Author: AIN Author

ತುಮಕೂರು:- ಬೋರ್ವೆಲ್ ಲಾರಿ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತುಮಕೂರು ಜಿಲ್ಲೆ ಕುಣಿಗಲ್‌ ತಾಲೂಕಿನ ಚಿಗಣಿಪಾಳ್ಯ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿವೆ. ಶನಿವಾರ ರಾತ್ರಿ ಕಂಬಳ ನೋಡಿದ ಐವರು ಕಾರಿನಲ್ಲಿ ಮಂಗಳೂರಿಗೆ ವಾಪಸ್ ತೆರಳುತ್ತಿದ್ದರು. ಈ ವೇಳೆ ಬೋರ್‌ವೆಲ್‌ ಕೊರೆಯುವ ಲಾರಿ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿವೆ. ಘಟನೆಯಲ್ಲಿ ಮಂಗಳೂರಿನ ಪರೆರಾರ ಬಜಪ್ಪೆ ಗ್ರಾಮದ ನಿವಾಸಿ ಕಿಶಾನ್ ಶೆಟ್ಟಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಭಟ್ಟರ ತೋಟ ಗ್ರಾಮದ ನಿವಾಸಿ ಫಿಲಿಪ್ ನೇರಿ‌ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಲಾರಿ ಡಿಕ್ಕಿ ಹೊಡೆದ‌ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮೂವರನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಾರಿನಲ್ಲಿದ್ದ ಐವರು ಕಂಬಳವನ್ನು ವೀಕ್ಷಿಸಲೆಂದೇ ಮಂಗಳೂರಿನಿಂದ ಬೆಂಗಳೂರಿಗೆ ಬಂದಿದ್ದರಂತೆ. ಶನಿವಾರ ಕಂಬಳ ವೀಕ್ಷಿಸಿದ್ದ ಅವರು ಮಂಗಳೂರಿಗೆ ವಾಪಸ್ ತೆರಳುತ್ತಿದ್ದರಂತೆ. ಲಾರಿ ಹಾಗೂ ಕಾರು ವೇಗವಾಗಿ ಚಲಾಯಿಸಿದ್ದೇ ಈ ಅಪಘಾತಕ್ಕೆ…

Read More

ಬೆಂಗಳೂರು: ರನ್ ಮೆಷಿನ್ ವಿರಾಟ್ ಕೊಹ್ಲಿ ಅವರು ತಮ್ಮ 38ನೇ ವಯಸ್ಸಿನವರೆಗೂ ಉತ್ತಮ ಫಿಟ್ನೆಸ್ ಅನ್ನು ಕಾಪಾಡಿಕೊಳ್ಳಲಿದ್ದು, 2027ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾ ಪರ ಆಡಲಿದ್ದಾರೆ ಎಂದು ಪಾಕಿಸ್ತಾನದ ಮಾಜಿ ನಾಯಕ ಸಲ್ಮಾನ್ ಬಟ್ ಭವಿಷ್ಯ ನುಡಿದಿದ್ದಾರೆ. 2023ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಆಡಿದ್ದ 11 ಪಂದ್ಯಗಳಿಂದ 95.62ರ ಸರಾಸರಿಯಲ್ಲಿ ಕೊಹ್ಲಿ 765 ರನ್ ಬಾರಿಸಿ ಟೂರ್ನಿ ಶ್ರೇಷ್ಠ ಪ್ರಶಸ್ತಿಗೆ ಪಾತ್ರರಾಗಿದ್ದರು. 2027ರ ಏಕದಿನ ವಿಶ್ವಕಪ್ ಟೂರ್ನಿಯು ದಕ್ಷಿಣ ಆಫ್ರಿಕಾ, ಜಿಂಬಾಬ್ವೆ ಹಾಗೂ ನಮೀಬಿಯಾದ ಜಂಟಿ ಆತಿಥ್ಯದಲ್ಲಿ ನಡೆಯಲಿದ್ದು, ಆ ವೇಳೆಗೆ ವಿರಾಟ್ ಕೊಹ್ಲಿಗೆ 39 ವರ್ಷ ಆಗಿರುತ್ತದೆ. ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ತಾನು ಹೆಚ್ಚು ದಿನ ಟಿ20 ಪಂದ್ಯ ಆಡುವುದಿಲ್ಲ ಎಂದು ಬಿಸಿಸಿಐಗೆ ಹೇಳಿದ್ದಾರೆ. ಆದರೆ ವಿರಾಟ್ ಕೊಹ್ಲಿ ಈ ರೀತಿಯ ಯಾವುದೇ ಹೇಳಿಕೆ ನೀಡಿಲ್ಲ. ವಿರಾಟ್ ಕೊಹ್ಲಿ ಅವರು ತಮ್ಮ ಫಿಟ್ನೆಸ್ ಬಗ್ಗೆ ತೋರುತ್ತಿರುವ ಕಾಳಜಿ ಹಾಗೂ ಆಟದ ಬಗೆಗಿನ ಬದ್ಧತೆಯನ್ನು ಗಮನಿಸುತ್ತಿದ್ದರೆ…

Read More

ಬೆಂಗಳೂರು:- ಮೋದಿ ನಮ್ಮ ಎಚ್‌ಎಎಲ್‌ ಮಾರಬೇಡಿ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಕೇವಲ ಫೋಟೋಶೂಟ್ ಮಾಡಿಸಿಕೊಳ್ಳಲು ಬಂದಿದ್ದೀರೋ ಅಥವಾ ಅದಾನಿಯ ಏಜೆಂಟ್ ಆಗಿ ಬಂದಿದ್ದೀರೋ ಗೊತ್ತಿಲ್ಲ. ಆದರೆ ನಮ್ಮ ಎಚ್‌ಎಎಲ್‌ ನಮಗೆ ಬಿಡಿ, ನಮ್ಮ ಹೆಮ್ಮೆಯ ಸಂಸ್ಥೆಯನ್ನು ಮಾರಬೇಡಿ’ ಎಂದು ಮನವಿ ಮಾಡಿದೆ. ಜತೆಗೆ ‘ಎಚ್‌ಎಎಲ್‌ನಲ್ಲಿ ಫೋಟೋ ಶೂಟ್ ಮಾಡಿಸಿಕೊಂಡ ಮೋದಿ ಅವರೇ, ಇದೇ ಎಚ್‌ಎಎಲ್‌ನೊಂದಿಗೆ ಮಾಡಿಕೊಂಡಿದ್ದ ರಫೆಲ್ ಒಪ್ಪಂದವನ್ನು ರದ್ದುಪಡಿಸಿ ಅಂಬಾನಿ ಜೋಳಿಗೆ ತುಂಬಿಸಿದ್ದೇಕೆ? ಎಚ್‌ಎಎಲ್‌ಗೆ ದ್ರೋಹವೆಸಗಿ ಈಗ ಫೋಟೋಶೂಟ್ ಮಾಡಿಸಿಕೊಳ್ಳುವುದಕ್ಕೆ ನಿಮ್ಮ ಮನಸು ಒಪ್ಪಿದ್ದು ಹೇಗೆ?’ ಎಂದು ಲೇವಡಿ ಮಾಡಿದೆ.

Read More

ಬೆಂಗಳೂರು: ಮುಂದಿನ ವರ್ಷ ವೆಸ್ಟ್ ಇಂಡೀಸ್ ಹಾಗೂ ಅಮೆರಿಕ ಜಂಟಿ ಆತಿಥ್ಯದಲ್ಲಿ ಟಿ20 ವಿಶ್ವಕಪ್ ಟೂರ್ನಿ ನಡೆಯಲಿದೆ. ಇದರ ಅಂಗವಾಗಿ ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ 5 ಪಂದ್ಯಗಳ ಟಿ20-ಐ ಸರಣಿಯಲ್ಲಿ ಟೀಮ್ ಇಂಡಿಯಾ ಪ್ರಬಲ ಪೈಪೋಟಿ ನಡೆಸುತ್ತಿದ್ದು, ಸರಣಿಯ ಮೊದಲ ಪಂದ್ಯದಲ್ಲಿ 2 ವಿಕೆಟ್ ರೋಚಕ ಗೆಲುವು ಸಾಧಿಸಿ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಈ ಪಂದ್ಯದ ಗೆಲುವಿನಲ್ಲಿ ಹಂಗಾಮಿ ನಾಯಕ ಸೂರ್ಯಕುಮಾರ್ ಯಾದವ್ ಮಹತ್ತರ ಪಾತ್ರ ವಹಿಸಿದ್ದರು. ಗುರುವಾರ (ನವೆಂಬರ್ 23) ವಿಶಾಖಪಟ್ಟಣಂನ ವಿಡಿಸಿಎ ಕ್ರೀಡಾಂಗಣದಲ್ಲಿ ನಡೆದಿದ್ದ ಮೊದಲ ಟಿ20-ಐ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ತೋರಿದ್ದ ಸೂರ್ಯಕುಮಾರ್ ಯಾದವ್, ಆಸ್ಟ್ರೇಲಿಯಾದ ಬೌಲರ್‌ಗಳ ವಿರುದ್ಧ ಪ್ರಾಬಲ್ಯ ಮೆರೆದು 42 ಎಸೆತಗಳಲ್ಲೇ 80 ರನ್ ಬಾರಿಸಿದ್ದರು. ಆ ಮೂಲಕ ಕಾಂಗರೂ ಪಡೆ ನೀಡಿದ್ದ 209 ರನ್‌ಗಳನ್ನು ಚೇಸ್‌ ಮಾಡಲು ತಂಡಕ್ಕೆ ನೆರವು ನೀಡಿದ್ದರು. ತಮ್ಮ ಈ ಪ್ರದರ್ಶನದಿಂದ ನಾಯಕತ್ವದ ಮೊದಲ ಪಂದ್ಯದಲ್ಲೇ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಸೂರ್ಯ ಭಾಜನರಾಗಿದ್ದರು. ಏಕದಿನ ಮಾದರಿಯಲ್ಲಿ…

Read More

ಕನ್ನಡದ ನಟಿ ರಶ್ಮಿಕಾ ಮಂದಣ್ಣ, ರಣ್‌ಬೀರ್ ಕಪೂರ್ (Ranbir Kapoor) ನಟನೆಯ ‘ಅನಿಮಲ್’ ಚಿತ್ರದ ಟ್ರೈಲರ್‌ ರಿಲೀಸ್ ಆಗಿ ಸೋಷಿಯಲ್ ಮೀಡಿಯಾದಲ್ಲಿ ಕಮಾಲ್ ಮಾಡ್ತಿದೆ. ಹೀಗಿರುವಾಗ ‘ಅನಿಮಲ್’ (Animal) ಟ್ರೈಲರ್‌ ನೋಡಿ ನಟ ಪ್ರಭಾಸ್ ಕೂಡ ಮೆಚ್ಚುಗೆ ಸೂಚಿಸಿದ್ದಾರೆ. ಸಂಜು, ಬ್ರಹ್ಮಾಸ್ತ್ರ ಚಿತ್ರಗಳ ಬಳಿಕ ಹಿಂದೆಂದೂ ಕಾಣಿಸಿಕೊಂಡಿರದ ಲುಕ್‌ನಲ್ಲಿ ಮಾಸ್ ಆಗಿ ರಣ್‌ಬೀರ್ ಕಾಣಿಸಿಕೊಂಡಿದ್ದಾರೆ. ಅಪ್ಪ-ಮಗನ ಸಂಬಂಧದ ಕುರಿತು ಕಥೆಯಾಗಿದೆ. ಹಲವು ಶೇಡ್‌ಗಳಲ್ಲಿ ರಣ್‌ಬೀರ್ ಹೈಲೆಟ್ ಆಗಿದ್ದಾರೆ. ಬಾಬಿ ಡಿಯೋಲ್ ವಿಲನ್ ಆಗಿ ಮಸ್ತ್ ಆಗಿ ಕಾಣಿಸಿಕೊಂಡಿದ್ದಾರೆ. ಟ್ರೈಲರ್‌ ನೋಡಿದ ಪ್ರೇಕ್ಷಕರು ಕೂಡ ಈ ಚಿತ್ರದ ಸೂಪರ್ ಹಿಟ್ ಆಗುತ್ತೆ ಎಂದೆಲ್ಲಾ ಫ್ಯಾನ್ಸ್ ಕಾಮೆಂಟ್ ಮಾಡ್ತಿದ್ದಾರೆ. ಅಂದಹಾಗೆ ರಣ್‌ಬೀರ್‌ಗೆ ನಾಯಕಿಯಾಗಿ ಕೊಡಗಿನ ಚೆಲುವೆ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಅನಿಮಲ್ ಟ್ರೈಲರ್‌ ಪ್ರಭಾಸ್ (Prabhas) ರಿಯಾಕ್ಟ್ ಮಾಡಿದ್ದಾರೆ.

Read More

ಬೆಂಗಳೂರು:- ಬಸವನಗುಡಿ ಕಡ್ಲೆಕಾಯಿ ಪರಿಷೆಯಲ್ಲಿ ತುತ್ತೂರಿ ಸೌಂಡ್ ನಿಲ್ಲಿಸಿ ಎಂದು ಸ್ಥಳೀಯರು ಪೊಲೀಸರ ಮೊರೆ ಹೋಗಿದ್ದಾರೆ. ಈ ಬಾರಿಯ ಪರಿಷೆ ಡಿಸೆಂಬರ್ 9 ರಿಂದ 11ರ ತನಕ ನಡೆಯಲಿದೆ. ಬಸವನಗುಡಿ ಕಡ್ಲೆಕಾಯಿ ಪರಿಷೆ ಅಧಿಕೃತವಾಗಿ ನಡೆಯುವುದು ಮೂರು ದಿನ. ಆದರೆ ಒಂದು ವಾರದ ಮುಂಚಿನಿಂದ ಅಂಗಡಿಗಳು ಬರುತ್ತವೆ. ನೂರಾರು ಕಡ್ಲೆಕಾಯಿ ವ್ಯಾಪಾರಸ್ಥರು ಆಗಮಿತ್ತಾರೆ. ಇದರ ಜೊತೆಗೆ ವಿವಿಧ ವಸ್ತುಗಳ ಮಾರಾಟದ ಅಂಗಡಿಯೂ ಬರುತ್ತದೆ. ಅದರಲ್ಲಿ ತುತ್ತೂರಿಯೂ ಒಂದು. ತುತ್ತೂರಿಯ ಸೌಂಡ್ ನಿಲ್ಲಿಸಿ ಬುಲ್ ಟೆಂಪಲ್ ರಸ್ತೆಯಲ್ಲಿ ಚುಮು ಚುಮು ಚಳಿಯ ನಡುವೆ ಸಾವಿರಾರು ಜನರ ನಡುವೆ ಕಡ್ಲೆಕಾಯಿ ತಿನ್ನುತ್ತಾ ತುತ್ತೂರಿ ಊದುತ್ತಾ ಹೋಗುವ ಜನರಿದ್ದಾರೆ. ಇದು ಹಲವರಿಗೆ ಸಂತೋಷ ನೀಡುತ್ತದೆ. ಆದರೆ ಇದರ ಶಬ್ದವೇ ಸ್ಥಳೀಯ ನಿವಾಸಿಗಳಿಗೆ ಕಿರಿಕಿರಿ ತಂದಿದೆ. ಹಲವು ವರ್ಷಗಳಿಂದಲೂ ತುತ್ತೂರಿ ಮಾರಾಟಕ್ಕೆ ತಡೆ ಹಾಕಬೇಕು ಎಂಬ ಬೇಡಿಕೆ ಇದೆ. ಈಗ ಮತ್ತೆ ಕಡ್ಲೆಕಾಯಿ ಪರಿಷೆ ಎದುರಾಗಿದೆ. ಆದ್ದರಿಂದ ಬಸವನಗುಡಿ ನಿವಾಸಿಗಳ ಹಿತರಕ್ಷಣಾ ವೇದಿಕೆ ತುತ್ತೂರಿ ಸೌಂಡ್ ನಿಲ್ಲಿಸಿ…

Read More

ದೆಹಲಿ: ಏಕದಿನ ವಿಶ್ವಕಪ್ ಟೂರ್ನಿ ಮುಗಿದ ಬೆನ್ನಲ್ಲೆ 2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್‌) ಟೂರ್ನಿಗೆ ಸಿದ್ದತೆಗಳು ಆರಂಭವಾಗಿವೆ. ಡಿಸೆಂಬರ್‌ ತಿಂಗಳಲ್ಲಿ ಆಟಗಾರರ ಮಿನಿ ಹರಾಜು ಪ್ರಕ್ರಿಯೆ ನಡೆಯಲಿದೆ. ಹರಾಜಿಗೂ ಮುನ್ನ ಎಲ್ಲಾ ಫ್ರಾಂಚೈಸಿಗಳು ತಮ್ಮ ತಂಡಗಳನ್ನು ಉಳಿಸಿಕೊಳ್ಳಬಲ್ಲ ಮತ್ತು ಬಿಡುಗಡೆಗೊಳಿಸಬಲ್ಲ ಆಟಗಾರರ ಪಟ್ಟಿಯನ್ನು ಸಿದ್ದಪಡಿಸುತ್ತಿವೆ. ಇದರ ನಡುವೆ ಆಟಗಾರರನ್ನು ಖರೀದಿಸಲು ಪರ್ಸ್‌ನಲ್ಲಿ ಹಣವನ್ನು ಹೆಚ್ಚಿಸಲಾಗುತ್ತಿದೆ. ಕೆಲ ಫ್ರಾಂಚೈಸಿಗಳು ಹರಾಜಿಗೂ ಟ್ರೇಡ್ ವಿಂಡೋದ ಸಹಾಯದಿಂದ ಆಟಗಾರರನ್ನು ವಿನಿಮಯ ಮಾಡಿಕೊಳ್ಳುತ್ತಿವೆ. ಅವೇಶ್ ಖಾನ್, ದೇವದತ್ ಪಡಿಕ್ಕಲ್ ಅವರನ್ನು ಲಖಬೌ ಸೂಪರ್‌ ಜಯಂಟ್ಸ್‌ ಮತ್ತು ರಾಜಸ್ಥಾನ್‌ ರಾಯಲ್ಸ್ ತಂಡಗಳು ವಿನಿಮಯ ಮಾಡಿಕೊಂಡಿವೆ. ಟ್ರೇಡ್‌ ವಿಂಡೋ ಎಂದರೆ ಏನು? ಹಾಗೂ ಇದರ ಸಹಾಯದಿಂದ ಆಟಗಾರರನ್ನು ಹೇಗೆ ವಿನಿಮಿಯ ಮಾಡಲಾಗುತ್ತದೆ ಎಂಬ ಬಗ್ಗೆ ಇಲ್ಲಿ ವಿವರಿಸಲಾಗಿದೆ. ಫ್ರಾಂಚೈಸಿಗಳು ಪರಸ್ಪರ ಆಟಗಾರರನ್ನು ವಿನಿಮಯ ಮಾಡಿಕೊಳ್ಳಬಹುದು ಅಥವಾ ನಗದು ವ್ಯವಹಾರಗಳಲ್ಲಿ ಆಟಗಾರರನ್ನು ಖರೀದಿಸಬಹುದು. ಈ ಸಂಪೂರ್ಣ ವಿಷಯದಲ್ಲಿ ಐಪಿಎಲ್ ಆಡಳಿತ ಮಂಡಳಿಯು ಅಂತಿಮ ಅಧಿಕಾರವನ್ನು ನೀಡಿದೆ. ಹೆಚ್ಚಿನ ಫ್ರಾಂಚೈಸಿಗಳು ಒಂದೇ…

Read More

ಹುಬ್ಬಳ್ಳಿ: ಕೊಲೆ ಯತ್ನ, ಅಪಹರಣ ಪ್ರಕರಣದಲ್ಲಿ ತಲೆಮರೆಸಿಕೊಂಡ ರೌಡಿಯೊಬ್ಬ ಹಿಡಿಯಲು ಬಂದ ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆಗೆ ಮುಂದಾಗಿದ್ದು, ಪೊಲೀಸರು ಪ್ರತಿಯಾಗಿ ಆತನ ಕಾಲಿಗೆ ಗುಂಡು ಹಾರಿಸಿದ ಘಟನೆ ಶನಿವಾರ ರಾತ್ರಿ ನಡೆದಿದೆ. ಕೊಲೆಗೆ ಯತ್ನ, ಅಪಹರಣ ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಸತೀಶ ಗೋನಾ ಎಂಬಾತನ ಕಾಲಿಗೆ ಗುಂಡೇಟು ಬಿದ್ದಿದೆ. ಹೆಂಡತಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಸತೀಶ ಗೋನಾ ತಲೆಮರೆಸಿಕೊಂಡು ತಿರುಗಾಡುತ್ತಿದ್ದ. ಶನಿವಾರ ಗದಗ ರಸ್ತೆಯಲ್ಲಿ ಈತ ಇದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ತೆರಳಿ‌ ಹಿಡಿಯಲು ಹೋದಾಗ, ಅವರ ಮೇಲೆ ಕಲ್ಲು ತೂರಿದ್ದಲ್ಲದೆ, ಚಾಕುವಿನಿಂದ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಶಹರ ಠಾಣೆ ಇನ್ಸ್‌ಪೆಕ್ಟರ್ ರಫಿಕ್ ತಹಶೀಲ್ದಾರ್ ಹಲ್ಲೆಗೆ ಮುಂದಾದ ರೌಡಿಯನ್ನು ತಡೆಯಲು ಆತನ ಕಾಲಿಗೆ ಫೈರ್ ಮಾಡಿ ಬಂಧಿಸಿದ್ದಾರೆ. ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ರೌಡಿಶೀಟರ್ ನ ದಾಳಿಯಿಂದಾಗಿ ಶಹರ ಠಾಣೆ ಪಿಎಸ್ ಐ ವಿನೋದ ಮತ್ತು ಪೇದೆ ಜಗದೀಶ ಎಂಬುವರಿಗೆ…

Read More

ನವದೆಹಲಿ: ಸಲಿಂಗ ವಿವಾಹ (Same Sex Marriage) ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನ (Supreme Court) ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿರುವ ಮರುಪರಿಶೀಲನಾ ಅರ್ಜಿಗಳನ್ನು ಮುಕ್ತ ನ್ಯಾಯಾಲಯದಲ್ಲಿ ವಿಚಾರಣೆ ಕೋರಿ ಹಿರಿಯ ವಕೀಲ ಮತ್ತು ಮಾಜಿ ಅಟಾರ್ನಿ ಜನರಲ್ ಮುಕುಲ್ ರೋಹಟಗಿ ಅವರು ಸುಪ್ರೀಂ ಕೋರ್ಟ್‌ಗೆ ತುರ್ತು ಪ್ರಸ್ತಾಪವನ್ನು ಮಾಡಿದರು. ವಿವಾಹದ ಹಕ್ಕು ನಿರಾಕರಣೆ ಎಂದು ಪೀಠದಲ್ಲಿದ್ದ ಎಲ್ಲಾ ನ್ಯಾಯಾಧೀಶರು ಒಪ್ಪಿಕೊಂಡರೂ ತೀರ್ಪು ನೀಡಿದ ಸಂವಿಧಾನ ಪೀಠವು ಪರಿಹಾರವನ್ನು ನಿರಾಕರಿಸಿದ್ದರಿಂದ ಮರುಪರಿಶೀಲನಾ ಅರ್ಜಿಗಳನ್ನು ಮುಕ್ತ ನ್ಯಾಯಾಲಯದಲ್ಲಿ ಆಲಿಸಬೇಕು ಎಂದು ರೋಹಟಗಿ ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠಕ್ಕೆ ತಿಳಿಸಿದರು. ನ್ಯಾಯಾಧೀಶರು ತಾರತಮ್ಯವಿದೆ ಒಪ್ಪುತ್ತಾರೆ, ತಾರತಮ್ಯವಿದ್ದರೆ ಪರಿಹಾರವೂ ಇರಬೇಕು. ಹೆಚ್ಚಿನ ಸಂಖ್ಯೆಯ ಜನರ ಜೀವನ ಅವಲಂಬಿತವಾಗಿದೆ. ತೆರೆದ ನ್ಯಾಯಾಲಯದ ವಿಚಾರಣೆಗೆ ನಾವು ಒತ್ತಾಯಿಸಿದ್ದೇವೆ ಎಂದು ಮನವಿ ಮಾಡಿದರು. ನಾವು ಮನವಿಯನ್ನು ಪರಿಶೀಲಿಸಿ ವಿಚಾರಣೆ ಬಗ್ಗೆ ನಿರ್ಧರಿಸುತ್ತೇವೆ ಎಂದು ಸಿಜೆಐ ಚಂದ್ರಚೂಡ್ ತಿಳಿಸಿದರು. https://ainlivenews.com/miley-is-the-new-president-of-argentina-who-talks-to-a-dead-dog/ ಮರು ಪರಿಶೀಲನಾ ಅರ್ಜಿಗಳನ್ನು ಸಾಮಾನ್ಯವಾಗಿ ಸುಪ್ರೀಂ ಕೋರ್ಟ್ ಚೇಂಬರ್‌ನಲ್ಲಿ ವಿಚಾರಣೆ…

Read More

ಕಲಬುರಗಿ:- ಜಿಲ್ಲೆಯ ಪ್ರಶಾಂತ ನಗರದ ಶ್ರೀ ಹನುಮಾನ ಮಂದಿರದಲ್ಲಿ ಕಾರ್ತೀಕ ಮಾಸದ ಪ್ರಯುಕ್ತ ದೀಪೋತ್ಸವ ಅರ್ಚಕರಾದ ಗುಂಡಾಚಾರ್ಯ ಜೋಶಿ ನರಿಬೊಳ ಅವರ ನೇತೃತ್ವದಲ್ಲಿ ನೆರವೇರಿತು. ಕಾರ್ತೀಕ ಮಾಸದ ಪ್ರಯುಕ್ತ ಪ್ರತಿದಿನವೂ ಸಂಜೆ ದೀಪೋತ್ಸವ, ಭಜನೆ, ಶ್ರೀ ರಾಮತಾರಕ ಮಂತ್ರ ಜಪ, ಮಾಹಾಮಂಗಳಾರತಿ, ಮಂತ್ರಪುಷ್ಪ ನೆರವೇರುತ್ತಿದೆ, ಡಿಸೆಂಬರ್ 12 ರವರೆಗೂ ದೀಪೋತ್ಸವ ನಡೆಯಲಿದೆ ಎಂದು ಅರ್ಚಕರು ತಿಳಿಸಿದರು. ಜಯತೀರ್ಥ ಮಹಿಳಾ ಮಂಡಳಿಯ ಸದಸ್ಯರು, ಗೋಪಾಲರಾವ, ಶಾಮರಾವ ಕುಲಕರ್ಣಿ, ಪ್ರಮೋದ ಪಂಥ, ಗುರುರಾಜ, ಸೇರಿದಂತೆ ಅನೇಕ ಭಕ್ತರು ಭಾಗವಹಿಸಿದ್ದರು.

Read More