ಬೆಂಗಳೂರು:- ಯಾವುದೇ ಕಾರಣಕ್ಕೂ ನಾನು ರಾಜಕೀಯಕ್ಕೆ ಹೋಗಲ್ಲ ಎಂದು ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ಸಿ.ಎನ್ ಮಂಜುನಾಥ್ ಹೇಳಿದ್ದಾರೆ. ಮಂಜುನಾಥ್ ಸೇವಾವಧಿ ಇದೇ ತಿಂಗಳ 31ರಂದು ಮುಕ್ತಾಯವಾಗಲಿದೆ. ಡಾ.ಸಿ.ಎನ್ ಮಂಜುನಾಥ್ ಅವರನ್ನು ಜಯದೇವ ಆಸ್ಪತ್ರೆ ನಿರ್ದೇಶಕ ಸ್ಥಾನದಲ್ಲಿ ಮುಂದುವರೆಸಲು ರಾಜ್ಯ ಸರ್ಕಾರ ಆಸಕ್ತಿ ತೋರಿಸಿಲ್ಲ. ಹೀಗಾಗಿ ಡಾ.ಸಿ.ಎನ್ ಮಂಜುನಾಥ್ ಅವರು ಜನವರಿ 31ರಂದು ನಿವೃತ್ತಿ ಪ್ರಕಟಿಸಲು ತಯಾರಿ ನಡೆಸಿದ್ದಾರೆ. ಅಲ್ಲದೇ, ತಮ್ಮನ್ನು ರಾಜ್ಯ ಸರ್ಕಾರ ಸರಿಯಾಗಿ ಬೀಳ್ಕೊಡದ ಬಗ್ಗೆ ಪರೋಕ್ಷವಾಗಿ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಡಾ.ಮಂಜುನಾಥ್, ಕಲಬುರಗಿ ಜಯದೇವ ಕಂಪ್ಲೀಟ್ ಮಾಡಿ ನಿವೃತ್ತಿ ಆಗಬೇಕು ಎಂದು ಇದ್ದೆ. ಆದರೆ ಇಷ್ಟರ ಒಳಗಡೆ ಈ ರೀತಿ ನಿರ್ಧಾರ ಆಗಿದೆ. ಜನಸಾಮಾನ್ಯರು, ಜನರು ನನಗೆ ಗೌರವ ಕೊಡುತ್ತಾ ಇದ್ದಾರೆ. ಗೌರವಯುತವಾಗಿ ಕಳಹಿಸಿಕೊಡುತ್ತಿದ್ದಾರೆ. ರಾಜಕೀಯಕ್ಕೆ ನಾನು ಹೋಗಲ್ಲ. ನನ್ನ ಮೊದಲ ಆಯ್ಕೆ ನನ್ನ ವೃತ್ತಿ. ಇಲ್ಲಿಂದ ಹೊರ ಹೋದ ಮೇಲೂ ನಾನು ನನ್ನ ವೃತ್ತಿಯಲ್ಲಿ ಮುಂದುವರೆಯುತ್ತೇನೆ. ರಾಜಕೀಯ ಇದೆಲ್ಲ ಗಾಳಿ ಸುದ್ದಿ ಎಂದು ಸ್ಪಷ್ಟನೆ…
Author: AIN Author
ಆಲೂಗಡ್ಡೆಯಲ್ಲಿ ಅನೇಕ ಪೋಷಕಾಂಶಗಳು ಸಮೃದ್ಧವಾಗಿದೆ. ಆದರೆ ಆಲೂಗಡ್ಡೆಯನ್ನು ಸರಿಯಾದ ರೀತಿಯಲ್ಲಿ ಸೇವಿಸಿದರೆ ಒಳ್ಳೆಯದಂತೆ. ಆಲೂಗಡ್ಡೆ 2 ಪ್ರತಿಶತದಷ್ಟು ಸಕ್ಕರೆಯಂಶವನ್ನು ಹೊಂದಿರುತ್ತದೆ. ಅಲ್ಲದೇ ಆಲೂಗಡ್ಡೆಯನ್ನು ಹೆಚ್ಚಾಗಿ ಬೇಯಿಸಿ ತಿನ್ನುತ್ತಾರೆ. ಆದರೆ ಆಲೂಗಡ್ಡೆಯನ್ನು ಬೇಯಿಸಿದಾಗ ಅದರ ಸಿಪ್ಪೆ ಕರಗುತ್ತದೆ. ಆದರೆ ಅದರಲ್ಲಿರುವ ಸಕ್ಕರೆಯ ಪ್ರಮಾಣ ಹಾಗೇ ಇರುತ್ತದೆ. ಇದನ್ನು ತಿಂದರೆ ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಾಗುತ್ತದೆ. ಹಾಗಾಗಿ ಮಧುಮೇಹಿಗಳು ಆಲೂಗಡ್ಡೆಯನ್ನು ಬೇಯಿಸಿ ತಿನ್ನಬೇಡಿ. ಹಾಗೇ ಕೆಲವರು ಆಲೂಗಡ್ಡೆಯನ್ನು ಹುರಿದು ತಿನ್ನುತ್ತಾರೆ. ಆದರೆ ಇದನ್ನು ಹುರಿಯುವುದರಿಂದ ಇದರಲ್ಲಿರುವ ಸಕ್ಕರೆಯಂಶ ಕರಗಿ ಹೋಗುತ್ತದೆ. ಇದನ್ನು ಮಧುಮೇಹಿಗಳು ಸೇವಿಸಬಹುದು. ಆದರೆ ಎಣ್ಣೆ ಮತ್ತು ಉಪ್ಪು ಅತಿಯಾಗಿ ಸೇರಿಸಿದ ಆಲೂಗಡ್ಡೆಯನ್ನು ಸೇವಿಸಿದರೆ ಕೊಲೆಸ್ಟ್ರಾಲ್, ಬಿಪಿಯಂತಹ ಸಮಸ್ಯೆಗಳು ಕಾಡುತ್ತದೆಯಂತೆ
ಕಿಯಾ ಬ್ರಾಂಡ್ಗಳಲ್ಲಿ ಒಂದಾಗಿದೆ, ಅದು ಬೆಲೆಗೆ ಹೆಚ್ಚಿನ ವೈಶಿಷ್ಟ್ಯಗಳನ್ನು ನೀಡುತ್ತದೆ. Kia Sonet ಭಿನ್ನವಾಗಿಲ್ಲ ಏಕೆಂದರೆ ಬ್ರ್ಯಾಂಡ್ ಭಾರತದಲ್ಲಿ 2024 ಕ್ಕೆ ಇತ್ತೀಚಿನ ಉಪ-4 ಮೀಟರ್, Sonet ಫೇಸ್ಲಿಫ್ಟ್ ಅನ್ನು ಪ್ರಾರಂಭಿಸಿದೆ ಮತ್ತು ನಾವು GTX+ ರೂಪಾಂತರವನ್ನು ಚಾಲನೆ ಮಾಡಬೇಕಾಗಿದೆ, ಇದು 1.5l CRDi VGT 6AT ಎಂಜಿನ್ನಿಂದ 85 kW ಶಕ್ತಿಯನ್ನು ಉತ್ಪಾದಿಸುತ್ತದೆ ಮತ್ತು 250 Nm ಟಾರ್ಕ್, ಅಲ್ಪಾವಧಿಗೆ. ಈ ಮೊದಲ ಅನಿಸಿಕೆ ಲೇಖನದಲ್ಲಿ, 2024 Kia Sonet ಅನ್ನು ಪರಿಶೀಲಿಸಲು ಯೋಗ್ಯವಾಗಿದೆಯೇ ಎಂದು ನಾನು ನಿಮಗೆ ಹೇಳುತ್ತೇನೆ. ಕಿಯಾ ಸೋನೆಟ್ 2024: ವಿನ್ಯಾಸ ಕಿಯಾ ಸೋನೆಟ್ 2024 ಅದರ ಪೂರ್ವವರ್ತಿಗಳಿಗಿಂತ ಹೆಚ್ಚು ಭಿನ್ನವಾಗಿಲ್ಲ, ಆದಾಗ್ಯೂ, ಬ್ರ್ಯಾಂಡ್ ಗ್ರಿಲ್, ಹೆಡ್ಲೈಟ್ಗಳು ಮತ್ತು ಟೈಲ್ ಲ್ಯಾಂಪ್ಗಳನ್ನು ನವೀಕರಿಸಿದೆ ಮತ್ತು ಹೊಸ ಹಿಂದಿನ ಸ್ಪಾಯ್ಲರ್ ಅನ್ನು ಸೇರಿಸಿದೆ. ಇದು ಇನ್ನೂ ವಿಶಿಷ್ಟವಾದ ಕಿಯಾ ನೋಟವಾಗಿದೆ ಮತ್ತು ಇದು ಸೋನೆಟ್ ಎಂದು ನೀವು ಸುಲಭವಾಗಿ ಹೇಳಬಹುದು. ಹೊಸ ಸಿಗ್ನೇಚರ್ ಟೈಗರ್ ನೋಸ್ ಗ್ರಿಲ್…
ಇತ್ತೀಚಿನ ದಿನಗಳಲ್ಲಿ ನೀಡಿರುವ ಕೆಲವೇ ಹೇಳಿಕೆಗಳನ್ನು ತಿರುಚಿ ಬೇರೇಯದ್ದೇ ರೂಪ ಕೊಟ್ಟಿರುವ ಬಗ್ಗೆ ಅದರಿಂದ ತಮಗೆ ಮಾನಸಿಕ ಹಿಂಸೆ ಆಗುತ್ತಿದೆ ಎಂದು ರಕ್ಷಕ್ ಹೇಳಿಕೊಂಡಿದ್ದಾರೆ. ನಾನು ಬುಲೆಟ್ ಪ್ರಕಾಶ್ ಅವರ ಮಗ, ನನ್ನ ತಂದೆ ಸುಮಾರು 350ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಅವರನ್ನು ಹರಸಿ ಬೆಳೆಸಿದ್ದೀರಾ. ಅವರ ಮಗನಾಗಿ ನಾನು ಜನಸಿರೋದು ನನ್ನ ಪುಣ್ಯ ಎಂದಿದ್ದಾರೆ. ಬಳಿಕ ನನ್ನ ತಂದೆಯಲ್ಲಿರುವ ನೇರ ನುಡಿ ನನಗೂ ಬಂದಿದೆ. ಇತ್ತೀಚಿನ ದಿನಗಳಲ್ಲಿ ನನ್ನ ಹೇಳಿಕೆಗಳನ್ನು ತಿರುಚಿ ಸಾಮಾಜಿಕ ಜಾಲತಾಣದಲ್ಲಿ ಬಿಡುತ್ತಿದ್ದಾರೆ. ಅದರಿಂದ ನನಗೆ ಕೆಲವೊಮ್ಮೆ ಮಾನಸಿಕವಾಗಿ ಹಿಂಸೆಯಾಗುತ್ತಿದ್ದು, ನಾನು ಯಾರ ಭಾವನೆಗೂ ಧಕ್ಕೆ ತರುವ ಹೇಳಿಕೆಯನ್ನಾಗಲಿ ನೀಡುವುದನ್ನು ಅಭ್ಯಾಸ ಮಾಡಿಕೊಂಡಿಲ್ಲ ಎಂದು ರಕ್ಷಕ್ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿದ್ದಾರೆ. ನಾನು ಎಲ್ಲೇ ಹೋದರೂ ಜನ ಗುರುತಿಸಿ ಪ್ರೀತಿಸಿದ್ದಾರೆ. ಒಂದು ಶುಭ ಸುದ್ದಿಯೆಂದರೆ ಇತ್ತೀಚಿನ ದಿನಗಳಲ್ಲಿ ಕೆಲವೊಂದು ಸಿನಿಮಾಗಳಿಗೆ ಅವಕಾಶ ಬಂದಿದ್ದು, ಅದರ ಕೆಲಸದಲ್ಲಿ ಸಕ್ರಿಯನಾಗಿದ್ದೇನೆ ಎಂದು ರಕ್ಷಕ್ ತಿಳಿಸಿದ್ದಾರೆ. ನನ್ನ ಪರಿಶ್ರಮದಿಂದ ಚಿತ್ರಗಳ ಮೂಲಕ…
ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ತಡರಾತ್ರಿ ಡಿವೈಡರ್ ಮೇಲೆ ಹಾರಿ ಮುಂದೆ ಬರುತ್ತಿದ್ದ ಬೈಕ್ಗೆ ಲಾರಿ ಡಿಕ್ಕಿ ಹೊಡೆದ ಘಟನೆ ಜರುಗಿದೆ. ಅಪಘಾತವಾದ ಬಳಿಕ ಲಾರಿ ಚಾಲಕ ಪರಾರಿಯಾಗಿದೆ. ಟಾಟಾ ಇನ್ಸ್ಟಿಟ್ಯೂಟ್ ಬಳಿ ರಾತ್ರಿ 12 ಗಂಟೆ ಸುಮಾರಿಗೆ ಯಶವಂತಪುರದಿಂದ ಬರುತಿದ್ದ ಲಾರಿಯ ಚಾಲಕ ಡಿವೈಡರ್ ಹಾರಿಸಿ ಮಲ್ಲೇಶ್ವರಂ ಕಡೆಯಿಂದ ಬರುತಿದ್ದ ಬೈಕ್ಗೆ ಡಿಕ್ಕಿ ಹೊಡೆದಿದ್ದಾನೆ. ಅಪಘಾತಕ್ಕೊಳಗಾದ ಬೈಕ್ ಚಾಲಕನ ಮುಖ ಹಾಗೂ ದೇಹದ ಕೆಲ ಭಾಗಗಳಲ್ಲಿ ರಕ್ತಗಾಯಗಳಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಲಾರಿಯ ವೇಗದ ಚಾಲನೆ ನಡುವೆ ಮುಂದೆ ಬರುತಿದ್ದ ಎರಡು ಕಾರುಗಳು ಅಪಘಾತದಿಂದ ಸ್ವಲ್ಪದರಲ್ಲೇ ತಪ್ಪಿಸಿಕೊಂಡಿವೆ. ಕುಡಿದು ಲಾರಿ ಚಲಾಯಿಸಿ ಅಪಘಾತ ಎಸಗಿರುವ ಶಂಕೆ ವ್ಯಕ್ತವಾಗಿದ್ದು, ಅಪಘಾತವಾದ ಬಳಿಕ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಆಗಮಿಸಿದ ಯಶವಂತಪುರ ಸಂಚಾರಿ ಠಾಣಾ ಪೊಲೀಸರು, ಲಾರಿ ವಶಕ್ಕೆ ಪಡೆದು ಚಾಲಕನ ಮಾಹಿತಿ ಕಲೆಹಾಕುತ್ತಿದ್ದಾರೆ.
ನವದೆಹಲಿ: ಮೈಸೂರು ಕೃಷ್ಣಶಿಲೆಯ ಬಾಲರಾಮನ ಎದುರು ಸೋತ ವೈಟ್ ಮಾರ್ಬಲ್ ಬಾಲರಾಮ ಮೂರ್ತಿಯ ಲುಕ್ ವೈರಲ್ ಆಗಿದೆ. ರಾಜಸ್ಥಾನದ (Rajasthan) ಶಿಲ್ಪಿ ಕೆತ್ತಿದ ಮೂರ್ತಿ ಇದು. ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ (Arun Yogiraj) ಕೆತ್ತಿರುವ ಕಪ್ಪು ಶಿಲೆಯ ರಾಮಲಲ್ಲಾ (Ram Lalla) ವಿಗ್ರಹ ಅಯೋಧ್ಯೆಯ ಭವ್ಯ ಮಂದಿರದ ಗರ್ಭಗುಡಿಯಲ್ಲಿ ವಿರಾಜಮಾನವಾಗಿದೆ. ಇನ್ನು ಎರಡು ವಿಗ್ರಹಗಳನ್ನು ದೇವಾಲಯದ ಇತರ ಭಾಗಗಳಲ್ಲಿ ಇರಿಸಲಾಗುವುದು. ಅವುಗಳಲ್ಲಿ ಒಂದು ರಾಜಸ್ಥಾನದ ಸತ್ಯನಾರಾಯಣ ಪಾಂಡೆ ಕೆತ್ತಿದ ಬಿಳಿ ಅಮೃತಶಿಲೆಯ ವಿಗ್ರಹವೂ ಇದೆ. ಈ ವಿಗ್ರಹದ ಛಾಯಾಚಿತ್ರಗಳು ವೈರಲ್ ಆಗಿವೆ. ರಾಜಸ್ಥಾನದ ಶಿಲ್ಪಿ ಕೆತ್ತಿರುವ ವಿಗ್ರಹವು ದೇವಾಲಯದ ‘ಗರ್ಭಗೃಹ’ಕ್ಕೆ ಬರಲು ಮೈಸೂರು ಶಿಲ್ಪಿಯ ಮೂರ್ತಿ ಎದುರು ಪೈಪೋಟಿ ನಡೆಸಿತ್ತು. ಆದರೆ ಅದು ಸಾಧ್ಯವಾಗಲಿಲ್ಲ. ಈ ಮೂರ್ತಿಯನ್ನು ರಾಮಮಂದಿರದಲ್ಲಿ ಬೇರೆಡೆ ಇರಿಸಲಾಗುತ್ತದೆ. ಬಿಳಿ ಅಮೃತಶಿಲೆಯ ವಿಗ್ರಹವು ಪ್ರಸ್ತುತ ಟ್ರಸ್ಟ್ನಲ್ಲಿದೆ. ರಾಮಲಲ್ಲಾ ಚಿನ್ನದ ಬಿಲ್ಲು ಮತ್ತು ಬಾಣವನ್ನು ಹಿಡಿದಿರುವ ವಿಗ್ರಹ ಇದಾಗಿದೆ. ಬಾಲರಾಮನ ಹಿಂದೆ ಕಮಾನಿನಂತಿರುವ ರಚನೆಯು ವಿಷ್ಣುವಿನ ವಿವಿಧ ಅವತಾರಗಳನ್ನು ಚಿತ್ರಿಸುವ…
ಚಳಿಗಾಲ ಆರಂಭವಾದೊಡನೆ ನೆಗಡಿ, ಜ್ವರ ಮತ್ತು ಹಲವಾರು ಇತರ ಋತುಮಾನದ ಕಾಯಿಲೆಗಳು ಕಾಡ ತೊಡಗುತ್ತವೆ. ಹೀಗಾಗಿ ರೋಗನಿರೋಧಕ ಶಕ್ತಿಯನ್ನು ಕಾಪಾಡಿಕೊಳ್ಳುವುದು ಮುಖ್ಯ. ಇದಕ್ಕಾಗಿ ಆಂತರಿಕವಾಗಿ ನಮ್ಮನ್ನು ಪೋಷಿಸಲು ನಮಗೆ ಸಹಾಯ ಮಾಡುವ ಆಹಾರಗಳನ್ನು ತೆಗೆದುಕೊಳ್ಳಬೇಕು. ಆರೋಗ್ಯ ವೃತ್ತಿಪರರು ಋತುಗಳು ಬದಲಾದಂತೆ ನಮ್ಮ ಆಹಾರಕ್ರಮವನ್ನು ಬದಲಾಯಿಸಲು ನಿರಂತರವಾಗಿ ಸಲಹೆ ನೀಡುತ್ತಾರೆ. ಚಳಿಗಾಲದ ಆಹಾರಗಳು ಯಾವಾಗಲೂ ಕಾಳುಗಳನ್ನು ಒಳಗೊಂಡ ಊಟ, ಸೊಪ್ಪು-ತರಕಾರಿಗಳು ಮತ್ತು ಸಾಮಾನ್ಯ ಆರೋಗ್ಯವನ್ನು ಉತ್ತೇಜಿಸುವ ಮಸಾಲೆ ಗಳನ್ನು ಒಳಗೊಂಡಿರಬೇಕು. ಚಳಿಗಾಲದಲ್ಲಿ ಬೆಳ್ಳುಳ್ಳಿ ಸೇವನೆಯ ಆರೋಗ್ಯ ಪ್ರಯೋಜನಗಳು ಶೀತ ಮತ್ತು ಕೆಮ್ಮನ್ನು ತಡೆಯುತ್ತದೆ:ಚಳಿಗಾಲದಲ್ಲಿ ಶೀತ, ಕೆಮ್ಮು (Cough), ನೋಯುತ್ತಿರುವ ಗಂಟಲು ಇತ್ಯಾದಿ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಬೆಳ್ಳುಳ್ಳಿಯು ಆ ಕಾಲೋಚಿತ ಆರೋಗ್ಯ ಸಮಸ್ಯೆಗಳಿಂದ ನಿಮಗೆ ಪರಿಹಾರವನ್ನು ನೀಡುತ್ತದೆ. ದೆಹಲಿ ಮೂಲದ ಆರೋಗ್ಯ ಮತ್ತು ಸ್ವಾಸ್ಥ್ಯ ತಜ್ಞರಾದ ಡಾ. ಶಿಖಾ ಶರ್ಮಾ ಪ್ರಕಾರ ಬೆಳ್ಳುಳ್ಳಿ, ಸೋಂಕು ಮತ್ತು ಇತರ ಕಾಯಿಲೆಗಳನ್ನು ನಿವಾರಿಸುತ್ತದೆ ಎಂದು ನಂಬಲಾಗಿದೆ. ನೀವು ಸೈನುಟಿಸ್, ಶೀತ ಮತ್ತು ಜ್ವರದ ವಿರುದ್ಧ ಹೋರಾಡಲು ಬಿಸಿ…
2023ರ ಅತ್ಯುತ್ತಮ ಏಕದಿನ ತಂಡವನ್ನು ಐಸಿಸಿ ಪ್ರಕಟಿಸಿದ್ದು, ಭಾರತದ 6 ಆಟಗಾರರು ಸ್ಥಾನ ಪಡೆಯುವ ಮೂಲಕ ಪಾರಮ್ಯ ಮೆರೆದಿದ್ದಾರೆ. ರೋಹಿತ್ ಶರ್ಮಾ ಏಕದಿನ ತಂಡಕ್ಕೆ ನಾಯಕರಾಗಿದ್ದು, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್ ಹಾಗೂ ಕುಲ್ದೀಪ್ ಯಾದವ್ ಸ್ಥಾನ ಪಡೆದಿದ್ದಾರೆ. ಹೀಗಿದೆ ಏಕದಿನ ತಂಡ ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ಟ್ರಾವಿಸ್ ಹೆಡ್, ವಿರಾಟ್ ಕೊಹ್ಲಿ, ಡೇರಿಲ್ ಮಿಚೆಲ್, ಹೆನ್ರಿಕ್ ಕ್ಲಾಸೆನ್, ಮಾರ್ಕೊ ಯಾನ್ಸೆನ್, ಆಡಂ ಝಂಪಾ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ. ಟಿ-20 ತಂಡದಲ್ಲಿ ನಾಲ್ವರಿಗೆ ಸ್ಥಾನ ಐಸಿಸಿಯು ವರ್ಷದ ಟಿ-20 ಕ್ರಿಕೆಟ್ ತಂಡವನ್ನು ಪ್ರಕಟಿಸಿದೆ. ಈ ತಂಡದಲ್ಲಿ ನಾಲ್ವರು ಭಾರತೀಯ ಆಟಗಾರರು ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಭಾರತದ ಸ್ಟಾರ್ ಬ್ಯಾಟರ್ ಸೂರ್ಯಕುಮಾರ್ ಯಾದವ್ ಅವರಿಗೆ ನಾಯಕತ್ವ ಪಟ್ಟ ನೀಡಲಾಗಿದೆ. ಹೀಗಿದೆ ಟಿ-20 ತಂಡ ಸೂರ್ಯಕುಮಾರ್ ಯಾದವ್ (ನಾಯಕ), ಯಶಸ್ವಿ ಜೈಸ್ವಾಲ್, ಫಿಲ್ ಸಾಲ್ಟ್, ನಿಕೋಲಸ್ ಪುರನ್, ಮಾರ್ಕ್ ಚಾಪ್ಮನ್, ಸಿಕಂದರ್ ರಾಸ್, ಅಲ್ಪೇಶ್ ರಾಮ್ಜಾನಿ, ಮಾರ್ಕ್ ಅದೈರ್, ರವಿ ಬಿಷ್ಣೋಯ್, ರಿಚರ್ಡ್…
ದಾವಣಗೆರೆ:- ಹರಿಹರ ಗ್ರಾಮಾಂತರ ಪೊಲೀಸರು, DCRB ಪೊಲೀಸರ ಕಾರ್ಯಾಚಣೆ ಮಾಡಿ ಖೋಟಾ ನೋಟು ತಯಾರಿಸಿ ಚಲಾವಣೆ ಮಾಡುತ್ತಿದ್ದ ಓರ್ವ ಇಂಜಿನಿಯರ್ ಸೇರಿ 6 ಜನರನ್ನು ಅರೆಸ್ಟ್ ಮಾಡಿದ್ದಾರೆ. ಕುಬೇರಪ್ಪ ತಳವಾರ್, ಹರೀಶ್ ಗೌಡ, ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮೂಲದ ಇಂಜಿನಿಯರ್ ಜೆ.ರುದ್ರೇಶ್, ಮೈಸೂರು ಮೂಲದ ಮನೋಜ್ ಗೌಡ, ಮಂಡ್ಯ ಮೂಲದ ಸಂದೀಪ್ ಮತ್ತು ಚಿತ್ರದುರ್ಗ ಮೂಲದ ಕೃಷ್ಣ ನಾಯ್ಕನನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತರಿಂದ 7.70 ಲಕ್ಷ ರೂ. ಮೌಲ್ಯದ 500, 200 ಮುಖಬೆಲೆಯ ಖೋಟಾ ನೋಟು ವಶಕ್ಕೆ ಪಡೆಯಲಾಗಿದೆ. ಖೋಟಾ ನೋಟು ತಯಾರು ಮಾಡಲು ಬಳಸುತ್ತಿದ್ದ ಲ್ಯಾಪ್ಟಾಪ್ ಸೇರಿ, ಮೂರು ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಖೋಟಾ ನೋಟು ತಯಾರಿ ಬಗ್ಗೆ ಇಂಜಿನಿಯರ್ ರುದ್ರೇಶ್ ಒಪ್ಪಿಕೊಂಡಿದ್ದಾರೆ ಎಂದು ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಮಾಹಿತಿ ನೀಡಿದ್ದಾರೆ
ಬೆಂಗಳೂರು:- ಕರ್ತವ್ಯ ಲೋಪ ಹಿನ್ನೆಲೆ – ಚೆಸ್ಕಾಂ ಎಂಡಿ ಸಿಎನ್ ಶ್ರೀಧರ್ ರನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಮುತ್ತಿನ ಮುಳ್ಳುಸೋಗೆ ಗ್ರಾಮದಲ್ಲಿ ಕಾವೇರಿ ನದಿಯಿಂದ 150 ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ರಮವನ್ನು ಸಿಎಂ ಹಮ್ಮಿಕೊಂಡಿದ್ದರು. ಈ ವೇಳೆ ಬಟನ್ ಒತ್ತುವ ಮೂಲಕ ಸಿಎಂ ಯೋಜನೆಗೆ ಚಾಲನೆ ನೀಡಬೇಕಿತ್ತು. ಆದರೆ, ಸಿಎಂ ಸಿದ್ದರಾಮಯ್ಯ ಒತ್ತಿದ ವೇಳೆ ಬಟನ್ ಚಾಲನೆಯಾಗಿಲ್ಲವಾಗಿತ್ತು. ಹೌದು ಸಿಎಂ ಬಟನ್ ಒತ್ತಿದ ವೇಳೆ ಅದು ಆನ್ ಆಗಿರಲಿಲ್ಲ. ಇದು ಸಿಎಂ ಸಿದ್ದರಾಮಯ್ಯ ಅವರನ್ನು ತೀವ್ರ ಮುಜುಗರಕ್ಕೆ ಒಳಗುಳ್ಳುವಂತೆ ಮಾಡಿತ್ತು. ಸಿಎಂ ಕಾರ್ಯಕ್ರಮವಾಗಿದ್ದರೂ ವಿದ್ಯುತ್ ಬಗ್ಗೆ ಮುನ್ನೆಚ್ಚರಿಕಾ ಕ್ರಮ ವಹಿಸದ ಚೆಸ್ಕಾಂ ಎಂಡಿ ಶ್ರೀಧರ್, ಅಂದಿನ ಕಾರ್ಯಕ್ರಮಕ್ಕೂ ಗೈರಾಗಿದ್ದರು. ಈ ಹಿನ್ನಲೆ ಕರ್ತವ್ಯಲೋಪ ಎಸಗಿದ ಹಿನ್ನಲೆ ಜೊತೆಗೆ ಸರ್ಕಾರ ಮುಜುಗರಕ್ಕೆ ಒಳಪಡುವ ಸನ್ನಿವೇಶ ಸೃಷ್ಟಿಸಿದ್ದಕ್ಕೆ ಸಸ್ಪೆಂಡ್ ಮಾಡಿ ಆದೇಶಿಸಲಾಗಿದೆ.