Author: AIN Author

ನವದೆಹಲಿ:-ಸ್ಪೈಸ್​ಜೆಟ್ ವಿಮಾನಕ್ಕೆ ಬಾಂಬ್ ದಾಳಿ ಬೆದರಿಕೆ ಹಿನ್ನೆಲೆ ದೆಹಲಿ ವಿಮಾನ ನಿಲ್ದಾಣದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ವಿಮಾನದಲ್ಲಿದ್ದ 200ಕ್ಕೂ ಆತಂಕಕ್ಕೀಡಾದರು. ಬೆದರಿಕೆ ಸಂದೇಶ ದೊರೆತ ಬೆನ್ನಲ್ಲೇ ವಿಮಾನದಿಂದ ಪ್ರಯಾಣಿಕರನ್ನು ಇಳಿಸಿ ಸಂಪೂರ್ಣ ತಪಾಸಣೆಗಾಗಿ ಪ್ರತ್ಯೇಕ ಪ್ರದೇಶಕ್ಕೆ ಸ್ಥಳಾಂತರಗೊಳಿಸಲಾಯಿತು. ನಂತರ ವಿಮಾನ ನಿಲ್ದಾಣದಲ್ಲಿ ಭದ್ರತಾ ಕಟ್ಟೆಚ್ಚರ ಘೋಷಿಸಲಾಯಿತು ರಾಷ್ಟ್ರ ರಾಜಧಾನಿಯಲ್ಲಿ ಗಣರಾಜ್ಯೋತ್ಸವ ಆಚರಣೆಗೆ ಎರಡು ದಿನಗಳ ಮುನ್ನವೇ ಈ ಘಟನೆ ನಡೆದಿರುವುದು ಆತಂಕಕ್ಕೆ ಕಾರಣವಾಗಿದೆ. ಆದಾಗ್ಯೂ, ಸ್ಪೈಸ್​ಜೆಟ್ ವಿಮಾನದಿಂದ ಪ್ರಯಾಣಿಕರನ್ನು ಸುರಕ್ಷಿತವಾಗಿ ಇಳಿಸಿ ನಂತರ ಶೋಧ ನಡೆಸಿದಾಗ ಅನುಮಾನಾಸ್ಪದ ಏನೂ ಪತ್ತೆಯಾಗಿಲ್ಲ. ಹೀಗಾಗಿ ಇದೊಂದು ಹುಸಿ ಬಾಂಬ್ ಬೆದರಿಕೆ ಎಂದು ಪರಿಗಣಿಸಲಾಯಿತು. ಬಿಹಾರದ ದರ್ಭಾಂಗಾದಿಂದ ಹೊರಟಿದ್ದ ವಿಮಾನದಲ್ಲಿ ಬಾಂಬ್ ಇರುವ ಬಗ್ಗೆ ಬುಕಿಂಗ್ ಕಚೇರಿಗೆ ಕರೆ ಬಂದಿತ್ತು ಎಂದು ಸ್ಪೈಸ್​ಜೆಟ್ ಏರ್‌ಲೈನ್ಸ್ ತಿಳಿಸಿದೆ. ನಿನ್ನೆ ಸಂಜೆ 6 ಗಂಟೆಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಇಳಿಸಲಾಯಿತು ಮತ್ತು ಪ್ರತ್ಯೇಕ ಪ್ರದೇಶಕ್ಕೆ ಸ್ಥಳಾಂತರಿಸಲಾಯಿತು. ನಂತರ ವ್ಯಾಪಕ ಶೋಧ ನಡೆಸಲಾಯಿತು ಎಂದು ಏರ್​ಲೈನ್ಸ್ ತಿಳಿಸಿದೆ. ಸಂಜೆಯ…

Read More

ಲಕ್ನೋ: ತನ್ನ 5 ಜನ ಸಹೋದರರಿಗೆ ಹಣ ನೀಡಿ ಪತ್ನಿಯನ್ನೇ (Wife)  ಪತಿ (Husband)  ಕೊಲೆ ಮಾಡಿಸಿರುವ ಘಟನೆ ಫತೇಪುರ್‌ನಲ್ಲಿ  (Fatehpur)  ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ (Uttar Pradesh) ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ರೋಹಿತ್ ಲೋಧಿ, ರಾಮಚಂದ್ರ ಆಲಿಯಾಸ್ ಪುಟ್ಟು, ಶಿವಂ ಅಲಿಯಾಸ್ ಪಂಚಮ್, ಸೋನು ಲೋಧಿ ಎಂದು ಗುರುತಿಸಲಾಗಿದೆ. ಐದನೇ ಆರೋಪಿಯಾದ ನೊಂಕು ಲೋಧಿ ಪರಾರಿಯಾಗಿದ್ದಾನೆ. ಸಂತ್ರಸ್ತೆಯ ಗಂಡ ದುಬೈನಲ್ಲಿದ್ದಾನೆ ಎಂದು ತಿಳಿದು ಬಂದಿದೆ. ಏನಿದು ಪ್ರಕರಣ? ತವರು ಮನೆಗೆ ಹೋಗಿದ್ದ ಅತ್ತಿಗೆಯನ್ನು ಜಾತ್ರೆಗೆ ಕರೆದುಕೊಂಡು ಹೋಗುತ್ತೇವೆ ಎಂದು ಹೇಳಿ ಆಕೆಯನ್ನು ನಂಬಿಸಿ ಮೈದುನರು ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ಆಕೆಯ ಮೇಲೆ ಐದು ಜನ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ನಂತರ ಆಕೆಯ ಗುರುತನ್ನು ಮರೆಮಾಚಲು ಮುಖಕ್ಕೆ ಇಟ್ಟಿಗೆಗಳಿಂದ ಹೊಡೆದು ಹಲ್ಲೆ ಮಾಡಿದ್ದಾರೆ. ಹಲ್ಲೆ ಮಾಡಿದ ನಂತರ ಸಂತ್ರಸ್ತೆಯ ಮೃತದೇಹವನ್ನು ಬೆತ್ತಲೆಯಾಗಿಯೇ ಫತೇಪುರ್‌ನಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡವೊಂದರ ನೀರಿನ ಟ್ಯಾಂಕ್‌ನಲ್ಲಿ ಬಿಸಾಡಿ ಹೋಗಿದ್ದರು. ಗ್ರಾಮಸ್ಥರು ಮೃತದೇಹವನ್ನು…

Read More

ಬಾಲಿವುಡ್ ಬ್ಯೂಟಿ ಪೂಜಾ ಹೆಗ್ಡೆ (Pooja Hegde) ಅವರು ಮೂಲತಃ ಮಂಗಳೂರಿನವರು. ಸಮಯ ಸಿಕ್ಕಾಗಲೆಲ್ಲಾ ಅವರು ತಮ್ಮ ಹುಟ್ಟೂರಿಗೆ ನಟಿ ಭೇಟಿ ನೀಡುತ್ತಿರುತ್ತಾರೆ. ಇದೀಗ ಉಡುಪಿಗೆ (Udupi) ಭೇಟಿ ಕೊಟ್ಟಿರುವ ಪೂಜಾ ಅವರು ದುಬಾರಿ ಮೊತ್ತದ ಲಂಗ-ದಾವಣಿಯಲ್ಲಿ ನಟಿ ಮಿಂಚಿದ್ದಾರೆ. ಸೌತ್ ಮತ್ತು ಬಾಲಿವುಡ್‌ನಲ್ಲಿ ಮಿಂಚುತ್ತಿರುವ ಪೂಜಾ ಹೆಗ್ಡೆ ಅವರಿಗೆ ಮಂಗಳೂರು ಅಂದರೆ ವಿಶೇಷ ಪ್ರೀತಿಯಿದೆ. ಮುಂಬೈನಲ್ಲಿ ಸೆಟಲ್ ಆಗಿದ್ದರೂ ಕೂಡ ತಾವು ಹುಟ್ಟಿದ ಊರಿನ ಬಗ್ಗೆ ಅಭಿಮಾನವಿದೆ. ಇತ್ತೀಚೆಗೆ ನಡೆದ ಬೆಂಗಳೂರಿನ ಕಂಬಳದಲ್ಲಿ (Kambala) ಪೂಜಾ ಹೆಗ್ಡೆ ಭಾಗವಹಿಸಿದ್ದರು. ಇದಾದ ಬಳಿಕ ಈಗ ಉಡುಪಿಗೆ ಭೇಟಿ ನೀಡಿದ್ದು, ಕುಟುಂಬದ ಕಾರ್ಯಕ್ರಮವೊಂದರಲ್ಲಿ ಮಿಂಚಿದ್ದಾರೆ. ಈ ವೇಳೆ, ಪಿಂಕ್ ಮತ್ತು ಹಸಿರು ಬಣ್ಣದ ಲಂಗ-ದಾವಣಿಯಲ್ಲಿ ಮುದ್ದಾಗಿ ನಟಿ ಕಾಣಿಸಿಕೊಂಡಿದ್ದಾರೆ. ಪೂಜಾ ಮಸ್ತ್ ಆಗಿ ಫೋಟೋಶೂಟ್ ಮಾಡಿಸಿದ್ದಾರೆ. 1.39 ಲಕ್ಷ ಮೊತ್ತದ ದುಬಾರಿ ಮೊತ್ತದ ಧಿರಿಸಿನಲ್ಲಿ ನಟಿ ಕಾಣಿಸಿಕೊಂಡಿರೋದು ವಿಶೇಷ. ಲಂಗ-ದಾವಣಿ ಧರಿಸಿ, ಹೂ ಮುಡಿದು ಮಿಂಚುತ್ತಿರುವ ಪೂಜಾ ಲುಕ್ ನೋಡಿ ಅಭಿಮಾನಿಗಳು ಮದುವೆ…

Read More

ಬರೋಬ್ಬರಿ 5 ಸಿನಿಮಾಗಳನ್ನು ಘೋಷಣೆ ಮಾಡಿ ಅಚ್ಚರಿ ಮೂಡಿಸಿದ್ದಾರೆ ನಿರ್ದೇಶಕ ಆರ್.ಚಂದ್ರು. ಕಬ್ಜ ಸಿನಿಮಾದ ನಂತರ ಕಬ್ಜ 2 ಸಿನಿಮಾ ಬರುವುದಿಲ್ಲ ಎಂದು ಗಾಂಧಿನಗರ ಆಡಿಕೊಂಡಿತ್ತು. ಆಡಿಕೊಂಡ ಬಾಯಿಗಳಿಗೆ ಸಿನಿಮಾ ಘೋಷಣೆ ಮಾಡುವ ಮೂಲಕ ಸರಿಯಾಗಿಯೇ ತಿರುಗೇಟು ನೀಡಿದ್ದಾರೆ. ಕಬ್ಜ ಸಿನಿಮಾ ರಿಲೀಸ್ ಆಗಿ ಮೊದಲನೇ ದಿನವೇ ನೂರು ಕೋಟಿ ಕ್ಲಬ್ ಸೇರಿದ್ದ ಬಗ್ಗೆ ಚಿತ್ರತಂಡ ಹೇಳಿಕೊಂಡಿತ್ತು. ಆದರೆ, ಕೆಲವರು ಅದನ್ನು ತಮಾಷೆ ಮಾಡಿದ್ದರು. ಅದಕ್ಕೂ ಚಂದ್ರು ಉತ್ತರ ನೀಡಿದ್ದಾರೆ. ಕಬ್ಜ ಸಿನಿಮಾದಿಂದ ಸರಕಾರಕ್ಕೆ ಬರೋಬ್ಬರಿ 20 ಕೋಟಿ ರೂಪಾಯಿಯನ್ನು ತೆರಿಗೆ ಕಟ್ಟಿರುವುದಾಗಿ ಹೇಳಿದ್ದಾರೆ. ಚಿತ್ರರಂಗದಲ್ಲಿ ಪ್ಯಾನ್ ಇಂಡಿಯಾ ಸಿನಿಮಾಗಳ ಹಾವಳಿ ಜೋರಾಗಿದೆ. ಕಳೆದ ವರ್ಷ ‘ಕಬ್ಜ’ (Kabzaa) ಚಿತ್ರದ ಮೂಲಕ ನಿರ್ದೇಶಕ, ನಿರ್ಮಾಪಕನಾಗಿ ಗೆದ್ದಿರುವ ಆರ್.ಚಂದ್ರು (R.Chandru) ಇದೀಗ ಒಮ್ಮೆಲೆ 5 ಪ್ಯಾನ್ ಇಂಡಿಯಾ ಸಿನಿಮಾಗಳನ್ನು ಅನೌನ್ಸ್ ಮಾಡಿದ್ದಾರೆ. ನಿನ್ನೆ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸಿನಿಮಾಗಳಿಗೆ ಚಾಲನೆ ನೀಡಿದ್ದಾರೆ. ಕಬ್ಜ’ (Kabzaa) ಖ್ಯಾತಿಯ ಆರ್.ಚಂದ್ರು (R.Chandru)…

Read More

ಬೆಂಗಳೂರು:- ಬೆಂಗಳೂರಲ್ಲಿ ಮೋಡಕವಿದ ವಾತಾವರಣ ಇದ್ದು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರಲ್ಲಿ ಬುಧವಾರದಿಂದಲೂ ಮೋಡಕವಿದ ವಾತಾವರಣವಿದೆ, ಚಳಿ ಕಡಿಮೆಯಾಗಿ ಗರಿಷ್ಠ ಉಷ್ಣಾಂಶ ಹೆಚ್ಚಾಗಿದೆ. ಬಳ್ಳಾರಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲೂ ಒಣಹವೆ ಮುಂದುವರೆಯಲಿದೆ. ಉತ್ತರ ಒಳನಾಡಿನಲ್ಲಿ ಚಳಿ ಹೆಚ್ಚಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಮುಂದುವರೆಯಲಿದೆ. ಬೆಳಗಾವಿ ವಿಮಾನ ನಿಲ್ದಾಣದಲ್ಲಿ 9.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಲ್ಲಿ ಮೋಡಕವಿದ ವಾತಾವರಣವಿದ್ದು, 29 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್​ಎಎಲ್​ನಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 15.6 ಡಿಗ್ರಿ…

Read More

ಮಾಜಿ ನೀಲಿ ಸಿನಿಮಾಗಳ ತಾರೆ ಸನ್ನಿ ಲಿಯೋನ್ (Sunny Leone), ಈಗಾಗಲೇ ಅನೇಕ ಉದ್ಯಮಗಳಲ್ಲಿ ತೊಡಗಿಕೊಂಡಿದ್ದಾರೆ. ಪಾರ್ನ್ ಪ್ರಪಂಚದಿಂದ ದೂರವಾದ ನಂತರ ಅವರು ತಮ್ಮದೇ ಆದ ಸಾಕಷ್ಟು ಬ್ರ್ಯಾಂಡ್ ಗಳನ್ನು ಹೊಂದಿದ್ದಾರೆ. ಇದೀಗ ಮತ್ತೊಂದು ಹೊಸ ಉದ್ಯಮಕ್ಕೆ ಕಾಲಿಟ್ಟಿದ್ದು, ಆ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ರೆಸ್ಟೋರೆಂಟ್ (Restaurant) ಶುರು ಮಾಡಬೇಕು ಎನ್ನುವುದು ಸನ್ನಿ ಆಸೆಯಿತ್ತಂತೆ. ಅದನ್ನು ಈಗ ಈಡೇರಸಿಕೊಂಡಿದ್ದಾರೆ. ಪತಿಯ ಜೊತೆಗೂಡಿ ದೆಹಲಿಯ ನೋಯ್ಡಾದಲ್ಲಿ ರೆಸ್ಟೊರೆಂಟ್ ಶುರು ಮಾಡಿದ್ದು, ಅದಕ್ಕೆ ಚಿಕಲೋಕ ಎಂದು ಹೆಸರಿಟ್ಟಿದ್ದಾರೆ. ರೆಸ್ಟೋರೆಂಟ್ ವಿಡಿಯೋವನ್ನು ಸನ್ನಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಟಿವಿ ಕಲಾವಿದರು, ಸಿನಿಮಾ ಜಗತ್ತಿನಲ್ಲಿ ಇರೋರು, ಒಂದೇ ಕೆಲಸಕ್ಕೆ ಸೀಮಿತವಾಗಬೇಡಿ ಎಂದು ಸಲಹೆಯನ್ನೂ ನೀಡಿದ್ದಾರೆ. ನಮ್ಮನ್ನು ನಾವು ವಿಸ್ತರಿಸಿಕೊಳ್ಳುತ್ತಾ ಹೋಗಬೇಕು ಎಂದು ಸನ್ನಿ ಹೇಳಿದ್ದಾರೆ. ಕೇವಲ ಉದ್ಯಮದಲ್ಲಿ ಮಾತ್ರ ಸನ್ನಿ ಲಿಯೋನ್ ತೊಡಗಿಕೊಂಡಿಲ್ಲ. ಸಾಮಾಜಿಕ ಕಾರ್ಯಗಳಿಗಾಗಿಯೇ ಟ್ರಸ್ಟ್ ಅನ್ನು ಅವರು ಶುರು ಮಾಡಿದ್ದಾರೆ. ಅದರ ಮೂಲಕ ಸಾಕಷ್ಟು ಸಮಾಜಮುಖಿ ಕೆಲಸಗಳನ್ನು ಅವರು ಮಾಡಿದ್ದಾರೆ.

Read More

ಟಾಟಾ ಮೋಟಾರ್ಸ್ ಮುಂದಿನ ತಿಂಗಳಿಂದ ಎಲೆಕ್ಟ್ರಿಕ್ ವಾಹನಗಳು ಸೇರಿದಂತೆ ತನ್ನ ಎಲ್ಲಾ ಪ್ರಯಾಣಿಕ ವಾಹನಗಳ ಬೆಲೆಗಳಲ್ಲಿ ಸರಾಸರಿ ಶೇಕಡ ಏಳರಷ್ಟು ಹೆಚ್ಚಳವನ್ನು ಮಾಡಲಿದೆ ಫೆಬ್ರವರಿ ಒಂದರಿಂದ ಬೆಲೆ ಹೆಚ್ಚಳ ಅನ್ವಯವಾಗಲಿದೆ ಉತ್ಪಾದನಾ ವೆಚ್ಚದಲ್ಲಿ ಹೆಚ್ಚಳವಾಗಿದ್ದು ಇದನ್ನು ಭಾಗಶಹ ಸರಿದೂಗಿಸಲು ಕಂಪನಿಯು ಈ ನಿರ್ಧಾರ ತೆಗೆದುಕೊಳ್ಳುತ್ತಿದೆ ಕಂಪನಿಯು ಟಾಟಾ ಪಂಚ್ ನೆಕ್ಸನ್ ಮತ್ತು ಯಾರ್ಯಾರ್ ಸೇರಿದಂತೆ ಹಲವಾರು ಪ್ರಯಾಣಿಕ ವಾಹನಗಳನ್ನು ಮಾರಾಟ ಮಾಡುತ್ತಿದೆ ಹಣದುಬ್ಬರ ಮತ್ತು ಸರಕುಗಳ ಬೆಲೆ ಏರಿಕೆಯಿಂದ ಉಂಟಾದ ಒತ್ತಡದಿಂದಾಗಿ ಕಂಪನಿಯು ಬೆಲೆ ಹೆಚ್ಚಿಸುವ ನಿರ್ಧಾರ ತೆಗೆದುಕೊಳ್ಳುತ್ತಿದೆ ಹಾಗೇ ವೆಚ್ಚ ಕಡಿಮೆ ಮಾಡಲು ನಾವು ಸಾಧ್ಯವಿರುವ ಎಲ್ಲಾ ಕ್ರಮ ತೆಗೆದುಕೊಳ್ಳುತ್ತಿದ್ದೇವೆ ಎಂದು ಕಂಪನಿಯು ತಿಳಿಸಿದೆ

Read More

ಬೆಂಗಳೂರು:- ಕರ್ನಾಟಕ ರಾಜ್ಯ ಸರಕಾರಿ ನೌಕರರು ಹಲವು ವರ್ಷಗಳಿಂದ ನಡೆಸುತ್ತಿದ್ದ ಹೋರಾಟಕ್ಕೆ ಕೊನೆಗೂ ಸಿದ್ದರಾಮಯ್ಯ ಸರ್ಕಾರ ಮಣಿದಿದೆ.ಹೌದು, ಹೊಸ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ, ಹಳೆ ಪಿಂಚಣಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮತಿ ನೀಡಿದ್ದಾರೆ. ಇದರ ಬೆನ್ನಲ್ಲೇ ಸರಕಾರಿ ಹೊಸ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ, ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಿ ಅಧಿಕೃತ ಆದೇಶ ಹೊರಬಿದ್ದಿದೆ. 2006ರ ಏಪ್ರಿಲ್​ಗೆ ಮುನ್ನ ನೇಮಕಗೊಂಡ ಸರ್ಕಾರಿ ನೌಕರರು OPS ವ್ಯಾಪ್ತಿಗೆ ಒಳಪಡಿಸಲು ಸರ್ಕಾರ ಅಧಿಸೂಚನೆ ಹೊರಡಿಸಿದೆ. ಇದು ಎಲ್ಲಾ ಸರ್ಕಾರಿ ನೌಕರರಿಗೂ ಸಂಬಂಧಪಟ್ಟಿರುವುದಿಲ್ಲ. ಕೇವಲ ಏಪ್ರಿಲ್ 2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆ ಮೂಲಕ ಆಯ್ಕೆ ಹೊಂದಿದವರಿಗೆ ಮಾತ್ರ ಎಂದು ತಿಳಿಸಿದೆ. ಕರ್ನಾಟಕ ಸರಕಾರದ ಆರ್ಥಿಕ ಇಲಾಖೆಯ ಉಪ ಕಾರ್ಯದರ್ಶಿ ಅವರು ಹಳೆ ಪಿಂಚಣಿ ಯೋಜನೆಗೆ ಸಂಬಂಧಿಸಿದಂತೆ ಆದೇಶ ಹೊರಡಿಸಿದ್ದಾರೆ.

Read More

ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಚಿಕ್ಕ ಹಾಗಡೆ ಗ್ರಾಮದಲ್ಲಿ ಕಾಡಾನೆ ದಾಳಿಗೆ ಟೊಮೊಟೊ ಬೆಳೆ ನಾಶವಾಗಿದೆ. ರಾಜಪ್ಪ ಎಂಬವರಿಗೆ ಸೇರಿದ ಒಂದು ಎಕರೆ ಟೊಮೊಟೊ ತೋಟದಲ್ಲಿ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಇತ್ತೀಚೆಗೆ ಕಾಡು ಪ್ರಾಣಿಗಳು ಆಹಾರ ಹರಿಸಿಕೊಂಡು ಕಾಡಿನಿಂದ ನಾಡಿನಕಡೆ ಮುಖ ಮಾಡುತ್ತಿದೆ. ಅದರಲ್ಲೂ ತಮಿಳುನಾಡು ಗಡಿ ಭಾಗದ ವನಕನಹಳ್ಳಿ ಡೆಂಕಣಿಕೋಟೆ ಶಾಣ್ಮಾವು ಹೊಸೂರು ಭಾಗದಲ್ಲಿ ಕಾಣಿಸಿಕೊಳ್ಳುತ್ತಿದ್ದ ಕಾಡಾನೆಗಳು ಕರ್ನಾಟಕದ ಗಡಿಭಾಗದಲ್ಲಿ ಕಾಣಿಸಿಕೊಂಡು ಜನರಿಗೆ ನಿದ್ದೆಗೆಡಿಸಿದೆ. ಅದು ಮಾತ್ರವಲ್ಲದೆ ಕಾಡಂಚಿನಲ್ಲಿರುವ ಗ್ರಾಮಗಳಿಗೆ ಮತ್ತು ರೈತರಿಗೆ ತಲೆನೋವಾಗಿ ಪರಿಣಮಿಸಿದೆ. ವರ್ಷವೆಲ್ಲ ಕಷ್ಟಪಟ್ಟು ಬೆಳೆದ ಬೆಳೆ, ಕಾಡಾನೆಗಳಿಂದಾಗಿ ರೈತನ ಬಾಳಿಗೆ ಕೊಳ್ಳಿ ಇಟ್ಟಿದೆ. ಇನ್ನು ಕಳೆದ ರಾತ್ರಿ ನಾಲ್ಕು ಕಾಡಾನೆಗಳು ತೋಟಕ್ಕೆ ಲಗ್ಗೆ ಇಟ್ಟು ಟೊಮೊಟೊ ರಾಗಿ ಮೆದೆ ದಾಂದಲೆ ನಡೆಸಿದ್ದಲ್ಲದೆ, ರೈತನಿಗೆ ಲಕ್ಷಾಂತರ ರೂಪಾಯಿ ಬೆಳೆ ಹಾನಿ ಮಾಡಿದೆ. ತೋಟಕ್ಕೆ ನುಗ್ಗಿ ಸಂಪೂರ್ಣ ಬೆಳೆನಾಶ ಮಾಡಿದೆ. ಇದರಿಂದ ಲಕ್ಷಾಂತರ ರೂಪಾಯಿ ರೈತರಿಗೆ ನಷ್ಟ ಆಗಿದೆ. ಇನ್ನು ಅರಣ್ಯ ಅಧಿಕಾರಿಗಳು…

Read More

ಕರಾಚಿ : ದೇಶಾದ್ಯಂತ ರಾಮಮಂದಿರ ಉದ್ಘಾಟನೆಯನ್ನು ಕಣ್ತುಂಬಿಕೊಂಡಿದ್ದಾರೆ. ಐದು ಶತಮಾನಗಳ ಕಾಲ ಭಾರತೀಯರು ಕಾಯುತ್ತಿದ್ದ ಶ್ರೀರಾಮನ ಮಂದಿರ ಸಕಾರಗೊಂಡಿದೆ. ಈ ಮದುರ ಕ್ಷಣವನ್ನು ಕೋಟ್ಯಂತರ ಭಾರತೀಯರು, ಸಿನಿಮಾ ನಟರು, ಕ್ರಿಕೆಟಿಗರು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ಪಾಲ್ಗೊಂಡು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದರು. ಇದೇ ಸಂದರ್ಭದಲ್ಲಿ ಪಾಕಿಸ್ತಾನದ ವಿದೇಶಾಂಗ ಸಚಿವಾಲಯ ರಾಮಮಂದಿರದ ಪ್ರತಿಷ್ಠಾಪನಾ ಕಾರ್ಯಕ್ಕೆ ಖಂಡನೆ ವ್ಯಕ್ತಪಡಿಸಿದ್ದು, ಇದು ಪ್ರಜಾಪ್ರಭುತ್ವದ ಮೇಲೆ ಕಪ್ಪುಚುಕ್ಕೆ ಎಂದು ವಿಷ ಕಾರಿಕೊಂಡಿದೆ. ಭಾರತದ ಮುಸ್ಲಿಮರನ್ನು ಮೂಲೆಗುಂಪು ಮಾಡುವ ಪ್ರಯತ್ನ ಇದಾಗಿದೆ ಎಂದು ಆರೋಪಿಸಿರುವ ಪಾಕಿಸ್ತಾನ, ಭಾರತದಲ್ಲಿ ಬಹುಸಂಖ್ಯಾತರ ಮೇಲುಗೈ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ಮುಂದೆ ಕಾಶಿಯ ಜ್ಞಾನವ್ಯಾಪಿ ಮಸೀದಿ ಹಾಗೂ ಮಥುರಾದ ಶಾಹಿ ಈದ್ಗಾ ಮಸೀದಿಗೂ ಸಹ ಆತಂಕ ಶುರುವಾಗಿದೆ. ವಿಶೇಷವಾಗಿ, ವಾರಾಣಸಿ ಜ್ಞಾನವಾಪಿ ಮಸೀದಿ & ಮಥುರಾ ಶಾಹಿ ಈದ್ಗಾ ಮಸೀದಿ ಸೇರಿ ಮಸೀದಿಗಳ ಮೇಲೆ ದೇವಾಲಯ ನಿರ್ಮಿಸಲು ಉದ್ದೇಶಿಸಿರುವ ಪಟ್ಟಿಯೂ ಬೆಳೆಯುತ್ತಿದೆ. ಇದು ಅಪವಿತ್ರತೆ & ವಿನಾಶ’ ಅಂತಾ ಹೇಳಿದೆ ಪಾಕಿಸ್ತಾನ ಸರ್ಕಾರ ಹೇಳಿದೆ. https://twitter.com/ForeignOfficePk/status/1749390207630155801?ref_src=twsrc%5Etfw%7Ctwcamp%5Etweetembed%7Ctwterm%5E1749390207630155801%7Ctwgr%5E58e9fd0eeb8775f2eb6cf2beb4b92fcbf9b08d6a%7Ctwcon%5Es1_&ref_url=https%3A%2F%2Fnews.abplive.com%2Fnews%2Fworld%2Fpakistan-raises-concerns-over-ram-temple-inauguration-cites-growing-majoritarianism-in-india-1658592…

Read More