ಚನ್ನರಾಯಪಟ್ಟಣ: ಹಾಸನದ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ಅವರನ್ನು ದೇವೇಗೌಡರು ಘೋಷಿಸಿದ್ದಾರೆ. ಅವರು ಸೂಚಿಸುವ ವ್ಯಕ್ತಿಯನ್ನು ಲೋಕಸಭೆಗೆ ಕಳುಹಿಸಬೇಕಿದೆ. ಇದರಿಂದ ಜಿಲ್ಲೆಯ ಸರ್ವಾಂಗೀಣ ಪ್ರಗತಿಯಾಗುತ್ತದೆ ಎಂದು ಶಾಸಕ ಸಿ. ಎನ್. ಬಾಲಕೃಷ್ಣ ಹೇಳಿದರು. ಪಟ್ಟಣದಲ್ಲಿ ಕರಿಯಪ್ಪ ಕಲ್ಯಾಣ ಮಂಟಪದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು, ಕಳೆದ ಚುನಾವಣೆಯಲ್ಲಿ ಜೆಡಿಎಸ್ ಪರವಾಗಿ ಕ್ಷೇತ್ರದ ಜನರು ನಿಂತಿದ್ದಾರೆ, ಮುಂದೆ ಬರುವ ಚುನಾವಣೆಯಲ್ಲಿಯೂ ಮತದಾರರು ಜೆಡಿಎಸ್ ಪರ ನಿಲ್ಲಬೇಕು ಎಂದು ಮನವಿ ಮಾಡಿದರು. ಇದೇ ಸಂದರ್ಭದಲ್ಲಿ ಮಾಜಿ ಪ್ರಧಾನ ಮಂತ್ರಿಯಾದ ಎಚ್ ಡಿ ದೇವೇಗೌಡ,ಮಾಜಿ ಮಂತ್ರಿಗಳಾದ ಎಚ್ ಡಿ ರೇವಣ್ಣ, ಲೋಕಸಭಾ ಸದಸ್ಯರಾದ ಪ್ರಜ್ವಲ್ ರೇವಣ್ಣ, ಶಾಸಕ ಸಿ ಎನ್ ಬಾಲಕೃಷ್ಣ, ಮಾಜಿ ಶಾಸಕ ಲಿಂಗೇಶ್, ಜೆಡಿಎಸ್ ಮುಖಂಡರಾದ ಪರಮ ದೇವರಾಜೇಗೌಡ, ಸಿ ಕೆ ಕುಸುಮ ರಾಣಿ, ಮಮತಾ ರಮೇಶ್, ಅಂಬಿಕಾ ರಾಮಣ್ಣ, ನವಿಲು ಹೊಸೂರು ಚಂದ್ರಪ್ಪ, ಎಸ್ ಪಿ ಜಗದೀಶ್ ಸೇರಿದಂತೆ ಇತರರು ಹಾಜರಿದ್ದರು.
Author: AIN Author
ಕಂಪ್ಲಿ : ಜ 25 ಡಾ| ಬಿ.ಆರ್. ಅಂಬೇಡ್ಕರ್ ಮೂರ್ತಿಗೆ ಅಪಮಾನಿಸಿ ಬಂಧನಕ್ಕೊಳಗಾದ ದುಷ್ಕರ್ಮಿಗಳಿಗೆ ಕಾನೂನು ರೀತಿ ಕಠಿಣ ಶಿಕ್ಷೆ ವಿಧಿಸಬೇಕೆಂದು ಭೀಮ್ ಆರ್ಮಿ ಭಾರತ್ ಏಕತ್ ಮಿಷನ್ ವಿದ್ಯಾರ್ಥಿ ಘಟಕ ಮುಂದಾಳತ್ವದಲ್ಲಿ ತಾಲೂಕಿನ ವಿವಿಧ ಪ್ರಗತಿಪರ ಸಂಘಟಕರಿಂದ ಕರ್ನಾಟಕ ರಾಜ್ಯ ಗೃಹ ಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಶಿವರಾಜ್ ಮೂಲಕ ಗುರುವಾರ ಸಲ್ಲಿಸಲಾಯಿತು. ಈ ಕುರಿತು ಭೀಮ್ ಆರ್ಮಿ ವಿದ್ಯಾರ್ಥಿ ಘಟಕದ ಜಿಲ್ಲಾಧ್ಯಕ್ಷ ರವಿ ಮಣ್ಣೂರ್ ಮಾತನಾಡಿ ದಿನಾಂಕ 22.01.2024 ರಂದು ರಾತ್ರಿ ಸಮಯದಲ್ಲಿ ಕಲಬುರಗಿ ನಗರ ಕೋಟ್ಟೂರು ಡಿ. ಬಡಾವಣೆಯಲ್ಲಿ ಸ್ಥಾಪಿತವಾಗಿರುವ ಸಂವಿಧಾನ ಶಿಲ್ಪಿ ಡಾ| ಬಿ.ಆರ್.ಅಂಬೇಡ್ಕರ್ ರವರ ಮೂರ್ತಿಗೆ ಕಿಡಿಗೇಡಿಗಳು ಗುಂಪು ಕೂಡಿಕೊಂಡು ಅಂಬೇಡ್ಕರ್ ಮೂರ್ತಿಗೆ ಅಪಮಾನಗೊಳಿಸಿ ಬಂಧನಕ್ಕೊಳಗಾಗಿದ್ದಾರೆ ಇಂತಹ ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದರು. ಪ್ರಗತಿಪರ ಸಂಘಟಕರಾದ ಕೆ ಲಕ್ಷ್ಮಣ, ವಸಂತ್ ರಾಜ್ ಕಹಳೆ ಮಾತನಾಡಿ ಎಲ್ಲಾ ಜಾತಿ, ಧರ್ಮವಂತಗಳಿಗೆ ತಾರತಮ್ಯ ಮಾಡದೇ ಭಾರತ ದೇಶದಲ್ಲಿ ಎಲ್ಲಾರು ಸಮಾನತ ಸ್ವತಂತ್ರ ಸ್ವಾಭೀಮಾನದಿಂದ ಬದುಕಲು ಸಂವಿಧಾನ…
ಈ ಶುಕ್ರವಾರದಿಂದ ಪ್ರಾರಂಭವಾಗುವ ವಿಸ್ತೃತ ಮೂರು ದಿನಗಳ ವಾರಾಂತ್ಯಕ್ಕೆ ಬ್ಯಾಂಕುಗಳು ಸಜ್ಜಾಗುತ್ತಿವೆ. ಈ ನಡುವೆ ನೀವು ರಜೆಯ ಬಗ್ಗೆ ತಿಳಿದಿರಬೇಕಾಗುತ್ತದೆ. ಈ ಒಟ್ಟು 16 ರಜಾದಿನಗಳಲ್ಲಿ ಎರಡನೇ ಮತ್ತು ನಾಲ್ಕನೇ ಶನಿವಾರಗಳು, ಭಾನುವಾರಗಳು ಮತ್ತು ಹೆಚ್ಚುವರಿ ಪ್ರಾದೇಶಿಕ ರಜಾದಿನಗಳು ಸೇರಿವೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ರಾಷ್ಟ್ರೀಯ ಅಥವಾ ರಾಜ್ಯ ರಜಾದಿನಗಳು, ಸಾಂಸ್ಕೃತಿಕ ಅಥವಾ ಧಾರ್ಮಿಕ ಆಚರಣೆಗಳು, ಕಾರ್ಯಾಚರಣೆಯ ಅವಶ್ಯಕತೆಗಳು, ಸರ್ಕಾರಿ ಪ್ರಕಟಣೆಗಳು ಮತ್ತು ಇತರ ಬ್ಯಾಂಕ್ಗಳೊಂದಿಗಿನ ಸಮನ್ವಯದಂತಹ ಅಂಶಗಳನ್ನು ಗಣನೆಗೆ ತೆಗೆದುಕೊಂಡು ಬ್ಯಾಂಕ್ ರಜಾದಿನಗಳ ಪಟ್ಟಿಯನ್ನು ಬಿಡುಗಡೆ ಮಾಡುತ್ತದೆ. ಕೆಲವು ರಾಜ್ಯಗಳಲ್ಲಿ ಮೂರು ದಿನಗಳ ಕಾಲ ರಜೆ ಇದ್ದರೆ, ಇನ್ನು ಕೆಲವು ರಾಜ್ಯಗಳಲ್ಲಿ ಸತತವಾಗಿ ನಾಲ್ಕು ದಿನಗಳ ಕಾಲ ರಜೆ ಇರಲಿದೆ. ಉತ್ತರ ಪ್ರದೇಶ (ಯುಪಿ) ರಾಜ್ಯದಲ್ಲಿ ಹಜರತ್ ಅಲಿ ಅವರ ಜನ್ಮದಿನದ ಅಂಗವಾಗಿ ಜನವರಿ 25 ರಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್ಗಳು ಮುಚ್ಚಲಾಗುತ್ತದೆ. ಈ ಬಗ್ಗೆ ಇಲ್ಲಿದೆ ವಿವರ ಮುಂದೆ ಓದಿ…. ಈ ವಾರದ ಬ್ಯಾಂಕ್…
ರುಚಿಕರವಾದ ಮಶ್ರೂಮ್ ಕಬಾಬ್ ಮಾಡುವ ವಿಧಾನ ಇಲ್ಲಿದೆ ನೋಡಿ! ಬೇಕಾಗುವ ಪದಾರ್ಥಗಳು… ಮಶ್ರೂಮ್ – 200 ಗ್ರಾಂ ಕಬಾಬ್ ಪೌಡರ್ -ಒಂದು ಪ್ಯಾಕೆಟ್ ಶುಂಠಿ- ಬೆಳ್ಳುಳ್ಳಿ ಪೇಸ್ಟ್- 1 ಚಮಚ ಖಾರದಪುಡಿ -ಅರ್ಧ ಚಮಚ ಚಿಕನ್ ಮಸಾಲ- ಅರ್ಧ ಚಮಚ ಮೊಟ್ಟೆ -ಒಂದು ಉಪ್ಪು- ರುಚಿಗೆ ತಕ್ಕಷ್ಟು ಎಣ್ಣೆ – ಸ್ವಲ್ಪ ಮಾಡುವ ವಿಧಾನ… ಮಶ್ರೂಮ್ ಗಳನ್ನು ಚೆನ್ನಾಗಿ ತೊಳೆದುಕೊಳ್ಳಿ. ನಂತರ ಇದಕ್ಕೆ ಕಬಾಬ್ ಪೌಡರ್, ಶುಂಠಿ, ಬೆಳ್ಳುಳ್ಳಿ ಪೇಸ್ಟ್, ಖಾರದಪುಡಿ, ಚಿಕನ್ ಮಸಾಲೆ ಪುಡಿ, ಮೊಟ್ಟೆ, ಎಣ್ಣೆ, ರುಚಿಗೆ ತಕ್ಕಷ್ಟು ಉಪ್ಪು ಹಾಗೂ ಸ್ವಲ್ಪ ನೀರು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ. ಮಸಾಲೆ ಹಿಡಿಯುವವರೆಗೆ ಕೈಯಾಡಿಸಿ. 10ರಿಂದ 15 ನಿಮಿಷಗಳ ಕಾಲ ನೆನೆಯಲು ಬಿಡಿ. ನಂತರ ಪಾತ್ರೆಯಲ್ಲಿ ಎಣ್ಣೆ ಹಾಕಿ ಮಧ್ಯಮ ಉರಿಯಲ್ಲಿ ಬಿಸಿ ಮಾಡಿ. ಅದಕ್ಕೆ ನೆನೆಸಿಟ್ಟಿದ್ದ ಮಶ್ರೂಮ್ ಹಾಕಿ. ಅದು ಕೆಂಪು ಬಣ್ಣಕ್ಕೆ ತಿರುಗುವವರೆಗೂ ಬೇಯಿಸಿ. ಇದೀಗ ಬಿಸಿ ಬಿಸಿಯಾದ ಮಶ್ರೂಮ್ ಕಬಾಬ್ ಸವಿಯಲು ಸಿದ್ಧ.
ಬೆಂಗಳೂರು: ಲೋಕಸಭೆ ಚುನಾವಣೆ ಮುಂಚೆ ರಾಜ್ಯ ರಾಜಕಾರಣದಲ್ಲಿ ದೊಡ್ಡ ಪ್ರಮಾಣದ ರಾಜಕೀಯ ಬೆಳವಣಿಗೆ ಆಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದಿದ್ದಾರೆ. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮರಳಿ ಬಿಜೆಪಿ ಸೇರ್ಪಡೆಯಾಗಿರುವ ಹಿನ್ನೆಲೆಯಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಅವರು ಸರಿಯಾದ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಂಡಿದ್ದಾರೆ. ಅವರು ಕಾಂಗ್ರೆಸ್ ಮೇಲಿನ ಪ್ರೀತಿಯಿಂದ ಹೋಗಿರಲಿಲ್ಲ. ಬಿಜೆಪಿಯಲ್ಲಿ ಆಗಿರುವ ಬೇಸರದಿಂದ ಕಾಂಗ್ರೆಸ್ ಗೆ ಹೋಗಿದ್ದರು. ಅವರನ್ನು ನಾನು ಜನಸಂಘದಿಂದ ಬಹಳ ಹತ್ತಿರದಿಂದ ನೋಡಿದ್ದೇನೆ. ಅವರಿಗೆ ಕಾಂಗ್ರೆಸ್ ಡಿಎನ್ ಎ ಒಗ್ಗುವುದಿಲ್ಲ. ಶೆಟ್ಟರ್ ಅವರ ದೇಹ ಮಾತ್ರ ಕಾಂಗ್ರೆಸ್ ಗೆ ಹೋಗಿತ್ತು. ಅವರ ಮನಸ್ಸು ಬಿಜೆಪಿಯಲ್ಲಿಯೇ ಇತ್ತು. ಅವರಿಗೆ ಕಾಂಗ್ರೆಸ್ ಸೇರಿದ ಮೇಲೆ ಅಲ್ಲಿನ ಮನಸ್ಥಿತಿ ಅರ್ಥವಾಗಿದೆ. ಇದು ಬಿಜೆಪಿ ಮತ್ತು ಜಗದೀಶ್ ಶೆಟ್ಟರ್ ಅವರಿಗೂ ಅನಕೂಲವಾಗಲಿದೆ ಎಂದು ಹೇಳಿದರು. https://ainlivenews.com/pakistans-stomach-starts-churning-what-did-pakistan-say-about-the-opening-of-the-ram-mandir/ ಇದು ಕೇವಲ ಆರಂಭ. ಮುಂದಿನ ದಿನಗಳಲ್ಲಿ ಕೇವಲ ಬಿಜೆಪಿ ನಾಯಕರಷ್ಟೇ ಘರ್ ವಾಪಸಿ ಆಗುವುದಿಲ್ಲ. ಕಾಂಗ್ರೆಸ್ ನ…
ಹುಬ್ಬಳ್ಳಿ: ರಾಜ್ಯಸಭಾ ಚುನಾವಣೆಯಲ್ಲಿ ಟಿಕೆಟ್ ನೀಡದ ಕಾರಣ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿ ಎಮ್ಎಲ್ಸಿ ಕೂಡ ಆಗುತ್ತಾರೆ. ಆದ್ರೆ ಇಂದು ಏಕಾಏಕಿ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಪಕ್ಷ ಬಿಟ್ಟು ಮರಳಿ ತಮ್ಮ ಬಿಜೆಪಿ ಪಕ್ಷಕ್ಕೆ ಸೇರಿದ್ದರಿಂದ ಕಾಂಗ್ರೆಸ್ ಕಾರ್ಯಕರ್ತರು ಶೆಟ್ಟರ್ ಅವರ ಭಾವಚಿತ್ರಕ್ಕೆ ಪಟಾಕಿ ಸಿಡಿಸಿ, https://ainlivenews.com/pakistans-stomach-starts-churning-what-did-pakistan-say-about-the-opening-of-the-ram-mandir/ ಹೋಯ್ತು ಹೋಯ್ತು ಪೀಡಾ ಹೋಯ್ತು ಎಂದು ಘೋಷಣೆ ಕೂಗುತ್ತ, ಸಿಹಿ ತಿನ್ನಿಸುತ್ತ ವಿಜಯೋತ್ಸವ ಆಚರಸಿದರು. ನಗರದ ಚನ್ನಮ್ಮ ಸರ್ಕಲ್ ನಲ್ಲಿ ಜಗದೀಶ್ ಶೆಟ್ಟರ್ ಅವರ ಭಾವಚಿತ್ರಕ್ಕೆ ಚಪ್ಪಲಿ ಏಟು ಹಾಕಿ ತಮ್ಮ ಆಕ್ರೋಶ ಹೊರ ಹಾಕಿದ್ದು ಅಲ್ಲದೆ. ಬಿಜೆಪಿ ಬಿಟ್ಟು ಕಾಂಗ್ರೆಸ್ ಪಕ್ಷವನ್ನು ಹಾಳು ಮಾಡಲು ಶೆಟ್ಟರ್ ಬಂದಿದ್ದರು. ಪೀಡಾ ಹೋಯ್ತು ಎಂದು ತಮ್ಮ ಆಕ್ರೋಶ ಹೊರ ಹಾಕಿದರು.
ಬೆಂಗಳೂರು: ಬಿಜೆಪಿಯಿಂದ (BJP) ಅಸಮಾಧಾನಗೊಂಡು ಕಾಂಗ್ರೆಸ್ ಪಕ್ಷ ಸೇರಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ (Jagadish Shettar) ಇಂದು ಬಿಜೆಪಿಗೆ ಮರುಸೇರ್ಪಡೆಯಾಗಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಅಧಿಕೃತವಾಗಿ ಬಿಜೆಪಿ ಸೇರಿ ಮಾತನಾಡಿದ ಅವರು, “ವಿಧಾನಸಭಾ ಚುನಾವಣೆ ವೇಳೆ ಕೆಲವು ಕಾರಣಗಳಿಗಾಗಿ ಬಿಜೆಪಿ ತೊರೆದಿದ್ದೆ. ಮತ್ತೆ ನಮ್ಮ ನಾಯಕರು ಮರಳಿ ಪಕ್ಷಕ್ಕೆ ಬಾ ಎಂದು ವಿನಂತಿಸಿಕೊಂಡರು. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮರಳಿ ಪಕ್ಷಕ್ಕೆ ಬಂದಿರುವೆ. ಮೋದಿಯವರು ಮತ್ತೆ ಪ್ರಧಾನಿಯಾಗಬೇಕು. ಹೀಗಾಗಿ ಪಕ್ಷಕ್ಕೆ ಮತ್ತೆ ದುಡಿಯುತ್ತೇನೆ” ಎಂದರು. ಬಿಜೆಪಿ ಪಕ್ಷಕ್ಕೆ ಮರು ಸೇರ್ಪಡೆ ಆಗುತ್ತಿರೋದು ನನಗೆ ಸಂತೋಷದ ಸಂಗತಿ. ಕಾಂಗ್ರೆಸ್ ವಿಧಾನಪರಿಷತ್ ಸದಸ್ಯತ್ವಕ್ಕೆ ನಾನು ಈಗಾಗಲೇ ರಾಜೀನಾಮೆ ಕೊಟ್ಟಿದ್ದೇನೆ. ಇ-ಮೇಲ್ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೂ ಸಹ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ. ಈ ಮೂಲಕ ನಾನು ಬಿಜೆಪಿ ಪ್ರಾಥಮಿಕ ಸದಸ್ಯತ್ವ ಸ್ವೀಕರಿಸಿದ್ದೇನೆ ಎಂದು ಜಗದೀಶ್ ಶೆಟ್ಟರ್ ಹೇಳಿದರು. ಇವತ್ತು ನಮ್ಮ ದೇಶದ ಮುಂದಿರೋದು ಎಲ್ಲರನ್ನು ಒಗ್ಗೂಡಿಸುವುದು. ರಕ್ಷಣೆ ಹಾಗೂ…
ಮಂಡ್ಯ: ಹೊಟ್ಟೆಕಿಚ್ಚಿಗೆ ಬೆಳೆದು ನಿಂತ ಅಡಿಕೆ ಮತ್ತು ತೆಂಗು ಸಸಿಗಳನ್ನು ಕಡಿದು ಹಾಕಿರುವ ಘಟನೆ ನಾಗಮಂಗಲ ತಾಲ್ಲೂಕಿನ ದೊಡ್ಡಚಿಕ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಶ್ರೀನಿವಾಸ್ ಎಂಬ ರೈತನ ಜಮೀನಿನಲ್ಲಿ ಈ ಕೃತ್ಯ ನಡೆದಿದ್ದು, 2 ತೆಂಗಿನ ಗಿಡ 39 ಅಡಿಕೆ ಸಸಿಗಳನ್ನ ದುಷ್ಕರ್ಮಿಗಳು ನಾಶ ಮಾಡಿದ್ದಾರೆ. ಇನ್ನೀ ಈ ಘಟನೆ ಸಂಬಂಧ ಶ್ರೀನಿವಾಸ್ ಸಹೋದರ ಕೃಷ್ಣೇಗೌಡರಿಂದ ಪೊಲೀಸ್ ಠಾಣೆಗೆ ದೂರು ನಿಡಿದ್ದು, ನಾಗಮಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.
ಬೆಂಗಳೂರು: ಕಾಂಗ್ರೆಸ್ ನನಗೆ ಮರುಜೀವ ಕೊಟ್ಟಿದೆ ನಾನು ಕಾಂಗ್ರೆಸ್ ಬಿಟ್ಟು ಹೋಗುವುದಿಲ್ಲ ಎಂದು ನೆನ್ನೆ ಬೆಳಗ್ಗೆ ಸಹ ನನ್ನೊಂದಿಗೆ ಅವರು ಹೇಳಿದ್ದರು. ಹಿರಿಯ ರಾಜಕೀಯ ನಾಯಕರು ಈಗ ಈ ರೀತಿ ಮಾಡಿರುವುದು ವಿಶ್ವಾಸಕ್ಕೆ ಧಕ್ಕೆ ತಂದಿದೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗು ಡಿಸಿಎಂ ಡಿ.ಕೆ ಶಿವಕುಮಾರ್ ಅಭಿಪ್ರಾಯಪಟ್ಟರು. ನಗರದಲ್ಲಿ ಮಾತನಾಡಿದ ಅವರು, ವಿಧಾನಸಭಾ ಚುನಾವಣೆಯಲ್ಲಿ ಜನ ಅವರನ್ನು ಮುವತ್ತು ಸಾವಿರ ಕ್ಕಿಂತ ಹೆಚ್ಚು ಮತಗಳಿಂದ ಅವರನ್ನು ತಿರಸ್ಕರಿಸಿದ್ದರು ಕಾಂಗ್ರೆಸ್ ಪಕ್ಷದವರು ಅತ್ಯಂತ ಗೌರವದಿಂದ ನಡೆಸಿಕೊಂಡಿದ್ದೇವೆ. ಇದೀಗ ಅವರು ಯಾವ ಕಾರಣದಿಂದ ಬಿಜೆಪಿ ಸೇರ್ಪಡೆಯಾಗಿದ್ದಾರೆ? ಯಾವ ಒತ್ತಡಕ್ಕೆ ಒಳಗಾಗಿ ಈ ತೀರ್ಮಾನ ಕೈಗೊಂಡಿದ್ದಾರೆ? ಎನ್ನುವುದರ ಬಗ್ಗೆ ಅವರು ಮೊದಲು ತಿಳಿಸಲು ಬಳಿಕ ನಾನು ಮಾತನಾಡುತ್ತೇನೆ ಎಂದರು. ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿ ನನಗೆ ಇನ್ನೂ ಅವರ ರಾಜಿನಾಮೆ ಪತ್ರ ತಲುಪಿಲ್ಲ, ಕಾಂಗ್ರೆಸ್ ಪಕ್ಷದವರು ಅವರನ್ನು ಗೌರವಯುತವಾಗಿ ನಡೆಸಿಕೊಂಡಿದೆ. ಸದ್ಯ ಅವರು ಬಿಜೆಪಿಗೆ ಹೋಗಿದ್ದರೂ ಬೇರೆ ಯಾರು ನಮ್ಮ ಪಕ್ಷವನ್ನು ಬಿಟ್ಟುಹೋಗುವುದಿಲ್ಲ ಎಂದು ಅವರು ಹೇಳಿದರು.
ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಬಿಜೆಪಿಗೆ ವಾಪಸಾಗುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ. ಮಧುರಾ ಕಾಲೋನಿಯಲ್ಲಿರುವ ಜಗದೀಶ ಶೆಟ್ಟರ ನಿವಾಸದಲ್ಲಿ ಜಮಾಯಿಸಿದ ನೂರಾರು ಬಿಜೆಪಿ ಕಾರ್ಯಕರ್ತರು ಮತ್ತು ಪಾಲಿಕೆ ಸದಸ್ಯರು ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು. ಶೆಟ್ಟರ ನಿವಾಸದಲ್ಲೇ ಕುಳಿತು ಘರ್ ಪಾಪ್ಸಿಯ ದೃಷ್ಯವನ್ನು ಟಿವಿಯಲ್ಲಿ ನೋಡುತ್ತ, ಪ್ರಧಾನಿ ನರೇಂದ್ರ ಮೋದಿ, ಪ್ರಹ್ಲಾದ ಜೋಶಿ ಹಾಗೂ ಜಗದೀಶ ಶೆಟ್ಟರಗೆ ಜೈಕಾರ ಹಾಕುತ್ತ ಸಂಭ್ರಮಿಸಿದರು. ಅಲ್ಲದೆ, ಶೆಟ್ಟರ್ ಭಾವಚಿತ್ರ ಹಾಗೂ ಬಿಜೆಪಿ ಧ್ವಜ ಹಿಡಿದು ಘೋಷಣೆ ಕೂಗಿ ಕುಣಿದು ಕುಪ್ಪಳಿಸಿದರು. ಬಳಿ ಮಾತನಾಡಿದ ಹುಡಾ ಮಾಜಿ ಅಧ್ಯಕ್ಷ ನಾಗೇಶ ಕಲಬುರ್ಗಿ, ಜಗದೀಶ ಶೆಟ್ಟರ ಕಾಂಗ್ರೆಸ್ ಪಕ್ಷ ಸೇರಿದಾಗ ಬಹುತೇಕ ಅವರ ಜೊತೆಗಿದ್ದವರು ಕಾಂಗ್ರೆಸ್ ಸೇರಿದ್ದರು. ಆದರೆ, ಜಗದೀಶ ಶೆಟ್ಟರ ಪ್ರಭಾವವನ್ನು ಅರಿತ ಬಿಜೆಪಿ ಹಿರಿಯ ನಾಯಕರು ಜಗದೀಶ ಶೆಟ್ಟರ ಅವರನ್ನು ಮತ್ತೆ ಬಿಜೆಪಿಗೆ ಕರೆಸಿಕೊಂಡಿದ್ದಾರೆ. ಶೆಟ್ಟರ ಜೊತೆಗೆ ಯಾವೆಲ್ಲ ಕಾರ್ಯಕರ್ತರು ಕಾಂಗ್ರೆಸ್ ಸೇರಿದ್ದರು ಅವರೆಲ್ಲ ಬಿಜೆಪಿಗೆ ವಾಪಸಾಗಲಿದ್ದಾರೆ. ದೇಶದ ಪ್ರಧಾನ…