Author: AIN Author

ಬೆಂಗಳೂರು : ಸರ್ಕಾರಿ ನೌಕರರಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್​ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡಿದೆ. 2006ರ ನಂತರ ನೇಮಕಾತಿಗೊಂಡ 13,000 ಸರ್ಕಾರಿ ನೌಕರರ ಬೇಡಿಕೆಯಂತೆ ಹೊಸ ಪಿಂಚಣಿ ವ್ಯವಸ್ಥೆಯನ್ನು ರದ್ದುಪಡಿಸಿ, ಹಳೆ ಪಿಂಚಣಿ ವ್ಯವಸ್ಥೆಯನ್ನೇ ಮುಂದುವರಿಸಿ ಸರ್ಕಾರ ಆದೇಶಿಸಿದೆ. ಎನ್​ಪಿಎಸ್​ ಅನ್ನು ಹಿಂಪಡೆದು ಹಳೆ ಪಿಂಚಣಿ (ಓಪಿಎಸ್) ವ್ಯವಸ್ಥೆ ಜಾರಿಗೊಳಿಸಿ ಆರ್ಥಿಕ ಇಲಾಖೆಯ ಉಪ ಕಾರ್ಯದರ್ಶಿ ಅರುಳ್ ಕುಮಾರ್ ಅವರು ಅಧಿಕೃತ ಆದೇಶದ ನಡಾವಳಿಗಳನ್ನು ಪ್ರಕಟಿಸಿದ್ದಾರೆ. ಅಲ್ಲದೆ, ಸರ್ಕಾರ ಹಳೆಯ ಪಿಂಚಣಿ ಯೋಜನೆಗೆ ಒಳಪಡಲು ಆರು ಷರತ್ತುಗಳನ್ನು ವಿಧಿಸಿದೆ. ನಾವು ನುಡಿದಂತೆ ನಡೆದಿದ್ದೇನೆ ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, 2006 ಏಪ್ರಿಲ್‌ ಪೂರ್ವ ನೇಮಕಾತಿ ಅಧಿಸೂಚನೆಯಾಗಿ 2006ರ ನಂತರ ನೇಮಕಾತಿಗೊಂಡ ರಾಜ್ಯ ಸರ್ಕಾರದ ಸುಮಾರು 13,000 ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡಿಸಿ ಆದೇಶ ಹೊರಡಿಸಲಾಗಿದೆ ಎಂದು ಹೇಳಿದ್ದಾರೆ. ನಮ್ಮ ನಿರ್ಧಾರ ನೆಮ್ಮದಿ ನೀಡಿದೆ ಚುನಾವಣೆಗೂ ಪೂರ್ವದಲ್ಲಿ ಎನ್.ಪಿ.ಎಸ್ ನೌಕರರು ಮುಷ್ಕರು ಮಾಡುವ ವೇಳೆ ಸ್ಥಳಕ್ಕೆ ಭೇಟಿ…

Read More

ಚಿತ್ರದುರ್ಗ: “ಯಾವ ಹಿಂದೂಗಳು ಬೇರೆ ಧರ್ಮ ಜಾತಿಯನ್ನು ಗೌರವಿಸುತ್ತಾರೋ ಅವರೇ ನಿಜವಾದ ಹಿಂದೂಗಳು’’ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಚಿತ್ರದುರ್ಗ ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, “ಬಿಜೆಪಿ ಪಕ್ಷದವರು ನಾವು (ಕಾಂಗ್ರೆಸ್ಸಿನವರು) ರಾಮನ ಭಕ್ತರಲ್ಲ ಎಂಬಂತೆ ಬಿಂಬಿಸುತ್ತಾರೆ’’ ಎಂಬ ಪ್ರಶ್ನೆಗೆ ಉತ್ತರಿಸಿದರು. “ದೇವರ ಹೆಸರಿನಲ್ಲಿ ರಾಜಕಾರಣ ಮಾಡುವುದು ಒಳ್ಳೆಯ ಪದ್ಧತಿಯಲ್ಲ. ಸಂವಿಧಾನವೇ ನಮ್ಮ ದೇಶದ ದೇವರು. ಅದನ್ನು ಮನೆಗೆ ಅಡವಿಡಬಾರದು. ಒಂದೊಂದು ದೇವರನ್ನು ಒಂದೊಂದು ಪಕ್ಷಕ್ಕೆ ಹರಡಬಾರದು. ನೀವು (ಬಿಜೆಪಿ) ರಾಮನ ಭಕ್ತರಾದರೆ ಇನ್ನೊಬ್ಬರು ರಾಮನ ವಿರೋಧಿಗಳೇ’’ ಎಂದು ಪ್ರಶ್ನಿಸಿದರು. “ನಾವು ಎಲ್ಲಾ ಧರ್ಮ ದೇವರ ಭಕ್ತರು ಅಧಿಕಾರದಲ್ಲಿದ್ದಾಗ ನಾವು ಬಹಳ ಜವಾಬ್ದಾರಿಯಿಂದ ಇರಬೇಕು’’ ಎಂದು ತಿಳಿಸಿದರು. https://ainlivenews.com/during-the-performance-of-the-play-hanuman-collapsed-on-the-stage-and-died/ ಇದಲ್ಲದೆ, “ಬರುವ ಲೋಕಸಭಾ ಚುನಾವಣೆಯಲ್ಲಿ ಹೈಕಮಾಂಡ್ ಸೂಚಿಸುವಂತೆ ಅಭ್ಯರ್ಥಿಗಳ ಗೆಲ್ಲಿಸಿಕೊಂಡು ಬರುವ ಜವಾಬ್ದಾರಿ ಉಸ್ತುವಾರಿಗಳ ಕೆಲಸವಾಗಿದೆ. ನಾನು ಮಂಗಳೂರು ಉಸ್ತುವಾರಿ ಇದ್ದೇನೆ. ಅಲ್ಲೆಲ್ಲಾ ಒತ್ತು ಕೊಡಲು ಸೂಚಿಸಿದ್ದಾರೆ. ಹಾಲಿ ಸಚಿವರಿಗೂ ಲೋಕಸಭೆಗೆ ಹೋಗಲು ಹೇಳಿದರೆ ನಾವು ತಲೆ ಬಾಗಬೇಕಾಗುತ್ತದೆ. ಪ್ರಜಾ…

Read More

 ಬೆಂಗಳೂರು: ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್‌ ಕೊಟ್ಟಿದ್ದಾರೆ.  80, 000 ಲಂಚ ಪಡೆಯುವಾಗ ಲೋಕಾಯುಕ್ತ  ಅಧಿಕಾರಿಗಳ ಬಲೆಗೆ ಬಿದ್ದ ಬೆಸ್ಕಾಂ AEE..! ನವೀನ್ ಕುಮಾರ್ AEE ಬಂಧಿತ ಆರೋಪಿಯಾಗಿದ್ದು  80000 ಲಂಚ ಪಡೆಯುವಾಗ ಬಲೆಗೆ ಬಿದ್ದ ಅಧಿಕಾರಿಯಾಗಿದ್ದು  ಬೆಂಗಳೂರು ವಿದ್ಯುತ್ ಸರಬರಾಜು ಸಂಸ್ಥೆಯ E9 ಉಪ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಧಿಕಾರಿ. ನಾಗವಾರ ವ್ಯಾಪ್ತಿಯ ಕಾರ್ಯ ಮತ್ತು ಪಾಲನೆ ಘಟಕ ತಣಿಸಂದ್ರದಲ್ಲಿ  ಸಹಾಯಕ ಅಭಿಯಂತರರಾಗಿ ನವೀನ್ ಕುಮಾರ್ ಕಾರ್ಯ ನಿರ್ವಹಿಸುತ್ತಿದ್ದು  80000 ರೂಗಳನ್ನು ಲಂಚವನ್ನು ತೆಗೆದುಕೊಳ್ಳುವಾಗ ಲೋಕಾಯುಕ್ತ ಪೊಲೀಸರಿಗೆ ರೆಡ್ ಹ್ಯಾಂಡಾಗಿ ಬಲೆಗೆ ಬಿದ್ದನವೀನ್‌ ಕುಮಾರ್!

Read More

ಸಾಯಿ ಪಲ್ಲವಿಯ ಸಹೋದರಿ ಪೂಜಾ ಕನ್ನನ್ ತಮ್ಮ ಬಾಯ್​ಫ್ರೆಂಡ್ ಜೊತೆಗೆ ಇತ್ತೀಚೆಗಷ್ಟೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಸಾಯಿ ಪಲ್ಲವಿಯ ಸಹೋದರಿ ಪೂಜಾ ಕನ್ನನ್ ತಮ್ಮ ಬಾಯ್​ಫ್ರೆಂಡ್ ಜೊತೆಗೆ ಇತ್ತೀಚೆಗಷ್ಟೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. Sai pallavi: ತಂಗಿ ಎಂಗೇಜ್‌ʼಮೆಂಟ್‌ʼನಲ್ಲಿ ಕುಣಿದು ಸಂಭ್ರಮಿಸಿದ ಸಾಯಿ ಪಲ್ಲವಿ..! Sai pallavi: ತಂಗಿ ಎಂಗೇಜ್‌ʼಮೆಂಟ್‌ʼನಲ್ಲಿ ಕುಣಿದು ಸಂಭ್ರಮಿಸಿದ ಸಾಯಿ ಪಲ್ಲವಿ..! Sai pallavi: ತಂಗಿ ಎಂಗೇಜ್‌ʼಮೆಂಟ್‌ʼನಲ್ಲಿ ಕುಣಿದು ಸಂಭ್ರಮಿಸಿದ ಸಾಯಿ ಪಲ್ಲವಿ..! Sai pallavi: ತಂಗಿ ಎಂಗೇಜ್‌ʼಮೆಂಟ್‌ʼನಲ್ಲಿ ಕುಣಿದು ಸಂಭ್ರಮಿಸಿದ ಸಾಯಿ ಪಲ್ಲವಿ..! Sai pallavi: ತಂಗಿ ಎಂಗೇಜ್‌ʼಮೆಂಟ್‌ʼನಲ್ಲಿ ಕುಣಿದು ಸಂಭ್ರಮಿಸಿದ ಸಾಯಿ ಪಲ್ಲವಿ..! Sai pallavi: ತಂಗಿ ಎಂಗೇಜ್‌ʼಮೆಂಟ್‌ʼನಲ್ಲಿ ಕುಣಿದು ಸಂಭ್ರಮಿಸಿದ ಸಾಯಿ ಪಲ್ಲವಿ..!

Read More

ಬೆಂಗಳೂರು: ರಾಷ್ಟ್ರಪತಿಗಳ ವಿಶಿಷ್ಟ ಸೇವಾ ಪದಕ (VSM) ಮತ್ತು ಪ್ರಶಂಸನೀಯ ಪದಕ ಪಟ್ಟಿ ಪ್ರಕಟವಾಗಿದ್ದು, ಕರ್ನಾಟಕದ (Karnataka) 21 ಮಂದಿ ಅಧಿಕಾರಿಗಳ ಹೆಸರು ಪ್ರಕಟವಾಗಿದೆ. ಎಡಿಜಿಪಿ ಸೌಮೇಂದು ಮುಖರ್ಜಿ, ಡಿವೈಎಸ್‌ಪಿ ಸುಧೀರ್ ಹೆಗ್ಡೆ ಅವರಿಗೆ ರಾಷ್ಟ್ರಪತಿಗಳ ಪ್ರಶಂಸನೀಯ ಪ್ರಶಸ್ತಿ ನೀಡಲಾಗುತ್ತದೆ. ಅಲ್ಲದೇ ಐಜಿಪಿ ರಮಣ್ ಗುಪ್ತಾ, ಐಜಿಪಿ ಪ್ರವೀಣ್ ಮಧುಕರ್ ಸೇರಿದಂತೆ ಕರ್ನಾಟಕದ 21 ಜನರ ಪಟ್ಟಿ ಬಿಡುಗಡೆಯಾಗಿದೆ. ವಿಶಿಷ್ಟ ಸೇವಾ ಪದಕ ಭಾರತೀಯ ಸಶಸ್ತ್ರ ಪಡೆಗಳಲ್ಲಿ ನೀಡುವ ಒಂದು ಪ್ರಶಸ್ತಿಯಾಗಿದೆ. ಭಾರತೀಯ ಸಶಸ್ತ್ರ ಪಡೆಗಳ ಯಾವುದೇ ಶ್ರೇಣಿಗಳ ಹುದ್ದೆ ಹೊಂದಿರುವವರ ಉನ್ನತ ರೀತಿಯ ವಿಶಿಷ್ಟ ಸೇವೆಯನ್ನು ಗುರುತಿಸಿ ಈ ಪದಕವನ್ನು ನೀಡಲಾಗುತ್ತದೆ. ಈ ಪ್ರಶಸ್ತಿಯನ್ನು ಗಣರಾಜ್ಯೋತ್ಸವದ ಸಂದರ್ಭದಲ್ಲಿ ರಾಷ್ಟ್ರಪತಿಗಳು ನೀಡುತ್ತಾರೆ.

Read More

ಚಿತ್ರದುರ್ಗ:  ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಸೇತುವೆಗೆ ಡಿಕ್ಕಿಯಾದ ಪರಿಣಾಮ ಮೂವರು ಪುಟಾಣಿ ಮಕ್ಕಳು ಸಹಿತ ನಾಲ್ವರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಸಾಣಿಕೆರೆ ಬಳಿ ನಡೆದಿದೆ. ಮೃತರನ್ನು ಲಿಂಗಪ್ಪ (26), ಸಿಂಧುಶ್ರೀ (2), ಹಯ್ಯಾಳಪ್ಪ (5 ತಿಂಗಳು), ರಕ್ಷಾ (3 ತಿಂಗಳು) ಎಂದು ಗುರುತಿಸಲಾಗಿದೆ. ಅಪಘಾತಕ್ಕೀಡಾದವರೆಲ್ಲರೂ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ದಂಡಮ್ಮನಹಳ್ಳಿ ಗ್ರಾಮದ ಕೂಲಿ ಕಾರ್ಮಿಕರಾಗಿದ್ದು, ಕೆಲಸಕ್ಕಾಗಿ ಬೆಂಗಳೂರಿನತ್ತ ಪಯಣ ಬೆಳೆಸಿದ್ದರು. ಒಂದೇ ಕುಟುಂಬದ ಕಾರ್ಮಿಕರಾಗಿದ್ದು, ತಮ್ಮ ಮಕ್ಕಳ ಸಹಿತ ಕಾರಲ್ಲಿ ಹೊರಟಿದ್ದರು. ಬೆಳಗ್ಗಿನ ಜಾವ ನಿದ್ರೆ ಮಂಪರಿನಲ್ಲಿದ್ದ ಕಾರಿನ ಚಾಲಕ ರಸ್ತೆ ಬದಿಯಲ್ಲಿದ್ದ ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.  https://ainlivenews.com/during-the-performance-of-the-play-hanuman-collapsed-on-the-stage-and-died/ ಘಟನೆಯಲ್ಲಿ ಇನ್ನೂ ಮೂವರು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳನ್ನು ಯಲ್ಲಮ್ಮ (30), ಮಲ್ಲಮ್ಮ (20) ಹಾಗೂ ನಾಗಪ್ಪ (35) ಎಂದು ಗುರುತಿಸಲಾಗಿದೆ. ಅವರಲ್ಲಿ ಮಲ್ಲಮ್ಮನ ಸ್ಥಿತಿ ಗಂಭೀರವಾಗಿದೆ. ಘಟನಾ ಸ್ಥಳಕ್ಕೆ…

Read More

ಬಿಗ್ ಬಾಸ್ ಮನೆಯಲ್ಲಿ ಗೆಲುವಿಗಾಗಿ ಸೆಣೆಸುತ್ತಿರುವ ಡ್ರೋನ್ ಪ್ರತಾಪ್ (Drone Pratap) ಮೇಲೆ ಒಂದರ ಮೇಲೆ ಒಂದರಂತೆ ದೂರುಗಳು ದಾಖಲಾಗುತ್ತಿವೆ. ಮೊನ್ನೆಯಷ್ಟೇ ಡಾ.ಪ್ರಯಾಗ್ ಎನ್ನುವವರು ಡ್ರೋಣ್ ಮೇಲೆ ಮಾನನಷ್ಟ ಮೊಕದ್ದಮೆ ಹಾಕಿದ್ದಾರೆ. ಇದೀಗ ಲಕ್ಷ ಲಕ್ಷ ದೋಖಾ ಮಾಡಿರುವ ಆರೋಪ ಕೇಳಿ ಬಂದಿದೆ ಪೂಣಾ ಮೂಲದ ಸಾರಂಗ್ ಮಾನೆ (Sarang Mane) ಎನ್ನುವವರು ಡ್ರೋಣ್ ಪ್ರತಾಪ್ ಗೆ ಬರೋಬ್ಬರಿ 83 ಲಕ್ಷ ರೂಪಾಯಿ ನೀಡಿದ್ದಾರಂತೆ. ಈ ಹಣದಲ್ಲಿ 8 ಡ್ರೋಣ್ ನೀಡುವುದಾಗಿ ಪ್ರತಾಪ್ ಹೇಳಿದ್ದರಂತೆ. ಆದರೆ, ಕೊಟ್ಟ ಮಾತಿನಂತೆ ‍ಪ್ರತಾಪ್ ನಡೆದುಕೊಂಡಿಲ್ಲ ಎನ್ನುವುದು ಮಾನೆ ಆರೋಪ. ಪ್ರತಾಪ್ ಈಗಾಗಲೇ 2 ಡ್ರೋಣ್ ಕಳಿಸಿದ್ದಾರೆ. ಆದರೆ, ಅವು ಸರಿಯಾಗಿ ಕಾರ್ಯ ಮಾಡುತ್ತಿಲ್ಲ. ಒಂದು ವರ್ಷವಾಗಿದೆ ಹಣವನ್ನೂ ಕೊಡುತ್ತಿಲ್ಲ ಎಂದು ಸಾರಂಗ್ ಮಾನೆ. ಆರೋಪ ಮಾಡುತ್ತಿದ್ದಾರೆ. ರೈತರ ಬೆಳೆಗಳಿಗೆ ಕ್ರಿಮಿನಾಶಕ ಔಷಧ ಸಿಂಪಡಿಸುವ ಡ್ರೋಣ್ ಗಳ ಎಕ್ಸಿಬಿಷನ್ ವೇಳೆ ಸಾರಂಗ್ ಮಾನೆ ಅವರಿಗೆ  ಡ್ರೋಣ್ ಪ್ರತಾಪ್ ಪರಿಚವಾಗಿದ್ದರಂತೆ. ರೈತರಿಗೆ ಡ್ರೋಣ್ ಕಳಿಸಿಕೊಡುವ ಟೆಂಡರ್ ಪಡೆದಿದ್ದ…

Read More

ಭಾರತ ಹಾಗೂ ಇಂಗ್ಲೆಂಡ್ ನಡುವಿನ 5 ಟೆಸ್ಟ್​ ಪಂದ್ಯಗಳ ಸರಣಿಯು ಇಂದಿನಿಂದ ಪ್ರಾರಂಭವಾಗಲಿದೆ. ಹೈದರಾಬಾದ್​ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಮೊದಲ ಪಂದ್ಯ ನಡೆಯಲಿದೆ. ಈಗಾಗಲೇ ಭಾರತದ ಆಟಗಾರರು ಭರ್ಜರಿ ಅಭ್ಯಾಸ ನಡೆಸಿದ್ದಾರೆ. ಮತ್ತೊಂದೆಡೆ ಇಂಗ್ಲೆಂಡ್ ವಿಭಿನ್ನ ತಂತ್ರಗಳನ್ನು ಪ್ರಯೋಗಿಸಲು ಮುಂದಾಗಿದೆ. ಭಾರತದಲ್ಲಿ ಟೆಸ್ಟ್​ ಸರಣಿ ಗೆದ್ದು ಇತಿಹಾಸ ನಿರ್ಮಿಸಲು ಬೆನ್​ ಸ್ಟೋಕ್ಸ್​ ಬಳಗ ಕಾಯುತ್ತಿದೆ. ಇತ್ತ, ಅಜೇಯ ದಾಖಲೆ ಮುಂದುವರಿಸಲು ರೋಹಿತ್ ಶರ್ಮಾ ಪಡೆ ಪ್ಲಾನ್ ಮಾಡಿದೆ. ರನ್ ಮೆಷಿನ್ ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಮೊದಲೆರಡು ಪಂದ್ಯಗಳಿಂದ ಹೊರಗುಳಿದಿದ್ದಾರೆ. ಹೀಗಾಗಿ, ನಾಯಕ ರೋಹಿತ್ ಶರ್ಮಾ ಅವರ ಮೇಲೆ ಬ್ಯಾಟಿಂಗ್ ಹೊರೆ ಬೀಳಲಿದೆ. ಇನ್ನೂ ಇಂಗ್ಲೆಂಡ್ ವಿರುದ್ಧ ಹಿಟ್​ಮ್ಯಾನ್ ಶರ್ಮಾ ಅತ್ಯುತ್ತಮ ದಾಖಲೆ ಹೊಂದಿದ್ದಾರೆ. ಆಂಗ್ಲರ ವಿರುದ್ಧ ರೋಹಿತ್ ಘರ್ಜನೆ ಇಂಗ್ಲೆಂಡ್ ವಿರುದ್ಧ ಆಡಿರುವ 17 ಇನ್ನಿಂಗ್ಸ್​ಗಳಲ್ಲಿ ರೋಹಿತ್ 747 ರನ್​ ಸಿಡಿಸಿದ್ದಾರೆ. ಗರಿಷ್ಠ ಸ್ಕೋರ್​ 161 ಆಗಿದ್ದು, 49.80 ಸರಾಸರಿಯಲ್ಲಿ ಎರಡು ಶತಕ ಹಾಗೂ ಮೂರು ಅರ್ಧಶತಕ ರೋಹಿತ್ ಬ್ಯಾಟ್​ನಿಂದ ಸಿಡಿದಿವೆ. ಭಾರತ ತಂಡ…

Read More

ಇಂಫಾಲ್: ಅಸ್ಸಾಂ ರೈಫಲ್ಸ್‌ನ ಸೈನಿಕನೊಬ್ಬ ತನ್ನ ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿ ಬಳಿಕ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಮಣಿಪುರದಲ್ಲಿ ನಡೆದಿದೆ. ಘಟನೆಯಲ್ಲಿ ಆರು ಯೋಧರಿಗೆ ಗಾಯಗಳಾಗಿದ್ದು, ಅವರನ್ನು ಚುರಾಚಂದ್‍ಪುರದ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಆರ್ ಬೆಟಾಲಿಯನ್ ಆವರಣದಲ್ಲಿ ಈ ಘಟನೆ ನಡೆದಿದೆ. ಗುಂಡು ಹಾರಿಸಿದ್ದು ಕಲಹ ಪೀಡಿತ ಮಣಿಪುರದ ಚುರಾಚಂದ್‍ಪುರ ಮೂಲದ ಯೋಧ ಎಂದು ತಿಳಿದುಬಂದಿದೆ. ಗುಂಡಿನ ದಾಳಿಗೆ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.  https://ainlivenews.com/there-are-many-benefits-of-eating-almonds/ ಈ ಬಗ್ಗೆ ಸೇನೆಯ ಅಧಿಕಾರಿಗಳು ಪ್ರತಿಕ್ರಿಯಿಸಿದ್ದು, ಇದೊಂದು ದುರದೃಷ್ಟಕರ ಘಟನೆಯಾಗಿದೆ. ಮಣಿಪುರದಲ್ಲಿ ನಡೆಯುತ್ತಿರುವ ಸಂಘರ್ಷದ ವಿಚಾರವಾಗಿ ಯೋಧರು ಯಾವುದೇ ಸಂಬಂಧವನ್ನು ಹೊಂದಿರಬಾರದು. ಎಲ್ಲಾ ಅಸ್ಸಾಂ ರೈಫಲ್ಸ್‌ನ ಸಿಬ್ಬಂದಿ ಮಣಿಪುರದ ವಿವಿಧ ಸಮುದಾಯಗಳಿಗೆ ಸೇರಿದವರಾಗಿದ್ದಾರೆ. ಮಣಿಪುರದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಎಲ್ಲಾ ಸಿಬ್ಬಂದಿ ಒಟ್ಟಿಗೆ ಉಳಿದುಕೊಂಡು ಕಾರ್ಯನಿರ್ವಹಿಸುತ್ತಿದ್ದಾರೆ ಎಂದಿದ್ದಾರೆ. ಮಣಿಪುರದಲ್ಲಿ ಕಳೆದ ಮೇ ತಿಂಗಳಿನಿಂದ ಮೇಥಿ ಮತ್ತು ಕುಕಿ-ಜೋ ಸಮುದಾಯಗಳ ನಡುವೆ ಜನಾಂಗೀಯ ಹಿಂಸಾಚಾರ (Manipur violence) ನಡೆಯುತ್ತಿದೆ.…

Read More

ವಿಶ್ವಚಾಂಪಿಯನ್​ ಮತ್ತು ಒಲಿಂಪಿಕ್​ ಪದಕ ವಿಜೇತರ ಮೇರಿ ಕೋಂ ಬಾಕ್ಸಿಂಗ್​ಗೆ ವಿದಾಯ ಹೇಳಿದ್ದಾರೆ. 6 ಬಾರಿಯ ವಿಶ್ವ ಚಾಂಪಿಯನ್ ಮತ್ತು 2012ರ ಒಲಿಂಪಿಕ್ ಪದಕ ವಿಜೇತೆ ಮಾಂಗ್ಟೆ ಚುಂಗ್ನೀಜಾಂಗ್ ಮೇರಿ ಕೋಮ್ ಅವರು ಇಂಟರ್ನ್ಯಾಷನಲ್ ಬಾಕ್ಸಿಂಗ್ ಅಸೋಸಿಯೇಷನ್ (IBA) ನಿಯಮಗಳು ಪುರುಷ ಮತ್ತು ಮಹಿಳಾ ಬಾಕ್ಸರ್‌ಗಳು 40 ವರ್ಷ ವಯಸ್ಸಿನವರೆಗೆ ಮಾತ್ರ ಎಲೈಟ್ ಲೇವಲ್ ಬಾಕ್ಸಿಂಗ್‌ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸುತ್ತವೆ. ಹಾಗಾಗಿ ತಮ್ಮ ಬಾಕ್ಸಿಂಗ್ ಕೈಗವಸುಗಳಿಗೆ ರೆಸ್ಟ್ ನೀಡಿದ್ದಾರೆ. 41 ವರ್ಷದ ಮೇರಿ ಕೋಮ್ ಅವರು ಈಗಲೂ ತಮ್ಮಲ್ಲಿ ಬಾಕ್ಸಿಂಗ್ ಹಸಿವು ತಣಿದಿಲ್ಲ. ಎಲೈಟ್ ಲೇವಲ್‌ನಲ್ಲಿ ಆಡುವಷ್ಟು ಸಾಮರ್ಥ್ಯವಿದೆ ಎಂದು ಹೇಳಿಕೊಂಡಿದ್ದಾರೆ. ಆದರೆ ದುರದೃಷ್ಟವಶಾತ್ ವಯಸ್ಸಿನ ಮಿತಿ ಮುಗಿದಿರುವುದರಿಂದ ನಾನು ಯಾವುದೇ ಸ್ಪರ್ಧೆಯಲ್ಲಿ ಸ್ಪರ್ಧಿಸಲು ಸಾಧ್ಯವಿಲ್ಲ. ನಾನು ಹೆಚ್ಚು ಆಡಲು ಬಯಸುತ್ತೇನೆ. ಆದರೆ ನಾನು ಬಲವಂತವಾಗಿ ಬಾಕ್ಸಿಂಗ್ ತೊರೆಯುತ್ತಿದ್ದೇನೆ (ವಯಸ್ಸಿನ ಮಿತಿಯಿಂದಾಗಿ). ನಾನು ನಿವೃತ್ತಿಯನ್ನು ಹೊಂದಲೇಬೇಕು. ನನ್ನ ಜೀವನದಲ್ಲಿ ಎಲ್ಲವನ್ನೂ ಸಾಧಿಸಿದ್ದೇನೆ ಎಂದು ಹೇಳಿದರು.

Read More