Author: AIN Author

ಇಸ್ರೇಲ್: ಮುಂಬೈ ಭಯೋತ್ಪಾದನಾ (Mumbai Attack) ದಾಳಿಯಾಗಿ ನವೆಂಬರ್‌ಗೆ 15 ವರ್ಷ. ಈ ಕರಾಳ ದಿನದ ಸ್ಮರಣಾರ್ಥ ಭಯೋತ್ಪಾದಕ ಸಂಘಟನೆ ಲಷ್ಕರ್‌-ಎ-ತೊಯ್ಬಾ ನಿಷೇಧಿಸುವುದಾಗಿ ಇಸ್ರೇಲ್‌ ಘೋಷಿಸಿದೆ. ಮುಂಬೈ ದಾಳಿ ಖಂಡನೀಯ ಎಂದು ಭಯೋತ್ಪಾದಕ ಸಂಘಟನೆ ವಿರುದ್ಧ ಹರಿಹಾಯ್ದಿದೆ. ಭಾರತ ಸರ್ಕಾರದ ಯಾವುದೇ ಮನವಿ ಇಲ್ಲದೆ ಈ ಕ್ರಮ ಕೈಗೊಳ್ಳಲಾಗಿದೆ. ಲಷ್ಕರ್-ಎ-ತೈಬಾವನ್ನು (Lashkar-e-Taiba) ಇಸ್ರೇಲಿ ಅಕ್ರಮ ಭಯೋತ್ಪಾದಕ ಸಂಘಟನೆಗಳ ಪಟ್ಟಿಗೆ ಸೇರಿಸಿದೆ. ಇದಕ್ಕೆ ಸಂಬಂಧಿಸಿದಂತೆ ಎಲ್ಲಾ ನಿಯಮಗಳನ್ನು ಪೂರೈಸಿದೆ ಎಂದು ಭಾರತದಲ್ಲಿನ ಇಸ್ರೇಲ್ (Israel) ರಾಯಭಾರ ಕಚೇರಿ ಅಧಿಕೃತ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ. ಇಸ್ರೇಲ್ ತನ್ನ ಗಡಿಯೊಳಗೆ ಅಥವಾ ಅದರ ಸುತ್ತಲೂ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಭಯೋತ್ಪಾದಕ ಸಂಘಟನೆಗಳನ್ನು ಮಾತ್ರ ಪಟ್ಟಿ ಮಾಡಿದೆ. https://ainlivenews.com/satish-jarakiholi-becoming-cm-is-as-true-as-surya-being-born-congress-mla/ ನೂರಾರು ಭಾರತೀಯ ನಾಗರಿಕರು ಮತ್ತು ಇತರರ ಹತ್ಯೆಗೆ ಈ ಭಯೋತ್ಪಾದಕ ಸಂಘಟನೆ ಹೊಣೆಯಾಗಿದೆ ಎಂದು ತಿಳಿಸಿದೆ. ಭಯೋತ್ಪಾದಕ ಸಂಘಟನೆ ದಾಳಿಯ ಸಂತ್ರಸ್ತರು, ಇಸ್ರೇಲ್‌ ಸೇರಿದಂತೆ ಮುಂಬೈ ದಾಳಿಯಲ್ಲಿ ಬದುಕುಳಿದ ಮತ್ತು ದುಃಖಿತ ಕುಟುಂಬಗಳಿಗೆ ಇಸ್ರೇಲ್‌ ಸಂತಾಪ ಸೂಚಿಸಿದೆ. ಭವಿಷ್ಯದ…

Read More

ತಮಿಳಿನ ಖ್ಯಾತ ನಟ ಸೂರ್ಯ (Surya) ನಟನೆಯ ‘ಕಂಗುವ’ (Kanguva) ಸಿನಿಮಾ ಟೀಮ್ ನಿಂದ ಭರ್ಜರಿ ಅಪ್ ಡೇಟ್ ಸಿಕ್ಕಿದೆ. ಈ ಸಿನಿಮಾವನ್ನು ಬರೋಬ್ಬರಿ 38 ಭಾಷೆಗಳಲ್ಲಿ ರಿಲೀಸ್ ಮಾಡುವುದಾಗಿ ಚಿತ್ರತಂಡ ಘೋಷಣೆ ಮಾಡಿದೆ. ಜೊತೆಗೆ 3 ಡಿ ತಂತ್ರಜ್ಞಾನದಲ್ಲೂ ಈ ಸಿನಿಮಾವನ್ನು ನೋಡಬಹುದಾಗಿದೆ. ಈ ಸಿನಿಮಾದ ಶೂಟಿಂಗ್ ಇನ್ನೂ ಕಂಪ್ಲೀಟ್ ಆಗಿಲ್ಲ. ಆಗಲೇ ಭರ್ಜರಿ ವ್ಯಾಪಾರ ಕೂಡ ಆರಂಭಿಸಿದೆ.  ಭಾರೀ ಮೊತ್ತಕ್ಕೆ ಓಟಿಟಿಗೆ ಸೇಲ್ ಆಗುವ ಮೂಲಕ ಸಂಭ್ರಮವನ್ನು ಇಮ್ಮಡಿಗೊಳಿಸಿದೆ. ಮೂಲಗಳ ಪ್ರಕಾರ ಅಮೆಜಾನ್ ಪ್ರೈಮ್ ಸಂಸ್ಥೆಯು ಕಂಗುವ ಸಿನಿಮಾದ ಓಟಿಟಿ (OTT) ಹಕ್ಕನ್ನು ಬರೋಬ್ಬರಿ 80 ಕೋಟಿಗೆ ಖರೀದಿ ಮಾಡಿದೆಯಂತೆ. ಇದು ಎಲ್ಲ ಭಾಷೆಯ ಹಕ್ಕುಗಳನ್ನೂ ಒಳಗೊಂಡಿದೆ ಎನ್ನಲಾಗುತ್ತಿದೆ.  ಈ ಮಾಹಿತಿಯನ್ನು ಚಿತ್ರತಂಡವೇ ಬಹಿರಂಗ ಪಡಿಸಿದೆ ಎಂದು ಕೆಲ ಮಾಧ್ಯಮಗಳ ವರದಿ ಮಾಡಿವೆ. ಸ್ಟುಡಿಯೋ ಗ್ರೀನ್ನಡಿ ಕೆ.ಇ. ಜ್ನಾನ ವೇಲ್ ರಾಜ ನಿರ್ಮಿಸಿ, ಶಿವ (Shiva) ನಿರ್ದೇಶಿಸುತ್ತಿರುವ ಈ ಚಿತ್ರವು ಪ್ರಾರಂಭವಾದಾಗಿನಿಂದ ಅಭಿಮಾನಿಗಳ ವಲಯದಲ್ಲಿ ಸಾಕಷ್ಟು ಕುತೂಹಲ ಕೆರಳಿಸಿದೆ.…

Read More

ರಾಮನಗರ:- ಕಳ್ಳರು, ಸುಳ್ಳರು ಒಂದಾಗಿದ್ದಾರೆ, ನನಗೆ ಯಾರೂ ಏನೂ ಮಾಡಲು ಸಾಧ್ಯವಿಲ್ಲ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಜೀವನ ಏನೆಂಬುದು ತಿಳಿದಿದೆ. ದೇಶದ ವ್ಯವಸ್ಥೆಯಲ್ಲಿ ಕಳ್ಳರು ಹಾಗೂ ಸುಳ್ಳರು ಒಂದಾಗಿದ್ದಾರೆ. ಮೇಲೊಬ್ಬ ಭಗವಂತ ಎಂಬುವವನಿದ್ದಾನೆ. ಅವನೇ ಅಂತಿಮವಾಗಿ ಎಲ್ಲಾ ತೀರ್ಮಾನ ತೆಗೆದುಕೊಳ್ಳುತ್ತಾನೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕಿಡಿಕಾರಿದರು. ಸಮಾಜದಲ್ಲಿ ಹಣದ ಮದ ಹತ್ತಿಸಿಕೊಂಡವರು ಎಲ್ಲವನ್ನೂ ಕೊಂಡುಕೊಳ್ಳುತ್ತೇನೆ ಎಂದುಕೊಂಡಿದ್ದಾರೆ. ಆದರೆ ಎಲ್ಲದಕ್ಕೂ ಒಂದು ಅಂತ್ಯವೆಂಬುದು ಇದ್ದೇ ಇರುತ್ತದೆ ಎಂದು ತಿರುಗೇಟು ನೀಡಿದರು. ನನ್ನ ವಿರುದ್ಧ ಯಾರು ಬೇಕಾದರೂ ಪೋಸ್ಟರ್ ಅಂಟಿಸಿಕೊಳ್ಳಲಿ, ಬೇಡ ಎನ್ನುವುದಿಲ್ಲ. ನನಗೆ ಯಾರು ಏನೂ ಮಾಡಲು ಸಾಧ್ಯವಾಗುವುದಿಲ್ಲವೆಂದು ತಮ್ಮ ವಿರುದ್ಧದ ಪೋಸ್ಟರ್ ವಾರ್ ವಿಚಾರವಾಗಿ ಕುಮಾರಸ್ವಾಮಿ ಕಾಂಗ್ರೆಸ್ ನಾಯಕರಿಗೆ ಟಾಂಗ್ ನೀಡಿದರು. ಸರ್ಕಾರದ ತಪ್ಪುಗಳನ್ನು ಏಕಾಂಗಿಯಾಗಿ ಪ್ರಶ್ನೆ ಮಾಡುವುದು ಕುಮಾರಸ್ವಾಮಿ ಒಬ್ಬನೇ. ಎಲ್ಲರೂ ಮೌನಕ್ಕೆ ಶರಣಾಗಿದ್ದಾಗ ಅಕ್ರಮ ಸಂಪತ್ತು, ವರ್ಗಾವಣೆ…

Read More

ಮೂರು ತಿಂಗಳ‌ ಹಿಂದೆ ಅದ್ದೂರಿಯಾಗಿ ಮುಹೂರ್ತ ಆಚರಿಕೊಂಡಿದ್ದ ನಾಗಶೇಖರ್ (Nagasekhar) ಅವರ  ನಿರ್ದೇಶನದ ‘ಸಂಜು ವೆಡ್ಸ್ ಗೀತಾ 2’ (Sanju Weds Geetha 2) ಚಿತ್ರದ ಚಿತ್ರೀಕರಣ ಇದೀಗ ಕನಕಪುರ ರಸ್ತೆಯ ಫಾರಂ ಹೌಸ್ ನಲ್ಲಿ ನಡೆಯುತ್ತಿದೆ. ಅಲ್ಲಿ  ತಮ್ಮ  10ನೇ ವರ್ಷದ ವೆಡ್ಡಿಂಗ್ ಆನಿವರ್ಸರಿ ಪ್ರಯುಕ್ತ ನಾಯಕ, ನಾಯಕಿಗೆ ಲಕ್ಷುರಿ ಕಾರ್ ಗಿಫ್ಟ್ ಕೊಡುವ ದೃಶ್ಯವನ್ನು ಛಾಯಾಗ್ರಾಹಕ ಸತ್ಯ ಹೆಗಡೆ ಸೆರೆ ಹಿಡಿಯುತ್ತಿದ್ದರು. ಚಿತ್ರೀಕರಣ ವೀಕ್ಷಣೆಗೆಂದು‌ ಮಾದ್ಯಮ ಮಿತ್ರರನ್ನು ಶೂಟಿಂಗ್ ಲೊಕೇಶನ್ ಗೆ  ಆಹ್ವಾನಿಸಿದ್ದ  ನಿರ್ದೇಶಕ ನಾಗಶೇಖರ್,  ಶೂಟಿಂಗ್ ಆರಂಭಿಸುವುದು ತಡವಾಗಿದ್ದಕ್ಕೆ ಕಾರಣ ನಮ್ಮ ಚಿತ್ರದ ಮತ್ತೋರ್ವ ನಿರ್ಮಾಪಕ, ಒಳ್ಳೆಯ ಸ್ನೇಹಿತ ಮಾಭಿ ನಾರಾಯಣ್ ಅಗಲಿದ್ದು. ಹಾಗಾಗಿ ಲೇಟ್ ಆಯ್ತು ಎಂದು  ಆರಂಭದಲ್ಲಿಯೇ ಮಾಹಿತಿ‌ ನೀಡಿದರು. ನಂತರ ಚಿತ್ರದ ಬಗ್ಗೆ ಮಾತನಾಡುತ್ತ  ಸಂಜು ವೆಡ್ಸ್ ಗೀತಾ ಚಿತ್ರಕ್ಕೆ ಸಿಕ್ಕ ಯಶಸ್ಸೇ ಭಾಗ ಎರಡು ಆಗಲು ಕಾರಣ. ಮೊದಲ ಹಂತದಲ್ಲಿ ಈಗಾಗಲೇ 5-6 ದಿನ ಶೂಟಿಂಗ್ ನಡೆದಿದೆ.‌ ಅಚಾನಕ್ಕಾಗಿ ಒಂದಷ್ಟು ಬದಲಾವಣೆಗಳಾದವು.…

Read More

2023ರ ವಿಶ್ವಕಪ್​ ಫೈನಲ್​ ಪಂದ್ಯ ಕೊನೆಗೊಂಡಿದ್ದು ಆದರೆ ಕ್ರಿಕೆಟ್​ ಅಭಿಮಾನಿಗಳಿಗಾಗಿ ಮುಂಬರುವ ವಿಶ್ವಕಪ್​ ದಿನಾಂಕ ಮತ್ತು ಸ್ಥಳದ ಬಗ್ಗೆ ಮಾಹಿತಿ ಹಂಚಿಕೊಂಡಿದೆ. ಮುಂಬರುವ ವಿಶ್ವಕಪ್​ನಲ್ಲಿ ನಮೀಬಿಯಾ ಅತಿಥೇಯ ರಾಷ್ಟ್ರವಾಗಿ ಪಾದರ್ಪಣೆ ಮಾಡಲು ಸಜ್ಜಾಗಿದೆ. ಹೀಗಾಗಿ 2027ರ ವಿಶ್ವಕಪ್​ನಲ್ಲಿ ಒಟ್ಟು 14 ತಂಡಗಳು ಭಾಗವಹಿಸಲಿವೆ. ಐಸಿಸಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, ದಕ್ಷಿಣಾ ಆಫ್ರಿಕಾ ಮತ್ತು ಜಿಂಬಾಬ್ವೆ ಸಹ-ಅತಿಥೇಯರಾ್ಇ ಕಾರ್ಯ ನಿರ್ವಹಿಸಲಿದೆ. ODI ಶ್ರೇಯಾಂಕದಲ್ಲಿ ಅಗ್ರ 8 ತಂಡಗಳು ಅರ್ಹತೆ ಪಡೆಯುತ್ತವೆ. ಉಳಿದ 4 ಸ್ಥಾನಗಳು ಜಾಗತಿಕ ಅರ್ಹತಾ ಪಂದ್ಯಾವಳಿ ಮೂಲಕ ನಿರ್ಧರಿಸಲಾಗುತ್ತದೆ.ನಮೀಬಿಯಾ ವಿಶ್ವಕಪ್​ ಆಯೋಜನೆಯ ಹೊರತಾಗಿಯೂ, ಸದಸ್ಯತ್ವ ಹೊಂದಿರದ ಕಾರಣ ಅದರ ಭಾಗವಹಿಸುವಿಕೆ ಇನ್ನೂ ಖಚಿತವಾಗಿಲ್ಲ ಎಂದಿದೆ. 2027ರ ವಿಶ್ವಕಪ್​ ಪಂದ್ಯ ನಡೆಯುವ ಸ್ಥಳ ಮತ್ತು ದಿನಾಂಕದ ಬಗ್ಗೆ ಮಾಹಿತಿ ಹೊರಬಿದ್ದಿಲ್ಲ. ಆದರೆ 2003ರಲ್ಲಿ ನಡೆದ ಪಂದ್ಯದಂತೆ ದಕ್ಷಿಣಾ ಆಫ್ರಿಕಾದ 12 ಸ್ಥಳಗಳಲ್ಲಿ ವಿಶ್ವಕಪ್​​ ಪಂದ್ಯ ನಡೆಯಲಿಕ್ಕಿದೆ ಎನ್ನಲಾಗುತ್ತಿದೆ. ಅಂದು ಜಿಂಬಾಬ್ವೆಯಲ್ಲಿ ಎರಡು ಮತ್ತು ಕೀನ್ಯಾದಲ್ಲಿ ಒಂದು ಪಂದ್ಯ ಆಯೋಜಿಸಲಾಗಿತ್ತು.

Read More

ಸರಕಾರಿ ಸೌಲಭ್ಯ ಪಡೆಯುವ ಉದ್ದೇಶದಿಂದ ತಾವು ಸಣ್ಣ ರೈತರು ಎಂದು ತೋರಿಸಿಕೊಳ್ಳುವ ಭರದಲ್ಲಿ ರಾಜ್ಯದ ಕೃಷಿಕರು ಫ್ರೂಟ್ಸ್‌ ತಂತ್ರಾಂಶದಲ್ಲಿ ತಮ್ಮ ಒಡೆತನದಲ್ಲಿರುವ ಸಂಪೂರ್ಣ ಕೃಷಿ ಭೂಮಿಯ ಮಾಹಿತಿ ಮರೆಮಾಚಿ, ಕೆಲವೇ ಹೆಕ್ಟೇರ್‌ ಭೂಮಿ ಮಾಹಿತಿ ನೀಡುತ್ತಿದ್ದಾರೆ. ಇದರಿಂದ ಬರ ಪರಿಹಾರ ಪಡೆಯಲು ರೈತರಿಗೆ ತೊಡಕಾಗುವ ಅಪಾಯ ಎದುರಾಗಿದೆ. ರಾಜ್ಯಾದ್ಯಂತ ಬರ ಎದುರಾಗಿದ್ದು, ಬರ ಪರಿಹಾರ ಪಡೆಯಬೇಕಾದರೆ ರೈತರು ಫ್ರೂಟ್ಸ್‌ ಐಡಿ (ಎಫ್‌ಐಡಿ) ಕಡ್ಡಾಯವಾಗಿ ಹೊಂದಿರಬೇಕು ಎಂದಿರುವ ಸರಕಾರ, ಎಫ್‌ಐಡಿ ನೋಂದಣಿ ಗಡುವನ್ನು ನ.30ರವರೆಗೆ ವಿಸ್ತರಿಸಿದೆ. ಆದರೆ, ನೋಂದಣಿ ನಿರೀಕ್ಷೆಯಂತೆ ಆಗುತ್ತಿಲ್ಲ. ಜತೆಗೆ, ತಾವು ದೊಡ್ಡ ರೈತರೆಂದು ತೋರಿಸಿಕೊಂಡರೆ ಸರಕಾರದಿಂದ ಸಹಾಯಧನ, ಗೌರವಧನ, ಸಾಲ ಮೊದಲಾದ ಸೌಲಭ್ಯಸಿಗುವುದಿಲ್ಲ ಎಂಬ ಕಾರಣಕ್ಕೆ ರೈತರು ಪೂರ್ಣ ಮಾಹಿತಿ ನೀಡುತ್ತಿಲ್ಲ. ರೈತರು ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಹೋಗಿ, ತಮ್ಮ ಎಲ್ಲ ಜಮೀನುಗಳ ಪಹಣಿ, ಆಧಾರ್‌ ಮತ್ತು ಜಾತಿ ಪ್ರಮಾಣ ಪತ್ರ ಹಾಗೂ ಬ್ಯಾಂಕ್‌ ಪಾಸ್‌ಬುಕ್‌ ನೀಡಿ ಎಫ್‌ಐಡಿ ಮಾಡಿಸಬೇಕು. ಈಗಾಗಲೇ ಎಫ್‌ಐಡಿ ಹೊಂದಿರುವ ರೈತರು ತಮ್ಮ…

Read More

ಬೆಂಗಳೂರು:- ರಾಜಧಾನಿ ಬೆಂಗಳೂರು ಸೇರಿ ಹಲವು ಮಹಾ ನಗರದಲ್ಲಿ ಚಿನ್ನದ ದರ ಹೆಚ್ಚಾಗಿದೆ. ನಿನ್ನೆಲೆ ಹೋಲಿಸಿದರೆ ಇಂದು ಚಿನ್ನದ ದರ ಮತ್ತೆ ಹೆಚ್ಚಾಗಿದೆ. ಬೆಳ್ಳಿ ದರದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಕರ್ನಾಟಕದಾದ್ಯಂತ ಇತರ ನಗರಗಳಲ್ಲಿ ಚಿನ್ನ-ಬೆಳ್ಳಿ ದರ ಹೀಗಿದೆ. 22 ಕ್ಯಾರೆಟ್‌ ಚಿನ್ನದ ದರ 1 gram: ಇಂದು ಒಂದು ಗ್ರಾಂ 22 ಕ್ಯಾರೆಟ್‌ ಚಿನ್ನದ ದರ 5,685 ರೂ. ಆಗಿದೆ. ನಿನ್ನೆ 5,650 ರೂ. ಇದ್ದು ಈ ದರಕ್ಕೆ ಹೋಲಿಸಿದರೆ ಇಂದು 35 ರೂ. ಏರಿಕೆಯಾಗಿದೆ. 8 gram: ಇಂದಿನ 8 ಗ್ರಾಂ ಚಿನ್ನದ ಬೆಲೆ 45,480 ರೂ ಇದೆ. ನಿನ್ನೆ 45,200 ರೂ ಇತ್ತು. ಈ ದರಕ್ಕೆ ಹೋಲಿಸಿದರೆ ಇಂದು 280 ರೂ. ಜಾಸ್ತಿಯಾಗಿದೆ. 10 gram: ಹತ್ತು ಗ್ರಾಂ ಚಿನ್ನ ಖರೀದಿಸುವುದಾದರೆ ಇಂದು 56,850 ರೂ. ನೀಡಬೇಕು. ನಿನ್ನೆ 56,500 ರೂ ಇತ್ತು. ಈ ದರಕ್ಕೆ ಹೋಲಿಸಿದರೆ 350 ರೂ. ಏರಿಕೆಯಾಗಿದೆ. 100 gram: ನೂರು ಗ್ರಾಂ ಚಿನ್ನಕ್ಕೆ…

Read More

ನೈಸರ್ಗಿಕ ಆಹಾರಗಳ ಪೈಕಿ ಸಿಹಿ ಕುಂಬಳಕಾಯಿ ಬೀಜಗಳನ್ನು ಮನುಷ್ಯನ ಬೆಸ್ಟ್ ಫ್ರೆಂಡ್ ಎಂದು ಕರೆಯಲಾಗುತ್ತದೆ. ಹೌದು, ಕೆಲವೆಡೆ ಚೀನಿಕಾಯಿ ಎಂದೂ ಕರೆಯಲ್ಪಡುವ ಸಿಹಿ ಕುಂಬಳಕಾಯಿ ಬೀಜಗಳು ವರ್ಷಪೂರ್ತಿ ಲಭ್ಯ ಹಾಗೂ ಪೋಷಕಾಂಶಗಳಿಂದ ಕೂಡಿರುತ್ತವೆ. ಕೆನೆ ಬಣ್ಣದ ಸಿಹಿ ಸಿಹಿ ಕುಂಬಳಕಾಯಿ ಬೀಜಗಳು ಗರಿಗರಿಯಾಗಿದ್ದು, ನಿಜ ಹೇಳಬೇಕೆಂದರೆ ಇದರಿಂದ ಪುರುಷರ ಆರೋಗ್ಯಕ್ಕೆ ಹೆಚ್ಚು ಪ್ರಯೋಜನ ಸಿಗುತ್ತದೆ. ಹೇಗೆ ಅಂತೀರಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ. ​ಪ್ರಾಸ್ಟೇಟ್ ಆರೋಗ್ಯ ಹೆಚ್ಚಿಸುತ್ತದೆ ಸಿಹಿ ಕುಂಬಳಕಾಯಿ ಬೀಜಗಳು ಆಹ್ಲಾದಕರ ಪರಿಮಳವನ್ನು ಹೊಂದಿರುವುದರ ಜೊತೆಗೆ ಅನೇಕ ಆರೋಗ್ಯ ಪ್ರಯೋಜನಕಾರಿ ಗುಣಗಳನ್ನು ಹೊಂದಿವೆ ಎಂದು ತಿಳಿದುಬಂದಿದೆ. ಇಂಡಿಯನ್ ಜರ್ನಲ್ ಆಫ್ ಯೂರಾಲಜಿಯಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ಸಿಹಿ ಕುಂಬಳಕಾಯಿ ಬೀಜ ಸೇವನೆಯು ಪ್ರಾಸ್ಟೇಟ್ ಆರೋಗ್ಯವನ್ನು ಹೆಚ್ಚಿಸುತ್ತದೆ. ಇದು ಪುರುಷ ಲೈಂಗಿಕ ಆರೋಗ್ಯಕ್ಕೆ ಬಹಳ ಮುಖ್ಯವಾಗಿದೆ. ಇದನ್ನು ಸಾಮಾನ್ಯವಾಗಿ ಪ್ರಾಸ್ಟೇಟ್ ಗ್ರಂಥಿಯನ್ನು ಬಲಪಡಿಸಲು ಮತ್ತು ಪುರುಷರಲ್ಲಿ ಆರೋಗ್ಯಕರ ಹಾರ್ಮೋನ್ ಕಾರ್ಯವನ್ನು ಉತ್ತೇಜಿಸಲು ಬಳಸಲಾಗುತ್ತದೆ. ಸಿಹಿ ಕುಂಬಳಕಾಯಿ ಬೀಜಗಳನ್ನು ನಿಯಮಿತವಾಗಿ ಸೇವಿಸುವುದರಿಂದ ಬಿಪಿಎಚ್‌ಗೆ…

Read More

ಎಲ್ಲಾದರೂ ಹೊರಡುವಾಗ ಮಳೆಯಲ್ಲಿ ಸಿಕ್ಕಿಹಾಕಿಕೊಂಡರೇ ಅಷ್ಟೇ ಕಿರಿಕಿರಿ ಕೂಡ ಉಂಟಾಗುತ್ತದೆ. ಎಷ್ಟೋ ಜನ ಮಳೆಗಾಲದಲ್ಲಿ ಛತ್ರಿಯನ್ನು ಉಪಯೋಗಿಸುತ್ತಾರೆ. ಛತ್ರಿ ನಿಮ್ಮ ಮೇಲ್ಭಾಗ ಮಾತ್ರ ತೇವವಾಗುವುದರಿಂದ ರಕ್ಷಿಸಿದರೆ, ನಿಮ್ಮ ಮೊಣಕಾಲಿನಿಂದ ಒದ್ದೆಯಾಗಿಸುತ್ತದೆ. ಇದರಿಂದ ನಿಮಗೆ ನಡೆದಾಡಲೂ ಸಹ ಕಷ್ಟವಾಗುತ್ತದೆ. ಅಲ್ಲದೇ ಮಳೆ ಬರುವ ಸಂದರ್ಭದಲ್ಲಿ ಬ್ಯಾಗ್‍ಗಳು, ವ್ಯಾಲೆಟ್‍ಗಳು ಅಥವಾ ಸ್ಮಾರ್ಟ್‍ಫೋನ್‍ಗಳ ಜೊತೆಗೆ ಛತ್ರಿಯನ್ನು ಹಿಡಿದಿಟ್ಟುಕೊಳ್ಳಲು ಮತ್ತಷ್ಟು ಕಿರಿಕಿರಿಯಾಗುತ್ತದೆ. ಈ ಎಲ್ಲದಕ್ಕೂ ಪರಿಹಾರ ಅಂದರೆ ರೈನ್ ಕೋಟ್. ಮಳೆಗಾಲದಲ್ಲಿ ರೈನ್ ಕೋಟ್ ಧರಿಸುವುದು ಬಹಳ ಉತ್ತಮವಾಗಿದೆ ಮಳೆಗಾಲಗಳು ಛತ್ರಿಗಳಿಗಿಂತಲೂ ಹೆಚ್ಚಾಗಿ ರೈನ್‍ಕೋಟ್‍ಗಳಿಗೆ ಹೆಚ್ಚಿನ ಆದ್ಯತೆ ನೀಡಿ. ಇದು ನಿಮ್ಮ ಬ್ಯಾಗ್ ಅಲ್ಲದೇ ತಲೆಯಿಂದ ಪಾದದವರೆಗೂ ನಿಮ್ಮನ್ನು ಮಳೆಯಿಂದ ರಕ್ಷಿಸುತ್ತದೆ. ಅಲ್ಲದೇ ರೈನ್ ಕೋಟ್‍ನಲ್ಲಿ ಹಲವಾರು ವೆರೈಟಿ ಡಿಸೈನ್, ಸೈಜ್, ಅನೇಕ ನ್ಯೂ ಪ್ಯಾಟನ್‍ಗಳು ದೊರೆಯುತ್ತದೆ. ಈ ಕುರಿತಂತೆ ನಿಮಗೆ ತಿಳಿಯದೇ ಇರುವ ಒಂದಷ್ಟು ಮಾಹಿತಿ ಈ ಕೆಳಗಿನಂತಿದೆ. ಪುರುಷರ ರೈನ್ ಕೋಟ್ ಪುರುಷರ ಈ ರೈನ್ ಕೋಟ್ ನಿಮಗೆ ಕೆಳಗಿನವರೆಗೂ ರಕ್ಷಣೆ ನೀಡುತ್ತದೆ. ಇದರಲ್ಲಿ…

Read More

ನವದೆಹಲಿ: ಸಹಾರಾ ಗ್ರೂಪ್ (Sahara Group) ಸಂಸ್ಥಾಪಕ ಸುಬ್ರತಾ ರಾಯ್ (Subrata Roy) ಅವರ ನಿಧನದ ಬಳಿಕ ಸೆಬಿ (SEBI) ಖಾತೆಯಲ್ಲಿರುವ 25,000 ಕೋಟಿ ರೂ. ಹಣ ಯಾರಿಗೆ ಸೇರುತ್ತೆ ಎನ್ನುವುದೇ ಈಗ ದೊಡ್ಡ ಪ್ರಶ್ನೆಯಾಗಿ ಉಳಿದಿದೆ. ತನಿಖೆ ಆರಂಭವಾದ ಕಳೆದ 10 ವರ್ಷದಿಂದ ಈ ಹಣ ಸೆಬಿ ಖಾತೆಯಲ್ಲಿದೆ. ಕ್ಲೈಮ್ ಮಾಡದ ಹಣ ಏನಾಗುತ್ತದೆ? ಆ ಹಣವನ್ನು ಸರ್ಕಾರದ ಹಣ ಎಂದು ಪರಿಗಣಿಸಬಹುದೇ? ಸರ್ಕಾರ ಈಗ ಸುಬ್ರತಾ ರಾಯ್ ಅವರ ನಿಧನದ ಬಳಿಕ ಹಲವು ಆಯ್ಕೆಯನ್ನು ಪರಿಶೀಲಿಸುತ್ತಿದೆ. ಸಹಾರಾ ಮರುಪಾವತಿ ಪೋರ್ಟಲ್ ಮೂಲಕ ಹಣ ವರ್ಗಾಯಿಸುವ ಪ್ರಕ್ರಿಯೆ ನಡೆಯುತ್ತಿದೆ. ಈಗಾಗಲೇ ಸುಮಾರು 2.5 ಲಕ್ಷ ಹೂಡಿಕೆದಾರರಿಗೆ ಸುಮಾರು 230 ಕೋಟಿ ರೂ. ಪಾವತಿಸಲು ಯಶಸ್ವಿಯಾಗಿದ್ದೇವೆ. ಹೊಸ ನೋಂದಣಿಗಳು ಇನ್ನೂ ನಡೆಯುತ್ತಿವೆ ಎಂದು ಅಧಿಕಾರಿಯೊಬ್ಬರು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದಾರೆ.  ಕಳೆದ ಜುಲೈನಲ್ಲಿ ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಅವರು ಬಿಡುಗಡೆ ಮಾಡಿದ ಮರುಪಾವತಿ ಪೋರ್ಟಲ್‌ನಲ್ಲಿ ಪರಿಶೀಲಿಸಿದ ನಂತರ ನೋಂದಣಿಯಾದ 45 ದಿನಗಳಲ್ಲಿ…

Read More