Author: AIN Author

ತುಮಕೂರು: ಸಿಗ್ನಲ್ ನಲ್ಲಿ ನಿಂತಿದ್ದ KSRTC ಬಸ್’ಗೆ ಸ್ಯಾಂಟ್ರೋ ಕಾರು ಗುದ್ದಿದ ಪರಿಣಾಮ ಹಲವರಿಗೆ ಗಾಯಗಳಾಗಿರುವ ಘಟನೆ ತುಮಕೂರಿನ ಡಾ.ಶಿವಕುಮಾರ ಸ್ವಾಮೀಜಿ ಸರ್ಕಲ್ ಬಳಿ ನಡೆದಿದೆ. ಮೂರು ಕಾರು ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸರಣಿ ಅಪಘಾತದಿಂದಾಗಿ ಕೆಲ ಕಾಲ ಟ್ರಾಫಿಕ್ ಜಾಮ್ ಆದ ಘಟನೆಯೂ ನಡೆದಿದೆ. ಸಿಗ್ನಲ್ ನಲ್ಲಿ ನಿಂತಿದ್ದ ಎರಡು ಕಾರು ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಗೆ ವೇಗವಾಗಿ ಬಂದ ಸ್ಯಾಂಟ್ರೋ ಕಾರೊಂದು ಗುದ್ದಿದೆ. ಸ್ಯಾಂಟ್ರೋ ಕಾರು ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಅವರಿಗೆ ಸೇರಿದ್ದು ಎನ್ನಲಾಗಿದೆ. ಅಪಘಾತದ ಸ್ಥಳಕ್ಕೆ ಧಾವಿಸಿದ ತುಮಕೂರು ಸಂಚಾರಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Read More

ಬಳ್ಳಾರಿ: ಬೈಕ್‌ನಿಂದ ಬಿದ್ದ ಮಹಿಳೆ‌ ಮೇಲೆ ಸಿಲಿಂಡರ್ ಲಾರಿ ಹರಿದು ಸಾವನ್ನಪ್ಪಿರುವ ಘಟನೆ ಬಳ್ಳಾರಿಯ ಸಿರುಗುಪ್ಪ ತಾಲೂಕಿನ ರಾಜ್ಯ‌ ಹೆದ್ದಾರಿಯಲ್ಲಿ‌ ನಡೆದಿದೆ. ಸಿರುಗುಪ್ಪ ತಾಲೂಕಿನ ತಾಳೂರು ಗ್ರಾಮದ ‌ನಿವಾಸಿ ನಿಂಗಮ್ಮ (52) ಮೃತ ದುರ್ದೈವಿಯಾಗಿದ್ದು,. ಸಿರುಗುಪ್ಪಗೆ ತಾಲೂಕು ಕಚೇರಿಗೆ ದಂಪತಿ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಹಿಂಬದಿ ಕುಳಿತಿದ್ದ ನಿಂಗಮ್ಮ ಬೈಕ್‌ನಿಂದ ಆಯತಪ್ಪಿ ಬಿದ್ದಿದ್ದಾರೆ. ಇದೇ ವೇಳೆ ಪಕ್ಕದಲ್ಲಿ ಬರುತ್ತಿದ್ದ ಸಿಲಿಂಡರ್‌ ಲಾರಿ ನಿಂಗಮ್ಮಳ ತಲೆ ಮೇಲೆ ಹರಿದಿದೆ. ಲಾರಿ ಹರಿದ ಪರಿಣಾಮ ತಲೆ ಪೂರ್ತಿ ನಜ್ಜುಗುಜ್ಜಾಗಿತ್ತು. https://ainlivenews.com/do-you-know-which-are-the-most-visited-websites-by-indians/ ನಿಂಗಮ್ಮಳ ಪತಿ ಪ್ರಾಣಾಪಾಯದಿಂದ ಪಾರಾಗಿದ್ದು, ಕಣ್ಮುಂದೆ ಪತ್ನಿ ಸಾವನ್ನು ಕಂಡು ಅಘಾತಕ್ಕೊಳಗಾಗಿದ್ದರು. ಸ್ಥಳಕ್ಕೆ ಸಿರುಗುಪ್ಪ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

Read More

ಬೆಂಗಳೂರು: ಮೂರು ದಿನಗಳ ಬೆಂಗಳೂರು ತಂತ್ರಜ್ಞಾನ ಶೃಂಗಸಭೆ-2023 ಇಂದಿನಿಂದ ಆರಂಭವಾಗಿದೆ. 30ಕ್ಕೂ ಹೆಚ್ಚು ರಾಷ್ಟ್ರಗಳ ತಂತ್ರಜ್ಞರು, ಸಂಶೋಧಕರು, ನವೋದ್ಯಮಗಳ ಪ್ರತಿನಿಧಿಗಳು ಈ ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ‘ಬೆಂಗಳೂರು ತಂತ್ರಜ್ಞಾನ ಶೃಂಗಸಭೆ-2023’ ಉದ್ಘಾಟಿಸಿದರು. ಇದು ಬೆಂಗಳೂರು ತಂತ್ರಜ್ಞಾನ ಶೃಂಗಸಭೆಯ 26ನೇ ಆವೃತ್ತಿ. ಬೆಂಗಳೂರು ನಗರದ ಅರಮನೆ ಆವರಣದಲ್ಲಿ ಈ ಬಾರಿಯ ಶೃಂಗಸಭೆ ನಡೆಯುತ್ತಿದೆ. ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ದ್ವಿಪಕ್ಷೀಯ ಮಾತುಕತೆಗಳಿಗೂ ಸಭೆ ವೇದಿಕೆಯಾಗಲಿದೆ. ಈ ಶೃಂಗಸಭೆಯಲ್ಲಿ ನಾವೀನ್ಯತೆ ಮತ್ತು ವೈಮಾನಿಕ ಉದ್ಯಮ ಖಾತೆ ಸಚಿವ ಬಾಗೋತ್ ಮುಸ್ಲಿನ್, ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ, ಎಎಂಡಿ ಸಮೂಹದ ಕಾರ್ಯನಿರ್ವಾಹಕ ಉಪಾಧ್ಯಕ್ಷ ಮಾರ್ಕ್ ಪೇಪರ್‌ಮಾಸ್ಟ‌ರ್, ವಿಪ್ರೊ ಕಾರ್ಯನಿರ್ವಾಹಕ ನಿರ್ದೇಶಕ ರಿಷಾದ್ ಪ್ರೇಮ್‌ಜಿ ಸೇರಿದಂತೆ ಹಲವರು ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡಿದ್ರು.

Read More

ಸೆಲೆಬ್ರಿಟಿಗಳ ಮದುವೆ ಕಾರ್ಡಿಗೆ ಲಕ್ಷ ಲಕ್ಷ ಖರ್ಚು ಮಾಡುವವರನ್ನು ನೋಡಿದ್ದೇವೆ. ದುಬಾರಿ ಮದುವೆ ಕಾರ್ಡ್ ಹಂಚಿದವರೂ ನಮ್ಮ ನಡುವೆ ಇದ್ದಾರೆ. ಆದರೆ, ಎಲ್ಲರಿಗೂ ಮಾದರಿ ಆಗುವಂತಹ ಕೆಲಸ ಮಾಡಿದ್ದಾರೆ ಮಳೆ ಹುಡುಗಿ ಖ್ಯಾತಿಯ ನಟಿ ಪೂಜಾ ಗಾಂಧಿ (Pooja Gandhi). ಸ್ವತಃ ತಮ್ಮದೇ ಕೈ ಬರಹದಲ್ಲಿ ಮದುವೆ ಕಾರ್ಡ್ ಸಿದ್ಧ ಪಡಿಸಿ, ಅದನ್ನೇ ಎಲ್ಲರಿಗೂ ಕಳುಹಿಸಿ ಕೊಟ್ಟಿದ್ದಾರೆ. ಮೂಲತಃ ಉತ್ತರ ಪ್ರದೇಶದವರಾದ ಪೂಜಾ ಗಾಂಧಿ, ಮುಂಗಾರು ಮಳೆ ಸಿನಿಮಾ ಮೂಲಕ ಕನ್ನಡ ಚಿತ್ರೋದ್ಯಮಕ್ಕೆ ಬಂದವರು. ಕನ್ನಡವೇ ಬಾರದ ಪೂಜಾ ಇದೀಗ ಸ್ವಚ್ಛ ಕನ್ನಡದಲ್ಲಿ ಮಾತನಾಡುತ್ತಾರೆ. ವಚನಗಳನ್ನು ಪಟಪಟ ಹೇಳುತ್ತಾರೆ. ತಮ್ಮದೇ ಕೈ ಬರಹದಲ್ಲಿ ಕನ್ನಡದ ಮದುವೆ ಆಮಂತ್ರಣ ಪತ್ರಿಕೆಯನ್ನು (Wedding Card) ಸಿದ್ಧ ಮಾಡಿದ್ದಾರೆ. ಈ ನಡೆಗೆ ಕನ್ನಡಿಗರಿ ಮೆಚ್ಚಿದ್ದಾರೆ. ಆ ಪತ್ರಿಕೆ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಕೂಡ ಆಗಿದೆ.

Read More

ಬೆಂಗಳೂರು: ಮಕ್ಕಳ ಕಳ್ಳಸಾಗಾಣಿಕೆ (Child Trafficking) ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು (CCB Police) ಭರ್ಜರಿ ಕಾರ್ಯಾಚರಣೆ ನಡೆಸಿ ಹಸುಗೂಸು ಮಾರಾಟ ದಂಧೆಯನ್ನು ಭೇದಿಸಿದ್ದಾರೆ. ಇನ್ನೂ ಈ ಗ್ಯಾಂಗ್‌ನಲ್ಲಿದ್ದ 7 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಪ್ರಕರಣದಲ್ಲಿ ಆರೋಪಿಗಳ ಪಾತ್ರ ಏನು ಎಂಬುದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ. ಈ ಕುರಿತ ಕಂಪ್ಲೀಟ್ ಮಾಹಿತಿ ಇಲ್ಲಿ ನೀಡಲಾಗಿದೆ. ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಆರೋಪಿಗಳಾದ ಶರಣ್ಯ, ರಾಧ, ಸುಹಾಸಿನಿ, ಮಹಾಲಕ್ಷ್ಮಿ, ಗೋಮತಿ, ಹೇಮಲತಾ, ಕಣ್ಣನ್ ರಾಮಸ್ವಾಮಿ ಎಂಬವರನ್ನು ಬಂಧಿಸಲಾಗಿದೆ. ಈ 7 ಆರೋಪಿಗಳ ಪೈಕಿ ಮಹಾಲಕ್ಷ್ಮಿ ಮತ್ತು ರಾಧ ಪ್ರಮುಖ ಆರೋಪಿಗಳಾಗಿದ್ದಾರೆ. ಮಹಾಲಕ್ಷ್ಮಿ ಮಗು ಯಾರಿಗೆ ಬೇಕು ಎನ್ನುವುದನ್ನು ಹುಡುಕಿ ಡೀಲ್ ಮಾಡಿದರೇ ರಾಧ ಎಲ್ಲಿ ಮಗು ಇದೆ ಎಂಬುದನ್ನು ಹುಡುಕಿ ಅಲ್ಲಿಂದ ಡೀಲ್ ಮಾಡಿ ಮಹಾಲಕ್ಷ್ಮಿ ಹೇಳಿದ ಕಡೆಗೆ ಶರಣ್ಯ ಮತ್ತು ಇತರರ ಮೂಲಕ ಕಳುಹಿಸುತ್ತಿದ್ದಳು https://ainlivenews.com/if-you-are-looking-for-a-job-in-bangalore-young-men-and-women-beware/ ಶರಣ್ಯ: ಈಕೆ ರಾಧ ಮಗು ಸೇಲ್ ಮಾಡುವಾಗ ಜೊತೆಗೆ ಹೋಗುತ್ತಿದ್ದಳು ಮತ್ತು…

Read More

ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಬ್ಲೆಸ್ಸಿ ನಿರ್ದೇಶನದ ಹಾಗು ಪೃಥ್ವಿ ರಾಜ್ ಸುಕುಮಾರನ್,  ಅಮಲಾಪಾಲ್ ಅಭಿನಯದ ಆಡು ಜೀವಿತಂ ಸಿನಿಮಾ ಬಿಡುಗಡೆ ದಿನಾಂಕವನ್ನು ನವೆಂಬರ್ 30 ರಂದು ಚಿತ್ರತಂಡ ಘೋಷಣೆ ಮಾಡಲಿದೆ. ಬಹು ನಿರೀಕ್ಷೆ ಹುಟ್ಟಿಸಿರು ಈ ಸಿನಿಮಾದ ಪೋಸ್ಟರ್ಸ್ ಈಗಾಗಲೇ ಎಲ್ಲೆಡೆ ಮೆಚ್ಚುಗೆ ಪಡೆದಿವೆ. ಈ ಸಿನಿಮಾಗೆ ಖ್ಯಾತ ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಅವರ ಸಂಗೀತ ಸ್ಪರ್ಶವಿದೆ. ಅಂದಹಾಗೆ ಈ ಆಡು ಜೀವಿತಂ ಚಿತ್ರದ ಕಥೆ ಇಮಿಗ್ರಟ್ಸ್ ಸುತ್ತವೇ ಸಾಗುತ್ತದೆ. ತನ್ನ ಹೊಟ್ಟೆ ಪಾಡಿಗಾಗಿ ಕೆಲಸ ಅರಸಿ  ಸೌದಿ ಅರೇಬಿಯಾಗೆ ವಲಸೆ ಹೋಗುವ ನಸೀಬ್ ಮೊಹಮ್ಮದ್ ಎನ್ನುವ ಕೇರಳದ ವ್ಯಕ್ತಿ ಅಲ್ಲಿ ಅನುಭವಿಸುವ  ಕಷ್ಟ, ಎದುರಿಸುವ ಸಮಸ್ಯೆ ಹೈಲೆಟ್. ಇನ್ನು ಆತನ ಪಾಸ್ಪೋರ್ಟ್ ಕಸಿದು ಆತನಿಗೆ ಕೊಡುವತ ಹಿಂಸೆಗಳು ಆ ಬಿಸಿಲಿನ ಮರುಭೂಮಿಯಲ್ಲಿ ಆತ ಪಡುವ ಯಾತನೆ ಕುರಿತು ಸಾಗುವ ಕಥೆ ಇಲ್ಲಿದೆ. ನಿರ್ದೇಶಕ ಬ್ಲೆಸ್ಸಿ ಅವರ ಹದಿನೈದು ವರ್ಷದ ಕನಸಿನ ಕಥೆ ಇದು. ಅವರ ಕಲ್ಪನೆಯ…

Read More

ದಿಯಾ ಸಿನಿಮಾ ಮೂಲಕ ಕನ್ನಡಿಗರ ಹೃದಯ ಕದ್ದ ಕರಾವಳಿ ಕುವರ ಪೃಥ್ವಿ ಅಂಬಾರ್ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಕನ್ನಡದ ಜೊತೆಗೆ ತಮಿಳಿಗೂ ಪಾದರ್ಪಣೆ ಮಾಡಿರುವ ಪೃಥ್ವಿ, ಹೊಸ ಸಿನಿಮಾಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಯುವ ಪ್ರತಿಭೆ ವೈಭವ್ ಮಹಾದೇವ್ ಸಾರಥ್ಯ ‘ಜೂನಿ’ ಸಿನಿಮಾದಲ್ಲಿ ಪೃಥ್ವಿ ನಾಯಕನಾಗಿ ನಟಿಸುತ್ತಿದ್ದಾರೆ. ‘ಜನ್ನಿ’ ಎಂಬ ಕಿರುಚಿತ್ರ ನಿರ್ದೇಶಿಸಿದ್ದ ವೈಭವ್ ಮಹಾದೇವ್ ಜೂನಿ ಸಿನಿಮಾ ಮೂಲಕ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಪ್ರಾಗ್ ಫಿಲ್ಮ್ ಸ್ಕೂಲ್  ನಲ್ಲಿ ನಿರ್ದೇಶಕರ ಕೋರ್ಸ್ ಮುಗಿಸಿರುವ ಅವರೀಗ ಈ ಚಿತ್ರಕ್ಕೆ ಕಥೆ ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ವಿಭಿನ್ನ ಟೈಟಲ್ ನ ಜೂನಿ ಫಸ್ಟ್ ಲುಕ್ ರಿಲೀಸ್ ಆಗಿದ್ದು, ಪೃಥ್ವಿ ಅಂಬಾರ್ ಜೊತೆಗೆ ನಾಯಕಿ ರಿಷಿಕಾ ನಾಯಕ್ ಡಿಫರೆಂಟ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ‘ಜೂನಿ’ ರೋಮ್ಯಾಂಟಿಕ್ ಕಥಾಹಂದರದ ಸಿನಿಮಾ. ದಿಯಾ ಬಳಿಕ ಪೃಥ್ವಿ ಮತ್ತೊಮ್ಮೆ ಪ್ರೇಮಕಥೆಗೆ ಬಣ್ಣ ಹಚ್ಚಿದ್ದಾರೆ. ಯಾರ ಮೇಲೆ ಪ್ರೀತಿ ಹುಟ್ಟುತ್ತೋ ಅವರ ಮೇಲೆ ಪ್ರೀತಿ ಆಗುತ್ತಾ?…

Read More

ಬೆಂಗಳೂರು: ಸಿಲ್ಕ್ಯಾರ ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರನ್ನು ಸುರಕ್ಷಿತವಾಗಿ ಹೊರಬರುವಂತೆ ಮಾಡಿದ ರಕ್ಷಣಾ ಕಾರ್ಯಾಚರಣೆ ತಂಡವನ್ನು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಂಸಿದ್ದಾರೆ. ಈ ಕುರಿತು ತಮ್ಮ ಎಕ್ಸ್​ ಖಾತೆಯಲ್ಲಿ ಪೋಸ್ಟ್​ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ, ನವೆಂಬರ್ 12 ರಿಂದ ಉತ್ತರಾಖಂಡದಲ್ಲಿ ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರನ್ನು ಇಂದು ಯಶಸ್ವಿಯಾಗಿ ರಕ್ಷಿಸಲಾಗಿದ್ದು ಹೃದಯಾ ತುಂಬಿಬಂದಿದೆ. ಅವರ ಅಚಲ ಬದ್ಧತೆ ಮತ್ತು ಸಮರ್ಪಣೆಗಾಗಿ ರಕ್ಷಣಾ ತಂಡದ ವೀರೋಚಿತ ಪ್ರಯತ್ನಗಳಿಗೆ ನನ್ನ ಪ್ರಾಮಾಣಿಕ ಅಭಿನಂದನೆಗಳು. ಎನ್ನುವ ಮೂಲಕ ತಮ್ಮ ಪ್ರಶಂಸೆಗಳು ತಿಳಿಸಿದ್ದಾರೆ. ಏನಿದು ಘಟನೆ: ನವೆಂಬರ್ 12 ರಂದು ಸಿಲ್ಕ್ಯಾರ ಸುರಂಗದಲ್ಲಿ ಕಾರ್ಮಿಕರು ಕಾರ್ಯನಿರತರಾಗಿದ್ದ ವೇಳೆ ಸುರಂಗದಲ್ಲಿ ಕುಸಿತಗೊಂಡಿತ್ತು ಈ ವೇಳೆ 41 ಕಾರ್ಮೀಕರು ಸುರಂಗದಲ್ಲಿ ಸಿಲುಕಿಕೊಂಡಿದ್ದರು. ಇವರನ್ನು ರಕ್ಷಣಾ ಕಾರ್ಯಾಚರಣೆ ಪಡೆ 17 ದಿನಗಳ ಕಾಲ ನಿರಂತರ ಯಶಸ್ವಿ ಕಾರ್ಯಾಚರಣೆ ಮಾಡುವ ಮೂಲಕ ನ.28 ರಂದು ಸುರಕ್ಷಿತವಾಗಿ ಹೊರತೆಗೆಯಲಾಯಿತು.

Read More

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಕೆಲಸ ಅರಸೋ ಯುವಕ ಯುವತಿಯರೇ ಎಚ್ಚರ ತಲೆ ಎತ್ತಿದೆ ಕೆಲಸ ಕೊಡ್ತೀವಿ ಅಂತಾ ವಂಚಿಸುವ ಜಾಲ ನೀವೇನಾದ್ರೂ ಅಪ್ಪಿ ತಪ್ಪಿ ಯಾವುದೋ ಕಂಪನಿ ಹೆಸರು ಹೇಳಿದ್ರೂ ಸೇರಿಕೊಂಡ್ರೆ ಹಣವೆಲ್ಲಾ ಗೋತ. ಇಲ್ಲಿದೆ ನೋಡಿ ಇಂಟ್ರಸ್ಟಿಂಗ್ ಸ್ಟೋರಿ! ಹೀಗೆ ಬರೋಬ್ಬರಿ ಒಂದೂ ಸಾವಿರಕ್ಕೂ ಹೆಚ್ಚು ಯುವಕ ಯುವತಿಯರನ್ನೇ ಟಾರ್ಗೆಟ್ ಮಾಡಿ ವಂಚಿಸುವ ಟೀಂ. ಆಂಧ್ರ ಮೂಲದ ವಿದ್ಯಾವಂತರೇ ಇವರ ಟಾರ್ಗೆಟ್ ಆಗಿದ್ದು  ಒಬ್ಬೊಬ್ಬರಿಂದ ಲಕ್ಷ ಲಕ್ಷ  ಹಣ ಪಡೆದು ವಂಚನೆ ಪವನ್ ಕುಮಾರ್ ಕೊಲ್ಲಿ  ಮತ್ತು ತಂಡದಿಂದ ವಂಚನೆ 20 ಕೋಟಿಗೂ ಅಧಿಕ ಹಣ ವಸೂಲಿ ಮಾಡಿದೆ ಈ ಟೀಂ ವೈಟ್ ಫೀಲ್ಡ್ ಪೊಲೀಸರಿಂದ ಆರೋಪಿ ಪವನ್ ಕುಮಾರ್ ಬಂಧನ ಅಷ್ಟಕ್ಕೂ ಈ ಪವನ್ ಹೇಗೆ ವಂಚಿಸ್ತಿದ್ದ ಗೊತ್ತಾ? ಹೈಫೈ ಟೆಕ್ ಪಾರ್ಕ್ ನಲ್ಲಿ ಕಚೇರಿ‌ ಮಾಡ್ತಿದ್ದ ಐಟಿ ಕಂಪನಿ ಹೆಸರಲ್ಲಿ ಮಾಡ್ತಿದ್ದ ಮೋಸ ಪರಿಚಯಸ್ಥರ ಮೂಲಕ ನಿರುದ್ಯೋಗಿ ಯುವಕ,ಯುವತಿಯರಿಗೆ ಗಾಳ ಹಾಕಿ  ನಮ್ಮ ಕಂಪನಿಯಲ್ಲಿ ಕೆಲಸ ಕೊಡ್ತೀನಿ…

Read More

ಬೆಂಗಳೂರು: ಮೆಟ್ರೋದಲ್ಲಿ  ಸಿಕ್ಕ ಚಿನ್ನದ ಉಂಗುರವನ್ನ  ವಾಪಸ್ ಒಪ್ಪಿಸಿದ ಹೋಮ್ ಗಾರ್ಡ್ಸ್.ಈ ಹೋಮ್ ಗಾರ್ಡ್ಸ್ ಪ್ರಾಮಾಣಿಕ ನಡೆಗೆ ಭಾರಿ ಮೆಚ್ಚುಗೆ ಎಲ್ಲೆಡೆ ವ್ಯಕ್ತವಾಗಿದೆ. ಸೋಮವಾರ ಮೆಟ್ರೋ ಪ್ರಯಾಣದ ವೇಳೆ 30,000 ಅಧಿಕ ಮೌಲ್ಯದ ಚಿನ್ನದ ಉಂಗುರು ಸಿಕ್ಕಿತ್ತು ಈ ಚಿನ್ನದ ಉಂಗುರವನ್ನು ಬ್ಯಾಂಕ್ ಉದ್ಯೋಗಿ ದಿವ್ಯ ಎಂಬುವರು ಕಳೆದುಕೊಂಡಿದ್ದರು. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಹೊಸಕೋಟೆ ಶಾಖೆಯಲ್ಲಿ ಕೆಲಸ ಮಾಡ್ತಿದ್ದ ದಿವ್ಯ https://ainlivenews.com/good-news-for-those-going-to-sabarimala-ksrtc-bus-system-from-the-state-government/ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೆಟ್ರೋ ನಿಲ್ದಾಣದಿಂದ ಬೆನ್ನಿಗಾನಹಳ್ಳಿ ನಿಲ್ದಾಣಕ್ಕೆ ಮೆಟ್ರೋದಲ್ಲಿ ಪ್ರಯಾಣ ಮಾಡುತ್ತಿದ್ದು  ಅಲ್ಲಿಂದ ತಮ್ಮ ಕಚೇರಿಗೆ ಬಸ್‌ನಲ್ಲಿ ಹೋಗಿದ್ದಾರೆ ಈ ವೇಳೆ ಚಿನ್ನದ ಉಂಗುರ ಕಳೆದುಕೊಂಡಿದ್ದ ದಿವ್ಯಾ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೆಟ್ರೋ ನಿಲ್ದಾಣದಿಂದ ಹೊರಡುವಾಗ ಉಂಗುರ ಮಿಸ್ ಆಗಿರೋದು ಗೊತ್ತಾಗಿದೆ ಕೂಡಲೇ ಕಂಟ್ರೋಲರ್ ರೂಂಗೆ ಮಾಹಿತಿ ಕೊಟ್ಟಿದ್ದ ದಿವ್ಯಾ ಬಟ್ ಚಿನ್ನದ ಉಂಗುರ ಸಿಕ್ಕಿದ ತಕ್ಷಣ ಅದನ್ನ ಸಹಾಯಕ ಸುರಕ್ಷತಾ ಅಧಿಕಾರಿಗೆ ಒಪ್ಪಿಸಿದ್ದ ಹೋಮ್ ಗಾರ್ಡ್ಸ್ ಸೋಮವಾರ ಸಂಜೆ 6.45ರ ಸುಮಾರಿಗೆ ಬೆನ್ನಿಗಾನಹಳ್ಳಿ ಮೆಟ್ರೊ…

Read More