ಚಂಡೀಗಢ: ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ತನ್ನ ಟ್ರಕ್ (Truck) ಅನ್ನು ರೈಲ್ವೇ ಹಳಿ (Railway Track) ಮೇಲೆ ಬಿಟ್ಟಿದ್ದು, ಅದೇ ಮಾರ್ಗವಾಗಿ ಆಗಮಿಸುತ್ತಿದ್ದ ರೈಲಿನ ಲೋಕೋ ಪೈಲಟ್ ಸಮಯಪ್ರಜ್ಞೆಯಿಂದಾಗಿ ಭಾರೀ ದುರಂತವೊಂದು ತಪ್ಪಿರುವ ಘಟನೆ ಪಂಜಾಬ್ನ (Punjab) ಲೂಧಿಯಾನಾದಲ್ಲಿ (Ludhiana) ನಡೆದಿದೆ. ರಾತ್ರಿ ಟ್ರಕ್ ಚಾಲಕನೊಬ್ಬ ಕುಡಿದ ನಶೆಯಲ್ಲಿ ಟ್ರಕ್ ಅನ್ನು ಲೂಧಿಯಾನಾ-ದೆಹಲಿ ರೈಲ್ವೆ ಹಳಿಯಲ್ಲಿ ಓಡಿಸಿದ್ದಾನೆ. ಆತ ಶೇರ್ಪುರದಿಂದ ಲೂಧಿಯಾನ ರೈಲ್ವೆ ನಿಲ್ದಾಣದ ಕಡೆಗೆ ಹೋಗಿದ್ದು, ಈ ವೇಳೆ ಟ್ರಕ್ ಹಳಿಯ ಮೇಲೆ ಸಿಲುಕಿಕೊಂಡಿದೆ ಎಂದು ಸರ್ಕಾರಿ ರೈಲ್ವೆ ಪೊಲೀಸ್ (GRP) ತನಿಖಾಧಿಕಾರಿ ಜಸ್ವಿರ್ ಸಿಂಗ್ ಹೇಳಿದ್ದಾರೆ. ಟ್ರಕ್ ರೇಲ್ವೆ ಹಳಿಯಲ್ಲಿ ಸಿಲುಕಿಕೊಂಡ ಬಳಿಕ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಆದರೆ ಕೆಲವೇ ನಿಮಿಷಗಳಲ್ಲಿ ಅದೇ ಮಾರ್ಗವಾಗಿ ರೈಲೊಂದು ಆಗಮಿಸಿದ್ದು, https://ainlivenews.com/do-you-know-which-are-the-most-visited-websites-by-indians/ ಅದೃಷ್ಟವಶಾತ್ ಭಾರೀ ದುರಂತ ತಪ್ಪಿದೆ. ಈ ವೇಳೆ ಹಳಿಯ ಮೇಲೆ ಟ್ರಕ್ ನಿಂತಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣ ರೈಲ್ವೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಇದನ್ನು ತಿಳಿದ ಲೋಕೋ ಪೈಲಟ್ ಟ್ರಕ್…
Author: AIN Author
ಬೆಂಗಳೂರು:- ಕಾಂಗ್ರೆಸ್ ಸರ್ಕಾರದಲ್ಲೂ ಭ್ರಷ್ಟಾಚಾರ ತಾಂಡವ ವಾಡುತ್ತಿದೆ ಎಂದು ನ್ಯಾಯಮೂರ್ತಿ ಎಚ್ ಎನ್ ನಾಗಮೋಹನ್ ದಾಸ್ ಆಯೋಗಕ್ಕೆ ಕೆಂಪಣ್ಣ ದೂರು ನೀಡಿದ್ದಾರೆ. ಕೆಲವು ಇಲಾಖೆಗಳಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕೆ ಬಂದಿಲ್ಲ ಎಂಬುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೂ ತರಲಾಗಿತ್ತು. ಹೆಚ್ಚು ಭ್ರಷ್ಟಾಚಾರ ಇರುವ ಕೆಲವು ಇಲಾಖೆಗಳ ಕುರಿತು ಆಯೋಗಕ್ಕೆ ಸಲ್ಲಿಸಿರುವ ದೂರಿನಲ್ಲಿ ಮಾಹಿತಿ ನೀಡಿದ್ದೇವೆ. ಹಿಂದೆ ನಡೆದಿರುವ ಭ್ರಷ್ಟಾಚಾರದ ತನಿಖೆಯ ಜತೆಯಲ್ಲೇ ಈಗ ನಡೆಯುತ್ತಿರುವ ಅಕ್ರಮಗಳನ್ನೂ ನಿಯಂತ್ರಿಸುವಂತೆ ಆಯೋಗಕ್ಕೆ ಮನವಿ ಮಾಡಿದ್ದೇವೆ’ ಎಂದರು., ಗುತ್ತಿಗೆದಾರರ ಸಂಘದ ನಿಯೋಗವು ಮಂಗಳವಾರ ಆಯೋಗಕ್ಕೆ ದೂರು ಸಲ್ಲಿಸಿದೆ. ಅದನ್ನು ಇನ್ನೂ ಪರಿಶೀಲಿಸಿಲ್ಲ. ಹೀಗಾಗಿ ದೂರಿನಲ್ಲಿ ಏನು ಉಲ್ಲೇಖಿಸಿದ್ದಾರೆ ಎಂಬುದು ಇನ್ನೂ ತಿಳಿದಿಲ್ಲ’ ಎಂದು ಎಚ್.ಎನ್. ನಾಗಮೋಹನ್ ದಾಸ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಬುಧವಾರ ನಡೆದ ಪೂಜಾ ಗಾಂಧಿ ಅವರ ಅದ್ದೂರಿ ಮದುವೆಗೆ ಆಗಮಿಸಿದ್ದ ನಟಿ ಸಂಜನಾ ಗಲ್ರಾನಿ, ಪೂಜಾ ಜೊತೆಗೆ ಮಾಡಿಕೊಂಡಿದ್ದ ಜಗಳವನ್ನು ನೆನಪು ಮಾಡಿಕೊಂಡಿದ್ದಾರೆ. ನಾವಿಬ್ಬರೂ ‘ದಂಡುಪಾಳ್ಯ’, ‘ದಂಡುಪಾಳ್ಯ 2’ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದೆವು. ಆಗ ನಮ್ಮಿಬ್ಬರಿಗೂ ತುಸು ಜಗಳವಾಗಿತ್ತು, ಅದು ಕೋಳಿ ಜಗಳ ಅಷ್ಟೆ. ಇಬ್ಬರು ಜಡೆಗಳನ್ನು ಒಂದೆಡೆ ಹಾಕಿದಾಗ ಆಗುವ ಸಾಮಾನ್ಯ ಜಗಳ ಅದು. ಆದರೆ ನಮ್ಮಿಬ್ಬರ ಮನಸ್ಸಿನಲ್ಲಿ ದ್ವೇಷ ಇಲ್ಲ. ಪೂಜಾ ಗಾಂಧಿಗೆ ಒಳ್ಳೆಯದಾಗಬೇಕು, ನನ್ನಂತೆ ಅವರಿಗೂ ಮುದ್ದಾದ ಮಗುವಾಗಬೇಕು ಎಂದು ಹಾರೈಸಿದರು. ಇನ್ನೂ ನಟಿ ಪೂಜಾ ಗಾಂಧಿ ಇಂದು ಯಲಹಂಕದಲ್ಲಿ ಉದ್ಯಮಿ ವಿಜಯ್ ಘೋರ್ಪಡೆ ಅವರೊಟ್ಟಿಗೆ ಮಂತ್ರ ಮಾಂಗಲ್ಯ ವಿಧಾನದಲ್ಲಿ ವಿವಾಹವಾಗಿದ್ದಾರೆ. ವಿವಾಹ ಕಾರ್ಯಕ್ಕೆ ಕನ್ನಡ ಚಿತ್ರರಂಗದ ಹಲವು ಗಣ್ಯರು ಆಗಮಿಸಿದ್ದರು
ಮಹಿಳೆಯರು ತುಟಿಗಳ ಕುರಿತಾಗಿ ಹೆಚ್ಚಿನ ಕಾಳಜಿಯನ್ನು ವಹಿಸುತ್ತಾರೆ. ಕೆಲವೊಮ್ಮೆ ಒಣಗಿದ ತುಟಿ, ತುಟಿಯ ಚರ್ಮ ಕಿತ್ತು ಬರುವ ಸಮಸ್ಯೆ ಹೆಚ್ಚಾಗಿ ಕಾಡುತ್ತದೆ. ತುಟಿ ಒಣಗಲು ಮತ್ತು ಚರ್ಮ ಕಿತ್ತುಬರಲು ಕಾರಣ ಮತ್ತು ಪರಿಹಾರವೇನು ಇಲ್ಲಿದೆ ಮಾಹಿತಿ. ತುಟಿಗಳು ಒಣಗುವುದು ಚಳಿಗಾಲದಲ್ಲಿ ಮಾತ್ರ ಎನ್ನುವ ಭಾವನೆ ತಪ್ಪು. ಬೇಸಿಗೆ ಕಾಲದಲ್ಲಿಯೂ ತುಟಿ ಡ್ರೈ ಆಗುತ್ತೆ. ತುಟಿಯ ಚರ್ಮವು ದೇಹದ ಇತರರ ಭಾಗಗಳ ಚರ್ಮಕ್ಕಿಂತ ತೆಳ್ಳಗೆ ಮತ್ತು ಮೃದುವಾಗಿರುತ್ತದೆ. ಹಾಗಾಗಿ ತುಟಿಯ ಚರ್ಮದ ಕುರಿತಾಗಿ ವಿಶೇಷ ಕಾಳಜಿಯನ್ನು ವಹಿಸಬೇಕಾಗುತ್ತದೆ. ತುಟಿಗಳಲ್ಲಿ ಕಡಿಮೆ ಪ್ರಮಾದ ತೈಲ ಗ್ರಂಥಿಗಳಿರುತ್ತವೆ. ಶೀತ, ಶುಷ್ಕಗಾಳಿ, ತುಟಿಯುನ್ನು ಒಣಗುವಂತೆ ಮಾಡುತ್ತದೆ. ಇದರಿಂದ ತುಟಿಯ ಚರ್ಮ ಒಣಗಿ ಸಿಪ್ಪೆಯಂತಾಗಿ ಕಿತ್ತು ಬರುತ್ತದೆ. ಚಳಿಗಾಲದಲ್ಲಿ ಹೆಚ್ಚಾಗಿ ತುಟಿಗಳು ಬಿರುಕು ಬಿಡುವುದು, ಚಪ್ಪಟೆಯಂತಾಗುವುದು ಸಹಜವಾಗಿದೆ. ಚಳಿಗಾಲದಲ್ಲಿ ತುಟಿ ಒಣಗಿದಂತಾಗಿ ಚರ್ಮ ಕಿತ್ತು ಬರುವುದು ಮಹಿಳೆಯರಿಗರೆ ಕಿರಿಕಿರಿಯನ್ನು ಉಂಟುಮಾಡುತ್ತದೆ. ಹೊರಗೆ ಹೋಗುವಾಗ ಮಹಿಳಿಯರು ಟೈಟಾನಿಯಂ ಡೈ ಆಕ್ಸೈಡ್ ಮತ್ತು ಜೆನಿಕ್ ಆಕ್ಸೈಡ್ ಅಂಶವನ್ನು ಹೊಂದಿರುವ ಸನ್ಸ್ಕ್ರೀನ್ ಬಳಕೆಯನ್ನು…
ತಲೆಗೂದಲು ತುಂಬಾ ನಯವಾಗಿರಬೇಕು ಅನ್ನೋದು ಎಲ್ಲಾ ಹುಡುಗಿಯರ ಆಸೆಯಾಗಿರುತ್ತೆ. ಹೀರೋಯಿನ್ಗಳ ಸಾಫ್ಟ್&ಸ್ಲೀಕ್ ಕೂದಲು ನೋಡಿದಾಗ ಅಯ್ಯೋ ಅಂಥ ಕೂದಲು ನಮಗಿಲ್ವಲ್ಲಾ ಅಂತಾನೂ ಅನ್ನಿಸುತ್ತೆ. ಅದಕ್ಕೆಲ್ಲಾ ಹಣ ಖರ್ಚು ಮಾಡ್ಬೇಕು ಅಂತ ವರಿ ಮಾಡ್ಬೇಡಿ. ಮನೆಯಲ್ಲೇ ಸುಲಭವಾಗಿ ಸಿಗೋ ಕೆಲವು ಸಾಮಗ್ರಿಗಳಿಂದ ಸಾಫ್ಟ್ ಕೂದಲು ನಿಮ್ಮದಾಗಿಸಿಕೊಳ್ಳಬಹುದು. ಇದಕ್ಕೆ ಸ್ವಲ್ಪ ಸಮಯ ಮೀಸಲಿಡಬೇಕು ಅಷ್ಟೇ. ಆ ಟಿಪ್ಸ್ ಇಲ್ಲಿದೆ ನೋಡಿಗುಲಾಬಿ ದಳ- ಕೊಬ್ಬರಿ ಎಣ್ಣೆ ಗುಲಾಬಿಯನ್ನ ಅಲಂಕಾರಕ್ಕೆ, ಮುಡಿದುಕೊಳ್ಳೋಕೆ ಬಳಸೋ ಜೊತೆಗೆ ಅದರಿಂದ ನಿಮ್ಮ ಕೂದಲ ಆರೋಗ್ಯವನ್ನೂ ಕಾಪಾಡಿಕೊಳ್ಳಬಹುದು. ಇದಕ್ಕೆ ನೀವು ಕಷ್ಟನೂ ಪಡಬೇಕಿಲ್ಲ. ತಲೆಗೆ ಎಣ್ಣೆ ಹಚ್ಚುವಾಗೆಲ್ಲಾ ಈ ಟಿಪ್ಸ್ ಫಾಲೋ ಮಾಡಿದ್ರೆ ಸಾಕು. ಕೊಬ್ಬರಿ ಎಣ್ಣೆಯನ್ನ ಸ್ವಲ್ಪ ಬಿಸಿ ಮಾಡಿ(ಸ್ವಲ್ಪ ಬಿಸಿಯಾದ್ರೆ ಸಾಕು, ಹೊಗೆ ಬರುವಂತೆ ಕಾಯಿಸಬಾರದು) ಅದಕ್ಕೆ ಗುಲಾಬಿ ದಳಗಳನ್ನ ಹಾಕಿ. ಹೀಗೆ ಮಾಡಿದಾಗ ನೊರೆ ಬರುತ್ತದೆ. ಎಣ್ಣೆ ತಣ್ಣಗಾದ ನಂತರ ಗುಲಾಬಿ ದಳಗಳನ್ನ ಕಿವುಚಿ ತೆಗೆಯಿರಿ. ನಂತರ ಎಣ್ಣೆಯನ್ನ ತಲೆಗೆ ಸಂಪೂರ್ಣವಾಗಿ ಹಚ್ಚಿ ಮಸಾಜ್ ಮಾಡಿ. 3 ಗಂಟೆಗಳ…
ಬೆಂಗಳೂರು:- ರಾಜ್ಯದ ಹಲವೆಡೆ ಇಂದು ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆ ಮಳೆಯಾಗಿದೆ, ಕರಾವಳಿಯಲ್ಲಿ ಒಣಹವೆ ಇತ್ತು. ಚಾಮರಾಜನಗರದಲ್ಲಿ 17.3 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದ್ದು, ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಎಚ್ಎಎಲ್ನಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಗುಜರಾತ್ ಟೈಟನ್ಸ್ ತಂಡ ತೊರೆದ ಹಾದಿಕ್ ಪಾಂಡ್ಯ ಮರಳಿ ಮುಂಬೈ ಇಂಡಿಯನ್ಸ್ ಬಳಗ ಸೇರಿಕೊಂಡಿದ್ದಾರೆ. ಇದೀಗ 5 ಬಾರಿಯ ಚಾಂಪಿಯನ್ಸ್ ಮುಂಬೈ ಫ್ರಾಂಚೈಸಿಯ ಸ್ಟಾರ್ ಬೌಲರ್ ಜಸ್ಪ್ರೀತ್ ಬುಮ್ರಾ ಅವರ ನಡೆ ಕುತೂಹಲ ಕೆರಳಿಸಿದೆ. ಸೋಷಿಯಲ್ ಮೀಡಿಯಾ ವೇದಿಕೆ ಇನ್ಸ್ಟಾಗ್ರಾಮ್ನಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಅನ್ ಫಾಲೋ ಮಾಡಿರುವ ಬುಮ್ರಾ, ತಮ್ಮ ಇನ್ಸ್ಟಾ ಸ್ಟೋರಿಯಲ್ಲಿ ಕೆಲವೊಮ್ಮೆ ಮೌನವೇ ಎಲ್ಲದಕ್ಕೂ ಉತ್ತರ ಎಂದು ಬರೆದುಕೊಂಡಿದ್ದಾರೆ. ಇದರ ಬೆನ್ನಲ್ಲೇ ಸೋಷಿಯಲ್ ಮೀಡಿಯಾಗಳಲ್ಲಿ ಹಸಿಬಿಸಿ ಚರ್ಚೆ ಶುರುವಾಗಿದ್ದು, ಜಸ್ಪ್ರೀತ್ ಬುಮ್ರಾ ಟ್ರೇಡಿಂಗ್ ವಿಂಡೋ ಮೂಲಕ ಬೇರೆ ತಂಡ ಸೇರುವ ತಯಾರಿಯಲ್ಲಿದ್ದಾರೆ ಎಂದು ವರದಿಗಳು ಆಗಿವೆ. ಅಂದಹಾಗೆ ಮುಂಬೈ ಇಂಡಿಯನ್ಸ್ ತಂಡ 2 ವರ್ಷಗಳ ಬಳಿಕ ಮತ್ತೆ ಹಾರ್ದಿಕ್ ಪಾಂಡ್ಯ ಅವರ ಸೇವೆಯನ್ನು ತನ್ನದಾಗಿಸಿಕೊಂಡಿದೆ. ಸ್ಟಾರ್ ಆಲ್ರೌಂಡರ್ ತಾವು ಇಟ್ಟ ಬೇಡಿಕೆಗಳನ್ನು ಗುಜರಾತ್ ಟೈಟನ್ಸ್ ಪೂರೈಸದೇ ಇದ್ದ ಕಾರಣಕ್ಕೆ ತಂಡ ಬಿಟ್ಟು ಹೊರಬಂದು ಮುಂಬೈ ಬಳಗ ಸೇರಿದ್ದಾರೆ. ಪಾಂಡ್ಯ ಇಟ್ಟಿರುವ ಎಲ್ಲ ಬೇಡಿಕೆಗಳನ್ನು ಪೂರೈಸುವ ಭರವಸೆ ನೀಡಿ…
ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಹಲವೆಡೆ ಇಂದು ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ. ಬೆಂಗಳೂರಿನ ಉತ್ತರ ಭಾಗದ ಹಲವೆಡೆ ಇಂದು ವಿದ್ಯುತ್ ವ್ಯತ್ಯಯವಾಗಲಿದೆ. ಇಂದು ಬೆಳಗ್ಗೆ 10.30ರಿಂದ ಮಧ್ಯಾಹ್ನ 3.30ರವರೆಗೆ ವಿದ್ಯುತ್ ಕಡಿತಗೊಳ್ಳಲಿದೆ. ಸಹಕಾರನಗರ ಎ, ಬಿ, ಡಿ, ಇ, ಎಫ್ ಮತ್ತು ಜಿ ಬ್ಲಾಕ್, ಅಮೃತಹಳ್ಳಿ, ತಲಕಾವೇರಿ ಲೇಔಟ್, ಬಿಜಿಎಸ್ ಲೇಔಟ್, ನವ್ಯನಗರ, ಜಿಕೆವಿಕೆ ಲೇಔಟ್, ಸಂಪಿಗೆಹಳ್ಳಿ, ಅಗ್ರಹಾರ ಗ್ರಾಮ, ವಿಧಾನಸೌಧ ಲೇಔಟ್, ಸಾಯಿಬಾಬಾ ಲೇಔಟ್, ಕೆಂಪಾಪುರ, ಟೆಲಿಕಾಂ ಲೇಔಟ್, ಸಿಂಗಹಳ್ಳಿ 2ನೇ ಹಂತ, ವೆಂಕಟೇಶ್ವರನಗರ, ಕಳ್ಳಿಪಾಳ್ಯ, ಅತ್ತೂರು ಲೇಔಟ್, ತಿರುಮನಹಳ್ಳಿ, ಯಶೋಧಾ ನಗರ, ಗೋಪಾಲಪ್ಪ ಲೇಔಟ್, ಆರ್ಎಂಝಡ್ ಅಜೂರ್ ಬಡಾವಣೆ, ಬ್ರಿಗೇಡ್ ಕ್ಯಾಲಾಡಿಯಂ ಸುತ್ತಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಹೊನ್ನಾವರ, ಇಸ್ತೂರು, ಗಂಡರಗುಳಿಪುರ, ಸಿಂಪಾಡಿಪುರ, ಹೊನ್ನದೇವಪುರ, ಕೋಡಿಹಳ್ಳಿ, ಮಧುರೆ, ಬೀರಯ್ಯನಪಾಳ್ಯ, ಹೊಸಪಾಳ್ಯ, ಮಲ್ಲುಹಳ್ಳಿ, ಕಾಡನೂರು, ಮಡುಗೊಂಡನಹಳ್ಳಿ, ಮಲ್ಲಪಾಡಿಗಟ್ಟ, ತಿಮ್ಮಸಂದ್ರ, ವಡ್ಡಗೆರೆ, ಪುರುಷನಹಳ್ಳಿ, ಆಲೇನಹಳ್ಳಿ, ದ್ಯಾನಬಾವನಹಳ್ಳಿ, ದ್ಯಾನಬಾಳವನಹಳ್ಳಿ , LM ವಿಂಡ್, ಸೋಂಪುರ ಕೈಗಾರಿಕಾ ಪ್ರದೇಶ, ಭಾರತೀಪುರ…
ನ್ಯೂಯಾರ್ಕ್: ಅಮೆರಿಕಾದ ನ್ಯೂಯಾರ್ಕ್ನ ಗುರುದ್ವಾರದಲ್ಲಿ ಭಾರತೀಯ ರಾಯಭಾರಿ ಅಧಿಕಾರಿ ಸಂಧು ಅವರ ಮೇಲೆ ಖಲಿಸ್ತಾನಿ ಪರವಾದಿಗಳು ಹಲ್ಲೆ ನಡೆಸಿದ್ದಾರೆ. ತರಂಜಿತ್ ಸಿಂಗ್ ಸಂಧು ಅವರು ನ್ಯೂಯಾರ್ಕ್ನ ಲಾಂಗ್ ಐಲ್ಯಾಂಡ್ನಲ್ಲಿರುವ ಹಿಕ್ಸ್ವಿಲ್ಲೆ ಗುರುದ್ವಾರಕ್ಕೆ ಭೇಟಿ ನೀಡುತ್ತಿದ್ದಾಗ ಈ ಘಟನೆ ನಡೆದಿದೆ. ತರಂಜಿತ್ ಸಿಂಗ್ ಸಂಧು ಅವರು ಗುರುದ್ವಾರಕ್ಕೆ ಪ್ರಾರ್ಥನೆ ಸಲ್ಲಿಸಲು ಬಂದಿದ್ದರು ಎಂದು ಹೇಳಲಾಗಿದೆ. ಈ ಘಟನೆಯ ಬಗ್ಗೆ ಸಾಮಾಜಿಕ ಜಾಲತಾಣಲದಲ್ಲಿ ವೈರಲ್ ಆಗಿದೆ. ಭಾರತ ಉಗ್ರರ ಪಟ್ಟಿಯಲ್ಲಿದ್ದ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಹಾಗೂ ಗುರುಪತ್ವಂತ್ ಸಿಂಗ್ ಪನ್ನುನ್ ಅವರ ಬಗ್ಗೆ ಭಾರತ ಸರ್ಕಾರದ ವಿರೋಧಿ ನೀತಿ ಬಗ್ಗೆ ಅಸಮಾಧನಗೊಂಡಿರುಬ ಖಲಿಸ್ತಾನಿ ಪರವಾದಿಗಳು ಈ ರೀತಿಯಲ್ಲಿ ನಡೆದುಕೊಂಡಿದ್ದಾರೆ ಎಂದು ಹೇಳಲಾಗಿದೆ. https://ainlivenews.com/do-you-know-which-are-the-most-visited-websites-by-indians/ ಗುರುದ್ವಾರದ ಆವರಣದ ಬಳಿ ಭಾರತೀಯ ರಾಯಭಾರಿ ಅಧಿಕಾರಿ ತರಂಜಿತ್ ಸಿಂಗ್ ಸಂಧು ಅವರ ಕಾರು ಪ್ರವೇಶಿಸುತ್ತಿದ್ದಂತೆ ಒಬ್ಬ ವ್ಯಕ್ತಿ ಖಲಿಸ್ತಾನಿ ಧ್ವಜವನ್ನು ಹಿಡಿದುಕೊಂಡು ಅವರ ಮುಂದೆ ಪ್ರತಿಭಟನೆ ಮಾಡಿದ್ದಾನೆ. ಇದರ ಜತೆಗೆ ಅವರ ಮೇಲೆ ದಾಳಿ ಮಾಡಲು ಮುಂದಾಗಿದ್ದಾರೆ.…
ದುಬೈ: 2025ರಲ್ಲಿ ನಡೆಯಬೇಕಿದ್ದ ಐಸಿಸಿ ಚಾಂಪಿಯನ್ಸ್ ಕ್ರಿಕೆಟ್ ಟೂರ್ನಿ (ICC Champions Trophy 2025) ಪಾಕಿಸ್ತಾನದಲ್ಲಿ (Pakistan) ನಡೆಯುವುದು ಅನುಮಾನ. ಹೌದು. ಚಾಂಪಿಯನ್ಸ್ ಟ್ರೋಫಿ ಆಯೋಜನೆ ಮಾಡಲು ಪಾಕಿಸ್ತಾನ ಉತ್ಸುಕವಾಗಿದ್ದರೂ ಐಸಿಸಿ (ICC) ಇನ್ನೂ ಗ್ರೀನ್ ಸಿಗ್ನಲ್ ನೀಡಿಲ್ಲ. ಹೀಗಾಗಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು ದುಬೈಯಲ್ಲಿ (Dubai) ನಡೆಯುವ ಸಾಧ್ಯತೆ ಹೆಚ್ಚಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. 2023ರ ಏಷ್ಯಾಕಪ್ ಕ್ರಿಕೆಟ್ ಟೂರ್ನಿಯನ್ನು ಪಾಕಿಸ್ತಾನವೇ ಆಯೋಜಿಸಿದ್ದರೂ ಭಾರತದ ಪಂದ್ಯಗಳು ಹೈಬ್ರಿಡ್ ಮಾದರಿಯಲ್ಲಿ ನಡೆದಿತ್ತು. ಫೈನಲ್ ಸೇರಿದಂತೆ ಭಾರತದ ಪಂದ್ಯಗಳು ಶ್ರೀಲಂಕಾದಲ್ಲಿ ನಡೆದಿತ್ತು.ಐಸಿಸಿ ಪಾಕಿಸ್ತಾನದಲ್ಲಿ ಪಂದ್ಯ ಆಯೋಜಿಸಲು ಅನುಮತಿ ನೀಡದೇ ಇರಲು ಕಾರಣ ಬಿಸಿಸಿಐ. ಮುಂಬೈ ದಾಳಿಯ ನಂತರ ರಾಜಕೀಯ ಮತ್ತು ಆಟಗಾರರ ಭದ್ರತಾ ಕಾರಣದಿಂದ ಟೀಂ ಇಂಡಿಯಾವನ್ನು (Team India) ಪಾಕಿಸ್ತಾನಕ್ಕೆ ಕಳುಹಿಸಲು ಭಾರತ ಸರ್ಕಾರ (Indian Government) ಇಲ್ಲಿಯವರೆಗೆ ಬಿಸಿಸಿಐಗೆ (BCCI) ಅನುಮತಿ ನೀಡಿಲ್ಲ. ಹೀಗಾಗಿ 2025ರಲ್ಲೂ ಟೀಂ ಇಂಡಿಯಾವನ್ನು ಪಾಕ್ಗೆ ಕಳುಹಿಸಲು ಭಾರತ ಸರ್ಕಾರ ಅನುಮತಿ ನೀಡುವ ಸಾಧ್ಯತೆ ಭಾರೀ…