ಬೆಂಗಳೂರು:- ಡಿಕೆಶಿ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಬಿಜೆಪಿ ಹೊರಡಿಸಿದ್ದ ಆದೇಶಕ್ಕೆ ಕ್ಯಾಬಿನೆಟ್ ಬ್ರೇಕ್ ಹಾಕಿದೆ. ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ಸಂಜೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಈ ಸಚಿವ ಸಂಪುಟ ಸಭೆಗೆ ಡಿಸಿಎಂ ಡಿಕೆಶಿ ಗೈರಾಗಿದ್ದರು. ಹಿತಾಸಕ್ತಿ ಸಂಘರ್ಷ ಉಂಟಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಸಚಿವ ಸಂಪುಟ ಸಭೆಯಿಂದ ದೂರ ಉಳಿದಿದ್ದರು ಎನ್ನಲಾಗಿದೆ. ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಗೃಹ ಇಲಾಖೆಗೆ ಈ ಸಂಬಂಧ ಕಾನೂನು ಅಭಿಪ್ರಾಯ ನೀಡಿದ್ದರು. ಈ ನಿಟ್ಟಿನಲ್ಲಿ ಒಳಾಡಳಿತ ಇಲಾಖೆ ಸಂಪುಟ ಸಭೆಗೆ ಪ್ರಸ್ತಾವನೆ ಸಲ್ಲಿಸಿತ್ತು. ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ, ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ಸೆ.25, 2019ರಂದು ದೆಹಲಿ ವಿಶೇಷ ಪೊಲೀಸ್ ಎಸ್ಟಾಬ್ಲಿಷ್ಮೆಂಟ್ ಕಾಯ್ದೆ 1946 ಅಡಿ ಸೆಕ್ಷನ್ 6 ಅನ್ವಯ ತನಿಖೆ ಕೈಗೊಳ್ಳಲು ಸಿಬಿಐಗೆ ವಹಿಸಿ ಆದೇಶ ಹೊರಡಿಸಿದ್ದರು ಎನ್ನಲಾಗಿದೆ.
Author: AIN Author
ಬೆಂಗಳೂರು:- ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಕ್ಷಿಣೆ ತರಲಿಲ್ಲ ಎಂಬ ಕಾರಣಕ್ಕೆ ಪತಿಯೊಬ್ಬ ತನ್ನ ಪತ್ನಿಯ ಖಾಸಗಿ ಅಂಗಗಳ ಮೇಲೆ ಟಾಯ್ಲೆಟ್ ಕ್ಲೀನಿಂಗ್ ಆಯಸಿಡ್ ಎರಚಿರುವ ಆಘಾತಕಾರಿ ಘಟನೆ ನಡೆದಿದೆ. ಆರೋಪಿಯು ಇದೇ ವರ್ಷ ಮೇ 19 ರಂದು 23 ವರ್ಷದ ಸಂತ್ರಸ್ತೆಯನ್ನು ವಿವಾಹವಾಗಿದ್ದ. ಆರೋಪಿಯು ಮದ್ಯವ್ಯಸನಿಯಾಗಿದ್ದು, ಅಪರೂಪಕ್ಕೆ ಕೆಲಸಕ್ಕೆ ಹೋಗುತ್ತಿದ್ದ ಎನ್ನಲಾಗಿದೆ. ಬದಲಾಗಿ ಪತ್ನಿಯಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದು, ಪದೇ ಪದೇ ಜಗಳವಾಗುತ್ತಿತ್ತು. ನಿತ್ಯವೂ ಕುಡಿದ ಅಮಲಿನಲ್ಲಿ ಮನೆಗೆ ಹಿಂದಿರುಗುತ್ತಿದ್ದ ಆರೋಪಿ ತನ್ನ ಹೆಂಡತಿಗೆ ದೈಹಿಕ ಮತ್ತು ಮಾನಸಿಕವಾಗಿ ಹಿಂಸೆ ನೀಡುತ್ತಿದ್ದ ಎನ್ನಲಾಗಿದೆ. ಆಗಾಗ ತಲೆಗೂದಲು ಹಿಡಿದು ಎಳೆದಾಡುವ ಮೂಲಕ ಕೊಲೆ ಬೆದರಿಕೆ ಹಾಕುತ್ತಿದ್ದ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ. ಮನೆ ಬಾಡಿಗೆ ಪಾವತಿಸದ ಕಾರಣ, ತಮ್ಮನ್ನು ಅವರ ನಿವಾಸದಿಂದ ಹೊರಹಾಕಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ಇತ್ತೀಚೆಗಷ್ಟೇ ಆರೋಪಿಯು ಆಕೆಯ ಬೆನ್ನು ಮತ್ತು ಖಾಸಗಿ ಭಾಗಗಳ ಮೇಲೆ ಟಾಯ್ಲೆಟ್ ಕ್ಲೀನಿಂಗ್ ಆಯಸಿಡ್ ಸುರಿದಿದ್ದಾನೆ. ಇದರಿಂದಾಗಿ ಸಂತ್ರಸ್ತೆ ಪೊಲೀಸರಿಗೆ ದೂರು ದಾಖಲಿಸಿದ್ದಾರೆ.
ಬೆಂಗಳೂರು:- ಗೃಹಲಕ್ಷ್ಮಿ ಯೋಜನೆಗೆ ಉಂಟಾಗಿರುವ ಸಣ್ಣಪುಟ್ಟ ಸಮಸ್ಯೆಗಳಿಗೆ ಶೀಘ್ರವೇ ಪರಿಹಾರ ಸಿಗಲಿದೆ ಎಂದು ಲಕ್ಷ್ಮೀ ಹೆಬ್ಬಾಳಕರ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಈಗಾಗಲೇ 1 ಕೋಟಿ 10 ಲಕ್ಷ ಮಹಿಳೆಯರಿಗೆ ಈ ಯೋಜನೆ ತಲುಪಿದ್ದು, ಪಿಡಿಒ, ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಬಾಕಿ ಉಳಿದಿರುವ ಫಲಾನುಭವಿಗಳಿಗೆ ಆಯಾ ಪಂಚಾಯಿತಿ, ಪುರಸಭೆ, ನಗರಸಭೆ ವ್ಯಾಪ್ತಿಯಲ್ಲಿ ಸಭೆ ನಡೆಸಿ ಹಣ ಹಾಕುವ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು. ಈಗಾಗಲೇ ಮೂರು ಕಂತಿನ ದುಡ್ಡು ಬಾರದೇ ಇದ್ದವರಿಗೆ ಏಕಕಾಲಕ್ಕೆ ಆರು ಸಾವಿರ ದುಡ್ಡು ಹಾಕುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. 50 ಸಾವಿರ ತೆರಿಗೆದಾರರಿಂದ ಅರ್ಜಿ! ಗೃಹಲಕ್ಷ್ಮಿ ಯೋಜನೆಗೆ ಸುಮಾರು 50 ಸಾವಿರ ತೆರಿಗೆದಾರರು ಕೂಡ ಅರ್ಜಿ ಹಾಕಿದ್ದು, ಅರ್ಜಿಗಳನ್ನು ನಿರಾಕರಿಸಿ ಡಿಲೀಟ್ ಮಾಡಲಾಗಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ ಗೃಹಲಕ್ಷ್ಮಿ ಹಣ ಸಿಕ್ಕಿಲ್ಲ ಎಂಬ ಆತಂಕ ಬೇಡ, ಎಲ್ಲ ಮೊತ್ತ ಒಟ್ಟಿಗೇ ಸಿಗಲಿದೆ ಗೃಹಲಕ್ಷ್ಮಿ ಯೋಜನೆಯಲ್ಲಿ ನೋಂದಾಯಿಸಿಕೊಂಡ ಗೃಹಿಣಿಯರಲ್ಲಿ ಶೇಕಡಾ 95ರಷ್ಟು…
ಬೆಂಗಳೂರು :- ಲೋಕಸಭೆ ಚುನಾವಣೆಗೆ ಅಂತಿಮ ಹಂತದ ಸಿದ್ಧತೆಗೆ ಬಿಬಿಎಂಪಿ ಮುಂದಾಗಿದೆ. ಆ ಮೂಲಕ ನಗರದ ಮತಗಟ್ಟೆಗಳ ಸಂಖ್ಯೆ ಹೆಚ್ಚಿಸಲು ಚುನಾವಣಾ ವಿಭಾಗ ಮುಂದಾಗಿದೆ. 2024ರ ಲೋಕಸಭೆ ಚುನಾವಣೆಗೆ ನಗರದಲ್ಲಿ 450 ಮತಗಟ್ಟೆಗಳ ಹೆಚ್ಚಳ ಮಾಡಲಾಗುತ್ತಿದೆ. 2019ರ ಲೋಕಸಭಾ ಚುನಾವಣೆಯ ಮತದಾನ ಪ್ರಮಾಣ ಆಧರಿಸಿ ಕಡಿಮೆ ಮತದಾನವಾಗಿರುವ ವಾರ್ಡ್ಗಳಲ್ಲಿ ಮತಗಟ್ಟೆಗಳ ಸಂಖ್ಯೆ ಹೆಚ್ಚಳ ಮಾಡಲಾಗುತ್ತಿದೆ. ಮತಗಟ್ಟೆಗಳು ಬೆಂಗಳೂರು ಕೇಂದ್ರ: 44,000, ಬೆಂಗಳೂರು ದಕ್ಷಿಣ: 42,350 ಬೆಂಗಳೂರು ಉತ್ತರ: 52,000 ಬೆಂಗಳೂರು ಗ್ರಾಮಾಂತರ ಜಿಲ್ಲೆ: 97,000 ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಬರೋಬ್ಬರಿ 198 ವಾರ್ಡ್ಗಳು ಇವೆ. ಆದರೆ ಕಳೆದ ಬಿಜೆಪಿ ಸರ್ಕಾರ ಇದನ್ನ 243 ವಾರ್ಡ್ಗೆ ಹೆಚ್ಚಿಸಿತ್ತು. ಕೋರ್ಟ್ನಲ್ಲಿ ತಕರಾರು ಅದು ಇದು ಅಂತಾ ಚುನಾವಣೆ ನಡೆದೇ ಇಲ್ಲ. ಇದರ ನಡುವೆ ಇತ್ತೀಚೆಗೆ 243 ವಾರ್ಡ್ಗಳಿಂದ 225 ಕ್ಕೆ ವಾರ್ಡ್ಗಳ ಸಂಖ್ಯೆ ಇಳಿಸಿದ್ದ ಹೊಸ ಸರ್ಕಾರ, ಸಾರ್ವಜನಿಕರ ಅಕ್ಷೇಪಣೆ ಹಾಗೂ ಸಲಹೆ ಕೇಳಿತ್ತು. ಈ ಸಂಬಂಧ 3 ಸಾವಿರದಷ್ಟು ಆಕ್ಷೇಪಣೆಗಳು ಬಂದಿದ್ದವು.…
ನವದೆಹಲಿ:- ರಾಹುಲ್ ಗಾಂಧಿಗೆ EC ನೋಟಿಸ್ ವಿಚಾರ ಇದೇನು ದೊಡ್ಡ ವಿಚಾರವೇನಲ್ಲ ಎಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಇತ್ತೀಚಿಗೆ ರಾಜಸ್ಥಾನದ ಜಾಲೋರ್ನಲ್ಲಿ ನಡೆದ ಚುಣಾವಣಾ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ಪನೌತಿ (ಅಪಶಕುನ)’ ಎಂದು ನಿಂದಿಸಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಚುನಾವಣಾ ಆಯೋಗ ನೋಟಿಸ್ ನೀಡಿರುವುದು ದೊಡ್ಡ ವಿಚಾರವೇನಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಯಾರ ಮೇಲೂ ಅಂತಹ ತೀವ್ರ ಟೀಕೆಗಳು ಬಂದಿಲ್ಲ. ಆದರೆ ಚುನಾವಣೆ ನಡೆಯುತ್ತಿರುವುದರಿಂದ ಅಬ್ಬರದ ಪ್ರಚಾರ ನಡೆಯುತ್ತಿದೆ ಎಂದಿದ್ದಾರೆ. ಕೇಂದ್ರ ಬಿಜೆಪಿ ಸರ್ಕಾರ ಚುನಾವಣೆಯಲ್ಲಿ ಹೆದರಿಸಲು ಯತ್ನಿಸುತ್ತಿರುವ ರೀತಿ ಸರಿಯಿಲ್ಲ. ಪ್ರಜಾಪ್ರಭುತ್ವ ಉಳಿಸಬೇಕಾದರೆ ಸಮವಾದ ವೇದಿಕೆ ಇರಬೇಕು. ಇದರ ಬದಲಾಗಿ ಸರ್ಕಾರಿ ಸಂಸ್ಥೆಗಳಾದ ಇಡಿ, ಸಿಬಿಐ ಇತ್ಯಾದಿಗಳನ್ನು ಬಿಜೆಪಿ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಪ್ರಧಾನಿನರೇಂದ್ರ ಮೋದಿ ವಿರುದ್ಧ ರಾಹುಲ್ ಗಾಂಧಿ ಹೇಳಿಕೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ನೋಟಿಸ್ಗೆ ಕಾಂಗ್ರೆಸ್ ಉತ್ತರ ನೀಡಲಿದೆ. ರಾಹುಲ್ ಗಾಂಧಿಗೆ ನೋಟಿಸ್ ಕಳುಹಿಸಲಿ ನಾವು…
ಬೆಂಗಳೂರು:- ರಾಜ್ಯದ ೯೮ ನಗರಗಳಲ್ಲಿ ಆನ್ಲೈನ್ ಸೇವೆಗಳು ಮೂರು ದಿನಗಳವರೆಗೆ ಬಂದ್ ಆಗಲಿವೆ. ತುರ್ತು ತಾಂತ್ರಿಕ ಕಾಮಗಾರಿ ಹಿನ್ನೆಲೆ ನವೆಂಬರ್೨೪ರ ರಾತ್ರಿ ೧೨ರಿಂದ ನವೆಂಬರ್ ೨೬ರ ಬೆಳಿಗ್ಗೆ ೧೧.೫೯ ವರೆಗೆ ಎಲ್ಲಾ ರೀತಿಯ ಆನ್ಲೈನ್ ಸೇವೆಗಳು ಬಂದ್ ಆಗಲಿವೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ. ತಾಂತ್ರಿಕ ಕಾಮಗಾರಿಯೇನು? : ಎಲ್ಲಾ ಐದು ಎಸ್ಕಾಂ ಪೋರ್ಟಲ್ಗಳನ್ನು ಒಂದೇ ಸೂರಿನಡಿ ಆನ್ಲೈನ್ ಪಾವತಿ ಸೇವೆ ಕಲ್ಪಿಸಲು ಆರ್-ಎಪಿಡಿಆರ್ಪಿ ಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಎಲ್ಲಾ ಪೋರ್ಟಲ್ಗಳ ಡಾಟಾವನ್ನು ನೂತನ ಪೋರ್ಟಲ್ಗೆ ವರ್ಗಾವಣೆ ಮಾಡಲಾಗುತ್ತಿದೆ. ಹೀಗಾಗಿ ಪೋರ್ಟಲ್ ಸೇವೆ ಬಂದ್ ಆಗಲಿದ್ದು, ವಿದ್ಯುತ್ ಬಿಲ್ ಪಾವತಿ, ಆನ್ಲೈನ್ ಅರ್ಜಿ ಸಲ್ಲಿಕೆ ಸೇರಿದಂತೆ ಯಾವುದೇ ಸೌಲಭ್ಯಗಳು ದೊರೆಯುವುದಿಲ್ಲ. ಈ ಮೂರು ದಿನಗಳು ಎಲ್ಲಾ ಮಾಹಿತಿ ತಂತ್ರಜ್ಞಾನ ಆಧಾರಿತ ಹಾಗೂ ವಿದ್ಯುತ್ ಕಚೇರಿಗಳಲ್ಲಿ ನಗದು ಪಾವತಿ ಸೇವೆಗಳು ಲಭ್ಯವಿರುವುದಿಲ್ಲ. ಹಾಗೂ ಆನ್ಲೈನ್ ಸೇವೆಗಳಾದ ಹೊಸ ವಿದ್ಯುತ್ ಸಂಪರ್ಕ, ಹೆಸರು/ ಲೋಡ್ ಬದಲಾವಣೆ, ನಗದು ಪಾವತಿ, ಬಿಲ್ ಪಾವತಿ ಸೇವೆಗಳು ಇರುವುದಿಲ್ಲ. ಆದರೆ…
ಬೆಂಗಳೂರು:- 11 ಸಾವಿರ ಗ್ರಾಮ ಪಂಚಾಯಿತಿ ನೌಕರರ ಸೇವಾ ಭದ್ರತೆಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಸಿಯುಟಿಯು ಸಂಯೋಜಿತ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು ಕಡಿಮೆ ಅವಧಿಯಲ್ಲಿ ಹಂತ ಹಂತವಾಗಿ ಗ್ರಾಮ ಪಂಚಾಯತಿ ನೌಕರರ ಶ್ರೇಯೋಭಿವೃದ್ಧಿಗಾಗಿ ತಮ್ಮ ಸರ್ಕಾರ ಹಲವಾರು ಸೌಲಭ್ಯಗಳನ್ನು ಜಾರಿಗೊಳಿಸಿದೆ ಎಂದು ಹೇಳಿದರಲ್ಲದೆ ಸುಮಾರು 11,000 ಮಂದಿ ಗ್ರಾಮ ಪಂಚಾಯಿತಿ ನೌಕರರಿಗೆ ಸೇವಾ ಭದ್ರತೆ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು. ಮೂಲವೇತನ, ವಿಶ್ರಾಂತಿ ವೇತನ, ಆರೋಗ್ಯ ಭತ್ಯೆ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ನೌಕರರ ಸಂಘದ ಪದಾಧಿಕಾರಿಗಳು ಸಲ್ಲಿಸಿದ ಬೇಡಿಕೆಯನ್ನು ಪರಿಶೀಲಿಸುವ ಭರವಸೆಯನ್ನು ಸಚಿವರು ನೀಡಿದರು.
ಬೆಂಗಳೂರು:- ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ದೆಹಲಿ ನಿವಾಸಗಳ ಮೇಲೆ ಐಟಿ ದಾಳಿ ಮಾಡಿದ್ದ ಪ್ರಕರಣದಲ್ಲಿ ವಿದೇಶ ಪ್ರಯಾಣಕ್ಕಿರುವ ನಿರ್ಬಂಧಕ್ಕೆ ಈಗ ವಿನಾಯಿತಿ ದೊರೆತಿದೆ. ಐಟಿ ಪ್ರಕರಣದಲ್ಲಿ ಆರೋಪಿಯಾಗಿರುವ ಶಿವಕುಮಾರ್, ವಿಶ್ವಸಂಸ್ಥೆಯ ಪರಿಸರ ಸಮ್ಮೇಳನದಲ್ಲಿ ಭಾಗವಹಿಸಲು ತೆರಳಬೇಕಿದೆ. ಹೀಗಾಗಿ ನವೆಂಬರ್ 29ರಿಂದ ಡಿಸೆಂಬರ್ 3ರ ವರೆಗೆ ತೆರಳಲು ಅನುಮತಿ ನೀಡಬೇಕೆಂದು ಕೋರಿದ್ದರು. ಇದನ್ನು ಪರಿಗಣಿಸಿದ ನ್ಯಾಯಾಧೀಶೆ ಜೆ. ಪ್ರೀತ್ ಅನುಮತಿಸಿ ಆದೇಶ ನೀಡಿದ್ದಾರೆ. ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ಗೆ ಸಂಬಂಧಪಟ್ಟಂತೆ ಸಿಬಿಐ ತನಿಖೆ ನಡೆಸಲು ಸರ್ಕಾರದ ಅನುಮತಿಗೆ ಹೈಕೋರ್ಟ್ ತಡೆ ನೀಡಿತ್ತು. ಈ ತಡೆಯಾಜ್ಞೆಯನ್ನು ತೆರವುಗೊಳಿಸುವಂತೆ ಸಿಬಿಐನಿಂದ ಹೈಕೋರ್ಟ್ಗೆ ಇತ್ತೀಚೆಗಷ್ಟೇ ಅರ್ಜಿ ಸಲ್ಲಿಕೆಯಾಗಿದೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆ, ವಿದೇಶ ಪ್ರಯಾಣಕ್ಕೆ ಅನುಮತಿ ದೊರೆತಿದ್ದರಿಂದ ಡಿಕೆ ಶಿವಕುಮಾರ್ ನಿರಾಳರಾಗುವಂತಾಗಿದೆ.
ಬೆಂಗಳೂರು:- ನವೆಂಬರ್ 25 ಮತ್ತು 26ರಂದು ನಡೆಯಲಿರುವ ಚೊಚ್ಚಲ ಕಂಬಳ ಕಾರ್ಯಕ್ರಮ ಬೆಂಗಳೂರಿನ ಅರಮನೆ ಮೈದಾನದಲ್ಲಿ 200ಕ್ಕೂ ಹೆಚ್ಚು ಜೋಡಿ ಕೋಣಗಳು ಭಾಗವಹಿಸಲಿವೆ. 300ಕ್ಕೂ ಹೆಚ್ಚು ವಾಹನಗಳಲ್ಲಿ ಅವುಗಳನ್ನು ಬೆಂಗಳೂರಿಗೆ ಸಾಗಿಸಲಾಗುತ್ತಿದ್ದು, ಗುರುವಾರ ರಾತ್ರಿಯೇ ಅರಮನೆ ಮೈದಾನಕ್ಕೆ ತಲುಪುವ ನಿರೀಕ್ಷೆಯಿದೆ. ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ನಡೆಯುವ ಕಾರ್ಯಕ್ರಮದಲ್ಲಿ ಸುಮಾರು 6 ಲಕ್ಷ ಮಂದಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ಪುತ್ತೂರು ಶಾಸಕ ಹಾಗೂ ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ನಗರ ಪೊಲೀಸರು ವಾಹನ ನಿಲುಗಡೆ ಮತ್ತು ಸಂಚಾರ ನಿಯಮಗಳ ವ್ಯವಸ್ಥೆ ಮಾಡಲು ಪ್ರಾರಂಭಿಸಿದ್ದಾರೆ. ಅರಮನೆ ಮೈದಾನದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಹನ ಸಂಚಾರಕ್ಕೆ ತೊಂದರೆಯಾಗುವ ಸಾಧ್ಯತೆಯಿದೆ. ಅರಮನೆ ಮೈದಾನದ ಸುತ್ತಮುತ್ತಲಿನ ಪ್ರದೇಶಗಳಾದ ಗುಟ್ಟಹಳ್ಳಿ, ಸದಾಶಿವನಗರ, ವೈಯಾಲಿಕಾವಲ್, ನ್ಯೂ ಬಿಇಎಲ್ ರಸ್ತೆ, ಮೇಖ್ರಿ ವೃತ್ತ, ಜಯಮಹಲ್ ಮುಖ್ಯ ರಸ್ತೆ, ಕಂಟೋನ್ಮೆಂಟ್ ಸ್ಟೇಷನ್, ಹೆಬ್ಬಾಳ, ಗಂಗೇನಹಳ್ಳಿ, ಮತ್ತು ಇತರ ಪ್ರದೇಶಗಳಲ್ಲಿ ಟ್ರಾಫಿಕ್ ಜಾಮ್ ಆಗುವ ಸಾಧ್ಯತೆ ಇದೆ.…
ನವ ದೆಹಲಿ ನ 24 ;ಕರ್ನಾಟಕ ರಾಜ್ಯದಲ್ಲಿ ಬರಪರಿಸ್ಥಿತಿ ತಲೆದೋರಿದ್ದು ಶೀಘ್ರ ಪರಿಹಾರ ಧನ ಬಿಡುಗಡೆ ಮಾಡುವಂತೆ ಕೇಂದ್ರ ಹಣಕಾಸು ಸಚಿವರಿಗೆ ಮನವಿ ಮಾಡಲಾಗಿದೆ. ಬಿಡುಗಡೆ ಮಾಡಿದ ಹಣವನ್ನು ಪಾರದರ್ಶಕವಾಗಿ, ಶೀಘ್ರವಾಗಿ, ರೈತರ ಖಾತೆಗಳಿಗೆ ನೇರವಾಗಿ ವರ್ಗಾವಣೆ ಮಾಡಲಾಗುವುದು ಎಂದು ಸಚಿವರಾದ ಕೃಷ್ಣಾ ಬೈರೇಗೌಡ ತಿಳಿಸಿದರು. ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಜತೆಗೂಡಿ ಕೇಂದ್ರ ಹಣಕಾಸು ಸಚಿವರೊಂದಿಗೆ ಚರ್ಚೆ ನಡೆಸಿದ ನಂತರ ಅವರು ಸುದ್ದಿಗಾರರಿಗೆ ಇಂದಿನ ಭೇಟಿಯ ಬಗ್ಗೆ ಮಾಹಿತಿ ಒದಗಿಸಿದರು.. 2015 ರ ಕೇಂದ್ರ ಸರ್ಕಾರದ ಅಂಕಿ ಅಂಶಗಳ ಪ್ರಕಾರ ರಾಜ್ಯದಲ್ಲಿ ಸಣ್ಣ ಹಾಗೂ ಅತಿ ಸಣ್ಣ ರೈತರು ಶೇ 44 ರಷ್ಟಿದ್ದಾರೆ ಎಂಬ ಮಾಹಿತಿ ಇದೆ. 2015 ರ ಅಂಕಿ ಸಂಖ್ಯೆ ಪ್ರಕಾರ ಬರ ಪರಿಹಾರ ಬಿಡುಗಡೆ ಮಾಡಿದರೆ ರಾಜ್ಯದ ರೈತರಿಗೆ ಅನ್ಯಾಯವಾಗುತ್ತದೆ. ಕಿಸಾನ್ ಸಮ್ಮಾನ್ ಹಾಗೂ ರಾಜ್ಯ ಸರ್ಕಾರದ ಫ್ರೂಟ್ ಐಡಿ ನೊಂದಣಿ ಪ್ರಕಾರ ರಾಜ್ಯದಲ್ಲಿ ಶೇ 70 ಕ್ಕಿಂತಲೂ ಅಧಿಕ ಪ್ರಮಾಣದ ಸಣ್ಣ ಮತ್ತು ಅತಿ…