Author: AIN Author

ಕೋಲಾರ : ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಕೌನ್ಸಿಲರ್ ಎಂ.ಶ್ರೀನಿವಾಸನ್ ಕೊಲೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸಿ ಕೊಲೆಯ ಹಿಂದಿರುವ ಸಂಚುಕೋರರನ್ನು ಪತ್ತೆ ಎಂದು ಆಗ್ರಹಿಸಿ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಜ.31 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಆರ್.ಪಿ.ಐ ರಾಷ್ಟ್ರೀಯ ಕಾರ್ಯಾಧ್ಯಕ್ಷ ಎಂ.ವೆಂಕಟಸ್ವಾಮಿ ಅವ್ರು ತಿಳಿಸಿದರು. ಇಂದು ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ದಲಿತ ಮುಖಂಡರು ಆಗಿದ್ದ ಎಂ.ಶ್ರೀನಿವಾಸನ್ ಕೊಲೆಯ ವಿಚಾರವಾಗಿ ಹಲವಾರು ಸಂಘಟನೆಗಳು ಕಳೆದ ಡಿಸೆಂಬರ್ ನಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಸಿದ ಪ್ರತಿಭಟನೆಗೆ ಮಣಿದು ಪ್ರಕರಣವನ್ನು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ಸಿಓಡಿ ತನಿಖೆಗೆ ಒಪ್ಪಿಸಲಾಗಿತ್ತು ಎಂದು ವಿವರಿಸಿದರು. ಪ್ರಕರಣವನ್ನು ಸಿ.ಓ.ಡಿ.ಗೆ ಒಪ್ಪಿಸಿ ಎರಡು ತಿಂಗಳು ಆಗಿದ್ದರು ಯಾವುದೇ ಪ್ರಗತಿ ಕಾಣದೆ ಇರುವುದರಿಂದ ಹಾಗೂ ಸಿ.ಓ.ಡಿ.ಗೆ ಯಾವುದೇ ಸೌಲಭ್ಯಗಳನ್ನು ಸರ್ಕಾರ ನೀಡದಿರುವುದರಿಂದ ಮತ್ತು ಕೊಲೆಯ…

Read More

ಕೆಆರ್ ಪುರ:- ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಪಾತ್ರ ಅನನ್ಯವಾಗಿದ್ದು,ದೇಶದ ಅಭಿವೃದ್ಧಿಗೆ ಸೂಕ್ತವಾದ ಅಭ್ಯರ್ಥಿಗಳ ಆಯ್ಕೆ ಮಾಡಬೇಕೆಂದು  ಶಾಸಕ ಬಿ.ಎ.ಬಸವರಾಜ ತಿಳಿಸಿದರು. ಕ್ಷೇತ್ರದ ಸಿಲಿಕಾನ್ ಸಿಟಿ ಕಾಲೇಜಿನಲ್ಲಿ ಏರ್ಪಡಿಸಿದ್ದ ನಮೋ ನವಮತದಾತ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದರು. ದೇಶದ ಏಳಿಗೆಗಾಗಿ ಯುವ ಮತದಾರರು ತಪ್ಪದೆ ಮತ ಚಲಾಯಿಸಬೇಕು, ಯುವಜನತೆ ದೇಶದ ಬೆನ್ನೆಲುಬಾಗಿದ್ದು, ದೇಶದ ಅಭಿವೃದ್ಧಿಗೆ ಶ್ರಮಿಸುವ  ನವಮತದಾರರು,ದೇಶದ ಸರ್ವತೋಮುಖ ಬೆಳವಣಿಗೆಗೆ ಸೂಕ್ತ ಅಭ್ಯರ್ಥಿಗಿ ಮತನೀಡಿ ಕೈಜೋಡಿಸಬೇಕೆಂದು ತಿಳಿಸಿದರು. ಯುವ ಜನತೆ  ಮತದಾನ ಪ್ರಕ್ರಿಯೆಯಲ್ಲಿ ಕ್ರಿಯಾಶೀಲತೆಯಿಂದ ಭಾಗವಹಿಸುವಂತೆ ಕಿವಿಮಾತು ಹೇಳಿದರು. ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದಂತೆ ದೇಶದ ಸಮಗ್ರ ಅಭಿವೃದ್ಧಿ ಭದ್ರ ಬುನಾದಿ ಹಾಕುವ ನಿಟ್ಟಿನಲ್ಲಿ ನವಮತದಾತ ಆಲೋಚನೆ ಮಾಡಬೇಕೆಂದು ತಿಳಿಸಿದರು. ಕಳೆದ ಒಂದು ದಶಕದಲ್ಲಿ ಮೋದಿಯವರು ಪ್ರಧಾನಿಯಾಗಿ ಭಾರತ ದೇಶವನ್ನ ಜಗತ್ತಿನ ಭೂಪಟದಲ್ಲಿ ಎತ್ತಿ ತೋರಿಸಿದ್ದಾರೆ.ಹಲವು ದೇಶಗಳು ಭಾರತವನ್ನ ತಿರುಗಿ ನೋಡುವಂತ ಕೆಲಸ ಮಾಡಿದ್ದಾರೆ.ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕೆಲಸಗಳನ್ನ ನೋಡಲು ಜನ ಎದುರು ನೋಡುತ್ತಿದ್ದಾರೆ.ಮುಂದಿನ ಲೋಕಸಭಾ ಚುನಾವಣೆಯಲ್ಲಿ ನಿಮ್ಮ ಜೊತೆಗೆ…

Read More

ಬಿಗ್ ಬಾಸ್ ಗ್ರ್ಯಾಂಡ್ ಫಿನಾಲೆಗೆ ಕೌಂಟ್‌ಡೌನ್ ಶುರುವಾಗಲಿದ್ದು, ಯಾರಿಗೆ ಬಿಗ್ ಬಾಸ್ ವಿನ್ನರ್ ಪಟ್ಟ ಸಿಗಲಿದೆ ಎಂಬುದಕ್ಕೆ ಸದ್ಯದಲ್ಲೇ ಉತ್ತರ ಸಿಗಲಿದೆ. ಫಿನಾಲೆ ದಿನ ಅಂತಿಮವಾಗಿ ಇಬ್ಬರು ಸ್ಪರ್ಧಿಗಳು ಸುದೀಪ್ ಜೊತೆ ಇರಲಿದ್ದಾರೆ. ಅವರಲ್ಲಿ ಒಬ್ಬರಿಗೆ ಮಾತ್ರ ಬಿಗ್ ಬಾಸ್ ವಿನ್ನರ್ ಪಟ್ಟ ಸಿಗಲಿದೆ. ಇದೀಗ ಅಂತಿಮವಾಗಿ ಸಂಗೀತಾ ಶೃಂಗೇರಿ, ಡ್ರೋನ್ ಪ್ರತಾಪ್, ವಿನಯ್, ಕಾರ್ತಿಕ್, ತುಕಾಲಿ ಸಂತೂ, ವರ್ತೂರು ಸಂತೋಷ್ ಫಿನಾಲೆಗೆ ಎಂಟ್ರಿ ಪಡೆದಿದ್ದಾರೆ. ಇದರ ಮಧ್ಯೆ ಒಬ್ಬರ ಎಲಿಮಿನೇಷನ್ ಈ ವಾರದ ಮಧ್ಯೆ ನಡೆಯಲಿದೆ ಎಂದು ಹೇಳಲಾಗಿತ್ತು. ಅದು ಫಿನಾಲೆ ದಿನವೇ ತಿಳಿಯಲಿದೆ ಎನ್ನಲಾಗುತ್ತಿದೆ. ಸದ್ಯ ಉಳಿದುಕೊಂಡಿರುವ 6 ಜನ ಸ್ಪರ್ಧಿಗಳಲ್ಲಿ ಸಖತ್ ಪೈಪೋಟಿ ಇದೆ ಈ ಹಿಂದಿನ ಸೀಸನ್‌ನಲ್ಲಿ ಹಿರಿಯ ನಟಿ ಶೃತಿ ವಿನ್ನರ್ ಆಗಿದ್ದರು. ಈ ಸೀಸನ್‌ನಲ್ಲಿ ಮಹಿಳಾ ಸ್ಪರ್ಧಿ ಸಂಗೀತಾ ಶೃಂಗೇರಿ ಹೆಸರು ಹೆಚ್ಚಾಗಿ ಕೇಳಿ ಬರುತ್ತಿದೆ. ಅವರೇ ವಿನ್ನರ್ ಆಗುವ ಸಾಧ್ಯತೆಯಿದೆ ಎಂದು ಅಭಿಮಾನಿಗಳು ಲೆಕ್ಕಾಚಾರವಾಗಿದೆ. ಉಳಿದುಕೊಂಡಿರುವ ಪ್ರತಿ ಸ್ಪರ್ಧಿಗಳು ಕೂಡ ಟಫ್…

Read More

ಬೆಂಗಳೂರು:- ಕಾಂಗ್ರೆಸ್ ಪಕ್ಷದಲ್ಲಿನ ಮುಸ್ಲಿಮರ ಓಲೈಕೆ, ಹಿಂದೂ ಕಡೆಗಣನೆ ನೋಡಿ ಶೆಟ್ಟರ್ ವಾಪಸ್​ ಬಿಜೆಪಿಗೆ ಬಂದಿದ್ದಾರೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಇದೇನೂ ಆಪರೇಷನ್ ಕಮಲ ಅಲ್ಲ. ಜಗದೀಶ ಶೆಟ್ಟರ್ ಅವರು ಸಂಘ ಪರಿವಾರದ ಹಿನ್ನೆಲೆಯಿಂದ ಬೆಳೆದು ಬಂದಿದ್ದಾರೆ. ಅವರು ಮುಸ್ಲಿಮರನ್ನು ಓಲೈಸುವ ಪಕ್ಷಕ್ಕೆ ಏಕಾಏಕಿ ಸೇರಿಬಿಟ್ಟಿದ್ದರು‌. ರಾಮನವಮಿಗೂ ಇಮಾಮ್ ಸಾಬಿಗೂ ಏನು ಸಂಬಂಧ ಎನ್ನುವಂತೆ ಆಗಿತ್ತು. ಮುಸ್ಲಿಮರ ಓಲೈಕೆ ಹಾಗೂ ಹಿಂದೂಗಳ ಕಡೆಗಣನೆಯನ್ನು ನೋಡಿ ಅವರಿಗೆ ಉಸಿರುಗಟ್ಟುವ ವಾತಾವರಣ ಉಂಟಾಗಿತ್ತು. ಶೆಟ್ಟರ್ ಅವರು ಮರಳಿ ಗೂಡಿಗೆ ಬಂದಿರುವುದನ್ನು ತುಂಬು ಹೃದಯದಿಂದ ಸ್ವಾಗತ ಮಾಡಿದ್ದೇವೆ ಎಂದರು. ಅಯೋಧ್ಯೆಯ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ, ಮೂರು ರಾಜ್ಯಗಳಲ್ಲಿ ಬಿಜೆಪಿ ಗೆಲುವು, ಮೊದಲಾದ ಕಾರಣಗಳಿಂದ ಇನ್ನಷ್ಟು ನಾಯಕರು ಬಿಜೆಪಿ ಕಡೆ ಬರಲಿದ್ದಾರೆ. ಇನ್ನೇನಿದ್ದರೂ ‘ಕಾಂಗ್ರೆಸ್ ಚೋಡೊ’ ಎಂಬ ಘೋಷಣೆ ಕೇಳಿಬರಲಿದೆ. ಆಮ್ ಆದ್ಮಿ ಪಕ್ಷ, ಮಮತಾ ಬ್ಯಾನರ್ಜಿಯವರ ಪಕ್ಷ ಕಾಂಗ್ರೆಸ್ ನಾಲಾಯಕ್ ಎಂದು ಓಡಿಸಿದೆ. ಕಾಂಗ್ರೆಸ್ ಪಕ್ಷವನ್ನು…

Read More

ಬೆಂಗಳೂರು:- ಬೆಂಗಳೂರು ಹೊರವಲಯ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಹುಲ್ಲಹಳ್ಳಿ ಬಳಿ ಸರ್ವೆ ನಂ 44ರ ಸರ್ಕಾರಿ ಗೋಮಾಳದ ಜಾಗವಾಗಿದ್ದು, ಕಳೆದ ಕೆಲ‌ ವರ್ಷಗಳ ಹಿಂದೆ ಬಿಬಿಎಂಪಿಗೆ ನೀಡಲಾಗಿದೆ. ಈ ಕ್ವಾರಿಗೆ ಚಿಕ್ಕನಾಗಮಂಗಲ ಬಿಬಿಎಂಪಿ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಕಸ ಸಂಸ್ಕರಿಸಿ ಉಳಿದ ವೇಸ್ಟ್ ಕಸವನ್ನು ಬಿಬಿಎಂಪಿ ಲಾರಿಗಳ ಮೂಲಕ ರಾತ್ರೋರಾತ್ರಿ ತಂದು ಸುರಿದು ಹೋಗಲಾಗುತ್ತಿದೆ. ಇಷ್ಟು ದಿನಗಳ ಕಾಲ ಅಲ್ಲಿನ ಸುತ್ತಮುತ್ತಲಿನ ಗ್ರಾಮದ ಜನರು ಕಸದ ದುರ್ನಾತದಿಂದಾಗಿ ಸಮಸ್ಯೆ ಎದುರಿಸುತ್ತಿದ್ದರು. ಆದರೆ ಇದೀಗ ಕಸದಲ್ಲಿ ಬಾರಿ ಪ್ರಮಾಣದ ಬೆಂಕಿ ಕಾಣಿಸಿಕೊಳ್ಳುತ್ತಿದೆ. ಬೆಂಕಿಯ ಜೊತೆ ದಟ್ಟ ಹೊಗೆಯಿಂದಾಗಿ ಜನರು ನಿತ್ಯ ನರಕಯಾತನೆ ಅನುಭವಿಸುವಂತಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಉತ್ಪತ್ತಿಯಾಗುವ ಕಸವನ್ನ ಬೆಂಗಳೂರು ಹೊರವಲಯದ ಸಿಕ್ಕ ಸಿಕ್ಕ ಕಡೆಗಳಲ್ಲಿ ಡಂಪ್ ಮಾಡಲು ಮುಂದಾಗಿದ್ದಾರೆ. ಆದರೆ ವೈಜ್ಞಾನಿಕವಾಗಿ ಕಸ ಡಂಪ್ ಮಾಡುವಂತೆ ಕ್ರಮ ಕೈಗೊಳ್ಳಬೇಕಾದ ಬಿಬಿಎಂಪಿ ಅಧಿಕಾರಿಗಳ ಎಡವಟ್ಟಿನಿಂದಾಗಿ ಹುಲ್ಲಹಳ್ಳಿ ಗ್ರಾಮದ ಕ್ವಾರಿಯಲ್ಲಿ ಅವೈಜ್ಞಾನಿಕವಾಗಿ ಕಸವನ್ನ ರಾತ್ರೋರಾತ್ರಿ ತಂದು ಸುರಿಯಲಾಗುತ್ತಿದೆ. ಕ್ವಾರಿ ಸಮೀಪವೇ ಪ್ರತಿಷ್ಠಿತ ಖಾಸಗಿ ಶಾಲೆಗಳು…

Read More

ಬೆಂಗಳೂರು:- ಜೆಡಿಎಸ್ ಗೆ ಮಂಡ್ಯ ಕ್ಷೇತ್ರವೇ ಯಾಕೆ ಬೇಕು!? ಎಂದು ಕೆಸಿ ನಾರಾಯಣಗೌಡ ಪ್ರಶ್ನೆ ಮಾಡಿದ್ದಾರೆ. ಬೆಂಗಳೂರಲ್ಲಿಂದು ಮಂಡ್ಯದ ಪಕ್ಷೇತರ ಸಂಸದೆಯಾಗಿರುವ ಸುಮಲತಾ ಅಂಬರೀಶ್ ಅವರನ್ನು ಭೇಟಿಯಾಗಲು ಬಂದಾಗ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಗೌಡರು, ಮಂಡ್ಯ ಕ್ಷೇತ್ರದಿಂದ ಸುಮಲತಾ ಮೇಡಂ ಅವರೇ ಸ್ಪರ್ಧಿಸಲಿ ಅಂತ ಅವರನ್ನು ಕೋರಲು ಇಲ್ಲಿಗೆ ಬಂದಿದ್ದೇವೆ ಎಂದರು. ಕುಮಾರಸ್ವಾಮಿ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದು ಮತ್ತು ಅವರನ್ನು ಕೇಂದ್ರದಲ್ಲಿ ಸಚಿವ ಮಾಡುವ ಮಾತುಗಳು ಕೇಳಿಬರುತ್ತಿರೋದು ಸರಿ, ಅದಕ್ಕೆ ತಮ್ಮದೇನೂ ಅಭ್ಯಂತರವಿಲ್ಲ. ಆದರೆ ಮಂಡ್ಯದಿಂದ ಸುಮಲತಾ ಮೇಡಂ ಅವರೇ ಸ್ಪರ್ಧಿಸಬೇಕು, ಬಿಜೆಪಿ ಟಿಕೆಟ್ ಗಾಗಿ ತಾವು ವರಿಷ್ಠರೊಂದಿಗೆ ಚರ್ಚಿಸುತ್ತೇವೆ ಎಂದು ನಾರಾಯಣ ಗೌಡ ಹೇಳಿದರು.

Read More

ಕಲಬುರ್ಗಿ:- ಆಟೋ ಟಚ್​ ಆಗಿ ಬೈಕ್​ನಿಂದ ಬಿದ್ದಿದ್ದ ಸವಾರನ ಮೇಲೆ ಕೆಎಸ್​​ಆರ್​​ಟಿಸಿ ಬಸ್ ಹರಿದು ಬೈಕ್​ ಸವಾರ ಮೃತಪಟ್ಟ ಘಟನೆ ಕಲಬುರಗಿ ನಗರದ ಹುಮನಾಬಾದ್ ರಸ್ತೆಯಲ್ಲಿ ಜರುಗಿದೆ. 34 ವರ್ಷದ ಸೋಮಶೇಖರ್ ಮೃತ ದುರ್ದೈವಿ ಎನ್ನಲಾಗಿದೆ. ದಾಲ್‌ ಮೀಲ್‌ನಲ್ಲಿ ಕೆಲಸ ಮುಗಿಸಿ ಬೈಕ್‌ನಲ್ಲಿ ಹೊರಟಿದ್ದ ಸೋಮಶೇಖರ್, ಇತ್ತ ಬೀದರ್ ಕಡೆಯಿಂದ ಕಲಬುರಗಿ ಕಡೆಗೆ ಬರುತ್ತಿದ್ದ KSRTC ಬಸ್ ನಡುವೆ ಈ ದುರಂತ ಸಂಭವಿಸಿದೆ. ಅಪಘಾತದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಕಲಬುರಗಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Read More

ಹುಬ್ಬಳ್ಳಿ:ಜಗದೀಶ ಶೆಟ್ಟರ್ ಬಿಜೆಪಿ ಸೇರ್ಪಡೆಯಾಗಿರುವುದು ಖುಷಿಯಾಗಿದೆ ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಜಗದೀಶ ಶೆಟ್ಟರ್ ಪಕ್ಷವನ್ನ ತೊರೆದಿರುವುದು ನಮ್ಮ ಪಕ್ಷಕ್ಕೆ ಯಾವುದೇ ನಷ್ಟವಿಲ್ಲ. ಬಿಜೆಪಿಗರಿಗೆ ಸಂತಸವಾಗಿದೆ ಎಂದು ಹೇಳಿದ್ದಾರೆ. ಹೀಗಾಗಿ ನಮಗೂ ಸಂತಸವಾಗಿದೆ. ಶೆಟ್ಟರ್ ಅವರಿಗೆ ನಮ್ಮ ಪಕ್ಷದಲ್ಲಿ ಉತ್ತಮ ಸ್ಥಾನಮಾನ ನೀಡಿದ್ದೆವು. ಆದರೆ ಅವರು ಈ ರೀತಿ ಏಕಾಏಕಿ ಪಕ್ಷ ತೊರೆದಿದ್ದಾರೆ. ಶೆಟ್ಟರ್ ಅವರ ಇತ್ತೀಚಿನ ಬೆಳವಣಿಗೆ ಗಮನಿಸಿದರೆ ಅವರೊಬ್ಬ ಅವಕಾಶವಾದಿಗಳು ಅನ್ನಿಸುತ್ತೆ ಎಂದು ಹೇಳಿದ್ದಾರೆ. ನಮ್ಮ ಪಕ್ಷದಲ್ಲಿ ಎಲ್ಲ ಸಮುದಾಯದವರೂ ಇದ್ದಾರೆ. ಬಿಜೆಪಿಗೂ ನಮ್ಮ ಪಕ್ಷಕ್ಕೂ ಸಾಕಷ್ಟು ವ್ಯತ್ಯಾಸವಿದೆ. ಶೆಟ್ಟರ್ ಅವರ ಮೇಲೆ ನನಗೆ ಅಪಾರ ಗೌರವವಿದೆ. ಆದರೆ ಅವರು ಪಕ್ಷ ಬಿಟ್ಟು ಹೋದದ್ದು ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ನಷ್ಟವಿಲ್ಲ. ನಮ್ಮದು ಡಬಲ್ ಡೆಕ್ಕರ್ ಬಸ್ ಎಂದು ಶೆಟ್ಟರ್ ಹೋಗಿರುವುದು ಸಂತೋಷ ಎಂದಿದ್ದಾರೆ

Read More

ರಾಯಚೂರು:- ತರಗತಿ ನಡೆಯುತ್ತಿದ್ದ ಸಂದರ್ಭದಲ್ಲೇ ಸೀಲಿಂಗ್ ಗಾರೆ ಕಿತ್ತುಬಿದ್ದ ಘಟನೆ ದೇವದುರ್ಗದ ಸರ್ಕಾರಿ ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿದೆ. 7ನೇ ತರಗತಿಯ ವಿದ್ಯಾರ್ಥಿನಿ ಶ್ರೀದೇವಿ ಎಂಬುವವರ ಬಲಕಾಲಿನ ಬೆರಳು ಕಟ್ ಆಗಿದೆ. ಕೂಡಲೇ ವಿದ್ಯಾರ್ಥಿನಿಗೆ ರಾಯಚೂರಿನ ರಿಮ್ಸ್ ‌ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನಡೆಯುತ್ತಿದೆ. ರಾಜ್ಯದ ಸರ್ಕಾರಿ ಶಾಲೆಗಳ ದುಸ್ಥಿತಿ ಬಗ್ಗೆ ಟಿವಿ9 ವರದಿ ಮಾಡುತ್ತಾ ಬಂದಿದ್ದು, ಇದೀಗ ವಿದ್ಯಾರ್ಥಿನಿ ಕಾಲು ಬೆರಳೆ ಕಟ್​ ಆಗಿದೆ. ಹಾಳಾದ ಶಾಲಾ ಕಟ್ಟಡದಲ್ಲಿ ನಿತ್ಯ ಮಕ್ಕಳಿಗೆ ಬೋಧನೆ ಮಾಡಲಾಗುತ್ತಿದ್ದು, ಜೀವ ಭಯದಲ್ಲಿ ವಿದ್ಯಾರ್ಥಿಗಳು ಶಾಲೆಗೆ ಆಗಮಿಸಿ ಪಾಠ ಕೇಳುವಂತಾಗಿದೆ. ಈ ಕುರಿತು ದೇವದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಇನ್ನು ಘಟನೆ ಬಳಿಕ ದೇವದುರ್ಗ ತಾಲ್ಲೂಕು ಬಿಇಓ ಸುಖದೇವ್ ಹಾಗೂ ಇತರೆ ಅಧಿಕಾರಿಗಳು ಓಡೋಡಿ ಬಂದಿದ್ದಾರೆ. ಈ ಕುರಿತು ಮಾತನಾಡಿದ ಬಿಇಓ ‘ಕಳೆದ ವರ್ಷವೇ ಶಾಲೆ ಸ್ಥಳಾಂತರಿಸಲು ಆದೇಶಿಸಿದ್ದೆ. ಅದರಂತೆ ಕಟ್ಟಡ ಶಿಥಿಲಗೊಂಡ ಬಳಿಕ ಉರ್ದು ಶಾಲೆ ಬಂದ್ ಆಗಿ,…

Read More

ಚನ್ನರಾಯಪಟ್ಟಣ: ಅಯೋಧ್ಯೆಯಲ್ಲಿ ಶ್ರೀರಾಮ ವಿಗ್ರಹ ಪ್ರತಿಷ್ಠಾಪನಾ ಕಾರ್ಯಕ್ರಮ ಹಿನ್ನೆಲೆ ಪಟ್ಟಣದ ಗಾಂಧಿ ಸರ್ಕಲ್ ನಲ್ಲಿರುವ ರಾಯರ ರಂಗಮಂದಿರದಲ್ಲಿ ರಾತ್ರಿ ಸಹಸ್ರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಶ್ರೀರಾಮ ಉತ್ಸವ ದೀಪೋತ್ಸವದಲ್ಲಿ 1111 ದೀಪಗಳನ್ನು ವಿತರಿಸಲಾಯಿತು, ಬೆಳಕಿನ ಜ್ಯೋತಿಯನ್ನು ಒಬ್ಬರಿಂದ ಒಬ್ಬರಿಗೆ ಹಚ್ಚುವ ಮೂಲಕ ಭಾರತೀಯ ಸಂಸ್ಕೃತಿ, ಸಂಸ್ಕಾರ, ಬಾಂಧವ್ಯ ಮೆರೆದ ನಗರದ ಮಹಿಳೆಯರು ಉತ್ತರ ದಿಕ್ಕಿಗೆ ನಿಂತು ದೀಪ ಬೆಳಗುವ ಮೂಲಕ ಶ್ರೀ ರಾಮ್, ಜಯ್ ರಾಮ್ ಜಯ್ ಜಯ್ ರಾಮ್ ಎಂದು ಘೋಷಣೆಗಳನ್ನು ಕೂಗುವ ಮೂಲಕ ಗಾಂಧಿ ವೃತ್ತ ಮಾರ್ಗವಾಗಿ ದೀಪೋತ್ಸವ ಮೆರವಣಿಗೆ ಮಾಡಿ ನಂತರ ಶ್ರೀ ರಾಮ್ ದೇವರಿಗೆ ಮಹಾಮಂಗಳಾರತಿ ನಡೆಸಿ ಭಾಗವಹಿಸಿದ ಸರ್ವ ಭಕ್ತಾದಿಗಳಿಗೂ ಕಡಲೆಕಾಳು ಹಾಗೂ ಪುಳಿಯೋಗರೆ ಪ್ರಸಾದವನ್ನು ವಿತರಣೆ ಮಾಡಲಾಯಿತು, ಶ್ರೀ ರಾಮ ದೇವರ ದೀಪೋತ್ಸವ ಕಾರ್ಯಕ್ರಮದಲ್ಲಿ ಸಾವಿರಾರು ಮಹಿಳೆಯರು ಭಾಗವಹಿಸಿ ಸಂಭ್ರಮಕ್ಕೆ ಸಾಕ್ಷಿಯಾದರು. ಈ ಕಾರ್ಯಕ್ರಮದಲ್ಲಿ ಭರತನಾಟ್ಯ ಕಲಾವಿದೆ ಹಾಗೂ ರಾಯರಂಗಮಂದಿರದ ನಿರ್ದೇಶಕಿ ಸ್ವಾತಿ ಪಿ ಭಾರದ್ವಾಜ್, ರಾಯರ ರಂಗಮಂದಿರದ ಅಧ್ಯಕ್ಷರಾದ ಶ್ರೀಮತಿ ಅನಿತಾ,…

Read More