ಮೋಹಕ ತಾರೆ ರಮ್ಯಾ (Ramya) ಮತ್ತೆ ಜಿಮ್ ನಲ್ಲಿ ಬೆವರಿಳಿಸುತ್ತಿದ್ದಾರೆ. ಆ ವಿಡಿಯೋವನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಅಪ್ ಲೋಡ್ ಮಾಡಿದ್ದಾರೆ. ನೆಚ್ಚಿನ ತಾರೆಯ ವರ್ಕೌಟ್ (Workout) ವಿಡಿಯೋ ಕಂಡು ಅಭಿಮಾನಿಗಳು ಸಂಭ್ರಮಿಸಿದ್ದಾರೆ. ರಮ್ಯಾ ಫಿಟ್ನೆಸ್ (Fitness)ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಸಿನಿಮಾ ರಂಗದಿಂದ ದೂರವಾಗಿ ರಾಜಕೀಯ ಕ್ಷೇತ್ರಕ್ಕೆ ಕಾಲಿಟ್ಟರು ರಮ್ಯಾ. ನಂತರ ಅಲ್ಲಿಂದನೂ ದೂರವಾಗಿ ಅಜ್ಞಾತವಾಸದಲ್ಲಿ ಇದ್ದರು. ಸ್ವಾತಿ ಮುತ್ತಿನ ಮಳೆ ಹನಿಯೇ ಸಿನಿಮಾ ಮೂಲಕ ಮತ್ತೆ ಚಿತ್ರರಂಗಕ್ಕೆ ಬಂದಿದ್ದಾರೆ. ಇದೀಗ ನಾಯಕಿಯಾಗಿಯೂ ಮತ್ತೆ ಕಮ್ ಬ್ಯಾಕ್ ಆಗಲಿದ್ದಾರೆ. ಡಾಲಿ ಧನಂಜಯ್ ನಟನೆಯ ಉತ್ತರಕಾಂಡ ಸಿನಿಮಾದಲ್ಲಿ ರಮ್ಯಾ ನಾಯಕಿಯಾಗಿ ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಸಪ್ತಮಿ ಗೌಡ ಕೂಡ ನಟಿಸುತ್ತಿದ್ದಾರೆ. ಇದೇ ಸಿನಿಮಾಗಾಗಿಯೇ ರಮ್ಯಾ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಆ ವಿಡಿಯೋವನ್ನು ಹಂಚಿಕೊಂಡು ತಮ್ಮ ತಯಾರಿಯನ್ನೂ ಸಾಬೀತು ಪಡಿಸಿದ್ದಾರೆ.
Author: AIN Author
ನವದೆಹಲಿ: ದೇಶಾದ್ಯಂತ 75ನೇ ಗಣರಾಜ್ಯೋತ್ಸವದ (75th Republic Day) ಸಂಭ್ರಮ ಮನೆ ಮಾಡಿದೆ. ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಧ್ವಜಾರೋಹಣ (Flag hoisting) ನೆರವೇರಿದ್ದು, ಪರೇಡ್ಗಳಲ್ಲಿ ವಿಶೇಷ ಪ್ರದರ್ಶನಗಳು ಕಂಡುಬಂದಿವೆ. ಈ ಸಂದರ್ಭದಲ್ಲಿ 2024ನೇ ಸಾಲಿನ ಪದ್ಮ ಪ್ರಶಸ್ತಿಗಳಿಗೆ (Padma Awards 2024) ಆಯ್ಕೆಯಾಗಿರುವ 132 ಸಾಧಕರಿಗೂ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಜೊತೆಗೆ ಗಣರಾಜ್ಯೋತ್ಸವದ ಶುಭಾಶಯಗಳನ್ನೂ ತಿಳಿಸಿದ್ದಾರೆ. ಕರ್ನಾಟಕದ 9 ಮಂದಿ ಸೇರಿ ಒಟ್ಟು 132 ಮಂದಿಗೆ ಪ್ರಶಸ್ತಿ ಲಭಿಸಿದ್ದು, ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಭಿನಂದನೆ ಸಲ್ಲಿಸಿದ್ದಾರೆ. https://ainlivenews.com/rs-3-lakh-loan-for-women-without-interest-how-to-apply-here-is-the-complete-details/ ಈ ವ್ಯಕ್ತಿಗಳು ಅದ್ಭುತ ಉದಾಹರಣೆಗಳನ್ನ ಸೃಷ್ಟಿಸಿದ್ದಾರೆ. ಮಾತ್ರವಲ್ಲದೇ ತಮ್ಮ ಸೇವೆಯಿಂದ ರಾಷ್ಟ್ರದ ಘನತೆಯನ್ನ ಹೆಚ್ಚಿದ್ದಾರೆ. ವಿವಿಧ ಕ್ಷೇತ್ರಗಳಿಗೆ ವಿಶಿಷ್ಟ ಕೊಡುಗೆಗಳನ್ನು ನೀಡುವ ಮೂಲಕ ಸಮಾಜದಲ್ಲಿ ಬದಲಾವಣೆ ತರುತ್ತಿರುವ ಸಾಧಕರಿಗೆ ನಾನು ಹೃದಯಪೂರ್ವಕ ಅಭಿನಂದನೆ ಸಲ್ಲಿಸುತ್ತೇನೆ ಎಂದು ಪ್ರಧಾನಿ ಮೋದಿ ಮತ್ತು ಅಮಿತ್ ಶಾ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
‘ಬಿಗ್ ಬಾಸ್ ಸೀಸನ್ 10′ (Bigg Boss Kannada 10) ರಿಯಾಲಿಟಿ ಶೋ ಮುಗಿಯಲು ದಿನಗಣನೆ ಶುರುವಾಗಿದೆ. ಸ್ಪರ್ಧಿಗಳೆಲ್ಲರೂ ಎಲಿಮಿನೇಟ್ ಆಗಿ ಈಗ 6 ಸ್ಪರ್ಧಿಗಳು ಫಿನಾಲೆ ವೇದಿಕೆಗೆ ತಲುಪಿದ್ದಾರೆ. ಇವರಲ್ಲಿ ಯಾರಿಗೆ ಬಿಗ್ ಬಾಸ್ ವಿನ್ನರ್ ಪಟ್ಟ ಸಿಗಲಿದೆ ಎಂಬುದಕ್ಕೆ ಸದ್ಯದಲ್ಲೇ ಉತ್ತರ ಸಿಗಲಿದೆ. ಫಿನಾಲೆ ದಿನ ಅಂತಿಮವಾಗಿ ಇಬ್ಬರು ಸ್ಪರ್ಧಿಗಳು ಸುದೀಪ್ ಜೊತೆ ಇರಲಿದ್ದಾರೆ. ಅವರಲ್ಲಿ ಒಬ್ಬರಿಗೆ ಮಾತ್ರ ಬಿಗ್ ಬಾಸ್ ವಿನ್ನರ್ ಪಟ್ಟ ಸಿಗಲಿದೆ. ಇದೀಗ ಅಂತಿಮವಾಗಿ ಸಂಗೀತಾ ಶೃಂಗೇರಿ, ಡ್ರೋನ್ ಪ್ರತಾಪ್ (Drone Prathap), ವಿನಯ್, ಕಾರ್ತಿಕ್, ತುಕಾಲಿ ಸಂತೂ, ವರ್ತೂರು ಸಂತೋಷ್ (Varthur Santhosh) ಫಿನಾಲೆಗೆ ಎಂಟ್ರಿ ಪಡೆದಿದ್ದಾರೆ. ಇದರ ಮಧ್ಯೆ ಒಬ್ಬರ ಎಲಿಮಿನೇಷನ್ ಈ ವಾರದ ಮಧ್ಯೆ ನಡೆಯಲಿದೆ ಎಂದು ಹೇಳಲಾಗಿತ್ತು. ಅದು ಫಿನಾಲೆ ದಿನವೇ ತಿಳಿಯಲಿದೆ ಎನ್ನಲಾಗುತ್ತಿದೆ. ಸದ್ಯ ಉಳಿದುಕೊಂಡಿರುವ 6 ಜನ ಸ್ಪರ್ಧಿಗಳಲ್ಲಿ ಸಖತ್ ಪೈಪೋಟಿ ಇದೆ. ಈ ಹಿಂದಿನ ಸೀಸನ್ನಲ್ಲಿ ಹಿರಿಯ ನಟಿ ಶೃತಿ ವಿನ್ನರ್ ಆಗಿದ್ದರು. ಈ…
ಬಳ್ಳಾರಿ : ಜಗದೀಶ ಶೆಟ್ಟರ್ ಬಿಜೆಪಿ ಸೇರ್ಪಡೆ ವಿಚಾರ ಹಿನ್ನೆಲೆಯಲ್ಲಿ ಕಂಪ್ಲಿಯಲ್ಲಿ ಶಾಸಕ ಜೆಎನ್ ಗಣೇಶ್ ಪ್ರತಿಕ್ರಿಯೆ ನೀಡಿದ್ದಾರೆ. ಶೆಟ್ಟರ್ ಬಿಜೆಪಿ ಗೆ ಸೇರ್ಪಡೆ ಯಾದ್ರೆ ಆತಂಕ ಪಡುವ ಅವಶ್ಯಕತೆ ಏನಿದೆ ನಮಗೆ ಯಾವ ಆತಂಕವೂ ಇಲ್ಲ, ಶೆಟ್ಟರ್ ಹೋದ್ರೆ 136 ಜನರು ಹೋಗಿ ಬಿಡ್ತಾರಾ..? ಜಗದೀಶ ಅವರ ಜಾಗದಲ್ಲಿ ನಾನಿದ್ರೆ ರಾಜಕೀಯವಾಗಿ ಮನೇಲಿರ್ತಾಯಿದ್ದೆ ಮಾಜಿ ಸಿ ಎಂ ಅಂತ ಅವರಿಗೆ ಟಿಕೇಟ್ ಕೊಟ್ಟು, ಸೋತ ಮೇಲು ಎಮ್ ಎಲ್ ಸಿ ಮಾಡಿದ್ರು ಇಷ್ಟೆಲ್ಲ ಮಾಡಿದ್ರು ಪಕ್ಷ ಬಿಟ್ಟು ಹೋಗ್ತಾರೆ ಅಂದ್ರೆ ಅದು ಅವರ ತಪ್ಪು ನಿರ್ಧಾರ ಕಾಂಗ್ರೆಸ್ ಪಕ್ಷ ಇವರಿಗೆ ಎಷ್ಟೆಲ್ಲ ಜವಾಬ್ದಾರಿಯನ್ನ ಕೊಟ್ಟಿದ್ದಾರೆ ಇಷ್ಟೆಲ್ಲ ಆದ ಮೇಲೆ ಪಕ್ಷ ಬಿಟ್ಟು ಹೋಗ್ತಾರೆ ಅದ್ರೆ ರಾಜ್ಯದ ಜನತೆ ಅವರ ಮೇಲೆ ಎಷ್ಟು ಗೌರವ ಇಟ್ಕೊತಾರೆ ಅಂತ ಗೊತ್ತಾಗುತ್ತೆ ಹತ್ತು ವರ್ಷ ಆಳಿದ ಬಿಜೆಪಿ ಇಷ್ಟು ಕುಣಿಬೇಕಾದ್ರೆ 50 ವರ್ಷ ಕಾಂಗ್ರೆಸ್ ಆಳಿದೆ, ಏನೇನು ಕೊಡುಗೆ ಕೊಟ್ಟಿದೆ ಎಂದು…
ಬೆಂಗಳೂರು: ತಂದೆಯೇ ಮಗನನ್ನು ಗುಂಡು ಹಾರಿಸಿ ಕೊಲೆಗೈದ ದಾರುಣ ಘಟನೆ ಬೆಂಗಳೂರಿನ (Bengaluru) ಕರೆಕಲ್ನಲ್ಲಿ ನಡೆದಿದೆ. ನರ್ತನ್ ಬೋಪಣ್ಣ (32) ಹತ್ಯೆಯಾದ ವ್ಯಕ್ತಿಯಾಗಿದ್ದಾರೆ. ಅವರ ತಂದೆ ಸುರೇಶ್ ವಿನಾಕಾರಣ ಬಂದೂಕಿನಿಂದ ಗುಂಡು ಹಾರಿಸಿದ್ದಾನೆ ಎಂದು ತಿಳಿದುಬಂದಿದೆ. ಗುಂಡೇಟಿನಿಂದ ಸಾವು ಬದುಕಿನ ಮಧ್ಯೆ ಹೋರಾಟ ಮಾಡುತ್ತಿದ್ದ ಅವರನ್ನು ಕೂಡಲೇ ಪೊಲೀಸರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ದುರದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವಿಗೀಡಾಗಿದ್ದಾರೆ ನರ್ತನ್ ಅವರ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯ ಹಿಂದಿನ ಕಾರಣ ಇನ್ನೂ ತಿಳಿದು ಬಂದಿಲ್ಲ. ಘಟನೆ ಬಳಿಕ ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಪೊಲೀಸರು (Police) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನವದೆಹಲಿ: ಗಣರಾಜ್ಯೋತ್ಸವ ದಿನ, ಸ್ವಾತಂತ್ರ್ಯ ದಿನಾಚರಣೆ ಹೀಗೆ ರಾಷ್ಟ್ರೀಯ ಹಬ್ಬ, ಆಚರಣೆಗಳು ಬಂದಾಗೆಲ್ಲಾ ದೇಶವೇ ಸಂಭ್ರಮದಲ್ಲಿ ಪಾಲ್ಗೊಳ್ಳುತ್ತದೆ. ಸಾರ್ವಭೌಮ ಪ್ರಜಾಪ್ರಭುತ್ವ ಗಣರಾಜ್ಯ ಸ್ಥಾಪನೆಗೋಸ್ಕರ ಅವಿರತವಾಗಿ ಶ್ರಮಿಸಬೇಕೆಂದು ಅಂದಿನ ರಾಷ್ಟ್ರೀಯ ಕಾಂಗ್ರೆಸ್ 1929ರ ಜನವರಿ 26ರಂದು ಪ್ರತಿಜ್ಞೆ ಮಾಡಿತ್ತು. 1950ರ ಜನವರಿ 26ರಂದು ಈ ಕನಸು ನನಸಾಯಿತು. ಈ ದಿನ ಭಾರತವು ಗಣರಾಜ್ಯವಾಗಿ ತನ್ನ ಆಡಳಿತಾತ್ಮಕ ವ್ಯವಸ್ಥೆಯನ್ನು ರೂಪಿಸಿಕೊಂಡಿತು. ಸಂವಿಧಾನದ ರಚನೆಗೆ 2 ವರ್ಷ, 11 ತಿಂಗಳು, 17 ದಿನಗಳು ಬೇಕಾಯಿತು. ಭಾರತದ ಸಂವಿಧಾನ ಸಂಪೂರ್ಣ ಲಿಖಿತವಾಗಿದ್ದು, ಅದರಲ್ಲಿ 22 ಅಧ್ಯಾಯಗಳು ಮತ್ತು 395 ಅನುಚ್ಛೇದಗಳಿವೆ. ಭಾರತದ ಆಡಳಿತ ವ್ಯವಸ್ಥೆಯಲ್ಲಿ ಸಂವಿಧಾನ ಪರಮೋಚ್ಛವಾಗಿದೆ. ಸ್ವಾತಂತ್ರ್ಯ ದಿನಾಚರಣೆಯಂತೆಯೇ ಜನವರಿ 26ರ ದಿನವನ್ನು ಗಣರಾಜ್ಯ ದಿನವನ್ನಾಗಿ ದೇಶಾದ್ಯಂತ ಆಚರಿಸಲಾಗುತ್ತದೆ. ಭಾರತವು ತನ್ನ 75ನೇ ಗಣರಾಜ್ಯೋತ್ಸವವನ್ನು ಇಂದು ಆಚರಿಸಿಕೊಳ್ಳುತ್ತಿದೆ. ಗಣರಾಜ್ಯೋತ್ಸವ ಒಟ್ಟು ಮೂರು ದಿನಗಳ ಕಾಲ ನಡೆಯಲಿದ್ದು, ಜನವರಿ 29ರಂದು ಬೀಟಿಂಗ್ ರಿಟ್ರೀಟ್ ಸಮಾರಂಭದೊಂದಿಗೆ ಕೊನೆಗೊಳ್ಳುತ್ತದೆ. ಜ.26 ಅನ್ನು ಗಣರಾಜ್ಯ ದಿನ ಎಂದು ಏಕೆ ಗುರುತಿಸಲಾಗಿದೆ? ಭಾರತವು…
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಇದು ಯುಗ ಬದಲಾವಣೆಯ ಅವಧಿಯಾಗಿದೆ ಆಶಯ ವ್ಯಕ್ತಪಡಿಸಿದ್ದಾರೆ. ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಅವರು ಸಮಾಜಕ್ಕೆ ನೀಡಿದ ಕೊಡುಗೆಯನ್ನು ರಾಷ್ಟ್ರಪತಿ ಸ್ಮರಿಸಿದ್ದಾರೆ. ಅಲ್ಲದೇ ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರದಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಯು ದೇಶಕ್ಕೆ ಐತಿಹಾಸಿಕ ಮತ್ತು ಮಹತ್ವದ ಕ್ಷಣವಾಗಿದೆ ಎಂದು ಬಣ್ಣಿಸಿದ್ದಾರೆ. ಅಯೋಧ್ಯೆಯ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ ಸಮಾರಂಭವನ್ನು ಭವಿಷ್ಯದ ಇತಿಹಾಸಕಾರರು ಭಾರತದ ನಾಗರಿಕತೆಯ ಪರಂಪರೆಯ ಮರು ಅನ್ವೇಷಣೆಯಲ್ಲಿ ಹೆಗ್ಗುರುತಾಗಿ ನೋಡುತ್ತಾರೆ. ಭೂ ವಿವಾದಕ್ಕೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ನಂತರ ದೇವಾಲಯದ ನಿರ್ಮಾಣವು ಪ್ರಾರಂಭವಾಯಿತು. ಈಗ ಅದು ಭವ್ಯ ಸೌಧವಾಗಿ ನಿಂತಿದೆ. ಇದು ಜನರ ನಂಬಿಕೆಗೆ ಸೂಕ್ತವಾದ ಅಭಿವ್ಯಕ್ತಿಯನ್ನು ನೀಡುತ್ತದೆ. https://ainlivenews.com/rs-3-lakh-loan-for-women-without-interest-how-to-apply-here-is-the-complete-details/ ಜೊತೆಗೆ ನ್ಯಾಯಾಂಗ ವ್ಯವಸ್ಥೆಯಲ್ಲಿ ಜನರ ಅಗಾಧ ನಂಬಿಕೆಗೆ ಸಾಕ್ಷಿಯಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಕರ್ಪೂರಿ ಜೀ ಅವರ ಕೊಡುಗೆಯಿಂದ ಸಾರ್ವಜನಿಕ ಜೀವನವನ್ನು ಶ್ರೀಮಂತಗೊಳಿಸಿದ್ದಕ್ಕಾಗಿ ನಾನು ಅವರಿಗೆ ಗೌರವ ಸಲ್ಲಿಸುತ್ತೇನೆ. ಅವರು ಹಿಂದುಳಿದ ವರ್ಗಗಳಿಗೆ ಸೇರಿದವರಾಗಿದ್ದು, ಅವರ…
ಭಾರತದ ಅತ್ಯುನ್ನತ ನಾಗರೀಕ ಗೌರವ ಪದ್ಮ ಪ್ರಶಸ್ತಿಗಳು ನಿನ್ನೆ ಪ್ರಕಟಗೊಂಡಿವೆ. ತೆಲುಗಿನ ಮೆಗಾಸ್ಟಾರ್ ಚಿರಂಜೀವಿ (Chiranjeevi) ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ಪ್ರಕಟವಾಗಿದ್ದು ನಟಿ, ಸಂಸದೆ ಸುಮಲತಾ ಅಂಬರೀಶ್ (Sumalatha Ambarish) ಅವರು ತಮ್ಮ ಸೋಷಿಯಲ್ ಮೀಡಿಯಾ ಮೂಲಕ ಚಿರಂಜೀವಿ ಅವರನ್ನು ಅಭಿನಂದಿಸಿದ್ದಾರೆ. ಈ ಗೌರವಕ್ಕೆ ನೀವು ಅರ್ಹವಾದ ವ್ಯಕ್ತಿ. ಪ್ರಶಸ್ತಿ ಪ್ರಕಟಗೊಂಡಿದ್ದು ಕೇಳಿ ಅತ್ಯಂತ ಹೆಮ್ಮೆ ಅನಿಸಿತು. ನಿಮ್ಮೊಂದಿಗೆ ಸುಂದರವಾದ ಚಿತ್ರಗಳಲ್ಲಿ ಅಭಿನಯಿಸಿದ್ದಕ್ಕೆ ಮತ್ತು ಸಾಕಷ್ಟು ಕ್ಷಣಗಳನ್ನು ಒಟ್ಟಿಗೆ ಕಳೆದಿದ್ದಕ್ಕೆ ಹೆಮ್ಮೆ ಅನಿಸುತ್ತದೆ. ಅದೊಂದು ಅದ್ಭುತವಾದ ಜರ್ನಿ. ನಿಮ್ಮ ಮುಂದಿನ ಜೀವನಕ್ಕೆ ಈ ಪ್ರಶಸ್ತಿ ಒಂದು ಗರಿ ಎಂದು ಅವರು ಬರೆದುಕೊಂಡಿದ್ದಾರೆ. ಗಣರಾಜ್ಯೋತ್ಸವದ ಮುನ್ನಾ ದಿನ 2024ನೇ ಸಾಲಿನ ಪದ್ಮ ಪ್ರಶಸ್ತಿಗಳನ್ನು (Padma Awards 2024) ಪ್ರಕಟಿಸಲಾಗಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಈ ಪ್ರಶಸ್ತಿ ದೊರೆತಿದೆ. ಸಾಧಕರಿಗೆ ಪದ್ಮ ವಿಭೂಷಣ, ಪದ್ಮ ಭೂಷಣ ಪ್ರಶಸ್ತಿ ನೀಡಲಾಗಿದೆ. ಅದರಂತೆ ಹಲವು ವರ್ಷಗಳಿಂದ ಕಲಾ ಸೇವೆ ಮಾಡಿರುವ ಅನೇಕ ಗಣ್ಯರಿಗೆ ಈ ಪ್ರಶಸ್ತಿಯನ್ನು…
ವಾತಾವರಣ ಚಳಿಯಿಂದ ಕೂಡಿರುವಾಗ ಏನಾದರೂ ಬಿಸಿಯಾದ ಆಹಾರ ಸೇವನೆ ಮಾಡಬೇಕು ಎನಿಸುವುದು ಸಹಜ. ಅದರಲ್ಲೂ ಚಳಿಗಾಲದಲ್ಲಿ ಬಿಸಿ ಕಾಫಿ, ಬಜ್ಜಿ, ಬೋಂಡಾಗಳನ್ನು ತಿನ್ನಲು ಮನಸ್ಸು ಹಾತೊರೆಯುತ್ತದೆ. ಆದರೆ ಅಂತಹ ಆಹಾರಗಳಿಂದ ದೇಹಕ್ಕೆ ಹಾನಿಯಾಗಬಹುದು. ಹೀಗಾಗಿ ಆರೋಗ್ಯಕ್ಕೂ ಹಿತವಾದ, ಬಾಯಿಗೂ ರುಚಿಯಾದ ಬಿಸಿ ಆಹಾರ ಸೇವನೆ ಮಾಡುವುದು ಬಹಳ ಮುಖ್ಯ. ಅಂತಹ ಆಹಾರಗಳ ಪಟ್ಟಿಗೆ ಹೆಲ್ತಿ ಆಹಾರ ಟೊಮೆಟೋ ಸೂಪ್ ಕೂಡ ಸೇರಿಕೊಳ್ಳುತ್ತದೆ. ಹಾಗಾದರೆ ಚಳಿಗಾಲದಲ್ಲಿ ಟೊಮೆಟೋ ಸೂಪ್ ಸೇವನೆ ಮಾಡುವುದರಿಂದ ಆರೋಗ್ಯಕ್ಕೆ ಏನೆಲ್ಲಾ ಪ್ರಯೋಜನಗಳನ್ನು ಪಡೆಯಬಹುದು ಎನ್ನುವ ಬಗ್ಗೆ ಈ ಲೇಖನದಲ್ಲಿ ನೋಡೋಣ. ಅನಾರೋಗ್ಯದಿಂದ (Illness) ರಕ್ಷಣೆ : ಚಳಿಗಾಲದಲ್ಲಿ ಖಾಯಿಲೆ ಹೆಚ್ಚು. ಬಹುತೇಕರು ಋತುವಿನಲ್ಲಿ ಕಾಣಿಸಿಕೊಳ್ಳುವ ಜ್ವರ, ಶೀತ, ಕೆಮ್ಮಿನಿಂದ ಬಳಲುತ್ತಾರೆ. ಆಗಾಗ ಖಾಯಿಲೆ ಬೀಳೋದು ಹೆಚ್ಚು. ಚಳಿಗಾಲದಲ್ಲಿ ನಿಮ್ಮ ಆರೋಗ್ಯ ಕೂಡ ಹದಗೆಡುತ್ತೆ ಎನ್ನುವವರು ಡಯಟ್ ನಲ್ಲಿ ಟೊಮೆಟೊ ಸೂಪ್ ಸೇರಿಸಿ. ಇದ್ರಿಂದ ದೊಡ್ಡ ಮಟ್ಟದ ಪರಿಹಾರ ಸಿಗುತ್ತದೆ. ಟೊಮೊಟೊದಲ್ಲಿ ವಿಟಮಿನ್ ಸಿ ಹೆಚ್ಚಿನ ಪ್ರಮಾಣದಲ್ಲಿ ಇರುತ್ತದೆ. ಇದು ರೋಗ…
ಅಮೇರಿಕಾ: ನ್ಯೂ ಹ್ಯಾಂಪ್ಶೈರ್ ಪ್ರಾಥಮಿಕ ಚುನಾವಣೆಯಲ್ಲಿ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ರಿಪಬ್ಲಿಕನ್ ಪಕ್ಷದಿಂದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ನಿಕ್ಕಿ ಹ್ಯಾಲಿ ಭಾರೀ ಹಿನ್ನಡೆ ಅನುಭವಿಸಿದ್ದಾರೆ. ಈ ಹಿಂದೆ ಅಯೋವಾದಲ್ಲಿ ನಡೆದ ಚುನಾವಣೆಯಲ್ಲೂ ಟ್ರಂಪ್ ಗೆಲುವು ಸಾಧಿಸಿದ್ದರು. ಈ ಎರಡು ದೊಡ್ಡ ಗೆಲುವಿನೊಂದಿಗೆ ರಿಪಬ್ಲಿಕನ್ ಪಕ್ಷದಿಂದ ಅಭ್ಯರ್ಥಿಯಾಗಲು ಟ್ರಂಪ್ ಅವರ ಪ್ರಯತ್ನಗಳು ಮತ್ತಷ್ಟು ಹೆಚ್ಚಾಗಿದೆ. ಒಬ್ಬರ ಮೇಲೊಬ್ಬರು ಆರೋಪ-ಪ್ರತ್ಯಾರೋಪಗಳನ್ನು ಹೊರುವ ಪ್ರಕ್ರಿಯೆಯೂ ಮುಂದುವರಿದಿದೆ. ಏತನ್ಮಧ್ಯೆ, ನಿಕ್ಕಿ ಹ್ಯಾಲಿ ಪ್ರಬಲ ಅಭ್ಯರ್ಥಿಯಾಗಿದ್ದರೂ, ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನ್ಯೂ ಹ್ಯಾಂಪ್ಶೈರ್ ಪ್ರಾಥಮಿಕ ಚುನಾವಣೆಯಲ್ಲಿ ಗೆದ್ದಿದ್ದಾರೆ. ಅಯೋವಾ ಕಾಕಸ್ ನಂತರ ನ್ಯೂ ಹ್ಯಾಂಪ್ಶೈರ್ ಪ್ರೈಮರಿಯನ್ನು ಗೆಲ್ಲುವ ಮೂಲಕ ಟ್ರಂಪ್ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿಯಾಗಲು ಪ್ರಬಲವಾದ ಹಕ್ಕು ಸಾಧಿಸಿದ್ದಾರೆ. ನ್ಯೂ ಹ್ಯಾಂಪ್ಶೈರ್ ಪ್ರೈಮರಿಯನ್ನು ಮೂರು ಬಾರಿ ಗೆದ್ದ ಏಕೈಕ ರಿಪಬ್ಲಿಕನ್ ಅಭ್ಯರ್ಥಿ ಟ್ರಂಪ್. ಈ ಗೆಲುವಿನೊಂದಿಗೆ ನವೆಂಬರ್ನಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಟ್ರಂಪ್ ಭಾರಿ ಮುನ್ನಡೆ ಸಾಧಿಸುವ ಸಾಧ್ಯತೆ ಇದೆ. ಹಿಲ್…