ಇಸ್ರೇಲ್: ಪ್ಯಾಲೆಸ್ಟೈನ್ ತುಂಬಾ ಅಪಾಯಕಾರಿ, ಅದರ ಜತೆಗೆ ಒಪ್ಪಂದ ಮಾಡಿಕೊಂಡರೆ ನಮ್ಮ ನಾಶ ವನ್ನು ನಾವೇ ಮಾಡಿಕೊಂಡಂತೆ ಎಂದು ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. ಕದನ ವಿರಾಮದ ನಡುವೆಯು ಇಸ್ರೇಲ್ ಮತ್ತು ಹಮಾಸ್ ನಡುವೆ ದಿನದಿಂದ ದಿನಕ್ಕೆ ಒಂದೊಂದು ಬೆಳವಣಿಗೆ ನಡೆಯುತ್ತಿದೆ. ಇನ್ನು ಹಮಾಸ್ಗೆ ಬೆಂಬಲ ನೀಡುವ ಪ್ಯಾಲೆಸ್ಟೈನ್ ಜತೆಗೆ ನಾವು ಯಾವುದೇ ರೀತಿ ಮಾತುಕತೆಗಳನ್ನು ನಡೆಸುವುದಿಲ್ಲ, ಹಾಗೂ ಪ್ಯಾಲೆಸ್ಟೈನ್ ಜತೆಗೆ ಪರಿಹಾರತ್ಮಕ ಒಪ್ಪಂದಗಳನ್ನು ಮಾಡಿಕೊಳ್ಳಲು ಇಷ್ಟಪಡುವುದಿಲ್ಲ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. ಹೌದು ಪ್ಯಾಲೆಸ್ಟೈನ್ ತುಂಬಾ ಅಪಾಯಕಾರಿ, ಅದರ ಜತೆಗೆ ಒಪ್ಪಂದ ಮಾಡಿಕೊಂಡರೆ ನಮ್ಮ ನಾಶವನ್ನು ನಾವೇ ಮಾಡಿಕೊಂಡಂತೆ ಎಂದು ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. ಈ ಸಂಘರ್ಷದಲ್ಲಿ ನಾವು ವಿಜಯ ಸಾಧಿಸುವರೆಗೆ ಯಾವುದೇ ಮಾತುಕತೆ ನಡೆಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಭವಿಷ್ಯದಲ್ಲಿ ಇಸ್ರೇಲ್ ಜೋರ್ಡಾನ್ ನದಿಯನ್ನು ರಕ್ಷಣೆ ಮಾಡಬೇಕಿದೆ. ಜೋರ್ಡಾನ್ ನದಿಯ ಪಶ್ಚಿಮ ಭಾಗದ ಸಂಪೂರ್ಣ ಪ್ರದೇಶದ ಮೇಲೆ ಇಸ್ರೇಲ್ ಭದ್ರತಾ ನಿಯಂತ್ರಣವನ್ನು ಹೊಂದಿರಬೇಕು ಎಂದು ಹೇಳಿದ್ದಾರೆ.
Author: AIN Author
ಆಹಾರ ತಯಾರಿಸಿ, ಉಳಿದ ಆಹಾರವನ್ನು ಫ್ರಿಡ್ಜ್ ನಲ್ಲಿಟ್ಟು, ಅದೇ ಆಹಾರವನ್ನು ಮತ್ತೆ ಬಿಸಿ ಮಾಡಿ ನಂತರ ಸೇವಿಸುವುದು ಇಂದಿನ ದಿನಗಳಲ್ಲಿ ಸಾಮಾನ್ಯ. ಆದರೆ ಫ್ರಿಜ್ ನಲ್ಲಿ ಇಟ್ಟಿರುವ ಪ್ರತಿಯೊಂದು ಆಹಾರ ಪದಾರ್ಥವನ್ನು ಮತ್ತೆ ಬಿಸಿ ಮಾಡಿದ ನಂತರ ತಿನ್ನಲು ಯೋಗ್ಯವಾಗಿರುವುದಿಲ್ಲ ಎನ್ನುತ್ತಾರೆ ಆಹಾರ ತಜ್ಞರು. ಯಾಕೆಂದರೆ, ಈ ವಸ್ತುಗಳನ್ನು ಫ್ರಿಡ್ಜ್ ನಲ್ಲಿಟ್ಟು ಮತ್ತೆ ಬಿಸಿ ಮಾಡಿದರೆ, ಅದು ಪೋಷಕಾಂಶಗಳನ್ನು ಕಳೆದುಕೊಳ್ಳುತ್ತದೆ ಎನ್ನಲಾಗಿದೆ. ಅಕ್ಕಿ: ಅಕ್ಕಿ ಎಲ್ಲರಿಗೂ ಒಂದು ಪ್ರಮುಖ ಆಹಾರವಾಗಿದ್ದು, ಇದನ್ನು ಪ್ರಪಂಚದಾದ್ಯಂತ ಎಲ್ಲಾ ಮನೆಗಳಲ್ಲಿ ಸುಲಭವಾಗಿ ಕಾಣಬಹುದು. ಆದರೆ ಹಸಿ ಅಕ್ಕಿಯಲ್ಲಿ ಬೀಜಕಗಳು ಇದ್ದು, ಅದು ಬೇಯಿಸಿದ ಬಳಿಕವೂ ಜೀವಂತವಾಗಿ ಉಳಿಯುವ ಬ್ಯಾಕ್ಟೀರಿಯಾಗಳಾಗಿ ಪರಿವರ್ತನೆ ಹೊಂದುತ್ತವೆ ಎಂದು ತಿಳಿದಿದೆಯೇ? ಹೌದು, ಈ ಬ್ಯಾಕ್ಟೀರಿಯಾಗಳು ಪ್ರಮುಖ ರೋಗಗಳನ್ನು ಉಂಟುಮಾಡಬಹುದು ಮತ್ತು ಅದಕ್ಕಾಗಿಯೇ ಯಾವಾಗಲೂ ಅನ್ನವನ್ನು ಮರುಬಿಸಿ ಮಾಡಬೇಡಿ ಎಂದು ಶಿಫಾರಸು ಮಾಡಲಾಗಿದೆ. ಮರುಬಿಸಿ ಮಾಡಿದ ಆನ್ನ ಸೇವನೆಯು ಅತಿಸಾರ ಮತ್ತು ವಾಂತಿಗೆ ಕಾರಣವಾಗಬಹುದು ಎಂದು ತಿಳಿದು ಬಂದಿದೆ. ಮೊಟ್ಟೆ : ಮೊಟ್ಟೆಯಿಂದ ಆಗುವ ಪ್ರಯೋಜನಗಳು ಎಲ್ಲರಿಗೂ ತಿಳಿದಿದೆ.…
ಪೀಣ್ಯ ದಾಸರಹಳ್ಳಿ: ಬಾಗಲಗುಂಟೆಯ ಎಂ.ಇ.ಐ ಆಟದ ಮೈದಾನದ ರಸ್ತೆ ಹತ್ತಿರ ಎಂಇ.ಐ ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ ಹಾಗೂ ಎಂ.ಇ.ಐ ಬಡಾವಣೆ ಯುವಕರ ಸಂಘದ ವತಿಯಿಂದ ಬಿಜೆಪಿ ಮುಖಂಡ ಲಕ್ಷ್ಮಣ ಗೌಡ ನೇತೃತ್ವದಲ್ಲಿ ಶ್ರೀ ರಾಮೋತ್ಸವ ಸಮಾರಂಭ ಆಚರಿಸಲಾಯಿತು. ಶಾಸಕ ಎಸ್. ಮುನಿರಾಜು ಶ್ರೀ ರಾಮನ ಪೂಜೆಯಲ್ಲಿ ಪಾಲ್ಗೊಂಡು ಮಾತನಾಡಿ ”ಭಾರತದ ಶತಕೋಟಿ ರಾಮನ ಭಕ್ತರು ಕಂಡಿದ್ದ ಕನಸು ಇಂದು ನನಸಾಗಿದೆ ಬರೋಬ್ಬರಿ 500 ವರ್ಷಗಳ ಹೋರಾಟದ ಫಲವಾಗಿ ಆಯೋಧ್ಯೆಯಲ್ಲಿ ತಲೆ ಎತ್ತಿ ನಿಂತಿರುವ ರಾಮ ಮಂದಿರದ ರಾಮಲಲ್ಲಾ ವಿಗ್ರಹಕ್ಕೆ ಪ್ರಾಣ ಪ್ರತಿಷ್ಠಾಪನೆ ಗೊಂಡಿದೆ’ ಎಂದರು. ಬಿಜೆಪಿ ಮುಖಂಡ ಲಕ್ಷ್ಮಣ ಗೌಡ್ರು ಮಾತನಾಡಿ ಇದು ಐತಿಹಾಸಿಕ ಕಾರ್ಯಕ್ರಮವಾಗಿ ದೇಶದಾದ್ಯಂತ ಸಂಭ್ರಮದ ವಾತಾವರಣ ಸೃಷ್ಟಿಯಾಗಿದ್ದು ದೇಶದ ಸಾವಿರಾರು ಗಣ್ಯರ ಸಮ್ಮುಖದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಯೋಧ್ಯೆಯ ಶ್ರೀರಾಮ ಮಂದಿರವನ್ನು ಲೋಕಾರ್ಪಣೆಗೊಳಿಸಿದ್ದಾರೆ. ಮತ್ತೊಮ್ಮೆ ಭಾರತ ದೇಶ ವಿಶ್ವಗುರುವಾಗಿದೆ’ ಎಂದರು. ಸಮಾರಂಭದಲ್ಲಿ ಬಡಾವಣೆಯ 70 ವರ್ಷ ಮೇಲ್ಪಟ್ಟ ನೂರಕ್ಕೂ ಹೆಚ್ಚು ಹಿರಿಯ ನಾಗರಿಕರಿಗೆ ಅಭಿನಂದಿಸಲಾಯಿತು.…
ಬಾಲಿವುಡ್ ನಟಿ ಕಂಗನಾ ರಣಾವತ್ ನಟನೆಯ ‘ಎಮರ್ಜೆನ್ಸಿ’ (Emergency) ಸಿನಿಮಾ ನವೆಂಬರ್ 24ರಂದು ರಿಲೀಸ್ (Release) ಆಗಬೇಕಿತ್ತು. ಆದರೆ, ಕಾರಣಾಂತರಗಳಿಂದ ಬಿಡುಗಡೆ ದಿನಾಂಕವನ್ನು ಮುಂದಕ್ಕೆ ಹಾಕಿದ್ದರು ಕಂಗನಾ. ಈ ಕುರಿತು ಅವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು ‘ನಾವು ಘೋಷಿಸಿದ ತಿಂಗಳಲ್ಲಿ ಅಧಿಕ ಸಂಖ್ಯೆಯಲ್ಲಿ ಸಿನಿಮಾಗಳು ರಿಲೀಸ್ ಆಗುತ್ತಿದ್ದು, 2024ರಲ್ಲಿ ಬಿಡುಗಡೆ ಮಾಡಲು ಪ್ಲ್ಯಾನ್ ಮಾಡಿದ್ದೇವೆ ಎಂದು ಬರೆದುಕೊಂಡಿದ್ದರು. ಈಗ ಜೂನ್ ನಲ್ಲಿ ಸಿನಿಮಾವನ್ನು ತೆರೆಗೆ ತರುವುದಾಗಿ ಅಪ್ ಡೇಟ್ ನೀಡಿದ್ದಾರೆ. ಕಂಗನಾ ರಣಾವತ್ (Kangana Ranaut) ಸದ್ಯ ಎರಡು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಒಂದು ಸಿನಿಮಾವನ್ನು ಅವರೇ ನಿರ್ಮಾಣ ಮಾಡಿ, ನಿರ್ದೇಶನ ಮತ್ತು ನಟನೆ ಮಾಡುತ್ತಿದ್ದರೆ ಮತ್ತೊಂದು ಚಿತ್ರದಲ್ಲಿ ಕೇವಲ ನಟಿಯಾಗಿದ್ದಾರೆ. ಈ ಎರಡೂ ಸಿನಿಮಾಗಳ ನಡುವೆ ಅವರು ಮತ್ತೊಂದು ಚಿತ್ರವನ್ನು ಒಪ್ಪಿಕೊಂಡಿದ್ದು, ಆ ಸಿನಿಮಾ ಬಗ್ಗೆ ಸುಳಿವೊಂದನ್ನು ನೀಡಿದ್ದಾರೆ. ಎಮರ್ಜೆನ್ಸಿ ಸಿನಿಮಾ ತೆರೆಗೆ ಬರುತ್ತಿದ್ದಂತೆಯೇ ಲೆಜೆಂಡ್ ಸ್ಟುಡಿಯೋಸ್ ಬ್ಯಾನರ್ ನಲ್ಲಿ ತಯಾರಾಗಲಿರುವ, ಸಂದೀಪ್ ಸಿಂಗ್ (Sandeep Singh) ನಿರ್ಮಾಣದ ಹೊಸ ಸಿನಿಮಾದಲ್ಲಿ…
ನಿಮ್ಮ ಎದೆಯು ಸ್ವಲ್ಪ ಬೌನ್ಸಿಯರ್ ಆಗಿದ್ದರೆ ಉತ್ತಮವಾಗಿ ಹೊಂದಿಕೊಳ್ಳುತ್ತದೆ ಎಂದು ನೀವು ಭಾವಿಸುವ ಉಡುಪನ್ನು ನೀವು ಹೊಂದಿದ್ದೀರಿ. ಬಹುಶಃ ನಿಮ್ಮ ಎದೆಯು ಸ್ವಲ್ಪ ಹೆಚ್ಚು ಉಚ್ಚರಿಸಲಾಗುತ್ತದೆ ಎಂದು ನೀವು ಬಯಸುತ್ತೀರಿ. ಅಥವಾ ನೀವು ಕೆಲವು ಎದೆಯ ಡಿಸ್ಫೊರಿಯಾವನ್ನು ಪಡೆದಿರಬಹುದು. ಸ್ತನ ಗಾತ್ರವನ್ನು ನೈಸರ್ಗಿಕವಾಗಿ ಹೆಚ್ಚಿಸುವುದು ಸಾಧ್ಯವೇ? ಹಾಗಾದ್ರೆ ಈ ರೀತಿಯ ವ್ಯಾಯಾಮಗಳನ್ನ ಮಾಡಿ ಆಗ ನೋಡಿ ಏನೇಲ್ಲಾ ಬದಲಾವಣೆ ಆಗುತ್ತದೆ ಎಂದು! ವ್ಯಾಯಾಮವು ನಿಮ್ಮ ಎದೆಯ ಅಂಗಾಂಶಗಳ ಅಡಿಯಲ್ಲಿ ಇರುವ ನಿಮ್ಮ ಎದೆಯ ಸ್ನಾಯುಗಳ ಒಟ್ಟಾರೆ ನೋಟವನ್ನು ಬದಲಾಯಿಸಬಹುದು. ಶಕ್ತಿ ತರಬೇತಿ ವ್ಯಾಯಾಮಗಳ ಮೂಲಕ ಈ ಸ್ನಾಯುಗಳನ್ನು ಗುರಿಯಾಗಿಸುವುದು (ಕೆಳಗೆ ಪಟ್ಟಿ ಮಾಡಲಾದಂತಹವುಗಳು!) ಎದೆಯ ಅಂಗಾಂಶದ ಗಾತ್ರ, ಸಾಂದ್ರತೆ, ಶಕ್ತಿ ಮತ್ತು ಧ್ವನಿಯಲ್ಲಿ ಬದಲಾವಣೆಗೆ ಕಾರಣವಾಗಬಹುದು. *ಭುಜಂಗಾಸನ : ಇದು ಸ್ತನದ ಗಾತ್ರ ಹೆಚ್ಚಿಸಲು ಸಹಕಾರಿಯಾಗಿದೆ. ನಿಮ್ಮ ಹೊಟ್ಟೆಯ ಮೇಲೆ ಮಲಗಿ ನಿಮ್ಮ ಅಂಗೈಯನ್ನು ಭುಜದ ನೇರಕ್ಕೆ ಕೆಳಗೆ ಇರಿಸಿ ಕೈಗಳ ಮೇಲೆ ಒತ್ತಡ ಹೇರಿ ದೇಹವನ್ನು ಮೇಲಕ್ಕೆತ್ತಿ. ತಲೆಯನ್ನು ಹಿಂದಕ್ಕೆ ಭಾಗಿಸಿ.…
ಬೆಂಗಳೂರು:- ಕರ್ನಾಟಕದ ಕಾಂಗ್ರೆಸ್ ಸರಕಾರ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮೀ ಯೋಜನೆಯ ಮೂಲಕ ಮನೆಯ ಯಜಮಾನಿ ಪ್ರತೀ ತಿಂಗಳು 2 ಸಾವಿರ ರೂಪಾಯಿ ಸಹಾಯಧನವನ್ನು ಪಡೆಯುತ್ತಿದ್ದಾಳೆ. ಆದರೆ ಬಹುತೇಕರಿಗೆ ಇನ್ನೂ ಗೃಹಲಕ್ಷ್ಮೀ ಯೋಜನೆಯ ಹಣ ಸಿಕ್ಕಿಲ್ಲ. ಆದರೆ ಕೆಲವರು 6ನೇ ಕಂತಿನ ಹಣಕ್ಕಾಗಿ ಕಾದು ಕುಳಿತಿದಿದ್ದಾರೆ. ರಾಜ್ಯ ಸರಕಾರದ ಉನ್ನತ ಮೂಲಗಳ ಮಾಹಿತಿಯ ಪ್ರಕಾರ ಗೃಹಲಕ್ಷ್ಮೀ ಯೋಜನೆಯ 6ನೇ ಕಂತಿನ ಹಣ ಯಾವಾಗ ವರ್ಗಾವಣೆ ಎಂಬ ಪ್ರಶ್ನೆಗೆ ಸದ್ಯ ಉತ್ತರ ದೊರಕಿದೆ. ಫೆಬ್ರವರಿ ಮೊದಲ ವಾರದಲ್ಲೇ ಜಮೆ ಆಗಲಿದೆ ಎನ್ನಲಾಗುತ್ತಿದೆ. ಆದರೆ ಈ ಕುರಿತು ಇಲಾಖೆಯಿಂದ ಅಧಿಕೃತ ಮಾಹಿತಿ ಹೊರ ಬಿದ್ದಿಲ್ಲ. ಈ ನಡುವಲ್ಲೇ ರಾಜ್ಯ ಸರಕಾರ ಗೃಹಲಕ್ಷ್ಮೀ, ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದಂತೆ ಹೊಸ ರೂಲ್ಸ್ ಜಾರಿ ಮಾಡಿದೆ. ಇಕೆವೈಸಿ, ಆಧಾರ್ ಸೀಡಿಂಗ್ ಮಾಡಿದ್ದರೂ ಕೂಡ ಇನ್ಮುಂದೆ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಪಡೆಯಬೇಕಾದ್ರೆ ಕಡ್ಡಾಯವಾಗಿ ಎನ್ಪಿಸಿಐ ಮಾಡಿಸಲೇ ಬೇಕಾಗಿದೆ. ಎನ್ಪಿಸಿಐ ಮಾಡಿಸದೇ ಇದ್ದರೆ ನಿಮ್ಮ ಖಾತೆಗೆ ಗೃಹಲಕ್ಷ್ಮೀ ಯೋಜನೆಯ ಹಣ ಜಮೆ…
ಟೀಮ್ ಇಂಡಿಯಾ ಬೌಲರ್ ಗಳನ್ನು ನಾಯಕ ರೋಹಿತ್ ಶರ್ಮಾ ಬಲು ಜಾಣ್ಮೆಯಿಂದ ನಿಭಾಯಿಸಬೇಕೆಂದು ದಿಗ್ಗಜ ಸುನೀಲ್ ಗವಾಸ್ಕರ್ ಸಲಹೆ ನೀಡಿದ್ದಾರೆ. ಜನವರಿ 25 ರಿಂದ ಇಂಗ್ಲೆಂಡ್ ಹಾಗೂ ಭಾರತ ತಂಡದ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿ ಆರಂಭಗೊಳ್ಳಲಿದೆ ಟೀಮ್ ಇಂಡಿಯಾದಲ್ಲಿ ಸ್ಪಿನ್ನರ್ ಗಳ ರೂಪದಲ್ಲಿ ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್ ಹಾಗೂ ಅಕ್ಷರ್ ಪಟೇಲ್ ಇದ್ದು, ಅವರನ್ನು ಸರಿಯಾಗಿ ಆಯ್ಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ. “ನಾಯಕನ ಸ್ಥಾನದಲ್ಲಿರುವ ರೋಹಿತ್ ಶರ್ಮಾ ಬೌಲರ್ ಗಳನ್ನು ತುಂಬಾ ಜಾಣ್ಮೆಯಿಂದ ನಿಭಾಯಿಸಬೇಕು.ಅದರಲ್ಲೂ ಮುಖ್ಯವಾಗಿ ಹೈದರಾಬಾದ್ ಟೆಸ್ಟ್ ಪಂದ್ಯದಲ್ಲಿ. ಪಿಚ್ ಸಾಕಷ್ಟು ತಿರುವು ಪಡೆಯದ ಕಾರಣ, ಇಂಗ್ಲೆಂಡ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡರೆ ಭೋಜನ ವಿರಾಮದವರೆಗೂ ಉತ್ತಮ ಪ್ರದರ್ಶನ ತೋರಿಸುತ್ತಾರೆ. ಆದ್ದರಿಂದ ಬೌಲರ್ ಗಳನ್ನು ರೋಹಿತ್ ಶರ್ಮಾ ಯಾವ ರೀತಿ ಬಳಸಿಕೊಳ್ಳುತ್ತಾರೆ ಎಂಬುದನ್ನು ನೋಡಬೇಕು,” ಎಂದು ಖ್ಯಾತ ಕ್ರಿಕೆಟ್ ವಿವರಣೆಕಾರ ಹೇಳಿದ್ದಾರೆ. “ಹಿಂದಿನ ಟೆಸ್ಟ್ ಸರಣಿಯಲ್ಲಿ ಇಂಗ್ಲೆಂಡ್ ವಿರುದ್ಧ ಚೆನ್ನೈನಲ್ಲಿ ನಡೆದಿದ್ದ…
ರಾಜ್ಯದಲ್ಲಿ ಜನವರಿಯಲ್ಲಿ ಬಿದ್ದ ಅಕಾಲಿಕ ಮಳೆಯಿಂದ ಹಲವು ಜಿಲ್ಲೆಗಳಲ್ಲಿ 266 ಹೆಕ್ಟೇರ್ ಪ್ರದೇಶದ ಬೆಳೆಗೆ ಹಾನಿಯಾಗಿ ಎನ್ಡಿಆರ್ಎಫ್ ನಿಯಮಾವಳಿ ಅನ್ವಯ 38 ಲಕ್ಷ ರೂ. ನಷ್ಟವಾಗಿದೆ. ಹಾಸನದ ಅರಕಲಗೂಡು ತಾಲೂಕಿನ 152 ರೈತರಿಗೆ ಸೇರಿದ 76 ಹೆಕ್ಟೇರ್, ಚನ್ನರಾಯಪಟ್ಟಣ ತಾಲೂಕಿನಲ್ಲಿ 255 ರೈತರ 190 ಹೆಕ್ಟೇರ್ ಸೇರಿ ಒಟ್ಟು 266 ಹೆಕ್ಟೇರ್ ಪ್ರದೇಶದ ಬೆಳೆ ಹಾನಿಯಾಗಿದ್ದು, ಕೇಂದ್ರದ ನ್ಯಾಷನಲ್ ಡಿಜಾಸ್ಟರ್ ಮ್ಯಾನೇಜ್ಮೆಂಟ್(ಪ್ರಕೃತಿ ವಿಕೋಪ ನಿರ್ವಹಣೆ) ನಿಯಮಾವಳಿ ಅನ್ವಯ ಬೆಳೆ ನಷ್ಟದ ಅಂದಾಜು ಮಾಡಿರುವ ಕೃಷಿ ಇಲಾಖೆ ಸರಕಾರಕ್ಕೆ ವರದಿ ಸಲ್ಲಿಸಿದೆ. ಜಿಲ್ಲೆಯಲ್ಲಿ 2.94,940 ರೈತರಲ್ಲಿ 2,66,817 ಅರ್ಹ ರೈತರಿದ್ದು, 1,95,981 (ಶೇ.73 ರಷ್ಟು) ರೈತರ ಇ ಕೆವೈಸಿ ಪೂರ್ಣಗೊಂಡಿದೆ. ಶೇ.27ರಷ್ಟು ರೈತರು ಇ ಕೆವೈಸಿ ಮಾಡಿಸುವುದು ಬಾಕಿ ಇದ್ದು, ಯೋಜನೆಯ ಪ್ರತಿ ಫಲಾನುಭವಿ ರೈತರು ಆರ್ಥಿಕ ನೆರವು ಪಡೆಯಲು ಇ ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ. ರೈತರ ಆರ್ಥಿಕ ಬಲವರ್ಧನೆಗೆ ನೆರವಾಗುವ ಉದ್ದೇಶದಿಂದ ಕೇಂದ್ರ ಸರಕಾರ ವಾರ್ಷಿಕ ತಲಾ ಆರು ಸಾವಿರ, ರಾಜ್ಯ…
ಕಡಲೆಕಾಯಿ ಇಷ್ಟ ಇರದ ಜನರೇ ಇರಲಾರರು ಅನಿಸುತ್ತದೆ. ನೆಲಗಡಲೆ ತಿನ್ನಲು ಬಹಳ ರುಚಿಕರ ವಾಗಿರುತ್ತದೆ. ಅಡುಗೆಯಲ್ಲಿ ವಿವಿಧ ರೀತಿಯಲ್ಲಿ ನೆಲಗಡಲೆಯನ್ನು ಬಳಸಲಾಗುತ್ತದೆ. ಇದು ಸಾಕಷ್ಟು ಕ್ಯಾಲೋರಿ ಕೊಬ್ಬಿನಿಂದ ಸಮೃದ್ಧವಾಗಿದೆ. ಈ ಕೆಲವು ಸಮಸ್ಯೆ ಇರುವವರು ನೆಲಕಡಲೆಯನ್ನು ತಿನ್ನೋದ್ರಿಂದ ದೂರ ಉಳಿಯುವುದು ಒಳ್ಳೆಯದು ಎನ್ನಲಾಗುತ್ತದೆ. ಅಧಿಕ ಬಿಪಿ ರೋಗಿಗಳಿಗೆ ಸಮಸ್ಯೆಗಳು ಉದ್ಭವಿಸುತ್ತವೆ ಅಧಿಕ ಬಿಪಿ ಇರುವವರು ಕಡಲೆಕಾಯಿಯನ್ನು ತ್ಯಜಿಸಬೇಕು. ಕಡಲೆಕಾಯಿಯನ್ನು ಸೇವಿಸುವುದರಿಂದ ದೇಹದಲ್ಲಿ ಸೋಡಿಯಂ ಪ್ರಮಾಣ ಹೆಚ್ಚುತ್ತದೆ. ಅಧಿಕ ಸೋಡಿಯಂ ಸೇವನೆಯು ಅಧಿಕ ರಕ್ತದೊತ್ತಡ ಮತ್ತು ಹೃದಯ ಸಂಬಂಧಿ ಕಾಯಿಲೆಗಳ ಅಪಾಯವನ್ನು ಹೆಚ್ಚಿಸುತ್ತದೆ. ಕಡಲೆಯನ್ನು ಸೇವಿಸುವುದರಿಂದ ತೂಕ ಹೆಚ್ಚಾಗುವ ಅಪಾಯವೂ ಇದೆ, ಆದ್ದರಿಂದ ಇದನ್ನು ತಪ್ಪಿಸಬೇಕು. ಇದರಲ್ಲಿರುವ ಹೆಚ್ಚಿನ ಕ್ಯಾಲೋರಿಗಳು ವೇಗವಾಗಿ ತೂಕವನ್ನು ಹೆಚ್ಚಿಸುತ್ತವೆ. ಹೆಚ್ಚುತ್ತಿರುವ ಆರೋಗ್ಯದ ಅಪಾಯಗಳಿಗೆ ತೂಕ ಹೆಚ್ಚಾಗುವುದು ಕಾರಣವಾಗಿದೆ. ಗೌಟ್ನಿಂದ ಬಳಲುತ್ತಿರುವವರು ಗೌಟ್ ಪ್ಯೂರಿನ್ ಚಯಾಪಚಯ ಕ್ರಿಯೆಯ ಅಸ್ವಸ್ಥತೆಯಿಂದ ಉಂಟಾಗುವ ಕಾಯಿಲೆಯಾಗಿದೆ. ಎಲ್ಲಾ ಗೌಟ್ ರೋಗಿಗಳು ಹೈಪರ್ಯುರಿಸೆಮಿಯಾದಿಂದ ಬಳಲುತ್ತಿದ್ದಾರೆ. ಕೊಬ್ಬಿನಂಶವಿರುವ ಆಹಾರವು ಯೂರಿಕ್ ಆಮ್ಲದ ಸ್ರವಿಸುವಿಕೆಯನ್ನು ಕಡಿಮೆ ಮಾಡುತ್ತದೆ…
ಮುಂಬೈ: ವ್ಯಕ್ತಿಯೊಬ್ಬ ಅಪ್ರಾಪ್ತ ವಯಸ್ಸಿನ ಇಬ್ಬರು ಬಾಲಕರಿಗೆ ಚಾಕಲೇಟ್ ಆಸೆ ತೋರಿಸಿ ಅವರನ್ನು ಲೈಂಗಿಕವಾಗಿ ಬಳಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮುಂಬೈನ ವಿಲೆ ಪಾರ್ಲೆಯಲ್ಲಿ ಪೋಷಕರೊಂದಿಗೆ ವಾಸವಾಗಿರುವ 10 ಹಾಗೂ 12 ವರ್ಷದ ಸಹೋದರರು ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ. ವಾಹನಗಳ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದ ಆರೋಪಿ ತನ್ನ ನೆರೆಯ ಮನೆಯಲ್ಲಿ ವಾಸವಿದ್ದ ಈ ಬಾಲಕರ ಮನೆಗೆ ತೆರಳಿ, ಚಾಕಲೇಟ್ ನೀಡುವ ಮೂಲಕ ಮಕ್ಕಳನ್ನು ಆಕರ್ಷಿಸಿ ಲೈಂಗಿಕವಾಗಿ ದುರುಪಯೋಗ ಪಡಿಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ನಗರದ ಪಶ್ಚಿಮ ಸಂತಾಕ್ರೂಜ್ ನ ಶಾಲೆಯೊಂದರಲ್ಲಿ ಓದುತ್ತಿರುವ ಬಾಲಕರು ಶಾಲೆಯ ಶಿಕ್ಷಕರ ಬಳಿ ಈ ವಿಚಾರ ತಿಳಿಸಿದ್ದಾರೆ. https://ainlivenews.com/do-you-know-how-much-ambani-family-donated-to-ayodhya-ram-mandir/ ವಿಷಯ ತಿಳಿದ ಶಿಕ್ಷಕರು ಸಂತಾಕ್ರೂಜ್ನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ದಾಖಲಾದ ನಂತರ ಕೇಸನ್ನು ವಿಲೆ ಪಾರ್ಲೆ ಪೊಲೀಸ್ ಠಾಣಾ ವ್ಯಾಪ್ತಿಗೆ ವರ್ಗಾವಣೆ ಮಾಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಲಕ್ಷ್ಮಣ್ ಚವಾಣ್ ತಿಳಿಸಿದ್ದಾರೆ. ಆರೋಪಿಯು ಮಕ್ಕಳಿಗೆ ಚಾಕಲೇಟ್…