ಟೀಮ್ ಇಂಡಿಯಾ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ವೈಯಕ್ತಿಕ ಕಾರಣಗಳಿಂದ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳಿಗೆ ಅಲಭ್ಯವಾಗಿರುವುದರಿಂದ, ಆರ್ಸಿಬಿ ತಂಡದ ಮತ್ತೊಬ್ಬ ಸ್ಟಾರ್ ಬ್ಯಾಟರ್ ರಜತ್ ಪಾಟಿದಾರ್ ಅವರು ಭಾರತೀಯ ರೆಡ್-ಬಾಲ್ ತಂಡಕ್ಕೆ ತಮ್ಮ ಚೊಚ್ಚಲ ಕರೆಯನ್ನು ಸ್ವೀಕರಿಸಿದ್ದಾರೆ. ಬಲಗೈ ಬ್ಯಾಟರ್ ರಜತ್ ಪಾಟಿದಾರ್ ಆಯ್ಕೆಯಾಗಿದ್ದಾರೆ ಎಂದರೆ, ಅಜಿಂಕ್ಯ ರಹಾನೆ ಮತ್ತು ಚೇತೇಶ್ವರ ಪೂಜಾರ ಅವರನ್ನು ನಿರ್ಲಕ್ಷಿಸಲಾಗಿದೆ ಎಂದರ್ಥ. ಇದೇ ವೇಳೆ ಯುವ ಬ್ಯಾಟರ್ ಸರ್ಫರಾಜ್ ಖಾನ್ ಅವರ ಕಾಯುವಿಕೆ ಮುಂದುವರೆದಿದೆ. 30 ವರ್ಷದ ರಜತ್ ಪಾಟಿದಾರ್ ಇತ್ತೀಚಿಗೆ ಉತ್ತಮ ಫಾರ್ಮ್ನಲ್ಲಿದ್ದಾರೆ. ಮೊದಲ ಅನಧಿಕೃತ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ನಲ್ಲಿ ಭಾರತ ಎ ತಂಡದ ಪರ ಇಂಗ್ಲೆಂಡ್ ಲಯನ್ಸ್ ವಿರುದ್ಧ 151 ರನ್ ಗಳಿಸಿರುವುದು ಸಾಕ್ಷಿಯಾಗಿದೆ. ಇಂದೋರ್ ಮೂಲದ ಕ್ರಿಕೆಟಿಗ ರಜತ್ ಪಾಟಿದಾರ್ ಇಂಗ್ಲೆಂಡ್ ಲಯನ್ಸ್ ವಿರುದ್ಧದ ಅಭ್ಯಾಸ ಪಂದ್ಯಗಳಲ್ಲಿ 111 ರನ್ ಗಳಿಸಿದರು ಮತ್ತು ಕಳೆದ ವರ್ಷ ದಕ್ಷಿಣ ಆಫ್ರಿಕಾ ಪ್ರವಾಸಕ್ಕಾಗಿ ಭಾರತ ಎ ತಂಡದ…
Author: AIN Author
ಭೋಪಾಲ್: ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಚಿರತೆಯೊಂದು ಮೂರು ಮರಿಗಳಿಗೆ ಜನ್ಮ ನೀಡಿದೆ. ಈ ಸಂಬಂಧ ಕೇಂದ್ರ ಪರಿಸರ ಸಚಿವ ಭೂಪೇಂದ್ರ ಯಾದವ್ (Bhupendra Yadav) ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಜ್ವಾಲಾ ಎಂಬ ಹೆಸರಿನ ಚಿರತೆ ಮೂರು ಮರಿಗಳಿಗೆ ಜನ್ಮ ನೀಡಿದೆ. ಕೆಲ ವಾರಗಳ ಹಿಂದೆಯಷ್ಟೇ ನಮೀಬಿಯಾದ ಚಿರತೆ ಆಶಾ ತನ್ನ ಮರಿಗಳಿಗೆ ಜನ್ಮ ನೀಡಿತ್ತು ಎಂದು ಹೇಳಿದ್ದಾರೆ. ಚಿರತೆ (Cheetah) ಮರಿಗಳ ವಿಡಿಯೋವನ್ನು ಕೂಡ ಸಚಿವರು ಪೋಸ್ಟ್ ಮಾಡಿದ್ದಾರೆ. ಕೇಂದ್ರ ಸಚಿವರು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡುತ್ತಿದ್ದಂತೆಯೇ ವನ್ಯಜೀವಿ ಪ್ರೇಮಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬಂತು. ಚೀತಾ ಸಂತತಿ ಇನ್ನಷ್ಟು ಹೆಚ್ಚಾಗಲಿ ಎಂದು ಆಶಿಸಿದರು. https://twitter.com/ANI/status/1749627929406099463?ref_src=twsrc%5Etfw%7Ctwcamp%5Etweetembed%7Ctwterm%5E1749627929406099463%7Ctwgr%5E893e8da1fec97fad305f70d2af9ce6887c289d0f%7Ctwcon%5Es1_&ref_url=https%3A%2F%2Fpublictv.in%2Fa-namibian-cheetah-named-jwala-has-given-birth-to-three-cubs%2F ಚೀತಾ ಯೋಜನೆಯಡಿ ತಾಯಿ ಚಿರತೆ ಜ್ವಾಲಾ ಸೇರಿದಂತೆ 8 ಚಿರತೆಗಳನ್ನು 2022 ರ ಸೆಪ್ಟೆಂಬರ್ 17 ರಂದು ನಮೀಬಿಯಾದಿಂದ ತರಲಾಯಿತು. ಜನವರಿ 16 ರಂದು ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ನಮೀಬಿಯಾದ ಚಿರತೆ ಶೌರ್ಯ ಸಾವನ್ನಪ್ಪಿತ್ತು. ಮಾರ್ಚ್…
ಬೆಂಗಳೂರು:- ಬೆಂಗಳೂರಿನ ನಂದಿನಿ ಲೇ ಔಟ್ ಕೃಷ್ಣಾನಂದ ನಗರ ಸರ್ಕಲ್ ನಲ್ಲಿ 40 ಅಡಿಯ ರಾಮನ ಕಟೌಟ್ ಧರೆಗುರುಳಿದ ಘಟನೆ ಜರುಗಿದೆ. ಅಯೋಧ್ಯೆಯಲ್ಲಿ ಬಾಲರಾಮ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ರಾಮನ ಈ ಬೃಹತ್ ಕಟೌಟ್ ನಿಲ್ಲಿಸಲಾಗಿತ್ತು. ಆ ಬಳಿಕ ಬಿಬಿಎಂಪಿ ತೆರವು ಮಾಡಿರಲಿಲ್ಲ. ಅದೃಷ್ಟವಶಾತ್ ಕಟೌಟ್ ಬೀಳೋ ವೇಳೆ ಯಾವುದೇ ವಾಹನಗಳು ಸಂಚರಿಸಿಲ್ಲ. ಹೀಗಾಗಿ ಭಾರೀ ದುರಂತವೊಂದು ತಪ್ಪಿದೆ. ಮಾಹಿತಿ ಪಡೆದ ತಕ್ಷಣವೇ ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೇಲ್ನೋಟಕ್ಕೆ ಗಾಳಿಗೆ ಬಿದ್ದಿರೋ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ ಮೂರು ದಿನದಿಂದ ನಿಲ್ಲಿಸಿದ್ದ ಕಟೌಟ್ ಏಕಾಏಕಿ ಗಾಳಿಗೆ ಬಿದ್ದಿರುವುದರಿಂದ ಸ್ಥಳೀಯರಲ್ಲಿ ಅನುಮಾನ ಉಂಟಾಗಿದೆ. ಬೇಕುಂತಲೇ ಕಟೌಟ್ ಕಡೆವಿದ್ದಾರಾ ಅನ್ನೋ ಶಂಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳದಲ್ಲಿದ್ದ ಸಿಸಿ ಕ್ಯಾಮರಾಗಳ ಪರಿಶೀಲನೆಗೆ ಮುಂದಾಗಿದ್ದಾರೆ. ಜೊತೆಗೆ ಕಟೌಟ್ ಹಾಕಿದ್ದವರು ಯಾರು?, ಕಟೌಟ್ ಹಾಕಲು ಅನುಮತಿ ಪಡೆದಿದ್ದರಾ ಅಂತಾನೂ ಪರಿಶೀಲನೆ ನಡೆಸುತ್ತಿದ್ದಾರೆ.
ಹುಬ್ಬಳ್ಳಿ : ರಾಜ್ಯ ಸರ್ಕಾರದ ವಿರುದ್ದ ಮಾಜಿ ಡಿಸಿಎಂ ಗೋವಿಂದ ಕಾರಜೋಳ ಗಂಭೀರ ಆರೋಪ ಮಾಡಿದ್ದಾರೆ. ಹೌದು ಒಳಮೀಸಲಾತಿ ವಿಷಯದಲ್ಲಿ ರಾಜ್ಯ ಸರ್ಕಾರ ಮಹಾಮೋಸ, ಅಸ್ಪೃಶ್ಯ ಜನಾಂಗಕ್ಕೆ ಮಹಾ ಅನ್ಯಾಯ ಮಾಡುತ್ತಿದೆ ಎಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಆರೋಪಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸಿದ್ದರಾಮಯ್ಯ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿಗೆ ಸಂವಿಧಾನದ ಕಲಂ 341ನ್ನು ತಿದ್ದುಪಡಿ ಮಾಡಲು ಶಿಫಾರಸು ಮಾಡಿದೆ. ಇದು ನಿಜಕ್ಕೂ ಮಹಾ ಮೋಸ ಎಂದು ತಿಳಿಸಿದೆ ಎಂದರು. ಸಂವಿಧಾನ ತಿದ್ದುಪಡಿ ಮಾಡುವ ಅಗತ್ಯವಿಲ್ಲ ಎಂದು ಈಗಾಗಲೇ ಅಂದರೆ 2020ರಲ್ಲೇ ಸುಪ್ರೀಂಕೋರ್ಟ್ ನ್ಯಾ.ಅರುಣಕುಮಾರ್ ಮಿಶ್ರಾ ಅವರು ಆದೇಶ ಮಾಡಿದ್ದಾರೆ. https://ainlivenews.com/do-you-sleep-less-than-6-hours-beware-of-this-deadly-disease/ ಅದರ ಅನುಗುಣವಾಗಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಜನಸಂಖ್ಯೆಗೆ ಅನುಗುಣವಾಗಿ ಎಸ್ಸಿ ಮತ್ತು ಎಸ್ಟಿ ಜನಾಂಗದ ಮೀಸಲಾತಿ ಹೆಚ್ಚಿಸಿ ಎಸ್ಸಿ ಮೀಸಲಾತಿ 15ರಿಂದ 17, ಎಸ್ಟಿ ಮೀಸಲಾತಿ 3ರಿಂದ 7ಕ್ಕೆ ಹೆಚ್ಚಿಸಿ ಕಳೆದ ವರ್ಷವೇ ಆದೇಶ ಮಾಡಿತ್ತು. 2022ರ ನವೆಂಬರ್ 1ರಿಂದ ರಾಜ್ಯದಲ್ಲಿ ಮೀಸಲಾತಿ…
ಬೆಂಗಳೂರು:- ಯಾವುದೇ ಕಾರಣಕ್ಕೂ ಗುಲಾಬಿ ಬಣ್ಣದ ವಾಟ್ಸ್ಆ್ಯಪ್ ಅಥವಾ ವಾಟ್ಸ್ಆ್ಯಪ್ ಪಿಂಕ್ ಅನ್ನು ಇನ್ಸ್ಟಾಲ್ ಮಾಡದಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಎಚ್ಚರಿಕೆ ಸಂದೇಶ ಪ್ರಕಟಿಸಿರುವ ಕರ್ನಾಟಕ ಪೊಲೀಸ್, ಗುಲಾಬಿ ಬಣ್ಣದ ವಾಟ್ಸ್ಆ್ಯಪ್ ಅಪಾಯಕಾರಿ ಎಚ್ಚರಿಕೆಯಿಂದಿರಿ. ಆಕರ್ಷಣೆಯ ಗುಲಾಬಿ ಬಣ್ಣದ ವಾಟ್ಸ್ಆ್ಯಪ್ ಬಳಸುವವರನ್ನು ಗುರಿಯಾಗಿಸಿ ಮೋಸಗಾರರು ಡೇಟಾ ಕದಿಯಲು ಇಲ್ಲವೇ ಆ್ಯಂಡ್ರಾಯ್ಡ್ ಮೊಬೈಲ್ ಹ್ಯಾಕ್ ಮಾಡಲು ಬಳಸಿಕೊಳ್ಳುತ್ತಾರೆ. ಜಾಗೃತೆಯಿಂದಿರಿ ಎಂದು ಉಲ್ಲೇಖಿಸಿದೆ. ನೀವು ಒಂದು ವೇಳೆ ವಾಟ್ಸ್ಆ್ಯಪ್ ಪಿಂಕ್ ಇನ್ಸ್ಟಾಲ್ ಮಾಡಿದ್ದೇ ಆದಲ್ಲಿ ಹ್ಯಾಕರ್ಗಳು ನಿಮ್ಮ ಫೋಟೊ, ಕಾಂಟ್ಯಕ್ಟ್, ನೆಟ್ ಬ್ಯಾಂಕಿಂಗ್ ಪಾಸ್ವರ್ಡ್ಗಳು, ಎಸ್ಎಂಎಸ್ಗಳನ್ನು ಹ್ಯಾಕ್ ಮಾಡಲಿದ್ದಾರೆ ಎಂದು ಕರ್ನಾಟಕ ಪೊಲೀಸ್ ಎಚ್ಚರಿಕೆ ನೀಡಿದೆ. ವಂಚಕರು ನಿಮ್ಮ ಮೊಬೈಲ್ನ ಸಂಪೂರ್ಣ ದತ್ತಾಂಶಕ್ಕೆ ಕನ್ನ ಹಾಕುವ ಸಾಧ್ಯತೆ ಇದೆ. ಹೀಗಾಗಿ ಯಾರೂ ಕೂಡ ವಾಟ್ಸ್ಆ್ಯಪ್ ಪಿಂಕ್ ಬಳಸಬೇಡಿ. ಒಂದು ವೇಳೆ ಯಾವುದೇ ರೀತಿಯ ಸೈಬರ್ ವಂಚನೆಗೆ ಒಳಗಾದರೆ 1930 ಗೆ ಕರೆ ಮಾಡಿ ಎಂದು ಪೊಲೀಸರು ಸಲಹೆ…
ಮೈಸೂರು:- ಗಾಂಜಾ ಮಾರಾಟ ಆರೋಪ ಸಂಬಂಧ ಮೈಸೂರಿನ ಕಾವೇರಿನಗರದ ಗೋದಾಮಿನ ಸಿಸಿಬಿ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮಹದೇವಪುರ ಮುಖ್ಯರಸ್ತೆಯ ಕಾವೇರಿನಗರದಲ್ಲಿರುವ ಗೋದಾಮಿನಲ್ಲಿ ಗಾಂಜಾ ಸಂಗ್ರಹಣೆ ಮಾಡಿಟ್ಟಿದ್ದ ವಿಚಾರ ತಿಳಿದು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ದಾಳಿ ವೇಳೆ ಸಿಸಿಬಿ ಪೊಲೀಸರು 20.19 ಲಕ್ಷ ಮೌಲ್ಯದ 57 ಕೆ.ಜಿ. 700 ಗ್ರಾಂ ಗಾಂಜಾ ಜಪ್ತಿ ಮಾಡಿದ್ದಾರೆ. ಆಸೀಮ್, ನದೀಮ್ ಬಂಧಿತ ಆರೋಪಿಗಳಾಗಿದ್ದು, ಮತ್ತೊಬ್ಬ ಆರೋಪಿ ಫರ್ಜು ಪರಾರಿಯಾಗಿದ್ದಾನೆ.
ಮೈಸೂರು:- ಆರೋಪಿಗೆ ಮೈಸೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜಗಳ ಬಿಡಿಸಲು ಬಂದ ಪಕ್ಕದ ಮನೆಯ ಮಹಿಳೆಯನ್ನೇ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದ ಪ್ರಕರಣ ಸಂಬಂಧ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದೆ. ಲಷ್ಕರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಪ್ರಕರಣ ಆರೋಪಿ ಆಲ್ವಿನ್ ಜೀವಾವಧಿ ಶಿಕ್ಷೆಗೆ ಒಳಗಾದ ಅಪರಾಧಿಯಾಗಿದ್ದು, 50 ಸಾವಿರ ರೂಪಾಯಿ ದಂಡ ಕೂಡ ವಿಧಿಸಲಾಗಿದೆ. ಲಷ್ಕರ್ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯಾಗಿರುವ ಅಪರಾಧಿ ಆಲ್ವಿನ್ 2020ರ ಅಕ್ಟೋಬರ್ 17 ರಂದು ತನ್ನ ಪತ್ನಿಯ ಜೊತೆ ಜಗಳವಾಡುತ್ತಿದ್ದನು. ಈ ವೇಳೆ ಪಕ್ಕದ ಮನೆಯ ಮಹಿಳೆ ಜಗಳ ಬಿಡಿಸಲು ಮಧ್ಯಪ್ರವೇಶಿಸಿದ್ದರು. ಇದರಿಂದ ಇನ್ನಷ್ಟು ಆಕ್ರೋಶಗೊಂಡ ಆಲ್ವಿನ್, ಆ ಮಹಿಳೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದನು.
ಮುಂಬೈ: ಮಹಿಳೆಯಿಂದ ಪುರುಷನಾಗುವ ಶಸ್ತ್ರಚಿಕಿತ್ಸೆಗೊಳಗಾಗಿದ್ದ ಮಹಾರಾಷ್ಟ್ರದ (Maharashtra) ಬೀಡ್ ಜಿಲ್ಲೆಯ ಲಲಿತ್ ಸಾಳ್ವೆ (Lalit Salve) ಎಂಬ ಪೊಲೀಸ್ ಪೇದೆ (Police Constable) ಇದೀಗ ತಂದೆಯಾಗಿದ್ದಾರೆ. ಲಲಿತ್ ಸಾಳ್ವೆ (36) ಅವರು 2020 ರಲ್ಲಿ ವಿವಾಹವಾಗಿದ್ದರು. ಇದೀಗ ಜನವರಿ 15 ರಂದು ಗಂಡು ಮಗುವಿಗೆ ತಂದೆಯಾದರು. ದಂಪತಿ ತಮ್ಮ ಮಗನಿಗೆ ಆರುಷ್ ಎಂದು ಹೆಸರಿಡಲು ನಿರ್ಧರಿಸಿದ್ದಾರೆ. ಹೆಣ್ಣಿನಿಂದ ಪುರುಷನಾಗುವ ನನ್ನ ಪ್ರಯಾಣವು ಹೋರಾಟಗಳಿಂದ ತುಂಬಿತ್ತು. ಈ ಸಮಯದಲ್ಲಿ ನನ್ನನ್ನು ಅನೇಕ ಜನ ಬೆಂಬಲಿಸಿದ್ದಾರೆ. ನನ್ನ ಹೆಂಡತಿ ಸೀಮಾ ಮಗುವನ್ನು ಹೊಂದಲು ಬಯಸಿದ್ದಳು. ನಾನು ಈಗ ತಂದೆಯಾಗಿದ್ದೇನೆ ಎಂದು ನನಗೆ ಸಂತೋಷವಾಗಿದೆ. ನನ್ನ ಕುಟುಂಬ ಇದರಿಂದ ಸಂಭ್ರಮದಲ್ಲಿದೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ. https://ainlivenews.com/do-you-know-how-much-ambani-family-donated-to-ayodhya-ram-mandir/ ಲಲಿತ್ ಸಾಳ್ವೆ (ಹಿಂದಿನ ಲಲಿತಾ) ಜೂನ್ 1988ರಲ್ಲಿ ಜನಿಸಿದ್ದರು. 2010ರಲ್ಲಿ ಮಹಾರಾಷ್ಟ್ರ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡರು. ಮಹಿಳೆಯಾಗಿ ಬೆಳೆದ ಸಾಲ್ವೆ ಅವರು 2013ರಲ್ಲಿ ತಮ್ಮ ದೇಹದಲ್ಲಿ ಕೆಲವು ಬದಲಾವಣೆಗಳನ್ನು ಕಂಡುಕೊಂಡ ಬಳಿಕ, 2017ರಲ್ಲಿ ಕ್ಯಾರಿಯೋಟೈಪಿಂಗ್ (ಸಂಪೂರ್ಣ ಕ್ರೋಮೋಸೋಮ್ ಪೂರಕ…
ಅಂಕೋಲಾ: ಮುಂದಿನ ದಿನಗಳಲ್ಲಿ ಯಾವ ಶಾಲೆ ಮಕ್ಕಳು ನೆಲದ ಮೇಲೆ ಕುಳಿತು ವಿದ್ಯಾರ್ಜನೆ ಮಾಡಬಾರದು. ಸುಸಜ್ಜಿತ ಆಸನಗಳ ವ್ಯವಸ್ಥೆ ಸರ್ಕಾರದಿಂದಲೇ ಜಾರಿಯಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಯಾವ ಶಾಲೆ ಮಕ್ಕಳು ನೆಲದ ಮೇಲೆ ಕುಳಿತು ವಿದ್ಯಾರ್ಜನೆ ಮಾಡಬಾರದು. ಸುಸಜ್ಜಿತ ಆಸನಗಳ ವ್ಯವಸ್ಥೆ ಸರ್ಕಾರದಿಂದಲೇ ಜಾರಿಯಾಗಲಿದೆ. ಇಂತಹ ಸೌಕರ್ಯಗಳಿಂದ ಮುಂದೆ ಸರ್ಕಾರಿ ಶಾಲೆಗಳಿಗೆ ಮಕ್ಕಳು ಓಡೋಡಿ ಬರುತ್ತಾರೆ ಎಂದರು. ನಾನು ಈ ಸ್ಥಾನದಲ್ಲಿ ಇದ್ದೇನೆ ಎಂದರೆ ಅದು ದೇವದತ್ತ ಕಾಮತ ಅವರ ಕೊಡುಗೆ. ನಾನು ಯಾವ ಪಕ್ಷ ಅನ್ನುವುದಕ್ಕಿಂತ ಬಂಗಾರಪ್ಪನವರ ಪಕ್ಷವಾಗಿದೆ. ಅವರು ಎಲ್ಲಿದ್ದಾರೋ ಅಲ್ಲಿ ನಾನಿದ್ದೆ. https://ainlivenews.com/do-you-know-how-much-ambani-family-donated-to-ayodhya-ram-mandir/ ಇಂತಹ ಸ್ಥಾನದಲ್ಲಿ ಇದ್ದೇನೆ ಎಂದರೆ ಅದು ಹಲವರ ಮಾರ್ಗದರ್ಶನ ಮತ್ತು ಕೊಡುಗೆಯಾಗಿದೆ ಎಂದು ಹೇಳಿದರು. ಡಾ. ದಿನಕರ ದೇಸಾಯಿ ಅವರಂತಹ ಅನೇಕ ಮಹಾನುಭಾವರ ಉದಾತ್ತ ಯೋಚನೆ, ಶೈಕ್ಷಣಿಕ ಪ್ರೀತಿಯಿಂದ ಕೋಟ್ಯಂತರ ವಿದ್ಯಾರ್ಥಿಗಳು ಈ ದೇಶಕ್ಕೆ ತಮ್ಮದೇ ಆದ ಕೊಡುಗೆ…
ಅಯೋಧ್ಯೆಯ ರಾಮಮಂದಿರದಲ್ಲಿ ‘ಪ್ರಾಣ-ಪ್ರತಿಷ್ಠಾ’ ಸಮಾರಂಭ ನಡೆದಿದ್ದು ಇಡೀ ರಾಷ್ಟ್ರವೇ ಬೆರಗಾಗಿದೆ. ಗುಜರಾತ್ನ ಉದ್ಯಮಿಯೊಬ್ಬರು ತಮ್ಮ ಜಾಗ್ವಾರ್ನಲ್ಲಿ ಭಗವಾನ್ ರಾಮನ ಥೀಮ್ ಅನ್ನು ಸುತ್ತಿಕೊಂಡಿದ್ದಾರೆ. ನಾವು ಸಾರ್ವಜನಿಕ ಸ್ಥಳಗಳು, ದೇಶಾದ್ಯಂತ ದೇವಾಲಯಗಳು ಮತ್ತು ಮಾರುಕಟ್ಟೆಗಳಲ್ಲಿ ಧ್ವಜಗಳು, ಭಂಗಿಗಳು, ದೀಪಗಳು, ಅಲಂಕಾರಗಳು ಇತ್ಯಾದಿಗಳನ್ನು ನೋಡುತ್ತೇವೆ. ಈ ಸಮಾರಂಭಕ್ಕಾಗಿ ಜನರು ಎಲ್ಲಾ ರೀತಿಯ ಚಟುವಟಿಕೆಗಳನ್ನು ನಡೆಸಿದ್ದಾರೆ ಧಾರ್ಮಿಕ ಗುಂಪುಗಳು ಮತ್ತು ಸಂಘಟನೆಗಳು, ರಾಜಕೀಯ ಪಕ್ಷಗಳು ಮತ್ತು ಪ್ರಮುಖ ಸೆಲೆಬ್ರಿಟಿಗಳು ಇಂದು ದೊಡ್ಡ ಪ್ರಮಾಣದ ಕಾರ್ಯಕ್ರಮದಲ್ಲಿ ಭಾಗವಹಿಸಿದೆ. ಇದೆಲ್ಲದರ ನಡುವೆ ಭಕ್ತಿಯನ್ನು ಪ್ರದರ್ಶಿಸಲು ಒಂದು ವಿನೂತನ ಮಾರ್ಗ ಆಯ್ಕೆ ಮಾಡಿಕೊಂಡಿದ್ದೆ ಅಚ್ಚರಿ! ಇದು ಈ ವಿಶಿಷ್ಟ ಐಷಾರಾಮಿ ಕಾರಿನ ಚಿತ್ರಗಳನ್ನು ಮತ್ತು ವೀಡಿಯೊವನ್ನು ಸೆರೆಹಿಡಿಯುತ್ತದೆ. ಮಾಹಿತಿ ಪ್ರಕಾರ, ಈ ಜಾಗ್ವಾರ್ ಗುಜರಾತ್ನ ನಿರ್ದಿಷ್ಟ ಉದ್ಯಮಿಗೆ ಸೇರಿದೆ. ಈ ಹೊದಿಕೆಯಲ್ಲಿ ವಿವರಗಳಿಗೆ ಸಮರ್ಪಣೆ ಮತ್ತು ಗಮನವನ್ನು ನೋಡಬಹುದು. ಬಾನೆಟ್ ಮೇಲೆ, ನಾವು ದೇವಾಲಯದ ಸಂಕೀರ್ಣದ ಚಿತ್ರವನ್ನು ವೀಕ್ಷಿಸುತ್ತೇವೆ. ಕಾರಿನ ಗ್ರಿಲ್ಗೆ ರಾಮಮಂದಿರ ಧ್ವಜವನ್ನು ಜೋಡಿಸಲಾಗಿದೆ. ನಿಸ್ಸಂಶಯವಾಗಿ, ಕಾರಿನ ಬಣ್ಣ…