ಬೆಂಗಳೂರು: ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿ ಸೇರಿದ್ದು ಕೇಳಿ ನಮಗೂ ಆಶ್ಚರ್ಯ ಆಯ್ತು, ಇದೊಂದು ದುರದೃಷ್ಟಕರ ವಿಚಾರ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ ನಗರದಲ್ಲಿ ಮಾತನಾಡಿದ ಅವರು, ಅವರ ಮತಕ್ಷೇತ್ರದಲ್ಲಿ ಪಕ್ಷಕಟ್ಟಿ ಬೆಳೆಸಿದ್ರು ಕೇವಲ ಒಂದು ಟಿಕೆಟ್ ಕೊಡಲಿಲ್ಲ ಅಂತ ಸಂದರ್ಭದಲ್ಲಿ ನಾವು ಟಿಕೆಟ್ ಕೊಟ್ವಿ ಅವ್ರು ಪರಾಭವಗೊಂಡ್ರು, ಆದ್ರೂ ಎಂಎಲ್ ಸಿ ಮಾಡಿದ್ವಿ ಅವರನ್ನ ಗೌರವಿಸುವ ಕೆಲಸ ಮಾಡಿದ್ವಿ ಎಂದರು. ಪಾರ್ಲಿಮೆಂಟ್ ಎಲೆಕ್ಷನ್ ನಂತ್ರ ಅವರಿಗೆ ಒಳ್ಳೆಯ ಭವಿಷ್ಯ ಇತ್ತು ಆದ್ರೂ ಕೂಡ ತರಾತುರಿಯಲ್ಲಿ ಹೋಗಿದ್ದಾರೆ ಅವರು ಮಾಜಿ ಸಿಎಂ, ಅವರ ಮೇಲೆ ಏನ್ ಒತ್ತಡ ಇತ್ತೋ ಏನ್ ಆಮೀಷ ಒಡ್ಡಿದ್ದರೋ ಗೊತ್ತಿಲ್ಲ ಒಂದ್ವೇಳೆ ಆಮೀಷ ಒಡ್ಡಿದ್ದರೆ, ಅದಕ್ಕೆ ನಿರ್ಧಾರ ತೆಗೆದುಕೊಂಡಿದ್ರೆ ದುರದೃಷ್ಟಕರ ಅವ್ರು ಏನ್ ಹೇಳ್ತಾರೋ, ಏನ್ ಕಾರಣ ಕೊಡ್ತಾರೋ ನೋಡೋಣ ಆಮೀಷ ಒಳಗಾಗಿದ್ರೆ ಅವರ ಘನತೆಗೆ ಹಿನ್ನಡೆ ಆಗುತ್ತೆ ನಮಗೆ ಹಿನ್ನಡೆ ಅಂತಲ್ಲ ಇವರ ವೈಯಕ್ತಿಯ ನಿರ್ಧಾರಕ್ಕೆ ಲಿಂಗಾಯತರು ಒಪ್ಪಬೇಕಿಲ್ಲ ಪಕ್ಷಕ್ಕೆ ದ್ರೋಹ ಮಾಡಿದ್ದಾರೆ ಎಂದು ಆಕ್ರೋಶ…
Author: AIN Author
ಬೆಂಗಳೂರು: ಶೆಟ್ಟರ್ ಬಿಜೆಪಿ ಸೇರ್ಡೆ ಹಿನ್ನೆಲೆಯಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಕೂಡ ಬಿಜೆಪಿ ಸೇರ್ತಾರೆ ಎನ್ನುವ ಗುಮಾನಿಗಳು ಹರಡುತ್ತಿದ್ದವು ಇದರ ಬಗ್ಗೆ ಸ್ಪಷ್ಟ ಮಾಹಿತಿ ನೀಡಿದ್ದಾರೆ. ನನ್ನ ನಿಲುವು ಸ್ಪಷ್ಟ. ನಾನು ಬಿಜೆಪಿಗೆ ಹೋಗಲ್ಲ ಎಂದು ಹೇಳಿದ ಲಕ್ಷ್ಮಣ್ ಸವದಿ. ಪಕ್ಷ ಬಿಡಲ್ಲ ಎಂಬುಂದನ್ನ ಪದೇ ಪದೇ ಉಚ್ಚಾರಿಸಿದ ಲಕ್ಷ್ಮಣ್ ಸವದಿ ನಾನು ಅವರು ಒಟ್ಟಿಗೆ ನಿರ್ಧಾರ ಮಾಡಿ ಕಾಂಗ್ರೆಸ್ ಗೆ ಹೋಗಿರಲಿಲ್ಲ ನಾನು ಮೊದಲು ಬಂದೆ ಟಿಕೆಟ್ ಸಿಗದ ಕಾರಣ ನಂತರ ಶೆಟ್ಟರು ಬಂದರು ಯಾಕೆ ಹೋಗಿದ್ದಾರೆ ಅಂತ ಗೊತ್ತಿಲ್ಲ ಎಂದು ಹೇಳಿದರು. ನಾನು ಅವರು ಸ್ನೇಹಿತರು,ದಿನ ನಾವಿಬ್ಬರು ಮಾತನಾಡುತ್ತೇವೆ ಆದರೆ ಅವರು ಈ ನಿರ್ಧಾರ ಮಾಡ್ತಾರೆ ಅಂತ ಗೊತ್ತಿರಲಿಲ್ಲ ಲೋಕಸಭೆ ಚುನಾವಣಾ ಹಿನ್ನೆಲೆ ಅವರಿಗೆ ನಮ್ಮ ಅನಿರ್ವಾಯತೆ ಇದೆ ಹಾಗಾಗಿ ಸಂಪರ್ಕ ಮಾಡ್ತಾ ಇದ್ದಾರೆ ಸಚಿವ ಸ್ಥಾನ ನೀಡುವ ವಿಚಾರ ಬಗ್ಗೆ ಈಗ ಮಾತನಾಡೋದು ಸೂಕ್ತ ಅಲ್ಲ ಪಕ್ಷ ಏನು ಹೇಳುತ್ತೋ ಅದನ್ನ ಮಾಡುತ್ತೇನೆ ದೆಹಲಿಗೆ ಹೋಗುವುದಾದರೆ…
ಬೆಂಗಳೂರು: ಶೆಟ್ಟರ್ ಮತ್ತೆ ಇಂದು ಬಿಜೆಪಿ ಸೇರಿರುವ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ನಮ್ಮ ವಿಶ್ವಾಸಕ್ಕೆ ಧಕ್ಕೆ ತಂದಿದ್ದಾರೆ ಎಂದು ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಿನ್ನೆ ಬೆಳಿಗ್ಗೆ ನನ್ನ ಜೊತೆ ಮಾತನಾಡಿದ್ದರು ಆಗಲೂ ಹೇಳಿದರು ಆ ರೀತಿ ಏನು ಇಲ್ಲಾ ಅಂತ ಈಗ ಈ ತೀರ್ಮಾನ ಕೈಗೊಂಡಿದ್ದಾರೆ… ಅವರು ಮಾತನಾಡಲಿ ಮೊದಲು ಅವರು ಮಾತನಾಡಿದ ನಂತರ ನಾನು ಪ್ರತಿಕ್ರಿಯಿಸುತ್ತೇನೆ ಆದರೆ ನಮ್ಮ ವಿಶ್ವಾಸಕ್ಕೆ ಧಕ್ಕೆ ತಂದಿದ್ದಾರೆ ಎಂದು ಹೇಳಿದರು. 35 ಸಾವಿರ ಮತಗಳ ಅಂತರದಲ್ಲಿ ಸೋತಾಗಲು ನಾವು ಗೌರವದಿಂದ ಅವರನ್ನ ಎಂಎಲ್ ಸಿ ಮಾಡಿದ್ದೇವೆ ಯಾವ ಕಾರಣಕ್ಕೆ ಹೋಗಿದ್ದಾರೆ ಯಾವುದಾದರೂ ಒತ್ತಡದಿಂದ ಹೋಗಿದ್ದಾರಾ…? ದೇಶದ ಹಿತಕ್ಕಾಗಿ ಹೋದರೆ, ಅವತ್ತು ಟಿಕೆಟ್ ತಪ್ಪಿದಾಗ ದೇಶದ ಹಿತ ಇರಲಿಲ್ವಾ…? ಎಂದು ಪ್ರಶ್ನೆ ಮಾಡಿದರು ಶೆಟ್ಟರ್ ಕೇಸ್ ಬೇರೆ, ಇನ್ನು ಬೇರೆ ಯಾರು ಕಾಂಗ್ರೆಸ್ ಬಿಡಲ್ಲ ಯಾರೂ ಹೋಗಲ್ಲ ಎಂದು ಹೇಳಿದರು.
ಜನವರಿ 25 ರಂದು ಹೈದರಾಬಾದ್ನಲ್ಲಿ ಮೊದಲನೇ ಟೆಸ್ಟ್ ಪಂದ್ಯ ಆರಂಭವಾಗಲಿದೆ ಈ ಟೆಸ್ಟ್ ಸರಣಿಯಲ್ಲಿ ಕೆಎಲ್ ರಾಹುಲ್ ವಿಕೆಟ್ ಕೀಪರ್ ಆಗಿ ಆಡುವುದಿಲ್ಲ. ಪೂರ್ಣ ಪ್ರಮಾಣದ ಇಬ್ಬರು ವಿಕೆಟ್ ಕೀಪರ್ಗಳ ಪೈಕಿ ಒಬ್ಬರು ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನು ನಿರ್ವಹಿಸಲಿದ್ದಾರೆಂದು ಟೀಮ್ ಇಂಡಿಯಾ ಹೆಡ್ ಕೋಚ್ ರಾಹುಲ್ ದ್ರಾವಿಡ್ ಸ್ಪಷ್ಟಪಡಿಸಿದ್ದಾರೆ. ಉಭಯ ತಂಡಗಳು ಐದು ಟೆಸ್ಟ್ ಸರಣಿಯಲ್ಲಿ ಕಾದಾಟ ನಡೆಸಲಿವೆ. ರಿಷಭ್ ಪಂತ್ ಅಲಭ್ಯತೆಯಿಂದಾಗಿ ಭಾರತ ಟೆಸ್ಟ್ ತಂಡದಲ್ಲಿ ಕೆಎಸ್ ಭರತ್, ಇಶಾನ್ ಕಿಶನ್, ಕೆಎಲ್ ರಾಹುಲ್ ಅವರು ಇಷ್ಟು ದಿನಗಳ ಕಾಲ ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನು ನಿರ್ವಹಿಸಿದ್ದರು. ಇದೀಗ ಇಂಗ್ಲೆಂಡ್ ಟೆಸ್ಟ್ ಸರಣಿಗೆ ಇಶಾನ್ ಕಿಶನ್ ಅವರನ್ನು ಕೈ ಬಿಟ್ಟಿದ್ದು ಪೂರ್ಣ ಪ್ರಮಾಣದ ವಿಕೆಟ್ ಕೀಪರ್ಗಳಾಗಿ ಕೆಎಸ್ ಭರತ್ ಮತ್ತು ಧೃವ್ ಜುರೆಲ್ಗೆ ಅವಕಾಶ ನೀಡಲಾಗಿದೆ. ಮೊದಲನೇ ಟೆಸ್ಟ್ ಪಂದ್ಯದ ನಿಮಿತ್ತ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಹುಲ್ ದ್ರಾವಿಡ್, “ಕೆಎಲ್ ರಾಹುಲ್ ಈ ಟೆಸ್ಟ್ ಸರಣಿಯಲ್ಲಿ ವಿಕೆಟ್ ಕೀಪರ್ ಆಗಿ ಆಡುವುದಿಲ್ಲ. ವಿಕೆಟ್…
ಕೊಡಗು: ಬಿಜೆಪಿಗೆ ಜಗದೀಶ್ ಶೆಟ್ಟರ್ ಮರು ಸೇರ್ಪಡೆಯಾದ ವಿಚಾರ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಕೊಡಿಗಿನಲ್ಲಿ ಮಾತನಾಡಿದ ಅವರು, ನಿನ್ನೆ ನಾನು ಕರೆ ಮಾತಾಡಿದಾಗ ನಾನು ಹೋಗಲ್ಲ ಎಂದಿದ್ದರು. ನಾವು ಸೀನಿಯರ್ ಲೀಡರ್ ಎಂದು ಸ್ಥಾನಮಾನ ಕೊಟ್ಟಿದ್ವಿ. ಈಗ ನಾನು ಫ್ಯಾಕ್ಸ್ನಲ್ಲಿ ರಾಜೀನಾಮೆ ಕೊಟ್ತೇನೆ ಅಂದಿದ್ದಾರೆ. https://ainlivenews.com/amit-shah-talks-successful-former-cm-says-goodbye-to-congress/ ಒತ್ತಡದಲ್ಲಿ ಕರೆದುಕೊಂಡು ಹೋಗಿದ್ದಾರೋ ಏನೋ ಗೊತ್ತಿಲ್ಲ. ಟಿಕೆಟ್ ತಪ್ಪಿಸಿದಾಗ ಶೆಟ್ಟರ್ಗೆ ದೇಶದ ಹಿತ ಗೊತ್ತಿರಲಿಲ್ವಾ? ನಾವು ಅವರನ್ನ ಬಹಳ ಗೌರವದಿಂದ ನಡೆಸಿಕೊಂಡಿದ್ದೇವೆ. ನನಗೆ ಈವರೆಗೂ ರಾಜೀನಾಮೆ ಪತ್ರ ತಲುಪಿಲ್ಲ. ಶೆಟ್ಟರ್ ಅವರು ಮಾತಾಡಲಿ ಬಳಿಕ ಮುಂದಿನ ದಿನಗಳಲ್ಲಿ ನಾನು ಮಾತಾಡ್ತೇನೆ ಎಂದರು.
ಬೆಂಗಳೂರು: ಲೋಕಸಭೆ ಚುನಾವಣೆ ಹೊಸ್ತಿಲಲ್ಲೇ ರಾಜಕೀಯ ವಲಯದಲ್ಲಿ ಭಾರೀ ಬೆಳವಣಿಗೆಯೊಂದು ನಡೆದಿದೆ. ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಎಂಎಲ್ಸಿ ಜಗದೀಶ್ ಶೆಟ್ಟರ್ (Jagadish Shettar) ಅವರು ಬಿಜೆಪಿಗೆ ಮರು ಸೇರ್ಪಡೆಯಾಗಿದ್ದಾರೆ. ಈ ಬಗ್ಗೆ ಸಚಿವ ಚೆಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. https://ainlivenews.com/amit-shah-talks-successful-former-cm-says-goodbye-to-congress/ ನಗರದಲ್ಲಿ ಮಾತನಾಡಿದ ಅವರು, ಶೆಟ್ಟರ್ ಬಿಜೆಪಿ ಸೇರ್ಪಡೆ ಬಗ್ಗೆ ಗೊತ್ತಿಲ್ಲ ಆಗೊಂದು ವೇಳೆ ಹೋದರೆ ಅದು ವಿಪರ್ಯಾಸ , ಶೆಟ್ಟರ್ ಅಂತ ನಾಯಕರಿಗೆ ಸರಿ ಹೋಗಲ್ಲ ಎಂದು ಹೇಳಿದ್ದಾರೆ. ಶೆಟ್ಟರ್ ಹೋದ್ರೂ ಅದರಿಂದ ನಮಗೆ ನಷ್ಟವೇನಿಲ್ಲ ಆದರೆ ಲಕ್ಷ್ಮಣ್ ಸವದಿಯವರು ಹೋಗಲ್ಲ ನಾನು ಅವರ ಬಳಿಯೂ ಮಾತನಾಡಿದ್ದೇನೆ ಅವರು ಹೋಗಲ್ಲ ಎಂದಿದ್ದಾರೆ
ರಾಮಮಂದಿರ ಉದ್ಘಾಟನೆ ಹಾಗೂ ಬಾಲರಾಮನ ಪ್ರಾಣ ಪ್ರತಿಷ್ಠಾ ಸಮಾರಂಭ ರಾಜಕೀಯಗೊಳಿಸುವುದನ್ನು ಸುಮ್ಮನೆ ನೋಡುತ್ತಾ ಕೂರಲಾಗದು ಎಂದು ನಟಿ ಶ್ರುತಿ ಹರಹರನ್ ಹೇಳಿದ್ದಾರೆ. ಈ ಕುರಿತು ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿರುವ ಅವರು, ಧರ್ಮದ ವಿಷಯದಲ್ಲಿ ರಾಜಕೀಯ ನಡೆಯುತ್ತಿದೆ. ಇದು ಸುಮ್ಮನೆ ನೋಡುತ್ತಾ ಕೂರಬೇಕಾದ ಸಂಗತಿಯಲ್ಲ ಎಂದು ಬರೆದುಕೊಂಡಿದ್ದಾರೆ. ‘ಜೈ ಶ್ರೀರಾಮ್’ ಎಂದು ಹೇಳಲು ಯಾವುದೇ ತೊಂದರೆ ಇಲ್ಲ. ರಾಮನ ಗುಣಗಳಿಂದ ಯಾರು ತಾನೆ ಪ್ರೇರಿತರಾಗುವುದಿಲ್ಲ? ಹನುಮಂತನು ರಾಮ ತನ್ನಲ್ಲಿದ್ದಾನೆ ಎನ್ನುವುದನ್ನು ತೋರಿಸಲು ಎದೆಯನ್ನೇ ಸೀಳಿದ್ದು ಕಾಕತಾಳೀಯವಲ್ಲ. ರಾಮನನ್ನು ನಮ್ಮೊಳಗೆ ನಾವು ಹುಡುಕಿಕೊಳ್ಳಬೇಕು. ಈ ದೃಷ್ಟಿಯಿಂದ ಉದ್ದೇಶಪೂರ್ವಕವಾಗಿಯೇ ರಾಮಾಯಣದೊಳಗೆ ಇದನ್ನು ಸೇರಿಸಲಾಗಿದೆಯೇ? ಪ್ರಶ್ನಿಸಿದ್ದಾರೆ. ಪ್ರಸ್ತುತ ಸಮಯದಲ್ಲಿ ಸಂವಿಧಾನ ನೆನಪಿಸಿಕೊಳ್ಳುವುದು ಏಕೆ ಮುಖ್ಯ? ಸದ್ಯದ ಪರಿಸ್ಥಿತಿಯಲ್ಲಿ ಯಾವುದು ಉತ್ತಮವೋ ಅದರಲ್ಲಿ ಸಾಗಬೇಕು. ಈ ಸಂದರ್ಭದಲ್ಲಿ ಸಂವಿಧಾನ ನೆನೆಯುವುದು ಅಗತ್ಯ. ಏಕೆಂದರೆ, ಧರ್ಮದ ವಿಷಯದಲ್ಲಿ ದೇಶವು ತಟಸ್ಥವಾಗಿರಬೇಕು. ಅಲ್ಲದೆ, ಯಾವುದೇ ನಿರ್ದಿಷ್ಟ ಧರ್ಮವನ್ನುಪೋಷಿಸುವುದು ಅಥವಾ ಅದರ ವಿರುದ್ಧ ತಾರತಮ್ಯ ಮಾಡಬಾರದು ಎಂದು ಸಂವಿಧಾನದಲ್ಲಿ ಉಲ್ಲೇಖಿಸಲಾಗಿದೆ. ಆದರೆ, ಇಂದು…
ಕೊಡಗು: ಕಾಂಗ್ರೆಸ್ ಪಕ್ಷದಲ್ಲಿ ಶೆಟ್ಟರ್ʼಗೆ ಯಾವುದೇ ಅನ್ಯಾಯ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಜಗದೀಶ್ ಶೆಟ್ಟರ್ ಬಿಜೆಪಿಗೆ ಮರು ಸೇರ್ಪಡೆಯಾಗಿರುವ ವಿಚಾರಕ್ಕೆ ಕೊಡಗು ಜಿಲ್ಲೆ ವಿರಾಜಪೇಟೆಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ನಾವು ಅವರಿಗೆ ಟಿಕೆಟ್ ಕೊಟ್ಟಿದ್ದೆವು. ಚುನಾವಣೆಯಲ್ಲಿ ಸೋತರೂ ಶೆಟ್ಟರನ್ನು ಎಂಎಲ್ಸಿ ಮಾಡಿದ್ದೆವು. ಕಾಂಗ್ರೆಸ್ ಪಕ್ಷದಲ್ಲಿ ಅವರಿಗೆ ಯಾವುದೇ ಅನ್ಯಾಯ ಆಗಿಲ್ಲ. ಒಮ್ಮೆ ಅವರು ನನಗೆ ಬಿಜೆಪಿಯಲಿ ಅವಮಾನ ಆಗಿದೆ ಮತ್ತೆ ಹೋಗಲ್ಲ ಎಂದಿದ್ದರು ಎಂದು ತಿಳಿಸಿದ್ದಾರೆ. ಇನ್ನು ನಿಗಮ ಮಂಡಳಿ ನೇಮಕ ವಿಚಾರ ಸಂಬಂಧ ಮಾತನಾಡಿದ ಸಿಎಂ, ನಾವೇನು ಗುಲಾಮರಾ ಎಂಬ ಸಚಿವ ಕೆ ರಾಜಣ್ಣ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ. ಒಬ್ವೊಬ್ಬರು ಒಂದೊಂದು ಹೆಸರನ್ನ ಸಜೆಸ್ಟ್ ಮಾಡ್ತಾರೆ. https://ainlivenews.com/amit-shah-talks-successful-former-cm-says-goodbye-to-congress/ ಈ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತೆ ಎಂದು ತಿಳಿಸಿದ್ದಾರೆ. ಲೋಕಸಭೆ ಚುನಾವಣೆ ಹೊಸ್ತಿಲಲ್ಲೇ ರಾಜಕೀಯ ವಲಯದಲ್ಲಿ ಭಾರೀ ಬೆಳವಣಿಗೆಯೊಂದು ನಡೆದಿದೆ. ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಎಂಎಲ್ಸಿ ಜಗದೀಶ್ ಶೆಟ್ಟರ್ (Jagadish Shettar) ಅವರು ಬಿಜೆಪಿಗೆ ಮರು ಸೇರ್ಪಡೆಯಾಗಿದ್ದಾರೆ. ಈ ವಿಚಾರ ರಾಜಕೀಯ…
ಬೆಂಗಳೂರು : ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ತೊರೆದು ಮರಳಿ ಬಿಜೆಪಿಗೆ ವಾಪಾಸ್ ಬಂದಿರುವುದು ಅತ್ಯಂತ ಸಂತೋಷ ತಂದಿದೆ, ಲೋಕಸಭಾ ಚುನಾವಣೆಯಲ್ಲಿ ಮೋದಿ ಮತ್ತೆ ಪ್ರಧಾನಿಯಾಗುವುದು ಖಚಿತ ಎಂದು ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ಅಭಿಪ್ರಾಯಪಟ್ಟರು. ನಗರದ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕದ ಪ್ರಭಾವಿ ಬಿಜೆಪಿಯ ಕಟ್ಟಾಳು ಜಗದೀಶ್ ಶೆಟ್ಟರ್ ಅವರು ಕಾಲದಿಂದಲೂ ಸಂಘ ಪರಿವಾರದ ಶಿಸ್ತಿನ ಸಿಪಾಯಿ, ಸರ್ಕಾರದ ಅನೇಕ ಅಭಿವೃದ್ದಿಕಾರ್ಯಗಳನ್ನು ಮಾಡಿ ಸಿಎಂ ಪಟ್ಟಕ್ಕೆ ಏರಿದ್ದರು. ಸದ್ಯ, ಬಿಜೆಪಿಗೆ ಶೆಟ್ಟರ್ ವಾಪಾಸ್ ಬಂದಿದ್ದಾರೆ. ಈಗ ಯಾಕೆ ಬಂದ್ರು ಅಂತ ಕಾರಣ ಹುಡುಕೋ ಸಮಯ ಇದಲ್ಲ, ಲೋಕಸಭೆ ಚುನಾವಣೆಯಲ್ಲಿ ಈ ಭಾರಿ 28ಕ್ಕೆ 28 ಗೆಲ್ಲಬೇಕು. ಡಿಕೆಶಿ ಹೇಳ್ತಿದ್ರು ಶೆಟ್ಟರ್ ಹೋಗಲ್ಲ ಅಂತ. ಈಗ ಶೆಟ್ಟರ್ ವಾಪಸ್ ಬಂದಿದ್ದಾರೆ. ನರೇಂದ್ರ ಮೋದಿ ಅವರು ಮೂರನೇ ಭಾರಿ ಪ್ರಧಾನಿ ಆಗಬೇಕು. INDI ಒಕ್ಕೂಟದಿಂದ ಮಮತಾ, ಪಂಜಾಬ್ ಸಿಎಂ ವಾಪಸ್ ಹೋಗಿದ್ದಾರೆ. ಒಕ್ಕೂಟ ಛಿದ್ರ, ಛಿದ್ರ ಆಗಿದೆ. ಶೆಟ್ಟರ್ ಈಗಾಗಲೇ ಬಿಜೆಪಿಗೆ ವಾಪಸ್ ಬಂದಿದ್ದಾರೆ, ಬೇರೆ ಯಾರು…
ನವದೆಹಲಿ: ಕಾಂಗ್ರೆಸ್ ಪಕ್ಷದಿಂದ ಮತ್ತೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದ ಬಳಿಕ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಮಾತನಾಡಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಸಂದರ್ಭದಲ್ಲಿ ಅವರು ಕೂಡ ಒಳ್ಳೆಯ ರೀತಿಯಲ್ಲಿ ಗೌರವ ಸ್ಥಾನ-ಮಾನವನ್ನು ಕೊಟ್ಟಿದ್ದಾರೆ ಎಂದರು. ಇಲ್ಲಿಯವರೆಗೆ ಸಹಕಾರ ಕೊಟ್ಟಿದಕ್ಕಾಗಿ ಡಿ.ಕೆ ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಈ ಸಂದರ್ಭದಲ್ಲಿ ಜಗದೀಶ್ ಶೆಟ್ಟರ್ ಧನ್ಯವಾದಗಳನ್ನು ತಿಳಿಸಿದ್ದಾರೆ. ಇನ್ನೂ ಎಂಎಲ್ಸಿ ಸ್ಥಾನಕ್ಕೆ ಇ-ಮೇಲ್ ಮೂಲಕ ರಾಜೀನಾಮೆ ಸಲ್ಲಿಕೆ ಮಾಡಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ಗೂ ರಾಜೀನಾಮೆ ಸಲ್ಲಿಸಿದ್ದೇನೆ. 8-9 ತಿಂಗಳಿನಿಂದಲೂ ಕಾಂಗ್ರೆಸ್ಸಲ್ಲಿ ಸಾಕಷ್ಟು ಒತ್ತಡವಿತ್ತು. ಇದೀಗ ನಾನು ಬಿಜೆಪಿ ಮರು ಸೇರ್ಪಡೆಯಾಗಿದ್ದಕ್ಕೆ ಬಹಳ ಸಂತಸವಾಗಿದೆ ಎಂದು ಹೇಳಿದರು. https://ainlivenews.com/amit-shah-talks-successful-former-cm-says-goodbye-to-congress/ ಬಿಜೆಪಿಯಿಂದ ಅಸಮಾಧಾನಗೊಂಡಿದ್ದ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ಗೆ ಸೇರಿದ್ದರು. ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ಇದೀಗ ಮತ್ತೆ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಇಂದು ದೆಹಲಿಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಜೊತೆಯಲ್ಲಿ ಅಮಿತ್ ಶಾ ಅವರನ್ನು ಭೇಟಿಯಾಗಿ ಸುದೀರ್ಘವಾದ ಚರ್ಚೆ…