Author: AIN Author

ಬೆಂಗಳೂರು: ಬಿಟ್ ಕಾಯಿನ್ (Bit Coin) ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಅರೆಸ್ಟ್ ಮಾಡಲಾಗಿದ್ದು, ಎಸ್‌ಐಟಿ (SIT) ಅಧಿಕಾರಿಗಳು ಇಬ್ಬರನ್ನು ಬಂಧಿಸಿದ್ದಾರೆ. ಇನ್ಸ್ಪೆಕ್ಟರ್ ಪ್ರಶಾಂತ್ ಬಾಬು ಮತ್ತು ಸಂತೋಷ್‌ನನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದು, ಸಾಕ್ಷ್ಯ ನಾಶ ಮಾಡಿದ ಹಿನ್ನೆಲೆ ಈ ಇಬ್ಬರನ್ನು ಬಂಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಐವರನ್ನು ವಶಕ್ಕೆ ಪಡೆದಿದ್ದರು. ಬಂಧಿತರಲ್ಲಿ ಪ್ರಶಾಂತ್ ಬಾಬು ಸೈಬರ್ ಇನ್ಸ್ಪೆಕ್ಟರ್ ಆಗಿದ್ದು, ಸಂತೋಷ್ ಸೈಬರ್ ಸೆಂಟರ್ ವ್ಯಕ್ತಿ ಆಗಿದ್ದ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು (CCB Police) ಶ್ರೀಕಿಯನ್ನು 90 ದಿನ ಪೊಲೀಸ್ ಕಸ್ಟಡಿಯಲ್ಲಿ ಇರಿಸಿಕೊಂಡಿದ್ದರು. ಸಿಸಿಬಿ ಬಂಧನದಲ್ಲಿದ್ದಾಗ ಬಿಟ್ ಕಾಯಿನ್ ಅಕ್ರಮ ಆಗಿರೋದು ಸಾಬೀತಾಗಿದೆ. ಅಕ್ರಮ ಸಾಬೀತಾದ ಹಿನ್ನೆಲೆ ಬಂಧಿಸಲಾಗಿದೆ 90 ದಿನ ಪೊಲೀಸ್ ಕಸ್ಟಡಿಯಲ್ಲಿ ಇದ್ದಾಗ ಹೊಸ ಲ್ಯಾಪ್‌ಟ್ಯಾಪ್ ಖರೀದಿ ಮಾಡಿದ್ದರು. ಲ್ಯಾಪ್‌ಟಾಪ್ ಅನ್ನು ತಂತ್ರಜ್ಞಾನ ಬಳಸಿ ಸಾಕ್ಷ್ಯ ನಾಶ ಮಾಡಿದ್ದಾರೆ. ಕೋಟ್ಯಂತರ ರೂ. ಮೌಲ್ಯದ ಬಿಟ್ ಕಾಯಿನ್‌ಗಳ ವರ್ಗಾವಣೆ ಆಗಿದೆ. ಹೀಗಾಗಿ ಮಾಹಿತಿ ಆಧರಿಸಿ ಇಬ್ಬರನ್ನು ಸುದೀರ್ಘ…

Read More

ಬಳ್ಳಾರಿ,ಜ.25 ಮತದಾನವು ಭಾರತ ಸಂವಿಧಾನ ನೀಡಿರುವ ಹಕ್ಕಾಗಿದ್ದು, ಪ್ರತಿಯೊಬ್ಬರೂ ತಮ್ಮ ಹಕ್ಕನ್ನು ಚಲಾಯಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಎಸ್.ಹೆಚ್.ಪುಷ್ಪಾಂಜಲಿ ದೇವಿ ಅವರು ಹೇಳಿದರು. ಭಾರತ ಚುನಾವಣಾ ಆಯೋಗ, ಜಿಲ್ಲಾ ಚುನಾವಣಾಧಿಕಾರಿಗಳ ಕಾರ್ಯಾಲಯ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ “ಮತದಾನಕ್ಕಿಂತ ಇನ್ನೊಂದಿಲ್ಲ, ನಾನು ಖಚಿತವಾಗಿ ಮತದಾನ ಮಾಡುವೆ” ಎಂಬ ಘೋಷವಾಕ್ಯದಡಿ ನಗರದ ಡಾ.ರಾಜ್‍ಕುಮಾರ್ ರಸ್ತೆಯ ಬಿ.ಡಿ.ಎ.ಎ ಫುಟ್‍ಬಾಲ್ ಮೈದಾನದ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಲಾಗಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮತದಾನವು ನಮ್ಮ ನಾಗರಿಕ ಜವಾಬ್ದಾರಿಯಾಗಿದೆ. ಗಣರಾಜ್ಯದ ಭವಿಷ್ಯ ಯುವ ಮತದಾರರ ಕೈಯಲ್ಲಿದೆ. ಯುವಕರು ಹಕ್ಕು ಭಾದ್ಯತೆಗಳನ್ನು ಅಳವಡಿಸಿಕೊಂಡು, ಯಾವುದೇ ರೀತಿಯ ಆಮಿಷಗಳಿಗೆ ಒಳಗಾಗದೇ ಯೋಗ್ಯ ಅಭ್ಯರ್ಥಿಗಳ ಮೌಲ್ಯಮಾಪನ ಮಾಡಿ ಮತ ಚಲಾಯಿಸಬೇಕು ಎಂದರು. ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಶೇಕಡವಾರು ಮತದಾನ ಪ್ರಮಾಣ…

Read More

ಬಳ್ಳಾರಿ: ಕೇಂದ್ರ ಸರ್ಕಾರದ ಅಮೃತ್ ಭಾರತ್ ಯೋಜನೆ ಅಡಿಯಲ್ಲಿ ನಗರದಲ್ಲಿನ ಬ್ರಿಟಿಷ್ ಕಾಲದ ಪಾರಂಪಾರಿಕ ಕಟ್ಟಡವಾಗಿರುವ ರೈಲ್ವೇ ನಿಲ್ದಾಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದ್ದು, ರೈಲ್ವೇ ನಿಲ್ದಾಣಕ್ಕೆ ಹೊಸ ಮೆರುಗು ನೀಡಲಾಗುತ್ತಿದೆ. ನಗರದಲ್ಲಿನ ಬ್ರಿಟಿಷ್ ಕಾಲದ ಪಾರಂಪಾರಿಕ ಕಟ್ಟಡಗಳಲ್ಲಿ ರೈಲು ನಿಲ್ದಾಣ ಒಂದಾಗಿದ್ದು, ಮೂಲ ರೈಲ್ವೇ ನಿಲ್ದಾಣ ಕಟ್ಟಡಕ್ಕೆ ಯಾವುದೇ ರೀತಿಯ ಧಕ್ಕೆ ಆಗದ ರೀತಿಯಲ್ಲಿ ರೈಲ್ವೆ ನಿಲ್ದಾಣವನ್ನು ನವೀಕರಣಗೊಳಿಸಲಾಗುತ್ತಿದೆ. ನಗರದಲ್ಲಿ ರೈಲು ನಿಲ್ದಾಣದಲ್ಲಿ ನಾಲ್ಕು ಪ್ಲಾಟ್ ಫಾರಂಗಳಿವೆ. ದಿನ ನಿತ್ಯ ಈ ರೈಲ್ವೆ ನಿಲ್ದಾಣದ ಮೂಲಕ ಬೆಂಗಳೂರು, ಹುಬ್ಬಳ್ಳಿ, ಹೈದ್ರಾಬಾದ್, ಚನೈ, ಮುಂತಾದ ರಾಜ್ಯಗಳಿಗೆ ರೈಲು ಸಂಪರ್ಕವಿದ್ದು, ಸಾವಿರಾರು ಪ್ರಯಾಣಿಕರು ಸಂಚಾರ ನಡೆಸುತ್ತಾರೆ. ಏನೇನೂ ಅಭಿವೃದ್ಧಿ..? ಕೇಂದ್ರ ಸರ್ಕಾರದ ಅಮೃತ್ ಭಾರತ್ ಯೋಜನೆ ಅಡಿಯಲ್ಲಿ ಸುಮಾರು ೧೫ ಕೋಟಿ ವೆಚ್ಚದಲ್ಲಿ ರೈಲ್ವೇ ನಿಲ್ದಾಣ ಕಟ್ಟಡದ ಪ್ಲಾಟ್ ಫಾರಂ ನವೀಕರಣ, ರೈಲ್ವೆ ನಿಲ್ದಾಣದ ಮೇಲ್ಚಾವಣೆ ನವೀಕರಣ, ಮಹಡಿಗಳ ನವೀಕರಣ, ಕಚೇರಿಗಳನ್ನು ನವೀಕರಣಗೊಳಿಸುವ ಅಬಿವೃದ್ಧಿ ಕಾಮಗಾರಿ ಕೆಲಸ ಹಾಗೂ ರೈಲು ನಿಲ್ದಾಣಕ್ಕೆ ಹೊಸದಾಗಿ…

Read More

ಬೆಂಗಳೂರು: ಕಾಂಗ್ರೆಸ್ ನನಗೆ ಮರುಜೀವ ಕೊಟ್ಟಿದೆ ನಾನು ಕಾಂಗ್ರೆಸ್ ಬಿಟ್ಟು ಹೋಗುವುದಿಲ್ಲ ಎಂದು ನೆನ್ನೆ ಬೆಳಗ್ಗೆ ಸಹ ನನ್ನೊಂದಿಗೆ ಅವರು ಹೇಳಿದ್ದರು. ಹಿರಿಯ ರಾಜಕೀಯ ನಾಯಕರು ಈಗ ಈ ರೀತಿ ಮಾಡಿರುವುದು ವಿಶ್ವಾಸಕ್ಕೆ ಧಕ್ಕೆ ತಂದಿದೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗು ಡಿಸಿಎಂ ಡಿ.ಕೆ ಶಿವಕುಮಾರ್ ಅಭಿಪ್ರಾಯಪಟ್ಟರು. ನಗರದಲ್ಲಿ ಮಾತನಾಡಿದ ಅವರು, ವಿಧಾನಸಭಾ ಚುನಾವಣೆಯಲ್ಲಿ ಜನ ಅವರನ್ನು ಮುವತ್ತು ಸಾವಿರ ಕ್ಕಿಂತ ಹೆಚ್ಚು ಮತಗಳಿಂದ ಅವರನ್ನು ತಿರಸ್ಕರಿಸಿದ್ದರು ಕಾಂಗ್ರೆಸ್​ ಪಕ್ಷದವರು ಅತ್ಯಂತ ಗೌರವದಿಂದ ನಡೆಸಿಕೊಂಡಿದ್ದೇವೆ. ಇದೀಗ ಅವರು ಯಾವ ಕಾರಣದಿಂದ ಬಿಜೆಪಿ ಸೇರ್ಪಡೆಯಾಗಿದ್ದಾರೆ? ಯಾವ ಒತ್ತಡಕ್ಕೆ ಒಳಗಾಗಿ ಈ ತೀರ್ಮಾನ ಕೈಗೊಂಡಿದ್ದಾರೆ? ಎನ್ನುವುದರ ಬಗ್ಗೆ ಅವರು ಮೊದಲು ತಿಳಿಸಲು ಬಳಿಕ ನಾನು ಮಾತನಾಡುತ್ತೇನೆ ಎಂದರು. ಹಾಗೆ ಶೆಟ್ಟರ್ ಬಿಜೆಪಿ ಸೇರ್ಪಡೆ ಬೆನ್ನಲ್ಲೇ ಲಕ್ಷಣ ಸವದಿ ಕರೆಯಿಸಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ವಿಧಾನಸಭಾ ಚುನಾವಣೆ ವೇಳೆ ಹೀನಾಯವಾಗಿ ನಡೆಸಿಕೊಂಡಾಗ ಅವರಿಗೆ ದೇಶದ ಹಿತ ಗೊತ್ತಾಗಲಿಲ್ಲವಾ ಎಂದು ಪ್ರಶ್ನೆ ಮಾಡಿದರು. ನಮಗೂ…

Read More

ಬೆಂಗಳೂರು: ಮೋದಿ ಮತ್ತೆ ಪ್ರಧಾನಿಯಾಗಬೇಕು ಅದಕ್ಕಾಗಿ ಮರಳಿ ಬಿಜೆಪಿಗೆ ಬಂದಿದ್ದೇನೆ ಎಂದು ಜಗದೀಶ್‌ ಶೆಟ್ಟರ್ ಹೇಳಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಅಧಿಕೃತವಾಗಿ ಬಿಜೆಪಿ ಸೇರಿ ಮಾತನಾಡಿದ ಅವರು, “ವಿಧಾನಸಭಾ ಚುನಾವಣೆ ವೇಳೆ ಕೆಲವು ಕಾರಣಗಳಿಗಾಗಿ ಬಿಜೆಪಿ ತೊರೆದಿದ್ದೆ. ಮತ್ತೆ ನಮ್ಮ ನಾಯಕರು ಮರಳಿ ಪಕ್ಷಕ್ಕೆ ಬಾ ಎಂದು ವಿನಂತಿಸಿಕೊಂಡರು. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮರಳಿ ಪಕ್ಷಕ್ಕೆ ಬಂದಿರುವೆ. ಮೋದಿಯವರು ಮತ್ತೆ ಪ್ರಧಾನಿಯಾಗಬೇಕು. ಹೀಗಾಗಿ ಪಕ್ಷಕ್ಕೆ ಮತ್ತೆ ದುಡಿಯುತ್ತೇನೆ” ಎಂದರು. “ಕಾಂಗ್ರೆಸ್‌ ನಾಯಕಾರದ ಡಿಸಿಎಂ ಡಿಕೆ ಶಿವಕುಮಾರ್‌ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚೆನ್ನಾಗಿ ತಮ್ಮ ಪಕ್ಷದಲ್ಲಿ ನಡೆಸಿಕೊಂಡಿದ್ದಾರೆ. ಅವರಿಗೆ ಈ ಮೂಲಕ ಧನ್ಯವಾದ ತಿಳಿಸುತ್ತೇನೆ. ಅಮಿತ್‌ ಶಾ ಅವರು ಗೌರವಯುತವಾಗಿ ನಡೆಸಿಕೊಂಡಿದ್ದಾರೆ. ಲೋಕಸಭೆಯಲ್ಲಿ ಮತ್ತೆ ಬಿಜೆಪಿ ಗೆಲ್ಲಬೇಕು” ಎಂದು ಹೇಳಿದರು. “ಈಗಾಗಲೇ ಇ-ಮೇಲ್‌ ಮೂಲಕ ವಿಧಾನ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಕಳುಹಿಸಿದ್ದೇನೆ. ಕಾಂಗ್ರೆಸ್‌ನ ಎಲ್ಲ ಸ್ಥಾನಗಳಿಗೂ ರಾಜೀನಾಮೆ ನೀಡಿದ್ದೇನೆ” ಎಂದರು. ರಾಜ್ಯ ವಿಧಾನಸಭಾ ಚುನಾವಣೆ ವೇಳೆ…

Read More

ಬೆಂಗಳೂರು: ಶ್ರೀರಾಮ ಭಕ್ತಿಗೋಸ್ಕರ ಇರಬೇಕೇ ಹೊರತು ವೋಟಿಗೋಸ್ಕರ ಇರಬಾರದು. ಸ್ವಾರ್ಥಕ್ಕೋಸ್ಕರ ಶ್ರೀರಾಮನ ಬಳಸಬಾರದು ಎಂದು ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಹೇಳಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಧರ್ಮದ ವಿಚಾರದಲ್ಲಿ ಅನಾವಶ್ಯಕ ರಾಜಕಾರಣ ಮಾಡುವುದು ಒಳ್ಳೆಯದಲ್ಲ. ಧಾರ್ಮಿಕ ಕಾರ್ಯಕ್ರಮಗಳಿಗೆ ನಮ್ಮ ಸರ್ಕಾರ ಬಹಳ ಕೆಲಸ ಮಾಡಿದೆ. ಒಂದು ದೇವಸ್ಥಾನ (Temple) ಮಾತ್ರ ಮುಖ್ಯ ಅಲ್ಲ, ಎಲ್ಲಾ ದೇವಸ್ಥಾನವೂ ಕೂಡ ಮುಖ್ಯ. ಧರ್ಮ ಎಲ್ಲರನ್ನೂ ಉಳಿಸುತ್ತಿದೆ. ಯಾರೋ ಒಬ್ಬರಿಂದ ಧರ್ಮ ಅಲ್ಲ. ಧರ್ಮ ಎಲ್ಲರನ್ನೂ ಒಳಗೊಳ್ಳಬೇಕು ಎಂದರು ಸ್ವಾರ್ಥಕ್ಕೋಸ್ಕರ ಶ್ರೀರಾಮನ ಬಳಸಬಾರದು. ಭಕ್ತಿ, ನಂಬಿಕೆ, ವಿಶ್ವಾಸದಿಂದ ಮಾಡಿದರೆ ಎಲ್ಲರೂ ಗೌರವಿಸುತ್ತಾರೆ. ಅಯೋಧ್ಯೆಗೆ (Ayodhya) ನಾವು ಹೋಗುವುದಕ್ಕೆ ಯಾರ ಪರ್ಮಿಷನ್ ಬೇಕಾಗಿಲ್ಲ. ಭವ್ಯವಾದ ರಾಮ ಮಂದಿರ ಕಟ್ಟಿದ್ದಾರೆ, ಅದನ್ನು ನೋಡಬೇಕು. ಅಯೋಧ್ಯೆಗೆ ಹೋಗುತ್ತೇವೆ ಎಂದು ನಾವು ಹೇಳಿಕೊಳ್ಳಬೇಕಿಲ್ಲ, ತೋರಿಸಿಕೊಳ್ಳಬೇಕಿಲ್ಲ. ರಾಮ ರಾಜ್ಯ ಅಂದ್ರೆ ಏನರ್ಥ? ಹಿಂಸೆ ಸೃಷ್ಟಿ ಮಾಡುವುದು, ರಾಜಕೀಯ ವಿರೋಧಿಗಳನ್ನು ಮಟ್ಟ ಹಾಕುವುದು ಯಾವ ರಾಮ ರಾಜ್ಯದ ಪರಿಕಲ್ಪನೆ…

Read More

ತುಮಕೂರು: ಜಗದೀಶ್ ಶೆಟ್ಟರ್ ಬಿಜೆಪಿ ಸೇರಿದ ವಿಚಾರ ಈಗ ತಿಳಿಯಿತು. ನನಗೆ ನ್ಯೂಟನ್​ ನೆನಪಾದ. ಅವರನ್ನ ಅವಮಾನ ಮಾಡಿ ಹೊರಹಾಕಿದ್ದರು. ಈಗ ಮತ್ತೆ ಅವರೇ ಸೇರ್ಪಡೆ ಮಾಡಿಕೊಂಡಿದ್ದಾರೆ ಎಂದು ಜಗದೀಶ್ ಶೆಟ್ಟರ್ ಬಿಜೆಪಿ ಸೇರಿದ ವಿಚಾರಕ್ಕೆ ತುಮಕೂರಿನಲ್ಲಿ ಸಹಕಾರ ಸಚಿವ ಕೆ.ಎನ್​.ರಾಜಣ್ಣ ಪ್ರತಿಕ್ರಿಯೆ ನೀಡಿದ್ದಾರೆ. .  ಅಲ್ಲಿ ಇರುತ್ತಾರೆ ಅನ್ನೋದು ಯಾವ ಗ್ಯಾರಂಟಿ. ಯಾವುದೇ ತತ್ವ ಸಿದ್ದಾಂತ ಪಾಲನೆ ಮಾಡದೇ ಸ್ವಾರ್ಥಕ್ಕೋಸ್ಕರ ಪಕ್ಷ ಬದಲಾವಣೆ ಮಾಡಿದ್ದಾರೆ. ಯಾವುದೇ ತತ್ವ ಸಿದ್ದಾಂತದ ಗೋಜಿಗೆ ಹೋಗದೇ ವೈಯಕ್ತಿಕಗಾಗಿ ಪಕ್ಷಾಂತರ ಮಾಡುವುದು ಒಪ್ಪುವ ಕ್ರಮವಲ್ಲ. https://ainlivenews.com/amit-shah-talks-successful-former-cm-says-goodbye-to-congress/ ಕಾಂಗ್ರೆಸ್ ನಿಂದಲೂ ಅವರಿಗೆ ಗೌರವ ಸಿಕ್ಕಿತ್ತು. ಯಾವುದೋ ಒತ್ತಡದಿಂದ ಹೀಗೆ ಆಗಿರಬಹುದೆನೋ ಗೊತ್ತಿಲ್ಲ. ಅವರು ಬಿಜೆಪಿ ಸೇರ್ಪಡೆಯಿಂದ ಅವರ ಗೌರವ ಕಡಿಮೆ ಆಗಿದೆ ಎನ್ನೋದು ನನ್ನ ಅಭಿಪ್ರಾಯ. ಹೀಗೆ ಯಾರೇ ಮಾಡಿದ್ರೂ ಜನರು ಒಪ್ಪುವುದಿಲ್ಲ. ಲೋಕಸಭಾ ಚುನಾವಣೆ ಸಮೀಪ ಇರುವ ಕಾರಣ ಹೋಗೊದು ಬರೋದು ಇದ್ದೆ ಇರುತ್ತದೆ. ಇವರು ಹೋದರೆ ಬೇರೆಯವರು ಬರುತ್ತಾರೆ ಎಂದರು.

Read More

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಗಣರಾಜ್ಯೋತ್ಸವಕ್ಕೆ ಕಬ್ಬನ್​​ ರಸ್ತೆಯಲ್ಲಿರುವ ಮಾಣಿಕ್ ಷಾ ಪರೇಡ್​ ಮೈದಾನದಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಬಗ್ಗೆ ಪೊಲೀಸ್​ ಆಯುಕ್ತ ಬಿ.​ ದಯಾನಂದ್  ಸುದ್ದಿಗೋಷ್ಠಿ ನಡೆಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು,  ಕಾರ್ಯಕ್ರಮಕ್ಕೆ ಬರುವವರು 8.30ರೊಳಗೆ ಹಾಜರಿರಬೇಕು. ಯಾವ ಯಾವ ಗೇಟ್ ನಿಗದಿಯಾಗಿದೆ ಅಲ್ಲಿಂದಲ್ಲೇ ಬರಬೇಕು. ಸಿಗರೇಟ್, ಚಾಕು, ಕಪ್ಪು ಕರವಸ್ತ್ರ, ಪಟಾಕಿ ಸೇರಿ ಹಲವು ವಸ್ತುಗಳಿಗೆ ನಿಷೇಧವಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರವಹಿಸಿದ್ದೇವೆ ಎಂದರು. ನಗರದ ಆಯಕಟ್ಟಿನ ಪ್ರದೇಶಗಳಲ್ಲಿ ನಿಗಾ ಇಡಲಾಗಿದೆ. 9 ಡಿಸಿಪಿ, 16 ಎಸಿಪಿ, 46 ಇನ್ಸ್​ಪೆಕ್ಟರ್​ಗಳು ಸೇರಿದಂತೆ 575 ಅಧಿಕಾರಿಗಳು, 1000 ಸಿಬ್ಬಂದಿ ನಿಯೋಜಿಸಿದ್ದೇವೆ. ಜೊತೆಗೆ ಆರ್ಮಡ್ ಫೋರ್ಸ್, ಶ್ವಾನದಳ ಇರಲಿದೆ. ಬ್ಯಾಗೇಜ್ ಸ್ಕ್ಯಾನರ್ ಮತ್ತು 100 ಸಿಸಿಟಿವಿಗಳನ್ನ ಅಳವಡಿಸಲಾಗಿದೆ. ವಾಹನ ಸಂಚಾರದಲ್ಲೂ ಕೆಲ ಬದಲಾವಣೆ ಮಾಡಲಾಗಿದೆ. ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಿದ್ದೇವೆ ಎಂದು ಬೆಂಗಳೂರು ಪೊಲೀಸ್​ ಆಯುಕ್ತ ಬಿ.​ ದಯಾನಂದ್ ಹೇಳಿದರು. ಕಾರ್ಯಕ್ರಮಕ್ಕೆ ಬರುವವರು 8.30ರೊಳಗೆ ಹಾಜರಿರಬೇಕು. ಯಾವ ಯಾವ ಗೇಟ್…

Read More

ರಣ್ ಬೀರ್ ಕಪೂರ್ ಮತ್ತು ರಶ್ಮಿಕಾ ಮಂದಣ್ಣ ಕಾಂಬಿನೇಷನ್ ನ ‘ಅನಿಮಲ್’ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ಸಖತ್ ಸದ್ದು ಮಾಡಿದೆ. ಕಳೆದ ಡಿಸೆಂಬರ್ ನಲ್ಲಿ ರಿಲೀಸ್ ಆಗಿದ್ದ ಸಿನಿಮಾ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದಿತ್ತು. ಇದೀಗ ಅನಿಮಲ್ ಸಿನಿಮಾ ಒಟಿಟಿಯಲ್ಲಿ (OTT)ಬರಲು ರೆಡಿಯಾಗಿದೆ. ಗಣರಾಜ್ಯೋತ್ಸವದ ದಿನದಂದೇ ಈ ಚಿತ್ರವನ್ನು ಒಟಿಟಿಯಲ್ಲಿ ನೋಡಬಹುದಾಗಿದೆ. ಈ ನಡುವೆ ಅನಿಮಲ್ ಚಿತ್ರತಂಡದೊಂದು ಮತ್ತೊಂದು ಹೊಸ ಸುದ್ದಿ ಬಂದಿದ್ದು, ಈ ಸಿನಿಮಾದ ಮುಂದಿನ ಭಾಗ ಕೂಡ ಬರಲಿದೆ ಎಂದು ಹೇಳಲಾಗುತ್ತಿದೆ. ಸಿನಿಮಾ ಟೈಮ್ ಇನ್ನೂ ಈ ಕುರಿತು ಮಾಹಿತಿ ನೀಡದೇ ಇದ್ದರೂ, ಪಾರ್ಟ್ 2 (Part 2) ಹಾಗೂ ಆ ಭಾಗದಲ್ಲಿ ಇನ್ನೂ ರಕ್ತಸಿಕ್ತ ಅಧ್ಯಾಯ ಇರಲಿದೆ ಎಂದು ಚರ್ಚೆ ನಡೆಯುತ್ತಿದೆ. ಸಿನಿಮಾ ರಿಲೀಸ್ ಆದ ಒಂದೇ ದಿನಕ್ಕೆ ನೂರು ಕೋಟಿ ಕ್ಲಬ್ ಸೇರಿತ್ತು. ಜೊತೆಗೆ ರಿಲೀಸ್ ದಿನದಿಂದ ಬಾಕ್ಸ್ ಆಫೀಸ್ (Box Office) ಕಲೆಕ್ಷನ್ ಏರುತ್ತಲೇ ಇದೆ. ಮೂರು ದಿನದ ಒಟ್ಟು ಕಲೆಕ್ಷನ್ ಮುನ್ನೂರು ಕೋಟಿಗೂ…

Read More

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಗಣರಾಜ್ಯೋತ್ಸವಕ್ಕೆ  ಕಬ್ಬನ್​​ ರಸ್ತೆಯಲ್ಲಿರುವ ಮಾಣಿಕ್ ಷಾ ಪರೇಡ್​ ಮೈದಾನದಲ್ಲಿ  ಸಿದ್ಧತೆ ಮಾಡಿಕೊಳ್ಳಲಾಗಿದೆ.   ಈ ಹಿನ್ನೆಲೆಯಲ್ಲಿ ಎರಡೂ ದಿಕ್ಕುಗಳಲ್ಲಿನ ಸಂಚಾರವನ್ನು ನಿರ್ಬಂಧಿಸಿದೆ. ಹಾಗೆ ಪರ್ಯಾಯ ಮಾರ್ಗವನ್ನು ಸಹ ನೀಡಿದ್ದಾರೆ. ಇನ್‌ಫೆಂಟ್ರಿ ರಸ್ತೆಯಲ್ಲಿ ಮಣಿಪಾಲ್ ಸೆಂಟರ್ ಕಡೆಗೆ ಸಂಚರಿಸುವ ವಾಹನಗಳು ನೇರವಾಗಿ ಇನ್‌ ಫೆಂಟ್ರಿ ರಸ್ತೆ- ಸಫೀನಾ ಪ್ಲಾಜಾಕಡೆ ಎಡ ತಿರುವು ಪಡೆದು ಮೈನ್​ಗಾರ್ಡ್​ ರಸ್ತೆ – ಆಲೀಸ್​ ಸರ್ಕಲ್​- ಡಿಸ್ಪೆನ್ಸರಿ ರಸ್ತೆ – ಕಾಮರಾಜ ರಸ್ತೆ ಮತ್ತು ಡಿಕನ್ಸನ್ ರಸ್ತೆ ಜಂಕ್ಷನ್ ಬಲಕ್ಕೆ ತಿರುವು ಪಡೆದು ಕಾಮರಾಜ ರಸ್ತೆ – ಕಬ್ಬನ್ ರಸ್ತೆ ಮತ್ತು ಕಾಮರಾಜ ರಸ್ತೆ ಜಂಕ್ಷನ್​ನಲ್ಲಿ ಎಡಕ್ಕೆ ತಿರುವು ಪಡೆದು, ಕಬ್ಬನ್ ರಸ್ತೆ ಮುಖಾಂತರ ಮಣಿಪಾಲ್ ಸೆಂಟರ್ ಕಡೆಗೆ ಸಾಗಬಹುದಾಗಿದೆ. ತುರ್ತು ಸೇವಾ ವಾಹನಗಳಾದ ಆಂಬುಲೆನ್ಸ್, ಅಗ್ನಿ ಶಾಮಕ ದಳದ ವಾಹನಗಳು, ನೀರಿನ ಟ್ಯಾಂಕರ್, ಕೆ.ಎಸ್.ಆರ್.ಪಿ. ಸಿ.ಆರ್.ಟಿ., ಬಿ.ಬಿ.ಎಂ.ಪಿ. ಹಾಗೂ ಪಿ.ಡಬ್ಲ್ಯೂ.ಡಿ ವಾಹನಗಳು ಪ್ರವೇಶ ದ್ವಾರ-2 ರ ಮುಖಾಂತರ ಪರೇಡ್ ಮೈದಾನದ ಒಳಗೆ ಪ್ರವೇಶಿಸಿ ನಂತರ…

Read More