ಬಿಗ್ ಬಾಸ್ ಸೀಸನ್ 10ರ ಫೈನಲ್ ಗೆ ಆಯ್ಕೆಯಾಗಿರುವ ವರ್ತೂರುಸಂತೋಷ್ ಗೆದ್ದು ಬರಲಿ ಎಂದು ಹಾರೈಸಿ ವರ್ತೂರು ಸಂತೋಷ್ ಅವರ ನೂರಾರು ಅಭಿಮಾನಿಗಳು ಮಹದೇವಪುರ ಕ್ಷೇತ್ರದ ಬಳಗೆರೆಯಿಂದ ವಿವಿಧೆಡೆ ಬೈಕ್ ರ್ಯಾಲಿ ಮಾಡಿದರು. ವರ್ತೂರಿನಲ್ಲಿ ಸಂತೋಷ್ ಅಭಿಮಾನಿಗಳು ಪಟಾಕಿ ಸಿಡಿಸಿ, ಬೈಕಗಳ ಮೂಲಕ ವರ್ತೂರು ಸಂತೋಷ್ ಅವರ ಪರವಾಗಿ ಪ್ರಚಾರ ನಡೆಸಿ ಮನೆಮಗನ ಗೆಲುವಿಗೆ ಮತಚಲಾಯಿಸುವಂತೆ,ಸಂತೋಷ್ ಭಾವಚಿತ್ರ ಹಾಗೂ ಹಳ್ಳಿಕಾರ್ ಎತ್ತುಗಳ ಮೆರವಣಿಗೆ ಮಾಡುವ ಮೂಲಕ ಗೆದ್ದು ಬಾ ವರ್ತೂರ್ ಎಂದು ಆಶಯ ವ್ಯಕ್ತಪಡಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಕುಪ್ಪಿ ಮಂಜುನಾಥ ಅವರು ಹಳ್ಳಿಕಾರ್ ತಳಿಯ ಅಭಿವೃದ್ಧಿಗೆ ಶ್ರಮಿಸುತ್ತಿರುವ ಹಳ್ಳಿಕಾರ್ ಒಡೆಯ ಅವರ ಬಿಗ್ ಬಾಸ್ ಗೆಲುವಿಗೆ ಸಹಕಾರ ನೀಡುವಂತೆ ಮನವಿ ಮಾಡಿದರು. ರೈತರ ಪ್ರತಿನಿಧಿಯಾಗಿ ಬಿಗ್ ಬಾಸ್ ಗೆ ಆಯ್ಕೆಯಾಗಿರುವ ವರ್ತೂರು ಸಂತೋಷ್ ಅವರ ಕಾರ್ಯ ಮಹತ್ವದಾಗಿದ್ದು,ಶೋ ಕೊನೆಯ ವರೆಗೆ ಹಳ್ಳಿಕಾರ್ ತಳಿಯ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ಮಾಡಿದ್ದಾರೆ ಎಂದು ಶ್ಲಾಘಿಸಿದರು. ವರ್ತೂರು ಸಂತೋಷ್ ಸಹೋದರರಾದ ರಘು ಅವರು…
Author: AIN Author
ಕಲಬುರ್ಗಿ:- ಭರ್ತಿ ತುಂಬಿದ್ದ ಮೊಬೈಲ್ ಅಂಗಡಿಗೆ ನಡುರಾತ್ರಿ ಎಂಟ್ರಿ ಕೊಟ್ಟ ಖದೀಮ ಸ್ಮಾರ್ಟ್ ಫೋನ್ ಜೊತೆಗೆ ಹಣವನ್ನೂ ಇಗರಿಸಿದ ಘಟನೆ ಕಲಬುರಗಿಯ ಚಿತ್ತಾಪುರದಲ್ಲಿ ನಡೆದಿದೆ. ಯೋಗೀಶ್ ಎಂಬುವವರಿಗೆ ಸೇರಿದ ಅಂಗಡಿಗೆ ಶೆಟರ್ ಮುರಿದು ಕಳ್ಳತನ ಮಾಡಿದ್ದಾನೆ. ಖದೀಮ ವಿಪರ್ಯಾಸ ಅಂದ್ರೆ ಕಳ್ಳನ ಕೈ ಚಳಕ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ. ಸ್ಥಳಕ್ಕೆ ಶ್ವಾಸ ದಳ ಸಮೇತ ಭೇಟಿ ಕೊಟ್ಟ ಪೋಲೀಸರು ತನಿಖೆ ಚುರುಕುಗೊಳಿಸಿದ್ದಾರೆ..
ನಿಮ್ಮ ಆರೋಗ್ಯವನ್ನು ಹೆಚ್ಚಿಸಲು ನೀವು ಆರೋಗ್ಯಕರ, ನೈಸರ್ಗಿಕ ಮಾರ್ಗವನ್ನು ಹುಡುಕುತ್ತಿದ್ದರೆ ನಿಮಗೆ ಬೆಳ್ಳುಳ್ಳಿಗಿಂತ ಹೆಚ್ಚಿನದು ಬೇಕಿಲ್ಲ. ಕೊಲೆಸ್ಟ್ರಾಲ್ ಮಟ್ಟವನ್ನು ನಿರ್ವಹಿಸುವುದರಿಂದ ಹಿಡಿದು ಮಧುಮೇಹವನ್ನು ನಿಯಂತ್ರಿಸುವವರೆಗೆ ಬೆಳ್ಳುಳ್ಳಿ, ಪ್ರಮುಖ ಪಾತ್ರವನ್ನು ವಹಿಸುತ್ತದೆ. ಬೆಳ್ಳುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ಹೃದಯದ ಆರೋಗ್ಯವನ್ನು ಉತ್ತೇಜಿಸುತ್ತದೆ. ಮಧುಮೇಹವನ್ನು ನಿಯಂತ್ರಿಸಿ ಟ್ರೈಗ್ಲಿಸರೈಡ್ ಮಟ್ಟವನ್ನು ಕಡಿಮೆ ಮಾಡುತ್ತದೆ. ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಕ್ಯಾನ್ಸರ್ ವಿರೋಧಿಯಾಗಿ ಬೆಳ್ಳುಳ್ಳಿ ಕೆಲಸ ಮಾಡುತ್ತದೆ. ಹಾಗಂತ ಬೆಳ್ಳುಳ್ಳಿಯನ್ನು ತಿನ್ನಲು ಕೆಲವೊಂದು ಮಾರ್ಗಗಳಿವೆ. ಇದನ್ನು ನೀವು ಸೂಕ್ತ ರೀತಿಯಲ್ಲಿ ಅನುಸರಿಸಿದರೆ ಖಂಡಿತ ತೂಕ ಇಳಿಸಿಕೊಳ್ಳುವುದು ಕಷ್ಟದ ಮಾತೇನಲ್ಲ. ಖಾಲಿ ಹೊಟ್ಟೆಯಲ್ಲಿ ಹಸಿ ಬೆಳ್ಳುಳ್ಳಿ ಸೇವನೆ ಹಸಿ ಬೆಳ್ಳುಳ್ಳಿಯನ್ನು ಯಾವಾಗ ಮತ್ತು ಹೇಗೆ ತಿನ್ನಬೇಕು ಎಂದು ಬಹಳ ಜನ ಗೊಂದಲಕ್ಕೆ ಒಳಗಾಗುತ್ತಾರೆ. ಹಸಿ ಬೆಳ್ಳುಳ್ಳಿಯನ್ನು ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದ ಕೊಲೆಸ್ಟ್ರಾಲ್ ಮಟ್ಟ ಕಡಿಮೆ ಆಗಿ ಹೃದಯದ ಆರೋಗ್ಯವನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ. ಇದರಲ್ಲಿರುವ ಅಲಿಸಿನ್ ಎಂಬ ಸಂಯುಕ್ತವು ಅದರ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆಗೊಳಿಸುವ ಮತ್ತು ರಕ್ತವನ್ನು ತೆಳುಗೊಳಿಸುವ ಗುಣಲಕ್ಷಣಗಳಿಗೆ…
ಸೋಮಾರಿತನ ಹೋಗಲಾಡಿಸಲು..ತಲೆನೋವಿನಿಂದ ಮುಕ್ತಿ ಪಡೆಯಲು..ಮರು ಕ್ರಿಯಾಶೀಲರಾಗಲು ಕಾಫಿ ಬೇಕೇ ಬೇಕು. ಕಾಫಿಯನ್ನು ಮಿತವಾಗಿ ಸೇವಿಸಿದರೆ, ಅದು ಟೈಪ್ 2 ಮಧುಮೇಹದ ಅಪಾಯವನ್ನು ಕಡಿಮೆ ಮಾಡುತ್ತದೆ. ಇದು ಖಿನ್ನತೆ ಮತ್ತು ಒತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇದಲ್ಲದೆ, ಇದು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಎಂದು ಹೇಳಲಾಗುತ್ತದೆ. ಆದರೆ, ಎಲ್ಲರೂ ಕಾಫಿ ಕುಡಿಯಬಾರದು ಎನ್ನುತ್ತಾರೆ ತಜ್ಞರು. ಕಾಫಿಯನ್ನು ಯಾರು ಕುಡಿಯಬಾರದು ಎಂಬುದನ್ನು ಈ ತಿಳಿಯೋಣ. ನಿದ್ರಾಹೀನತೆಯಿಂದ ಬಳಲುತ್ತಿರುವವರು ಕಾಫಿಯನ್ನು ಸಂಪೂರ್ಣವಾಗಿ ತ್ಯಜಿಸಬೇಕು ಎಂದು ತಜ್ಞರು ಹೇಳುತ್ತಾರೆ. ಕಾಶಿಯಲ್ಲಿರುವ ಕೆಫೀನ್ ಅಂಶವು ನಿಮ್ಮ ನಿದ್ರೆಯ ಚಕ್ರವನ್ನು ಅಡ್ಡಿಪಡಿಸುತ್ತದೆ. ಅಲ್ಲದೇ ಕೆಫೀನಿಂದ ಲವಲವಿಕೆಯಿಂದಿರಲು ಮತ್ತು ಸ್ವಲ್ಪ ನಿದ್ರೆಯ ನಂತರವೂ ನೀವು ಆರಾಮಾಗಿರುವಂತೆ ಮಾಡುತ್ತದೆ. ನಿಧಾನಗತಿಯ ನಿದ್ರೆಯ ಪ್ರಮಾಣವನ್ನು ಕಡಿಮೆ ಮಾಡುತ್ತದೆ, ಇದು ಮರುದಿನ ಉಲ್ಲಾಸಕರ ಭಾವನೆಯ ಪ್ರಮುಖ ಹಂತವಾಗಿದೆ. ನಮ್ಮ ಎಚ್ಚರದ ಸಮಯದಲ್ಲಿ ಮೆದುಳಿನಲ್ಲಿ ಉತ್ಪತ್ತಿಯಾಗುವ ನಿದ್ರೆಯನ್ನು ಉತ್ತೇಜಿಸುವ ರಾಸಾಯನಿಕವಾದ ಅಡೆನೊಸಿನ್ ಗ್ರಾಹಕಗಳನ್ನು ನಿರ್ಬಂಧಿಸುವ ಮೂಲಕ ಕೆಫೀನ್ ಮೆದುಳಿನ ಮೇಲೆ ಪರಿಣಾಮ ಬೀರುತ್ತದೆ. ನಿದ್ರಾಹೀನತೆ ಸಮಸ್ಯೆಯಿಂದ…
ವಿಜಯಪುರ: ಗುಮ್ಮಟನಗರಿಯಲ್ಲಿ ಮನೆಗಳ್ಳತನ ಪ್ರಕರಣದಲ್ಲಿ ನಾಲ್ವರು ಆರೋಪಗಳನ್ನು ಬಂಧಿಸಲಾಗಿದೆ ಎಂದು ಎಸ್ ಪಿ ಋಷಿಕೇಶ ಸೋನವಾಣೆ ಹೇಳಿದರು. ವಿಜಯಪುರ ನಗರದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, 12 ಲಕ್ಷ 17 ಸಾವಿರ ಮೌಲ್ಯದ 210 ಗ್ರಾಮ ತೂಕದ ಚಿನ್ನಾಭರಣ, 20 ಗ್ರಾಮ ಬೆಳ್ಳಿ, ಎಲ್ ಇ ಡಿ ಟಿವಿ, ಎರಡು ಬೈಕ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದರು. ಇನ್ನೂ ಪ್ರಕರಣದಲ್ಲಿ ಆರೋಪಿಗಳಾದ ಜಮೀರ ಖಾನ್, ಅನ್ವರ ಶೇಖ್, ಆಸೀಫ್ ಹವಾಲ್ದಾರ್, ಸನ್ಮಾನ ಖಾನ ಬಂಧಿತ ಆರೋಪಿಗಳಾಗಿದ್ದು ಬಂಧಿತರು ನಗರದ ಮದೀನಾ ನಗರದಲ್ಲಿ 4 ಮನೆಗಳ್ಳತನ ಕೃತ್ಯಗಳನ್ನು ಮಾಡಿರುವ ಬಗ್ಗೆ ಆರೋಪಿಗಳು ಒಪ್ಪಿಕೊಂಡಿದ್ದಾರೆ. ಅಲ್ಲದೇ, ಮೂರು ಗಾಂಧಿಚೌಕ್ ಹಾಗೂ ಒಂದು ಜಲನಗರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದರು.
ಗದಗ: ಸರ್ಕಾರಿ ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ, ಇಬ್ಬರು ಸಾವನ್ನಪ್ಪಿ, 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ಜಿಲ್ಲೆ ಮುಡರಗಿ ತಾಲೂಕಿನ ಹಳ್ಳಿಗುಡಿ ಗ್ರಾಮದ ಬಳಿ ನಡೆದಿದೆ. ಬಸ್ನಲ್ಲಿದ್ದ ಮಹಿಳಾ ಪ್ರಯಾಣಕಿ, ಲಾರಿ ಚಾಲಕ ಮೃತಪಟ್ಟಿದ್ದು, ಗಾಯಾಳುಗಳನ್ನು ಜಿಮ್ಸ್ ಆಸ್ಪತ್ರೆ ಹಾಗೂ ಕೊಪ್ಪಳ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ರಾಯಚೂರು: ಮಹಿಳೆ ವಿಚಾರದಲ್ಲಿ ಚಾಡಿ ಹೇಳಿದ ಆರೋಪಕ್ಕೆ ವ್ಯಕ್ತಿಯನ್ನ ಕಂಬಕ್ಕೆ ಕಟ್ಟಿ ಚಪ್ಪಲಿಯಿಂದ ಹಲ್ಲೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ. ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಚಿಕ್ಕಬೆರಗಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಅದೇ ಗ್ರಾಮದ ಮಹಿಳೆಯ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾನೆ ಎಂದು ಆರೋಪಿಸಿ ಗುಂಪು ವ್ಯಕ್ತಿ ಮೇಲೆ ಹಲ್ಲೆ ನಡೆಸಿದೆ.ಸಂತ್ರಸ್ತೆ ತನ್ನನ್ನು ಬಿಡುವಂತೆ ದಾಳಿಕೋರರಲ್ಲಿ ಮನವಿ ಮಾಡಿದರೂ, ಆರೋಪಿಗಳು ಆತನನ್ನು ಹಗ್ಗದಿಂದ ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿದ್ದಾರೆ. ಈ ಘಟನೆ ಜನವರಿ 20ರಂದು ನಡೆದಿದೆ. ಆತನ ಪತ್ನಿ ನಾಗಮ್ಮ ರಕ್ಷಿಸಲು ಯತ್ನಿಸಿದಾಗ ಆಕೆಯ ಮೇಲೂ ಚಪ್ಪಲಿ, ದೊಣ್ಣೆಗಳಿಂದ ಥಳಿಸಿ, ಹಲ್ಲೆ ನಡೆಸಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ನಿಂಗಪ್ಪ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದು, ಚಿಕಿತ್ಸೆಗಾಗಿ ಸಿಂಧನೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನೂ ಈ ಘಟನೆ ಸಂಬಂಧ ತುರ್ವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗದಗ: ಸೆಂಟ್ರಲ್ ಇಕ್ಯುಪ್ಮೆಂಟ್ ಐಡೆಂಟಿಟಿ ರಿಜಿಸ್ಟರ್ ಪೋರ್ಟಲ್ ಮೂಲಕ ಪತ್ತೆ ಹಚ್ಚಿದ್ದ 35 ಲಕ್ಷ ರೂಪಾಯಿ ಮೌಲ್ಯದ 210 ಮೊಬೈಲ್ ಸೇರಿದಂತೆ ಗದಗ ಜಿಲ್ಲೆಯ ವ್ಯಾಪ್ತಿಯಲ್ಲಿ ಕಳ್ಳತನವಾಗಿದ್ದ ವಿವಿಧ ವಸ್ತುಗಳನ್ನ ಮೂಲ ವಾರಸುದಾರರಿಗೆ ಹಿಂತಿರುಗಿಸಲಾಯ್ತು. ಗದಗ ಎಸ್ ಪಿ ಕಚೇರಿ ಆವರಣದಲ್ಲಿ ಆಯೋಜನೆಗೊಂಡಿದ್ದ ಸ್ವತ್ತು ಮರಳಿಸುವ ಕಾರ್ಯಕ್ರಮದಲ್ಲಿ ಎಡಿಜಿಪಿ ಎಸ್ ಮುರುಗನ್ ಅವರ ಸಮ್ಮುಖದಲ್ಲಿ ಮೂಲ ಮಾಲೀಕರಿಗೆ ವಸ್ತುಗಳನ್ನ ಹಸ್ತಾಂತರಿಸಲಾಯ್ತು. ಜಿಲ್ಲಾ ಪ್ಯಾಪ್ತಿಯಲ್ಲಿ ಕಳ್ಳತನವಾಗಿದ್ದ ಮೊಬೈಲ್, ಮುಂಡರಗಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಕಳ್ಳತನವಾಗಿದ್ದ ಮೂರು ಟ್ರ್ಯಾಕ್ಟರ್ ಟ್ರೇಲರ್, ರೋಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನವಾಗಿದ್ದ 10 ಬೈಕ್ ಗಳು, ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನವಾಗಿದ್ದ ಚಿನ್ನದ ಮಾಂಗಲ್ಯ, ಬೆಳ್ಳಿ ಮೂರ್ತಿಯನ್ನ ಮಾಲಿಕರಿಗೆ ಹಿಂತಿರುಗಿಸಲಾಯ್ತು. ಒಟ್ಟು 45 ಲಕ್ಷ ರೂಪಾಯಿ ಮೌಲ್ಯದ ವಿವಿಧ ವಸ್ತುಗಳನ್ನ ಮರಳಿಸಲಾಯ್ತು. ಸ್ವತ್ತು ಹಿಂತಿರುಗಿಸುವ ಕಾರ್ಯಕ್ರಮದಲ್ಲಿ ಉತ್ತರ ವಲಯ ಐಜಿಪಿ ವಿಕಾಸ್ ಕುಮಾರ್, ಎಸ್ಪಿ ಬಿ ಎಸ್ ನೇಮಗೌಡ, ಎಎಸ್ ಪಿ ಎಂಬಿ ಸಂಕದ್ ಉಪಸ್ಥಿತರಿದ್ದರು. ಈ…
ಚಾಮರಾಜನಗರ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಗ್ರಾಮಪಂಚಾಯ್ತಿ ನೌಕರರು ಪ್ರತಿಭಟನೆ ನಡೆಸಿದರು. ಚಾಮರಾಜನಗರ ಜಿಲ್ಲಾಡಳಿತ ಭವನದ ಮುಂಭಾಗ ಸಮಾವೇಶಗೊಂಡ ಪ್ರತಿಭಟನಾಕಾರರು, ಗ್ರಾಮಪಂಚಾಯ್ತಿ ನೌಕರರಿಗೆ ಕನಿಷ್ಟ ವೇತನ ನೀಡಬೇಕು, ಕನಿಷ್ಟ ಪಿಂಷಣಿ ನಿಗದಿಗೊಳಿಸಬೇಕು, ತೀವ್ರವಾದ ಅನಾರೋಗ್ಯಕ್ಕೆ ತುತ್ತಾಷ ನೌಕರರಿಗೆ ಆಸ್ಪತ್ರೆ ವೆಚ್ಚ ಸೇರಿದಂತೆ ವಿವಿಧ ಬೇಡಿಕೆ ಇಟ್ಟು ಪ್ರತಿಭಟನೆ ನಡೆಸಿದರು.
ಕೋಲಾರ: ನರೇಂದ್ರ ಮೋದಿ ಉಪವಾಸ ಇದ್ದರ ಇಲ್ಲವಾ ಅಂತ ನಾನು ನೋಡಿದ್ದಿನಾ ಇಲ್ಲ ನೀವು ನೋಡಿದ್ದಿರ ಯಾರು ನೋಡಿಲ್ಲ ಜನರು ಮಾತಾಡುವುದನ್ನು ನಾವು ಕೇಳಿದ್ದೆವೆ ಎಂದು ಶಾಸಕ ಡಾ. ಕೊತ್ತೂರು ಮಂಜುನಾಥ್ ಅವ್ರು ಹೇಳಿದ್ರು. ಕೋಲಾರ ತಾಲೂಕಿನ ವೇಮಗಲ್ ಪಟ್ಟಣ ಪಂಚಾಯಿತಿಯಲ್ಲಿ ಇಂದಿರಾ ಕ್ಯಾಂಟೀನ್ ಗೆ ಗುದ್ದಲಿ ಪೂಜೆ ನೇರವೆರಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ್ರು, ಮೋದಿಯವರು ಉಪವಾಸ ಇದ್ದರ ಇಲ್ಲವಾ ಅಂತ ಜನ ಸುಮ್ಮನೆ ಇರಬೇಕು ನಮ್ಮ ಕೆಲಸ ಏನು ನಮ್ಮ ಅಭಿವೃದ್ಧಿ ಏನು ಅಂತಂದನ್ನು ಮೊದಲು ತಿಳಿದುಕೊಳ್ಳ ಬೇಕು ಅದು ಬಿಟ್ಟು ಬೇರೆಯವರು ಏನು ಮಾಡುತ್ತಿದ್ದಾರೆ ಎಂದು ಮಾತನಾಡಬಾರದು ಬಾಯಿ ಮುಚ್ಷಿಕೊಂಡು ಸುಮ್ಮನೆ ಇರಬೇಕು ಯಾರ ಬಗ್ಗೆಯು ಸಹ ಕಮೆಂಟ್ ಗಳನ್ನು ಮಾಡಬಾರದು ಎಂದು ಹೇಳಿದ್ರು. ನನ್ನನ್ನು ಓವರ್ ಟೇಕ್ ಮಾಡುವುದಕ್ಕೆ ಯಾರಿಂದಲು ಸಹ ಸಾಧ್ಯವಿಲ್ಲ ನಾನು ಜನರಿಗೆ ಬೆಳಕಾಗುತ್ತೆನೆ ಬೆಂಕಿಯಾಗುವುದಿಲ್ಲ ನಾನು ಹೊಸದಾಗಿ ಎಂಎಲ್ ಎ ಹಾಗಿಲ್ಲ ನಾನು ಚಿಕ್ಕ ಮಗು ಸಹ ಅಲ್ಲ 20 ವರ್ಷಗಳಿಂದ 4…