Author: AIN Author

ಕಲಬುರ್ಗಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸೂಪರ್ ಮಾರ್ಕೆಟ್ ಶಾಖೆ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು MLC ಬಿಜಿ ಪಾಟೀಲ್ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಸುಂದರೇಶ್ ಬಾಬು ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ರು.. ಉದ್ಘಾಟನೆ ನಂತ್ರ ಪುಟಾಣಿ ಮಕ್ಕಳ ಸಮೂಹ ನೃತ್ಯ ಎಲ್ಲರ ಮನ ಸೆಳೆಯಿತು.ಅದ್ರಲ್ಲೂ ಅಣ್ಣಾವ್ರು ನಟಿಸಿದ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಹಾಡಿಗೆ ಮಕ್ಕಳು ಕುಣಿದು ಕುಪ್ಪಳಿಸಿದ್ದು ವಿಶೇಷವಾಗಿತ್ತು. ಇದೇವೇಳೆ ಕನ್ನಡ ಗೀತೆಗಳನ್ನ ಹಾಡುವ ಮೂಲಕ ಬ್ಯಾಂಕಿನ ಸಿಬ್ಬಂದಿಗಳು ರಾಜ್ಯೋತ್ಸವ ಕ್ಕೆ ಮೆರಗು ತಂದ್ರು.. ಬ್ಯಾಂಕಿನ DGM ಶ್ರೀನಿವಾಸರಾವ್ AGM ಸುಮಾ ಹಾಗು ನೌಕರರ ಸಂಘದ ನವೀನ್ ಕಾಗಲಕರ್ ಸೇರಿ ಇಡೀ ಸಿಬ್ಬಂದಿ ಕನ್ನಡದ ಹಬ್ಬದಲ್ಲಿ ಉಪಸ್ತಿತರಿದ್ದರು.

Read More

ಲಕ್ನೋ: ಇಲ್ಲಿನ ರಸ್ತೆಯೊಂದರಲ್ಲಿ ಸ್ಕೇಟಿಂಗ್‌ ಅಭ್ಯಾಸ ಮಾಡುತ್ತಿದ್ದಾಗ ವೇಗವಾಗಿ ಬಂದ ಎಸ್‌ಯುವಿ ಡಿಕ್ಕಿ ಹೊಡೆದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರ 10 ವರ್ಷದ ಮಗ ಸಾವಿಗೀಡಾಗಿರುವ ಘಟನೆ ನಡೆದಿದೆ. ಮಗುವಿಗೆ ಡಿಕ್ಕಿ ಹೊಡೆದ ನಂತರ ವಾಹನ ವೇಗವಾಗಿ ಹೋಗಿದ್ದು, ಪ್ರಕರಣವನ್ನು ಭೇದಿಸಲು ಐದು ತಂಡಗಳನ್ನು ರಚಿಸಲಾಗಿದೆ. ಪ್ರಕರಣದಲ್ಲಿ ಈಗಾಗಲೇ ಇಬ್ಬರನ್ನು ಬಂಧಿಸಲಾಗಿದೆ.  ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶ್ವೇತಾ ಶ್ರೀವಾಸ್ತವ್ ಅವರ ಪುತ್ರ ನಮಿಶ್ ಮಂಗಳವಾರ ಮುಂಜಾನೆ 5:30 ರ ಸುಮಾರಿಗೆ ನಗರದ ಉನ್ನತ ಮಟ್ಟದ ಗೋಮತಿ ನಗರ ವಿಸ್ತರಣೆ ಪ್ರದೇಶದ ಉದ್ಯಾನದ ಬಳಿ ಸ್ಕೇಟಿಂಗ್ ಮಾಡುತ್ತಿದ್ದಾಗ ವೇಗವಾಗಿ ಬಂದ ಬಿಳಿ ಬಣ್ಣದ ಎಸ್‌ಯುವಿ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಚಾಲಕನ ವೇಗವಾಗಿ ವಾಹನ ಚಲಾಯಿಸಿಕೊಂಡು ಪರಾರಿಯಾಗಿದ್ದಾನೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನಮಿಶ್‌ನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. https://ainlivenews.com/housewifes-body-found-hanging-in-bangalore/ ಬಾಲಕ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಎಸ್‌ಯುವಿಯನ್ನು ಪತ್ತೆಹಚ್ಚಲು ಮತ್ತು ಚಾಲಕನನ್ನು ಗುರುತಿಸಲು ಐದು ತಂಡಗಳನ್ನು ರಚಿಸಲಾಗಿದೆ ಎಂದು ಉಪ ಪೊಲೀಸ್ ಆಯುಕ್ತ ಆಶಿಶ್ ಶ್ರೀವಾಸ್ತವ್‌ ಹೇಳಿದ್ದಾರೆ.…

Read More

ಪಾಕಿಸ್ತಾನ ಕ್ರಿಕೆಟ್‌ ತಂಡ ಇದೀಗ ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲು ಸಜ್ಜಾಗುತ್ತಿದೆ. ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿ ಬಳಿಕ ಪಾಕಿಸ್ತಾನ ತಂಡ ಮೊದಲ ಸರಣಿ ಆಡಲು ಆಸ್ಟ್ರೇಲಿಯಾಕ್ಕೆ ತೆರಳುತ್ತಿದೆ. ಬಾಬರ್‌ ಆಝಮ್‌ ಕ್ಯಾಪ್ಟನ್ಸಿ ಬಿಟ್ಟಿರುವ ಕಾರಣ ಅನುಭವಿ ಆರಂಭಿಕ ಬ್ಯಾಟರ್‌ ಶಾನ್‌ ಮಸೂದ್‌ ಟೆಸ್ಟ್‌ ಕ್ರಿಕೆಟ್‌ ತಂಡದ ನೂತನ ಕ್ಯಾಪ್ಟನ್‌ ಆಗಿ ಆಯ್ಕೆ ಆಗಿದ್ದಾರೆ. ಪಾಕಿಸ್ತಾನ ಕ್ರಿಕೆಟ್‌ ಮಂಡಳಿ (ಪಿಸಿಬಿ) ನವೆಂಬರ್‌ 21ರಂದು 18 ಸದಸ್ಯರ ಟೆಸ್ಟ್ ತಂಡವನ್ನು ಪ್ರಕಟ ಮಾಡಿದೆ. ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ ತಂಡಗಳು 3 ಪಂದ್ಯಗಳ ಟೆಸ್ಟ್‌ ಸರಣಿಯನ್ನು ಆಡಲಿದ್ದು, ಡಿಸೆಂಬರ್‌ 12ರಿಂದ 2024ರ ಜನವರಿ 7ರವರೆಗೆ ಪಂದ್ಯಗಳು ನಡೆಯಲಿವೆ. ಅನುಭವಿ ಓನರ್‌ ಶಾನ್‌ ಮಸೂದ್‌ ತಂಡವನ್ನು ಮುನ್ನಡೆಸಲಿದ್ದಾರೆ. ಬಾಬರ್‌ ಆಝಮ್‌ ಕ್ಯಾಪ್ಟನ್ಸಿ ಬಿಟ್ಟ ಬಳಿಕ ನಡೆಯುತ್ತಿರುವ ಮೊದಲ ಸರಣಿ ಇದಾಗಿದ್ದು, ಪಾಕಿಸ್ತಾನ ತಂಡದ ಪ್ರದರ್ಶನದ ಮೇಲೆ ಪಿಸಿಬಿ ಹದ್ದಿನ ಕಣ್ಣಿಟ್ಟಿದೆ. ಐಸಿಸಿ ಟೆಸ್ಟ್‌ ವಿಶ್ವ ಚಾಂಪಿಯನ್‌ಷಿಪ್‌ ಟೂರ್ನಿಯ 3ನೇ ಆವೃತ್ತಿಯ ಭಾಗವಾಗಿ ಈ ಟೆಸ್ಟ್‌ ಸರಣಿ ನಡೆಯಲಿದೆ.…

Read More

ದಾವಣಗೆರೆ:- ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಅರೆಸ್ಟ್ ಮಾಡಲಾಗಿದೆ. ಹಾವೇರಿ ನಗರದ ಚಾಲಕ ಗಗನ್ ಆನವಟ್ಟಿ (26) ಹಾಗೂ ರಾಣೇಬೆನ್ನೂರು ತಾಲೂಕಿನ ಸುಜಲ್ ಎಸ್. ಜೈನ್ (21) ಬಂಧಿತ ಆರೋಪಿಗಳು. ನಗರದ ಹದಡಿ ರಸ್ತೆಯಲ್ಲಿರುವ ಸರ್ಕಾರಿ ಐಟಿಐ ಕಾಲೇಜು ಕ್ರೀಡಾಂಗಣದ ಒಳಭಾಗದಲ್ಲಿ ಆಟೋದಲ್ಲಿ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದವರ ಮೇಲೆ ದಾಳಿ ಮಾಡಿ ಬಂಧಿಸಲಾಗಿದೆ. ಆರೋಪಿತರ ಬಳಿ ಇದ್ದ ಸುಮಾರು 15 ಸಾವಿರ ರೂಪಾಯಿ ಮೌಲ್ಯದ 490 ಗ್ರಾಂ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ 1‌.50 ಲಕ್ಷ ರೂ. ಬೆಲೆಯ ಆಟೋರಿಕ್ಷಾ ವಶಕ್ಕೆ ಪಡೆದು ತನಿಖೆ ಮುಂದುವರಿಸಲಾಗಿದೆ. ಕೆಟಿಜೆ ನಗರ ಠಾಣೆಯ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಬಂದ ಮೇರೆಗೆ ದಾವಣಗೆರೆ ನಗರ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ಮಲ್ಲೇಶ ಡಿ, ಕೆಟಿಜೆ ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಶಶಿಧರ ಯು. ಜೆ. ಅವರ ಮಾರ್ಗದರ್ಶನದಲ್ಲಿ ಪಿಎಸ್‌ಐ ಸಾಗರ್ ಅತ್ತರವಾಲ ರವರ ನೇತೃತ್ವದಲ್ಲಿ…

Read More

2024ರ ಸಾಲಿನ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿ ಸಲುವಾಗಿ ಡಿಸೆಂಬರ್‌ 19ರಂದು ದುಬೈನಲ್ಲಿ ಆಟಗಾರರ ಹರಾಜು ಪ್ರಕ್ರಿಯೆ ನಡೆಯಲಿದೆ. ಅಂದಹಗಾಎ ಐಪಿಎಲ್‌ 2024 ಟೂರ್ನಿಯ ಮಿನಿ ಆಕ್ಷನ್‌ಗೂ ಮುನ್ನ ಎಲ್ಲಾ 10 ತಂಡಗಳು ತಾವು ಉಳಿಸಿಕೊಂಡ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಬೇಕಿದ್ದು, ಈ ಸಲುವಾಗಿ ನವೆಂಬರ್‌ 26ರ ಗಡುವು ನಿಗದಿಯಾಗಿದೆ. ಹೀಗಾಗಿ ಹಲವು ಫ್ರಾಂಚೈಸಿಗಳು ತಮ್ಮಲ್ಲಿನ ಆಟಗಾರರನ್ನು ಹರಾಜಿಗೂ ಮೊದಲೇ ಅದಲು ಬದಲು ಮಾಡಿಕೊಳ್ಳುವ ಪ್ರಯತ್ನ ನಡೆಸುತ್ತಿವೆ. 2022ರ ಚಾಂಪಿಯನ್ಸ್‌ ಗುಜರಾತ್‌ ಟೈಟನ್ಸ್‌ ಮತ್ತು ಐದು ಬಾರಿಯ ಚಾಂಪಿಯನ್ಸ್‌ ಮುಂಬೈ ಇಂಡಿಯನ್ಸ್‌ ದೊಡ್ಡ ವಹಿವಾಟನ್ನೇ ನಡೆಸಲು ಮುಂದಾಗಿರುವ ಬಗ್ಗೆ ಇತ್ತೀಚಿನ ವರದಿಗಳು ಬಹಿರಂಗ ಪಡಿಸಿವೆ. 2021ರ ಐಪಿಎಲ್‌ ಬಳಿಕ ಮುಂಬೈ ಇಂಡಿಯನ್ಸ್ ತೊರೆದು ಹೊಸ ಫ್ರಾಂಚೈಸಿ ಗುಜರಾತ್‌ ಟೈಟನ್ಸ್‌ ತಂಡಕ್ಕೆ ಕ್ಯಾಪ್ಟನ್ ಆಗಿ ಸೇರಿದ್ದ ಆಲ್‌ರೌಂಡರ್ ಹಾರ್ದಿಕ್‌ ಪಾಂಡ್ಯ ಅವರನ್ನು ಮರಳಿ ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಮುಂಬೈ ಇಂಡಿಯನ್ಸ್‌ ಪ್ರಯತ್ನ ಮಾಡುತ್ತಿದೆ. ಪ್ಲೇಯರ್ಸ್‌ ಟ್ರಾನ್ಸ್‌ಫರ್‌ ವಿಂಡೋ ಬಳಕೆ ಮಾಡಿ ಟೈಟನ್ಸ್‌ ಫ್ರಾಂಚೈಸಿಯ…

Read More

ಬೆಂಗಳೂರು:- ಶೀಘ್ರದಲ್ಲೇ ಬೆಂಗಳೂರಿನಲ್ಲಿ ಚಿರತೆ ಪಡೆ ಕಾರ್ಯಾರಂಭ ಆಗಲಿದೆ ಎಂದು ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ನಗರದ ಹೊರವಲಯದಲ್ಲಿ ಪದೇ ಪದೇ ಚಿರತೆ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಚಿರತೆ ಕಾರ್ಯಪಡೆ ರಚನೆ ಸಂಬಂಧ ಸರ್ಕಾರಿ ಆದೇಶ ಹೊರಡಿಸಲಾಗಿದ್ದು, ಮುಂದಿನ ಎರಡು ದಿನಗಳ ಒಳಗಾಗಿ ಕಾರ್ಯಾರಂಭಿಸಲಿದೆ ಎಂದರು. ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಅರಣ್ಯ ಪಡೆ ಮುಖ್ಯಸ್ಥ ಬ್ರಿಜೇಶ್ ಕುಮಾರ್ ದೀಕ್ಷಿತ್ ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿ ಮಾತನಾಡಿದರು. ಕಳೆದ 2 ವರ್ಷಗಳಲ್ಲಿ ರಾಜ್ಯದಲ್ಲಿ ಸಂಭವಿಸಿರುವ ಆನೆ ದಾಳಿ ಸಾವಿನ ಎಲ್ಲ ಪ್ರಕರಣಗಳ ಕುರಿತಂತೆ ಪರಾಮರ್ಶಿಸಿ, ಯಾವ ಭಾಗದಲ್ಲಿ ಹೆಚ್ಚು ಸಾವು ಸಂಭವಿಸುತ್ತಿದೆ?, ಇದಕ್ಕೆ ಕಾರಣವೇನು? ಎಂಬ ಬಗ್ಗೆ ತಿಳಿದು ಪರಿಹಾರೋಪಾಯಗಳನ್ನು ಕೈಗೊಳ್ಳುವಂತೆ ಸೂಚಿಸಿದರು. ಬಳಿಕ, ಆನೆಗಳು ಯಾವ ಯಾವ ಋತುವಿನಲ್ಲಿ ಯಾವ ಪ್ರದೇಶದಲ್ಲಿ ಕಾಣಿಸಿಕೊಳ್ಳುತ್ತವೆ ಎಂಬ ಬಗ್ಗೆಯೂ ಅಧ್ಯಯನ ನಡೆಸಿ, ಸ್ಥಳೀಯರಿಗೆ ಮುಂಚಿತವಾಗಿಯೇ ಜಾಗೃತಿ ಮೂಡಿಸಲು ಮತ್ತು ಮಾಹಿತಿ ನೀಡಲು ನಿರ್ದೇಶನ ನೀಡಿದರು.…

Read More

ಬೆಂಗಳೂರು:-ಬೆಂಗಳೂರು ಕಂಬಳಕ್ಕೆ ಕ್ಷಣಗಣನೆ ಶುರುವಾಗಿದೆ. ತುಳುಕೂಟಕ್ಕೆ 50 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಪ್ಯಾಲೇಸ್ ಗ್ರೌಂಡ್​ನಲ್ಲಿ ಇದೇ ಮೊದಲ ಬಾರಿಗೆ ಕಂಬಳ ಆಯೋಜಿಸಿದೆ. ಕೋಣಗಳ ಸ್ಪರ್ಧೆಗೆ ಈಗಾಗಲೇ ನೀರಿನ ಟ್ರ್ಯಾಕ್(ಕರೆ) ನಿರ್ಮಿಸಲಾಗಿದ್ದು, ತ್ರಿವರ್ಣಧ್ವಜದ ಬಣ್ಣಗಳಿಂದ ಅಲಂಕರಿಸಲಾಗಿದೆ. ಕಂಬಳದ ಟ್ರ್ಯಾಕ್ 157 ಮೀಟರ್ ಉದ್ದ ಹಾಗೂ 8 ಮೀಟರ್ ಅಗಲವಿದೆ. ಒಟ್ಟು 200ಕ್ಕೂ ಹೆಚ್ಚು ಕೋಣಗಳು ಕಂಬಳಕ್ಕೆ ಇಳಿಯಲಿವೆ. ಕೋಣಗಳಿಗೆ ಸಕಲೇಶಪುರ, ಹಾಸನ, ನೆಲಮಂಗಲ ಮೂರು ಕಡೆ ಕೋಣಗಳ ವಿಶ್ರಾಂತಿಗೆ ಅವಕಾಶ ಕಲ್ಪಿಸಲಾಗಿದ್ದು, ಇಂದು ಕೋಣಗಳು ರಾಜಧಾನಿಗೆ ಬಂದಿಳಿಯಲಿವೆ. ಎರಡು ದಿನದ ಕಂಬಳಕ್ಕೆ ಅಂದಾಜು 6 ರಿಂದ 7 ಲಕ್ಷದಷ್ಟು ಜನರು ಬರುವ ಸಾಧ್ಯತೆ ಇದ್ದು, ಜನರು ಕಂಬಳ ವೀಕ್ಷಿಸಲು ದೊಡ್ಡ ಸ್ಟೇಜ್​​ಗಳನ್ನು ನಿರ್ಮಾಣ ಮಾಡಲಾಗಿದೆ. ವಿಐಪಿ, ವಿವಿಐಪಿ, ಸಾರ್ವಜನಿಕರಿಗೆ ಪ್ರತ್ಯೇಕ ಪಾಸ್​​, ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ದೂರದ ಊರುಗಳಿಂದ ಕಂಬಳಕ್ಕೆ ಬಂದಿರುವ ಕೋಣಗಳ ಬಗ್ಗೆ ಮಾಲೀಕರು ವಿಶೇಷ ಗಮನ ವಹಿಸಿದ್ದಾರೆ. ಕಂಬಳದ ಕೋಣಗಳಿಗೆ ಕುಡಿಯಲು ನೀರು ಸಹ ಮಂಗಳೂರಿನಿಂದಲೇ ತರಲಾಗಿದೆ. ಕಂಬಳದ ಕೋಣಗಳನ್ನು…

Read More

ಹುಬ್ಬಳ್ಳಿ: ಅದು ಹುಬ್ಬಳ್ಳಿಯ ಪ್ರತಿಷ್ಠಿತ ಗಲ್ಲಿಯಲ್ಲಿರುವ ಸರ್ಕಾರಿ ಶಾಲೆ. ಈ ಶಾಲೆಯ ಮುಂದಿರುವ ಅವ್ಯವಸ್ಥೆ ನೋಡಿದರೇ ಯಾವ ಸಮಯಕ್ಕೆ ಏನಾಗುತ್ತದೆಯೋ ಎಂಬ ಆತಂಕ ಸ್ಥಳೀಯರಲ್ಲಿ ಮಾತ್ರವಲ್ಲದೆ ಪಾಲಕರ ಮನಸ್ಸಿನಲ್ಲಿ ಆತಂಕ ಮನೆ ಮಾಡಿದೆ. ಅಷ್ಟಕ್ಕೂ ಏನಿದು ಸ್ಟೋರಿ ಅಂತೀರಾ ತೋರಿಸ್ತಿವಿ ನೋಡಿ.. ಹುಬ್ಬಳ್ಳಿ ವಿದ್ಯುತ್ ಸರಬರಾಜು ನಿಗಮ ಒಂದಿಲ್ಲೊಂದು ಅವ್ಯವಸ್ಥೆಯಿಂದ ಸುದ್ಧಿಯಾಗುತ್ತಲೇ ಇದೆ. ಮೊನ್ನೆಯಷ್ಟೇ ಬೆಸ್ಕಾಂ ನಿರ್ಲಕ್ಷ್ಯದಿಂದ ತಾಯಿ, ಮಗು ಮೃತಪಟ್ಟ ಘಟನೆ ಸಂಭವಿಸಿದ್ದರೂ ಕೂಡ ಹೆಸ್ಕಾಂ ಎಚ್ಚೇತ್ತುಕೊಂಡಿಲ್ಲ. ಈ ನಿಟ್ಟಿನಲ್ಲಿ ಹುಬ್ಬಳ್ಳಿಯ ಮರಾಠಗಲ್ಲಿಯಲ್ಲಿರುವ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಹೌದು.. ಎಲ್ಲೆಂದರಲ್ಲಿ ಹರಿದು ಬಿದ್ದಿರುವ ಕೇಬಲ್, ತಲೆಗೆ ತಗಲುವಂತಿರುವ ವಿದ್ಯುತ್ ಪ್ರವಹಿಸುವ ಕೇಬಲ್, ಶಾಲೆಯ  ಕಟ್ಟಡಕ್ಕೆ ಹೊಂದಿಕೊಂಡಿರುವ ವಿದ್ಯುತ್ ಕಂಬಗಳು. ಇವೆಲ್ಲವೂ ಅಪಘಾತಕ್ಕೆ ಆಹ್ವಾನ ನೀಡುವಂತಿದ್ದರೂ ಯಾರೊಬ್ಬರೂ ಕಾಳಜಿ ವಹಿಸಿಲ್ಲ.. https://ainlivenews.com/housewifes-body-found-hanging-in-bangalore/ ಈಗಾಗಲೇ ಸ್ಥಳೀಯರು ಹಾಗೂ ಶಾಲೆಯ ಆಡಳಿತ ಮಂಡಳಿ ಹೆಸ್ಕಾಂ ಇಲಾಖೆ,‌ಶಿಕ್ಷಣ ಇಲಾಖೆ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಕೂಡ ಯಾವುದೇ…

Read More

ಕಾಂತಾರ ಸಿನಿಮಾ ಬಗ್ಗೆ ದಿನಕ್ಕೊಂದು ಮಾಹಿತಿ ಹೊರ ಬೀಳುತ್ತಿವೆ. ಸಿನಿಮಾ ಟೀಮ್ ಅಧಿಕೃತವಾಗಿ ಯಾವುದೇ ಮಾಹಿತಿ ಸಿಗದೇ ಇದ್ದರೂ, ಬಲ್ಲ ಮೂಲಗಳು ಮಾಹಿತಿಯನ್ನು ಹೊರ ಹಾಕುತ್ತಲೇ ಇವೆ. ಕಾಂತಾರ ಸಿನಿಮಾ ಮೊದಲು ಕನ್ನಡದಲ್ಲಿ ಮಾತ್ರ ರಿಲೀಸ್ ಆಗಿತ್ತು. ಹಿಟ್ ಆದ ನಂತರ ಹಲವು ಭಾಷೆಗಳಲ್ಲಿ ಅದನ್ನು ಡಬ್ ಮಾಡಲಾಯಿತು. ಆದರೆ, ಕಾಂತಾರ 2 ಬರೋಬ್ಬರಿ ಏಳು ಭಾಷೆಗಳಲ್ಲಿ ನಿರ್ಮಾಣವಾಗಲಿದೆಯಂತೆ. ಹಾಗಾಗಿ ಅದ್ಧೂರಿ ಮೇಕಿಂಗ್ ಕೂಡ ಇರಲಿದೆಯಂತೆ. ಮೊನ್ನೆಯಷ್ಟೇ ಸಿನಿಮಾ ಮಹೂರ್ತದ (Muhurta) ಕುರಿತಂತೆ ಪಂಜುರ್ಲಿ (Panjurl) ಮತ್ತು ಗುಳಿಗ ದೈವಕ್ಕೆ ಚಿತ್ರತಂಡ ಮೊರೆ ಹೋಗಿದ್ದು, ದೈವಗಳು ಅಸ್ತು ಎಂದಿವೆ ಎನ್ನುವ ಮಾಹಿತಿ ಸಿಕ್ಕಿತ್ತು. ಹೀಗಾಗಿ ಸಿನಿಮಾ ತಂಡ ಮುಹೂರ್ತಕ್ಕೆ ಸರ್ವ ಸಿದ್ಧತೆ ಮಾಡಿಕೊಂಡಿದೆ. ಮತ್ತೊಂದು ಸಮಾಚಾರವೆಂದರೆ, ಈ ಸಿನಿಮಾದಲ್ಲಿ 14ನೇ ಶತಮಾನದಿಂದ ಶುರುವಾಗುವ ಕಥೆ ಕೂಡ ಇರಲಿದೆಯಂತೆ. ಈ ಕುರಿತು ಚಿತ್ರತಂಡ ಮಾಹಿತಿ ನೀಡದೇ ಇದ್ದರೂ, ಗಾಂಧಿ ನಗರದ ಗಲ್ಲಿ ಗಲ್ಲಿಗಳಲ್ಲಿ ಕಾಂತರ ಕಥೆ ಹಾಟ್ ಕೇಕ್ ತರಹ ಮಾರಾಟವಾಗುತ್ತಿದೆ. ‘ಕಾಂತಾರ‘ ಸಿನಿಮಾ ವರ್ಲ್ಡ್ ವೈಡ್ ರೀಚ್ ಸಕ್ಸಸ್‌ಫುಲ್ ಪ್ರದರ್ಶನ ಕಂಡಿತ್ತು. ‘ಕಾಂತಾರ‘ ಪಾರ್ಟ್ 2 ಯಾವಾಗ ಎಂದು ಕಾದು ಕುಳಿತ ಫ್ಯಾನ್ಸ್‌ಗೆ ಸಿಹಿಸುದ್ದಿ ಸಿಕ್ಕಿದೆ. ಇದೇ ನವೆಂಬರ್‌ಗೆ ಮುಹೂರ್ತ ಫಿಕ್ಸ್ ಆಗಿದೆ. ಹೊಂಬಾಳೆ ಸಂಸ್ಥೆ ನಿರ್ಮಾಣದ, ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸುತ್ತಿರುವ ‘ಕಾಂತಾರ 2′ ಚಿತ್ರದ ಮುಹೂರ್ತ ಇದೇ ನವೆಂಬರ್ 27ರಂದು ಸೋಮವಾರ ಸರಳವಾಗಿ ಜರುಗಲಿದೆ.

Read More

ಚಳಿಗಾಲದಲ್ಲಿ ತ್ವಚೆಯಲ್ಲಿ ಶುಷ್ಕತೆ, ಚರ್ಮ ಕಪ್ಪಾಗುವುದು ಮತ್ತು ತ್ವಚೆ ಬಿರುಕು ಬಿಡುವುದು, ತುಟಿ ಒಡೆಯುವುದು, ಪಾದ ಬಿರುಕು ಬಿಡುವಂತಹದ್ದು ತುಂಬಾ ಸಾಮಾನ್ಯ. ಆದರೆ, ಇವುಗಳಿಂದಾಗುವ ಕಿರಿಕಿರಿ ಸಹಿಸಿಕೊಳ್ಳಲು ಆಗುವುದಿಲ್ಲ. ಹೀಗಾಗಿ ಚಳಿಗಾಲದಲ್ಲಿ ತಮ್ಮ ಚರ್ಮವನ್ನು ಆರೋಗ್ಯವಾಗಿ ಇಟ್ಟುಕೊಳ್ಳಲು ತೆಂಗಿನ ಎಣ್ಣೆ ಅಥವಾ ಕೊಬ್ಬರಿ ಎಣ್ಣೆ ತುಂಬಾ ಒಳ್ಳೆಯದು. ಕೊಬ್ಬರಿ ಎಣ್ಣೆಯು ಚರ್ಮವನ್ನು ಹಾನಿಕಾರಕ ಸೂಕ್ಷ್ಮಾಣುಜೀವಿಗಳಿಂದ ರಕ್ಷಿಸುತ್ತದೆ. ತೆಂಗಿನ ಎಣ್ಣೆಯಲ್ಲಿರುವ ಲಾರಿಕ್ ಮತ್ತು ಕ್ಯಾಪ್ರಿಕ್ ಆಮ್ಲಗಳಂತಹ ಕೊಬ್ಬಿನಾಮ್ಲಗಳು ತಮ್ಮ ಆಯಂಟಿಮೈಕ್ರೊಬಿಯಲ್ ಗುಣಲಕ್ಷಣಗಳಿಂದಾಗಿ ಚರ್ಮವನ್ನು ಆರೋಗ್ಯಕರವಾಗಿ ಇರಿಸುತ್ತದೆ ಮತ್ತು ನಮ್ಮ ಚರ್ಮದ ಮೇಲೆ ಬೆಳೆಯುವ ಹಾನಿಕಾರಕ ಸೂಕ್ಷ್ಮಜೀವಿಗಳನ್ನು ನಾಶಮಾಡುತ್ತವೆ. ಮೊಡವೆ, ಫೋಲಿಕ್ಯುಲೈಟಿಸ್, ಸೆಲ್ಯುಲೈಟಿಸ್ ಮುಂತಾದ ಚರ್ಮದ ಸೋಂಕುಗಳು, ಶಿಲೀಂಧ್ರಗಳು ಮತ್ತು ಬ್ಯಾಕ್ಟೀರಿಯಾಗಳಿಂದ ಉಂಟಾಗುತ್ತವೆ ಮತ್ತು ಇವುಗಳಿಗೆ ತೆಂಗಿನ ಎಣ್ಣೆ ಮುಕ್ತಿ ನೀಡುತ್ತದೆ. ತೆಂಗಿನ ಎಣ್ಣೆಯು ಒಣ, ಒಡೆದ ಚರ್ಮಕ್ಕೆ ಅತ್ಯಂತ ಪರಿಣಾಮಕಾರಿ ಮಾಯಿಶ್ಚರೈಸರ್ ಆಗಿದೆ. ತೆಂಗಿನ ಎಣ್ಣೆ ಚರ್ಮವನ್ನು ಹೈಡ್ರೇಟ್ ಮಾಡಲು ಸಹಾಯ ಮಾಡುತ್ತದೆ ಮತ್ತು ತೇವಾಂಶವನ್ನು ಚೆನ್ನಾಗಿ ಉಳಿಸಿಕೊಳ್ಳಲು ಉಪಯುಕ್ತವಾಗಿದೆ. ತೆಂಗಿನ ಎಣ್ಣೆ…

Read More