳ್ಳಿ:’ ಕೀರ್ತನೆಗಳ ಮೂಲಕ ಸಮಾಜದ ಓರೆಕೋರೆಗಳನ್ನು ತಿದ್ದಿ ಸನ್ಮಾರ್ಗದಲ್ಲಿ ನಡೆಯುವಂತೆ ಪ್ರೇರಣೆ ನೀಡಿದ ಕನಕದಾಸರು ನಮ್ಮೆಲ್ಲರಿಗೆ ದಾರಿ ದೀಪ’ ಎಂದು ಶಾಸಕ ಎಸ್. ಮುನಿರಾಜು ತಿಳಿಸಿದರು. ಶೆಟ್ಟಿಹಳ್ಳಿಯಲ್ಲಿ ಕ್ಷೇತ್ರದ ಬಿಜೆಪಿ ವತಿಯಿಂದ ಆಯೋಜಿಸಲಾದ ಕನಕದಾಸ ಜಯಂತಿ ಪ್ರಯುಕ್ತ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. ‘ಕನಕದಾಸರ ಸಂದೇಶಗಳು ಎಲ್ಲಾ ಕಾಲಕ್ಕೂ ಮೌಲ್ಯಯುತವಾದ ಸಂದೇಶ. ಯಾವುದೇ ಒಂದು ಜಾತಿ, ಮತ, ಪ್ರದೇಶ, ಭಾಷೆಗೆ ಸೀಮಿತವಾಗದ ವಿಶ್ವ ಮಾನವ ಪರಿಕಲ್ಪನೆಯ ಸಂದೇಶಗಳನ್ನು ನಾವೆಂದು ಮರೆಯಬಾರದು’ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರದ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಪಿ.ಎಚ್. ರಾಜು, ವಿನೋದ್ ಗೌಡ, ಬಿಜೆಪಿ ಮುಖಂಡರಾದ ಸುರೇಶ್ ಕೆಂಪೇಗೌಡ, ರಘು, ಕಣ್ಣಪ್ಪ ,ಮಂಜು ಭಾಷಣಿ ಹಾಗೂ ಸ್ಥಳೀಯ ಮುಖಂಡರು ಇದ್ದರು.
ಎಲ್ಲರೂ ಪ್ರತೀ ದಿನವನ್ನು ಆರಂಭಿಸೋದೇ ಒಂದು ಸ್ಪೂನ್ ತುಪ್ಪದಿಂದ. ಹೌದು, ಖಾಲಿ ಹೊಟ್ಟೆಗೆ ಒಂದು ಸ್ಪೂನ್ ತುಪ್ಪ ತಿಂದ್ರೆ ಏನಾಗುತ್ತದೆ? ನೋಡಿ.. ಆರೋಗ್ಯಕರ ಫ್ಯಾಟ್ಸ್ ಹಾಗೂ ಒಮೆಗಾ ೩ ಫೈಆಟಿ ಆಸಿಡ್ಸ್ ಇದೆ. ಇದರಿಂದಾಗಿ ನಿಮ್ಮ ಚರ್ಮದ ಆರೋಗ್ಯ ಹೆಚ್ಚಳವಾಗುತ್ತದೆ. ಶೀತ, ಗಂಟಲು ನೋವು ಎಲ್ಲಕ್ಕೂ ಇದು ಮದ್ದು. ಇಮ್ಯುನಿಟಿ ಹೆಚ್ಚು ಮಾಡುತ್ತದೆ. ಮೆದುಳಿನಲ್ಲಿ ಅರ್ಧಕ್ಕಿಂತ ಹೆಚ್ಚು ಪಟ್ಟು ಫ್ಯಾಟ್ ಇದೆ, ತುಪ್ಪ ಒಳ್ಳೆಯ ಫ್ಯಾಟ್ ಇದು ನಿಮ್ಮ ಮೆದುಳನ್ನು ಚುರುಕಾಗಿ ಇಡಿಸುತ್ತದೆ. ಜಾಯಿಂಟ್ ನೋವು, ಕ್ಯಾಲ್ಶಿಯಂ ಕೊರತೆ. ಗಟ್ಟಿಯಾದ ಮೂಳೆ ಹಾಗೂ ತೂಕ ಇಳಿಕೆಗೂ ಇದು ಸಹಕಾರಿ. ಕೂದಲಿನ ಆರೋಗ್ಯ ಹೆಚ್ಚಾಗುತ್ತದೆ. ರೂಟ್ ಗಟ್ಟಿಮಾಡಿ, ಡ್ಯಾಂಡ್ರಫ್ ದೂರ ಮಾಡುತ್ತದೆ. ಶೀತ, ಗಂಟಲು ನೋವು ಎಲ್ಲಕ್ಕೂ ಇದು ಮದ್ದು. ಇಮ್ಯುನಿಟಿ ಹೆಚ್ಚು ಮಾಡುತ್ತದೆ. ಕೂದಲಿನ ಆರೋಗ್ಯ ಹೆಚ್ಚಾಗುತ್ತದೆ. ರೂಟ್ ಗಟ್ಟಿಮಾಡಿ, ಡ್ಯಾಂಡ್ರಫ್ ದೂರ ಮಾಡುತ್ತದೆ.
ಬಳ್ಳಾರಿ,ನ.30: ಭಕ್ತ ಕನಕದಾಸರ ತಾತ್ವಿಕತೆಯ ಚಿಂತನೆ, ಸಂಗೊಳ್ಳಿ ರಾಯಣ್ಣನ ಧೈರ್ಯ ಹಾಗೂ ಇದೇ ಸಮುದಾಯದ ಮುಖ್ಯಮಂತ್ರಿ ಸಿದ್ದರಾಮಯ್ಯರ ಚಾಣಕ್ಯತನ ಮಾದರಿಯಾಗಿದ್ದು, ಮಹನೀಯರ ಆದರ್ಶ ನಮಗೆಲ್ಲ ಸ್ಫೂರ್ತಿಯಾಗಬೇಕು ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಾ.ರಾಜ್ ಕುಮಾರ್ ರಸ್ತೆಯ ರಾಘವ ಕಲಾ ಮಂದಿರದಲ್ಲಿ ಏರ್ಪಡಿಸಿದ್ದ ಸಂತ ಶ್ರೇಷ್ಠ ಕವಿ ಭಕ್ತ ಕನಕದಾಸ 536ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕನಕದಾಸರ ಆಧ್ಯಾತ್ಮಕ ವಿಷಯಗಳಿಂದ ಸಮಾಜದ ತಲ್ಲಣಕ್ಕೆ ಕಾರಣವಾಯಿತು. ಅದೇ ರೀತಿಯಾಗಿ ಸಂಗೋಳ್ಳಿ ರಾಯಣ್ಣನಂತಹ ಪರಾಕ್ರಮಿಯು ಸ್ವಾತಂತ್ರ್ಯ ಹೋರಾಟದಲ್ಲಿ ಧುಮುಕಿ ಯುದ್ಧಗಳನ್ನು ಎದುರಿಸಿದನು. ನಮ್ಮ ನಾಡಿನ ಮುಖ್ಯಮಂತ್ರಿಯವರು ಅದೇ ಸಮುದಾಯದವರಾಗಿದ್ದು, ನಾಡಿನ ಅಭಿವೃದ್ಧಿಗೆ ಒತ್ತು ನೀಡಿ, ಹಲವಾರು ಯೋಜನೆಗಳನ್ನು ರೂಪಿಸಿದ್ದಾರೆ. ಈ ಸಮುದಾಯದವರು, ಸರ್ಕಾರದ ಯೋಜನೆಗಳನ್ನು ಬಳಸಿಕೊಂಡು ಸಾಮಾಜಿಕ, ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು ಎಂದು ಹೇಳಿದರು. ಜಿಲ್ಲಾಧಿಕಾರಿ ಪ್ರಶಾಂತ್…
ಬಳ್ಳಾರಿ,ನ.30: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಗುರುವಾರ ಸಂತ ಶ್ರೇಷ್ಠ ಕವಿ ಭಕ್ತ ಕನಕದಾಸ ಜಯಂತ್ಯೋತ್ಸವದ ಮೆರವಣಿಗೆಯು ಅದ್ದೂರಿಯಾಗಿ, ಸಂಭ್ರಮದಿಂದ ನಡೆಯಿತು. ನಗರದ ಅಗ್ನಿಶಾಮಕ ದಳ ಕಚೇರಿ ಹತ್ತಿರ ಕನಕದಾಸ ವೃತ್ತದ ಭಕ್ತ ಕನಕದಾಸ ಅವರ ಪುತ್ಥಳಿಗೆ ಯುವ ಸಬಲೀಕರಣ, ಕ್ರೀಡೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಮಾಲಾರ್ಪಣೆ ಹಾಗೂ ಪುಷ್ಪಾರ್ಚನೆ ಮಾಡಿದರು. ಡಮರುಗ, ಡೊಳ್ಳು ಬಾರಿಸಿ ಸಂಭ್ರಮಿಸುವ ಮೂಲಕ ಅದ್ದೂರಿ ಮೆರವಣಿಗೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಮಹಾನಗರ ಪಾಲಿಕೆ ಉಪ ಮೇಯರ್ ಬಿ.ಜಾನಕಿ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಸೇರಿದಂತೆ ಮಹಾನಗರ ಪಾಲಿಕೆ ಸದಸ್ಯರು ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಕುರುಬ ಸಮಾಜದ ಮುಖಂಡರುಗಳು ಇದ್ದರು. ಮೆರವಣಿಗೆಯಲ್ಲಿ ವೀರಗಾಸೆ, ಡೊಳ್ಳು ಕುಣಿತ, ಕಹಳೆ ವಾದನ, ಗೊರವರ…
ಬಳ್ಳಾರಿ, ನ.30: ಅವಿಭಜಿತ ಬಳ್ಳಾರಿ ಜಿಲ್ಲೆಯಲ್ಲಿ ಹೆಚ್.ಐ.ವಿ.ಏಡ್ಸ್ ಸೋಂಕಿನಿಂದ ಈ ವರೆಗೆ 4218 ಜನರು ಸಾವನ್ನಪ್ಪಿದ್ದು. ಈಗ ಸೋಂಕಿತ 5030 ಜನರು ಏಆರ್ ಟಿ ಚಿಕಿತ್ಸೆ ಒಡೆಯುತ್ತಿದ್ದಾರೆ. ಆರೋಗ್ಯ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಇಂದು ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದ್ದಾರೆ. 2021 ರಿಂದ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಾ ಬಂದಿದ್ದು ಈಗ ರಾಜ್ಯದಲ್ಲಿ 11 ನೇ ಸ್ಥಾನದಲ್ಲಿದೆ. ಈ ವರ್ಷ “ಸಮುದಾಯಗಳು ಮುನ್ನಡೆಸಲಿ” ಎಂಬ ಘೋಷಣೆ ಹೆಚ್ ಐ ವಿ ಯನ್ನು ಶೂನ್ಯಕ್ಕೆ ತರಬೇಕೆಂಬ ನಿಟ್ಟನಲ್ಲಿ ಕಾರ್ಯಕ್ರಮಗಳನ್ನು ರೂಪಿಸುತ್ತಿದೆಂದು ತಿಳಿಸಿದರು. ಜಿಲ್ಲೆಯಲ್ಲಿ ಒಟ್ಟಾರೆ 10 ಇ.ಐ.ಡಿ ಕೇಂದ್ರಗಳಲ್ಲಿ, 2010 ರಿಂದ 2023 ಅಕ್ಟೋಬರ್ ವರೆಗೆ 696 ಮಕ್ಕಳಿಗೆ 6 ವಾರದ ಡಿ.ಬಿ.ಎಸ್ ಪರೀಕ್ಷೆಯನ್ನು ಮಾಡಿಸಲಾಗಿರುತ್ತದೆ. ಇವರಲ್ಲಿ 30 ಮಕ್ಕಳಿಗೆ ಹೆಚ್.ಐ.ವಿ ಸೋಂಕು ಇರುವುದು ಕಂಡು ಬಂದಿರುತ್ತದೆ. ಇಲ್ಲಿಯವರೆಗೆ 577 ಮಕ್ಕಳನ್ನು 18 ತಿಂಗಳ ನಂತರ ಹೆಚ್.ಐ.ವಿ ಪರೀಕ್ಷೆಗೆ ಒಳಪಡಿಸಲಾಗಿದ್ದು ಇವರಲ್ಲಿ ತಿಮಕ್ಕಳಿಗೆ ಜೆಟ್.ಐ.ವಿ ಇರುವುದು ದೃಡಪಟ್ಟಿರುತ್ತದೆಂದು ಹೇಳಿದ್ದಾರೆ. ಎ.ಆರ್.ಟಿ ಕೇಂದ್ರಗಳು: ಸೋಂಕಿತರಿಗೆ…
ಬೆಂಗಳೂರು: ರಾಜ್ಯದ ಜನರ ಅನುಕೂಲಕ್ಕಾಗಿ ಈ ವರ್ಷ ಹೊಸದಾಗಿ 188 ಇಂದಿರಾ ಕ್ಯಾಂಟೀನ್ಗಳನ್ನು ಆರಂಭಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಇಂದು ಶಾಸಕರ ಭವನದ ಆವರಣದಲ್ಲಿ ಸಂತ ಕನಕದಾಸರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ 225 ವಾರ್ಡ್ ಗಳಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಲಾಗುವುದು. ಇದಲ್ಲದೇ ಅಗತ್ಯ ಇರುವ ಕಡೆ ಕ್ಯಾಂಟೀನ್ ಆರಂಭಿಸಲಾಗುವುದು. ಇಂದಿರಾ ಕ್ಯಾಂಟೀನ್ಗೆ ಜಾಗದ ಕೊರತೆ ಇರುವ ಕಡೆ ಸಂಚಾರಿ ಕ್ಯಾಂಟೀನ್ಗಳನ್ನು ಸ್ಥಾಪಿಸಲಾಗುವುದು ಎಂದರು. ರಾಜ್ಯದ ಜನತೆಗೆ ಕನಕದಾಸ ಜಯಂತಿಯ ಶುಭಾಶಯ ಕೋರಿದ ಸಿಎಂ, ”ಕನಕದಾಸರು ಸಮಾಜ ಸುಧಾರಕರಾಗಿದ್ದರು. ಸಾಹಿತ್ಯದ ಮೂಲಕ ಮಾನವೀಯತೆ ಸಾರಿದ್ದರು.ವಿಶ್ವಮಾನವನ ಜಯಂತಿಯನ್ನು ಇಂದು ಸರ್ಕಾರ ಆಚರಿಸುತ್ತಿದೆ’ ಎಂದು ಹೇಳಿದರು.