ಚಳಿಗಾಲ ಬಂತೆದ್ರೆ ಡ್ರೈ ಸ್ಕಿನ್ ಸಮಸ್ಯೆ ಇದ್ದಿದ್ದೇ. ಮುಖ, ಕೈ-ಕಾಲಿನ ತೇವಾಂಶ ಕಡಿಮೆಯಾಗೋದಲ್ಲದೆ ಕಪ್ಪಾಗಿ ಕಾಣುತ್ತದೆ. ಕೂದಲು ಒಣಗಿದಂತಾಗಿ ಹುಲ್ಲಿನಂತೆ ಕಾಣುತ್ತೆ. ಇನ್ನು ಪಾದದ ಬಿರಕುನ ಸಮಸ್ಯೆ ಹೇಳೊದೇ ಬೇಡ. ಈಗಾಗಲೇ ಚಳಿಗಾಲ ಶುರುವಾಗಿರೋದ್ರಿಂದ ಇನ್ನೂ ಮೂರ್ನಾಲ್ಕು ತಿಂಗಳು ಈ ಎಲ್ಲಾ ಸಮಸ್ಯೆಗಳು ಕಾಮನ್. ಇದರಿಂದ ಸ್ವಲ್ಪ ರಿಲೀಫ್ ಪಡೆಯೋಕೆ ಈ ಟಿಪ್ಟ್ ಟ್ರೈ ಮಾಡಿ. 1. ತುಟಿಗೆ ಇರಲಿ ಆರೈಕೆ ಚಳಿಗಾಲದಲ್ಲಿ ಮೊದಲು ಎದುರಾಗೋ ಸಮಸ್ಯೆಯೇ ತುಟಿ ಒಡೆಯುವುದು, ಅಥವಾ ಕಪ್ಪಾಗುವುದು. ಪ್ರತಿನಿತ್ಯ ಲಿಪ್ ಬಾಮ್ ಹಚ್ಚಿದ್ರೂ ಚಳಿಗಾಲದಲ್ಲಿ ಹೆಚ್ಚಿನ ಕೇರ್ ಮಾಡಿಕೊಳ್ಳಬೇಕಾಗುತ್ತೆ. ಹೀಗಾಗಿ ಯಾವಾಗ್ಲೂ ಲಿಪ್ ಬಾಮ್ ಜೊತೆಯಲ್ಲಿರಲಿ. ರಾತ್ರಿ ಮಲಗುವಾಗ ಮರೆಯದೇ ಲಿಪ್ ಬಾಮ್ ಅಥವಾ ವ್ಯಾಸಲೀನ್ ಹಚ್ಚಿ ಮಲಗಿ. ತುಟಿ ತುಂಬಾ ಒಡೆದಿದ್ದು, ಕಪ್ಪಾಗಿದ್ದರೆ ಗ್ಲಿಸರಿನ್ ಅಥವಾ ಬದಾಮಿ ಎಣ್ಣೆ/ ಆಲೀವ್ ಎಣ್ಣೆ ಹಚ್ಚಿ ಮಲಗಿ. ಮೂರು ದಿನಗಳಿಗೊಮ್ಮೆ ಸ್ಕ್ರಬ್ ಮಾಡಿ. ವ್ಯಾಸಲೀನ್ಗೆ ಸ್ವಲ್ಪ ಸಕ್ಕರೆ ಬೆರೆಸಿ ತುಟಿಯ ಮೇಲೆ ನಿಧಾನವಾಗಿ ಉಜ್ಜಿ ಸ್ಕ್ರಬ್ ಮಾಡಬಹುದು.…
Author: AIN Author
ಬೆಂಗಳೂರು:- ಸಿಎಂ ಸಿದ್ದರಾಮಯ್ಯ ಅವರ ಜನತಾದರ್ಶನ ಜಾಹೀರಾತಿಗೆ ಸೀಮಿತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಟಾಂಗ್ ನೀಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಜನರ ತೆರಿಗೆ ಖರ್ಚು ಮಾಡಿ ಜಾಹಿರಾತು ನೀಡ್ತಿದಾರೆ. ಪ್ರತಿ ದಿನ ಆ ಜಾಹೀರಾತುಗಳಲ್ಲಿ ಸುಳ್ಳು ಹೇಳುತ್ತಿದ್ದಾರೆ. ನಾನು, ಯಡಿಯೂರಪ್ಪ ಇದ್ದಾಗ ಹೇಗೆ ಜನತಾದರ್ಶನ ನಡೆಸಿದೆವು ಎನ್ನುವುದು ರಾಜ್ಯದ ಜನತೆಗೆ ಗೊತ್ತಿದೆ. ಬೆಳಗ್ಗೆಯಿಂದ ಸಂಜೆಯವರೆಗೆ ಬಿಡುವು ಪಡೆಯದೇ ಅಸಂಖ್ಯಾತ ಜನರ ಅಹವಾಲು ಸ್ವೀಕರಿಸಿ ಸ್ಥಳದಲ್ಲೇ ಪರಿಹಾರ ಕೊಡುತ್ತಿದ್ದ ಆ ದಿನಗಳನ್ನು ಜನರು ಮರೆತಿಲ್ಲ ಎಂದರು ಕುಮಾರಸ್ವಾಮಿ ಹೇಳಿದರು.
SBI ಅಧಿಕೃತ ಅಧಿಸೂಚನೆಯ ಮೂಲಕ ಜೂನಿಯರ್ ಅಸೋಸಿಯೇಟ್ಸ್ (ಗ್ರಾಹಕ ಬೆಂಬಲ ಮತ್ತು ಮಾರಾಟ) ಪೋಸ್ಟ್ಗಳನ್ನು ಭರ್ತಿ ಮಾಡಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಭಾರತ ಸರ್ಕಾರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 07-Dec-2023 ರಂದು ಅಥವಾ ಮೊದಲು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. SBI ನೇಮಕಾತಿ 2023 ಅರ್ಹತಾ ವಿವರಗಳು ಶೈಕ್ಷಣಿಕ ಅರ್ಹತೆ: ಎಸ್ಬಿಐ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು. ವಯಸ್ಸಿನ ಮಿತಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 01-Apr-2023 ರಂತೆ ಕನಿಷ್ಠ 20 ವರ್ಷಗಳು ಮತ್ತು ಗರಿಷ್ಠ 28 ವರ್ಷಗಳನ್ನು ಹೊಂದಿರಬೇಕು. ವಯೋಮಿತಿ ಸಡಿಲಿಕೆ: OBC ಅಭ್ಯರ್ಥಿಗಳು: 03 ವರ್ಷಗಳು SC/ST ಅಭ್ಯರ್ಥಿಗಳು: 05 ವರ್ಷಗಳು PwBD (Gen/EWS) ಅಭ್ಯರ್ಥಿಗಳು: 10 ವರ್ಷಗಳು PwBD (OBC) ಅಭ್ಯರ್ಥಿಗಳು: 13 ವರ್ಷಗಳು…
ನಮ್ಮ ಜೀವನದಲ್ಲಿ ಆರೋಗ್ಯವಾಗಿರಲು ಹೆಲ್ದೀ ಫುಡ್ ತಿನ್ನುವುದು ತುಂಬಾ ಮುಖ್ಯ. ಹೀಗಾಗಿ ಬೆಳಗ್ಗಿನ ಉಪಾಹಾರ, ಮಧ್ಯಾಹ್ನ, ರಾತ್ರಿಯ ಊಟದ ಆಯ್ಕೆ ಸರಿಯಾಗಿರಬೇಕು. ಅದರಲ್ಲೂ ಬೆಳಗ್ಗಿನ ಉಪಾಹಾರ ಯಾವ ರೀತಿಯಿರುತ್ತದೆ ಎಂಬುದು ನಮ್ಮ ಸಂಪೂರ್ಣ ದಿನವನ್ನು ನಿರ್ಧರಿಸುತ್ತದೆ. ಹೆಚ್ಚಿನವರು ಬೆಳಗ್ಗೆದ್ದು ಹಣ್ಣು ತಿನ್ನೋ ಅಭ್ಯಾಸ ಹೊಂದಿರುತ್ತಾರೆ. ಆದರೆ ಇದು ಆರೋಗ್ಯಕ್ಕೆ ಎಷ್ಟರಮಟ್ಟಿಗೆ ಒಳ್ಳೆಯದು. ಬ್ರೇಕ್ಫಾಸ್ಟ್ಗೆ ಹಣ್ಣುಗಳನ್ನು ತಿನ್ನಬಹುದಾ ? ಎಲ್ಲಾ ಹಣ್ಣುಗಳು (Fruits) ಸಕ್ರಿಯ ಕಿಣ್ವಗಳು ಮತ್ತು ಸಿಟ್ರಿಕ್ ಆಮ್ಲ, ಟಾರ್ಟಾರಿಕ್, ಫ್ಯೂಮರಿಕ್, ಆಕ್ಸಾಲಿಕ್ ಆಮ್ಲ ಮತ್ತು ಮಾಲಿಕ್ ಆಮ್ಲವನ್ನು ಒಳಗೊಂಡಿರುತ್ತವೆ, ಇದು ಡೈರಿ ಉತ್ಪನ್ನಗಳಲ್ಲಿನ ಲ್ಯಾಕ್ಟಿಕ್ ಆಮ್ಲದೊಂದಿಗೆ ತ್ವರಿತವಾಗಿ ಪ್ರತಿಕ್ರಿಯಿಸುತ್ತದೆ ಮತ್ತು ತರಕಾರಿಗಳು, ಧಾನ್ಯಗಳು ಮತ್ತು ಜೊತೆಗೆ ಚೆನ್ನಾಗಿ ಬೆರೆಯುವುದಿಲ್ಲ. ಮಾಂಸ; ಜೀರ್ಣವಾಗದ ಚಯಾಪಚಯ ತ್ಯಾಜ್ಯವನ್ನು ಸೃಷ್ಟಿಸುತ್ತದೆ. ಈ ಹೊಂದಾಣಿಕೆಯಾಗದ ಸಂಯೋಜನೆಗಳು ಅಂಗಾಂಶದ ಚಯಾಪಚಯವನ್ನು ತಡೆಯುತ್ತದೆ ಮತ್ತು ಅಂಗಾಂಶದ ರಚನೆಯ ಪ್ರಕ್ರಿಯೆಯನ್ನು ಪ್ರತಿಬಂಧಿಸುತ್ತದೆ. ಹೀಗಾಗಿ ಎಲ್ಲರೂ ಬ್ರೇಕ್ಫಾಸ್ಟ್ಗೆ ಹಣ್ಣುಗಳನ್ನು ತಿನ್ನುವಂತಿಲ್ಲ. ಕೆಲವೊಂದು ಆರೋಗ್ಯ ಸಮಸ್ಯೆ (Health problem)ಯಿರುವವರು ಬೆಳಗ್ಗೆದ್ದು ಹಣ್ಣು ತಿನ್ನೋದನ್ನು…
ಬೆಂಗಳೂರು:- ‘ನಮ್ಮ ಮೆಟ್ರೊ’ದಲ್ಲಿ ಶೂಟಿಂಗ್ ನಡೆಸಲು BMRCL ಅಧಿಕಾರಿಗಳು ಅನುಮತಿ ನೀಡಿದ್ದು, ಹೀಗಾಗಿ ಕನ್ನಡ ಸಿನಿಮಾಕ್ಕೆ ದರ ಇಳಿಸುವಂತೆ ಮನವಿ ಮಾಡಿದ್ದಾರೆ ನಮ್ಮ ಮೆಟ್ರೊ’ದಲ್ಲಿ ಸಿನಿಮಾ, ಧಾರಾವಾಹಿ ಶೂಟಿಂಗ್ ನಡೆಸಲು ಅವಕಾಶ ನೀಡಿರುವುದನ್ನು ಸಿನಿಮಾ ರಂಗ ಸ್ವಾಗತಿಸಿದೆ. ಆದರೆ, ದಿನಕ್ಕೆ ನಿಗದಿಪಡಿಸಿರುವ ₹ 6 ಲಕ್ಷ ಬಾಡಿಗೆ ಬಹಳ ದುಬಾರಿಯಾಗಿದ್ದು, ಕನ್ನಡ ಸಿನಿಮಾಗಳಿಗೆ ಹೆಚ್ಚು ರಿಯಾಯಿತಿ ನೀಡಬೇಕು ಎಂದು ಒತ್ತಾಯಿಸಿದೆ. ಮೆಟ್ರೊ ಸಂಚಾರ ಆರಂಭವಾದಾಗ ಶೂಟಿಂಗ್ಗೆ ಅವಕಾಶ ನೀಡಲಾಗಿತ್ತು. ‘ನಟಸಾರ್ವಭೌಮ’ ಸೇರಿದಂತೆ ಕೆಲವು ಸಿನಿಮಾಗಳಲ್ಲಿ ಮೆಟ್ರೊ ರೈಲಿನ ಒಳಾಂಗಣ ದೃಶ್ಯಗಳಿವೆ. ನಂತರದಲ್ಲಿ, ಭದ್ರತೆಯ ಕಾರಣಕ್ಕಾಗಿ ಶೂಟಿಂಗ್ಗೆ ಅನುಮತಿ ನೀಡುವುದನ್ನು ನಿಲ್ಲಿಸಲಾಗಿತ್ತು. ಐದು ವರ್ಷಗಳಿಂದ ಯಾವುದೇ ಸಿನಿಮಾ ಚಿತ್ರೀಕರಣಕ್ಕೆ ಅನುಮತಿ ನೀಡಿರಲಿಲ್ಲ. ಮೆಟ್ರೊ ನಿಲ್ದಾಣ ಮತ್ತು ಮೆಟ್ರೊ ರೈಲುಗಳಲ್ಲಿ ಹಾಡು, ಫೈಟಿಂಗ್ ಇನ್ನಿತರ ದೃಶ್ಯಗಳ ಚಿತ್ರೀಕರಣಕ್ಕೆ ಅವಕಾಶ ನೀಡಬೇಕು ಎಂದು ಚಿತ್ರರಂಗದವರು ಬೇಡಿಕೆ ಇಟ್ಟಿದ್ದರು. ಇದಕ್ಕೆ ಸ್ಪಂದಿಸಿರುವ ಬಿಎಂಆರ್ಸಿಎಲ್ ಕೆಲವು ಷರತ್ತುಗಳನ್ನು ವಿಧಿಸಿ ಅನುಮತಿ ನೀಡಲು ನಿರ್ಧರಿಸಿದೆ. ಚಿತ್ರಕಥೆಗೆ ಅನುಗುಣವಾಗಿ ಚಿತ್ರೀಕರಣ ಮಾಡಬೇಕು.…
ಬೆಂಗಳೂರು:- ಭ್ರೂಣ ಹತ್ಯೆಕೋರರ ಮೇಲೆ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ ಈ ಸಂಬಂಧ ಮಾತನಾಡಿದ ಅವರು,ಭ್ರೂಣ ಪತ್ತೆ ಹಾಗೂ ಭ್ರೂಣ ಹತ್ಯೆಯಂತಹ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವವರ ಬಗ್ಗೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ. ಭ್ರೂಣ ಹತ್ಯೆಯಂತಹ ಪಾಪದ ಕೆಲಸಗಳನ್ನು ತಡೆಯಲು ಸದ್ಯದಲ್ಲೇ ಒಂದು ಸಭೆ ನಡೆಸಿ ಸೂಕ್ತ ಕ್ರಮದ ನಿರ್ಣಯ ಮಾಡುತ್ತೇವೆ’ ಎಂದರು. ರಾಜ್ಯದಲ್ಲಿ ಭ್ರೂಣ ಹತ್ಯೆ ಪ್ರಕರಣ ಬೆಳಕಿಗೆ ಬಂದಿರುವ ಬಗ್ಗೆ ಮಾಹಿತಿ ಕೇಳಿದ್ದೇನೆ. ಯಾರೇ ತಪ್ಪು ಮಾಡಿದರೂ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಅದರ ಬಗ್ಗೆ ಒಂದು ಸಭೆ ಮಾಡಿ ಸೂಕ್ತ ಕ್ರಮದ ನಿರ್ಣಯ ಮಾಡುತ್ತೇವೆ ಎಂದರು. ತೆಲಂಗಾಣ ಚುನಾವಣೆ ಬಗ್ಗೆ ಮಾತನಾಡಿದ ಅವರು, ತೆಲಂಗಾಣದಲ್ಲಿ ನಮ್ಮ ಅಭ್ಯರ್ಥಿ ಪರ ಪ್ರಚಾರಕ್ಕೆ ಹೋಗುತ್ತಿದ್ದೇನೆ. ನಮಗೆ ಮಾಹಿತಿ ಇರುವ ಪ್ರಕಾರ ಅಲ್ಲಿ ಶೇ .100ಕ್ಕೆ 100ರಷ್ಟು ನಾವು ಗೆಲ್ಲುತ್ತೇವೆ. ಕಾಂಗ್ರೆಸ್ ಸ್ಪಷ್ಟ ಬಹುಮತದಿಂದ ತೆಲಂಗಾಣ ಚುಕ್ಕಾಣಿ ಹಿಡಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇನ್ನೂ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ…
ಬ್ಯಾಂಕಾಕ್: ಮೃಗಾಲಯದ ನೌಕರರೊಬ್ಬರು ಮೊಸಳೆ ಬಾಯಲ್ಲಿ ತಲೆ ಇಟ್ಟು ಸಾಹಸ ಪ್ರದರ್ಶನ ಮಾಡಲು ಹೋಗಿ ಅವಾಂತರ ಸೃಷ್ಟಿಸಿಕೊಂಡ ಘಟನೆ ಥೈಲ್ಯಾಂಡ್ನಲ್ಲಿ ನಡೆದಿದೆ. ಯೂಟ್ಯೂಬ್ನಲ್ಲಿ ಅಪ್ಲೋಡ್ ಆಗಿರುವ ಈ ವಿಡಿಯೋದಲ್ಲಿ ವ್ಯಕ್ತಿಯು ಮೊಸಳೆಯ ಬಾಯಲ್ಲಿ ಎರಡು ಕಡ್ಡಿಗಳನ್ನ ಇಟ್ಟು ಟ್ರಿಕ್ಸ್ ಮಾಡೋದನ್ನ ನೋಡಬಹುದು. ಈ ವೇಳೆ ಬಾಯಿ ತೆರೆದುಕೊಂಡಿದ್ದ ಮೊಸಳೆ ಏನೂ ಮಾಡದೆ ಸುಮ್ಮನೆ ಇತ್ತು. ನಂತರ ಮೊಸಳೆ ಬಾಯೊಳಗೆ ಆ ವ್ಯಕ್ತಿ ತನ್ನ ತಲೆಯನ್ನು ಇಟ್ಟಿದ್ದಾರೆ. ಕೆಲವು ಸಕೆಂಡ್ಗಳ ಕಾಲ ಮೊಸಳೆ ಬಾಯಿ ತೆರೆದುಕೊಂಡೇ ಇತ್ತು. ಆದ್ರೆ ಇದ್ದಕ್ಕಿದ್ದಂತೆ ಬಾಯಿ ಮುಚ್ಚಿ ತಲೆ ಹಿಡಿದು ಎಳೆದಾಡಿದೆ. ನಂತರ ಆ ವ್ಯಕ್ತಿಯನ್ನ ಬಿಟ್ಟು ಪಕ್ಕದಲ್ಲಿದ್ದ ನೀರಿನ ಕೊಳದೊಳಗೆ ಹೋಗಿದೆ. ಮೊಸಳೆ ಬಾಯಿಗೆ ತಲೆ ಕೊಟ್ಟ ವ್ಯಕ್ತಿ ನೋವಿನಿಂದ ನರಳಾಡಿದ್ದಾರೆ. https://www.youtube.com/watch?v=vkid6ojyc8c&t=10s&ab_channel=LoudandBeach ಇಲ್ಲಿನ ಕೊಹ್ ಸಮುಯ್ನಲ್ಲಿ ಕಳೆದ ಭಾನುವಾರ ಈ ಘಟನೆ ನಡೆದಿದ್ದು, ಪ್ರವಾಸಿಗರೊಬ್ಬರು ಇದನ್ನ ವಿಡಿಯೋ ಮಾಡಿದ್ದಾರೆ. ಆಂಗ್ಲ ಪತ್ರಿಕೆಯೊಂದರ ವರದಿಯ ಪ್ರಕಾರ ಈ ವ್ಯಕ್ತಿ ಇದಕ್ಕೂ ಮೊದಲು ಮೊಸಳೆಗಳಿಂದಾಗಿ ಆಗಿದ್ದ ಗಾಯ, ಕಟ್…
ಬೆಂಗಳೂರು:- ಸಂಸ್ಕೃತಿ ಹಾಗೂ ಸಾಹಸದ ಸಂಕೇತವೇ ತುಳುವರು ಎಂದು ಬಿವೈ ವಿಜಯೇಂದ್ರ ಹೇಳಿದ್ದಾರೆ. ಕಂಬಳದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು,ತುಳುವರು ಸಂಸ್ಕೃತಿ, ಸಾಹಸದ ಸಂಕೇತವಾಗಿದ್ದು, ಕಂಬಳ ಮುಂದಿನ ವರ್ಷಗಳಲ್ಲಿ ರಾಜಧಾನಿಯಲ್ಲಿ ಇನ್ನಷ್ಟು ವಿಜೃಂಭಣೆಯಿಂದ ನಡೆಯಲಿದೆ ಎಂದರು. ತುಳುವರು ಎಂದರೆ ಸಾಂಸ್ಕೃತಿಕ ಸಂಕೇತ, ಸಾಹಸದ ಸಂಕೇತ, ಧಾರ್ಮಿಕ ಶೃದ್ಧೆಯ ಸಂಕೇತ. ವಿಶ್ವಮಟ್ಟದಲ್ಲಿ ಸ್ನೇಹದ ಸಾಮ್ರಾಜ್ಯ ಸ್ಥಾಪಿಸಿದ ಕೀರ್ತಿ ತುಳುವರಿಗೆ ಸಲ್ಲುತ್ತದೆ ಎಂದರು. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಕರಾವಳಿ ಭಾಗಕ್ಕೆ ಶಕ್ತಿ ತುಂಬುವ ಕೆಲಸ ಮಾಡಿದ್ದರು. ಕರಾವಳಿಯ ಸಂಸ್ಕೃತಿ ಉಳಿಸುವ ಕೆಲಸ ಮಾಡಿದ್ದರು. ನಮಗೆ ಕರಾವಳಿಯ ಬಗೆಗೆ ವಿಶೇಷ ಗೌರವ, ಅಭಿಮಾನವಿದೆ. ಎಂದಿಗೂ ನಿಮ್ಮ ಜೊತೆಗೆ ನಿಲ್ಲುತ್ತೇವೆ ಎಂದು ಹೇಳಿದರು
ಬೆಳಗಾವಿ:- ಇಲಾಖೆಗಳ ವಿಲೀನಕ್ಕೂ, ಗ್ಯಾರಂಟಿ ಯೋಜನೆಗೂ ನಂಟಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ರೇಷ್ಮೆ ಇಲಾಖೆಯನ್ನು ಕೃಷಿ ಇಲಾಖೆಯೊಳಗೆ ವಿಲೀನ ಮಾಡುವುದಕ್ಕೂ, ಗ್ಯಾರಂಟಿ ಯೋಜನೆಗೂ ಯಾವುದೇ ಸಂಬಂಧವಿಲ್ಲ. ರೇಷ್ಮೆ ಇಲಾಖೆಯನ್ನು ಕೃಷಿ ಇಲಾಖೆಯೊಳಗೆ ವಿಲೀನ ಮಾಡುವ ಪ್ರಕ್ರಿಯೆ 10 ವರ್ಷಗಳ ಹಿಂದಯೇ ನಡೆದಿದೆ ಎಂದರು ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ಅನುದಾನ ಕೊರತೆಯಾಗಿದ್ದಕ್ಕೆ ಕೃಷಿ ಇಲಾಖೆಯಲ್ಲಿ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳನ್ನು ವಿಲೀನಗೊಳಿಸಲು ಸರ್ಕಾರ ಮುಂದಾಗಿದೆಯೇ?’ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕೆಲವು ಇಲಾಖೆಗಳು ಪ್ರತ್ಯೇಕವಾಗಿ ಕಾರ್ಯನಿರ್ವಹಿಸುವ ಅವಶ್ಯಕತೆ ಇಲ್ಲ. ಹಾಗಾಗಿ ಈ ಇಲಾಖೆಗಳನ್ನು ವಿಲೀನಗೊಳಿಸುವ ಬಗ್ಗೆ 10 ವರ್ಷಗಳ ಹಿಂದೆಯೇ ವರದಿ ಕೊಟ್ಟಿದ್ದಾರೆ. ಈ ರೀತಿ ಹಿಂದಿನ ಸರ್ಕಾರಗಳಲ್ಲೂ ವಿಲೀನ ಪ್ರಕ್ರಿಯೆ ನಡೆದಿವೆ. ಗ್ಯಾರಂಟಿ ಯೋಜನೆಗಳಿಗೂ ಮತ್ತು ಇದಕ್ಕೂ ಯಾವುದೇ ಸಂಬಂಧವಿಲ್ಲ’ ಎಂದು ಸ್ಪಷ್ಟಪಡಿಸಿದರು. ಕಾಂತರಾಜ್ ಆಯೋಗದ ವರದಿ ಜಾರಿಯಾದರೆ ಕಾಂಗ್ರೆಸ್ ಸರ್ಕಾರಕ್ಕೆ ತೊಂದರೆಯಾಗುತ್ತದೆಯೇ? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಆಯೋಗದವರು ನಮಗೆ ಇನ್ನೂ ವರದಿಯನ್ನೇ…
ಬೆಂಗಳೂರು:- ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಇಂದು ಜನತಾ ದರ್ಶನ ನಡೆಸಲಿದ್ದಾರೆ. ಸಾರ್ವಜನಿಕರ ಅಹವಾಲುಗಳಿಗೆ ತ್ವರಿತ ಪರಿಹಾರ ಒದಗಿಸುವ ಆಶಯದೊಂದಿಗೆ ಈ ಜನತಾ ದರ್ಶನ ನಡೆಸಲಿದ್ದಾರೆ. ಅಹವಾಲುಗಳನ್ನು ಸ್ವೀಕರಿಸಲು ಒಟ್ಟು 20 ಕೌಂಟರ್ಗಳನ್ನು ಸ್ಥಾಪಿಸಲಾಗಿದ್ದು, ವಿಶೇಷ ಚೇತನರು ಮತ್ತು ಹಿರಿಯ ನಾಗರಿಕರಿಗೆ ಎರಡು ಕೌಂಟರ್ಗಳನ್ನು ಮೀಸಲಿರಿಸಲಾಗಿದೆ. ಸ್ವೀಕರಿಸಿದ ಅಹವಾಲುಗಳನ್ನು ಇಲಾಖಾವಾರು ವಿಂಗಡಿಸಿ ತಂತ್ರಾಂಶದಲ್ಲಿ ದಾಖಲಿಸಿ, ಅರ್ಜಿದಾರರಿಗೆ ಸ್ವೀಕೃತಿ ಪತ್ರ ನೀಡಿದ ನಂತರ ಮುಖ್ಯಮಂತ್ರಿಯವರು ಅವರ ಅಹವಾಲುಗಳನ್ನು ಆಲಿಸಿ ಪರಿಹಾರ ಸೂಚಿಸಲಿದ್ದಾರೆ. ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿಯವರು ಈಗಾಗಲೇ ಸುತ್ತೋಲೆ ಹೊರಡಿಸಿ, ಸರ್ಕಾರದ ಎಲ್ಲ ಕಾರ್ಯದರ್ಶಿಗಳು / ಇಲಾಖಾ ಮುಖ್ಯಸ್ಥರು ಖುದ್ದು ಹಾಜರಿರುವಂತೆ ಹಾಗೂ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಎಲ್ಲಾ ಜಿಲ್ಲಾ/ ಉಪವಿಭಾಗ/ ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ಹಾಜರಿರುವಂತೆ ಸೂಚಿಸಿದ್ದಾರೆ. ಜನಸ್ಪಂದನ ಕಾರ್ಯಕ್ರಮದಲ್ಲಿ ಅಹವಾಲು ಸಲ್ಲಿಸಲು ಆಗಮಿಸುವ ನಾಗರಿಕರು ತಮ್ಮ ಗುರುತಿಗಾಗಿ ಆಧಾರ್ ಕಾರ್ಡ್…