Author: AIN Author

ಗಾಂಧೀನಗರ: ಗುಜರಾತ್‍ನ ಸೂರತ್ ಮೂಲದ  ವಜ್ರ ವ್ಯಾಪಾರಿ 11 ಕೋಟಿ ರೂ. ಮೌಲ್ಯದ ಕಿರೀಟವನ್ನು  ರಾಮಲಲ್ಲಾ ಮೂರ್ತಿಗೆ  ದೇಣಿಗೆ ನೀಡಿದ್ದಾರೆ. ಗ್ರೀನ್ ಲ್ಯಾಬ್ ಡೈಮಂಡ್ ಕಂಪನಿ ಮಾಲೀಕರಾದ ಮುಕೇಶ್ ಪಟೇಲ್ ದೇಣಿಗೆ ನೀಡಿರುವ ವ್ಯಕ್ತಿ. ಸೂರತ್‍ನಲ್ಲಿ ವಜ್ರ ವ್ಯಾಪಾರಿಯಾಗಿರುವ ಮುಕೇಶ್ ಅವರು ಪ್ರಭು ಶ್ರೀರಾಮನಿಗಾಗಿ 6 ಕೆ.ಜಿ ತೂಕದ ಚಿನ್ನ ಮತ್ತು ವಜ್ರಗಳಿಂದ ತಯಾರಿಸಿರುವ ಕಿರೀಟವನ್ನು ಕೊಡುಗೆಯಾಗಿ ನೀಡಿದ್ದಾರೆ. ಅಯೋಧ್ಯೆಯ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆಗೆ  ಇಡೀ ದೇಶವೇ ಸಾಕ್ಷಿಯಾಗಿತ್ತು. ಪ್ರಭು ಶ್ರೀರಾಮ ಚಿನ್ನದ ಅಭರಣಗಳಿಂದ ಕಂಗೊಳಿಸುತ್ತಿದ್ದನು. ಇದೇ ಹೊತ್ತಲ್ಲಿ ಸೂರತ್‍ನ  ವಜ್ರ ವ್ಯಾಪಾರಿ ನೀಡಿರುವ 11 ಕೋಟಿ ರೂಪಾಯಿ ಮೌಲ್ಯ ಬೆಲೆ ಬಾಳುವ ಚಿನ್ನ ಮತ್ತು ವಜ್ರಗಳಿಂದ ತಯಾರಿಸಿರುವ ಕಿರೀಟ ದಾನ ಮಾಡಿದ್ದಾರೆ . ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯ ಸಂದರ್ಭದಲ್ಲಿ ಕುಟುಂಬ ಸಮೇತರಾಗಿ ಮುಕೇಶ್ ಪಟೇಲ್ ಅಯೋಧ್ಯೆಗೆ ಆಗಮಿಸಿದ್ದರು. ಬಳಿಕ ಖುದ್ದಾಗಿ ಮಂದಿರದ ಪ್ರಧಾನ ಅರ್ಚಕರು ಮತ್ತು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಟ್ರಸ್ಟಿಗಳಿಗೆ ಸೂಕ್ಷ್ಮವಾಗಿ ರಚಿಸಲಾದ ಕಿರೀಟವನ್ನು ಹಸ್ತಾಂತರ ಮಾಡಿದ್ದಾರೆ. ಹಲವಾರು…

Read More

ಕಲಬುರಗಿ: ಲೋಕ ಚುನಾವಣೆಯಲ್ಲಿ ಬಿಜೆಪಿಗೆ ಸೆಡ್ಡು ಹೊಡಿಯಬೇಕೆಂದು ಸಂಕಲ್ಪ ಮಾಡಿರುವ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇವತ್ತು ಕಲಬುರಗಿಗೆ ಭೇಟಿ ನೀಡಲಿದ್ದು ಕೈ ಕಾರ್ಯಕರ್ತರ ಜೊತೆ ಮೀಟಿಂಗ್ ಮಾಡಲಿದ್ದಾರೆ. ವಿಶೇಷ ವಿಮಾನದಲ್ಲಿ ಕಲಬುರಗಿಗೆ ಆಗಮಿಸಲಿರುವ ಖರ್ಗೆ HKE ಏರ್ಪಡಿಸಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಇದೇವೇಳೆ ಕೈ ಮುಖಂಡರ ಜೊತೆ ಗೌಪ್ಯ ಮೀಟಿಂಗ್ ಮಾಡಲಿದ್ದಾರೆ ಎನ್ನಲಾಗಿದೆ..ಇಂದು ಕಲಬುರಗಿಯಲ್ಲೇ ವಾಸ್ತವ್ಯ ಹೂಡಲಿದ್ದು ನಾಳೆ ಡೆಹರಡೂನ್ ತೆರಳಲಿದ್ದಾರೆ.

Read More

ದೆಹಲಿ: ಜನವರಿ 22 ಅಯೋಧ್ಯೆಯಲ್ಲಿ ಶ್ರೀರಾಮ ಪ್ರಭುವಿನ ಪ್ರಾಣ ಪ್ರತಿಷ್ಠೆ ನೆರವೇರಿದೆ. ಕೋಟ್ಯಾಂತರ ಹಿಂದೂಗಳ ಕನಸನ್ನು ಪ್ರಧಾನಿ ಮೋದಿಯವರು ನೆರವೇರಿಸಿದ್ದು, ಶ್ರೀರಾಮ ಪ್ರಭು ಅಯೋಧ್ಯಾ ಅಧಿಪತಿಯಾಗಿ ನೆಲೆ ನಿಂತಿದ್ದಾನೆ. ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯ ವೇಳೆ ಗರ್ಭಗುಡಿಯಲ್ಲಿ ಐವರು ನಾಯಕರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು. ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್​​, ಉತ್ತರ ಪ್ರದೇಶದ ರಾಜ್ಯಪಾಲರು, ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್, ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹಾಗೂ ರಾಮ ಭೂಮಿ ಟ್ರಸ್ಟ್​ನ ಅಧ್ಯಕ್ಷರು ಪೂಜೆಯಲ್ಲಿ ಭಾಗಿಯಾಗಿದ್ದರು. ಈ ವೇಳೆ ಗರ್ಭಗುಡಿಯಲ್ಲಿ ರಾಮಲಲ್ಲಾ ಮೂರ್ತಿಗೆ ನೈವೇದ್ಯ ಸಮರ್ಪಣೆ ಮಾಡುತ್ತಿದ್ದಾಗ ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು ತಮ್ಮ ವಸ್ತ್ರದಿಂದ ಮುಖವನ್ನು ಮುಚ್ಚಿಕೊಂಡಿದ್ದರು. ಇದನ್ನು ನೋಡಿದ ಅನೇಕರಿಗೆ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಏಕೆ ಹೀಗೆ ಮುಖವನ್ನು ಮುಚ್ಚಿಕೊಂಡರು ಎಂಬ ಪ್ರಶ್ನೆ ಮೂಡಿತ್ತು. ಈ ಪ್ರಾಣ ಪ್ರತಿಷ್ಠೆ ವೇಳೆ ಗರ್ಭಗುಡಿಯೊಳಗೆ ಉಡುಪಿಯ ಪೇಜಾವರ ಮಠದ ಶ್ರೀ…

Read More

ವಿಜಯಪುರ: ಕಬ್ಬಿನ ಮಧ್ಯೆ ಅಕ್ರಮವಾಗಿ ಗಾಂಜಾ ಬೆಳೆದಿರುವ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ವಿಜಯಪುರ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. https://ainlivenews.com/congress-party-is-like-a-sea-hundreds-of-leaders-come-and-go-there-is-no-loss-dkshi/ 34 ವರ್ಷದ ದೊಂಡಿಬಾ ಜರಕ ಬಂಧಿತ ಆರೋಪಿ. ಇನ್ನೂ ಬಂಧಿತ ಆರೋಪಿಯಿಂದ 4,40,680 ಮೌಲ್ಯದ 76 ಕೆಜಿ 36 ಗ್ರಾಂ ಗಾಂಜಾವನ್ನು ಪೊಲೀಸರು ಜಪ್ತಿಗೈದಿದ್ದಾರೆ. ಈ ಕುರಿತು ವಿಜಯಪುರ ಗ್ರಾಮೀಣ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವಿಜಯಪುರದ ಎಸ್ ಪಿ ಋಷಿಕೇಶ ಸೋನಾವಣೆ ಅವರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ…

Read More

ಶಿವಮೊಗ್ಗ:  ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಘವೇಂದ್ರರನ್ನು ಗೆಲ್ಲಿಸಲು ಶ್ಯಾಮನೂರು ಕರೆ ನೀಡಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಶಾಸಕ ಶ್ಯಾಮನೂರು ಶಿವಶಂಕರಪ್ಪ  ಅಭಿವೃದ್ಧಿ ಕೆಲಸಗಳು ಶಿವಮೊಗ್ಗ ಜಿಲ್ಲೆಯಲ್ಲಿ ಆಗಿರುವುದನ್ನು ಗಮನಿಸಿ ಉತ್ತಮ ಸಂಸದರನ್ನು ಆಯ್ಕೆ ಮಾಡಿದ್ದೀರಿ, ಮುಂದೆಯೂ ಇವರನ್ನು ಆಯ್ಕೆ ಮಾಡಬೇಕಿರುವುದು ಸಾರ್ವಜನಿಕರ ಕರ್ತವ್ಯ ಎಂದಿದ್ದಾರೆ. ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚಿನ ಕೊಡುಗೆ ನೀಡಿರುವ ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ ಅವರನ್ನು ಗೆಲ್ಲಿಸಿ ಎಂದು ಹೇಳಿದರು. ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿರುವ ಶಾಮನೂರು ಶಿವಶಂಕರಪ್ಪ ಗುರು ಬಸವಶ್ರೀ ಪ್ರಶಸ್ತಿ ಪುರಸ್ಕಾರ ಸ್ವೀಕರಿಸಿ ಮಾತನಾಡಿದ ಶ್ಯಾಮನೂರು ಶಿವಮೊಗ್ಗದ ಬೆಕ್ಕಿನಕಲ್ಮಠದಲ್ಲಿ ನಡೆದ ಶರಣ ಸಾಹಿತ್ಯ ಸಮ್ಮೇಳನದಲ್ಲಿ ಹೇಳಿಕೆ ನೀಡಿದರು.

Read More

ಪಾಟ್ನ: ಬಿಹಾರ ಸಿಎಂ ನಿತೀಶ್ ಕುಮಾರ್ (Nitish Kumar) ಅವರು ಬಿಜೆಪಿಯ ಬೆಂಬಲದೊಂದಿಗೆ ಭಾನುವಾರ ಒಂಬತ್ತನೇ ಬಾರಿಗೆ ಮತ್ತೆ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ (ಜ.28 ರಂದು) ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬಿಜೆಪಿ 2 ಡಿಸಿಎಂ ಸ್ಥಾನಗಳನ್ನು ಪಡೆದುಕೊಳ್ಳುತ್ತವೆ ಎನ್ನಲಾಗಿದೆ. ಸಿಎಂ ನಿತೀಶ್‌ ಕುಮಾರ್‌ ಕಾಂಗ್ರೆಸ್-ಆರ್‌ಜೆಡಿ ಜೊತೆಗೆ ಇರುವ ಮೈತ್ರಿಕೂಟಕ್ಕೆ ವಿದಾಯ ಹೇಳಿ, ಬಿಜೆಪಿ ಜೊತೆ ಕೈಜೋಡಿಸಲಿದ್ದಾರೆ ಚರ್ಚೆ ನಡೆದಿತ್ತು. ಇದರ ಬೆನ್ನಲ್ಲೇ, ನಿತೀಶ್‌ ಬಿಜೆಪಿ-ಜೆಡಿಯು ಸರ್ಕಾರದ ಸಿಎಂ ಆಗಲಿದ್ದಾರೆ ಎಂದು ವರದಿಯಾಗಿದೆ ನಿತೀಶ್ ಕುಮಾರ್ ಅವರು ಶನಿವಾರ ಬೆಳಗ್ಗೆ 10 ಗಂಟೆಗೆ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸರ್ಕಾರದಲ್ಲಿ ಆಗಬಹುದಾದ ಬದಲಾವಣೆಯ ವರದಿಗಳ ನಡುವೆ ಬಿಹಾರದಲ್ಲಿ ಜಿಲ್ಲಾಧಿಕಾರಿಗಳ ದೊಡ್ಡ ಪ್ರಮಾಣದ ವರ್ಗಾವಣೆ ನಡೆಯುತ್ತಿದೆ. ಈ ಸಮಯದಲ್ಲಿ ಅಸೆಂಬ್ಲಿಯನ್ನು ವಿಸರ್ಜಿಸಲಾಗುವುದಿಲ್ಲ ಮತ್ತು ಮತದಾನವನ್ನು ನಡೆಸಲಾಗುವುದಿಲ್ಲ ಎನ್ನಲಾಗಿದೆ. ಬಿಹಾರದಲ್ಲಿ ಮುಂದಿನ ವರ್ಷ ಮತದಾನ ನಡೆಯಲಿದೆ. ಆದ್ದರಿಂದ ಎರಡೂ ಪಕ್ಷಗಳು ಅವಸರದಲ್ಲಿಲ್ಲ ಎಂಬುದು ಅರ್ಥವಾಗುವಂತಹದ್ದಾಗಿದೆ. ಏಪ್ರಿಲ್‌/ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯ…

Read More

ಮೈಸೂರು : ಬಾಲರಾಮನ ಮೂರ್ತಿ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್ ಹಾಗೂ ಕುಟುಂಬಸ್ಥರು ಮೈಸೂರು ರಾಜ ವಂಶಸ್ಥ ಯದುವೀ‌ರ್ ಒಡೆಯ‌ರ್ ಅವರನ್ನು ಭೇಟಿಯಾದರು. ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಿರುವ ಬಾಲರಾಮನ ಮೂರ್ತಿ ಕೆತ್ತನೆ ಮಾಡಿರುವ ಶಿಲ್ಪಿ ಅರುಣ್ ಯೋಗಿರಾಜ್ ನಿನ್ನೆ ಬೆಂಗಳೂರಿಗೆ ಆಗಮಿಸಿದ್ದರು. ಇಂದು ಮೈಸೂರಿಗೆ ವಾಪಸ್‌ ಆಗಿದ್ದಾರೆ. ಮೈಸೂರಿಗೆ ಬರುತ್ತಿದ್ದಂತೆ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅರುಣ್‌ ಯೋಗಿರಾಜ್‌, ನಾನು ನನ್ನ ಕೆಲಸವನ್ನು ಶ್ರದ್ಧೆಯಿಂದ ಮಾಡಿದೆ. ಅದಷ್ಟೇ ನನ್ನ ಕೈಯಲ್ಲಿ ಇದ್ದಿದ್ದು. ಆದರೆ, ದೇಶದ ಜನ, ಮೈಸೂರಿನ ಜನ ಸೇರಿದಂತೆ ಎಲ್ಲರಿಂದ ತುಂಬ ಪ್ರೀತಿ ಸಿಕ್ಕಿದೆ. ನಾನು ಮೈಸೂರಿಗೆ ಬಂದ ಕೂಡಲೇ ಯದುವೀರ ಒಡೆಯರ್‌ ಅವರನ್ನು ಭೇಟಿ ಮಾಡಿ ಬಂದೆ. ಕಾರಣ ಏನಂದ್ರೆ, ಮಹಾರಾಜರು ನಮ್ಮ ಮನೆತನಕ್ಕೂ ಗುರುಗಳಿಗೂ ಆಶ್ರಯ ಅವಕಾಶ ಕೊಟ್ಟಿದ್ದರು. ಮಹಾರಾಜರ ಮನೆತನವನ್ನು ನೆನಪಿಸಿಕೊಳ್ಳುವುದು ಮುಖ್ಯ, ಅದಕ್ಕಾಗಿ ಹೋಗಿದ್ದೆ. ಸುತ್ತೂರು ಸ್ವಾಮೀಜಿಗಳನ್ನೂ ಭೇಟಿ ಮಾಡಲಿದ್ದೇನೆ ಎಂದು…

Read More

ಬೆಂಗಳೂರು: ಕಾಂಗ್ರೆಸ್ (Congress) ಪಕ್ಷ ಸಮುದ್ರವಿದ್ದಂತೆ. ನೂರಾರು ನಾಯಕರು ಬರುತ್ತಾರೆ, ಹೋಗುತ್ತಾರೆ. ಯಾರೇ ಬರಲಿ, ಯಾರೇ ಹೋಗಲಿ ಪಕ್ಷಕ್ಕೆ ಅದರಿಂದ ನಷ್ಟವಾಗುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (DK Shivakumar) ಹೇಳಿದ್ದಾರೆ. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ (Jagadish Shettar)  ಅವರು ಬಿಜೆಪಿ (BJP) ಆಂತರಿಕ ವಿಚಾರದಿಂದ ಬೇಸತ್ತು ಆ ಪಕ್ಷದ ವಿರುದ್ಧ ದೊಡ್ಡ ಆರೋಪ ಮಾಡಿ ಕಾಂಗ್ರೆಸ್ ಸೇರಿದ್ದರು. ಅವರಿಗೆ ಪಕ್ಷದ ಟೆಕೆಟ್ ನೀಡಿದ್ದೆವು. 35 ಸಾವಿರ ಮತಗಳ ಅಂತರದಲ್ಲಿ ಸೋತಿದ್ದರು. ಆದರೂ ಅವರಿಗೆ ವಿಧಾನ ಪರಿಷತ್ತಿಗೆ ನಾಮನಿರ್ದೇಶನ ಮಾಡಿದ್ದೆವು. ಕಳೆದ 2-3 ತಿಂಗಳಿನಿಂದ ಬಿಜೆಪಿ ನಾಯಕರು ಅವರನ್ನು ಸಂಪರ್ಕ ಮಾಡುತ್ತಿದ್ದರು. ಮೊನ್ನೆ ಕೂಡ ಬಿಜೆಪಿ ಸೇರುವುದಿಲ್ಲ ಎಂದು ಅವರು ಹೇಳಿದ್ದರು. ಆದರೆ ಗುರುವಾರ ಏಕಾಏಕಿ ಪಕ್ಷ ತೊರೆದಿದ್ದಾರೆ ಎಂದರು ನಮ್ಮ ಪಕ್ಷ 136 ಸೀಟು ಗೆದ್ದಿದೆ. ನಮ್ಮ ತಪ್ಪಿನಿಂದ 6-7 ಸೀಟು ಸೋತಿದ್ದೇವೆ. ಈಗಲೂ ಬಹಳ ಮಂದಿ ನಮ್ಮ ಪಕ್ಷ ಸೇರಲು…

Read More

ಕೊಪ್ಪಳ:  ಗಂಗಾವತಿ ರೀಡ್ಸ್ ಸಂಸ್ಥೆಯ ಕಛೇರಿಯಲ್ಲಿ ಯುವತಿಯರಿಗೆ ಗ್ರಾಮೀಣ ಉದ್ಯಮಶೀಲತಾ ಅಭಿವೃದ್ಧಿ ತರಬೇತಿಯನ್ನು ರೀಡ್ಸ್ ಸಂಸ್ಥೆ ಕಾರ್ಯನಿರ್ವಾಹಕ ನಿರ್ದೇಶಕರಾದ ಸಿ .ತಿಪ್ಪೇಶಪ್ಪ ಸರ್ ರವರು ತರಬೇತಿ ನೀಡಿದರು. ತರಬೇತಿಯಲ್ಲಿ ವ್ಯಾಪಾರದ ಗುಣಲಕ್ಷಣಗಳ ಬಗ್ಗೆ ತಿಳಿಸಿದರು. 1) ಕಡಿಮೆ ಬಂಡವಾಳದಲ್ಲಿ ಹೆಚ್ಚು ಆದಾಯವನ್ನು ಮಾಡುವ ಬಗ್ಗೆ. 2) ವ್ಯಾಪಾರದಲ್ಲಿ ಹೊಸತನವನ್ನು ಬಳಸಿಕೊಂಡು ಆದಾಯವನ್ನು ಹೆಚ್ಚಿಸುವುದು. 3) ಅನ್ವೇಷಣೆ. 4) ವ್ಯಾಪಾರದಲ್ಲಿ ತಾಳ್ಮೆ ಮತ್ತು ಉತ್ತಮವಾದ ಮಾತನಾಡುವ ಕೌಶಲ್ಯ ಗಳನ್ನು ಹೊಂದಿದರೆ ಮಾತ್ರ ಆರ್ಥಿಕವಾಗಿ ಅಭಿವೃದ್ಧಿ ಹೊಂದಬಹುದು ಎಂದು ತರಬೇತಿ ನೀಡಿದರು. 5) ನಾವು ಮಾಡುವ ವೃತ್ತಿಯನ್ನು ಗೌರವಿಸಬೇಕು. 6) ಸ್ವಪ್ರೇರಣೆ ಇರಬೇಕು  ಮತ್ತು ಸತತವಾಗಿ ಪ್ರಯತ್ನ ಪಟ್ಟರೆ ಯಶಸ್ಸು ಜೀವನದಲ್ಲಿ ಸಿಗುತ್ತದೆ ಎಂದು ತಿಳಿಸಿದರು. ಕೊಪ್ಪಳ ತಾಲ್ಲೂಕ ಮತ್ತು ಗಂಗಾವತಿ ತಾಲ್ಲೂಕು ಯುವತಿಯರಿಗೆ ಮತ್ತು ರೀಡ್ಸ್ ಸಿಬ್ಬಂದಿಗಳು ಸೇರಿ ಒಟ್ಟು 32 ಜನ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದರು.

Read More

ಬೆಂಗಳೂರು: ರಾಜ್ಯದ ಕಾಂಗ್ರೆಸ್‌ ಸರ್ಕಾರ ಕೊನೆಗೂ ನಿಗಮ-ಮಂಡಳಿಗಳ ನೇಮಕದ ಪಟ್ಟಿಯನ್ನು ಬಿಡುಗಡೆ ಮಾಡಿದೆ.ಎನ್.ಎ.ಹ್ಯಾರಿಸ್, ಕೆಎಂ ಶಿವಲಿಂಗೇಗೌಡ, ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 36 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಇಲ್ಲಿದೆ ನಿಗಮ ಮಂಡಳಿ ಅಧಿಕಾರಿಗಳ ಪಟ್ಟಿ ಹಂಪನಗೌಡ ಬಾದರ್ಲಿ: ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ಅಪ್ಪಾಜಿ ಸಿ.ಎಸ್.ನಾಡಗೌಡ: ಕೆಎಸ್​ಡಿಎಲ್ ರಾಜು ಕಾಗೆ: ಹುಬ್ಬಳ್ಳಿ ಸಾರಿಗೆ ನಿಗಮ (ವಾಯವ್ಯ ಸಾರಿಗೆ ನಿಗಮ) ಹೆಚ್.ವೈ.ಮೇಟಿ: ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರ ಎಸ್.ಆರ್.ಶ್ರೀನಿವಾಸ; ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಬಸವರಾಜ ನೀಲಪ್ಪ ಶಿವಣ್ಣನವರ್: ಅರಣ್ಯ ಅಭಿವೃದ್ಧಿ ನಿಗಮ ಬಿ.ಜಿ.ಗೋವಿಂದಪ್ಪ: ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಹೆಚ್.ಸಿ.ಬಾಲಕೃಷ್ಣ: ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ ಜಿ.ಎಸ್.ಪಾಟೀಲ್: ಖನಿಜ ಅಭಿವೃದ್ಧಿ ನಿಗಮ ನಿಯಮಿತ ಎನ್.ಎ.ಹ್ಯಾರಿಸ್: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕೌಜಲಗಿ ಮಹಾಂತೇಶ್ ಶಿವಾನಂದ: ಹಣಕಾಸು ಸಂಸ್ಥೆ ಸಿ.ಪುಟ್ಟರಂಗಶೆಟ್ಟಿ: ಮೈಸೂರು ಸೇಲ್ಸ್ ಇಂಟರ್​ನ್ಯಾಷನಲ್ ಲಿಮಿಟೆಡ್ ಬೀಳಗಿ ಶಾಸಕ ಜೆ.ಟಿ.ಪಾಟೀಲ್: ಹಟ್ಟಿ ಚಿನ್ನದ ಗಣಿ ರಾಜಾ ವೆಂಕಟಪ್ಪ…

Read More