ಕಾರವಾರ: ಅನಂತ ಕುಮಾರ್ ಹೆಗಡೆಯವರ ಜತೆ ಉತ್ತಮ ಬಾಂಧವ್ಯವಿದ್ದು, ಅವರು ನನ್ನ ಸಹೋದರರಂತೆ. ಹೆಗಡೆಯವರು ಚುನಾವಣೆಗೆ ನಿಲ್ಲೋದಾದರೆ ನಾನು ಆಕಾಂಕ್ಷಿಯಲ್ಲ. ಅನಂತ ಕುಮಾರ್ ಹೆಗಡೆಯವರು ಚುನಾವಣೆಗೆ ನಿಲ್ಲದಿದ್ದರೆ ಮಾತ್ರ ನಾನು ಕೂಡಾ ಒಬ್ಬ ಚುನಾವಣಾ ಆಕಾಂಕ್ಷಿ. ದೇವೇಗೌಡರು, ಕುಮಾರಸ್ವಾಮಿ, ಪ್ರಧಾನಿ ಮೋದಿಯವರ ಅಭಿಮಾನಿಗಳು ನಮ್ಮ ಗೆಲ್ಲಿಸಿಯೇ ಗೆಲ್ಲಿಸುತ್ತಾರೆ. ಅವಕಾಶ ಸಿಕ್ಕರೆ ಉತ್ತರಕನ್ನಡ ಜಿಲ್ಲೆಯಲ್ಲಿ ಜೆಡಿಎಸ್ ಅಭ್ಯರ್ಥಿ ಖಂಡಿತಾ ಗೆಲ್ಲುತ್ತಾರೆ. ಜನರಿಗೆ ಬದಲಾವಣೆ ಬೇಕಿತ್ತು, https://ainlivenews.com/satish-jarakiholi-becoming-cm-is-as-true-as-surya-being-born-congress-mla/ ಜೆಡಿಎಸ್ ಅಂದು ಬಿಜೆಪಿ ವಿರುದ್ಧ ಮಾತನಾಡಿದ್ದರಿಂದ ನಾನು ಕೂಡಾ ಬಿಜೆಪಿ ವಿರುದ್ಧವಿದ್ದೆ. ನನ್ನ ಕಾರ್ಯಕರ್ತರು ಬಿಜೆಪಿ ಜತೆಯಾಗಿ ನಿಲ್ಲಬೇಕೆಂದು ಹೇಳಿದ್ದರಿಂದ ಬೆಂಬಲಿಸುತ್ತಿದ್ದೇನೆ. ಪಕ್ಷದಲ್ಲಿ ವೈಯಕ್ತಿಕ ಬೇಧಭಾವ ಇರಬಹುದು. ಆದರೆ ಮೋದಿ ಮತ್ತೆ ಪ್ರಧಾನಿಯಾಗಲು ಯಾವ ತ್ಯಾಗಕ್ಕೂ ಸಿದ್ಧರಾಗಿದ್ದೇವೆ ಎಂದು ಮಾಜಿ ಸಚಿವ ಆನಂದ್ ಆಸ್ನೋಟಿಕರ್ ಹೇಳಿದರು.
Author: AIN Author
ಮಂಡ್ಯ: ಬಿಜೆಪಿಯಿಂದ ಮಾಜಿ ಸಚಿವ ನಾರಾಯಣಗೌಡ ಅಂತರ ಕಾಯ್ದುಕೊಳ್ಳುತ್ತಿರುವ ವಿಚಾರವಾಗಿ ಮಾತನಾಡಿದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ನಾರಾಯಣಗೌಡ ನಮ್ಮೊಂದಿಗೆ ಇದ್ದಾರೆ. ಚುನಾವಣೆಯಲ್ಲಿ ಸೋತ ನಂತರ ಒಂದಷ್ಟು ಸಮಯ ಬೇಕಾಗುತ್ತದೆ. ಒಳ್ಳೆಯ ಕೆಲಸ ಮಾಡಿದರೂ ಸಹ ನಾರಾಯಣಗೌಡಗೆ ಹಿನ್ನಡೆಯಾಗಿದೆ. https://ainlivenews.com/satish-jarakiholi-becoming-cm-is-as-true-as-surya-being-born-congress-mla/ ಇದಕ್ಕಾಗಿ ನಾರಾಯಣಗೌಡ ಸ್ವಲ್ಪ ನೋವಿನಲ್ಲಿ ಇದ್ದಾರೆ. ಮೊನ್ನೆಯೂ ಅವರ ಜೊತೆ ಮಾತನಾಡಿದ್ದೇನೆ. ನಾನು ರಾಜ್ಯಾಧ್ಯಕ್ಷನಾದ ವೇಳೆ ಅವರು ಬಂದು ಆಶೀರ್ವಾದ ಮಾಡಿದ್ದಾರೆ. ನಾರಾಯಣಗೌಡ ಈ ಭಾಗದಲ್ಲಿ ನಮಗೆ ಶಕ್ತಿ, ಅವರನ್ನು ಉಳಿಸಿಕೊಳ್ಳುತ್ತೇವೆ ಎಂದರು.
ಬೆಂಗಳೂರು: ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದೆ. ದೀಪಾವಳಿ ವೇಳೆ ಬೆಲೆಏರಿಕೆ ಆಗಿರುವುದು ಚಿನ್ನಾಭರಣ ಪ್ರಿಯರಿಗೆ ಬೇಸರ ತರಿಸಿದೆ. ಬೆಲೆ ಹೆಚ್ಚಳವಾದರೂ ಬಂಗಾರದ ಖರೀದಿಗೆ ಹೆಚ್ಚಿನ ಜನ ಮುಂದಾಗುತ್ತಿದ್ದಾರೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 56,550 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 61,690 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,600 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 56,550 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,525 ರುಪಾಯಿಯಲ್ಲಿ ಇದೆ. ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ನವೆಂಬರ್ 20ಕ್ಕೆ): 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 56,550 ರೂ 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 61,690 ರೂ ಬೆಳ್ಳಿ ಬೆಲೆ 10 ಗ್ರಾಂಗೆ: 760 ರೂ ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ:…
ಧಾರವಾಡ: ಕಟ್ಟಡ ಕಾರ್ಮಿಕ ಮಕ್ಕಳ ಶಿಷ್ಯ ವೇತನದ ಹಿಂದಿನ ಮೊತ್ತ ಮುಂದುವರೆಸಲು ಹಾಗೂ ಎಲ್ಲ ಅರ್ಹ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ಖಾತ್ರಿಪಡಿಸಲು ಅಗ್ರಹಿಸಿ, ಧಾರವಾಡದಲ್ಲಿ ವಿದ್ಯಾರ್ಥಿಗಳು ಬೀದಿಗೆ ಇಳಿದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಎಐಡಿಎಸ್ಓ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಸರ್ಕಾರದ ವಿರುದ್ಧ ಧಿಕ್ಲಾರ ಕೂಗಿ ತಮ್ಮ ಆಕ್ರೋಶ ಹೊರಹಾಕಿದರು. ಇತ್ತೀಚಿನ ದಿನಗಳಲ್ಲಿ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಕೇವಲಗ್ಯಾರಂಟಿಗಳ ಹೆಸರಿನಲ್ಲಿಯೇ ಕಾಲ ದೂಡುತ್ತಿದೆ. ವಿದ್ಯಾರ್ಥಿಗಳ ವೇತನ ಶಿಕ್ಷಣದ ಬಗ್ಗೆ ಯಾವುದೇ ಮೂತುವರ್ಜಿ ತೋರುತ್ತಿಲ್ಲ. ವಿದ್ಯಾರ್ಥಿಗಳ ಶಿಷ್ಯ ವೇತನ ಸಕಾಲಕ್ಕೆ ಬೀಡುಗಡೆ ಮಾಡುತ್ತಿಲ್ಲ. ಇದರ ಜೊತೆಗೆ ಕಟ್ಟಡ ಕಾರ್ಮಿಕ ಮಕ್ಕಳ ಶಿಷ್ಯ ವೇತನ ತಡೆಯಲು ನಿರ್ಧಾರ ಮಾಡಿತ್ತು,ಇದು ಎಷ್ಟರಮಟ್ಟಿಗೆ ಎಂದು ಪ್ರಶ್ನೆ ಮಾಡಿದರು. ವಿದ್ಯಾರ್ಥಿಗಳ ಹಿತ ಕಾಪಾಡಲು ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗುತ್ತಿದೆ. ಈ ಕೂಡಲೇ ರಾಜ್ಯ ಸರ್ಕಾರ ವಿದ್ಯಾರ್ಥಿಗಳ ವೇತನ ಸಕಾಲಕ್ಕೆ ಸಿಗುವ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು, ಕಟ್ಟಡ ಕಾರ್ಮಿಕ…
ಕಲಬುರಗಿ: ಪಕ್ಷ ನಾಯಕ ಆರ್ ಅಶೋಕ ಅವರು ಇಂದು ಕಲಬುರಗಿ ಜಿಲ್ಲೆಯಲ್ಲಿಂದು ಬರ ವೀಕ್ಷಣೆ ಮಾಡಿದ್ದಾರೆ. ವಿಪಕ್ಷ ನಾಯಕರಾದ ಬಳಿಕ ಮೊದಲ ಬಾರಿಗೆ ಕಲಬುರಗಿ ಪ್ರವಾಸ ಕೈಗೊಂಡಿದ್ದು, ಗ್ರಾಮೀಣ ಮತಕ್ಷೇತ್ರದ ಮೂಕಿ ತಾಂಡಾಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ರೈತರಿಂದ ತೊಗರಿ ಹಾನಿ ಕುರಿತು ಮಾಹಿತಿ ಸಂಗ್ರಹ ಮಾಡಿದರು. ಇನ್ನೂ ಬರ ವೀಕ್ಷಣೆ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದರು. ಸರಕಾರದ ಖಜಾನೆ ಖಾಲಿ ಆಗಿ ಪರಿಹಾರ ಕೊಡಲು ಅವರ ಬಳಿ ದುಡ್ಡಿಲ್ಲ. ಪಂಚರಾಜ್ಯ ಚುನಾವಣೆ ಹೋಗಿ ರಾಜ್ಯದ ಜನರ ಸಮಸ್ಯೆಗಳನ್ನು ಮರೆತಿದ್ದಾರೆ. ರೈತರ ಸಂಕಷ್ಟವನ್ನು ಯಾರೋಬ್ಬ ಜನಪ್ರತಿನಿಧಿಗಳು ಕೇಳುತ್ತಿಲ್ಲ, ಬೆಳಗಾವಿ ಅಧಿವೇಶನದಲ್ಲಿ ಇದೇ ಮೊದಲ ವಿಷಯ ಚರ್ಚೆ ಮಾಡುವೆ ಎಂದು ಕಲಬುರಗಿಯಲ್ಲಿ ವಿಪಕ್ಷ ನಾಯಕ R ಅಶೋಕ್ ಹೇಳಿದರು.
ಬೆಳಗಾವಿ: ಕಾಂಗ್ರೆಸ್ನಲ್ಲಿ (Congress) ಮತ್ತೆ ಮುಂದಿನ ಮುಖ್ಯಮಂತ್ರಿ (CM) ಬಗ್ಗೆ ಚರ್ಚೆ ಶುರುವಾಗಿದೆ. ಕಾಂಗ್ರೆಸ್ ಹೈಕಮಾಂಡ್ ಕಟ್ಟುನಿಟ್ಟಿನ ಆದೇಶ ನೀಡಿದ್ದರೂ ತೆರೆದ ವೇದಿಕೆಯ ಮೇಲೆಯೇ ಸತೀಶ್ ಜಾರಕಿಹೊಳಿ (Satish Jarkiholi) ಮುಂದಿನ ಸಿಎಂ ಎಂದು ಸವದತ್ತಿ ಶಾಸಕ ವಿಶ್ವಾಸ ವೈದ್ಯ (Vishwas Vaidya) ಹೇಳಿಕೆ ನೀಡಿದ್ದಾರೆ. ಬೆಳಗಾವಿ (Belagavi) ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಮಾತನಾಡಿರುವ ವಿಶ್ವಾಸ ವೈದ್ಯ, ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷಾತೀತವಾಗಿ ಪ್ರಭಾವ ಬೆಳೆಸಿಕೊಂಡಿರುವ ಸತೀಶ್ ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ ಸತೀಶ್ ಜಾರಕಿಹೊಳಿ ಸಿಎಂ ಆಗುವುದು ಅಷ್ಟೇ ಸತ್ಯ ಎಂದು ಹೇಳಿದ್ದಾರೆ. ದೀಪಾವಳಿ ಹಾಗೂ ರಾಜ್ಯೋತ್ಸವ ನಿಮಿತ್ತ ರಸಮಂಜರಿ ಕಾರ್ಯಕ್ರಮ ಆಯೋಜನೆಯಾಗಿತ್ತು. ಕಾರ್ಯಕ್ರಮ ಉದ್ಘಾಟಕರಾಗಿ ಭಾಗಿಯಾಗಿದ್ದ ಸವದತ್ತಿ ಶಾಸಕ ಸಿಎಂ ವಿಚಾರದ ಬಗ್ಗೆ ಯಾರು ಕೂಡಾ ಮಾತನಾಡಬಾರದು ಎಂದು ಆದೇಶಿಸಿದ್ದರೂ ಮುಂದಿನ ಸಿಎಂ ಸತೀಶ್ ಜಾರಕಿಹೊಳಿ ಎಂದಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧ ಇದೇ 23ರಂದು ನಡೆಯಲಿರುವ ಟಿ-20 ಸರಣಿಗೆ ಸೂರ್ಯಕುಮಾರ್ ಯಾದವ್ ಅವರನ್ನು ನಾಯಕರಾಗಿ ಆಯ್ಕೆ ಮಾಡಲಾಗಿದೆ. ಇಂದು ಅಹಮದಾಬಾದ್ನಲ್ಲಿ ಸಭೆ ನಡೆಸಿದ ಆಯ್ಕೆ ಸಮಿತಿ ಭಾರತ ತಂಡಕ್ಕೆ ಹೊಸ ನಾಯಕನನ್ನು ಆಯ್ಕೆ ಮಾಡಿದೆ. ಕೆಲವು ಆಯ್ಕೆದಾರರು ಶ್ರೇಯಸ್ ಅಯ್ಯರ್ ಕಡೆಗೆ ಒಲವು ತೋರಿದ್ದರು. ಆದರೆ, ಅಂತಿಮ ಕ್ಷಣದಲ್ಲಿ ಅವರೂ ಸೂರ್ಯಕುಮಾರ್ರಿಗೆ ತಂಡದ ಜವಾಬ್ದಾರಿ ನೀಡಲು ನಿರ್ಧರಿಸಿದ್ದಾರೆ. ಹಿರಿಯ ಆಟಗಾರರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುರ್ಮಾಗೆ ವಿಶ್ರಾಂತಿ ನೀಡಲಾಗಿದೆ. ಹಾರ್ದಿಕ್ ಪಾಂಡ್ಯ ಗಾಯದಿಂದ ಇನ್ನೂ ಚೇತರಿಸಿಕೊಳ್ಳದ ಕಾರಣ ಸೂರ್ಯಕುಮಾರ್ ಯಾದವ್ಗೆ ನಾಯಕತ್ವದ ಜವಾಬ್ದಾರಿ ನೀಡಲಾಗಿದೆ. ಇನ್ನೂ ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಟಿ-20 ಸರಣಿಗೆ ಬಿಸಿಸಿಐ 15 ಮಂದಿಯ ಭಾರತ ತಂಡವನ್ನು ಪ್ರಕಟಿಸಿದೆ. ಸೂರ್ಯಕುಮಾರ್ ಯಾದವ್ ನಾಯಕ ಹಾಗೂ ಋತುರಾಜ್ ಗಾಯಕ್ವಾಡ್ ಉಪನಾಯಕರಾಗಿದ್ದಾರೆ. ಶ್ರೇಯಸ್ ಅಯ್ಯರ್ ಅವರು ರಾಯ್ಪುರ ಮತ್ತು ಬೆಂಗಳೂರಿನಲ್ಲಿ ನಡೆಯಲಿರುವ ಕೊನೆಯ ಎರಡು ಟಿ-20 ಪಂದ್ಯಗಳಿಗೆ ಉಪ ನಾಯಕರಾಗಿ ತಂಡವನ್ನು ಸೇರಿಕೊಳ್ಳಲಿದ್ದಾರೆ. ಭಾರತ ತಂಡ : ಸೂರ್ಯಕುಮಾರ್ ಯಾದವ್…
ಅಹಮದಾಬಾದ್: ಭಾರತದ ಆತಿಥ್ಯದಲ್ಲಿ ಆಯೋಜನೆಗೊಂಡಿದ್ದ 2023ರ ಏಕದಿನ ವಿಶ್ವಕಪ್ ಟೂರ್ನಿ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಆದ್ರೆ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾದ ಸೋಲು ಭಾರತೀಯ ಅಭಿಮಾನಿಗಳಿಗೆ ಇಂದಿಗೂ ಅರಗಿಸಿಕೊಳ್ಳಲಾರದ ನೋವು ತರಿಸಿದೆ. ಟೀಂ ಇಂಡಿಯಾ (Team India) ಬೆಂಬಲಿಸಲು ಮೈದಾನದಲ್ಲಿ ನೆರೆದಿದ್ದ ಲಕ್ಷಾಂತರ ಮಂದಿ ಕೊನೆಯಲ್ಲಿ ಕಣ್ಣಲ್ಲಿ ನೀರು ತುಂಬಿಕೊಂಡು ಹೊರಟಿದ್ದನ್ನು ಮರೆಯುವಂತಿಲ್ಲ. ಈಗಲೂ ಅಭಿಮಾನಿಗಳು ಸೋಲಿನ ಕ್ಷಣಗಳನ್ನು ಮೆಲುಕುಹಾಕುತ್ತಿದ್ದಾರೆ. ವಿಶ್ವಕಪ್ ಫೈನಲ್ನಲ್ಲಿ ಭಾರತ ಆಸೀಸ್ ಎದುರು ಸೋತ ನಂತರ ಟೀಂ ಇಂಡಿಯಾದ ಭಾವುಕ ಚಿತ್ರಗಳು ಜಾಲತಾಣದಲ್ಲಿ ಸದ್ದು ಮಾಡ್ತಿವೆ. ಚಿತ್ರರಂಗದ ಸೆಲಬ್ರಿಟಿಗಳು ಸೇರಿದಂತೆ ರಾಜಕೀಯ ನಾಯಕರು ಕೂಡ ಟೀಂ ಇಂಡಿಯಾ ಆಟಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಎಲ್ಲದರ ಮಧ್ಯೆ ಕ್ರಿಕೆಟಿಗ ವಿರಾಟ್ ಕೊಹ್ಲಿ ಮತ್ತು ಅವರ ಪತ್ನಿ ಅನುಷ್ಕಾ ಶರ್ಮಾ (Anushka Sharma) ಅವರ ಭಾವುಕ ಫೋಟೋಗಳು ಅಭಿಮಾನಿಗಳನ್ನೂ ಭಾವುಕರಾಗುವಂತೆ ಮಾಡಿವೆ. ವಿಶ್ವಕಪ್ನ ಪ್ರತಿ ಪಂದ್ಯಕ್ಕೂ ಹಾಜರಾಗುತ್ತಿದ್ದ ಅನುಷ್ಕಾ ಶರ್ಮಾ, ಕೊಹ್ಲಿ ಅವರಿಂದ ಸಿಡಿದ ಸಾಲು ಸಾಲು ದಾಖಲೆಗಳನ್ನ ಕಣ್ತುಂಬಿಕೊಂಡಿದ್ದರು. ಸ್ಟೇಡಿಯಂನಲ್ಲೇ ಕುಣಿದು…
ಅಹಮದಾಬಾದ್: ಐಸಿಸಿ ಟೂರ್ನಿಗಳಲ್ಲಿ ಟೀಂ ಇಂಡಿಯಾದ (Team India) ಪ್ರಶಸ್ತಿ ಗೆಲ್ಲುವ ಬರ ಮುಂದುವರಿದಿದೆ. ಭಾನುವಾರ (ನ.19) ಆಸ್ಟ್ರೇಲಿಯಾ (Australia) ವಿರುದ್ಧ ನಡೆದ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಸೋಲನುಭವಿಸಿದ ಟೀಂ ಇಂಡಿಯಾ ತಾಯ್ನಾಡಿನಲ್ಲಿ ಟ್ರೋಫಿ ಗೆಲ್ಲುವ ಅವಕಾಶ ಕೈಚೆಲ್ಲಿತು. 2003ರಲ್ಲೂ ಆಸ್ಟ್ರೇಲಿಯಾ ಎದುರು ಫೈನಲ್ನಲ್ಲಿ ಭಾರತ ಮುಗ್ಗರಿಸಿತ್ತು. 2023ರಲ್ಲೂ ಅದೃಷ್ಟ ಕೈ ಹಿಡಿಯದೇ ಹೋಯಿತು. ಆದ್ರೆ ಅಭಿಮಾನಿಗಳಿಗೆ ಮಾತ್ರ ಈ ನೋವನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ. ಈ ಕುರಿತು ಟೀಂ ಇಂಡಿಯಾ ಯುವ ಆರಂಭಿಕ ಆಟಗಾರ ಶುಭಮನ್ ಗಿಲ್ (Shubman Gill) ಭಾವುಕ ನುಡಿಗಳನ್ನು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಕಳೆದ ರಾತ್ರಿಯಿಂದಲೂ ಇನ್ನೂ ವಿಶ್ವಕಪ್ ಕಳೆದುಕೊಂಡ ನೋವು ಕಡಿಮೆಯಾಗಿಲ್ಲ. ಕೆಲವೊಮ್ಮೆ ಎಷ್ಟು ಕೊಡುಗೆ ನೀಡಿದರೂ ಸಾಲೋದಿಲ್ಲ. ಹಾಗಾಗಿ ನಮ್ಮ ಅಂತಿಮ ಗುರಿ ಕಳೆದುಕೊಂಡಿದ್ದೇವೆ. ಆದ್ರೆ ಈ ಪ್ರಯಾಣದ ಪ್ರತಿಯೊಂದು ಹೆಜ್ಜೆಯು ನಮ್ಮ ತಂಡದ ಉತ್ಸಾಹ ಮತ್ತು ಸಮರ್ಪಣೆಗೆ ಸಾಕ್ಷಿಯಾಗಿದೆ. ಏಳು ಬೀಳುಗಳ ನಡುವೆಯೂ ತಳಮಟ್ಟದಿಂದಲೂ ನಮಗೆ ಅಭಿಮಾನಿಗಳಿಂದ (Team India Fans) ಸಿಕ್ಕ…
ಅಹಮದಾಬಾದ್: ನರೇಂದ್ರ ಮೋದಿ ಸ್ಟೇಡಿಯಂನಲ್ಲಿ (Narendra Modi Stadium Ahemadabad) ನಡೆದ ವಿಶ್ವಕಪ್ 2023ರ ಫೈನಲ್ (World Cup 2023) ಪಂದ್ಯದಲ್ಲಿ ಟೀಂ ಇಂಡಿಯಾ ಸೋಲು ಕಂಡಿದ್ದು, ಆಟಗಾರರು ಕಣ್ಣೀರಾಕಿದ್ದಾರೆ. ಈ ವೇಳೆ ಕಣ್ಣೀರು ಹಾಕುತ್ತಿದ್ದ ವಿರಾಟ್ ಕೊಹ್ಲಿಯನ್ನು ಆಸ್ಟ್ರೇಲಿಯಾ ಆಟಗಾರ ಮ್ಯಾಕ್ಸ್ವೆಲ್ (Maxwell) ಅಪ್ಪಿ ಸಂತೈಸಿದರು. ಬೇಸರದಲ್ಲಿದ್ದ ವಿರಾಟ್ ಕೊಹ್ಲಿಯನ್ನು (Virat Kohli) ಮ್ಯಾಕ್ಸ್ವೆಲ್ ಬಿಗಿದಪ್ಪಿ ಸಾಂತ್ವ ಹೇಳಿದರಲ್ಲದೇ ಜೆರ್ಸಿಗೆ (Jeresey) ಕೊಹ್ಲಿಯಿಂದ ಸಹಿ ಹಾಕಿಸಿಕೊಂಡಿದ್ದಾರೆ. ಸದ್ಯ ಕೊಹ್ಲಿಯನ್ನು ಅಪ್ಪಿ ಹಿಡಿದ ಮ್ಯಾಕ್ಸ್ ವೆಲ್ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ ಕೊಹ್ಲಿ, ಮ್ಯಾಕ್ಸ್ ವೆಲ್ ಫೋಟೋವನ್ನು ಐಸಿಸಿ ತಮ್ಮ ಎಕ್ಸ್ ಖಾತೆಯಲ್ಲಿ ಶೇರ್ ಮಾಡಿದ್ದು, ಜೊತೆಗೆ ಗೌರವ ಮತ್ತು ಅಭಿಮಾನದ ಸಂಕೇತ ಎಂದು ಕ್ಯಾಪ್ಷನ್ ನೀಡಿದೆ. ಸದ್ಯ ಫೋಟೋ ನೋಡಿದ ಎಲ್ಲರೂ ಭಾವುಕರಾಗುತ್ತಿದ್ದಾರೆ. ಇತ್ತ ಅನುಷ್ಕಾ ಶರ್ಮಾ (Anushka Sharma) ಫೋಟೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಸದ್ದು ಮಾಡುತ್ತಿದೆ.