Author: AIN Author

ತಮಿಳುನಾಡು: ತಮಿಳುನಾಡಿನ ಧರ್ಮಾಪುರಿ ಜಿಲ್ಲೆಯ ಸೇಲಂ ಮತ್ತು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದೆ. ಐದು ವಾಹನಗಳು ನಡುವೆ ಡಿಕ್ಕಿ ಉಂಟಾಗಿ ಬೆಂಕಿ ಹೊತ್ತಿಕೊಂಡಿದೆ. ಇದರಿಂದ ಒಂದು ಲಾರಿ ಮತ್ತು ಎರಡು ಕಾರುಗಳು ಬೆಂಕಿಗೆ ಆಹುತಿಯಾಗಿವೆ. ಸುಟ್ಟು ಕರಕಲಾದ ಸ್ಥಿತಿಯಲ್ಲಿ ಮೂರು ಮೃತದೇಹಗಳು ಪತ್ತೆಯಾಗಿವೆ. ಇಲ್ಲಿನ ತೊಪ್ಪೂರು ಪ್ರದೇಶದ ರಾಷ್ಟ್ರೀಯ ಹೆದ್ದಾರಿಯ ಸೇತುವೆಯಲ್ಲಿ ಈ ದುರಂತ ನಡೆದಿದೆ. ಧರ್ಮಾಪುರಿಯಿಂದ ಸೇಲಂ ಕಡೆಗೆ ಭತ್ತದ ಚೀಲಗಳನ್ನು ತುಂಬಿಕೊಂಡು ಬರುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಎರಡು ಲಾರಿ ಹಾಗೂ ಕಾರುಗಳಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಎರಡು ಕಾರುಗಳು ನಡುವೆ ಮೂರು ಲಾರಿಗಳು ಸಿಲುಕಿಕೊಂಡಿವೆ. ಈ ಇದೇ ವೇಳೆ, ಮುಂದೆ ಹೋಗುತ್ತಿದ್ದ ಒಂದು ಲಾರಿ ಸೇತುವೆಯಿಂದ ಕೆಳಗಡೆಗೆ ಬಿದ್ದಿದೆ. ಆದರೆ, ಅಪಘಾತಕ್ಕೆ ಕಾರಣ ಎನ್ನಲಾಗುವ ಲಾರಿ ಮುಂದೆ ಸಾಗುತ್ತಿದ್ದ ಮತ್ತೊಂದು ಲಾರಿಯೊಂದಿಗೆ ಘರ್ಷಣೆಗೆ ಒಳಗಾಗಿ ಬೆಂಕಿ ಹೊತ್ತಿಕೊಂಡಿದೆ. ಇದರಿಂದ ಎರಡು ಕಾರುಗಳಿಗೂ ಬೆಂಕಿ ತಲುಗಿದೆ ಎನ್ನಲಾಗುತ್ತಿದೆ. ಇದರ ದೃಶ್ಯಗಳು ಸಿಸಿವಿಟಿಯಲ್ಲಿ ದಾಖಲಾಗಿದ್ದು,…

Read More

ಕೆನಡಾ: ಭಾರತ – ಕೆನಡಾ ನಡುವೆ ತೀವ್ರತರದ ರಾಜತಾಂತ್ರಿಕ ಬಿಕ್ಕಟ್ಟು ತಲೆದೋರಿದ ನಂತರ ಕೆನಡಾಕ್ಕೆ ತೆರಳುವ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡುಬಂದಿದೆ. ಕಳೆದ ಮೂರು ತಿಂಗಳಲ್ಲಿ ಉನ್ನತ ಅಧ್ಯಯನಕ್ಕೆಂದು ಕೆನಡಾಗೆ ತೆರಳುವ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಶೇ. 86ರಷ್ಟು ಇಳಿಮುಖವಾಗಿದೆ. ”ಉಭಯ ದೇಶಗಳ ನಡುವಿನ ರಾಜತಾಂತ್ರಿಕ ಬಿಕ್ಕಟ್ಟಿನ ಬಳಿಕ ಭಾರತದ ವಿದ್ಯಾರ್ಥಿಗಳು ಸಲ್ಲಿಸುವ ಅರ್ಜಿಗಳನ್ನು ಇತ್ಯರ್ಥಗೊಳಿಸುವ ಪ್ರಕ್ರಿಯೆ ನಿಧಾನಗತಿಯಲ್ಲಿ ಸಾಗಿದೆ. ಇದರಿಂದಾಗಿ ಕಳೆದ ಮೂರು ತಿಂಗಳಲ್ಲಿ ಭಾರತೀಯ ವಿದ್ಯಾರ್ಥಿಗಳಿಗೆ ‘ಸ್ಟೂಡೆಂಟ್‌ ವೀಸಾ’ ಸುಲಭದಲ್ಲಿ ಸಿಗುತ್ತಿಲ್ಲ. ಪರಿಣಾಮ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಇಳಿಮುಖವಾಗಿದೆ,” ಎಂದು ವಲಸೆ ಸಚಿವ ಮಾರ್ಕ್ ಮಿಲ್ಲರ್‌ ಅವರು ಸಂದರ್ಶನವೊಂದರಲ್ಲಿ ತಿಳಿಸಿದ್ದಾರೆ. https://ainlivenews.com/peanut-is-good-for-health-but-if-people-with-this-problem-eat-it-there-is-no-danger/ ಇದೇ ವೇಳೆ ಅವರು ಮುಂದಿನ ದಿನಗಳಲ್ಲಿ ಪರಿಸ್ಥಿತಿ ಸುಧಾರಿಸಲಿದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. ”2022ರ ಕೊನೆಯ ತ್ರೈಮಾಸಿಕದಲ್ಲಿ 1.08 ಲಕ್ಷ ವಿದ್ಯಾರ್ಥಿಗಳಿಗೆ ವೀಸಾ ನೀಡಲಾಗಿದ್ದರೆ, 2023ರ ಕೊನೆಯ ತ್ರೈಮಾಸಿಕದಲ್ಲಿ 14,910 ವಿದ್ಯಾರ್ಥಿಗಳಿಗೆ ಮಾತ್ರ ವೀಸಾ ನೀಡಲಾಗಿದೆ,” ಎಂದು ಅವರು ಹೇಳಿದ್ದಾರೆ. ಕೆನಡಾದ ವಿಶ್ವವಿದ್ಯಾಲಯಗಳಿಗೆ ಭಾರತೀಯ…

Read More

ಬೆಂಗಳೂರು:- ಬೆಂಗಳೂರಿನ ಉದ್ಯಾನವೊಂದರ ಬಳಿ ಜೋಡಿಯೊಂದು ಮಟ ಮಟ ಮಧ್ಯಾಹ್ನವೇ ಕಾರಿನಲ್ಲೇ ಬೆತ್ತಲಾಗಿ ಕಾಮತೃಷೆ ತೀರಿಸಿಕೊಳ್ಳಲು ಮುಂದಾದ ಘಟನೆ ಜರುಗಿದೆ. ಇದೇ ವೇಳೆ, ದೃಶ್ಯ ಕಂಡು ಬುದ್ಧಿಹೇಳಲು ಬಳಿ ತೆರಳಿದ ಪೊಲೀಸ್​ ಮೇಲೆಯೆ ಕಾರು ಚಲಾಯಿಸಿಕೊಂಡು ಜೋಡಿ ಪರಾರಿಯಾಗಿದೆ. ಗಾಯಗೊಂಡ ಸಬ್​ ಇನ್​​ಸ್ಪೆಕ್ಟರ್​ ಮಹೇಶ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯ ಉದ್ಯಾನವನವೊಂದರ ಬಳಿ ಕಿಯೋ ಸೆಲಾಟೋಸ್ ಕಾರಿನಲ್ಲಿ ಬಂದಿದ್ದ ಜೋಡಿಯೊಂದು ಅಲ್ಲೇ ಬಟ್ಟೆಬಿಚ್ಚಿ ಕಾಮಕೇಳಿ ಆರಂಭಿಸಿದೆ. ಪಾರ್ಕ್​ನಲ್ಲಿ ಅನೇಕ ಮಂದಿ ಇದ್ದರೂ, ಅವರಿಗೆಲ್ಲ ತಾವು ಕಾಣಿಸುತ್ತಿದ್ದರೂ ಅದನ್ನು ಲೆಕ್ಕಿಸದೆ ಜೋಡಿ ಸರಸದಲ್ಲಿ ತಲ್ಲೀನವಾಗಿದೆ. ಇದೇ ವೇಳೆ ಅಲ್ಲಿ ಕರ್ತವ್ಯ ನಿರತರಾಗಿದ್ದ ಸಬ್ ಇನ್ಸ್​​ಪೆಕ್ಟರ್ ಮಹೇಶ್ ಆ ಜೋಡಿಯನ್ನು ಗಮನಿಸಿದ್ದಾರೆ. ಜೋಡಿಗೆ ಬುದ್ಧಿ ಹೇಳಬೇಕು ಎಂದುಕೊಂಡ ಸಬ್ ಇನ್ಸ್​​ಪೆಕ್ಟರ್ ಮಹೇಶ್ ಕಾರಿನ ಬಳಿ ತೆರಳಿದ್ದಾರೆ. ಕಾರಿನ ಬಳಿ ಹೋಗಿ ನಂಬರ್ ಪ್ಲೇಟ್ ಪರಿಶೀಲನೆ ನಡೆಸಿದ್ದಾರೆ. ಅಷ್ಟರಲ್ಲಿ ಎಚ್ಚೆತ್ತುಕೊಂಡ ಯುವಕ ಏಕಾಏಕಿ ಕಾರು ಚಲಾಯಿಸಿದ್ದಾನೆ. ದಿಢೀರ್ ಕಾರು…

Read More

ಬೆಂಗಳೂರು:- ಸಾಮಾಜಿಕ ಜಾಲತಾಣಗಳ ನೆರವಿನಿಂದ ಬೆಂಗಳೂರಿನಲ್ಲಿ ನಾಪತ್ತೆಯಾಗಿದ್ದ 12 ವರ್ಷದ ಬಾಲಕನನ್ನು ಹೈದರಾಬಾದ್‌ನಲ್ಲಿ ಪತ್ತೆಹಚ್ಚಲಾಗಿದೆ. ಮೂರು ದಿನಗಳ ಹಿಂದೆ ಬೆಂಗಳೂರಿನಲ್ಲಿ ನಾಪತ್ತೆಯಾದ ಪ್ರಣವ್‌ ಎಂಬ 12 ವರ್ಷದ ಬಾಲಕನನ್ನು ಸೋಷಿಯಲ್‌ ಮೀಡಿಯಾಗಳ ಮೂಲಕ ಹೈದರಾಬಾದ್‌ನಲ್ಲಿ ಪತ್ತೆಹಚ್ಚಲಾಗಿದೆ. ಡೀನ್ಸ್‌ ಅಕಾಡೆಮಿಯಲ್ಲಿ ಆರನೇ ತರಗತಿ ಓದುತ್ತಿರುವ ಪ್ರಣವ್‌, ಮೂರು ದಿನಗಳ ಹಿಂದೆ ಬೆಂಗಳೂರಿನ ಮೆಜೆಸ್ಟಿಕ್‌ನಿಂದ ಬಸ್‌ ಹತ್ತಿ ಹೊರಟಿದ್ದ. ಮೂರು ದಿನಗಳಿಂದ ಆತ ಬೇರೆ ಬೇರೆ ನಗರಗಳಲ್ಲಿ ಸುತ್ತಾಡಿದ್ದ. ಸಿಸಿಟಿವಿ ಪರಿಶೀಲನೆ, ಲೊಕೇಷನ್‌ ಟ್ರ್ಯಾಕ್‌ ಮಾಡಿದ್ದರೂ ಆತನನ್ನು ಪತ್ತೆಹಚ್ಚಲು ಸಾಧ್ಯವಾಗಿರಲಿಲ್ಲ. ಅದರೆ, ಈತನ ಪತ್ತೆಗೆ ಸೋಷಿಯಲ್‌ ಮೀಡಿಯಾ ನೆರವಾಗಿವೆ. ವೈಟ್‌ಫೀಲ್ಡ್‌ನಲ್ಲಿರುವ ಕೋಚಿಂಗ್‌ ಸೆಂಟರ್‌ನಿಂದ ಮೆಜೆಸ್ಟಿಕ್‌ಗೆ ಬಂದ ಬಾಲಕ ಬಸ್‌ ಹತ್ತಿ ಹೊರಟಿದ್ದ. ಇದನ್ನು ತಿಳಿದುಕೊಂಡ ಕೆಲವು ಸ್ವಯಂ ಸೇವಕರು ಆತನ ಫೋಟೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್‌ ಮಾಡಿದ್ದರು. ಈತನ ಗುರುತು ಸಿಕ್ಕರೆ ಮಾಹಿತಿ ನೀಡಿ ಎಂದು ತಿಳಿಸಿದ್ದರು. ಈತನ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು. ಬೆಂಗಳೂರಿನಿಂದ ಹೈದರಾಬಾದ್‌ಗೆ ತೆರಳಿದ್ದ ವ್ಯಕ್ತಿಯೊಬ್ಬರು ಹೈದರಾಬಾದ್‌ನ ಮೆಟ್ರೋದಲ್ಲಿ ಬಾಲಕನನ್ನು…

Read More

ಬೆಂಗಳೂರು:- ಬಿಎಂಟಿಸಿ ಅಧಿಕಾರಿಗಳು, ಬಸ್​ನಲ್ಲಿ ಪ್ರಯಾಣಿಸುವ ಅಪ್ರಾಪ್ತರ ಮೇಲೆ ನಿಗಾ ಇರಿಸಲು ಮುಂದಾಗಿದ್ದಾರೆ. ಒಂಟಿಯಾಗಿ ಸಂಚರಿಸುವ ಅಪ್ರಾಪ್ತರ ಮೇಲೆ ನಿಗಾ ಇರಿಸಲು ಮುಂದಾದ ಬಿಎಂಟಿಸಿ ಅಧಿಕಾರಿಗಳು, ಅನುಮಾನಾಸ್ಪದ ಓಡಾಟ ಕಂಡು ಬಂದರೆ ಮಕ್ಕಳ ಸಹಾಯವಾಣಿಗೆ ತಿಳಿಸುವಂತೆ ಬಸ್ ಚಾಲಕ ಹಾಗೂ ನಿರ್ವಾಹಕರಿಗೆ ಮುಖ್ಯ ಸಂಚಾರ ವ್ಯವಸ್ಥಾಪಕರು ಆದೇಶ ಹೊರಡಿಸಿದ್ದಾರೆ. ಶಾಲಾ ಸಮವಸ್ತ್ರದಲ್ಲಿರುವ ಮಕ್ಕಳನ್ನ ಹೊರತು ಪಡಿಸಿ ಬಸ್​ಗಳಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳು ಒಬ್ಬಂಟಿಯಾಗಿ ಪ್ರಯಾಣಿಸುತ್ತಿರುವ ಮಕ್ಕಳ ಮೇಲೆ ಹೆಚ್ಚಿನ ನಿಗಾ ಇರಿಸಬೇಕು. ಮಕ್ಕಳ ಹಾವ-ಭಾವದಲ್ಲಿ ಗೊಂದಲಗಳಿದಲ್ಲಿ ಅಥವಾ ಅನುಮಾನಸ್ಪದವಾಗಿ ಪ್ರಯಾಣಿಸುತ್ತಿವುದು ಕಂಡುಬಂದಲ್ಲಿ ಅಂತಹ ಮಕ್ಕಳನ್ನ ಗುರುತಿಸಿ ಅವರ ಬಳಿ ಮಾತನಾಡಿ ಪೋಷಕರ ಬಗ್ಗೆ ಮಾಹಿತಿಯನ್ನ ಪಡೆಯಬೇಕು. ಮಕ್ಕಳು ಗೊಂದಲದ ಉತ್ತರವನ್ನ ನೀಡಿದಲ್ಲಿ, ಮಕ್ಕಳ ಸಹಾಯವಾಣಿ ಸಂಖ್ಯೆ 1098ಗೆ ಕರೆ ಮಾಡಬೇಕು. ಹತ್ತಿರದ ಪೊಲೀಸ್ ಠಾಣೆಗೆ ಅಂತಹ ಮಕ್ಕಳ ಕರೆದೊಯ್ಯುವಂತೆ ಆದೇಶದಲ್ಲಿ ತಿಳಿಸಲಾಗಿದೆ. ಇನ್ನೂ ಇತ್ತೀಚೆಗೆ ಟ್ಯೂಷನ್​ಗೆ ತೆರಳಿದ್ದ ವೈಟ್‌ಫೀಲ್ಡ್‌ನ ನಿವಾಸಿ 12 ವರ್ಷದ ಬಾಲಕ ಪರಿಣವ್ ನಾಪತ್ತೆಯಾಗಿದ್ದನು. ಬಳಿಕ ಈತನನ್ನು ಹೈದರಾಬಾದ್​ನಲ್ಲಿ…

Read More

ಪೀಣ್ಯ ದಾಸರಹಳ್ಳಿ:’ ಕ್ಷೇತ್ರದಲ್ಲೆಡೆ ಸಾಕಷ್ಟು ಮೂಲಭೂತ ಸಮಸ್ಯೆಗಳಿವೆ. ಆದರೆ ಅನುದಾನದ ಕೊರತೆಯಿಂದಾಗಿ ಬಗೆಹರಿಸಲು ಸಾಧ್ಯವಾಗುತ್ತಿಲ್ಲ’ ಸರ್ಕಾರ ಕೂಡಲೇ ಅನುದಾನ ಬಿಡುಗಡೆ ಬೇಕು ಎಂದು ಶಾಸಕ ಎಸ್. ಮುನಿರಾಜು ತಿಳಿಸಿದರು. ಬಾಗಲಗುಂಟೆ ವಾರ್ಡ್ ನೆನೆಗುದಿಗೆ ಬಿದ್ದಿದ್ದ ಚಿಮ್ನಿ ಹಿಲ್ಸ್ ರಸ್ತೆಗೆ ಡಾಂಬರೀಕರಣಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕ್ಷೇತ್ರದ ಎಲ್ಲಾ ಕಡೆ ನೀರು, ರಸ್ತೆ, ಚರಂಡಿ ಇನ್ನು ಅನೇಕ ಮೂಲಭೂತ ಸಮಸ್ಯೆಗಳಿವೆ. ಜನರು ಎಲ್ಲಿ ಹೋದರು ರಸ್ತೆ ಸರಿಪಡಿಸಲು ಮನವಿ ಮಾಡುತ್ತಿದ್ದಾರೆ ಆದರೆ ಅನುದಾನದ ಕೊರತೆಯಿಂದಾಗಿ ಸಾಧ್ಯವಾಗುತ್ತಿಲ್ಲ!’ ಎಂದರು. ನನ್ನ ಕ್ಷೇತ್ರದ ಮತದಾರರು ನನಗೆ ಆಶೀರ್ವಾದ ಮಾಡಿದ್ದಾರೆ. ಅವರು ನನ್ನ ಮೇಲೆ ಇಟ್ಟಿರುವ ನಂಬಿಕೆಗೆ ನಾನು ಚಿರ ಋಣಿ, ಕ್ಷೇತ್ರದ ಅಭಿವೃದ್ಧಿಯೇ ನನ್ನ ಗುರಿ ಸರ್ಕಾರದ ಮೇಲೆ ಒತ್ತಡ ತಂದು ಅನುದಾನ ತರುವ ಮೂಲಕ ಕೆಲಸ ಮಾಡಲು ಪ್ರಯತ್ನಿಸುತ್ತೇನೆ’ ಎಂದು ತಿಳಿಸಿದರು. ‌ ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ರಘು ಸೂರ್ಯ, ಚಿಕ್ಕಲಕ್ಕಣ್ಣ, ಜೈ ಶ್ರೀ ರಾಮ್ ವಿಜಯಲಕ್ಷ್ಮಿ, ತುಂಗಭದ್ರಾ, ಪದ್ಮ ಮುಂತಾದವರಿದ್ದರು.

Read More

ಬೆಂಗಳೂರು:- ಎಸ್‌ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿ ಬಿಟ್ ಕಾಯಿನ್ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಅರೆಸ್ಟ್ ಮಾಡಲಾಗಿದೆ. ಇನ್ಸ್ಪೆಕ್ಟರ್ ಪ್ರಶಾಂತ್ ಬಾಬು ಮತ್ತು ಸಂತೋಷ್‌ನನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದು, ಸಾಕ್ಷ್ಯ ನಾಶ ಮಾಡಿದ ಹಿನ್ನೆಲೆ ಈ ಇಬ್ಬರನ್ನು ಬಂಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಐವರನ್ನು ವಶಕ್ಕೆ ಪಡೆದಿದ್ದರು. ಬಂಧಿತರಲ್ಲಿ ಪ್ರಶಾಂತ್ ಬಾಬು ಸೈಬರ್ ಇನ್ಸ್ಪೆಕ್ಟರ್ ಆಗಿದ್ದು, ಸಂತೋಷ್ ಸೈಬರ್ ಸೆಂಟರ್ ವ್ಯಕ್ತಿ ಆಗಿದ್ದ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಶ್ರೀಕಿಯನ್ನು 90 ದಿನ ಪೊಲೀಸ್ ಕಸ್ಟಡಿಯಲ್ಲಿ ಇರಿಸಿಕೊಂಡಿದ್ದರು. ಸಿಸಿಬಿ ಬಂಧನದಲ್ಲಿದ್ದಾಗ ಬಿಟ್ ಕಾಯಿನ್ ಅಕ್ರಮ ಆಗಿರೋದು ಸಾಬೀತಾಗಿದೆ. ಅಕ್ರಮ ಸಾಬೀತಾದ ಹಿನ್ನೆಲೆ ಬಂಧಿಸಲಾಗಿದೆ. ಇಂದು ಮೂವರು ಡಿವೈಎಸ್ಪಿಗಳನ್ನು ಎಸ್‌ಐಟಿ ವಿಚಾರಣೆಗೆ ಕರೆದಿದೆ. ಸಿಸಿಬಿಯಲ್ಲಿ ಅಧಿಕಾರಿಗಳು ಶ್ರೀಕಿಯನ್ನು ತನಿಖೆ ನಡೆಸಿದ್ದು, ಇಂದು ವಿಚಾರಣೆಗೆ ಹಾಜರಾಗಲಿದ್ದಾನೆ. ಪ್ರಕರಣದ ಕುರಿತು ಅರೆಸ್ಟ್ ಪರ್ವ ಇಂದೂ ಸಹ ಮುಂದುವರಿಯಲಿದ್ದು, ಅಕ್ರಮ ಸಾಬೀತಾದ ಹಿನ್ನೆಲೆ ತನಿಖೆಯನ್ನು ಚುರುಕುಗೊಳಿಸಲಾಗಿದೆ

Read More

ಬೆಂಗಳೂರು:- ಜನವರಿ 22ರಂದು ದೇಶದೆಲ್ಲೆಡೆ ರಾಮೋತ್ಸವ ನಡೆದಿದ್ದು, ಅರುಣ್ ಯೋಗಿರಾಜ್ ಕೆತ್ತನೆ ಮಾಡಿರುವ ನಗುಮುಗದ ಬಾಲ ರಾಮನ ಮೂರ್ತಿ ಎಲ್ಲರ ಗಮನ ಸೆಳೆದಿದೆ. ಇನ್ನು ಶಿಲ್ಪಿ ಅರುಣ್ ಯೋಗಿರಾಜ್, ರಾಮಮಂದಿರಕ್ಕೆ ವಿಗ್ರಹ ನೀಡಿ ಇದೀಗ ಬೆಂಗಳೂರಿಗೆ ಆಗಮಿಸಿದ್ದು, ಅವರನ್ನು ರಾಮ ಭಕ್ತು ಹಾಗೂ ಬಿಜೆಪಿ ಕಾರ್ಯಕರ್ತರು ಸೇರಿ ಆರತಿ ಬೆಳಗಿ, ಹೂಗುಚ್ಛ ನೀಡಿ ಭವ್ಯ ಸ್ವಾಗತಕೋರಿದ್ದಾರೆ. ಅಯೋಧ್ಯೆಯಿಂದ ನೇರವಾಗಿ ಅರುಣ್ ಯೋಗಿರಾಜ್ ಅವರು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದು, ಅವರನ್ನು ತಾಯಿ ಮತ್ತು ಪತ್ನಿ ಅಪ್ಪಿಕೊಂಡು ಸ್ವಾಗತಿಸಿದರು. ಅಲ್ಲದೇ ಮಗನನ್ನ ಕಂಡು ತಾಯಿ ಮುದ್ದಾಡಿ ಭಾವುಕಾರಾಗಿ ಆನಂದ ಬಾಷ್ಪ ಸುರಿಸಿದ ಪ್ರಸಂಗ ಜರುಗಿತು. ಬಳಿಕ ಅರುಣ್ ಯೋಗಿರಾಜ್ ತನ್ನಿಬ್ಬರು ಮಕ್ಕಳನ್ನು ಎತ್ತಿಕೊಂಡು ಮುದ್ದಾಡಿದರು. ಕೆಐಎಬಿ ಟರ್ಮಿನಲ್-2ರ ಮುಂದೆ ಸಾಲಾಗಿ ನಿಂತು ಅರುಣ್​ಗೆ ಭವ್ಯ ಸ್ವಾಗತಕೋರಿದರು. ಯೋಗಿರಾಜ್ ಬಂದಿಳಿಯುತ್ತಿದ್ದಂತೆಯೇ ರಾಮಭಕ್ತರು, ಹಿಂದೂ ಹಾಗೂ ಬಿಜೆಪಿ ಕಾರ್ಯಕರ್ತರು ಸ್ವಾಗತಿಸಲು ನುಗ್ಗಿದರು. ಇದರಿಂದ ವಿಮಾನ ನಿಲ್ದಾಣದ ಟರ್ಮಿನಲ್​ ಬಳಿ ನೂಕುನುಗ್ಗಲು ಉಂಟಾಯಿತು. ಇದೇ ವೇಳೆ…

Read More

ಬೆಂಗಳೂರು:- 75ನೇ ಗಣರಾಜ್ಯೋತ್ಸವ ದಿನಾಚರಣೆಗೆ ಕ್ಷಣಗಣನೆ ಆರಂಭವಾಗಿದೆ. ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಾಳೆ ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತದೆ. ಗೌರವಾನ್ವಿತ ರಾಜ್ಯಪಾಲರಿಗೆ ಮುಖ್ಯ ಕಾರ್ಯದರ್ಶಿಯಾದ ಶ್ರೀ ರಜನೀಶ್ ಗೋಯಲ್ ಅವರು ಆಮಂತ್ರಣ ಮಾಡಿದ್ದಾರೆ. ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರಿಂದ ಆಮಂತ್ರಣ ನೀಡಲಾಗಿದೆ. ನಗರ ಜಿಲ್ಲೆಯ ಜಿಲ್ಲಾಧಿಕಾರಿಯಾದ ದಯಾನಂದ್ ಕೂಡ ಸಾಥ್ ಕೊಟ್ಟಿದ್ದಾರೆ.

Read More

ಚಂಡೀಗಢ: ಹನುಮ ವೇಷಧಾರಿಯೊಬ್ಬರು ವೇದಿಕೆಯಲ್ಲೇ ಕುಸಿದು ಬಿದ್ದು ಮೃತಪಟ್ಟ ಘಟನೆ ಹರಿಯಾಣದ ಭಿವಾನಿಯಲ್ಲಿ ನಡೆದಿದೆ. ಮೃತರನ್ನು ಹರೀಶ್ ಮೆಹ್ತಾ ಎಂದು ಗುರುತಿಸಲಾಗಿದ್ದು, ಇವರು ಎಂಜಿನಿಯರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಇದೀಗ ಅಯೋಧ್ಯೆಯ ರಾಮ ಮಂದಿರದಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆ ಹಿನ್ನೆಲೆಯಲ್ಲಿ ರಾಮಲೀಲಾ ಸ್ಕಿಟ್‌ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಹರೀಶ್‌ ಮೆಹ್ತಾ ಅವರು ಹನುಮಂತನ ಪಾತ್ರವನ್ನು ನಿರ್ವಹಿಸುತ್ತಿದ್ದರು. ಸ್ಕಿಟ್‌ ಮಾಡ್ತಿದ್ದಂತೆಯೇ  ಹರೀಶ್‌ ಮೆಹ್ತಾ ಏಕಾಏಕಿ ಕುಸಿದು ಬಿದ್ದರು. ಆದರೆ ಪ್ರೇಕ್ಷಕರು ಮಾತ್ರ ಇದು ಸ್ಕಿಟ್‌ ಭಾಗವೆಂದು ಭಾವಿಸಿ ಕೂಡಲೇ ಯಾರೂ ರಕ್ಷಣೆಗೆ ಬರಲಿಲ್ಲ. ಆದರೆ ಕೆಲಹೊತ್ತಾದರೂ ಮೆಹ್ತಾ ಅವರು ಎದ್ದೇಳಲೇ ಇಲ್ಲ. ಇದರಿಂದ ಆತಂಕಗೊಂಡ ಜನ ತಕ್ಷಣವೇ ಕಾರ್ಯಪ್ರವೃತ್ತರಾದರು. https://twitter.com/TheSamacharlive/status/1749484617000714458?ref_src=twsrc%5Etfw%7Ctwcamp%5Etweetembed%7Ctwterm%5E1749484617000714458%7Ctwgr%5E30fee0905f98d6448e5e9f0be1bdbb287426677d%7Ctwcon%5Es1_&ref_url=https%3A%2F%2Fkannadadunia.com%2Flive-news%2Fhanumans-protagonist-died-of-a-heart-attack-during-the-performance-of-the-play-shocking-video-viral-video%2F ಕೂಡಲೇ ಸ್ಥಳೀಯರು ಮೆಹ್ತಾ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದರು. ಆದರೆ ಅದಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಅಲ್ಲದೇ ಅವರಿಗೆ ಹೃದಯಾಘಾತವಾಗಿರುವುದಾಗಿ ವೈದರು ಹೇಳಿದ್ದಾರೆ. ಹರೀಶ್‌ ಮೆಹ್ತಾ ಅವರು, ಕಳೆದ 25 ವರ್ಷಗಳಿಂದ ಹಲವಾರು ರಾಮಲೀಲಾ ಸ್ಕಿಟ್‌ಗಳಲ್ಲಿ ಹನುಮಂತನ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ.

Read More