ನವದೆಹಲಿ: ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವ ಕಾರಣ ರಾಜಕೀಯ ಪಕ್ಷಗಳು ರಣತಂತ್ರ ರೂಪಿಸುತ್ತಿವೆ. ನರೇಂದ್ರ ಮೋದಿ ಅವರು ಹ್ಯಾಟ್ರಿಕ್ ಸಾಧನೆ ಮೇಲೆ ಕಣ್ಣಿಟ್ಟಿದ್ದಾರೆ. ಪ್ರತಿಪಕ್ಷಗಳು ಕೂಡ ಗೆಲುವಿಗಾಗಿ ಇಂಡಿಯಾ ಒಕ್ಕೂಟ ರಚಿಸಿವೆ. ಇದರ ಬೆನ್ನಲ್ಲೇ, “ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಆಯ್ಕೆಯಾಗುವುದು ನಿಶ್ಚಿತ” ಎಂದು ಸಮೀಕ್ಷೆ ತಿಳಿಸಿದೆ. ತಮ್ಮ ಸರ್ಕಾರವನ್ನು ಹೆಚ್ಚು ನಂಬುವ ವಿಶ್ವದ ಅಂತಹ ದೇಶಗಳ ಜನರ ಬಗ್ಗೆ ಸಮೀಕ್ಷೆಯೊಂದು ಬಂದಿದೆ. ಎಡೆಲ್ಮನ್ ಟ್ರಸ್ಟ್ ಬಾರೋಮೀಟರ್ 28 ದೇಶಗಳ ಸಮೀಕ್ಷೆಯ ವರದಿಯ ಪ್ರಕಾರ. ಸಮೀಕ್ಷೆಯಲ್ಲಿ ತಮ್ಮದೇ ದೇಶದ ನಾಗರಿಕರು ಸರ್ಕಾರವನ್ನು ಎಲ್ಲಿ ಎಷ್ಟು ಹೆಚ್ಚು ನಂಬುತ್ತಾರೆ, ಕಡಿಮೆ ನಂಬುತ್ತಾರೆ ಎಂಬುದನ್ನು ಇದರಲ್ಲಿ ತಿಳಿಸಲಾಗಿದೆ. ದೇಶದಲ್ಲಿ ಜನರು ಎಲ್ಲಿ ಹೆಚ್ಚು ನಂಬುತ್ತಾರೆ? ಪ್ರತಿ ದೇಶದ ವಯಸ್ಕ ನಿವಾಸಿಗಳ ಅಭಿಪ್ರಾಯಗಳನ್ನು ಆಧರಿಸಿ ರೇಟಿಂಗ್ ಪಡೆಯಲಾಗಿದೆ., ಎಡೆಲ್ಮನ್ ಟ್ರಸ್ಟ್ ಬಾರೋಮೀಟರ್ 28 ದೇಶಗಳನ್ನು ಸಮೀಕ್ಷೆ ಮಾಡುವ ವರದಿಯನ್ನು ಪ್ರಕಟಿಸಿದೆ. ಇದರ ಪ್ರಕಾರ, ಸೌದಿ ಅರೇಬಿಯಾ ಮತ್ತು ಚೀನಾದ ಜನರು ತಮ್ಮ…
Author: AIN Author
ಬೆಂಗಳೂರು: ರಾಮಭಕ್ತರ 500 ವರ್ಷಗಳ ತಪಸ್ಸಿಗೆ ವರ ಸಿಕ್ಕಿದೆ. ಅಯೋಧ್ಯೆಯಲ್ಲಿ ಸೋಮವಾರ ಅಕ್ಷರಸಹ ರಘುರಾಮನ ಭಕ್ತಿಯಲ್ಲಿ ಮಿಂದೆದ್ದಿತು. ಅಯೋಧ್ಯೆ ರಾಮಮಂದಿರದಲ್ಲಿ ಶಾಸ್ತ್ರೋಕ್ತವಾಗಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ನಿರ್ವಿಘ್ನವಾಗಿ ನೆರೆದಿದೆ. ಹೌದು ಅದಾದ ನಂತರ ವಿಪಕ್ಷ ನಾಯಕರು ಮೋದಿ ಬಗ್ಗೆ ಹಲವು ಟೀಕೆಗಳನ್ನು ಸಹ ಮಾಡಿದ್ದಾರೆ ಹಾಗೆ ನಿನ್ನೆಯಷ್ಟೇ ವೀರಪ್ಪ ಮೊಯ್ಲಿ ಕೂಡ ಮೋದಿಯ 11 ದಿನದ ವ್ರತದ ಬಗ್ಗೆಯೂ ಟೀಕೆ ಅಪಹಾಸ್ಯ ಮಾಡಿದ್ದರು. ಆದರೂ ಮೋದಿ ಯಾವುದನ್ನೂ ತೆಲೆಕೆಡಿಸಿಕೊಳ್ಳತಮ್ಮ ಪಾಡಿಗೆ ತಮ್ಮ ಕೆಲಸ ಎನ್ನುತ್ತ ರಾಮ ಭಜನೆಯಲ್ಲಿ ಮಗ್ನರಾಗಿದ್ದರು. https://x.com/MadhukumarVP1/status/1749762598026055965?s=20 ಆದರೆ ಇತ್ತ ಪ್ರಧಾನಿ ಮೋದಿ ಟೀಕಾಕಾರರಿಗೆ ವಿನಯ್ ಗುರೂಜಿ ಟಾಂಗ್ ಕೊಟ್ಟಿದ್ದಾರೆ .ಭಗವಾನ್ ಶ್ರೀರಾಮನ ಟೀಕಾಕಾರರಿಗೆ ಗೌರಿಗದ್ದೆಯ ಅವಧೂತ ವಿನಯ್ ಗುರೂಜಿ ಟಾಂಗ್ ಕೊಟ್ಟಿದ್ದು, ಅವರ ಹೇಳಿಕೆಯ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾಗಳಲ್ಲಿ ಫುಲ್ ವೈರಲ್ ಆಗಿದೆ. ರಾಮನಿಗೂ ಕಾಮೆಂಟ್ ಹೊಡೆದರು,, ಮೋದಿಗೂ ಕಾಮೆಂಟ್ ಹೊಡೆದರು. ಕಾಮೆಂಟ್ ಹೊಡೆದವರು ಕಳೆದುಹೋದರು ,,ರಾಮ & ಮೋದಿ ಇಬ್ಬರೂ ಉಳಿದರು ,,ಮುಂದೆಯೂ ಉಳಿಯಲಿದ್ದಾರೆ…
ಬೆಂಗಳೂರು: ಈ ದುಬಾರಿ ದುನಿಯಾ ದಲ್ಲಿ ಜನಸಾಮಾನ್ಯರು ಜೀವನ ಮಾಡೋಕೆ ಕಷ್ಟ ಎನ್ನಿಸಿದೆ.ಅಡುಗೆ ಎಣ್ಣೆ, ತೈಲ ನಿರಂತರವಾಗಿ ಹೆಚ್ಚಳ ದಿಂದ ಗ್ರಾಹಕರ ಕೈ ಸುಡುತ್ತಿದೆ.ಇದೀಗ ವಿದ್ಯುತ್ ಗ್ರಾಹಕರಿಗೆ ಮತ್ತೊಂದು ಶಾಕ್ ನ್ನ ಕೆಇಆರ್ಸಿ ನೀಡ್ತಿವೆ.ಹೌದು ಇಂಧನ ನಿರ್ವಹಣೆ ಸೇರಿದಂತೆ ಹಲವು ಕಾರಣಗಳನ್ನ ಮುಂದಿಟ್ಟುಕೊಂಡು ವಿದ್ಯುತ್ ದರ ಪರಿಷ್ಕರಣೆಗೆ ಸಕಲ ಸಿದ್ದತೆ ನಡೆಸಿದೆ.. ರಾಜ್ಯದಲ್ಲಿ ಈಗ ತಾನೇ ಬೇಸಿಗೆ ಆರಂಭವಾಗಿದೆ. ಆದ್ರೂ ಬೇಸಿಗೆ ಆರಂಭದಲ್ಲಿ ವಿದ್ಯುತ್ ಗ್ರಾಹಕರಿಗೆ ಬರೆ ಹಾಕಲು ಕೆಇಆರ್ಸಿ ಮುಂದಾಗಿವೆ. ಅಗತ್ಯ ವಸ್ತುಗಳ ದರ ಹೆಚ್ಚಳದಿಂದ ಕಂಗಾಲಾಗಿರುವ ಮಂದಿಗೆ ಮತ್ತೆ ವಿದ್ಯುತ್ ಸರಬರಾಜು ಕಂಪನಿಗಳು ಶಾಕ್ ನೀಡಿಲು ಮುಂದಾಗಿವೆ. ರಾಜ್ಯದ ವಿದ್ಯುತ್ ಸರಬರಾಜು ಕಂಪನಿಗಳಾದ ಬೆಸ್ಕಾಂ, ಮೆಕ್ಕಾಂ, ಚೆಕ್ಕಾಂ ಸೇರಿದಂತೆ ಇತರೆ ಕಂಪನಿಗಳು ಪ್ರತಿ ಬಾರಿಯಂತೆ ಈ ವರ್ಷವೂ ದರ ಹೆಚ್ಚಳಕ್ಕೆ ಸಿದ್ದತೆ ನಡೆಡಿವೆ.ಈಗಾಗಲೇ KERC ಮುಂದೆ ದರ ಪರಿಷ್ಕರಣೆ ಪಟ್ಟಿ ಇಟ್ಟಿವೆ. ಈ ಸಂಬಂಧ ಸಾರ್ವಜನಿಕ ಅಭಿಪ್ರಾಯ ಹಾಗೂ ಎಸ್ಕಾಂಗಳ ಅಭಿಪ್ರಾಯ ಸಂಗ್ರಹ ಮಾಡಲು ಕೆಇಆರ್ಸಿ ಮುಂದಾಗಿದೆ. ರಾಜ್ಯದ…
ಮುಂಬೈ: ಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆ ಹಿನ್ನೆಲೆಯಲ್ಲಿ ಭಗವಾಧ್ವಜ ಮತ್ತು ರಾಮಧ್ವಜದೊಂದಿಗೆ ತೆರೆಳುತ್ತಿದ್ದವರ ಮೇಲೆ ದಾಳಿ, ಕಲ್ಲುತೂರಾಟ ನಡೆದ ಘಟನೆ ದೇಶದ ವಾಣಿಜ್ಯ ನಗರಿ ಮುಂಬಯಿಯಲ್ಲಿ ಭಾನುವಾರ ರಾತ್ರಿ ನಡೆದಿದೆ. ನಗರದ ಮೀರಾ ರಸ್ತೆಯಲ್ಲಿ ದುರ್ಘಟನೆ ನಡೆದಿದ್ದು ಸ್ಥಳದಲ್ಲಿ ಕೆಲಕಾಲ ಉದ್ವಿಘ್ನತೆ ಸೃಷ್ಟಿಯಾಗಿತ್ತು. ಒಂದು ಗುಂಪು ಮಹಿಳೆಯೊಬ್ಬರನ್ನು ಗುರಿಯಾಗಿರಿಸಿ ಹಲ್ಲೆ ನಡೆಸಿತ್ತು ಎಂದು ಹೇಳಲಾಗಿದೆ https://x.com/RupaniGarcon/status/1749766037950898248?s=20 ಶ್ರೀ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ನಡೆಯುವ ಹಿನ್ನೆಲೆಯಲ್ಲಿ ಜನವರಿ 21 ರ ರಾತ್ರಿ ಮೀರಾ ರೋಡ್ನಲ್ಲಿ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಮುಸಲ್ಮಾನ ಬಹು ಸಂಖ್ಯಾತ ನಯಾನಗರ ಪ್ರದೇಶದಲ್ಲಿ ನಡೆದಿರುವ ಶೋಭಾಯತ್ರಿಯ ಮೇಲೆ ಕಲ್ಲೆಸೆಯಲಾಗಿತ್ತು. ಈ ದಾಳಿಯ ಅನೇಕ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ನಗರದಲ್ಲಿ ರಾಮ ಭಕ್ತರು ಭಗವಾದ್ವಜ, ರಾಮಧ್ವಜಗಳನ್ನು ತಮ್ಮ ತಮ್ಮ ವಾಹನಗಳಿಗೆ ಅಳವಡಿಸಿಕೊಂಡು ಸಾಗುತ್ತಿದ್ದಾಗ ಈ ಘಟನೆ ನಡೆದಿದೆ. ಈ ವೇಳೆ ಬೈಕ್ ಗಳಲ್ಲಿ ಬಂದ ಕೆಲ ದುಷ್ಕರ್ಮಿಗಳು ಏಕಾಏಕಿ ದಾಳಿ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಸ್ಥಳದಲ್ಲಿದ್ದ ಗುಂಪು ಭಗವಾದ್ವಜಗಳನ್ನು ಕಿತ್ತು…
ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ(Mamata Banarjee) ಅವರು ಕೋಲ್ಕತ್ತಾಗೆ ತೆರಳುತ್ತಿದ್ದ ವೇಳೆ (Car accident) ಕಾರು ಅಪಘಾತಕ್ಕೀಡಾಗಿದ್ದು, ಅವರ ತಲೆಗೆ ಗಂಭೀರ ಗಾಯವಾಗಿದೆ. ಹೌದು ಬುರ್ದ್ವಾನ್ನಿಂದ ಕೋಲ್ಕತ್ತಾಗೆ ರಸ್ತೆ ಮಾರ್ಗವಾಗಿ ಹಿಂತಿರುಗುತ್ತಿದ್ದ ವೇಳೆ ಮುಖ್ಯಮಂತ್ರಿ ಬೆಂಗಾವಲು ಪಡೆಯ ಮುಂದೆ ಮತ್ತೊಂದು ಕಾರು ಬಂದಿದ್ದರಿಂದ ತಕ್ಷಣವೇ ಬ್ರೇಕ್ ಹಾಕಿದ್ದರಿಂದ ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.. https://ainlivenews.com/peanut-is-good-for-health-but-if-people-with-this-problem-eat-it-there-is-no-danger/ ಮೂಲಗಳ ಪ್ರಕಾರ ಹವಾಮಾನ ವೈಪರೀತ್ಯದಿಂದಾಗಿ ಹೆಲಿಕಾಪ್ಟರ್ʼನಲ್ಲಿ ತೆರಳಲು ಆಗಲಿಲ್ಲ. ಆದ್ದರಿಂದ ಕಾರಿನಲ್ಲಿ ಹಿಂತಿರುಗುತ್ತಿದ್ದರು. ಮಂಜು ಕವಿದ ವಾತಾವರಣದಲ್ಲಿ ಕಡಿಮೆ ಗೋಚರತೆಯಿಂದಾಗಿ ಚಾಲಕನು ಇದ್ದಕ್ಕಿದ್ದಂತೆ ಬ್ರೇಕ್ ಹಾಕಿದ್ದರಿಂದ ಮಮತಾ ಬ್ಯಾನರ್ಜಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ. ತೃಣಮೂಲ ಕಾಂಗ್ರೆಸ್ ಮುಖ್ಯಸ್ಥರ ತಲೆಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಕೋಲ್ಕತ್ತಾಗೆ ಕರೆತರಲಾಗುತ್ತಿದೆ ಎಂದು ಮೂಲಕಗಳು ತಿಳಿಸಿವೆ.
ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಸರಕಾರ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮೀ ಯೋಜನೆಯ ಮೂಲಕ ಮನೆಯ ಯಜಮಾನಿ ಪ್ರತೀ ತಿಂಗಳು 2 ಸಾವಿರ ರೂಪಾಯಿ ಸಹಾಯಧನವನ್ನು ಪಡೆಯುತ್ತಿದ್ದಾಳೆ. ಆದರೆ ಬಹುತೇಕರಿಗೆ ಇನ್ನೂ ಗೃಹಲಕ್ಷ್ಮೀ ಯೋಜನೆಯ ಹಣ ಸಿಕ್ಕಿಲ್ಲ. ಆದರೆ ಕೆಲವರು 6ನೇ ಕಂತಿನ ಹಣಕ್ಕಾಗಿ ಕಾದು ಕುಳಿತಿದಿದ್ದಾರೆ. ರಾಜ್ಯ ಸರಕಾರದ ಉನ್ನತ ಮೂಲಗಳ ಮಾಹಿತಿಯ ಪ್ರಕಾರ ಗೃಹಲಕ್ಷ್ಮೀ ಯೋಜನೆಯ 6ನೇ ಕಂತಿನ ಹಣ ಯಾವಾಗ ವರ್ಗಾವಣೆ ಎಂಬ ಪ್ರಶ್ನೆಗೆ ಸದ್ಯ ಉತ್ತರ ದೊರಕಿದೆ. ಫೆಬ್ರವರಿ ಮೊದಲ ವಾರದಲ್ಲೇ ಜಮೆ ಆಗಲಿದೆ ಎನ್ನಲಾಗುತ್ತಿದೆ. ಆದರೆ ಈ ಕುರಿತು ಇಲಾಖೆಯಿಂದ ಅಧಿಕೃತ ಮಾಹಿತಿ ಹೊರ ಬಿದ್ದಿಲ್ಲ. ಈ ನಡುವಲ್ಲೇ ರಾಜ್ಯ ಸರಕಾರ ಗೃಹಲಕ್ಷ್ಮೀ, ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದಂತೆ ಹೊಸ ರೂಲ್ಸ್ ಜಾರಿ ಮಾಡಿದೆ. ಇಕೆವೈಸಿ, ಆಧಾರ್ ಸೀಡಿಂಗ್ ಮಾಡಿದ್ದರೂ ಕೂಡ ಇನ್ಮುಂದೆ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಪಡೆಯಬೇಕಾದ್ರೆ ಕಡ್ಡಾಯವಾಗಿ ಎನ್ಪಿಸಿಐ ಮಾಡಿಸಲೇ ಬೇಕಾಗಿದೆ. ಎನ್ಪಿಸಿಐ ಮಾಡಿಸದೇ ಇದ್ದರೆ ನಿಮ್ಮ ಖಾತೆಗೆ ಗೃಹಲಕ್ಷ್ಮೀ ಯೋಜನೆಯ ಹಣ ಜಮೆ…
ಬೆಂಗಳೂರು : ಒಂದು ತಿಂಗಳ ಕಾಲ ಜಿಲ್ಲೆಯಾದ್ಯಂತ ಸಂವಿಧಾನ ಕುರಿತು ಸ್ಥಬ್ದಚಿತ್ರದ ಟ್ಯಾಬ್ಲೋ ಸಂಚಾರಕ್ಕೆ ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಹಾಗು ಬೆಂ.ಗ್ರಾ ಜಿಲ್ಲಾ ಉಸ್ತುವಾರಿ ಸಚಿವ ಮುನಿಯಪ್ಪ ಸೂಚಿಸಿದರು. ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, 75ನೇ ಗಣರಾಜ್ಯೋತ್ಸವ ಹಿನ್ನೆಲೆ ಜಿಲ್ಲೆಯಾದ್ಯಂತ ಒಂದು ತಿಂಗಳ ಕಾಲ ಸಂವಿಧಾನ ಜಾಗೃತಿ ಜಾಥ ಕಾರ್ಯಕ್ರಮವನ್ನು ನಡೆಸಲು, ಸಂವಿಧಾನದ ಕುರಿತು ಮಾಹಿತಿಯನ್ನು ಪ್ರತಿಯೊಬ್ಬರಿಗೂ ತಲುಪಿಸಲು ಚಿಂತನೆ ನಡೆಸಿರುವ ಹಿನ್ನಲೆಯಲ್ಲಿ ಜಿಲ್ಲೆಯ 101 ಪಂಚಾಯತಿಗಳಲ್ಲಿ ಸಂವಿಧಾನ ಕುರಿತ ಸಾಕ್ಷ್ಯ ಚಿತ್ರದ ಮೂಲಕ ಸಾರ್ವಜನಿಕರಿಗೆ ತಳಿಸಲು ತಯಾರಿ ನಡೆಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಿಗೆ ಸೂಚನೆಯನ್ನು ನೀಡಿದರು. ಸಂವಿಧಾನ ಜಾಗೃತಿ ಜಾಥ ಕಾರ್ಯಕ್ರಮಕ್ಕೆ ಎಲ್ಲಾ ಪಕ್ಷದ ಮುಖಂಡರು ಹಾಗೂ ಎಲ್ಲಾ ಸಾರ್ವಜನಿಕರು ಭಾಗವಹಿಸಿ ಆಚರಣೆಮಾಡಲು ತಯಾರಗಬೇಕೆಂದರು. ಈ ಜಾಥ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ 16 ಸದಸ್ಯರ ಸಮಿತಿಯ ರಚನೆಯ ಮೂಲಕ ಇದರ ಉಸ್ತುವಾರಿಯನ್ನು ಜಿಲ್ಲಾಡಳಿತ ಹಾಗೂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳು ವಹಿಸಿ ಯಶಸ್ವಿಯಾಗಿ ನಡೆಸಲು…
ಮಂಡ್ಯ: ಮಂಡ್ಯ ಜಿಲ್ಲೆಯ ಮೇಲುಕೋಟೆ ಶಿಕ್ಷಕಿ ದೀಪಿಕಾ ನಾಪತ್ತೆ ಹಾಗೂ ಕೊಲೆ ಪ್ರಕರಣ ಬೆಳಕಿಗೆ ಬಂದ 30 ಗಂಟೆಯಲ್ಲೇ ಪೊಲೀಸರು ಹಂತಕನನ್ನು ಅರೆಸ್ಟ್ ಮಾಡಿದ್ದಾರೆ. ಕೊಲೆಗೈದು ತಲೆಮರೆಸಿಕೊಂಡಿದ್ದ ಆರೋಪಿ ನಿತೀಶ್ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮೇಲುಕೋಟೆ ಬೆಟ್ಟದ ತಪ್ಪಲಲ್ಲಿ ಮಾಣಿಕ್ಯನಹಳ್ಳಿ ಗ್ರಾಮದ ದೀಪಿಕಾಳನ್ನು (28) ಅದೇ ಗ್ರಾಮದ ನಿತೀಶ್ ಕೊಲೆ ಮಾಡಿ ಹೂತು ಹಾಕಿದ್ದ. ಶನಿವಾರ ಮಧ್ಯಾಹ್ನ ಶಾಲೆಯಿಂದ ತೆರಳಿದ್ದ ದೀಪಿಕಾ ನಿಗೂಢವಾಗಿ ನಾಪತ್ತೆಯಾಗಿದ್ದು, ಅಂದು ಸಂಜೆ ಬೆಟ್ಟದ ಹಿಂಭಾಗದ ರಸ್ತೆ ಸಮೀಪ ದೀಪಿಕಾ ಸ್ಕೂಟರ್ ಪತ್ತೆಯಾಗಿತ್ತು. ಅಲ್ಲದೆ ದೀಪಿಕಾಳನ್ನು ಎಳೆದಾಡುತ್ತಿದ್ದ ದೃಶ್ಯವನ್ನು ಬೆಟ್ಟದ ಮೇಲಿನಿಂದ ಪ್ರವಾಸಿಗರೊಬ್ಬರು ವೀಡಿಯೋ ಮಾಡಿದ್ದರು. ಇದಾದ ನಂತರ ಮೇಲುಕೋಟೆ ಠಾಣೆಗೆ ದೀಪಿಕಾ ಪೋಷಕರು ನಾಪತ್ತೆ ದೂರು ನೀಡಿದ್ದರು. ಸೋಮವಾರ ಸಂಜೆ ಬೆಟ್ಟದ ತಪ್ಪಲಿನಲ್ಲಿ ದೀಪಿಕಾ ಶವ ಪತ್ತೆಯಾಗಿತ್ತು. https://ainlivenews.com/peanut-is-good-for-health-but-if-people-with-this-problem-eat-it-there-is-no-danger/ ಈ ವೇಳೆ ಶವ ಪತ್ತೆಯಾಗುತ್ತಿದ್ದಂತೆ ನಿತೀಶ್ ಗ್ರಾಮದಿಂದ ಎಸ್ಕೇಪ್ ಆಗಿದ್ದ. ಅಲ್ಲದೇ ದೀಪಿಕಾಗೆ ಕೊನೆಯದಾಗಿ ಈತನೇ ಫೋನ್ ಕಾಲ್ ಮಾಡಿದ್ದ. ನಿತೀಶ್ ಕೊಲೆಗಾರ ಎಂದು ದೀಪಿಕಾ…
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಏಕೆ ಬರ್ತಾರೆ ಅನ್ನೋದೇ ಅವರ ಪಕ್ಷದ ಅಯೋಗ್ಯರಿಗೆ ಗೊತ್ತಿಲ್ಲ ಎಂದು ರಾಜ್ಯ ಬಿಜೆಪಿ ನಾಯಕರ ಮೇಲೆ ಸಚಿವ ಪ್ರಿಯಾಂಕ್ ಖರ್ಗೆ ಹರಿಹಾಯ್ದಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬಿಜೆಪಿ ನಾಯಕರನ್ನು ಅಯೋಗ್ಯರಿಗೆ ಹೋಲಿಕೆ ಮಾಡಿದ್ದಾರೆ. ರಾಜ್ಯ ಬಿಜೆಪಿಯವರು ಮೊದಲು ನರೇಂದ್ರ ಮೋದಿ ಅವರು ಯಾಕೆ ಬರ್ತಾರೆ ಎಂಬುದನ್ನು ತಿಳಿದುಕೊಳ್ಳಲಿ ಎಂದು ಕುಟುಕಿದ್ದಾರೆ. ಸದ್ಯ ಬಿಜೆಪಿಯವರಿಗೆ ನಾನು ಮನೆ ದೇವರು ಆಗಿಬಿಟ್ಟಿದ್ದೇನೆ. ನನ್ನ ಬಗ್ಗೆ ಮಾತನಾಡುವ ತನಕ ಅವರಿಗೆ ತಿಂದ ಅನ್ನ ಕರಗುವುದಿಲ್ಲ. ನಾನು ಬಿಜೆಪಿ ನಾಯಕರ ಅಯೋಗ್ಯ ಪದದ ಬಳಕೆ ರೆಕಾರ್ಡ್ ಆಗಿದೆಯಾ? ಆ ಪದದ ಸಮಾನಾರ್ಥಕ ಪದ ಯಾವುದು ಇದೆಯೋ ಅದೆಲ್ಲವನ್ನೂ ಬಳಸಿ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಈ ಯಾತ್ರೆ ಕೇವಲ ಕಾಂಗ್ರೆಸ್ ಪಕ್ಷಕ್ಕೆ ಮಾತ್ರವಲ್ಲ. ಎಲ್ಲಾ ವಿರೋಧ ಪಕ್ಷಗಳಿಗೆ ಮಾದರಿ. ದೇಶದ ಐಕ್ಯತೆ, ಸಮಗ್ರತೆ ಶಾಂತಿಗೆ ಸಾವಿರಾರು ಕಾಂಗ್ರೆಸ್ ನಾಯಕರು ಪ್ರಾಣತ್ಯಾಗ ಮಾಡಿದ್ದಾರೆ. ತನ್ನ ಅಜ್ಜಿಗೆ ಗುಂಡು ಹಾರಿಸಿ ಕೊಂದಿದ್ದನ್ನು,…
ಬೆಂಗಳೂರು: ಬಿಜೆಪಿಯವರು (BJP) ಕೈಯಲ್ಲಿ ಮಂತ್ರಾಕ್ಷತೆ ಹಿಡಿದಿದ್ದರೆ, ಬಗಲಲ್ಲಿ ದೊಣ್ಣೆ ಹಿಡಿದಿದ್ದಾರೆ. ಈ ಗೂಂಡಾಗಳ ಗೊಡ್ಡು ಬೆದರಿಕೆಗೆ ಯಾವುದೇ ಕಾಂಗ್ರೆಸಿಗ (Congress) ಹೆದರುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಹೇಳಿದ್ದಾರೆ. ಅಸ್ಸಾಂನಲ್ಲಿ (Assam) ರಾಹುಲ್ ಗಾಂಧಿ (Rahul Gandhi) ಭಾರತ್ ಜೋಡೋ ನ್ಯಾಯ ಯಾತ್ರೆ ಮೇಲೆ ಬಿಜೆಪಿ ಕಾರ್ಯಕರ್ತರ ದಾಳಿ ಖಂಡಿಸಿ ಸ್ವಾತಂತ್ರ್ಯ ಉದ್ಯಾನವನದಲ್ಲಿ ಮಂಗಳವಾರ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಸ್ಸಾಂನಲ್ಲಿ ಕಳೆದೆರಡು ದಿನಗಳಿಂದ ಈ ಯಾತ್ರೆಯನ್ನು ತಡೆಯಲಾಗಿದೆ. ಇಂದು ಗುವಾಹಟಿಗೆ ಪ್ರವೇಶಿಸಲು ಅವಕಾಶ ನೀಡುತ್ತಿಲ್ಲ. ಆ ಮೂಲಕ ದೇಶದಲ್ಲಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆ ಬದುಕಿದೆಯೋ ಸತ್ತಿದೆಯೋ ಎಂಬ ಪ್ರಶ್ನೆ ಉದ್ಭವಿಸಿದೆ. ಅಸ್ಸಾಂ ಸರ್ಕಾರದ ಈ ನಡೆಯನ್ನು ನಾವೆಲ್ಲರೂ ಖಂಡಿಸುತ್ತೇವೆ ಎಂದರು. ರಾಹುಲ್ ಗಾಂಧಿ ದೇಶದ ಮನಸ್ಸುಗಳನ್ನು ಒಗ್ಗೂಡಿಸಲು, ಜನರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತಿ, ಅವರಿಗೆ ನ್ಯಾಯ ಒದಗಿಸಲು ಮಣಿಪುರದಿಂದ ಮುಂಬೈವರೆಗೂ ಎರಡನೇ ಹಂತದ ಭಾರತ ಜೋಡೋ ನ್ಯಾಯ ಯಾತ್ರೆ ಹಮ್ಮಿಕೊಂಡಿದ್ದಾರೆ.…