ಬೆಂಗಳೂರು: ಮತ್ತೊಂದು ಪ್ರತಿಷ್ಠಿತ ಉದ್ದಿಮೆ ರಾಜ್ಯದ ಕೈಜಾರುವ ಸಂಭವ ಇದೆ. ಅಮೆರಿಕಾದ ಟೆಸ್ಲಾ ಕಂಪನಿ (Tesla Company) ಆರಂಭದಲ್ಲಿ ಕರ್ನಾಟಕದಲ್ಲಿ ತಮ್ಮ ಉತ್ಪಾದನೆ ಆರಂಭಿಸಲು ಉತ್ಸುಕತೆ ತೋರಿತ್ತು. ಕರ್ನಾಟಕದಲ್ಲಿಯೇ ಮೊದಲ ಉತ್ಪಾದನಾ ಘಟಕ ಹೊಂದಲು ಟೆಸ್ಲಾ ಪ್ಲಾನ್ ಮಾಡಿದೆ ಎಂದು 2021ರ ಫೆಬ್ರವರಿ 14ರಂದು ವರದಿಯಾಗಿತ್ತು. ಆದ್ರೆ ದಿಢೀರ್ ಬೆಳವಣಿಗೆಯಲ್ಲಿ ಟೆಸ್ಲಾ ಕಂಪನಿ ಮಹಾರಾಷ್ಟ್ರ, ತಮಿಳುನಾಡು ಜೊತೆಗೆ ಗುಜರಾತ್ನಲ್ಲಿ ಎಲೆಕ್ಟ್ರಿಕ್ ವಾಹನಗಳ ತಯಾರಿಕಾ ಘಟಕ ಸ್ಥಾಪಿಸಲು ಯೋಜನೆ ಹಾಕಿಕೊಂಡಿದೆ ಎಂದು ಬ್ಲೂಮ್ಬರ್ಗ್ ವರದಿ ಮಾಡಿದೆ. ಅಂದ ಹಾಗೇ ಟೆಸ್ಲಾ ಸಂಸ್ಥೆಯ ಯೋಜನೆಗಳು ಇನ್ನೂ ಅಂತಿಮಗೊಂಡಿಲ್ಲ. ಭವಿಷ್ಯದಲ್ಲಿ ಈ ಪ್ಲಾನ್ ಬದಲಾಗಬಹುದು ಎಂದು ಹೇಳಲಾಗಿದೆ. ಮುಂದಿನ ಜನವರಿಯಲ್ಲಿ ಅಹಮದಾಬಾದ್ನಲ್ಲಿ ನಡೆಯುವ ವೈಬ್ರೆಂಟ್ ಗುಜರಾತ್ ಜಾಗತಿಕ ಶೃಂಗಸಭೆಯಲ್ಲಿ ಈ ಬಗ್ಗೆ ಅಂತಿಮ ಘೋಷಣೆ ಹೊರಬೀಳಬಹುದು ಎನ್ನಲಾಗಿದೆ. ಟೆಸ್ಲಾ ಕಂಪನಿ ಮತ್ತು ಮೋದಿ (Narendra Modi) ಸರ್ಕಾರದ ನಡುವೆ ಒಪ್ಪಂದ ಸಂಬಂಧ ಚರ್ಚೆಗಳು ನಡೀತಿವೆ
Author: AIN Author
ಬೆಂಗಳೂರು: ಪಾಕಿಸ್ತಾನ ಕ್ರಿಕೆಟ್ ತಂಡ 2024ರಲ್ಲಿ ಅಮೆರಿಕ ಮತ್ತು ವೆಸ್ಟ್ ಇಂಡೀಸ್ನ ಜಂಟಿ ಆತಿಥ್ಯದಲ್ಲಿ ನಡೆಯಲಿರುವ ಐಸಿಸಿ ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಟ್ರೋಫಿ ಗೆಲ್ಲಲಿದೆ ಎಂದು ಇಂಗ್ಲೆಂಡ್ನ ಮಾಜಿ ನಾಯಕ ಮೈಕಲ್ ವಾನ್ ಭವಿಷ್ಯ ನುಡಿದಿದ್ದಾರೆ. ಇತ್ತೀಚಿನ ದಿನಗಳಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡದ ಬಗ್ಗೆ ಬಹಳಾ ಆಸಕ್ತಿ ವಹಿಸುತ್ತಿರುವ ಮೈಕಲ್ ವಾನ್, ತಂಡದ ಬಗ್ಗೆ ಹಲವು ಬಾರಿ ಭವಿಷ್ಯ ನುಡಿದ್ದಾರೆ. ಪಾಕ್ ತಂಡ ಇದೀಗ ಟೆಸ್ಟ್ ಸರಣಿ ಸಲುವಾಗಿ ಆಸ್ಟ್ರೇಲಿಯಾ ಪ್ರವಾಸಕ್ಕೆ ತಯಾರಿ ನಡೆಸುತ್ತಿದೆ. 2023ರ ವಿಶ್ವಕಪ್ ಬಳಿಕ ಎಲ್ಲಾ ಮಾದರಿಯ ಕ್ರಿಕೆಟ್ನ ಕ್ಯಾಪ್ಟನ್ಸಿ ಬಿಟ್ಟು ಕೇವಲ ಬ್ಯಾಟಿಂಗ್ ಕಡೆಗಷ್ಟೇ ಗಮನ ನೀಡಿರುವ ಬಾಬರ್ ಆಝಮ್, ಗುರುವಾರ ಟೆಸ್ಟ್ ಕ್ರಿಕೆಟ್ ಸಲುವಾಗಿ ಅಭ್ಯಾಸ ನಡೆಸುತ್ತಿರುವ ಫೋಟೊ ಹಂಚಿಕೊಂಡಿದ್ದಾರೆ. ಈ ಪೋಟೊಗೂ ಕಾಮೆಂಟ್ ಮಾಡಿರುವ ಮೈಕಲ್ ವಾನ್, ಆಸೀಸ್ ನೆಲದಲ್ಲಿ ಬಾಬರ್ ರನ್ ಹೊಳೆ ಹರಿಸುತ್ತಾರೆಂದು ಅಭಿಪ್ರಾಯ ಪಟ್ಟಿದ್ದಾರೆ. ಕ್ಲಬ್ ಪ್ರೈಯರ್ ಫೈರ್ ಯೂಟ್ಯೂಬ್ ಚಾನೆಲ್ನಲ್ಲಿ ಆಸ್ಟ್ರೇಲಿಯಾ ದಿಗ್ಗಜ ಆಡಮ್ ಗಿಲ್ಕ್ರಿಸ್ಟ್…
ಸಮಂತಾ (Samantha) ಸದ್ಯಕ್ಕೆ ಯಾವುದೇ ಸಿನಿಮಾದಲ್ಲಿ ನಟಿಸುತ್ತಿಲ್ಲ. ಊರೂರು ಸುತ್ತುತ್ತಾ ಇದ್ದಾರೆ. ಆರೋಗ್ಯದತ್ತ ಗಮನ ಕೊಡುತ್ತಿದ್ದಾರೆ. ಈ ಸಮಯದಲ್ಲಿಯೇ ಸಮಂತಾಗೆ ಮತ್ತೆ ಮದುವೆ ಆಗುವ ಒತ್ತಾಯ ಹೆಚ್ಚಾಗಿದೆ. ಆದರೆ ಸ್ಯಾಮ್ ಲಗ್ನ ಬೇಡ, ಮಕ್ಕಳು ಬೇಕು ಎನ್ನುತ್ತಿದ್ದಾರಂತೆ. ಅದಕ್ಕೆ ಕಾರಣವೇನು ಗೊತ್ತಾ? ಇಲ್ಲಿದೆ ಮಾಹಿತಿ. ಇನ್ನು ಕೆಲವು ತಿಂಗಳು ಸಮಂತಾ ವೆಕೇಷನ್ ಮಾಡುತ್ತಾ ಆರೋಗ್ಯಕ್ಕೆ ಸಂಬಂಧಿಸಿದ ಟ್ರೀಟ್ಮೆಂಟ್ ಪಡೆಯುತ್ತಿದ್ದಾರೆ. ಅದಾದ ಮೇಲೆ ಸಿನಿಮಾ, ಕ್ಯಾಮೆರಾ ಇತ್ಯಾದಿ. ಈಗ ಮನೆಯಲ್ಲಿ ಮತ್ತೊಂದು ಮದುವೆ ಆಗುವಂತೆ ಒತ್ತಡ ಹೇರುತ್ತಿದ್ದಾರಂತೆ. ಮೂವತ್ತಾರು ವಯಸ್ಸು. ಈಗಲೇ ಇನ್ನೊಂದು ಜೋಡಿ ನೋಡಿಕೋ ಎನ್ನುವುದು ತಪ್ಪಲ್ಲ. ಆದರೆ ಸ್ಯಾಮ್ ಮಾತ್ರ ಮದುವೆಯ (Wedding) ಮರ್ಮಾಘಾತಕ್ಕೆ ಸಿಕ್ಕಿ ಬಂದಿದ್ದಾರೆ. ಇಬ್ಬರು ಮಕ್ಕಳನ್ನು ದತ್ತು ಪಡೆಯುತ್ತೇನೆ. ನೋ ಮ್ಯಾರೇಜ್ ಎಂದಿದ್ದಾರಂತೆ. ಒಂದು ಸಲ ಹೊಡೆತ ಬಿದ್ದರೆ ಮನಸು ಹೀಗೊಂದು ತೀರ್ಮಾನಕ್ಕೆ ಬರುತ್ತದೆ. ಬಹುಶಃ ಸಮಂತಾಗೂ ಅದೇ ಆಗಿರಬೇಕು. ಇನ್ನೊಂದು ಹುಡುಗ ಇನ್ನೊಂದು ಕನಸು ಹೊಸ ಕಿತ್ತಾಟ? ಬೇಕಾ? ಬೇಡವಾ ಎನ್ನುತ್ತಾ ಸ್ವಂತ ಟ್ರಸ್ಟ್ನಿಂದ…
ಬೆಂಗಳೂರು: ಏಕದಿನ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದ ಸೋಲು ಈಗಲೂ ಕಾಡುತ್ತಿದೆ ಎಂದು ಟೀಮ್ ಇಂಡಿಯಾದ ವಿಕೆಟ್ ಕೀಪರ್, ಕನ್ನಡಿಗ ಕೆಎಲ್ ರಾಹುಲ್ 4 ದಿನಗಳ ಬಳಿಕ ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ನೋವು ಹಂಚಿಕೊಂಡಿದ್ದಾರೆ. ನವೆಂಬರ್ 19 ರಂದು ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದಿದ್ದ ಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ಪಡೆ 6 ವಿಕೆಟ್ಗಳಿಂದ ಸೋತಿತ್ತು. ಆ ಮೂಲಕ ಮೂರನೇ ಬಾರಿ ಏಕದಿನ ವಿಶ್ವಕಪ್ ಗೆಲ್ಲುವ ಅವಕಾಶವನ್ನು ಕಳೆದುಕೊಂಡಿತ್ತು. ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧದ ಸೋಲು ಆಟಗಾರರಲ್ಲದೆ ಅಭಿಮಾನಿಗಳನ್ನು ಕೂಡ ಸುದೀರ್ಘ ಕಾಲದವರೆಗೆ ಕಾಡಲಿದೆ. ಟೀಮ್ ಇಂಡಿಯಾದ ವಿಕೆಟ್ ಕೀಪರ್, ಕನ್ನಡಿಗ ಕೆಎಲ್ ರಾಹುಲ್ ಅವರು ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಫೈನಲ್ ಪಂದ್ಯಕ್ಕೆ ಸಂಬಂಧಿಸಿದ 3 ಫೋಟೋಗಳು ಹಾಗೂ ಒಡೆದ ಹೃದಯದ ಎಮೋಜಿ ಹಾಕುವ ಮೂಲಕ ಫೈನಲ್ ಪಂದ್ಯದ ಸೋಲಿನಿಂದ “ಇನ್ನೂ ನೋವಿದೆ” ಎಂದು ಬರೆದುಕೊಂಡಿದ್ದಾರೆ. 2023ರ ಏಕದಿನ ಫೈನಲ್ ಪಂದ್ಯದಲ್ಲಿ ಟಾಸ್ ಸೋತು ಮೊದಲು…
ಆಮ್ಸ್ಟರ್ಡ್ಯಾಮ್: ಇಸ್ಲಾಂ ವಿರೋಧಿ ನಿಲುವುಗಳಿಗೆ ಹೆಸರುವಾಸಿಯಾಗಿದ್ದ ಡಚ್ ಬಲಪಂಥೀಯ ನಾಯಕ ಗೀರ್ಟ್ ವೈಲ್ಡರ್ಸ್ (Geert Wilders) ಅವರು ನೆದರ್ಲೆಂಡ್ಸ್ (Netherlands) ಸಂಸತ್ತಿನ ಚುನಾವಣೆಯಲ್ಲಿ ಗೆಲವು ಸಾಧಿಸಿದ್ದಾರೆ. ಚುನಾವಣೆಯಲ್ಲಿ ಗೆದ್ದಿರುವ ಹಿನ್ನೆಲೆ ಗೀರ್ಟ್ ವೈಲ್ಡರ್ಸ್ ನೆದರ್ಲೆಂಡ್ಸ್ʼನ ನೂತನ ಪ್ರಧಾನಿಯಾಗಿ (PM) ಪ್ರಮಾಣವಚನ ಸ್ವೀಕರಿಸಲು ಸಿದ್ಧರಾಗಿದ್ದಾರೆ ಎಂದು ವರದಿಯಾಗಿದೆ. https://ainlivenews.com/miley-is-the-new-president-of-argentina-who-talks-to-a-dead-dog/ ಈ ಹಿಂದೆ ಪ್ರವಾದಿ ಮೊಹಮ್ಮದ್ ಅವರ ಬಗ್ಗೆ ವಿವಾದಾತ್ಮಕವಾದ ಹೇಳಿಕೆಗಳನ್ನು ನೀಡಿ ಅಮಾನತುಗೊಂಡಿರುವ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ (Nupur Sharma) ಅವರನ್ನು ವೈಲ್ಡರ್ಸ್ ಬೆಂಬಲಿಸಿದ್ದರು. ಇದೀಗ ಬಲಪಂಥೀಯ, ಇಸ್ಲಾಂ ವಿರೋಧಿ ಜನಪರವಾದಿ ಗೀರ್ಟ್ ವೈಲ್ಡರ್ಸ್ ಅವರು ವಿಶ್ವ ಸಮರ 2ರ ನಂತರ ಡಚ್ ರಾಜಕೀಯದಲ್ಲಿ ದೊಡ್ಡ ಅಲೆ ಎಬ್ಬಿಸಿದ್ದಾರೆ. ದೇಶದ ಮೊದಲ ಬಲಪಂಥೀಯ ಪ್ರಧಾನಿಯಾಗಲು ಮುಂದಾಗಿದ್ದಾರೆ.
ಮುಂಬೈ: ವಿಶ್ವಕಪ್ ಮುಕ್ತಾಯದೊಂದಿಗೆ ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ (Rahul Dravid) ಅಧಿಕಾರಾವಧಿಯೂ ಮುಗಿದಿದೆ. ಬಿಸಿಸಿಐ ಇನ್ನೊಂದು ವರ್ಷ ರಾಹುಲ್ ದ್ರಾವಿಡ್ರನ್ನು ಮುಂದುವರಿಸಲು ಬಯಸಿದೆ. ಆದರೆ ರಾಹುಲ್ ದ್ರಾವಿಡ್ ಕೋಚ್ (Coach) ಆಗಿ ಮುಂದುವರಿಯಲು ಒಪ್ಪುತ್ತಿಲ್ಲ ಎನ್ನಲಾಗಿದೆ. ಹೀಗಾಗಿ ವಿವಿಎಸ್ ಲಕ್ಷ್ಮಣ್ರನ್ನು (VVS Laxman) ಕೋಚ್ ಹುದ್ದೆಗೆ ಪರಿಗಣಿಸಲು ಬಿಸಿಸಿಐ ಮುಂದಾಗಿದೆ. ಈಗಾಗಲೇ ಟಿ-20 (T20 Cricket) ಟೂರ್ನಿಗೆ ಲಕ್ಷ್ಮಣ್ ತಂಡದ ಉಸ್ತುವಾರಿ ವಹಿಸಿದ್ದಾರೆ. ಇನ್ನು ವಿಶ್ವಕಪ್ ಸೋತ ನಂತರ ಡ್ರೆಸ್ಸಿಂಗ್ ರೂಂಗೆ ಭೇಟಿ ಕೊಟ್ಟು ಧೈರ್ಯ ತುಂಬಿದ ಪ್ರಧಾನಿ ಮೋದಿಗೆ ವೇಗದ ಬೌಲರ್ ಶಮಿ ಕೃತಜ್ಞತೆ ಸಲ್ಲಿಸಿದ್ದಾರೆ. ಪ್ರಧಾನಿ ಭೇಟಿಯಿಂದ ನಮ್ಮ ಸ್ಥೈರ್ಯ ದ್ವಿಗುಣವಾಗಿದೆ ಅಂದಿದ್ದಾರೆ. ಆದರೆ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕೂಡ ಅಖಿಲೇಶ್ ಮಾದರಿಯ ಹೇಳಿಕೆ ನೀಡಿದ್ದಾರೆ. ಫೈನಲ್ ಪಂದ್ಯ ಕೋಲ್ಕತ್ತಾ ಮುಂಬೈನಲ್ಲಿ ನಡೆದಿದ್ರೆ ಭಾರತವೇ ಗೆಲ್ತಿತ್ತು ಎಂದಿದ್ದಾರೆ. ಈ ಮಧ್ಯೆ ಇಂದು ಆಸ್ಟ್ರೇಲಿಯಾ ವಿರುದ್ಧ ನಡೆದ ಮೊದಲ ಟಿ-20 ಪಂದ್ಯದಲ್ಲಿ ಸೂರ್ಯಕುಮಾರ್ ನೇತೃತ್ವದ ಟೀಂ…
ಕನ್ನಡ ಸಿನಿಮಾ ಇಂಡಸ್ಟ್ರೀಯಲ್ಲಿ ಹೊಸಬರ ಆಗಮನದಿಂದ ಹೊಸತನವೆದ್ದಿದೆ. ಯುವ ಸಿನಿಮೋತ್ಸಾಹಿಗಳು ವಿಭಿನ್ನ ಬಗೆಯ ಕಥಾಹಂದರದ ಚಿತ್ರದ ಮೂಲಕ ಪ್ರೇಕ್ಷಕರ ಎದುರು ಬರುತ್ತಿದ್ದಾರೆ. ಅದರ ಮುಂದುವರೆದ ಭಾಗವಾಗಿ ತಯಾರಾಗಿರುವ ಸಿನಿಮಾವೇ ಒನ್ ಅಂಡ್ ಆಫ್. ರಂಗ್ಬಿರಂಗಿ, ಡೆವಿಡ್, ದಿ ವೆಕೆಂಟ್ ಹೌಸ್ ಸಿನಿಮಾಗಳ ಮೂಲಕ ಭರವಸೆ ಮೂಡಿಸಿರುವ ಯುವ ಪ್ರತಿಭೆ ಶ್ರೇಯಸ್ ಚಿಂಗಾ ‘ಒನ್ ಅಂಡ್ ಆಫ್’ ಸಿನಿಮಾ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದಾರೆ. ನಿರ್ದೇಶನದ ಜೊತೆಗೆ ನಾಯಕನಾಗಿಯೂ ಶ್ರೇಯಸ್ ಅಭಿನಯಿಸ್ತಿದ್ದಾರೆ. ಇತ್ತೀಚೆಗಷ್ಟೇ ಬೆಂಗಳೂರಿನ ರೇಣುಕಾಂಬ ಸ್ಟುಡಿಯೋಸ್ ನಲ್ಲಿ ಸುಲಕ್ಷ್ಮೀ ಫಿಲಂಸ್ ನಿರ್ಮಾಣದ ಸಂಸ್ಥೆ ಲೋಗೋ ಹಾಗೂ ಒನ್ ಅಂಡ್ ಸಿನಿಮಾದ ಫಸ್ಟ್ ಲುಕ್ ಅನಾವರಣ ಮಾಡಲಾಯಿತು. ಈ ವೇಳೆ ಇಡೀ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ನಟ ಕಂ ನಿರ್ದೇಶಕ ಶ್ರೇಯಸ್ ಚಿಂಗಾ ಮಾತನಾಡಿ, ಕಂಪ್ಲೀಟ್ ಕಾಮಿಡಿ ಸಿನಿಮಾ. ಇವತ್ತಿನಿಂದ ಶೂಟಿಂಗ್ ಶುರುವಾಗಿದೆ. ಐಟಿ ಕಂಪನಿ ಅಂದ್ಮೇಲೆ ಸಾಕಷ್ಟು ಜನ ಹುಡುಗಿಯರು ಇರುತ್ತಾರೆ. ಮಾನ್ವಿತಾ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದಾರೆ. ಬೆಂಗಳೂರು, ಗೋವಾ ಭಾಗದಲ್ಲಿ ಶೂಟಿಂಗ್…
ಬೆಂಗಳೂರು: ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಸಿಲಿಕಾನ್ ಸಿಟಿ ಬೆಂಗಳೂರಿನ ಅರಮನೆ ಆವರಣದಲ್ಲಿ ನವೆಂಬರ್ 25 ಹಾಗೂ 26ರಂದು ಕಂಬಳ ನಡೆಯಲಿದ್ದುಇಂದಿನಿಂದ ಕಂಬಳದ ಕಲರವರಕ್ಕೆ ಕ್ಷಣಗಣನೆ ಶುರುವಾಗಿದ್ದು ಅರಮನೆ ಮೈದಾನದಲ್ಲಿ ಸಕಲ ಸಿದ್ಧತೆಗಳು ನಡೆಯುತ್ತಿವೆ. ಹೌದು, ಇಂದಿನಿಂದ(ನವೆಂಬರ್ 24) ಮೂರು ದಿನಗಳ ಕಾಲ ಕಂಬಳ ನಡೆಯಲಿದೆ. ಈ ಕೋಣಗಳ ಓಟ ರೇಸ್ನಲ್ಲಿ ಗೆಲ್ಲುವ ಕೋಣಗಳಿಗೆ ಬಹುಮಾನದ ಹಣವೆಷ್ಟು ಎಂಬುವುದರ ಸಂಪೂರ್ಣ ಮಾಹಿತಿ ಇಲ್ಲಿದೆ. ಕಂಬಳದಲ್ಲಿ ವಿಜೇತರಾಗುವ ಕೋಣದ ಮಾಲೀಕರಿಗೆ 1 ಲಕ್ಷ ರೂ. ನಗದು, 16 ಗ್ರಾಂ ಸ್ವರ್ಣ ಕೊಡಲಾಗುತ್ತದೆ. ದ್ವಿತೀಯ ಸ್ಥಾನ ಗಳಿಸಿದವರಿಗೆ 50,000 ರೂ. ಜತೆಗೆ 2.8 ಗ್ರಾಂ ಚಿನ್ನ ಮತ್ತು ತೃತೀಯ ಸ್ಥಾನ ಪಡೆದವರಿಗೆ 25,000 ರೂ. ನಗದು ಹಾಗೂ 4 ಗ್ರಾಂ ಬಂಗಾರದ ಪದಕವನ್ನು ಬಹುಮಾನವಾಗಿ ನೀಡಲಾಗುತ್ತದೆ. ಬೆಂಗಳೂರಿನಲ್ಲಿ ನಡೆಯುವ ಕಂಬಳಕ್ಕೆ 77.50- 78 ಕೋಟಿ ರೂ. ವೆಚ್ಚ ತಗಲುವ ನಿರೀಕ್ಷೆಯಿದ್ದು, ಸರ್ಕಾರ ಒಂದು ಕೋಟಿ ರೂ. ಅನುದಾನ ಪ್ರಕಟಿಸಿದೆ. ಬೆಂಗಳೂರಿನ ಪ್ರತಿಷ್ಠಿತ ಸಂಸ್ಥೆಗಳು ಹಣ ಸಹಾಯ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಕೈಜೋಡಿಸಿವೆ.
ವಿಟಮಿನ್ ಸಿ ಹೊಂದಿರುವ ಹಣ್ಣುಗಳಲ್ಲಿ ನಿಂಬೆಹಣ್ಣು ಕೂಡಾ ಒಂದು. ನಿಂಬೆ ಜ್ಯೂಸ್ ಆರೋಗ್ಯಕ್ಕೆ ಒಳ್ಳೆಯದು. ನಿಂಬೆ ಜ್ಯೂಸ್ ಕುಡಿಯುವುದರಿಂದ ನಿಮ್ಮನ್ನು ರಿಫ್ರೆಶ್ ಆಗಿಸುತ್ತದೆ. ಪ್ರತಿದಿನ ನಿಂಬೆ ನೀರನ್ನು ಕುಡಿಯುವ ಅಭ್ಯಾಸವನ್ನು ಅಳವಡಿಸಿಕೊಳ್ಳುವುದು ನಿಮ್ಮ ಜೀವನದಲ್ಲಿ ಸರಳವಾದ ಬದಲಾವಣೆಯನ್ನು ತರುತ್ತದೆ. ನಿಂಬೆ ಜ್ಯೂಸ್ ಕುಡಿಯುವುದರ ಪ್ರಯೋಜನಗಳೇನು ಎನ್ನುವುದನ್ನು ನೋಡೋಣ. ವಿಟಮಿನ್ ಸಿ ಪೂರೈಕೆ ಮಾಡುತ್ತದೆ ನಿಂಬೆಹಣ್ಣುಗಳು ವಿಟಮಿನ್ ಸಿ ಅನ್ನು ಒಳಗೊಂಡಿವೆ. ನಿಂಬೆ ನೀರನ್ನು ಕುಡಿಯುವುದರಿಂದ ನಿಮಗೆ ಸಾಕಷ್ಟು ವಿಟಮಿನ್ ಸಿ ಸಿಗುತ್ತದೆ. ವಾಸ್ತವವಾಗಿ, ಒಂದು ದಿನದಲ್ಲಿ ನಿಮಗೆ ಅಗತ್ಯವಿರುವ ಪ್ರಮಾಣದಲ್ಲಿ ಆರನೇ ಒಂದು ಭಾಗ. ಇದು ಜೀವಕೋಶದ ಹಾನಿಯಿಂದ ನಮ್ಮನ್ನು ರಕ್ಷಿಸುತ್ತದೆ ಮತ್ತು ಯಾವುದೇ ಗಾಯಗಳನ್ನು ಸರಿಪಡಿಸಲು ಸಹಾಯ ಮಾಡುತ್ತದೆ. ನೀವು ಒತ್ತಡವನ್ನು ಅನುಭವಿಸಿದಾಗ, ನಿಮ್ಮ ದೇಹದಲ್ಲಿನ ವಿಟಮಿನ್ ಸಿ ಮಟ್ಟವು ಪರಿಣಾಮ ಬೀರುತ್ತದೆ ಮತ್ತು ಆದ್ದರಿಂದ ನಿಂಬೆ ನೀರನ್ನು ಕುಡಿಯುವುದರಿಂದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ನೀವು ಹೆಚ್ಚು ಚೈತನ್ಯವನ್ನು ಅನುಭವಿಸುವಿರಿ. ನಿಂಬೆ ರಸ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ ನಿಂಬೆ ರಸವು…
ಸೂರ್ಯೋದಯ: 06.23 AM, ಸೂರ್ಯಾಸ್ತ : 05.50 PM ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಕಾರ್ತೀಕ ಮಾಸ, ಶುಕ್ಲ ಪಕ್ಷ, ದಕ್ಷಿಣಾಯಣ,ಶರತ್ ಋತು, ತಿಥಿ: ಇವತ್ತು ತ್ರಯೋದಶಿ 05:22 PM ತನಕ ನಂತರ ಚತುರ್ದಶಿ ನಕ್ಷತ್ರ: ಇವತ್ತು ಅಶ್ವಿನಿ 02:56 PM ತನಕ ನಂತರ ಭರಣಿ ಯೋಗ: ಇವತ್ತು ವ್ಯತೀಪಾತ 06:24 AM ತನಕ ನಂತರ ವರಿಯಾನ್ ಕರಣ: ಇವತ್ತು ಕೌಲವ 06:12 AM ತನಕ ನಂತರ ತೈತಲೆ 05:22 PM ತನಕ ನಂತರ ಗರಜ ರಾಹು ಕಾಲ: 09:00 ನಿಂದ 10:30 ವರೆಗೂ ಯಮಗಂಡ: 01:30ನಿಂದ 03:00 ವರೆಗೂ ಗುಳಿಕ ಕಾಲ: 06:00 ನಿಂದ 07:30 ವರೆಗೂ ಅಮೃತಕಾಲ: 08.03 AM to 09.35 AM ಅಭಿಜಿತ್ ಮುಹುರ್ತ: ಬೆಳಗ್ಗೆ.11:40 ನಿಂದ ಮ.12:25 ವರೆಗೂ ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ. “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು” ಸೋಮಶೇಖರ್ ಗುರೂಜಿB.Sc ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ…