ಮೈಸೂರು: ಬರ ಪರಿಹಾರದ ಮೊದಲ ಕಂತಿನಡಿ ಪ್ರತಿಯೊಬ್ಬ ರೈತನಿಗೂ ತಲಾ 2,000 ರೂ. ಹಣ ಮುಂದಿನ ಒಂದು ವಾರದೊಳಗೆ ಆತನ ಖಾತೆಗೆ ಜಮೆಯಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಪಿರಿಯಾಪಟ್ಟಣ ತಾಲೂಕಿನ ಬೈಲುಕುಪ್ಪೆಯಲ್ಲಿ ಮಾತ್ನಾಡಿದ ಅವರು, ““ಕೇಂದ್ರ ಸರ್ಕಾರ ಇನ್ನೂ ಕರ್ನಾಟಕ ರಾಜ್ಯಕ್ಕೆ ಬರ ಪರಿಹಾರ ಕೊಟ್ಟಿಲ್ಲ. 2 ತಿಂಗಳ ಹಿಂದೆಯೇ ಖುದ್ದಾಗಿ ಭೇಟಿ ನೀಡಿ ಪರಿಹಾರಕ್ಕೆ ಮನವಿ ಸಲ್ಲಿಸಿದ್ದೆ. https://ainlivenews.com/amit-shah-talks-successful-former-cm-says-goodbye-to-congress/ ಬೇಗನೆ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡಿ’’ ಎಂದು ಕೇಳಿದ್ದೆವು. ಪ್ರಧಾನಿ ಬೆಂಗಳೂರಿಗೆ ಬಂದಾಗಲೂ ಬರ ಪರಿಹಾರ ನೀಡುವಂತೆ ಕೇಳಿದ್ದೆ. ಸದ್ಯಕ್ಕೆ ರಾಜ್ಯದಲ್ಲಿ ನಾವೇ ಬರ ಪರಿಸ್ಥಿತಿ ನಿರ್ವಹಣೆ ಮಾಡುತ್ತಿದ್ದೇವೆ’’ ಎಂದು ಹೇಳಿದರು. “ರಾಜ್ಯ ಸರ್ಕಾರವೇ ಈವರೆಗೆ 550 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ರೈತರಿಗೆ 2,000 ರೂಪಾಯಿ ಬರ ಪರಿಹಾರಕ್ಕಾಗಿ ನೀಡುತ್ತಿದ್ದೇವೆ. ಒಂದು ವಾರದೊಳಗೆ ಎಲ್ಲಾ ರೈತರ ಖಾತೆಗೆ ಮೊದಲ ಕಂತಿನ ಹಣ ತಲುಪುತ್ತೆ’’ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
Author: AIN Author
ಮೈಸೂರು: ನಾವೇನು ಹಿಂದೂಗಳಲ್ಲವೇ? ಸಿದ್ದರಾಮಯ್ಯ ಅವರ ಹೆಸರಿನಲ್ಲಿ ರಾಮ, ನನ್ನ ಹೆಸರಿನಲ್ಲಿ ಶಿವ ಇದ್ದಾನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಪಿರಿಯಾಪಟ್ಟಣ ತಾಲ್ಲೂಕಿನ 79 ಗ್ರಾಮಗಳ 150 ಕೆರೆಗಳಿಗೆ ಕಾವೇರಿ ನೀರು ತುಂಬಿಸುವ ಮುತ್ತಿನಮುಳುಸೋಗೆ ಯೋಜನೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮಗೆ ಭಾವನೆಗಳಿಗಿಂತ ಜನರಿಗೆ ಬದುಕು ಮುಖ್ಯ. ಕೆಲವೊಬ್ಬರು ಭಾವನೆಯ ಮೇಲೆ ರಾಜಕೀಯ ಮಾಡಲು ಹೊರಟಿದ್ದಾರೆ. https://ainlivenews.com/amit-shah-talks-successful-former-cm-says-goodbye-to-congress/ ನಾವೇನೂ ಹಿಂದೂಗಳಲ್ಲವೇ, ಆಂಜನೇಯ ನಮ್ಮ ದೇವರಲ್ಲವೇ?, ನಮಗೆಲ್ಲಾ ದೇವರ ಮೇಲೆ ನಂಬಿಕೆ ಇಲ್ಲವೇ? ಎಂದು ಪ್ರಶ್ನೆ ಮಾಡಿದ್ದಾರೆ. ಸಿದ್ದರಾಮಯ್ಯ ಅವರ ಹೆಸರಿನಲ್ಲಿ ರಾಮನಿದ್ದಾನೆ, ನನ್ನ ಹೆಸರಿನಲ್ಲಿ ಶಿವ, ವೆಂಕಟೇಶ್ ಅವರ ಹೆಸರಿನಲ್ಲಿ ವೆಂಕಟೇಶ, ಶಿವನ ಅವತಾರ ಮಹದೇವನ ಹೆಸರಿನ ಎಚ್.ಸಿ. ಮಹದೇವಪ್ಪ ಇಲ್ಲವೇ?, ನಾವೇನೂ ಹಿಂದೂಗಳಲ್ಲವೇ? ನಮ್ಮೆಲ್ಲರ ಬದುಕಿಗೆ ನಮ್ಮದೇ ಆದ ವಿಚಾರ ಇರುತ್ತದೆ ಎಂದರು.
ನವದೆಹಲಿ: ಕಾಂಗ್ರೆಸ್ ಪಕ್ಷ ಸೇರಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಇಂದು ಬಿಜೆಪಿಗೆ ಮರುಸೇರ್ಪಡೆಯಾಗಿದ್ದಾರೆ. ಇಂದು ಕಾಂಗ್ರೆಸ್ಗೆ ರಾಜೀನಾಮೆ ನೀಡಿ ಬಿಜೆಪಿಗೆ ಮರುಸೇರ್ಪಡೆಯಾಗಿದ್ದಾರೆ. ಅಲ್ಲದೇ ಪರಿಷತ್ ಸದಸ್ಯತ್ವ ಸ್ಥಾನಕ್ಕೆ ಇಂದೇ ರಾಜಿನಾಮೆ ನೀಡುತ್ತಾರೆ ಎಂದು ಹೇಳಲಾಗುತ್ತಿದೆ. ಹೈಕಮಾಂಡ್ ಜೊತೆ ಚರ್ಚಿಸಲು ಶೆಟ್ಟರ್ ಈಗಾಗಲೇ ದೆಹಲಿ ಬಿಜೆಪಿ ಕಚೇರಿಗೆ ತೆರಳಿದ್ದು, ಕೆಲವೇ ಕ್ಷಣಗಳಲ್ಲಿ ಶೆಟ್ಟರ್ ಅಧಿಕೃತ ಘೋಷಣೆ ಮಾಡುವ ಸಾಧ್ಯತೆಯಿದೆ. ಲೋಕಸಭಾ ಚುನಾವಣೆಗೆ ಟಿಕೆಟ್ ನೀಡುವಂತೆ ಶೆಟ್ಟರ್ ಅಮಿತ್ ಶಾ ಮುಂದೆ ಬೇಡಿಕೆ ಇಟ್ಟಿದ್ದಾರೆ. ಕೆಲವೇ ಕ್ಷಣಗಳಲ್ಲಿ ಅಧಿಕೃತವಾಗಿ ಬಿಜೆಪಿಗೆ ಶೆಟ್ಟರ್ ಮರುಸೇರ್ಪಡೆಯಾಗಲಿದ್ದು, ಕಾಂಗ್ರೆಸ್ಗೆ ಗುಡ್ಬೈ ಹೇಳಲಿದ್ದಾರೆ ಎನ್ನಲಾಗುತ್ತಿದೆ. ಅಲ್ಲದೇ ಕೇಂದ್ರ ಬಿಜೆಪಿ ಕಚೇರಿಯಲ್ಲಿ ಶೆಟ್ಟರ್ ಬಿಜೆಪಿ ಮರುಸೇರ್ಪಡೆಯಾಗುವ ಸಾಧ್ಯತೆಯಿದೆ. https://ainlivenews.com/shetter-resigns-as-a-member-of-vidhan-parishad-resignation-letter-submitted-to-dk/ ಮಾಜಿ ಸಿಎಂ ಯಡಿಯೂರಪ್ಪ ಜೊತೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮಾತುಕತೆ ನಡೆಸಿದ್ದು, ಬಿಜೆಪಿಗೆ ವಾಪಸ್ ಬರುವಂತೆ ಜಗದೀಶ್ ಶೆಟ್ಟರ್ಗೆ ಯಡಿಯೂರಪ್ಪ ಆಹ್ವಾನ ಕೊಟ್ಟಿದ್ದರು. ವರಿಷ್ಠರನ್ನ ಒಪ್ಪಿಸುತ್ತೇವೆ, ವರಿಷ್ಠರ ಜೊತೆ ಮಾತುಕತೆ ನಡೆಸುತ್ತೇವೆ ಎಂದು ಯಡಿಯೂರಪ್ಪ ಹೇಳಿದ್ದರು. ನಾನು ಓಪನ್…
ಬೆಂಗಳೂರು: ಬಿಜೆಪಿಯಿಂದ (BJP) ಅಸಮಾಧಾನಗೊಂಡು ಕಾಂಗ್ರೆಸ್ ಪಕ್ಷ ಸೇರಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ (Jagadish Shettar) ಇಂದು ಬಿಜೆಪಿಗೆ ಮರುಸೇರ್ಪಡೆಯಾಗಿದ್ದಾರೆ. ಇಂದು ಕಾಂಗ್ರೆಸ್ಗೆ (Congress) ರಾಜೀನಾಮೆ ನೀಡಿ ಬಿಜೆಪಿಗೆ ಮರುಸೇರ್ಪಡೆಯಾಗಿದ್ದಾರೆ. ಅಲ್ಲದೇ ಪರಿಷತ್ ಸದಸ್ಯತ್ವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಹೈಕಮಾಂಡ್ ಜೊತೆ ಚರ್ಚಿಸಿ ಶೆಟ್ಟರ್ ಜೆಪಿ ನಡ್ಡಾ ನೇತೃತ್ವದಲ್ಲಿ ಬಿಜೆಪಿಗೆ ಮರುಸೇರ್ಪಡೆಯಾಗಿದ್ದಾರೆ. ಲೋಕಸಭಾ ಚುನಾವಣೆಗೆ (Lok Sabha Election) ಟಿಕೆಟ್ ನೀಡುವಂತೆ ಶೆಟ್ಟರ್ ಅಮಿತ್ ಶಾ (Amit Shah) ಮುಂದೆ ಬೇಡಿಕೆ ಇಟ್ಟಿದ್ದಾರೆ. ಅಲ್ಲದೆ ಕರ್ನಾಟಕ ವಿಧಾನಪರಿಷತ್ತು ಸದಸ್ಯತ್ವಕ್ಕೆ ಈ ದಿನ ನಾನು ನನ್ನ ಸ್ವ-ಇಚ್ಛೆಯಿಂದ ರಾಜೀನಾಮೆ ಸಲ್ಲಿಸಿದ್ದೇನೆ. ದಯವಿಟ್ಟು ನನ್ನ ರಾಜೀನಾಮೆಯನ್ನು ಸ್ವೀಕರಿಸಿಬೇಕಾಗಿ ವಿನಂತಿ. ಇಲ್ಲಿಯವರೆಗೆ ತಾವು ನೀಡಿದ ಸಹಕಾರಕ್ಕಾಗಿ ವಂದನೆಗಳು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಸ್ಪೀಕರ್ ಬಸವರಾಜ ಹೊರಟ್ಟಿ ಅವರಿಗೆ ಬರೆದ ತಮ್ಮ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ
ಉತ್ತರ ಪ್ರದೇಶ: ಅಯೋಧ್ಯೆ ರಾಮಮಂದಿರದಲ್ಲಿ ಗರ್ಭಗುಡಿಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠೆಯಾದ ನಂತರದ ಮೊದಲ ದಿನವಾದ ರಾಮಲಲ್ಲಾಗೆ (Ram Lalla) ಆನ್ಲೈನ್ನಲ್ಲಿ 3 ಕೋಟಿ 17 ಲಕ್ಷ ರೂ. ಕಾಣಿಕೆ ಹರಿದುಬಂದಿದೆ. ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಟ್ರಸ್ಟಿ ಅನಿಲ್ ಮಿಶ್ರಾ ಮಾತನಾಡಿ, ಪ್ರಾಣ ಪ್ರತಿಷ್ಠೆಯ ದಿನದಂದು 10 ದೇಣಿಗೆ ಕೌಂಟರ್ಗಳನ್ನು ತೆರೆಯಲಾಗಿದೆ. ಇದಲ್ಲದೆ, ದೇಶ ಮತ್ತು ಪ್ರಪಂಚದಾದ್ಯಂತದ ಅನೇಕ ಭಕ್ತರು ಶ್ರೀರಾಮನಿಗೆ ಆನ್ಲೈನ್ ದೇಣಿಗೆಗಳನ್ನು ಕಳುಹಿಸಿದ್ದಾರೆ. ಮಂಗಳವಾರ 5 ಲಕ್ಷಕ್ಕೂ ಹೆಚ್ಚು ಭಕ್ತರು ದೇವಾಲಯಕ್ಕೆ ಭೇಟಿ ನೀಡಿದ್ದರು. ಬುಧವಾರ ಅಷ್ಟೇ ಸಂಖ್ಯೆಯಲ್ಲಿ ಭೇಟಿ ನೀಡಿದರು. ಮಂಗಳವಾರ ಆನ್ಲೈನ್ನಲ್ಲಿ 3.17 ಕೋಟಿ ರೂ. ಕಾಣಿಕೆ ಬಂದಿದೆ. ಬುಧವಾರ ಪಡೆದ ಮೊತ್ತವನ್ನು ಮರುದಿನ ಕೋಷ್ಟಕದ ನಂತರ ಬಹಿರಂಗಪಡಿಸಲಾಗುವುದು ಎಂದು ಮಿಶ್ರಾ ಅವರು ತಿಳಿಸಿದ್ದಾರೆ. https://ainlivenews.com/dron-pratap-is-accused-of-serious-fraud/ ಪ್ರತಿ ಸೋಮವಾರ ಮಂದಿರದ ಹುಂಡಿ ಎಣಿಕೆ ಕಾರ್ಯ ನಡೆಯಲಿದೆ. ರಾಮಮಂದಿರ ಆವರಣದಲ್ಲಿ 10 ಕೌಂಟರ್ ವ್ಯವಸ್ಥೆ ಮಾಡಲಾಗಿದೆ. ಪ್ರಾಣ ಪ್ರತಿಷ್ಠಾಪನೆ ದಿನ ದೇಣಿಗೆ ಸ್ವೀಕರಿಸಲು 10 ಕೌಂಟರ್…
ರಾಮ್ ಲಲ್ಲಾ ಮೂರ್ತಿ (Ram Lalla)ಮಾಡುವ ಮೂಲಕ ಜಗತ್ ಪ್ರಸಿದ್ಧಿ ಪಡೆದಿರುವ ಮೈಸೂರಿನ ಅರುಣ್ ಯೋಗಿರಾಜ್ (Arun Yogiraj)ಗೂ ಸಿನಿಮಾ ರಂಗಕ್ಕೂ ನಂಟಿದೆ. ಮೈಸೂರಿನ ವಿಷ್ಣುವರ್ಧನ್ (Vishnuvardhan) ಸ್ಮಾರಕದಲ್ಲಿ ತಲೆಯೆತ್ತಿ ನಿಂತಿರುವ ಡಾ.ವಿಷ್ಣುವರ್ಧನ್ ಅವರ ಪುತ್ಥಳಿಯನ್ನು (Putthali) ತಯಾರು ಮಾಡಿದ್ದು ಇದೇ ಅರುಣ್ ಯೋಗಿರಾಜ್. ಅರುಣ್ ಯೋಗಿರಾಜ್ ಸ್ಥಳೀಯ ಮಟ್ಟದಲ್ಲಿ ಶಿಲ್ಪಿಕಾರರಾಗಿ ಗುರುತಿಸಿಕೊಂಡಿದ್ದರೂ, ಡಾ.ವಿಷ್ಣುವರ್ಧನ್ ಅವರ ಪ್ರತಿಮೆಯನ್ನು ನಿರ್ಮಾಣ ಮಾಡುವ ಮೂಲಕ ಸಿನಿಮಾ ರಂಗಕ್ಕೂ ಪರಿಚಿತ ಆದರು. ಅದರಲ್ಲೂ ಸ್ಮಾರಕದ ಉದ್ಘಾಟನೆ ದಿನದಂದು ವಿಷ್ಣುವರ್ಧನ್ ಪುತ್ಥಳಿ ಹಾಗೂ ಭಾರತಿ ವಿಷ್ಣುವರ್ಧನ್ ಜೊತೆ ಫೋಟೋ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದ್ದರು. ಇದೀಗ ಅರುಣ್ ಯೋಗಿರಾಜ್ ನ್ಯಾಷಿನಲ್ ಸ್ಟಾರ್ ಆಗಿ ಬದಲಾಗಿದ್ದಾರೆ. ಇವರದ್ದೇ ಕಲ್ಪನೆಯಲ್ಲಿ ತಯಾರಾದ ರಾಮ್ ಲಲ್ಲಾ ಮೂರ್ತಿಯು ಆಯ್ಕೆಯಾದ ನಂತರ ಅರುಣ್ ಸಖತ್ ಫೇಮಸ್ ಆಗಿದ್ದಾರೆ. ಇವರ ಕಲ್ಪನೆಯಲ್ಲಿ ಅರಳಿದ ಪ್ರತಿಮೆಗಳು ಇದೀ ಒಂದೊಂದೇ ಬೆಳಕಿಗೆ ಬರುತ್ತಿವೆ. ಅರುಣ್ ಯೋಗಿರಾಜ್ ಬೆಂಗಳೂರಿಗೆ ಬಂದಿಳಿದ್ದಾರೆ. ಜೊತೆಗೆ ಪಬ್ಲಿಕ್ ಟಿವಿ ಮುಖ್ಯಸ್ಥ ಹೆಚ್.ಆರ್. ರಂಗನಾಥ್ ಅವರ ಜೊತೆ…
ನವದೆಹಲಿ: ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆಯಲು ಆರಂಭವಾಗಿದೆ.ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಮತ್ತೆ ಬಿಜೆಪಿ ಸೇರ್ಪಡೆಯಾಗಲು ನಿರ್ಧರಿಸಿದ್ದಾರೆ. ದೆಹಲಿಯಲ್ಲಿ ಇಂದು ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ಬಿಜೆಪಿ ಸೇರ್ಪಡೆಯಾಗುವುದು ಖಚಿತವಾಗಿದೆ. https://ainlivenews.com/dron-pratap-is-accused-of-serious-fraud/ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಜಗದೀಶ್ ಶೆಟ್ಟರ್ ಅವರು ದೆಹಲಿಯಲ್ಲಿನ ಅಮಿತ್ ಶಾ ನಿವಾಸದಲ್ಲಿ ಇಂದು ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಮಾತುಕತೆ ವೇಳೆ ಶೆಟ್ಟರ್ ಮನವೋಲಿಸುವಲ್ಲಿ ಅಮಿತ್ ಶಾ ಯಶಸ್ವಿಯಾಗಿದ್ದು, ಪಕ್ಷಕ್ಕೆ ಮರಳಲು ಶೆಟ್ಟರ್ ಒಪ್ಪಿಗೆ ಸೂಚಿಸಿದ್ದಾರೆ. ಬಿಜೆಪಿ ಸೇರ್ಪಡೆ ಬಗ್ಗೆ ಶೆಟ್ಟರ್ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ ಎಂದು ಬಿಜೆಪಿ ಉನ್ನತ ಮೂಲಗಳಿಂದ ತಿಳಿದುಬಂದಿದೆ.
ಬೆಂಗಳೂರು: ಶೆಟ್ಟರ್ ಸೇರಿ ಬಿಜೆಪಿ ಬಿಟ್ಟವರನ್ನು ವಾಪಸ್ ಕರೆತರುವ ವಿಚಾರ ಬೆಂಗಳೂರಿನಲ್ಲಿ ಬಿಜೆಪಿ ಶಾಸಕ ಸುನಿಲ್ ಕುಮಾರ್ ಹೇಳಿದ್ದಾರೆ. ಪಕ್ಷ ಬಿಟ್ಟು ಹೋದವರನ್ನು ವಾಪಸ್ ಕರೆತರುವ ಕೆಲಸ ಮಾಡ್ತವೆ ಜಗದೀಶ್ ಶೆಟ್ಟರ್ ಜೊತೆ ಹೈಕಮಾಂಡ್ ನಾಯಕರು ಮಾತಾಡ್ತಾರೆ ಚುನಾವಣೆಯಲ್ಲಿ ಗೆಲ್ಲುವ ದೃಷ್ಟಿಯಿಂದ ಕರೆತರುವ ಕೆಲಸ ಮಾಡ್ತವ ಎಲ್ಲರನ್ನೂ ಕೆರತಂದು ಒಟ್ಟಾಗಿ ಹೋಗುವ ಕೆಲಸ ಮಾಡುತ್ತೇವೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಹೇಳಿಕೆ ಶೆಟ್ಟರ್ ಸೇರಿ ಬಿಜೆಪಿ ಬಿಟ್ಟವರನ್ನು ವಾಪಸ್ ಕರೆತರುವ ವಿಚಾರ ಬಿಜೆಪಿಯಲ್ಲಿ ಬಿರುಸು ಪಡೆದುಕೊಂಡ ರಾಜಕೀಯ ಚಟುವಟಿಕೆ ಶೆಟ್ಟರ್ ಸಂಪರ್ಕಿಸಲು ಪ್ರಯತ್ನಿಸುತ್ತಿರುವ ಬಿಜೆಪಿ ಹೈಕಮಾಂಡ್ ಈಗಾಗಲೇ ಶೋಭಾ ಕರಂದ್ಲಾಜೆ ಮತ್ತಿತರ ನಾಯಕರಿಂದ ಭೇಟಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮೂಲಕವೂ ಶೆಟ್ಟರ್ಗೆ ಗಾಳ ಶೆಟ್ಟರ್ ಬಿಜೆಪಿಗೆ ಮರಳುವುದಕ್ಕೆ ಪ್ರಹ್ಲಾದ್ ಜೋಶಿ ವಿರೋಧ ಹುಬ್ಬಳ್ಳಿ ಜಿಲ್ಲೆಯ ಬಿಜೆಪಿ ಶಾಸಕರಿಂದಲೂ ತೀವ್ರ ಅಸಮಾದಾನ ಪಕ್ಷ ತೊರೆದು ಹೋದವರನ್ನು ಮತ್ತೆ ಕರೆಸೋದು ಬೇಡವೆಂಬ ವಾದ ಶೆಟ್ಟರ್ ಬಿಜೆಪಿಗೆ ವಾಪಸ್ ಆಗದಿದ್ದರೂ ನಷ್ಟವಿಲ್ಲ…
ಪ್ಯಾರೀಸ್: ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರಾನ್ ಅವರು ಇಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಸಂಜೆ 5.30ಕ್ಕೆ ಮ್ಯಾಕ್ರಾನ್ ಅವರನ್ನು ಸ್ವಾಗತಿಸಲಿದ್ದಾರೆ. ನಂತರ ಉಭಯ ದೇಶಗಳ ನಾಯಕರು ನಗರದಲ್ಲಿರುವ ಐತಿಹಾಸಿಕ, ಸಾಂಸ್ಕೃತಿಕ ಪ್ರಾಮುಖ್ಯತೆ ಪಡೆದಿರುವ ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕಾರ್ಯಾಲಯದಿಂದ ಹೇಳಿಕೆ ಬಿಡುಗಡೆ ಮಾಡಿದೆ. ಮ್ಯಾಕ್ರಾನ್ ವೇಳಾಪಟ್ಟಿ: ಮಧ್ಯಾಹ್ನ 2:30: ಜೈಪುರ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಮ್ಯಾಕ್ರಾನ್ ಅವರು 3:15 ಕ್ಕೆ ಅಮೇರ್ ಕೋಟೆಗೆ ಭೇಟಿ ನೀಡಲಿದ್ದಾರೆ. ಸಂಜೆ 5:30ಕ್ಕೆ ಜಂತರ್ ಮಂತರ್ ಭೇಟಿ ಕೊಡಲಿದ್ದಾರೆ. ಸಂಜೆ 6 ಗಂಟೆಗೆ ರೋಡ್ ಶೋನಲ್ಲಿ ಭಾಗಿಯಾಗಲಿದ್ದಾರೆ. ನಂತರ ಸಂಜೆ 6:15ಕ್ಕೆ ಹವಾ ಮಹಲ್ಗೆ ಭೇಟಿ ಕೊಟ್ಟು 7:15 ಕ್ಕೆ ಪ್ರಧಾನಿಯವರೊಂದಿಗೆ ಸಭೆ ನಡೆಸಲಿದ್ದಾರೆ. ರಾತ್ರಿ 8:50ಕ್ಕೆ ವಿಮಾನದ ಮೂಲಕ ದೆಹಲಿಗೆ ತೆರಳಲಿದ್ದಾರೆ. https://ainlivenews.com/dron-pratap-is-accused-of-serious-fraud/ ಜನವರಿ 26 ರಂದು ದೆಹಲಿಯ ಕರ್ತವ್ಯ ಪಥದಲ್ಲಿ ನಡೆಯುವ 75ನೇ ಗಣರಾಜ್ಯೋತ್ಸವ ನಡೆಯುತ್ತದೆ. ಈ ಕಾರ್ಯಕ್ರಮದಲ್ಲಿ…
ವಿಶ್ವದಾದ್ಯಂತ ನಾಳೆ ಫೈಟರ್ (Fighter) ರಿಲೀಸ್ ಆಗುತ್ತಿದೆ. ಹೃತಿಕ್ ಹಾಗೂ ದೀಪಿಕಾ ಪಡುಕೋಣೆ (Deepika Padukone) ಕಾಂಬಿನೇಷನ್ ನ ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಈ ಹೊತ್ತಲ್ಲಿ ಸೆನ್ಸಾರ್ ಮಂಡಳಿಯು ಚಿತ್ರದ ಎರಡು ದೃಶ್ಯಗಳನ್ನು ಕತ್ತರಿಸುವಂತೆ ಸೂಚಿಸಲಾಗಿದ್ದ ವಿಷಯ ಮುನ್ನೆಲೆಗೆ ಬಂದಿದೆ. ಅದರಲ್ಲೂ ದೀಪಿಕಾ ಪಡುಕೋಣೆ ಬಿಕಿನಿ (Bikini) ಹಾಕಿದ ದೃಶ್ಯಕ್ಕೆ ಕತ್ತರಿ ಹಾಕಲಾಗಿದೆ ಎಂದು ಹೇಳಲಾಗುತ್ತಿದೆ. ಈ ಹಿಂದೆ ಪಠಾಣ್ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ಧರಿಸಿದ್ದರು. ಅದು ವಿವಾದಕ್ಕೆ ಕಾರಣವಾಗಿತ್ತು. ನಂತರ ಸಿನಿಮಾದಿಂದಲೇ ಆ ದೃಶ್ಯವನ್ನು ಕೈ ಬಿಡಲಾಗಿತ್ತು. ಫೈಟರ್ ಸಿನಿಮಾದಲ್ಲೂ ಬಿಕಿನಿಯಲ್ಲಿ ದೀಪಿಕಾ ಕಾಣಿಸುವುದಿಲ್ಲ ಎನ್ನುವುದು ಸದ್ಯದ ವರ್ತಮಾನ. ಒಂದು ಕಡೆ ಬಿಕಿನಿ ವಿಚಾರ ಸಾಕಷ್ಟು ಸದ್ದು ಮಾಡುತ್ತಿದ್ದರೆ ಮತ್ತೊಂದು ಕಡೆ ಚಿತ್ರತಂಡ ಬಗ್ಗೆ ಹೊಸ ಸುದ್ದಿಯೊಂದು ಹರಿದಾಡುತ್ತಿದೆ. ಕಲಾವಿದರ ಸಂಭಾವನೆಯಿಂದ ಚಿತ್ರದ ಬಜೆಟ್ ಮಿತಿ ಮೀರಿದೆ ಎಂದು ಈ ಹಿಂದೆ ಸಿನಿಮಾ ವಿಶ್ಲೇಷಕ ಕಮಾಲ್ ಆರ್. ಖಾನ್ ಟ್ವೀಟ್ ಮಾಡಿದ್ದರು. ಬಾಲಿವುಡ್ನ…