ಪಿರಿಯಾಪಟ್ಟಣ ಜ 24: ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೀವಿ ಎಂದಿದ್ದ ಪ್ರಧಾನಿ ನರೇಂದ್ರ ಮೋದಿ ಅದರಲ್ಲಿ ವಿಫಲರಾದರು. ಹತ್ತು ವರ್ಷದಲ್ಲಿ 20 ಕೋಟಿ ಉದ್ಯೋಗ ಕೊಡಬೇಕಿತ್ತು. ಆಗಲಿಲ್ಲ. ಈ ವೈಫಲ್ಯ ಮುಚ್ಚಿಕೊಳ್ಳಲು ಶ್ರೀರಾಮನನ್ನು ಮುಂದಿಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೇವಡಿ ಮಾಡಿದರು. ಪಿರಿಯಾಪಟ್ಟಣ ತಾಲ್ಲೂಕಿನ 79 ಗ್ರಾಮಗಳ 150 ಕೆರೆಗಳಿಗೆ ಮತ್ತು ಕಟ್ಟೆಗಳಿಗೆ ಕಾವೇರಿ ನದಿಯ ನೀರು ತುಂಬಿಸುವ ಯೋಜನೆಯನ್ನು ಮುತ್ತಿನಮುಳುಸೋಗೆಯಲ್ಲಿ ಉದ್ಘಾಟಿಸಿ ಮಾತನಾಡಿದರು. ಮಹಾತ್ಮಗಾಂಧಿ ಹೇಳಿದ ರಘು ಪತಿ ರಾಘವ ರಾಜಾರಾಮನನ್ನು ನಾವು ಪೂಜಿಸುತ್ತೇವೆ, ನಾವೂ ಭಜಿಸುತ್ತೇವೆ. ಜನದ್ರೋಹವನ್ನು ಬಚ್ಚಿಟ್ಟುಕೊಳ್ಳಲು ಶ್ರೀರಾಮನನ್ನು ಮುಂದಿಟ್ಟು ರಾಜಕೀಯ ಮಾಡುತ್ತಿರುವ ಬಿಜೆಪಿ ಯನ್ನು ಕ್ಷಮಿಸಬೇಡಿ. ಬೆಂಬಲಿಸಬೇಡಿ ಎಂದು ಕರೆ ನೀಡಿದರು. ಪಿರಿಯಾಪಟ್ಟಣದ ಜನ, ಜಾನವಾರು, ಕೃಷಿಯ ಅನುಕೂಲಕ್ಕಾಗಿ ಮತ್ತು ಇಲ್ಲಿನ ಅಂತರ್ಜಲ ಹೆಚ್ಚಳಕ್ಕೆ ನಾನೇ ಶಂಕುಸ್ಥಾಪನೆ ಮಾಡಿ ನಾನೇ ಈಗ ಉದ್ಘಾಟಿಸಿದ್ದೇನೆ. 79 ಹಳ್ಳಿ 93 ಸಾವಿರ ಜನರಿಗೆ ಇದರಿಂದ ಲಾಭ ಆಗುತ್ತಿದೆ. ಇದು ನಮ್ಮ ಸರ್ಕಾರ ಪಿರಿಯಾಪಟ್ಟಣದಲ್ಲಿ ನಿರ್ವಹಿಸಿದ…
Author: AIN Author
ಬೆಂಗಳೂರು: ಇಂದು ರಾಜ್ಯಾದ್ಯಂತ ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಬೆಂಗಳೂರು ಸುತ್ತಮುತ್ತ ಆಕಾಶ ನಿರ್ಮಲವಾಗಿರಲಿದೆ. ಬೆಳಗಿನ ಜಾವ ದಟ್ಟ ಮಂಜು ಮುಸುಕುವ ಸಾಧ್ಯತೆ ಇದ್ದರೆ, ನಂತರ ಬಿಸಿಲು ಹೆಚ್ಚಿರಲಿದೆ. ರಾತ್ರಿ ಹೊತ್ತು ಕೊರೆಯುವ ಚಳಿ ಇರಲಿದೆ. ಗರಿಷ್ಠ ಉಷ್ಣಾಂಶವು 29 ಹಾಗೂ ಕನಿಷ್ಠ ಉಷ್ಣಾಂಶವು 17 ಡಿ.ಸೆ ಇರಲಿದೆ. ಮುಂದಿನ 48 ಗಂಟೆಯಲ್ಲಿ ರಾಜ್ಯಾದ್ಯಂತ ಕೆಲವು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ. ಇದರಿಂದಾಗಿ ಸೆಕೆಯು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು: ಪೊಲೀಸ್ ಸಬ್ ಇನ್ಸ್ಪೆಕ್ಟರ್ (PSI) ಹುದ್ದೆ ಆಸೆಯಲ್ಲಿರುವ ಆಕಾಂಕ್ಷಿಗಳಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಶೀಘ್ರವೇ 403+ 660 PSI ಹುದ್ದೆಗೆ ನೇಮಕಾತಿ ಪ್ರಕ್ರಿಯೆ ಶುರು ಮಾಡುವುದಾಗಿ ಗೃಹ ಸಚಿವ ಪರಮೇಶ್ವರ್ (G.Parameshwar) ತಿಳಿಸಿದ್ದಾರೆ. ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಹಳ ದಿನಗಳಿಂದ ನಿರೀಕ್ಷೆ ಮಾಡಿದ್ದ PSI ಪರೀಕ್ಷೆ ಯಶಸ್ವಿಯಾಗಿ, ಸುಗಮವಾಗಿ ನಡೆದಿದೆ. ಪರೀಕ್ಷೆಯಲ್ಲಿ ಯಾವುದೇ ಅಕ್ರಮಗಳು ಆಗಿಲ್ಲ. ಅಭ್ಯರ್ಥಿಗಳಿಗೆ ಯಾವುದೇ ಬ್ಲೂಟೂತ್ ಕೂಡಾ ತರಲು ಸಾಧ್ಯವಾಗಿಲ್ಲ. 54 ಸಾವಿರ ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿ ಆಗಿದ್ದರು. ಇದರಲ್ಲಿ 65% ರಿಂದ 70% ಹಾಜರಾತಿ ಇತ್ತು. ಆದಷ್ಟು ಮೌಲ್ಯಮಾಪನ ಮಾಡಿ ರಿಸಲ್ಟ್ ಕೊಟ್ಟು ನೇಮಕಾತಿ ಪ್ರಕ್ರಿಯೆ ಶುರು ಮಾಡುತ್ತೇವೆ ಎಂದಿದ್ದಾರೆ. ಮುಂದಿನ ಹಂತದಲ್ಲಿ 403 ಜನ PSI ನೇಮಕಾತಿಗೂ ಪರೀಕ್ಷೆ ಮಾಡುತ್ತೇವೆ. ಅದನ್ನು ಕೂಡಾ KEA ಮೂಲಕವೇ ಪರೀಕ್ಷೆ ನಡೆಸುತ್ತೇವೆ. PSI ಪರೀಕ್ಷೆ ಯಶಸ್ವಿಯಾಗಿ ನಡೆಸಿದ್ದಕ್ಕೆ KEA ಮತ್ತು ಅದರ ನಿರ್ದೇಶಕರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಬಹಳ ಎಚ್ಚರಿಕೆಯಿಂದ ಪರೀಕ್ಷೆ ಮಾಡಿದ್ದಾರೆ. ಮುಂದೆಯೂ ಕೂಡಾ…
ಬೆಂಗಳೂರು: ಅಂಗನವಾಡಿ ಕೇಂದ್ರಗಳಿಗೆ ಬಾಡಿಗೆ ಕಟ್ಟವ ಯೋಗ್ಯತೆ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ ಎಂದು ಆರ್.ಅಶೋಕ್ ಕಿಡಿಕಾರಿದ್ದಾರೆ. ಈ ಕುರಿತು’ಎಕ್ಸ್’ನಲ್ಲಿ ಬರೆದುಕೊಂಡಿರುವ ಅವರು, ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರು ಬಡ್ಡಿಗೆ ಸಾಲ ತಂದು ಕಟ್ಟಡದ ಬಾಡಿಗೆ ಕಟ್ಟುವ ಪರಿಸ್ಥಿತಿ ತಂದಿಟ್ಟಿದೆ. ಇನ್ನೂ ಗ್ರಾಮೀಣ ಭಾಗದ ಬಡ ಕುಟುಂಬದ ಗರ್ಭಿಣಿಯರು, ಬಾಣಂತಿಯರು ಹಾಗೂ ಮಕ್ಕಳಿಗೆ ಅಂಗನವಾಡಿಯಲ್ಲಿ ಸಿಗುವ ಬಿಸಿಯೂಟ, ಪೌಷ್ಠಿಕ ಆಹಾರವೇ ಜೀವನಾಧಾರವಾಗಿದೆ. ಬಡವರ ಪಾಲಿನ ಆಸರೆಯಾದ ಅಂಗನವಾಡಿಗಳಿಗೆ ಬಾಡಿಗೆ ಕಟ್ಟಲೂ ಯೋಗ್ಯತೆ ಇಲ್ಲದ ನಿಮ್ಮ ಸರ್ಕಾರ ಇದ್ದರೆಷ್ಟು ಸತ್ತರೆಷ್ಟು ಸಿಎಂ ಸಿದ್ದರಾಮಯ್ಯನವರೇ ಎಂದು ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಒಟ್ಟು 66,361 ಅಂಗನವಾಡಿ ಕೇಂದ್ರಗಳಿದ್ದು, 19,802 ಕೇಂದ್ರಗಳಿಗೆ ಸ್ವಂತ ಕಟ್ಟಡಗಳಿಲ್ಲ. ಸ್ವಂತ ಕಟ್ಟಡ ಇಲ್ಲದ ಅಂಗನವಾಡಿಗಳಿಗೆ ಗ್ರಾಮ ಪಂಚಾಯಿತಿ ಇಲ್ಲವೆ ಖಾಸಗಿ ಕಟ್ಟಡಗಳನ್ನು ಬಾಡಿಗೆ ಪಡೆದು ಒದಗಿಸಲಾಗಿದೆ ಎಂದರು.
ಬೆಂಗಳೂರು: ಅಮಾಯಕನ ಮೇಲೆ ಪೊಲೀಸರೇ ಹಲ್ಲೆ ನಡೆಸಿರುವ ಆರೋಪವೊಂದು ಕೇಳಿ ಬಂದಿದೆ. ಯಾರೋ ಮಾಡಿದ ತಪ್ಪಿಗೆ ಅಮಾಯಕ ವ್ಯಕ್ತಿಯನ್ನು ಕಾಟನ್ಪೇಟೆ ಪೊಲೀಸರು ಠಾಣೆಗೆ (Cottonpet Police Station) ಕರೆದೊಯ್ಯದೇ ಲಾಡ್ಜ್ ಗೆ ಕರೆದೊಯ್ದು 3 ದಿನಗಳ ಕಾಲ ಅಕ್ರಮ ಬಂಧನದಲ್ಲಿಟ್ಟು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿದೆ. ಕಾಟನ್ ಪೇಟೆ ಸಬ್ಇನ್ಸ್ ಪೆಕ್ಟರ್ ಸಂತೋಷ್ ಗೌಡ, ಸಿಬ್ಬಂದಿ ಧ್ಯಾನ್ ಪ್ರಕಾಶ್ ಹಾಗೂ ಸಚಿನ್ ವಿರುದ್ಧ ವೆಂಕಟ್ ಎಂಬವರು ದೂರು ನೀಡಿದ್ದಾರೆ. ಜೊತೆಗೆ ಪೊಲೀಸ್ ಕಮಿಷನರ್ ಹಾಗೂ ಮಾನವಹಕ್ಕುಗಳ ಆಯೋಗಕ್ಕೂ ಕೋಣನಕುಂಟೆ ನಿವಾಸಿ ವೆಂಕಟ್ ದೂರು ನೀಡಿದ್ದಾರೆ. ಆರೋಪ ಏನು..?: ಕಳೆದ ಜನವರಿ 12 ರಂದು ಬೆಂಗಳೂರಿನಿಂದ ಮುಳಬಾಗಿಲಿಗೆ ವೆಂಕಟೇಶ್ ತೆರಳಿದ್ದರು. ಮುಳಬಾಗಿಲಿನ ಪಕ್ಕದ ತನ್ನ ಹುಟ್ಟೂರಾದ ಬೇವಳ್ಳಿಗೆ ತೆರಳಲು ಮಣಿ ಎಂಬಾತನಿಂದ ಡ್ರಾಪ್ ಪಡೆಯುತ್ತಿದ್ದರು. ಈ ಮಣಿ ಎಂಬಾತನ ವಿರುದ್ಧ ಕಾಟನ್ ಪೇಟೆ ಠಾಣೆಯಲ್ಲಿ 420 ಅಡಿ ಕೇಸ್ ದಾಖಲಾಗಿತ್ತು. ಮಣಿಯನ್ನ ಹುಡುಕಾಡ್ತಿದ್ದ ಕಾಟನ್ ಪೇಟೆ ಪೊಲೀಸರಿಗೆ ಮಣಿ ಲೊಕೇಷನ್ ಮುಳಬಾಗಿಲು ತೋರಿಸಿತ್ತು
ಮೈಸೂರು, ಜನವರಿ 24: ಬಿಜೆಪಿಯವರು ನ್ಯಾಯ ಯಾತ್ರೆಗೆ ಉದ್ದೇಶಪೂರ್ವಕವಾಗಿಯೇ ಸಮಸ್ಯೆಗಳನ್ನು ಉಂಟುಮಾಡುತ್ತಿದ್ದಾರೆ. ಇದು ಸಂವಿಧಾನಬಾಹಿರವಾದ ಕ್ರಮ. ಒಬ್ಬ ಮುಖ್ಯಮಂತ್ರಿ ಸ್ಥಾನದಲ್ಲಿರುವವರು ಹೀಗೆಲ್ಲಾ ನಡೆದುಕೊಳ್ಳಬಾರದು. ಇದನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಪಿರಿಯಾಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. https://ainlivenews.com/peanut-is-good-for-health-but-if-people-with-this-problem-eat-it-there-is-no-danger/ ಅಸ್ಸಾಂನಲ್ಲಿ ರಾಹುಲ್ ಗಾಂಧಿ ಅವರ ನ್ಯಾಯ ಯಾತ್ರೆಗೆ ತಡೆಯೊಡ್ಡಿರುವ ಅಸ್ಸಾಂ ಸರ್ಕಾರದ ನಡೆಯ ಬಗ್ಗೆ ಪ್ರಧಾನಿಗಳು ಹಾಗೂ ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆದಿದ್ದರೂ ಪ್ರತಿಕ್ರಿಯೆ ನೀಡಿಲ್ಲ ಎಂಬ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಪ್ರತಿ ನಾಗರಿಕನಿಗೂ ಪಾದಯಾತ್ರೆ ಕೈಗೊಳ್ಳಲು ಅಥವಾ ಯಾವುದೇ ಸರ್ಕಾರದ ವಿರುದ್ಧ ಪ್ರತಿಭಟಿಸುವ ಸ್ವಾತಂತ್ರ್ಯವನ್ನು ಸಂವಿಧಾನ ಕೊಟ್ಟಿದೆ. ರಾಹುಲ್ ಗಾಂಧಿಯವರು ದೇಶದ ಜನರ ಸಮಸ್ಯೆಗಳನ್ನು ಅರಿಯಲು ಹಾಗೂ ಅವುಗಳಿಗೆ ಪರಿಹಾರವನ್ನು ಕಂಡುಕೊಳ್ಳಲು ಪಾದಯಾತ್ರೆ ಮಾಡುತ್ತಿದ್ದಾರೆ ಎಂದರು. ಪ್ರಚೋದನೆ ನೀಡುವುದು ಸಂವಿಧಾನಬಾಹಿರ ನೆಹರೂ ಕುಟುಂಬಕ್ಕೆ ಬೆದರಿಕೆಯಿದ್ದು, ಭಾರತ ಸರ್ಕಾರ ಹಾಗೂ ಅಸ್ಸಾಂ ರಾಜ್ಯ ಸರ್ಕಾರಗಳು ರಾಹುಲ್ ಗಾಂಧಿಯವರಿಗೆ ಸೂಕ್ತ ಭದ್ರತೆಯನ್ನು ಒದಗಿಸಬೇಕಾಗಿರುವುದು ಅವರ ಕರ್ತವ್ಯ. ಇದು…
ಪ್ರತಿಷ್ಠಿತ ಆಸ್ಕರ್ (Oscar) ಪ್ರಶಸ್ತಿಗಾಗಿ ನಾಮ ನಿರ್ದೇಶನ ಪಟ್ಟಿ ಪ್ರಕಟವಾಗಿದೆ. ಕಳೆದ ಬಾರಿ ಭಾರತಕ್ಕೆ ಎರಡು ಆಸ್ಕರ್ ಪ್ರಶಸ್ತಿಗಳು ಸಂದಿವೆ. ಆದರೆ, ಈ ಬಾರಿ ಆಸ್ಕರ್ ನಾಮಿನೇಟ್ ಪಟ್ಟಿಯಲ್ಲಿ ಭಾರತದ ಯಾವುದೇ ಸಿನಿಮಾಗಳು ಇರದೇ ಇರುವುದು ಸಹಜವಾಗಿಯೇ ನಿರಾಸೆ ತಂದಿದೆ. ಹಾಗಂತ ತೀರಾ ನಿರಾಸೆ ಪಟ್ಟುವಂಥದ್ದು ಇಲ್ಲ. ಭಾರತೀಯ ಮಹಿಳೆ ನಿರ್ದೇಶನ ಮಾಡಿರುವ, ಭಾರತದಲ್ಲೇ ನಿರ್ಮಾಣವಾದ, ವಿದೇಶಿ ಸಂಸ್ಥೆ ತಯಾರಿಸಿದ ಡಾಕ್ಯುಮೆಂಟರಿ ನಾಮ ನಿರ್ದೇಶನ ಪಟ್ಟಿಯಲ್ಲಿದೆ ಅತ್ಯುತ್ತಮ ಸಿನಿಮಾ ಪಟ್ಟಿಯಲ್ಲಿ ದಿ ಜೋನ್ ಆಫ್ ಇಂಟರೆಸ್ಟ್, ಬಾರ್ಬಿ, ಮಾಸ್ಟ್ರೊ, ಓಪನ್ ಹೈಮರ್, ಅನಾಟಮಿ ಆಫ್ ಎ ಫಾಲ್ ಸೇರಿದಂತೆ ಹಲವು ಚಿತ್ರಗಳು ಕಾಣಿಸಿಕೊಂಡಿದ್ದರೆ, ಅತ್ಯುತ್ತಮ ನಟ ವಿಭಾಗದಲ್ಲಿ ಜೆಫ್ರಿ ರೈಟ್, ಬ್ರ್ಯಾಡ್ಲಿ ಕೂಪರ್, ಪಾಲ್ ಗಿಯಾಮಟ್ಟಿ, ಕೋಲ್ಮನ್ ಡೆಮಿನಿಗೋ ಸೇರಿದಂತೆ ಹಲವು ಕಲಾವಿದರು ಇದ್ದಾರೆ. ನಿರ್ದೇಶನದ ವಿಭಾಗದಲ್ಲಿ ಕ್ರಿಸ್ಟೊಫರ್ ನೋಲನ್, ಜಸ್ಟಿನ್ ಟ್ರೈಟ್, ಜೊನಥನ್ ಗ್ಲೆಜರ್, ಯೊಗೊರ್ಸ್ ಲ್ಯಾಂತಿಮೋಸ್ ಕಾಣಿಸಿಕೊಂಡಿದ್ದಾರೆ. ಅತ್ಯುತ್ತಮ ನಟಿ ವಿಭಾಗದಲ್ಲಿ ಕ್ಯಾರಿ ಮುಲ್ಲಿಗನ್, ಆನೆಟ್ ಬೆನಿಂಗ್, ಎಮ್ಮ…
ಬಾಲಿವುಡ್ ನ ಖ್ಯಾತ ನಟ ಸೈಫ್ ಅಲಿಖಾನ್ (Saif Ali Khan) ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರಾಗಿದೆ ಎನ್ನುವ ಮಾಹಿತಿ ಇತ್ತು. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಲಾಗಿತ್ತು. ಮುಂಬೈನ ಕೋಕಿಲಾಬೆನ್ ಆಸ್ಪತ್ರೆಯಲ್ಲಿ (Hospital) ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿ ಆಗಿತ್ತು. ಆದರೆ, ಈ ಕುರಿತಂತೆ ಯಾವುದೇ ಅಧಿಕೃತ ಮಾಹಿತಿ ಇರಲಿಲ್ಲ. ಇದೀಗ ಸ್ವತಃ ಸೈಫ್ ಅಲಿ ಖಾನ್ ಅವರೇ ಈ ಕುರಿತಂತೆ ಮಾತನಾಡಿದ್ದಾರೆ. ಜೊತೆಗೆ ಆಸ್ಪತ್ರೆಯಿಂದ ಮನೆಗೂ ಮರಳಿದ್ದಾರೆ. ಸೈಫ್ ಅವರ ಮೊಣಕಾಲಿಗೆ ಗಂಭೀರ ಗಾಯವಾಗಿ, ಭುಜದ ಮೂಳೆ ಕೂಡ ಮುರಿದಿದೆ ಎಂದು ಹೇಳಲಾಗಿತ್ತು. ಗಂಭೀರವಾಗಿಯೇ ಗಾಯವಾಗಿದ್ದರಿಂದ ಶಸ್ತ್ರ ಚಿಕಿತ್ಸೆಗೆ ಒಳಗಾಗುವ ಸಾಧ್ಯತೆ ಇದೆ ಎನ್ನುವ ವದಂತಿಗಳು ಹಬ್ಬಿದ್ದವು. ಆದರೆ, ಕೈಗೆ ಮಾತ್ರ ಪೆಟ್ಟಾಗಿದ್ದು, ಅದಕ್ಕೆ ಚಿಕಿತ್ಸೆ ಪಡೆದಿದ್ದಾರೆ. ಉಳಿದಂತೆ ಭುಜದ ಮೂಳೆಗೆ ಯಾವುದೇ ಸಮಸ್ಯ ಆಗಿಲ್ಲ. ದೇವರ ಸಿನಿಮಾದ ಶೂಟಿಂಗ್ ವೇಳೆ ಅಪಘಾತವಾಗಿತ್ತು. ನಂತರದ ದಿನಗಳಲ್ಲಿ ಕೈ ನೋವು ಕಾಣಿಸಿಕೊಂಡಿದ್ದರಿಂದ ಸೈಫ್ ಆಸ್ಪತ್ರೆಗೆ ದಾಖಲಾಗಿದ್ದರು.…
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಒಳ್ಳೆಯ ವಾತಾವರಣ ಇದೆ. ಲೋಕಸಭೆ ಚುನಾವಣೆಯಲ್ಲಿ ನಾವು ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ. ಲೋಕಸಭೆಯಲ್ಲಿ ಹೆಚ್ಚು ಸ್ಥಾನ ಗೆಲ್ಲದೇ ಇದ್ದರೆ ನಮಗೆ ಅಧಿಕಾರದಲ್ಲಿ ಮುಂದುವರೆಯಲು ನೈತಿಕತೆ ಇರುತ್ತಾ ಎಂಬ ಸಚಿವ ರಾಜಣ್ಣ ಹೇಳಿಕೆಯ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾವು ಗೆದ್ದಿದ್ದೇವೆ ಅಂತ ವಿಶ್ವಾಸ ಇದೆ. 28 ಸೀಟ್ ಗೆಲ್ಲಬೇಕೆಂದು ಬಯಸಿದ್ದೇವೆ. ಈ ಹಿಂದೆ ಕಾಂಗ್ರೆಸ್ ಪಕ್ಷ 27 ಸೀಟ್ ಗೆದ್ದಿದ್ದನ್ನು ಸ್ಮರಿಸಬೇಕು ಎಂದರು. ಗ್ಯಾರಂಟಿ ಯೋಜನೆಗಳ ಬಗ್ಗೆ ಜನರಿಂದ ಒಳ್ಳೆ ಪ್ರತಿಕ್ರಿಯೆ ಲಭ್ಯವಾಗುತ್ತಿದೆ. ಎಂಟು ತಿಂಗಳಲ್ಲಿ ಜನಪರ ಆಡಳಿತ ನೀಡಿರುವುದರಿಂದ ನಾವು ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬೆಂಗಳೂರು: ಮುದ್ರಾ ಯೋಜನೆಯಲ್ಲಿ ಲೋನ್ ಪಡೆಯಲು ಅನ್ಲೈನ್ ನಲ್ಲಿ ಸರ್ಚ್ ಮಾಡುವವರೇ ಎಚ್ಚರ ಯಾಕಂದರೆ ಪ್ರಧಾನಮಂತ್ರಿ ಮುದ್ರಾ ಯೋಜನೆಯ ಹೆಸರಲ್ಲಿ ಸಾಲ ನೀಡೋದಾಗಿ ಸೈಬರ್ ಫ್ರಾಡ್ ಮಾಡುತ್ತಿದ್ದಾರೆ ಆರ್ ಬಿ ಐ ಹಾಗೂ ಮುದ್ರಾಯೋಜನೆಯ ನಕಲಿ ಲೆಟರ್ ಹೆಡ್ ಬಳಸಿ ವಂಚನೆ ನಡೆಸುತ್ತಿದ್ದು ಓರಿಜಿನಲ್ ಲೆಟರ್ ಹೆಡ್ ಗಳನ್ನೂ ಮೀರಿಸುವಂತಿದೆ ಈ ಲೆಟರ್ ಗಳು ಆಗಿದ್ದು ಪ್ರಧಾನ ಮಂತ್ರಿ ಮುದ್ರಾಯೋಜನೆಯ ನಕಲಿ ಬಾಂಡ್ ಕಳಿಸಿ ಮೋಸ 2% ಬಡ್ಡಿಗೆ ಸಾಲ 10 ಲಕ್ಷ ಸಾಲ ನೀಡೋದಾಗಿ ಹೇಳಿ ವಂಚನೆ ಮಾಡುತ್ತಿದ್ದಾರೆ. ಆರ್ ಬಿ ಐ ನಿಂದ ಲೋನ್ ಸಾಂಕ್ಷನ್ ಆಗಿದೆ ಎಂದು ನಕಲಿ ಕನ್ಪರ್ ಮೆಷನ್ ಲೆಟರ್ ಕಳುಹಿಸಿದ್ದ ವಂಚಕರು ಮೊದಲಿಗೆ ಫೀಸ್ ಎಂದು 10 ಸಾವಿರ ಹಣ ಹಾಕಿಸಿಕೊಂಡಿದ್ದ ಖದೀಮರು ಬೈಕ್ ಮಾರಿ ಅಕೌಂಟ್ ಗೆ ಹಣ ಹಾಕಿದ್ದ ನಾರಾಯಣ ಸ್ವಾಮಿ ಹಂತ ಹಂತವಾಗಿ ಹಣ ಪಡೆದು ನೀಡಿದ್ರೂ ನಕಲಿ ಬಾಂಡ್ ಪೇಪರ್ ಗಳು ನಾರಾಯಣ ಸ್ವಾಮಿಗೆ ನಂಬಿಕೆ ಬರಲು…