Author: AIN Author

ಸರ್ಕಾರದ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯಗಳಿಂದ (ಜೆ.ಆರ್.ಎಫ್ ಮಾದರಿ) ಪೂರ್ಣ ಸಮಯದ M.PHIL/PH.D ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಫೆಲೋಶಿಪ್ ನೀಡಲು ಆನ್‌ಲೈನ್ ಮೂಲಕ ಸೇವಾ ಸಿಂಧು ಪೋರ್ಟಲ್‌ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅಕ್ಟೋಬರ್ 31 ರವರೆಗೆ ದಿನಾಂಕ ನಿಗಧಿಪಡಿಸಲಾಗಿತ್ತು. ಎಂ.ಫಿಲ್ ಮತ್ತು ಪಿ.ಹೆಚ್.ಡಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳ ಹಿತದೃಷ್ಠಿಯಿಂದ ಹಾಗೂ ಹೆಚ್ಚಿನ ಸಂಖ್ಯೆಯ ಅರ್ಜಿಗಳನ್ನು ಸ್ವೀಕರಿಸುವ ಸದುದ್ದೇಶದಿಂದ ಅರ್ಜಿ ಸಲ್ಲಿಸಲು ನವೆಂಬರ್​ 30ರ ವರೆಗೆ‌ ಅವಧಿ ವಿಸ್ತರಿಸಲಾಗಿದೆ ಅರ್ಜಿ ಸಲ್ಲಿಸಲು ಬೇಕಾಗಿರುವ ಅರ್ಹತೆಗಳು ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ). ಕೋರ್ಸ್ ಪೂರ್ಣಕಾಲಿಕ ವಿದ್ಯಾರ್ಥಿಗಳು ಮಾತ್ರ ಅರ್ಹರಾಗಿರುತ್ತಾರೆ. ಎಲ್ಲಾ ಮೂಲಗಳಿಂದ ವಿದ್ಯಾರ್ಥಿಯ/ಪಾಲಕರ/ಪೋಷಕರ ವಾರ್ಷಿಕ ಆದಾಯವು ರೂ.8.00 ಲಕ್ಷಗಳನ್ನು ಮೀರಬಾರದು. ಪಿ.ಹೆಚ್.ಡಿ ಮತ್ತು ಎಂ.ಫಿಲ್ ವ್ಯಾಸಂಗವನ್ನು ಭಾರತ ಸರ್ಕಾರದ ಶಾಸನಬದ್ಧ ಅಂಗೀಕೃತ ವಿಶ್ವವಿದ್ಯಾನಿಲಯಗಳಲ್ಲಿ ಮಾಡತಕ್ಕದ್ದು. ವಿದ್ಯಾರ್ಥಿಯ ಗರಿಷ್ಠ ವಯೋಮಿತಿ 35 ಮೀರಬಾರದು. ಸರ್ಕಾರಿ ನೌಕರ ಅಭ್ಯರ್ಥಿಗಳು (ಕೇಂದ್ರ/ರಾಜ್ಯ) ಅರ್ಜಿ ಸಲ್ಲಿಸಲು…

Read More

ಸೂರ್ಯೋದಯ: 06.25 AM, ಸೂರ್ಯಾಸ್ತ : 05.51 ಪಿಎಂ ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಕಾರ್ತೀಕ ಮಾಸ, ಕೃಷ್ಣ ಪಕ್ಷ, ದಕ್ಷಿಣಾಯಣ, ಶರತ್ ಋತು, ತಿಥಿ: ಇವತ್ತು ತದಿಗೆ 02:24 PM ತನಕ ನಂತರ ಚೌತಿ ನಕ್ಷತ್ರ: ಇವತ್ತು ಆರ್ದ್ರಾ 03:01 PM ತನಕ ನಂತರ ಪುನರ್ವಸು ಯೋಗ: ಇವತ್ತು ಶುಭ 08:15 PM ತನಕ ನಂತರ ಶುಕ್ಲ ಕರಣ: ಇವತ್ತು ವಣಿಜ 02:06 AM ತನಕ ನಂತರ ವಿಷ್ಟಿ 02:24 PM ತನಕ ನಂತರ ಬವ ರಾಹು ಕಾಲ: 01:30 ನಿಂದ 03:00 ವರೆಗೂ ಯಮಗಂಡ: 06:00 ನಿಂದ 07:30 ವರೆಗೂ ಗುಳಿಕ ಕಾಲ: 09:00 ನಿಂದ 10:30 ವರೆಗೂ ಅಮೃತಕಾಲ: 04.35 AM to 06.15 AM ಅಭಿಜಿತ್ ಮುಹುರ್ತ: ಬೆಳಗ್ಗೆ.11:42 ನಿಂದ ಮ.12:26 ವರೆಗೂ ಮೇಷ : ನಿಮ್ಮ ವ್ಯಾಪಾರ ವಹಿವಾಟುಗಳಲ್ಲಿ ಆದಾಯ ಕಡಿಮೆ ಎಂದು ಅನಿಸಿದರೂ ಹೆದರುವ ಅಥವಾ ಬದಲಾಯಿಸುವ ಅವಶ್ಯಕತೆ ಇರುವುದಿಲ್ಲ,…

Read More

ಕನ್ನಡದ ಹೆಸರಾಂತ ನಟಿ ಪೂಜಾ ಗಾಂಧಿ ಇಂದು ಸಪ್ತಪದಿ ತುಳಿದಿದ್ದಾರೆ. ಇಂದು ಸಂಜೆ ಉದ್ಯಮಿ ವಿಜಯ್ ಜೊತೆ ಪೂಜಾ ಮಂತ್ರ ಮಾಂಗಲ್ಯ ಮಾದರಿಯಲ್ಲಿ ಮದುವೆಯಾಗಿದ್ದಾರೆ. ಬೆಂಗಳೂರಿನ ಯಲಹಂಕದಲ್ಲಿ ಈ ಮದುವೆ ನಡೆದಿದಿದು, ಉದ್ಯಮಿ ಹಾಗೂ ಅವರಿಗೆ ಕನ್ನಡ ಕಲಿಸಿರುವ ವಿಜಯ್ ಘೋರ್ಪಡೆ ಎನ್ನುವವರ ಜೊತೆ ಪೂಜಾ ಹೊಸ ಬದುಕಿಗೆ ಕಾಲಿಟ್ಟಿದ್ದಾರೆ. ವಿಜಯ್ ಬೆಂಗಳೂರಿನ ಲಾಜೆಸ್ಟಿಕ್ ಕಂಪನಿಯ ಮಾಲೀಕರು ಎಂದು ಹೇಳಲಾಗುತ್ತಿದೆ. ಕುವೆಂಪು ಮಂತ್ರ ಮಾಂಗಲ್ಯ ಪದ್ಧತಿಯಲ್ಲಿ ಪೂಜಾಗಾಂಧಿ ಹಾಗೂ ವಿಜಯ್ ಘೋರ್ಪಡೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

Read More

ಕಲಬುರಗಿ:- ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿ ಪರೀಕ್ಷಾ ಅಕ್ರಮಕ್ಕೆ ನೆರವಾದ ಹಿನ್ನಲೆ ಇಬ್ಬರು ಪ್ರಾಂಶುಪಾಲರನ್ನ CID ತಂಡ ಬಂಧಿಸಿದೆ.. ಕಲಬುರಗಿಯಲ್ಲಿ ನಡೆದ KEA ಪರೀಕ್ಷೆ ಅಕ್ರಮ ಪ್ರಕರಣದಲ್ಲಿ ಭಾಗಿಯಾದ ಅಫಜಲಪುರ ಮೂಲದ ಚಂದ್ರಕಾಂತ್ ಬಸಣ್ಣ ಬಂಧನಕ್ಕೆ ಒಳಗಾದ ಆರೋಪಿಗಳು. ಸರ್ಕಾರಿ ಪಿಯು ಕಾಲೇಜಿನ ಪ್ರಾಚಾರ್ಯರಾದ ಇಬ್ಬರು KEA ಪರೀಕ್ಷಾ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸಿದ್ರು. ಮೊನ್ನೆಮೊನ್ನೆ ಈ ಇಬ್ಬರೂ ಆರೋಪಿಗಳನ್ನ ವಶಕ್ಕೆ ಪಡೆದು ವಿಚಾರಣೆ ಮಾಡಿ ಬಿಟ್ಟಿದ್ದು ಇದೀಗ ಅರೆಸ್ಟ್ ಮಾಡಲಾಗಿದೆ…

Read More

ಬೆಂಗಳೂರು:- ಬಿಬಿಎಂಪಿ ವ್ಯಾಪ್ತಿಯಲ್ಲಿ ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸುವ ಸಂಬಂಧ ಆಯಾ ವಲಯ ವ್ಯಾಪ್ತಿಯಲ್ಲಿ ಸ್ಥಳಗಳನ್ನು ಗುರುತಿಸಿ ಕೂಡಲೆ ಪಟ್ಟಿ ನೀಡಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್* ರವರು ವಲಯ ಆಯುಕ್ತರಿಗೆ ಸೂಚನೆ ನೀಡಿದರು. ಪಾಲಿಕೆ ವ್ಯಾಪ್ತಿಯ ಸಾರ್ವಜನಿಕ ಸ್ಥಳದಲ್ಲಿ ಶೌಚಾಲಯಗಳನ್ನು ನಿರ್ಮಿಸುವ ಸಂಬಂಧ ಇಂದು ಬಿ.ಎಸ್.ಡಬ್ಲ್ಯೂ.ಎಂ.ಎಲ್ ಕಛೇರಿಯ ಸಭಂಗಣದಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದ ಆಯಾ ವಲಯ ವ್ಯಾಪ್ತಿಯಲ್ಲಿ ಜನದಟ್ಟಣೆ ಪ್ರದೇಶ, ಮಾರುಕಟ್ಟೆಗಳು, ಪ್ರಮುಖ ಸ್ಥಳಗಳಲ್ಲಿ ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸುವ ಸಂಬಂಧ ತ್ವರಿತವಾಗಿ ಸ್ಥಳಗಳನ್ನು ಗುರುತಿಸಿ ಪಟ್ಟಿ ನೀಡಲು ಸೂಚಿಸಲಾಯಿತು. ನಗರದಲ್ಲಿ ಈಗಾಗಲೇ 255 ಸ್ಥಳಗಳಲ್ಲಿ ಶೌಚಾಲಯಗಳನ್ನು ನಿರ್ಮಿಸಲು ಸ್ಥಳಗಳನ್ನು ಗುರುತಿಸಲಾಗಿದ್ದು, ಶೌಚಾಲಯಗಳನ್ನು ನಿರ್ಮಿಸುವ ಸ್ಥಳ ವಿಶಾಲವಾಗಿರಬೇಕಿದೆ. ಈ ಸಂಬಂಧ ವಿಶಾಲವಾದ ಸ್ಥಳಗಳನ್ನು ಗುರುತಿಸಬೇಕಿದೆ. ಜೊತೆಗೆ ನಗರದ ಕೇಂದ್ರ ಪ್ರದೇಶದಲ್ಲಿ ಹೆಚ್ಚಾಗಿ ಶೌಚಾಲಯಗಳನ್ನು ನಿರ್ಮಿಸಬೇಕು. ಈ ಪೈಕಿ ಸೂಕ್ತ ಸ್ಥಳಗಳನ್ನು ಗುರುತಿಸಬೇಕು. ಅಲ್ಲದೆ ಹೊಸದಾಗಿ 46 ಶೌಚಾಲಯಗಳನ್ನು ನಿರ್ಮಾಣ ಮಾಡಲು ಕೂಡಾ ಸೂಕ್ತ ಸ್ಥಳಗಳನ್ನು ಗುರುತಿಸಲು…

Read More

ಬಿಗ್ ಬಾಸ್ ಮನೆಯಲ್ಲಿ ಟಾಸ್ಕ್​ಗಳು ಮತ್ತಷ್ಟು ಬಿಗಿಗೊಂಡಿದೆ. ಬೆಳಗ್ಗೆ ರಸಪ್ರಶ್ನೆ ಟಾಸ್ಕ್​ನಲ್ಲಿ ಭಾಗಿಯಾದವರು ಎರಡನೇ ಚಟುವಟಿಕೆಯಲ್ಲಿ ಪರಸ್ಪರ ನೋವುಂಟು ಮಾಡಿಕೊಂಡಿದ್ದಾರೆ. ರಸಪ್ರಶ್ನೆ ಆಟವಾಡಿದ್ದ ಸ್ಫರ್ಧಿಗಳಿಗೆ ಎರಡನೇ ಟಾಸ್ಕ್‌ ಸಖತ್‌ ಚಾಲೆಂಜಿಂಗ್ ಆಗಿದೆ. ಅದರ ಪರಿಣಾಮವೂ ಜೋರಾಗಿಯೇ ಇದೆ. ಎರಡೂ ಗುಂಪಿನ ಎಲ್ಲ ಸದಸ್ಯರು ಕಾಲಿಗೆ ಹಗ್ಗವನ್ನು ಕಟ್ಟಿಕೊಳ್ಳಬೇಕು. ಎದುರಿಗೆ ನಂಬರ್ ಹಾಕಿದ ಜಾಗದಲ್ಲಿ ಒಂದಿಷ್ಟು ಬಾಲ್‌ಗಳನ್ನು ಇಡಲಾಗಿದೆ. ಬಿಗ್‌ಬಾಸ್ ಸೂಚಿಸಿದ ನಂಬರ್ ಇರುವ ಜಾಗಕ್ಕೆ ಎರಡೂ ಗುಂಪಿನ ಸದಸ್ಯರು ಜಿಗಿಯುತ್ತ ಓಡಿಹೋಗಿ ಬಾಲ್‌ ಎತ್ತಿಕೊಂಡು ಬಂದು ತಮ್ಮ ತಂಡದ ಜಾಲರಿಯಲ್ಲಿ ಹಾಕಬೇಕು. ಇದು ಟಾಸ್ಕ್​ನ ಮೂಲ ನಿಯಮ. ಯಾವ ತಂಡದವರು ಹೆಚ್ಚು ಬಾಲ್‌ಗಳನ್ನು ಎತ್ತಿಕೊಂಡು ಬಂದು ಜಾಲರಿಯಲ್ಲಿ ಹಾಕುತ್ತಾರೋ ಅವರು ಗೆದ್ದಂತೆ. ಈ ಟಾಸ್ಕ್‌ನಲ್ಲಿ ಬಾಲ್‌ ಎತ್ತುವಾಗ ಎರಡೂ ತಂಡದ ನಡುವೆ ಭಾರೀ ಜಿದ್ದಾಜಿದ್ದಿಯಾಗಿದೆ. ಸ್ನೇಹಿತ್‌ ತಳ್ಳಿದ್ದರಿಂದ ಬಿದ್ದಿರುವ ಸಿರಿ, ‘ಇಷ್ಟೊಂದು ಫಿಸಿಕಲ್ ಆಗುವುದು ಬೇಕಾ?’ ಎಂದು ಪ್ರಶ್ನಿಸಿದ್ದಾರೆ. ಉಸ್ತುವಾರಿ ನೋಡಿಕೊಳ್ಳುತ್ತಿರುವ ಕಾರ್ತಿಕ್, ಎರಡೂ ತಂಡದ ಸದಸ್ಯರನ್ನು ನಿಯಂತ್ರಿಸಲು ಹರಸಾಹಸ ಪಟ್ಟಿದ್ದಾರೆ.

Read More

ಹುಬ್ಬಳ್ಳಿ: ಭಾರತಪೇ ಸ್ಕೈಪಿಂಗ್ ಮಷಿನ್ ಪೂರೈಸಿ ವಂಚಿಸುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಇಲ್ಲಿನ ಸಿಇಎನ್ ಕ್ರೈಂ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಮಂಗಳೂರು ಮೂಲದ ಮಹ್ಮದ್ ಆಸೀಫ್ (42) ಎಂಬ ಬಂಧಿತ. ಪೊಲೀಸ್ ಇನ್‌ಸ್ಪೆಕ್ಟರ್ ಬಿ.ಕೆ. ಪಾಟೀಲ ನೇತೃತ್ವದ ತಂಡ ವಿಶೇಷ ಕಾರ್ಯಾಚಾರಣೆ ಮೂಲಕ ಮೈಸೂರಿನಲ್ಲಿ ಮಹ್ಮದ್‌ನನ್ನು ಬಂಧಿಸಿದೆ. ಬಂಧಿತನಿಂದ 2 ಭಾರತಪೇ ಸ್ಕೈಪಿಂಗ್ ಮಷಿನ್, 2 ಮೊಬೈಲ್ ಫೋನ್, 1 ಎಸ್‌ಬಿಐ ಎಟಿಎಂ ಕಾರ್ಡ್ ವಶಕ್ಕೆ ಪಡೆದುಕೊಂಡಿದೆ. ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಪರಾರಿಯಾಗಿರುವ ಇನ್ನಿತರ ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Read More

ಧಾರವಾಡ:- ಗ್ರಾಪಂ ಪಿಡಿಒ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಧಾರವಾಡದಲ್ಲಿ ನಡೆದಿದೆ. ತಾಲೂಕಿನ ಯರಿಕೊಪ್ಪ ಗ್ರಾಪಂ ಪಿಡಿಒ ನಾಗರಾಜ್, ಆತ್ಮಹತ್ಯೆಗೆ ಯತ್ನಿಸಿದ ಅಧಿಕಾರಿ. ಇಲಿ ಔಷಧಿ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆತ್ಮಹತ್ಯೆ ಯತ್ನಕ್ಕೂ ಮುಂಚೆ PDO ವಿಡಿಯೋ ಮಾಡಿದ್ದು, ಆರ್‌ಟಿಐ ಕಾರ್ಯಕರ್ತನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿರುವುದು ತಿಳಿದು ಬಂದಿದೆ. ಮಲ್ಲಿಕಾರ್ಜುನ ರೊಟ್ಟಿಗವಾಡ, ಕಿರುಕುಳ ನೀಡಿದ ಆರ್‌ಟಿಐ ಕಾರ್ಯಕರ್ತ ಎನ್ನಲಾಗಿದೆ. ರೊಟ್ಟಿಗವಾಡ ಹೆಸರು ಹೇಳಿ ವಿಡಿಯೋ ಮಾಡಿದ್ದಾರೆ. ಬಹಳ ಅಧಿಕಾರಿಗಳಿಗೆ ರೊಟ್ಟಿಗವಾಡ ಕಿರುಕುಳ ಕೊಟ್ಟಿದ್ದಾರೆ. ನಮಗೂ ಕಿರುಕುಳ ಕೊಟ್ಟಿದ್ದಾರೆ. ಮಾಡಲು ಆಗದೇ ಇರೋ ಕೆಲಸಗಳನ್ನು ಮಾಡಲು ಒತ್ತಾಯಿಸುತ್ತಾರೆ. ಅದಕ್ಕಾಗಿ ನನ್ನ ಜೀವನ ಇಲ್ಲಿಗೆ ಎಂಡ್ ಮಾಡಲು ತಿರ್ಮಾನಿಸಿದ್ದೇನೆ. ವಿಷ ಕುಡಿಯುತ್ತಿದ್ದೇನೆ I am SORRY ಎಂದು ವಿಡಿಯೋ ಸ್ನೇಹಿತರಿಗೆ ಹಾಕಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅನೇಕರಿಗೆ ವಾಟ್ಸಾಪ್ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ವಾಟ್ಸಾಪ್ ಗಮನಿಸಿ ಸ್ನೇಹಿತರು ಹುಡುಕಿದ್ದಾರೆ. ಹುಡುಕಿ ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಧಾರವಾಡ-ಬೆಳಗಾವಿ ರಸ್ತೆಯಲ್ಲಿವ ಪಕ್ಕದಲ್ಲಿ ಆತ್ಮಹತ್ಯೆಗೆ…

Read More

2024ರಲ್ಲಿ ನಡೆಯುವ ಇಂಡಿಯನ್​ ಪ್ರೀಮಿಯರ್​ ಲೀಗ್​ಗೆ BCCI ತಯಾರಿ ಆರಂಭಿಸಿದೆ. ಇನ್ನು ಕೆಲ ತಂಡಗಳು ಈ ಬಾರಿಯಾದರೂ ಟ್ರೋಫಿ ಗೆಲ್ಲಬೇಕೆಂಬ ನಿಟ್ಟಿನಲ್ಲಿ ತಯಾರಿ ನಡೆಸಲು ಶುರು ಮಾಡಿದ್ದು, ತಂಡದಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡತೊಡಗಿವೆ ಈ ಪೈಕಿ ಇತ್ತೀಚಿಗೆ ಲಖನೌ ಸೂಪರ್​​ಜೈಂಟ್ಸ್​ ತಂಡವನ್ನು ತೊರೆದು ಕಲ್ಕತ್ತಾ ನೈಟ್​ರೈಡರ್ಸ್​ ತಂಡವನ್ನು ಕೂಡಿಕೊಂಡಿದ್ದ ಗೌತಮ್​ ಗಂಭೀರ್​ ಈ ಬಗ್ಗೆ ಮಾತನಾಡಿದ್ದು, ಬಂಗಾಳ ಜನರು ನನಗೆ ನೀಡಿದ್ದ ಪ್ರೀತಿಯನ್ನು ಹಿಂತಿರುಗಿಸಲು ಇದು ಸರಿಯಾದ ಸಮಯ ಎಂದಿದ್ದಾರೆ. ಅಲ್ಲಿಗೆ ಮರಳಿದಾಗ ನನಗೆ ಶ್ರಮ, ನೆನಪು ಹಾಗೂ ತಂಡದ ಮೇಲಿನ ಭಾವನೆ ಮರಳಿ ನೆನಪಿಗೆ ಬರುತ್ತವೆ. ಇದು ಹೊಸ ಆರಂಭ ಮತ್ತು ಆಶಾದಾಯಕವಾಗಿ ನಾನು ತಂಡವನ್ನು ಮುನ್ನಡೆಸಲು ನೋಡುತ್ತೇನೆ. ಬಂಗಾಳದ ಜನರು ನನಗೆ ತೋರಿರುವ ಪ್ರೀತಿ ಕೆಕೆಆರ್​ ನನ್ನ ಹೃದಯಕ್ಕೆ ಮತ್ತಷ್ಟು ಹತ್ತಿರವಾಗಿದೆ. ಇದು ಅವರಿಗೆ ಹಿಂತಿರುಗಿಸಲು ಸರಿಯಾದ ಸಮಯ ಎಂದು ಗೌತಮ್​ ಗಂಭೀರ್​ ಹೇಳಿದ್ದಾರೆ.

Read More

ದಾವಣಗೆರೆ:- BR Patil ರಾಜೀನಾಮೆ ಪತ್ರದ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು ,ಶಾಸಕ ಬಿ.ಆರ್.ಪಾಟೀಲ್ ಯಾವ ಕಾರಣಕ್ಕೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೋ ಗೊತ್ತಿಲ್ಲ. ಯಾವ ಕಾರಣಕ್ಕೆ ಎಂಬುದನ್ನ ಅವರನ್ನೇ ಕೇಳಬೇಕು ಎಂದರು. ಶಾಸಕ ಬಿ.ಆರ್.ಪಾಟೀಲ್ ಯಾವ ಕಾರಣಕ್ಕಾಗಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ ಎನ್ನುವ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದರು. ಯಾವ ಸಚಿವರು ಸ್ಪಂದಿಸುತ್ತಿಲ್ಲವೆ ಎಂಬುದನ್ನ ಅವರೇ ಬಹಿರಂಗವಾಗಿ ಹೇಳಲಿ. ಯಾವ ಸಚಿವರು, ಎಲ್ಲಾ ಸಚಿವರಾ, ಇಂತಹವರೇ ಎಂಬುದನ್ನ ಹೇಳಬೇಕು ಎಂದು ತಿಳಿಸಿದರು. ಬಿ.ಆರ್. ಪಾಟೀಲ್ ಅವರಿಗೆ ಏನು ಸಮಸ್ಯೆ ಅಂತಾ ಸಂಬಂಧಪಟ್ಟ ಸಚಿವರು ಅಥವಾ ಮುಖ್ಯಮಂತ್ರಿಯವರ ಬಳಿ ಚರ್ಚಿಸಬೇಕು ಎಂದು ತಿಳಿಸಿದರು. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪ್ರಕರಣ ಸದ್ಯ ನ್ಯಾಯಾಲಯದಲ್ಲಿದೆ. ಅದರ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಮಾಹಿತಿ ಇದ್ದಿದ್ದರೆ ಹೇಳಬಹುದಿತ್ತು.ಯಾವುದೇ ಹೇಳಿಕೆ ನೀಡುವುದು ಸರಿಯಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಜಾತಿಗಣತಿ ವರದಿ ಮೊದಲು ಬಿಡುಗಡೆಯಾದ…

Read More