Author: AIN Author

ತಮಗೆ ಪಿರಿಯಡ್ಸ್ ಆಗಿಲ್ಲ, ಗರ್ಭಿಣಿಯೇ (Pregnant) ಎಂದು ತಿಳಿದುಕೊಳ್ಳುವುದಕ್ಕಾಗಿ ರಕ್ತ ಪರೀಕ್ಷೆ ಮಾಡಿಸಿದ್ದೇನೆ. ನಾನು ಪ್ರಗ್ನೆಂಟ್ ಆಗಿದ್ದೇನೆ ದಯವಿಟ್ಟು ಮನೆಯಿಂದ ನನ್ನ ಆಚೆ ಕಳುಹಿಸಿ ಎಂದು ಹಿಂದಿ ಬಿಗ್ ಬಾಸ್  (Bigg Boss) ಸ್ಪರ್ಧಿ, ನಟಿ ಅಂಕಿತಾ ಲೋಖಂಡೆ (Ankita Lokhande) ಹೇಳಿಕೊಂಡಿದ್ದರು. ಅಂಕಿತಾ ಹೇಳಿಕೆ ಭಾರೀ ಚರ್ಚೆ ಹುಟ್ಟು ಹಾಕಿತ್ತು. ಅಂಕಿತಾ ಲೋಖಂಡೆ ಕೋರಿಕೆಯಂತೆ ಬಿಗ್ ಬಾಸ್ ಟೀಮ್ ಪ್ರೆಗ್ನೆಸಿ ಟೆಸ್ಟ್ ಮಾಡಿಸಿತ್ತು. ಇದೀಗ ಟೆಸ್ಟ್ ರಿಸೆಲ್ಟ್ ಬಂದಿದ್ದು, ನೆಗೆಟಿವ್ ರಿಸೆಲ್ಟ್ ಬಂದಿದೆ ಎಂದು ಹೇಳಲಾಗುತ್ತಿದೆ. ಹಾಗಾಗಿ ಅಂಕಿತಾ ಇನ್ನಷ್ಟು ದಿನ ಅದೇ ಮನೆಯಲ್ಲಿ ಉಳಿದುಕೊಳ್ಳಲಿದ್ದಾರೆ. ಸದ್ಯ ಪ್ರಸಾರವಾಗುತ್ತಿರುವ ಸೀಸನ್ ನಲ್ಲಿ ನಟಿ ಅಂಕಿತಾ ಲೋಖಂಡೆ ಮತ್ತು ಪತಿ ವಿಕ್ಕಿ ಜೈನ್  (Vicky Jain)ಇಬ್ಬರೂ ಬಿಗ್ ಬಾಸ್ ಮನೆಯೊಳಗೆ ಇದ್ದಾರೆ. ಮನೆಗೆ ಹೋಗುವ ಮುನ್ನವೇ ಅಂಕಿತಾ ಗರ್ಭಿಣಿಯಾಗಿದ್ದು, ಆ ಕುರಿತು ಅವರಿಗೆ ಮಾಹಿತಿ ಇರಲಿಲ್ಲ ಎಂದು ಹೇಳಲಾಗಿತ್ತು. ಮತ್ತು ತಮ್ಮನ್ನು ಹೊರಗೆ ಕಳುಹಿಸುವಂತೆ ಅವರು ಕೇಳಿಕೊಂಡಿದ್ದರು.

Read More

ಕೋಲಾರ :- 7 ನೇ ವರ್ಷದ ಅದ್ದೂರಿ ಕನ್ನಡ ರಾಜ್ಯೋತ್ಸವವನ್ನು ವೇಮಗಲ್ ಪಟ್ಟಣ ಪಂಚಾಯಿತಿಯಲ್ಲಿ ಅದ್ದೂರಿಯಾಗಿ ಆಚರಿಸಲಾಗುತ್ತಿದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಸಿಎಸ್ ವೆಂಕಟೇಶ್ ಅವ್ರು ತಿಳಿಸಿದ್ರು. ಕೋಲಾರ ತಾಲೂಕಿನ ವೇಮಗಲ್ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ್ರು, ಗಲ್ಲಿ ಗಲ್ಲಿಯಲ್ಲಿ ಕನ್ನಡ ಬಾವುಟ ಕನ್ನಡದ ದೀಪಾಲಂಕಾರಗಳು ರಾರಾಜಿಸುತ್ತಿವೆ ವಿಶೇಷವಾಗಿ 7 ನೇ ವರ್ಷದ ಕನ್ನಡದ ಹಬ್ಬವನ್ನು ಎಲ್ಲಾ ಸಂಘಟನೆಗಳ ಜೊತೆಗೆ ಹಬ್ಬದ ರೀತಿಯಲ್ಲಿ ರಾಜ್ಯೋತ್ಸವವನ್ನು ಆಚರಿಸುತ್ತಿದ್ದೆವೆ ಇದು ಒಂದು ವಿಶೇಷ ದಿನವಾಗಿದ್ದು ಸಂವಿಧಾನ ಸಮರ್ಪಣಾ ದಿನವಾಗಿದೆ ಇಂತಹ ದಿನ ಕನ್ನಡದ ಹಬ್ಬ ಮಾಡುತ್ತಿರುವುದಕ್ಕೆ ಬಹಳ ಸಂತೋಷವಾಗಿದೆ ಎಂದು ತಿಳಿಸಿದ್ರು. ಅಲ್ಲದೆ ಸಂಜೆ ರಸಮಂಜರಿ ಕಾರ್ಯಕ್ರಮವಿದ್ದು ಸಿನಿಮಾ ನಟರು ಆಗಮಿಸಲಿದ್ದಾರೆ ಎಂದು ಹೇಳಿದ್ರು., ಕರ್ನಾಟಕ ಹಿತ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಬಾಬಣ್ಣ ( ನಾರಾಯಣಸ್ವಾಮಿ), ವಿ.ಪಿ ಪ್ರಕಾಶ್, ಕಾರು ಮಣಿ,ಯುವ ಮುಖಂಡ ವೆಂಕಟೇಶ್, ವಕೀಲ ನಾಗೇಶ್, ವೆಂಕಟೇಶ್ ಗೌಡ, ತರಕಾರಿ ಆರ್.ಎಂ…

Read More

ರಾಯಚೂರು: ಆಂಧ್ರಪ್ರದೇಶದ ವಿಜಯವಾಡದಲ್ಲಿ ಡಿ.1 ರಿಂದ 23ರ ವರೆಗೆ ನಡೆಯಲಿರುವ ಅಂಡರ್-16 ಬಿಸಿಸಿಐ ವಿಜಯ್ ಮರ್ಚಂಟ್ ಟ್ರೋಫಿ 2022-23ರ (VIjay Merchant Trophy) ಉಪನಾಯಕನಾಗಿ ರಾಯಚೂರಿನ (Raichur) ಯುವಕ ಅನಿಕೇತ್ ರೆಡ್ಡಿ ಆಯ್ಕೆಯಾಗಿದ್ದಾರೆ. ಈ ತಂಡಕ್ಕೆ ನಾಯಕನಾಗಿ ಟೀಂ ಇಂಡಿಯಾ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರ ಪುತ್ರ ಅನ್ವಯ್ ದ್ರಾವಿಡ್ ಆಯ್ಕೆಯಾಗಿದ್ದಾರೆ. ಅನಿಕೇತ್ ರೆಡ್ಡಿಯವರು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ವಿಕ್ರಂ ಸಿಂಹರೆಡ್ಡಿ ಅವರ ಪುತ್ರರಾಗಿದ್ದಾರೆ. ವಿಜಯ್ ಮರ್ಚಂಟ್ ಟ್ರೋಫಿ ಪಂದ್ಯಾವಳಿಗಳಿಗೆ ಆಯ್ಕೆಯಾಗಿರುವುದಕ್ಕೆ ಕುಟುಂಬಸ್ಥರು ಹಾಗೂ ಜಿಲ್ಲೆಯ ಕ್ರೀಡಾಪಟುಗಳು ಸಂತಸ ವ್ಯಕ್ತಪಡಿಸಿದ್ದಾರೆ ಅನಿಕೇತ್ ರೆಡ್ಡಿ ಎಲ್ಲಾ ಟೂರ್ನಮೆಂಟ್‍ಗಳಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಇದರಿಂದಾಗಿ ಅವರು ಆಯ್ಕೆಯಾಗಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ ಉತ್ತಮ ಪ್ರದರ್ಶನ ನೀಡಲಿ ಎಂದು ಸ್ಥಳೀಯ ತರಬೇತಿದಾರರು ಹಾಗೂ ಆಟಗಾರರು ಶುಭಕೋರಿದ್ದಾರೆ.

Read More

ಬೆಂಗಳೂರು:- ನಗರದ ಅರಮನೆ ಮೈದಾನದಲ್ಲಿ ತುಳು ಕೂಟದ ವತಿಯಿಂದ ನಡೆದ ಬೆಂಗಳೂರು ಕಂಬಳ ನೋಡಲೇ ಸಿನಿ ದಿಗ್ಗಜರೇ ಆಗಮಿಸಿದರು. ಭಾನುವಾರ ರಾತ್ರಿ 2 ಗಂಟೆ ಸುಮಾರಿಗೆ ಮುಕ್ತಾಯಗೊಂಡಿದೆ. ನವೆಂಬರ್‌ 25ರ ಬೆಳಗ್ಗೆ 11 ಗಂಟೆಗೆ ಆರಂಭವಾದ ಕೋಣಗಳ ಓಟ ನವೆಂಬರ್‌ 26ರ ರಾತ್ರಿ 2 ಗಂಟೆಗೆ ಅಂತ್ಯಗೊಂಡಿದ್ದು, ಫಲಿತಾಂಶ ಪ್ರಕಟಗೊಂಡಿದೆ ಎರಡೂ ದಿನಗಳಲ್ಲಿ ಅರಮನೆ ಮೈದಾನದಲ್ಲಿ ಕಾಲಿಡಲೂ ಜಾಗವಿಲ್ಲದಂತೆ ಕಂಬಳ ಅಭಿಮಾನಿಗಳು ನೆರೆದಿದ್ದು ಈ ಮೂಲಕ ಹೊಸ ಚರಿತ್ರೆಯನ್ನೇ ಬರೆಯಲಾಗಿದೆ. 159ರ ಜೋಡಿ ಕೋಣಗಳು ಭಾಗವಹಿಸಿದ ಈ ಮಹಾ ಕೂಟದಲ್ಲಿ ಅತ್ಯಂತ ಪ್ರತಿಷ್ಠೆಯ ಹಗ್ಗ ಹಿರಿಯ ವಿಭಾಗದಲ್ಲಿ ನಂದಳಿಕೆ ಶ್ರೀಕಾಂತ್ ಭಟ್ ಅವರ ಸಿ ಕೋಣಗಳು ಪ್ರಥಮ ಬಹುಮಾನ ಪಡೆದರೆ ಮಾಳ ಆನಂದ ನಿಲಯ ಶೇಖರ ಎ ಶೆಟ್ಟಿ ಅವರ ಕೋಣಗಳು ದ್ವಿತೀಯ ಬಹುಮಾನ ಪಡೆದಿವೆ. ಶ್ರೀಕಾಂತ್‌ ಭಟ್‌ ಅವರ ಕೋಣಗಳನ್ನು ಬಂಬ್ರಾಣ ಬೈಲು ವಂದಿತ್‌ ಶೆಟ್ಟಿ ಅವರು ಓಡಿಸಿದ್ದಾರೆ. ಈ ಕೋಣಗಳು 9.51 ಸೆಕೆಂಡ್‌ನಲ್ಲಿ ಓಟವನ್ನು ಮುಗಿಸಿವೆ. ಇದು ಕೂಟ…

Read More

ಬೆಂಗಳೂರು: ನಟ ರಿಷಬ್‌ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ ಸಿನಿಮಾದ ಪ್ರೀಕ್ವೆಲ್​​​​ನ ಫಸ್ಟ್‌ ಲುಕ್‌ ಇಂದು ಬಿಡುಗಡೆಯಾಗಲಿದೆ. ಮೊದಲ ಭಾಗದಂತೆಯೇ, ಎರಡನೇ ಭಾಗವನ್ನು ಸಹ ರಿಷಬ್ ಶೆಟ್ಟಿ ಬರೆದು ನಿರ್ದೇಶಿಸಲಿದ್ದಾರೆ, ಅವರು ಪ್ರಮುಖ ಪಾತ್ರದಲ್ಲಿ ನಟಿಸುವ ನಿರೀಕ್ಷೆಯಿದೆ. ಹೊಂಬಾಳೆ ಫಿಲ್ಮ್ಸ್ ಬ್ಯಾನರ್‌ನ ವಿಜಯ್ ಕಿರಂಗಂದೂರು ನಿರ್ಮಿಸಿರುವ ಈ ಸೀಕ್ವೆಲ್ ಕನ್ನಡ, ಹಿಂದಿ, ತೆಲುಗು, ತಮಿಳು, ಮಲಯಾಳಂ, ಬಂಗಾಳಿ ಮತ್ತು ಇಂಗ್ಲಿಷ್‌ನಲ್ಲಿ ಬಿಡುಗಡೆಯಾಗಲಿದೆ. ನಟ ರಿಷಬ್‌ ಶೆಟ್ಟಿ ಅವರ ಸಿನಿಪಯಣದ ದಿಕ್ಕನ್ನು ಬದಲಿಸಿದ ಸಿನಿಮಾ ಕಾಂತಾರ. ವಿಶ್ವವ್ಯಾಪಿ ಪ್ರೇಕ್ಷಕರ ಮನಗೆಲ್ಲುವುದರೊಂದಿಗೆ, ಬಾಕ್ಸ್‌ ಆಫೀಸ್‌ನಲ್ಲಿ ಕೋಟಿ ಕೋಟಿ ಹಣವನ್ನೂ ಬಾಚಿತ್ತು. ಇದೀಗ ಈ ಸಿನಿಮಾದ ಪ್ರೀಕ್ವೆಲ್‌ ತೆರೆಯ ಮೇಲೆ ಬರಲಿದ್ದು, ಪ್ರೇಕ್ಷಕರಲ್ಲಿ ಹೆಚ್ಚಿನ ನಿರೀಕ್ಷೆ ಹುಟ್ಟಿಸಿದೆ.

Read More

ತಿರುವನಂತಪುರಂ: ಆಸ್ಟ್ರೇಲಿಯಾ ವಿರುದ್ದ ಎರಡನೇ ಟಿ20 ಪಂದ್ಯದಲ್ಲಿ ಸ್ಪೋಟಕ ಅರ್ಧಶತಕ ಸಿಡಿಸುವ ಮೂಲಕ ಟೀಮ್‌ ಇಂಡಿಯಾ ಓಪನರ್‌ ಯಶಸ್ವಿ ಜೈಸ್ವಾಲ್‌ ಅವರು ವಿಶೇಷ ದಾಖಲೆಯನ್ನು ಬರೆದಿದ್ದಾರೆ. ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಪವರ್‌ಪ್ಲೇನಲ್ಲಿ ಅರ್ಧಶತಕ ಸಿಡಿಸಿದ ಮೂರನೇ ಬ್ಯಾಟ್ಸ್‌ಮನ್‌ ಸಾಧನೆಗೆ ಜೈಸ್ವಾಲ್ ಭಾಜನರಾಗಿದ್ದಾರೆ. ಭಾನುವಾರ ಇಲ್ಲಿನ ಗ್ರೀನ್‌ ಫೀಲ್ಡ್‌ ಇಂಟರ್‌ನ್ಯಾಷನಲ್‌ ಕ್ರೀಡಾಂಗಣದಲ್ಲಿ ನಡೆದಿದ್ದ ಎರಡನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ್ದ ಭಾರತ ತಂಡದ ಪರ ಇನಿಂಗ್ಸ್ ಆರಂಭಿಸಿದ ಯಶಸ್ವಿ ಜೈಸ್ವಾಲ್‌ ಮೊದಲ ಎಸೆತದಿಂದಲೇ ಸ್ಪೋಟಕ ಬ್ಯಾಟ್‌ ಮಾಡಿದರು. ಕೇವಲ 24 ಎಸೆತಗಳಲ್ಲಿ ಅರ್ಧಶತಕವನ್ನು ಪೂರ್ಣಗೊಳಿಸಿದ ಜೈಸ್ವಾಲ್‌, ಅಂತಿಮವಾಗಿ 25 ಎಸೆತಗಳಲ್ಲಿ 52 ರನ್‌ ಗಳಿಸಿ ನೇಥನ್‌ ಎಲ್ಲಿಸ್‌ಗೆ ವಿಕೆಟ್‌ ಒಪ್ಪಿಸಿದರು. ಅದರಲ್ಲಿಯೂ ವಿಶೇಷವಾಗಿ ಪಂದ್ಯದ ನಾಲ್ಕನೇ ಓವರ್‌ನಲ್ಲಿ ಶೇನ್ ಎಬಾಟ್‌ ಅವರ ಬೌಲಿಂಗ್‌ನಲ್ಲಿ 24 ರನ್‌ಗಳನ್ನು ಚಚ್ಚಿದ್ದರು. ಆ ಮೂಲಕ ಆಸ್ಟ್ರೇಲಿಯಾ ತಂಡದ ಎದುರು ಟಿ20ಐ ಪವರ್‌ಪ್ಲೇನಲ್ಲಿ ಭಾರತ ತಂಡ ಅತ್ಯಂತ ಗರಿಷ್ಠ ಮೊತ್ತವನ್ನು ದಾಖಲಿಸಲು ನೆರವು ನೀಡಿದ್ದರು. ಜೈಸ್ವಾಲ್‌ ಅವರ ಸ್ಪೋಟಕ…

Read More

ರಾಂಚಿ: ಮಗುವಿಗೆ ಜನ್ಮ ನೀಡಿದ ಬಳಿಕ ತಾಯಿ ಸಾವು ಕಂಡಿದ್ದಾಳೆ. ಇದರ ಬೆನ್ನಲ್ಲಿಯೇ ಮಗುವನ್ನು ಬೇರೊಬ್ಬರಿಗೆ ಮಾರಾಟ ಮಾಡಿದ ಪ್ರಕರಣದಲ್ಲಿ ರಾಂಚಿನ ಪೊಲೀಸರು ಇಬ್ಬರು ನರ್ಸ್‌ಗಳು ಸೇರಿದಂತೆ ಮೂವರು ಮಹಿಳೆಯನ್ನು ಬಂಧಿಸಿದ್ದಾರೆ. ಸಂಜೆಯ ವೇಳೆಗೆ ಇವರನ್ನು ರಾಂಚಿಯಲ್ಲಿಯೇ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದರು. ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ಮನೋಹರಪುರದಲ್ಲಿ ಪ್ರಕರಣ ದಾಖಲಾಗಿದೆ. ಮುನ್ನಿ ಚಾಂಪಿಯಾ ಎಂಬ ಯುವತಿ ಹೆರಿಗೆಯಾದ ಕೂಡಲೇ ಸಾವನ್ನಪ್ಪಿದ್ದಾಳೆ. ಈ ಪ್ರದೇಶದಲ್ಲಿ ನರ್ಸ್‌ ಆಗಿರುವ ಇಬ್ಬರು ಮಹಿಳೆಯರು ಮನೆಯಲ್ಲಿಯೇ ಆಕೆಗೆ ಹೆರಿಗೆ ಮಾಡಿಸಸಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ. https://ainlivenews.com/shooting-in-metro-also-from-now-on-bmrcl-green-signal/ ಗಂಡು ಮಗುವಿಗೆ ಜನ್ಮ ನೀಡಿದ್ದ ಆಕೆ, ಸಾವು ಕಂಡಿದ್ದರು. ಆ ಬಳಿಕ ಈ ಇಬ್ಬರು ನರ್ಸ್‌ಗಳು ಮಗುವನ್ನು ನೆರೆಯ ಜಿಲ್ಲೆಯಲ್ಲಿ ವಾಸಿಸುವ ಗುಡ್ಡಿ ಗುಪ್ತಾ ಎಂಬ ಮಹಿಳೆಗೆ ಮಾರಾಟ ಮಾಡಿದ್ದಾರೆ. ಆದರೆ, ದಿನಗಳು ಕಳೆದರೂ ಮಗು ಒಂದೇ ಸಮನೆ ಅಳುವುದು ಹಾಗ ಗಲಾಟೆ ಮಾಡುತ್ತಿದ್ದ ಕಾರಣಕ್ಕೆ ಗುಡ್ಡಿ ಗುಪ್ತಾ ಮಗುವನ್ನು ಹಿಂತಿರುಗಿಸಲು ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ…

Read More

ಗದಗ:- ಗೌರಿ ಹುಣ್ಣಿಮೆ ಹಿನ್ನೆಲೆ ಗದಗ ಹೊಸ ಬಸ್ ನಿಲ್ದಾಣ ಜನರಿಂದ ತುಂಬಿ ತುಳುಕ್ತಿದೆ. ಸವದತ್ತಿ ಯಲ್ಲಮ್ಮನ ಗುಡ್ಡಕ್ಕೆ ತೆರಳೋ ಪ್ರಯಾಣಿಕರು ಪರದಾಟ ನಡೆಸಿದ್ದಾರೆ. ಬಸ್ ಗಳಿಗಾಗಿ ಪ್ರಯಾಣಿಕರು ಕಾಯ್ದು ನಿಂತು ಸುಸ್ತಾಗಿದ್ದಾರೆ. ಎಷ್ಟೇ ಬಸ್ ಗಳು ಬಂದ್ರೂ ಕೂಡಾ ಪುಲ್ ರಶ್ ಆಗಿವೆ. ಬಸ್ ಪ್ಲಾಟ್ ಫಾರಂ ಗೆ ಬರೋ ಮುನ್ನವೇ ಜನರು ಮುಗಿಬೀಳ್ತಿದ್ದಾರೆ. ಶಕ್ತಿ ಯೋಜನೆ ಎಫೆಕ್ಟ್ ನಿಂದಾಗಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರೇ ಬಂದಿದ್ರಿಂದಾಗಿ ಬಸ್ ಗಳಲ್ಲಿ ಸೀಟ್ ಗಳಿಗಾಗಿ ಪರದಾಟ ನಡೆದಿದೆ. ಸೀಟ್ ಗಳಿಲ್ಲದೇ ನಿಂತು ಹೋಗೋ ಪರಿಸ್ಥಿತಿ ಎದುರಾಗಿದೆ.

Read More

ಗೊಂಬೆಗಳ ಲವ್ ಸಿನಿಮಾ ಖ್ಯಾತಿಯ ಅರುಣ್ ಕುಮಾರ್ (Arun Kumar) ಮರಿ ಟೈಗರ್ ವಿನೋದ್ ಪ್ರಭಾಕರ್ (Vinod Prabhakar) ಜೊತೆ ಕೈ ಜೋಡಿಸಿರುವುದು ಗೊತ್ತೇ ಇದೆ. ಇವರಿಬ್ಬರ ಕಾಂಬಿನೇಷನ್ ನೆಲ್ಸನ್ ಸಿನಿಮಾದ ಟೀಸರ್ ಧೂಳ್ ಎಬ್ಬಿಸಿದೆ. ಇದೀಗ ಚಿತ್ರತಂಡದಿಂದ ಮತ್ತೊಂದು ಅಪ್ ಡೇಟ್ ಸಿಕ್ಕಿದೆ. ನೆಲ್ಸನ್ ಗೆ ನಾಯಕಿ ಸಿಕ್ಕಿದ್ದಾಳೆ. ಮಾಸ್ ಮರಿ ಟೈಗರ್ ವಿನೋದ್ ಗೆ ಜೋಡಿಯಾಗಿ ಶ್ವೇತಾ ಡಿಸೋಜಾ ನಟಿಸಲಿದ್ದಾರೆ. ಕರಾವಳಿಯ ಚೆಲುವೆ ಶ್ವೇತಾ ಡಿಸೋಜಾ (Shweta D’Souza) ನೆಲ್ಸನ್ ಬಳಗ ಸೇರಿಕೊಂಡಿದ್ದಾರೆ. ಹಿಂದಿ ಸಿನಿಮಾ Y ಮೂಲಕ ಸಿನಿಮಾ ಜರ್ನಿ ಆರಂಭಿಸಿದ್ದ ಈ ಸುಂದರಿ ಖಾಸಗಿ ಪುಟಗಳು ಹಾಗೂ ಹೆಜ್ಜಾರು ಚಿತ್ರದಲ್ಲಿ ನಟಿಸಿದ್ದಾರೆ. ಹೆಜ್ಜಾರು ಸಿನಿಮಾಗಾಗಿ ಕಾಯ್ತಿರುವ ಶ್ವೇತಾ, ಈಗ ನೆಲ್ಸನ್ ಗೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. 1960-90ರ ದಶಕದಲ್ಲಿ ಚಾಮರಾಜನಗರದಲ್ಲಿ ನಡೆಯುವ ನೈಜ ಘಟನೆಯಾಧಾರಿತ ಚಿತ್ರ ನೆಲ್ಸನ್. ಗ್ಯಾಂಗ್ ಸ್ಟರ್ ಕಥಾಹಂದರ ಹೊಂದಿದ್ದು,  ವಿನೋದ್ ಪ್ರಭಾಕರ್ ಹಿಂದೆಂದೂ ಕಾಣದ ಅವತಾರದಲ್ಲಿ ‘ನೆಲ್ಸನ್-ರಕ್ತದಲ್ಲಿ ನೆಂದ ದೇವರಕಾಡು’ ಸಿನಿಮಾದಲ್ಲಿ ನಿಮಗೆ…

Read More

ಬೆಂಗಳೂರು:- ವಿವಿಧ ಸಂಘಟನೆಗಳಿಂದ ರಾಜಧಾನಿ ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಪ್ರತಿಭಟನೆಗೆ ಮತ್ತು ರಾಜಭವನ ಚಲೋಗೆ ಇಂದು ಕರೆ ನೀಡಲಾಗಿದೆ. ಪ್ರತಿಭಟನೆ ಹಿನ್ನೆಲೆಯಲ್ಲಿ ಇಂದು ವಾಹನಗಳ ಸಂಚಾರ ಮಾರ್ಗವನ್ನು ಬದಲಾವಣೆ ಮಾಡಲಾಗಿದ್ದು, ಈ ಕೆಳಗಿನಂತಿದೆ. ಬದಲಿ ಮಾರ್ಗ ಇಲ್ಲಿದೆ ಎಸ್‌ಬಿಎಂ ಸರ್ಕಲ್‌ನಿಂದ ಫ್ರೀಡಂಪಾರ್ಕ್‌ ಮಾರ್ಗದಲ್ಲಿ ಹೋಗುವವರು, ಮಹಾರಾಣಿ ಕಾಲೇಜು ಅಂಡರ್‌ಪಾಸ್‌ ಮೂಲಕ ಸಂಚರಿಸಬೇಕು. ಫ್ರೀಡಂಪಾರ್ಕ್‌ನಿಂದ ಕನಕದಾಸ ವೃತ್ತದ ಕಡೆ ಹೋಗಲು ಅವಕಾಶವಿಲ್ಲ. ಇನ್ನು ಕೋಡೆ ಜಂಕ್ಷನ್ ಕಡೆಯಿಂದ ಕೆ.ಆರ್.ಸರ್ಕಲ್‌ಗೆ ಹೋಗುವವರು, ಹಳೇ ಜೆಡಿಎಸ್ ಕಚೇರಿಯ ರಸ್ತೆ ಮೂಲಕ ಸಂಚರಿಸಲು ಸೂಚಿಸಲಾಗಿದೆ. ಸುಬ್ಬಣ್ಣ ಜಂಕ್ಷನ್‌ನಿಂದ ಎಂಟಿಆರ್‌ ಜಂಕ್ಷನ್‌ ಕಡೆ ಹೋಗುವವರಿಗೆ ದ್ವಿಮುಖ ಸಂಚಾರಕ್ಕೆ ಸಂಚಾರಿ ಪೊಲೀಸರು ಅವಕಾಶ ನೀಡಲಾಗಿದೆ. ಇನ್ನು ಕೋಡೆ ಜಂಕ್ಷನ್, ಮಹಾರಾಣಿ ಜಂಕ್ಷನ್, ವೈ.ರಾಮಚಂದ್ರ ರಸ್ತೆ, ಕಾಳಿದಾಸ, ಪ್ಯಾಲೆಸ್ ರಸ್ತೆ, ಕೆ.ಜಿ.ರಸ್ತೆಗಳಲ್ಲಿ ವಾಹನ ನಿಲುಗಡೆ ನಿರ್ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

Read More