Author: AIN Author

ಬೆಂಗಳೂರು: ಜಾತಿಗಣತಿ ಮಾಡಿ ಸಾಮಾಜಿಕ ನ್ಯಾಯ ಒದಗಿಸಬೇಕು ಎಂಬುದು ನಮ್ಮ ಪಕ್ಷದ ನಿಲುವು. ಆ ನಿಲುವಿಗೆ ನಾವು ಬದ್ಧರಾಗಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು. https://ainlivenews.com/a-leopard-was-spotted-near-the-gate-of-veteran-actress-lilavatis-garden/ ನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ಸಿಗಬೇಕು, ಎಂದು ಅನೇಕ ಸಮುದಾಯಗಳು ಆಗ್ರಹ ಮಾಡಿವೆ. ಪರಿಶಿಷ್ಟರು, ಪಂಚಮಸಾಲಿ, ವೀರಶೈವರು, ಒಕ್ಕಲಿಗರು ಸೇರಿದಂತೆ ಹಲವರು ಹೋರಾಟ ಮಾಡುತ್ತಿದ್ದಾರೆ. ಈ ಹೋರಾಟದಲ್ಲಿ ಪಕ್ಷಬೇಧ ಮರೆತು ಹೋರಾಟ ಮಾಡಲಾಗುತ್ತಿದೆ. ಆದರೇ, ಕೆಲ ಸಮುದಾಯ ಹಾಗೂ ಅದರ ನಾಯಕರು ಜಾತಿ ಗಣತಿ ಸಮೀಕ್ಷೆ ವೇಳೆ ನಮ್ಮನ್ನು ಸಂಪರ್ಕಿಸಿಲ್ಲ. ಹೀಗಾಗಿ ಸಮೀಕ್ಷೆಯನ್ನು ವೈಜ್ಞಾನಿಕವಾಗಿ ಮಾಡಬೇಕು ಎಂದು ಕೇಳುತ್ತಿವೆ ಎಂದು ತಿಳಿಸಿದರು. ನೀವು ಕೂಡ ಪತ್ರಕ್ಕೆ ಸಹಿ ಹಾಕಿ ಮುಖ್ಯಮಂತ್ರಿಗಳಿಗೆ ರವಾನಿಸಿದ್ದೀರಾ ಎಂದು ಕೇಳಿದ ಪ್ರಶ್ನೆಗೆ, “ನಾನು ಸಹಿ ಮಾಡಬಾರದೇ? ಎಷ್ಟು ಜನ ಮಂತ್ರಿಗಳು ಈ ವಿಚಾರವಾಗಿ ಸಭೆ ಮಾಡಿಲ್ಲ? ಅದೇ ರೀತಿ ನಾನು ರಾಜಕೀಯ ಪಕ್ಕಕ್ಕಿಟ್ಟು ನಮ್ಮ ಸಮಾಜ, ಅದರ ಗೌರವ, ಅಭಿಮಾನ ಉಳಿಸಿಕೊಳ್ಳಬೇಕು ಎಂದು…

Read More

ಬೆಂಗಳೂರು:  ನವೆಂಬರ್ 25ರಂದು ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಹೆಚ್​ಎಎಲ್​​ ಏರ್​ಪೋರ್ಟ್​ಗೆ ಆಗಮಿಸಲಿರುವ ಪ್ರಧಾನಿ ಮೋದಿ HAL ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಕಾರ್ಯಕ್ರಮದ ಬಳಿಕ ತೆಲಂಗಾಣಕ್ಕೆ ತೆರಲಿ ತೆಲಂಗಾಣ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ. https://ainlivenews.com/a-new-couple-dressed-as-farmers-pre-wedding-shoot/ ಇನ್ಮುಂದೆ ನೈಸ್ ರಸ್ತೆಯಲ್ಲೂ ಬಿಎಂಟಿಸಿ ಬಸ್​ಗಳು ಸಂಚರಿಸಲಿವೆ. ಪ್ರಯಾಣಿಕರ ಬೇಡಿಕೆ ಮೇರೆಗೆ ನೈಸ್ ರಸ್ತೆಯಲ್ಲೂ ಬಿಎಂಟಿಸಿ ಬಸ್ ಗಳ ಸಂಚಾರ. ಎಲೆಕ್ಟ್ರಾನಿಕ್ ಸಿಟಿಯಿಂದ ಮಾದವಾರ ರೂಟ್ ಗೆ ಹೊಸ ಮಾರ್ಗವಾಗಿ ಬಿಎಂಟಿಸಿ ಬಸ್ ಗಳ ಸೇವೆ. ಈ ಎರಡು ಸ್ಥಳಗಳಿಗೆ ನೈಸ್ ರೋಡ್ ಮೂಲಕವಾಗಿ ಬಿಎಂಟಿಸಿ ಬಸ್ ಗಳು ಸಂಚಾರ ನಡೆಸಲಿವೆ.

Read More

ಗದಗ: ನ.24 ರಿಂದ ಡಿ. 3ರ ವರೆಗೆ ಗದಗನಲ್ಲಿ ಕೊಪ್ಪಳದ ಅಭಿನವ ಗವಿಸಿಧ್ದೇಶ್ವರ ಸ್ವಾಮೀಜಿಗಳಿಂದ ಆಧ್ಯಾತ್ಮ ಪ್ರವಚನ ನಡೆಯಲಿದೆ ಎಂದು ಗದುಗಿನ ಪತ್ರಿಕಾಭವನದಲ್ಲಿ ಮಾಜಿ ಶಾಸಕ ಡಿ ಆರ್ ಪಾಟೀಲ್ ಸುದ್ದಿಗೋಷ್ಠಿ ನಡೆಸಿ ಹೇಳಿದರು. ಪ್ರತಿನಿತ್ಯ ಸಂಜೆ 6 ರಿಂದ 7 ಘಂಟೆಯವರೆಗೆ ಆಧ್ಯಾತ್ಮ ಪ್ರವಚನ ನಡೆಯಲಿದ್ದು, ಗದಗ ನಗರದ ವಿದ್ಯಾದಾನ ಸಮಿತಿ ಶಾಲೆ ಮೈದಾನದಲ್ಲಿ ಪ್ರವಚನ ಆಯೋಜನೆ ಮಾಡಲಾಗಿದೆ. ಉದ್ಘಾಟನಾ ಕಾರ್ಯಕ್ರಮಗಳಲ್ಲಿ ವಿವಿಧ ಮಠಾಧಿಶರ ಸಾನಿಧ್ಯ ವಹಿಸಲಿದ್ದು, ಜೊತೆಗೆ ಗದಗ ನಗರ ಸೇರಿದಂತೆ ತಾಲೂಕಿನ ವಿವಿಧ ಗ್ರಾಮೀಣ ಭಾಗಗಳಲ್ಲಿ ಸದ್ಭಾವನಾ ಪಾದಯಾತ್ರೆ  ನಡೆಯಲಿದೆ. ಸತ್ಸಂಗದಿಂದ ನಮ್ಮ ಬದುಕು, ಕೌಟುಂಬಿಕ ಬದುಕು ಸಾಧ್ಯ, ಮನಸ್ಸನ್ನು ಕೂಡಿಸೋ ಕೆಲಸ ಇಂದಿನ ದಿನಗಳಲ್ಲಿ ಅವಶ್ಯಕವಾಗಿದ್ದು, ಉತ್ತಮ ವಾತಾವರಣ ನಿರ್ಮಾಣಕ್ಕೆ ಆಧ್ಯಾತ್ಮ ಪ್ರವಚನಗಳಿಂದ ಸಾಧ್ಯವಾಗುತ್ತದೆ ಎಂದು ಮಾಜಿ ಶಾಸಕ ಡಿ ಆರ್ ಪಾಟೀಲ್ ಹೇಳಿದರು.

Read More

ಬೆಂಗಳೂರು: ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿ ಬಳಿ ಇರುವ ಹಿರಿಯ ನಟಿ ಲೀಲಾವತಿ ತೋಟದ ಗೇಟ್​ ಬಳಿ ಚಿರತೆ ಪ್ರತ್ಯಕ್ಷವಾಗಿದೆ. ನಿನ್ನೆ ರಾತ್ರಿ 10.30ರ ಸುಮಾರಿಗೆ ಚಿರತೆ ಕಾಣಿಸಿಕೊಂಡಿದೆ. ಸೋಲದೇವನಹಳ್ಳಿ, ಬಾಣಸವಾಡಿ, ಆಗಳಗುಪ್ಪೆ, ಚೋಡಸಂದ್ರ, ಹಂದಿಗುಟ್ಟೆ ಗ್ರಾಮದ ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದ್ದು ಚಿರತೆ ಸೆರೆ ಹಿಡಿಯುವಂತೆ ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ತಾಜಾ ಸುದ್ದಿಗಾಗಿ ಹೀಗೆ ನೋಡ್ತಾ ಇರಿ AIN ನ್ಯೂಸ್‌ …..

Read More

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ (WestBengal) 20 ಸಾವಿರ ಕೋಟಿ ರೂಪಾಯಿ ಹೂಡಿಕೆ ಮಾಡುವುದಾಗಿ ರಿಲಯನ್ಸ್ ಇಂಡಸ್ಟ್ರೀಸ್ (Reliance Industries) ಅಧ್ಯಕ್ಷ ಮುಕೇಶ್ ಅಂಬಾನಿ ಅವರು ಘೋಷಣೆ ಮಾಡಿದ್ದಾರೆ. ಕೋಲ್ಕತ್ತಾದಲ್ಲಿನ 7ನೇ ಬೆಂಗಾಲ್ ಜಾಗತಿಕ ಉದ್ಯಮ ಸಮಾವೇಶದಲ್ಲಿ ಮಾತನಾಡಿದ ಅವರು, ಪಶ್ಚಿಮ ಬಂಗಾಳದಲ್ಲಿ ರಿಲಯನ್ಸ್ ಇದುವರೆಗೆ ಸುಮಾರು 45,000 ಕೋಟಿ ರೂಪಾಯಿ ಹೂಡಿಕೆ ಮಾಡಿದೆ. ಹಾಗೆಯೇ ಮುಂದಿನ ಮೂರು ವರ್ಷಗಳಲ್ಲಿ ನಾವು 20 ಸಾವಿರ ಕೋಟಿ ರೂಪಾಯಿ ಹೆಚ್ಚುವರಿ ಹೂಡಿಕೆ ಮಾಡುವುದಾಗಿ ಘೋಷಿಸಿದರು. ದೂರಸಂಪರ್ಕ, ರೀಟೇಲ್ ಮತ್ತು ಜೈವಿಕ ಇಂಧನ ಕ್ಷೇತ್ರಗಳಲ್ಲಿ ಈ 20 ಸಾವಿರ ಕೋಟಿ ಹೂಡಿಕೆ ಮಾಡಲಾಗುವುದು. ನಾವು 5ಜಿ ತಂತ್ರಜ್ಞಾನವನ್ನು ರಾಜ್ಯದ ಮೂಲೆ ಮೂಲೆಗೆ ಒಯ್ಯುತ್ತಿದ್ದೇವೆ. ವಿಶೇಷವಾಗಿ ಗ್ರಾಮೀಣ ಭಾಗದ ಬಂಗಾಳವನ್ನು ಸಂಪರ್ಕಿಸಲಾಗುತ್ತಿದೆ. ನಾವು ಬಂಗಾಳದ ಬಹುತೇಕ ಭಾಗಗಳನ್ನು ಆವರಿಸಿದ್ದೇವೆ. https://twitter.com/ANI/status/1726927310216151366?ref_src=twsrc%5Etfw%7Ctwcamp%5Etweetembed%7Ctwterm%5E1726927310216151366%7Ctwgr%5Ebe79ae2c3dcf1535a87472d3bbf4c344fc0ca814%7Ctwcon%5Es1_&ref_url=https%3A%2F%2Fpublictv.in%2Fmukesh-ambani-announces-investment-of-rs-20000-crore-in-west-bengal%2F ಜಿಯೋ ನೆಟ್‍ವರ್ಕ್ ರಾಜ್ಯದ ಜನಸಂಖ್ಯೆಯ 98.8%ರಷ್ಟು ಮತ್ತು ಕೋಲ್ಕತ್ತಾ ಟೆಲಿಕಾಂ ವಲಯದಲ್ಲಿ 100%ರಷ್ಟು ಜನಸಂಖ್ಯೆಯನ್ನು ತಲುಪಿದೆ. ಜಿಯೋದ ಪ್ರಬಲ ನೆಟ್‍ವರ್ಕ್ ಪಶ್ಚಿಮ ಬಂಗಾಳದಲ್ಲಿ ದೊಡ್ಡ ಪ್ರಮಾಣದಲ್ಲಿ ಉದ್ಯೋಗದ…

Read More

ಬೆಂಗಳೂರು: ವಿದ್ಯಾರ್ಥಿನಿಗೆ ಚುಂಬಿಸಲು ಯತ್ನಿಸಿದ ಹೋಟೆಲ್​ ಸಿಬ್ಬಂದಿಯನ್ನು ಪೊಲೀಸರು ಬಂಧನವಾಗಿರುವ ಘಟನೆ ಸೋಲದೇವನಹಳ್ಳಿಯಲ್ಲಿ ನಡೆದಿದೆ. https://ainlivenews.com/a-new-couple-dressed-as-farmers-pre-wedding-shoot/ ಕಬೀರ್​, ಬಂಧಿತ ಆರೋಪಿ, ನಗರದ ಸೋಲದೇವನಹಳ್ಳಿ ಬಳಿ ಪಿಜಿಯೊಂದರಲ್ಲಿ ವಾಸವಾಗಿದ್ದ ಯುವತಿ ಪಿಜಿ ಪಕ್ಕದಲ್ಲೇ ಇದ್ದ ಹೋಟೆಲ್ ನಲ್ಲಿ ಊಟಕ್ಕೆ ಹೋಗಿದ್ದಾರೆ, ಲೈಂಗಿಕ ಕಿರುಕುಳ ನೀಡಿದ ಆರೋಪಿ ಚುಂಬಿಸಲು ಮುಂದಾಗಿದ್ದಾನೆ, ಕೂಡಲೇ ವಿದ್ಯಾರ್ಥಿನಿ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಘಟನೆ ಸಂಬಂಧ ಆರೋಪಿ ಕಬೀರ್​ ನನ್ನು ಸೋಲದೇವನಹಳ್ಳಿ ಪೊಲೀಸರು ಬಂಧಿಸಿದ್ದು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಡ್ಯ: ಬಾಯ್ಲರ್ ಬೆಲ್ಟ್‌ಗೆ ಸಿಲುಕಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಮಂಡ್ಯದ ಮೈಶುಗರ್​ ಕಾರ್ಖಾನೆಯಲ್ಲಿ ನಡೆದಿದೆ. ಬಿಹಾರ ಮೂಲದ ರಾಕೇಶ್ (22) ಮೃತ ದುರ್ದೈವಿಯಾಗಿದ್ದು, ಇತ್ತೀಚೆಗಷ್ಟೇ ಕೆಲಸಕ್ಕೆ ಸೇರಿದ್ದ ರಾಕೇಶ್ ನಿನ್ನೆ ನೈಟ್ ಶಿಫ್ಟ್‌ ಕೆಲಸದಲ್ಲಿದ್ದರು. ಇಂದು ಬೆಳಿಗ್ಗೆ ಬೂದಿ ತೆಗೆಯುವ ಮಷೀನ್ ಬೆಲ್ಟ್‌ಗೆ ಸಿಲುಕಿ ಮೃತಪಟ್ಟಿದ್ದಾರೆ. ತಕ್ಷಣವೇ ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಪ್ರಾಣ ಬಿಟ್ಟಿದ್ದಾರೆ. ಇನ್ನೂ ಮಂಡ್ಯ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

Read More

ಬೆಂಗಳೂರು: ರೈತರ ವೇಷದಲ್ಲಿ ನವ ಜೋಡಿಯೊಂದು ಪ್ರೀ ವೆಡ್ಡಿಂಗ್ ಶೂಟ್ (Agriculture Pre Wedding Shoot) ಮಾಡಿಸಿಕೊಳ್ಳುವ ಮೂಲಕ ಸುದ್ದಿಯಾಗಿದೆ. ಚಾಮರಾಜನಗರ (Chamarajangara) ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಹೊಸಮಾಲಂಗಿ ಗ್ರಾಮದ ಯುವ ರೈತ ಅಭಿಲಾಷ್‌ ಮತ್ತು ಚನ್ನಪಟ್ಟಣದ ಕೃತಿಕಾ ಅವರು ವಿಭಿನ್ನವಾಗಿ ಪ್ರಿ ವೆಡ್ಡಿಂಗ್‌ ಶೂಟ್‌ ಮಾಡಿಸಿದ್ದಾರೆ. ಪ್ರವಾಸಿ ಸ್ಥಳ, ಜಲಪಾತ, ಸೇತುವೆ ಇತ್ಯಾದಿ ಸ್ಥಳಗಳಲ್ಲಿ ಪ್ರೀ ವೆಡ್ಡಿಂಗ್ ಶೂಟ್ ಮಾಡುವುದು ಇಂದು ಸಹಜ. ಆದರೆ ಇವರ ಪ್ರೀ ವೆಡ್ಡಿಂಗ್ ಶೂಟ್‌ನಲ್ಲಿ ಉಳುಮೆ, ಎತ್ತಿ ಬಂಡಿಯಲ್ಲಿ ಸವಾರಿ, ರಾಗಿ ಮುದ್ದೆ, ಉಪ್ಸಾರು ಮನೆ ಮುಂದೆ ರಂಗೋಲಿ ಹೀಗೆ ಕೃಷಿ ಚಟುವಟಿಕೆಗಳ ಅನಾವರಣ ಮಾಡಿದ್ದಾರೆ. ರೈತರ ಮಕ್ಕಳಿಗೆ ಹೆಣ್ಣು ಸಿಗುತ್ತಿಲ್ಲ ಎಂಬ ಮಾತಿನ ಮಧ್ಯೆ ಈ ಯುವ ರೈತನ ‘ಕೃಷಿ ಪ್ರೀ ವೆಡ್ಡಿಂಗ್ ಶೂಟ್’ ಈಗ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದ್ದು ಮೆಚ್ಚುಗೆ ವ್ಯಕ್ತವಾಗಿದೆ.

Read More

ಬೆಂಗಳೂರು: “ಜಾತಿ ಗಣತಿ ಮಾಡಿ ಸಾಮಾಜಿಕ ನ್ಯಾಯ ಒದಗಿಸಬೇಕು ಎಂಬುದು ನಮ್ಮ ಪಕ್ಷದ ನಿಲುವು. ಆ ನಿಲುವಿಗೆ ನಾವು ಬದ್ಧರಾಗಿದ್ದೇವೆ. ಆದರೆ ಜಾತಿ ಗಣತಿ ಸಮೀಕ್ಷೆ ವೈಜ್ಞಾನಿಕವಾಗಿ ಆಗಬೇಕು ಎಂದು ವಿವಿಧ ಸಮುದಾಯಗಳು ಆಗ್ರಹಿಸಿವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಉತ್ತರಿಸಿದರು. ಜಾತಿ ಗಣತಿ ವರದಿ ತಿರಸ್ಕಾರಕ್ಕೆ ನೀವು ಸಹಮತ ವ್ಯಕ್ತಪಡಿಸಿದ್ದೀರಾ ಎಂದು ಕೇಳಿದ ಪ್ರಶ್ನೆಗೆ ಅವರು ಈ ರೀತಿ ಪ್ರತಿಕ್ರಿಯಿಸಿದರು. “ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ಸಿಗಬೇಕು, ಎಂದು ಅನೇಕ ಸಮುದಾಯಗಳು ಆಗ್ರಹ ಮಾಡಿವೆ. ಪರಿಶಿಷ್ಟರು, ಪಂಚಮಸಾಲಿ, ವೀರಶೈವರು, ಒಕ್ಕಲಿಗರು ಸೇರಿದಂತೆ ಹಲವರು ಹೋರಾಟ ಮಾಡುತ್ತಿದ್ದಾರೆ. ಈ ಹೋರಾಟದಲ್ಲಿ ಪಕ್ಷಬೇಧ ಮರೆತು ಹೋರಾಟ ಮಾಡಲಾಗುತ್ತಿದೆ. ಕೆಲ ಸಮುದಾಯ ಹಾಗೂ ಅದರ ನಾಯಕರು ಜಾತಿ ಗಣತಿ ಸಮೀಕ್ಷೆ ವೇಳೆ ನಮ್ಮನ್ನು ಸಂಪರ್ಕಿಸಿಲ್ಲ. ಹೀಗಾಗಿ ಸಮೀಕ್ಷೆಯನ್ನು ವೈಜ್ಞಾನಿಕವಾಗಿ ಮಾಡಬೇಕು ಎಂದು ಕೇಳುತ್ತಿವೆ” ಎಂದು ತಿಳಿಸಿದರು. ನೀವು…

Read More

ತುಮಕೂರು: ಬಾವಿಗೆ ಜಿಗಿದು ಎರಡು ವರ್ಷದ ಪುಟ್ಟ ತಂಗಿಯನ್ನ ಕಾಪಾಡಿದ್ದ ಪೋರಿಗೆ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ ಲಭಿಸಿದೆ. ಹೌದು ತನ್ನ ಎರಡು ವರ್ಷದ ತಂಗಿಯನ್ನ ಕಾಪಾಡಲು ಜೀವ ಪಣಕ್ಕಿಟ್ಟು ಬಾವಿಗೆ ಜಿಗಿದು ತಂಗಿಯನ್ನ ಕಾಪಾಡಿದ್ದ ಶಾಲು ಎಂಬ 8 ವರ್ಷದ ಬಾಲಕಿ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ ವಿಜೇತೆಯಾಗಿದ್ದಾಳೆ. ತುಮಕೂರು ತಾಲೂಕಿನ ಕುಚಂಗಿ ಪಾಳ್ಯದ ಸರ್ಕಾರಿ ಶಾಲೆಯಲ್ಲಿ ಎರಡನೇ ತರಗತಿ ಓದುತ್ತಿದ್ದಾಳೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಶಾಲುಗೆ ಅಧಿಕೃತ ಅಹ್ವಾನ ನೀಡಲಾಗಿದೆ. ಆಟ ಆಡುವ ವೇಳೆ ಬಾವಿಗೆ ಬಿದ್ದಿದ್ದ ಶಾಲುವಿನ ತಂಗಿ ಎರಡು ವರ್ಷದ ಪುಟ್ಟ ಕಂದಮ್ಮನನ್ನು ಲೈಫ್ ಜಾಕೆಟ್ ತೊಟ್ಟು ಬಾವಿಗೆ ಜಿಗಿದು ಕಾಪಾಡಿದ್ದಾಳೆ. ಕಳೆದ ಜೂನ್ ನಲ್ಲಿ ಈ ಘಟನೆ ನಡೆದಿದ್ದು, ಶಾಲು ಶೌರ್ಯ ಮೆಚ್ಚಿ ಸರ್ಕಾರ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ ನೀಡುತ್ತಿದೆ. ನಾಳೆ ಬೆಂಗಳೂರು ಜವಹಾರ ಬಾಲಭವನದಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ‌‌‌ ಮಾಡಲಾಗುತ್ತದೆ.

Read More