Author: AIN Author

ಬೆಂಗಳೂರು: ಕಾಂಗ್ರೆಸ್ ಗೆ ಹಾಗೂ ಪರಿಷತ್ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಿಜೆಪಿಗೆ ಸೇರಿದ್ದೇನೆ  ಅಮಿತ್ ಶಾ ಅವರನ್ನೂ ಭೇಟಿ ಮಾಡಿದ್ದೇನೆ ಯಡಿಯೂರಪ್ಪ ಸೇರಿದಂತೆ ಎಲ್ಲ ನಾಯಕರು ಉಪಸ್ಥಿತರಿದ್ದರು ಎಂದು ಬಿಜೆಪಿ ಸೇರಿದ ಬಳಿಕ ಶೆಟ್ಟರ್‌ ಹೇಳಿದ್ದಾರೆ. ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು , ಎಲ್ಲ ನಾಯಕರು, ನಿಮಗೆ ಸೂಕ್ತ ಸ್ಥಾನಮಾನ, ಗೌರವ ಕೊಡುತ್ತೇವೆ ಎಂದಿದ್ದಾರೆ ಬಿಜೆಪಿಗೆ ವಾಪಸ್ ಬರುವ ಪ್ರಕ್ರಿಯೆ ಕೇವಲ ನಾಲ್ಕು ಗಂಟೆಯಲ್ಲಿ ಆಗಿದ್ದಲ್ಲ ಇದು ನನ್ನ ಮನೆ, ನಾವೆಲ್ಲ ಕಟ್ಟಿ ಬೆಳೆಸಿದ ಮನೆ ನಮ್ಮ ಕುಟುಂಬದವರೆಲ್ಲ ಜನಸಂಘದಿಂದ ಜೊತೆಗೆ ಇದ್ದೇವೆ  ಅಸ್ಸೆಂಬ್ಲಿ ಚುನಾವಣೆ ವೇಳೆ ಕೆಲ ಘಟನೆ ನಡೆಯಿತು ಅದರಿಂದ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದೆ  ಕಾಂಗ್ರೆಸ್ ತೊರೆದು ಮತ್ತೆ ಬಿಜೆಪಿ ಸೇರಿದ್ದೇನೆ ಮೋದಿ ಅವರ 10 ವರ್ಷಗಳಿಂದ ಉತ್ತಮ ಕೆಲಸ ಮಾಡಿದ್ದಾರೆ ಮತ್ತೊಮ್ಮೆ ಅವರು ಪ್ರಧಾನಿ ಆಗಬೇಕು ಎಂಬ ಆಶಯ ಇದೆ ಅದಕ್ಕಾಗಿ ಬಿಜೆಪಿ ಸೇರಿದ್ದೇನೆ  ಜಗತ್ತಿನಲ್ಲೇ ಭಾರತ ಆರ್ಥಿಕವಾಗಿ ಕೂಡ ಬಲಿಷ್ಟವಾಗಿದೆ ಅವರು ಮತ್ತೊಮ್ಮೆ ಪ್ರಧಾನಿ…

Read More

ಕೆಲವು ದಿನಗಳ ಹಿಂದೆ ಬಿಗ್‌ಬಾಸ್‌, ಮನೆಯಲ್ಲಿರುವ ಆರು ಸ್ಪರ್ಧಿಗಳಿಗೆ ಅವರ ಆಸೆಗಳನ್ನು ಕೇಳಿತ್ತು. ಈಗ ಅವರ ಆಸೆಗಳನ್ನೆಲ್ಲ ಒಂದೊಂದಾಗಿ ಈಡೇರಿಸುತ್ತಿದ್ದಾರೆ ಬಿಗ್‌ಬಾಸ್. ಆ ಸನ್ನಿವೇಶ ಹೇಗಿದೆ ಎಂಬುದು JioCinema ಬಿಡುಗಡೆ ಮಾಡಿರುವ ಪ್ರೋಮೊದಲ್ಲಿ ಜಾಹೀರಾಗಿದೆ. ‘ತುಕಾಲಿಯವರೆ ಕೆಲಸಮಯಕ್ಕೆ ರಾಜನಂತೆ ಬದುಕಬೇಕು’ ಎಂದು ಬಿಗ್‌ಬಾಸ್‌ ಹೇಳಿದ್ದಾರೆ. ಅದಕ್ಕೆ ಅನುಗುಣವಾಗಿ ಕೆಂಪು ಸೂಟ್ ತೊಟ್ಟುಕೊಂಡ ತುಕಾಲಿ ಮಹಾರಾಜ್‌, ಮರುಕ್ಷಣವೇ ಮನೆಮಂದಿಗೆ ಅಪ್ಪಣೆಗಳನ್ನು ನೀಡಲು ಪ್ರಾರಂಭಿಸಿದ್ದಾರೆ. ‘ಪಿಲ್ಲೊವನ್ನು ತೆಗೆದುಕೊಂಡು ನನಗೆ ಬೀಸು’ ಎಂದು ಕಾರ್ತಿಕ್‌ಗೆ ಅಪ್ಪಣೆ ಮಾಡಿದ್ದಾರೆ. ಅಷ್ಟೇ ಅಲ್ಲ, ತುಕಾಲಿ ಮಹಾರಾಜರ ಮನಗೆಲ್ಲಲು ಬಿಗ್‌ಬಾಸ್‌ ಮನೆಯಲ್ಲಿ ಹೊಸ ರಾಜಕುಮಾರಿ ಅವತರಿಸಿದ್ದಾಳೆ. ಅಪ್ಪಣೆ ಮಾಡುವ ಮುನ್ನವೇ ತುಕಾಲಿ ಅವರಿಗೆ ಅವಸರವಸರವಾಗಿ ಮುತ್ತಿಟ್ಟು ತನ್ನ ಪ್ರೇಮವನ್ನೂ ವ್ಯಕ್ತಪಡಿಸಿದ್ದಾಳೆ. ‘ಎಷ್ಟು ಆತುರದಿಂದ ಕಾಯುತ್ತಿದ್ದೀಯಾ ಎಂದು ಈಗ ಗೊತ್ತಾಯ್ತು’ ಎಂದು ಆ ರಾಜಕುಮಾರಿಯ ಪ್ರೇಮಕ್ಕೆ ಮಹಾರಾಜರೇ ತಬ್ಬಿಬ್ಬಾಗಿದ್ದಾರೆ. ಅಷ್ಟೇ ಅಲ್ಲ, ಪ್ರತಾಪ್‌ ಕಂಪನಿಯ ಡ್ರೋಣ್‌ ಬಿಗ್‌ಬಾಸ್‌ ಮನೆಯೊಳಗೆ ಲ್ಯಾಂಡ್ ಆಗಿದೆ. ನೀಲಿ ಬಣ್ಣದ ಈ ಡ್ರೋಣ್ ಚೆಲುವೆಯನ್ನು ನೋಡಿ ಪ್ರತಾಪ್‌,…

Read More

ಬೆಂಗಳೂರು : ನಮ್ಮವರ ಕುತಂತ್ರ-ಪಿತೂರಿಯಿಂದಲೇ ಬ್ರಿಟಿಷರು 400 ವರ್ಷ ಭಾರತ ಆಳಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಖೋಡೆ ವೃತ್ತದಲ್ಲಿ ನಡೆದ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಪುಣ್ಯ ಸಂಸ್ಮರಣಾ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಮಾಜದ ಬದಲಾವಣೆಗೆ ಒಪ್ಪದ, ಸಮಾನ ಅವಕಾಶಗಳನ್ನು ಒಪ್ಪದ, ಅಸಮಾನತೆಯನ್ನು ಪೋಷಿಸಬೇಕು ಎನ್ನುವವರು ಈಗಲೂ ನಮ್ಮ ನಡುವೆಯೇ ಇದ್ದಾರೆ. ಇಂಥವರು ಬಹಳ ಅಪಾಯಕಾರಿ. ಇವರ ಬಗ್ಗೆ ಎಚ್ಚರದಿಂದ ಇರಿ ಎಂದು ಕರೆ ನೀಡಿದರು. ಸ್ವಾತಂತ್ರ ಪ್ರೇಮಿ, ದೇಶ ಪ್ರೇಮಿ ಸಂಗೊಳ್ಳಿರಾಯಣ್ಣನನ್ನು ನಮ್ಮವರ ಕುತಂತ್ರದಿಂದಲೇ ಬ್ರಿಟಿಷರಿಗೆ ಹಿಡಿದು ಕೊಡಲಾಯಿತು. ರಾಯಣ್ಣ ಕುರುಬ ಸಮುದಾಯದವರು ಎನ್ನುವ ಕಾರಣಕ್ಕೆ ನಾವು ಗೌರವಿಸುವುದಲ್ಲ, ಬದಲಿಗೆ ರಾಯಣ್ಣನ ದೇಶಪ್ರೇಮ ಮತ್ತು ತ್ಯಾಗದ ಕಾರಣದಿಂದಾಗಿ ಅವರನ್ನು ಪ್ರತಿಯೊಬ್ಬರೂ ಸ್ಮರಿಸಬೇಕು, ಗೌರವಿಸಬೇಕು. ಪ್ರತೀ ಮನೆಗಳಲ್ಲೂ ರಾಯಣ್ಣ ಜನಿಸಬೇಕು ಎಂದರು. ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ರಾಯಣ್ಣ ಹೆಸರಿಡಲು ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗಿದೆ. ಕೆಂಪೇಗೌಡ ಪ್ರಾಧಿಕಾರ ಮಾಡಿದ್ದು ನಾವೇ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡ ಹೆಸರಿಗೆ ಶಿಫಾರಸ್ಸು ಮಾಡಿದ್ದು ಕೂಡ ನಾವೆಯೇ.…

Read More

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಬಿಜೆಪಿಗೆ ಮರಳಿದ್ದಾರೆ. ಕರ್ನಾಟಕದಲ್ಲಿ ಇನ್ಮುಂದೆ ಕಾಂಗ್ರೆಸ್ ಪಕ್ಷದ ಕೈಚಳಕ ನಡೆಯುವುದಿಲ್ಲ ಎಂಬ ಸ್ಪಷ್ಟ ಸಂದೇಶ ಇದರಿಂದ ಕೊಟ್ಟಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ನಗರದ ವಿಮಾನನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ 28ಕ್ಕೆ 28 ಲೋಕಸಭಾ ಸ್ಥಾನ ಗೆಲ್ಲುವ ಸ್ಪಷ್ಟ ಸೂಚನೆ ಇದಾಗಿದೆ ಎಂದು ತಿಳಿಸಿದರು. ಮುಂದೆ ಯಾವಾಗ ವಿಧಾನಸಭಾ ಚುನಾವಣೆ ನಡೆದರೂ ಸ್ಪಷ್ಟ ಬಹುಮತದೊಂದಿಗೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಶ್ರಮಿಸುತ್ತೇವೆ ಎಂದು ತಿಳಿಸಿದರು. ಈ ರಾಜಕೀಯ ಬೆಳವಣಿಗೆ ವಿಚಾರದಲ್ಲಿ ನಮ್ಮ ಪಕ್ಷದ ಎಲ್ಲ ಕಾರ್ಯಕರ್ತರು, ಮುಖಂಡರು ಸಂತಸದಿಂದಿದ್ದಾರೆ ಎಂದೂ ಅವರು ತಿಳಿಸಿದರು. ಬಿಜೆಪಿ ಕರ್ನಾಟಕದ ಭದ್ರಕೋಟೆ ಎಂದು ಸಾಬೀತು ಪಡಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು

Read More

ದೀಕ್ಷಿತ್ ಶೆಟ್ಟಿ (Dixit Shetty) ಹಾಗೂ ಚೈತ್ರ ಆಚಾರ್‍ (Chaitra Achar) ಮುಖ್ಯಭೂಮಿಯಲ್ಲಿ ನಟಿಸಿರುವ ‘ಬ್ಲಿಂಕ್’ (Blink) ಚಿತ್ರತಂಡ, ಚಿತ್ರೀಕರಣದ ದಿನದಿಂದಲೂ ತಮ್ಮ ವಿನೂತನ ಪ್ರಚಾರ ತಂತ್ರಗಳಿಂದ ಚಂದನವನದಲ್ಲಿ ಗಮನ ಸೆಳೆದಿದೆ. ತಮ್ಮ ಚಿತ್ರವನ್ನು ಜನರಿಗೆ ಮುಟ್ಟಿಸುವಲ್ಲಿ ಗೆಲ್ಲಲೇಬೇಕು ಎಂದು ಶಪಥ ಮಾಡಿರುವ ಈ ತಂಡ ಯಾವುದೇ ಮುಚ್ಚು ಮರೆ ಇಲ್ಲದೆ , ನೂತನ ಚಿತ್ರಗಳನ್ನು ಕಟ್ಟುವಲ್ಲಿ , ಜನರಿಗೆ ತಲುಪಿಸುವಲ್ಲಿ ಇರುವ ಸಮಸ್ಯೆಗಳನ್ನು ತಿಳಿಸಲು ವಿನೂತನ ಪ್ರಯೋಗ ಮಾಡಿದ್ದು ‘ಜನರಿಂದಲೇ ಸಿನಿಮಾ, ಜನರೇ ಸಿನಿಮಾ’ ಎಂಬಾ ವಿಶಿಷ್ಟ ಸಾಲುಗಳು ಜನರ ಮನಸ್ಸನ್ನು ಗೆಲ್ಲುತ್ತಿವೆ. ಚಿತ್ರಮಂದಿರದಿಂದ ದೂರ ಉಳಿದಿರುವ ಜನರಿಗೆ, ಮತ್ತೆ ಚಿತ್ರಮಂದಿರದ ಆ ಮಾಂತ್ರಿಕ ಜಗತ್ತಿನ ವಿಶೇಷತೆಯನ್ನು ಮನಮುಟ್ಟುವಂತೆ ನಿರೂಪಿಸಿದ್ದಾರೆ. ಈಗಾಗಲೇ ತಮ್ಮ ಹೊಸತನದಿಂದ ಜನರ ಗಮನಸೆಳೆದಿರುವ ಬ್ಲಿಂಕ್ ತಂಡವು ಮಾರ್ಚ್ ನಲ್ಲಿ ಚಿತ್ರಮಂದಿರದೊಳಗೆ ಪ್ರವೇಶಿಸಲು ಎಲ್ಲಾ ಸಿದ್ದತೆ ಮಾಡಿಕೊಂಡಿದೆ. ಜನನಿ ಪಿಕ್ಚರ್ಸ್ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಬ್ಲಿಂಕ್ ಚಿತ್ರವು ಸೈಫೈ ಪ್ರಕಾರದ ಚಿತ್ರವಾಗಿದ್ದು ಪ್ರೇಕ್ಷಕರನ್ನು ಸೆಳಿದಿಟ್ಟುಕೊಳ್ಳುವುದು ಖಂಡಿತವೆಂದು ನಿರ್ಮಾಪಕ ರವಿಚಂದ್ರ…

Read More

ಬೆಂಗಳೂರು: ಜನವರಿ 26 ಭಾರತಕ್ಕೆ ತುಂಬಾನೇ ಮಹತ್ವದ ದಿನ.ಈ ದಿನವನ್ನ ದೇಶದೆಲ್ಲಡೆ ಸಂಭ್ರಮ ಸಡಗರದಿಂದ ಆಚರಣೆ ಮಾಡಲಾಗ್ತದೆ. ಈ ಬಾರಿಯೂ 75 ನೇ ಗಣರಾಜ್ಯೋತ್ಸವನ್ನ ಎಲ್ಲಡೆ ಅದ್ದೂರಿಯಾಗಿ ಆಚರಣೆ ಮಾಡಲಾಯಿತು. ರಾಜಧಾನಿ ಬೆಂಗಳೂರಿನಲ್ಲೂ ಗಣರಾಜ್ಯೋತ್ಸವ ದೇಶಭಕ್ತಿಯನ್ನ ಮೊಳಗಿಸಿತ್ತು. ಹಾಗಾದ್ರೆ ನಗರದ ಮಾಣಿಷ್ ಷಾ ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವ ಹೇಗಿತ್ತು ಬನ್ನಿ ತೋರಿಸ್ತೀವಿ ಮೈದಾನದಲ್ಲಿ ತುಂಬಿದ ತ್ರಿವರ್ಣದ ರಂಗು. ಮನದೊಳಗೆ ರಾಷ್ಟ್ರಭಕ್ತಿಯ ಪುಳಕ.. ಧ್ವಜಾರೋಹಣದ ವೇಳೆ ಸುರಿದ ಹೂಮಳೆ. ಜನಗಣಮನದ ನಾದಕ್ಕೆ ಉದೆಯಉಬ್ಬಿಸಿದ ಜನ.. ಮೈ ಜಮ್ಮೆನಿಸಿದ ಸಾಹನ ಬೈಕ್ ಪ್ರದರ್ಶನ… 75 ನೇ ಗಣರಾಜ್ಯೋತ್ಸವಕ್ಕೆ ನಗರದ ಮಾಣಿಕ್ ಷಾ ಪರೇಟ್ ಮೈದಾನ ಇಂದು ಸಾಕ್ಷಿಯಾಗಿದ್ದು ಹೀಗೆ.. ಸಮಾರಂಭದಲ್ಲಿ ಸೇನೆ ಹಾಗೂ ವಿದ್ಯಾರ್ಥಿ ತಂಡಗಳು ಚಿತ್ತಾಕರ್ಷಕ ಪಥ ಸಂಚಲನ ನಡೆಸಿದ್ರೆ ,ವಿವಿಧ ಶಾಲೆಗಳ ಮಕ್ಕಳು ರಾಷ್ಟ್ರಭಕ್ತಿ ಗೀತೆಗಳಿಗೆ ಹೆಜ್ಜೆಯಾದರು. ಹೌದು.. ಬೆಂಗಳೂರಿನ ಮಾಣಿಕ್ ಷಾ ಮೈದಾನದಲ್ಲಿ ಗಣರಾಜ್ಯೋತ್ಸವ ಸಂಭ್ರಮ ಇವತ್ತು ಕಳೆಗಟ್ಟಿತ್ತು. ಮೈದಾನ ಮಧುವಣಗಿತ್ತಿಯಂತೆ ಸಿಂಗಾರಗೊಂಡಿತ್ತು. ಮಾಣಿಕ್ ಷಾ ಮೈದಾನದಲ್ಲಿ ರಾಜ್ಯಪಾಲ ಥಾವರ್…

Read More

75ನೇ ಗಣರಾಜ್ಯೋತ್ಸವಕ್ಕೆ ವಿಶೇಷ ಡೂಡಲ್ ಮೂಲಕ ಗೂಗಲ್ ಶುಭ ಕೋರಿದೆ. ಹೌದು ಕ್ಷಣ ಕ್ಷಣಕ್ಕೂ ಟೆಕ್ನಾಲಜಿ ಅಭಿವೃದ್ಧಿಯಾಗುತ್ತಲೇ ದೇಶ ಪರಿವರ್ತನೆಯಾಗುತ್ತದೆ. ಇಂತಹ ಕಾಲಘಟ್ಟವನ್ನು ಗೂಗಲ್​ ವಿಶೇಷವಾಗಿ ಹಂಚಿಕೊಂದಿದ. ಗೂಗಲ್​ ಡೂಡಲ್​ನ ಇಂದಿನ ವಿಶೇಷವೇನು..? ಅನಲಾಗ್ ಟಿವಿಗಳ ಯುಗದಿಂದ ಸ್ಮಾರ್ಟ್‌ಫೋನ್‌ಗಳ ಬಳಕೆಯವರೆಗೆ ದೇಶ ಪರಿವರ್ತನೆಯಾದ ಕಾಲಘಟ್ಟದ ಬಗ್ಗೆ ಹಂಚಿಕೊಂಡಿದೆ. ಕಾಲ ಕಳೆದಂತೆ ಕಪ್ಪು-ಬಿಳಿಯ ಟಿವಿ ಪರದೆಗಳು ಬಣ್ಣದ ಟಿವಿಗಳಾಗಿವೆ. ಅದರ ನೋಡುಗರು ಮಾತ್ರ ಅದೇ ಹೆಮ್ಮೆಯಿಂದ ವೀಕ್ಷಿಸುತ್ತಿದ್ದಾರೆ ಎಂದು ಗೂಗಲ್ ಬರೆದುಕೊಂಡಿದೆ. ಈ ಡೂಡಲ್ ಭಾರತದ ಗಣರಾಜ್ಯೋತ್ಸವವನ್ನು ಆಚರಿಸುತ್ತದೆ, ಇದು 1950 ರಲ್ಲಿ ಭಾರತದ ಸಂವಿಧಾನವನ್ನು ಅಂಗೀಕರಿಸಿದ ದಿನವನ್ನು ನೆನಪಿಸುತ್ತದೆ ಮತ್ತು ರಾಷ್ಟ್ರವು ತನ್ನನ್ನು ತಾನು ಸಾರ್ವಭೌಮ, ಪ್ರಜಾಪ್ರಭುತ್ವ ಮತ್ತು ಗಣರಾಜ್ಯವೆಂದು ಘೋಷಿಸಿದ ದಿನ’ ಎನ್ನುವ ಮಾಹಿತಿಯನ್ನು ಡೂಡಲ್‌ನಲ್ಲಿ ವಿವರಿಸಿದೆ.

Read More

ನವದೆಹಲಿ: 75ನೇ ಗಣರಾಜ್ಯೋತ್ಸವ (75th Republic Day) ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು (Narendra Modi) ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ತೆರಳಿ ಮಡಿದ ವೀರರಿಗೆ ಗೌರವ ಸಲ್ಲಿಸಿದರು. ಇಂದು ಬೆಳಗ್ಗೆ ಮೋದಿ ಅವರು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಗೌರವ ಸಲ್ಲಿಸಿದರು. ಮಡಿದ ವೀರಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಬಳಿಕ ಮೋದಿ ಮತ್ತು ಇತರ ಗಣ್ಯರು ಮೆರವಣಿಗೆಯನ್ನು ವೀಕ್ಷಿಸಲು ಕರ್ತವ್ಯ ಪಥದಲ್ಲಿನ ವೇದಿಕೆಗೆ ತೆರಳಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಅವರ ಫ್ರೆಂಚ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಅವರ ಆಗಮಿಸಿದ ವೇಳೆ ರಾಷ್ಟ್ರಪತಿಗಳ ಅಂಗರಕ್ಷಕರು ಬೆಂಗಾವಲು ನೀಡಿದ್ದಾರೆ. ರಾಷ್ಟ್ರಪತಿಗಳ ಅಂಗರಕ್ಷಕ ಭಾರತೀಯ ಸೇನೆಯ ಅತ್ಯಂತ ಹಿರಿಯ ರೆಜಿಮೆಂಟ್ ಆಗಿದೆ.  ಅಂಗರಕ್ಷಕ್ 1773 ರಲ್ಲಿ ಸ್ಥಾಪನೆಯಾದಾಗಿನಿಂದ 250 ವರ್ಷಗಳ ಸೇವೆಯನ್ನು ಪೂರ್ಣಗೊಳಿಸಿದೆ. ಇನ್ನು ಸುಮಾರು 40 ವರ್ಷಗಳ ಬಳಿಕ‌ ಈ ಬಾರಿ ಕರ್ತವ್ಯ ಪಥದಲ್ಲಿ ರಾಷ್ಟ್ರಪತಿಯವರು ಸಾರೋಟಿನಲ್ಲಿ ಬಂದಿಳಿದಿದ್ದಾರೆ. https://ainlivenews.com/rs-3-lakh-loan-for-women-without-interest-how-to-apply-here-is-the-complete-details/ ದೇಶೀಯ ಗನ್ ಸಿಸ್ಟಮ್ 105-ಎಂಎಂ ಇಂಡಿಯನ್ ಫೀಲ್ಡ್ ಗನ್‌ಗಳೊಂದಿಗೆ ನೀಡಲಾದ 21-ಗನ್ ಸೆಲ್ಯೂಟ್‌ನೊಂದಿಗೆ…

Read More

ಬೆಂಗಳೂರು: ರಾಜ್ಯದಲ್ಲಿ ಇಂದು 76 ಮಂದಿಗೆ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ ಇಂದು ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 5,037 ಜನರನ್ನು ಕೋವಿಡ್‌ ಪರೀಕ್ಷೆಗೆ ಒಳಪಡಿಸಲಾಗಿದ್ದು, 76 ಮಂದಿಗೆ ಸೋಂಕು ದೃಢಪಟ್ಟಿದೆ. ಇಂದು ಯಾವುದೇ ಸಾವು ನೋವು ವರದಿಯಾಗಿಲ್ಲ. ಒಟ್ಟಾರೆಯಾಗಿ ರಾಜ್ಯದಲ್ಲಿ 349 ಸಕ್ರಿಯ ಪ್ರಕರಣಗಳಿವೆ. ನಿನ್ನೆಗಿಂತ ಇಂದು ಗುಣಮುಖರಾಗಿರುವವರ ಸಂಖ್ಯೆ ಹೆಚ್ಚಿದೆ. ಇನ್ನುಳಿದಂತೆ ಇಂದು ಕೋವಿಡ್‌ನಿಂದ ಗುಣಮುಖರಾಗಿ 349 ಜನರು ಆಸ್ಪತ್ರೆಗಳಿಂದ ಡಿಸ್ಚಾರ್ಜ್‌ ಆಗಿದ್ದಾರೆ. ಪಾಸಿಟಿವಿಟಿ ದರ ಶೇ. 1.50 ಇದೆ. ಬೆಂಗಳೂರಿನಲ್ಲಿ ಇಂದು 25 ಪಾಸಿಟಿವ್‌ ಕೇಸ್‌ಗಳು ವರದಿಯಾಗಿದೆ. ಮೈಸೂರಿನಲ್ಲಿ 9, ಮಂಡ್ಯದಲ್ಲಿ 6, ತುಮಕೂರಿನಲ್ಲಿ 5, ದಕ್ಷಿಣ ಕನ್ನಡದಲ್ಲಿ 2 ಪ್ರಕರಣಗಳು ದಾಖಲಾಗಿದೆ.

Read More

ಬೆಂಗಳೂರು: 75ನೇ ಗಣರಾಜ್ಯೋತ್ಸವದ  ಅಂಗವಾಗಿ ಕೆಪಿಸಿಸಿ ಕಚೇರಿ ಆವರಣದಲ್ಲಿ ರಾಷ್ಟ್ರಧ್ವಜಾರೋಹಣ ಮಾಡಿದ ನಂತರ ಮಾತಾಡಿದ ಖರ್ಗೆ ಅವರು ಪರೋಕ್ಷವಾಗಿ ಜಗದೀಶ್ ಶೆಟ್ಟರ್ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಕಾಂಗ್ರೆಸ್ ಪಕ್ಷ ತತ್ವ ಸಿದ್ಧಾಂತಗಳೊಂದಿಗೆ ರಾಜಿ ಮಾಡಿಕೊಳ್ಳಲ್ಲ, ದೇಶದ ಐಕ್ಯತೆಗಾಗಿ ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿಯವರು ತಮ್ಮ ಪ್ರಾಣಗಳನ್ನು ಬಲಿದಾನ ಮಾಡಿದ್ದನ್ನು ಯಾರೂ ಮರೆಯಬಾರದು, ಕಾಂಗ್ರೆಸ್ ಬಡವರು, ದಲಿತರು, ಕೃಷಿಕರು, ಶೋಷಿತರು ಮತ್ತು ಮಹಿಳೆಯರ ಬಗ್ಗೆ ಕಾಳಜಿ ಮತ್ತು ಗೌರವ ಹೊಂದಿರುವ ಪಕ್ಷ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಜೊತೆಗೆ ಆರ್‌ಎಸ್‌ಎಸ್ ನವರು ನಾವೇ ದೇಶ ಕಾಪಾಡುವವರು. ಬೇರೆ ಯಾರೂ ಇಲ್ಲ ಅಂತ ದೇಶಭಕ್ತಿ ಬಗ್ಗೆ ಮಾತಾಡ್ತಾರೆ. ಸ್ವಾತಂತ್ರ‍್ಯ ಬಂದಿದ್ದು, ತಂದಿದ್ದು ಕಾಂಗ್ರೆಸ್ ಪಕ್ಷ. ಕರ್ನಾಟಕದ ಅನೇಕ ಮಹಾಪುರುಷರು ಇದಕ್ಕೆ ಹೋರಾಟ ಮಾಡಿ ಸ್ವಾತಂತ್ರ‍್ಯವನ್ನು ತಂದಿದ್ದಾರೆ. ಆದರೆ ಇವತ್ತು ಈ ಬಿಜೆಪಿ, ಪ್ರಧಾನಮಂತ್ರಿ ಮತ್ತು ಗೃಹ ಮಂತ್ರಿ ಸೇರಿ ತಮ್ಮ ಕೈಗೊಂಬೆನ್ನಾಗಿ ಮಾಡಿಟ್ಟುಕೊಳ್ಳಬೇಕು ಅಂತ ಸರ್ವ ಪ್ರಯತ್ನ ನಡೆದಿದೆ.…

Read More