Author: AIN Author

ಬೆಂಗಳೂರು:- ಚುನಾವಣೆಯಲ್ಲಿ ಸೋತು ಸೋಮಣ್ಣ ಮಾನಸಿಕವಾಗಿ ನೊಂದಿದ್ದಾರೆ ಎಂದು ಮಾಜಿ ಸಿಎಂ ಸದಾನಂದಗೌಡ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ವಿಧಾನಸಭೆ ಚುನಾವಣೆಯಲ್ಲಿ ಎರಡು ಕಡೆ ಸ್ಪರ್ಧಿಸಿ ಸೋಲನುಭವಿಸಿದ್ದಕ್ಕೆ ಮಾಜಿ ಸಚಿವ ವಿ.ಸೋಮಣ್ಣ ಮಾನಸಿಕವಾಗಿ ನೊಂದಿರುವ ಹಿನ್ನೆಲೆಯಲ್ಲಿ ಬೇಸರದ ಮಾತುಗಳನ್ನಾಡಿದ್ದಾರೆ ಎಂದರು. ಸೋಮಣ್ಣ ತಮ್ಮ ಕ್ಷೇತ್ರವನ್ನು ಬಿಟ್ಟು ಬೇರೆ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋಲನುಭವಿಸಿದ್ದಾರೆ. ಹೀಗಾಗಿ ಅಸಮಾಧಾನದ ಮಾತುಗಳನ್ನಾಡಿದ್ದಾರೆ. ಅವರ ಮಾತನ್ನು ಒಪ್ಪುತ್ತೇನೆ. ಪಕ್ಷಕ್ಕಾಗಿ ದುಡಿದಿದ್ದಾರೆ. ಸೋಲಾಗಿರುವುದಕ್ಕೆ ಅವರಿಗೆ ನೋವಾಗಿದೆ. ಒಳ್ಳೆಯ ರಾಜಕಾರಣಿಯಾಗಿ ಕೆಲಸ ನಿರ್ವಹಿಸಿದರು. ಸ್ವಕ್ಷೇತ್ರ ಬಿಟ್ಟು ಬೇರೆ ಕಡೆ ಹೋಗಿ ಸೋಲನುಭವಿಸಿದ್ದಕ್ಕೆ ನೋವು ತಂದಿದೆ ಎಂದರು. ಗೋವಿಂದರಾಜನಗರದಲ್ಲಿ ಸ್ಪರ್ಧಿಸಿದ್ದರೆ ಖಂಡಿತವಾಗಿಯೂ ಭಾರಿ ಅಂತರದಲ್ಲಿ ಗೆಲುವು ಸಾಧಿಸುತ್ತಿದ್ದರು. ಪಕ್ಷವು ತೀರ್ಮಾನಿಸಿ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸುವ ಅವಕಾಶ ನೀಡಿತ್ತು. ಸೋಮಣ್ಣ ಅವರನ್ನು ಕೇಳಿಯೇ ಕಣಕ್ಕಿಳಿಸಲಾಗಿತ್ತು ಎಂದು ಹೇಳಿದರು.

Read More

ಹಾವೇರಿ:- ರಸ್ತೆ ಪಕ್ಕ ಚಿರತೆ ಪ್ರತ್ಯಕ್ಷಗೊಂಡ ಘಟನೆ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಅರೆಮಲ್ಲಾಪುರ, ಚಳಿಗೇರಿಯ ಬಳಿ ಜರುಗಿದೆ. ಪಕ್ಕದಲ್ಲಿ ಚಿರತೆ ನಿಂತಿರುವುದನ್ನು ಕಾರಿನಲ್ಲಿ ಹೋಗುತ್ತಿದ್ದವರು ತಮ್ಮ ಮೊಬೈಲ್​ನಲ್ಲಿ ಸೆರೆ ಹಿಡಿದಿದ್ದು, ಸಾಮಾಜಿಕ ಜಾಲತಾಣದಲ್ಲಿ ಇದರ ವಿಡಿಯೋ ವೈರಲ್ ಆಗುತ್ತಿದೆ. ಸದ್ಯ ಚಿರತೆ ಕಾಣಿಸಿಕೊಂಡ ನಂತರ ವಾಹನ ಸವಾರರು ಭೀತಿಯಿಂದಲೇ ರಸ್ತೆಯಲ್ಲಿ ಸಂಚರಿಸುತ್ತಿದ್ದಾರೆ.

Read More

ಲಖನೌ: 16 ವರ್ಷದ ಬಾಲಕಿಯೊಬ್ಬಳು ಶುಕ್ರವಾರ ತನ್ನ ತಾಯಿಗೆ ವಿಷ ಬೆರೆಸಿದ ಚಹಾ ನೀಡಿದ ಘಟನೆ ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿ ನಡೆದಿದೆ. ಬಾಯ್‌ಫ್ರೆಂಡ್‌ನೊಂದಿಗೆ ತನ್ನ ಮಗಳ ಸಂಬಂಧವನ್ನು ವಿರೋಧಿಸಿ ಹುಡುಗನನ್ನು ಭೇಟಿಯಾಗದಂತೆ ತಾಯಿ ತಡೆದಿದ್ದೇ ಇದಕ್ಕೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಆದರೂ, ತಾಯಿ ಚಹಾ ಸೇವಿಸಿದ ಬಳಿಕ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಾಗ ಬಾಲಕಿ ಗಾಬರಿಗೊಂಡು ನೆರೆಹೊರೆಯವರ ಸಹಾಯ ಕೇಳಿದ್ದಾಳೆ. ನಂತರ, ಸಂಗೀತಾ ಯಾದವ್ (48) ಎಂಬ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈಗ ಅವರು ಅಪಾಯದಿಂದ ಪಾರಾಗಿದ್ದಾರೆ ಎಂದೂ ಪೊಲೀಸರು ತಿಳಿಸಿದ್ದಾರೆ. ಮಾರುಕಟ್ಟೆಯಿಂದ ವಿಷ ತರುವಂತೆ ಬಾಲಕಿ ತನ್ನ ಗೆಳೆಯನಿಗೆ ಕೇಳಿದ್ದಳು ಎಂದೂ ಘಟನೆ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಸಂಬಂಧ ರಾಯ್ ಬರೇಲಿಯ ಎಸ್ಪಿ ಅಲೋಕ್ ಪ್ರಿಯದರ್ಶಿನಿ ಅವರು ಐಪಿಸಿಯ ಸೆಕ್ಷನ್ 328 ಅಡಿಯಲ್ಲಿ ಹದಿಹರೆಯದ ಬಾಲಕಿ ಮತ್ತು ಆಕೆಯ ಗೆಳೆಯನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದೂ ತಿಳಿದುಬಂದಿದೆ. ಈ ಮಧ್ಯೆ, ಬಾಲಕಿಯನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ, ಆದರೆ…

Read More

ಭಾನುವಾರ ಬಂತು ಎಂದರೆ ನಾನ್‍ವೆಜ್ ಪ್ರಿಯರಿಗೆ ಹಬ್ಬ. ಈ ಹಬ್ಬವನ್ನು ಮತ್ತಷ್ಟು ವಿಶೇಷವಾಗಿಸಲು ಇಂದು ನಿಮ್ಮ ಮನೆಯಲ್ಲಿ ‘ಚಿಕನ್ ಲಿವರ್ ಫ್ರೈ’ ಮಾಡಿ. ಈ ರೆಸಿಪಿ ರುಚಿಕರವಾಗಿರುವುದರ ಜೊತೆ ಸಿಂಪಲ್ ಆಗಿ ಇರುತ್ತೆ. ಮನೆಯವರಿಗೆ ಚಿಕನ್ ಫ್ರೈ, ಸಾರು ಮಾಡುವ ಬದಲು ಈ ರೆಸಿಪಿಯನ್ನು ಮಾಡಲು ಬಲು ಸುಲಭ.  ಮನೆಯಲ್ಲಿಯೇ ಟ್ರೈ ಮಾಡಿ ಈ ರೆಸಿಪಿ. ಬೇಕಾಗಿರುವ ಪದಾರ್ಥಗಳು * ಕೋಳಿ ಲಿವರ್ – 300 ಗ್ರಾಂ * ಕೊತ್ತಂಬರಿ ಪುಡಿ – 1/2 ಟೀಚಮಚ * ಕಟ್ ಮಾಡಿದ ಈರುಳ್ಳಿ – 1 ಕಪ್ * ಶುಂಠಿ ಮತ್ತು ಬೆಳ್ಳುಳ್ಳಿ ಪೇಸ್ಟ್ – 1/2 ಟೀಚಮಚ * ಟೊಮೆಟೊ – ಅರ್ಧ ಕಪ್ * ಎಣ್ಣೆ – 2 ಟೇಬಲ್ಸ್ಪೂನ್ * ಟೊಮೆಟೊ ಕೆಚಪ್ – 1 ಚಮಚ * ಜೀರಿಗೆ ಪುಡಿ – 1/2 ಟೀಚಮಚ * ಗರಂ ಮಸಾಲಾ ಪುಡಿ – 1/2 ಟೀಚಮಚ * ಹಸಿರು…

Read More

ಹುಬ್ಬಳ್ಳಿ:- ಡಿಕೆಶಿ ಸಿಬಿಐ ಪ್ರಕರಣ ಹಿಂಪಡೆಯುವುದು ಸರಿಯಾದ ಕ್ರಮವಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಸಲ್ಲಿಕೆಯಾಗಿರುವ ಪ್ರಕರಣವನ್ನು ರಾಜ್ಯ ಕಾಂಗ್ರೆಸ್‌ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ವಾಪಸ್‌ ಪಡೆಯಲು ನಿರ್ಧರಿಸಿರುವುದು ಸರಿಯಲ್ಲ. ಶಿವಕುಮಾರ ವಿರುದ್ಧ 2019ರಲ್ಲಿ ಅಂದಿನ ಬಿಜೆಪಿ ಸರ್ಕಾರ ಸಿಬಿಐ ತನಿಖೆಗೆ ನೀಡಿದ್ದ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಪ್ರಕರಣವನ್ನು ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ವಾಪಸ್ ಪಡೆಯಲು ನಿರ್ಧರಿಸಿರುವುದು ನೈತಿಕವಾಗಿ ಹಾಗೂ ಕಾನೂನಾತ್ಮಕವಾಗಿ ಸರಿಯಲ್ಲ. ದೇಶದಲ್ಲಿ ನಾಯಾಂಗ ವ್ಯವಸ್ಥೆಯಿದೆ. ಸರ್ಕಾರದ ನಿರ್ಣಯಗಳ ವಿರುದ್ಧವಾಗಿಯೂ ನ್ಯಾಯಾಲಯಗಳು ತೀರ್ಪು ನೀಡಿವೆ. ನ್ಯಾಯಾಂಗ ವ್ಯವಸ್ಥೆ ಸಂಪೂರ್ಣವಾಗಿ ಸ್ವತಂತ್ರವಾಗಿದ್ದು, ನಿಷ್ಪಕ್ಷಪಾತವಾಗಿ ಕಾರ್ಯ ನಿರ್ವಹಿಸುತ್ತಿವೆ. ದೋಷಾರೋಪ ಪಟ್ಟಿ ಸಲ್ಲಿಸುವ ಹಂತದಲ್ಲಿ ಈ ರೀತಿ ವಾಪಸ್ ಪಡೆದಿರುವುದು ಸರಿಯಲ್ಲ. ಸಂಬಂಧಿಸಿದ ಏಜೆನ್ಸಿಗಳು ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು. ಸಚಿವ ಸಂಪುಟದ‌ ಈ‌ ನಿರ್ಧಾರವನ್ನು ನ್ಯಾಯಾಲಯ ತಿರಸ್ಕರಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Read More

ಶಿವಮೊಗ್ಗ:- ಮುಸ್ಲಿಂ ನಾಯಕರಿಗೆ ತಲೆಬಾಗಬೇಕು ಎಂಬುದಕ್ಕೆ ನನ್ನ ವಿರೋಧವಿದೆ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ರಾಜ್ಯದ ಕಾಂಗ್ರೆಸ್ ಸರ್ಕಾರ ಭಾರತದ ಸಂವಿಧಾನ ಪ್ರಕಾರ ಆಡಳಿತ ನಡೆಸುತ್ತಿದೆಯಾ? ಇಲ್ಲ ಪಾಕಿಸ್ತಾನದ ಇಸ್ಲಾಮಿಕ್ ಪ್ರಕಾರ ಆಡಳಿತ ನಡೆಸುತ್ತಿದೆಯಾ? ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಬೇಕು ಎಂದರು. ಸಚಿವ ಜಮೀರ್ ಅಹಮ್ಮದ್ ಅವರು ತೆಲಂಗಾಣದಲ್ಲಿ ಪ್ರಚಾರಕ್ಕೆ ಹೋದಾಗ ಮುಸ್ಲಿಂ ಸಭಾಧ್ಯಕ್ಷರಿಗೆ ಎಲ್ಲರೂ ತಲೆಬಾಗಿ ವಿಧಾನಸಭೆ ಚಟುವಟಿಕೆ ನಡೆಸಬೇಕು ಎಂದಿದ್ದಾರೆ. ಮುಸ್ಲಿಂ ನಾಯಕರಿಗೆ ತಲೆಬಾಗಬೇಕು ಎಂಬುದಕ್ಕೆ ನನ್ನ ವಿರೋಧವಿದೆ. ನಾವು ಗೌರವ ಕೊಡುತ್ತಿರುವುದು ಖಾದರ್ ಅನ್ನೋ ಬೋಳಪ್ಪ ಇದ್ದಾನೆ ಅಂತಲ್ಲ. ದೇಶದ ಸಂವಿಧಾನ ಹಾಗೂ ಸ್ಪೀಕರ್ ಸ್ಥಾನಕ್ಕೆ. ಈ ರೀತಿ ರಾಷ್ಟ್ರದ್ರೋಹಿ ಹೇಳಿಕೆ ನೀಡಿರುವ ಜಮೀರ್‌ ಅಹಮ್ಮದ್‌ ಅವರನ್ನು ಕೂಡಲೇ ಸಚಿವ ಸ್ಥಾನದಿಂದ ಕೆಳಗಿಳಿಸಬೇಕು ಎಂದು ಆಗ್ರಹಿಸಿದರು. ಜಮೀರ್ ಹೇಳಿಕೆಗೆ ಮುಂದಿನ ಚುನಾವಣೆಯಲ್ಲಿ ಹಿಂದುಗಳು, ಮುಸ್ಲಿಮರು ಸೇರಿ ಉತ್ತರ ಕೊಡುತ್ತಾರೆ. ಜಮೀರ್‌ ಹೇಳಿಕೆಯನ್ನು ಕಾಂಗ್ರೆಸ್‌ ನಾಯಕರಾದ ಸೋನಿಯಾ, ರಾಹುಲ್…

Read More

ಬೆಂಗಳೂರು :- ಡಿಕೆಶಿ ಪ್ರಾಮಾಣಿಕರಾಗಿದ್ದರೆ ಸಂಪುಟ ನಿರ್ಧಾರ ವಿರೋಧಿಸಬೇಕಿತ್ತು ಎಂದು ಬಿವೈ ವಿಜಯೇಂದ್ರ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ರಾಜ್ಯದ ಉಪ ಮುಖ್ಯಮಂತ್ರಿಯಾಗಿ ಜವಾಬ್ದಾರಿಯ ಸ್ಥಾನದಲ್ಲಿರುವ ಡಿ.ಕೆ.ಶಿವಕುಮಾರ್ ಅವರು ಪ್ರಾಮಾಣಿಕವಾಗಿದ್ದರೆ ಸಚಿವ ಸಂಪುಟ ಕೈಗೊಂಡ ತೀರ್ಮಾವನ್ನು ವಿರೋಧಿಸಬೇಕಿತ್ತು. ವಿರೋಧಿಸದೆ ಇರುವುದರಿಂದ ಶಿವಕುಮಾರ್‌ ತಪ್ಪು ಮಾಡಿದ್ದಾರೆ ಎಂಬುದಾಗಿ ಒಪ್ಪಿಕೊಂಡಂತಾಗಿದೆ ಎಂದು ಹೇಳಿದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಪ್ರಕರಣದ ಅನುಮತಿಯನ್ನು ವಾಪಸ್‌ ತೆಗೆದುಕೊಂಡಿರುವ ಸರ್ಕಾರದ ತೀರ್ಮಾನವು ಸಂಪೂರ್ಣ ಕಾನೂನು ಬಾಹಿರ. ಅವರಿಗೆ ಕಾನೂನಿನ ಭಯ ಇದೆಯಾ ಎಂದು ಖಾರವಾಗಿ ಪ್ರಶ್ನಿಸಿದರು. ಸರ್ಕಾರ ಕೈಗೊಂಡ ತೀರ್ಮಾನದ ವಿರುದ್ಧ ಯಾವ ರೀತಿ ಹೋರಾಟ ನಡೆಸಬೇಕು ಎಂಬುದನ್ನು ಚರ್ಚಿಸಿ ನಿರ್ಧರಿಸಲಿದ್ದೇವೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ತೆಗೆದುಕೊಂಡ ತೀರ್ಮಾನ ರಾಜಕೀಯ ಪ್ರೇರಿತ ಆಗಿರಲಿಲ್ಲ. ಪ್ರಾಥಮಿಕ ತನಿಖೆಯಲ್ಲಿ ಅಕ್ರಮ ಆಗಿದೆ ಎನ್ನುವ ಮಾಹಿತಿ ಆಧಾರದಲ್ಲಿ ಹಿಂದೆ ಸಿಬಿಐಗೆ ತನಿಖೆಗೆ ಅನುಮತಿ ನೀಡಲಾಗಿತ್ತು. ಸರ್ಕಾರದ ನಿರ್ಧಾರ ದುರದೃಷ್ಟಕರ. ಸರ್ಕಾರ ಕಾನೂನಿಗೆ ವಿರುದ್ಧವಾಗಿ ಈ ನಿರ್ಣಯ ಕೈಗೊಂಡಿದೆ. ಡಿ.ಕೆ.ಶಿವಕುಮಾರ್‌ ಅವರನ್ನು…

Read More

ತುಮಕೂರು:- ರಾಜ್ಯ ಸರ್ಕಾರವು ಲೋಕಸಭಾ ಚುನಾವಣೆ ಬಳಿಕ ಗೋವಿಂದ ಆಗಲಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್‌ ಹೇಳಿದರು. ಈ ಸಂಬಂಧ ಮಾತನಾಡಿದ ಅವರು,ಸಿದ್ದರಾಮಯ್ಯರನ್ನು ಇಳಿಸಲು ಡಿ.ಕೆ.ಶಿವಕುಮಾರ್‌ ಪರ ಗ್ಯಾಂಗ್ ಈಗಾಗಲೇ ರೆಡಿ ಆಗಿ ಕೂತಿದೆ. ಇನ್ನೊಂದು ಕಡೆ ಶಿವಕುಮಾರ್‌ ಅವರನ್ನು ಸಿಕ್ಕಿಹಾಕಿಸಲು ಸಿದ್ದರಾಮಯ್ಯ ಅವರು ಪರಮೇಶ್ವರ್ ಮನೆಯಲ್ಲಿ ಮೀಟಿಂಗ್ ಮಾಡಿದ್ದಾರೆ. ನಾಲ್ಕು ಜನ ಸೇರಿ ಶಿವಕುಮಾರ್‌ಗೆ ಖೆಡ್ಡಾ ತೋಡಲು ರೆಡಿ ಮಾಡಿದ್ದಾರೆ ಎಂದರು. ಹಿಂದೆ ಮೈತ್ರಿ ಸರ್ಕಾರವನ್ನು ಬೀಳಿಸುವುದಕ್ಕೆ ಬೆಳಗಾವಿಯಲ್ಲಿಯೇ ಪ್ಲಾನ್ ಆಗಿತ್ತು. ಈಗಲೂ ಅಲ್ಲಿಂದಲೇ ತಯಾರಿ ನಡೀತಾ ಇದೆ. ಇವೆಲ್ಲ ಬೆಳವಣಿಗೆಯನ್ನು ನೋಡಿದರೆ ಶೀಘ್ರ ಸರ್ಕಾರ ಗೋವಿಂದ ಆಗಲಿದೆ ಎಂದರು. ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಆದರೆ ಯಾರಿಗೆ ಎಷ್ಟು ಸೀಟು ಅನ್ನೋದು ಇನ್ನೂ ನಿರ್ಧಾರ ವಾಗಿಲ್ಲ. ರಾಷ್ಟ್ರೀಯ ನಾಯಕರು, ಜೆಡಿಎಸ್ ವರಿಷ್ಠ ದೇವೇಗೌಡರು ಸೇರಿ ತೀರ್ಮಾನ ಮಾಡುತ್ತಾರೆ ಎಂದ ಅವರು, ಮೊದಲೆಲ್ಲ 24, 25 ಕಡೆಗಳಲ್ಲಿ ಸ್ಪರ್ಧೆ ಮಾಡುತ್ತಿದ್ದೆವು. ಈ ಬಾರಿ 28 ಕ್ಷೇತ್ರಗಳಲ್ಲಿಯೂ ನಾವು…

Read More

ಇಸ್ಲಾಮಾಬಾದ್: ಸೊಸೆಯ ಮೇಲೆ ಅತ್ಯಾಚಾರವೆಸಗಿದ ಕಾರಣಕ್ಕೆ ಮಹಿಳೆಯೊಬ್ಬರು ತನ್ನ ಗಂಡನನ್ನೇ ಗುಂಡಿಟ್ಟು ಕೊಲೆ ಮಾಡಿದ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಇಲ್ಲಿನ ಶಾಂಗ್ಲಾ ಗ್ರಾಮದ ನಿವಾಸಿಯಾದ ಬೇಗಂ ಬೀಬಿ ತನ್ನ ಗಂಡ ಗುಲ್ಬರ್ ಖಾನ್‍ನನ್ನು ಕೊಲೆ ಮಾಡಿದ್ದಾರೆ. ಅವರು ಕುಟುಂಬ ಮತ್ತು ಸಂಬಂಧಗಳಿಗೆ ಬೆಲೆ ಕೊಡಲಿಲ್ಲ. ಹೀಗಾಗಿ ಕೊಲೆ ಮಾಡಿದೆ ಎಂದು ಬೇಗಂ ಬೀಬಿ ಒಪ್ಪಿಕೊಂಡಿದ್ದಾರೆ. ಗುಲ್ಬರ್ ಖಾನ್ ಕಳೆದ 3 ತಿಂಗಳಿನಿಂದ ಸೊಸೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದನೆಂದು ಬೀಬಿ ಹೇಳಿದ್ದಾರೆ. ಅತ್ಯಾಚಾರಕ್ಕೊಳಗಾಗಿದ್ದಾರೆ ಎನ್ನಲಾದ ಮಹಿಳೆಯ ಗಂಡ ಸೈನಿಕರಾಗಿದ್ದು, ಈ ಬಗ್ಗೆ ಪತ್ರಿಕೆಯೊಂದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಹೆಂಡತಿಯ ಸ್ಥಿತಿಯ ಬಗ್ಗೆ ನನಗೆ ಗೊತ್ತಿತ್ತು. ಆದ್ರೆ ತಂದೆಯೆಂಬ ಗೌರವದಿಂದ ಅವರನ್ನು ನಾನು ಕೊಲ್ಲುವುದು ಅಸಾಧ್ಯ. https://ainlivenews.com/miley-is-the-new-president-of-argentina-who-talks-to-a-dead-dog/ ಆದ್ರೆ ನಾನು ತರಬೇತಿ ಮುಗಿಸಿ ಹಿಂದಿರುಗಿದ ನಂತರ ಮನೆಯಿಂದ ಹೊರಹೋಗುತ್ತೇನೆ ಎಂದು ನನ್ನ ತಾಯಿಗೆ ಹೇಳಿದ್ದೆ ಎಂದಿದ್ದಾರೆ. ಗುಲ್ಬರ್ ಖಾನ್ ಮಲಗಿದ್ದ ವೇಳೆ ಬೀಬಿ ತನ್ನ ಸೊಸೆಯ ನೆರವು ಪಡೆದು ಪಿಸ್ತೂಲ್‍ನಿಂದ ಗುಂಡಿಟ್ಟು ಗಂಡನನ್ನು ಕೊಲೆ ಮಾಡಿದ್ದಾಗಿ…

Read More

ಬೆಂಗಳೂರು:- ಇತ್ತೀಚೆಗೆ ದಂಪತಿಯ ಗಮನ ಬೇರೆಡೆ ಸೆಳೆದು ಚಿನ್ನಾಭರಣವಿದ್ದ ಬ್ಯಾಗ್‌ ಎಗರಿಸಿದ್ದ ಪ್ರಕರಣ ಸಂಬಂಧ ಕುಖ್ಯಾತ ಓಜಿ ಕುಪ್ಪಂ ಗ್ಯಾಂಗ್‌ನ ಸದಸ್ಯನೊಬ್ಬನನ್ನು ಕೆಂಗೇರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಗಿರಿ ಕುಮಾರ್‌ ಅಲಿಯಾಸ್‌ ಗಿರಿ(41) ಬಂಧಿತ ಆರೋಪಿ. ಆರೋಪಿಯಿಂದ ₹25 ಲಕ್ಷ ಮೌಲ್ಯದ 449 ಗ್ರಾಂ ಚಿನ್ನ ಮತ್ತು ವಜ್ರಾಭರಣ ಜಪ್ತಿ ಮಾಡಲಾಗಿದೆ. ಅ.21ರಂದು ಕೆಂಗೇರಿ ಮೈಸೂರು ರಸ್ತೆಯ ಬಿಡಿಎ ಅಪಾರ್ಟ್‌ಮೆಂಟ್‌ ಬಳಿ ರಾಜೇಶ್‌ ಶ್ರೀವಾಸ್ತವ್‌ ಅವರು ತಮ್ಮ ಪತ್ನಿ ಜತೆಗೆ ಕಾರಿನಲ್ಲಿ ಹೋಗುವಾಗ ಕೆಲ ದುಷ್ಕರ್ಮಿಗಳು ಕಾರು ಪಂಕ್ಚರ್‌ ಆಗಿದೆ ಎಂದು ದಂಪತಿಯ ಗಮನ ಬೇರೆಡೆ ಸೆಳೆದು ಕಾರಿನಲ್ಲಿದ್ದ ಚಿನ್ನಾಭರಣ ಕದ್ದು ಪರಾರಿಯಾಗಿದ್ದರು. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೂರುದಾರ ರಾಜೇಶ್‌ ದಂಪತಿ ಕೆಂಗೇರಿಯ ಮೈಸೂರು ರಸ್ತೆಯ ಬಿಡಿಎ ಅಪಾರ್ಟ್‌ಮೆಂಟ್‌ನಲ್ಲಿ ನೆಲೆಸಿದ್ದಾರೆ. ಕೆಲ ತಿಂಗಳ ಹಿಂದೆ ಚಂದ್ರಾಲೇಔಟ್‌ನ ಕೆನರಾ ಬ್ಯಾಂಕ್‌ ಶಾಖೆಯಲ್ಲಿ ಲಾಕರ್‌ನಲ್ಲಿ ಸುಮಾರು 500 ಗ್ರಾಂ ಚಿನ್ನಾಭರಣಗಳನ್ನು ಇರಿಸಿದ್ದರು.…

Read More