Author: AIN Author

ಬೆಂಗಳೂರು: ಆರ್ ಅಶೋಕ್ ವಿಪಕ್ಷ ನಾಯಕನಾಗಿ ಆಯ್ಕೆಯಾದ ಬಳಿಕ ರಾಜ್ಯ ಬಿಜೆಪಿಗೆ ಬೇರೆಯದ್ದೇ ಖದರ್ ಬಂದಂತಿದೆ, ಪಕ್ಷದ ಶಾಸಕರಿಗೆ ಸಮನ್ವಯತೆಯ ಪಾಠ ಹೇಳುತ್ತಿರುವ ಸಾಮ್ರಾಟ ಹಿರಿಯ ನಾಯಕರ ಸಲಹೆ ಸೂಚನೆಗಳ ಜೊತೆ ಮಠಾಧೀಶರ ಆಶೀರ್ವಾದ ಪಡೆಯುತ್ತಿದ್ದಾರೆ. ಅದೇ ರೀತಿ ಇಂದು ಆರ್ ಅಶೋಕ್ ಅವರು ಮಾಜಿ ಮುಖ್ಯಮಂತ್ರಿಗಳು, ಮಾಜಿ‌ ಕೇಂದ್ರ ಸಚಿವರು, ಸಂಸದರು ಆದ ಡಿ ವಿ ಸದಾನಂದ ಗೌಡರ ನಿವಾಸಕ್ಕೆ ತೆರಳಿ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಶಾಸಕ ಮುನಿರಾಜು ಹಾಗೂ ಇತರರು ಉಪಸ್ಥಿತರಿದ್ದರು. ರಾಜ್ಯ ಕಾಂಗ್ರೆಸ್ ಸರ್ಕಾರದ ಮೇಲೆ ಕೆಂಡ ಕಾರುತ್ತಿರುವ ಕೇಸರಿ ಸಾಮ್ರಾಟ ಸಿದ್ದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದು ಇಂದಿನಿಂದ ರಾಜ್ಯಾದ್ಯಂತ ಬರ ಪ್ರವಾಸ ಆರಂಭಿಸ್ತಿದ್ದಾರೆ. ಅಶೋಕ್ ಆಡುತ್ತಿರುವ ಮಾತುಗಳು ಕೈ ನಾಯಕರಿಗೆ ಎಚ್ಚರಿಕೆಯ ಕರೆಗಂಟೆಯಾಗ್ತಿವೆ.

Read More

ಕಲಬುರಗಿ: ವಿಧಾನಸಭೆ ವಿರೋಧ ಪಕ್ಷದ ನಾಯಕನಾದ ನಂತ್ರ ಫುಲ್ ಆಕ್ಟೀವ್ ಆಗಿರುವ ಸಾಮ್ರಾಟ್ ಆರ್ ಅಶೋಕ್ ಇಂದಿನಿಂದ ಬರ ಅಧ್ಯಯನ ಶುರು ಮಾಡಿದ್ದಾರೆ.. ಅದ್ರಲ್ಲೂ ಕಲಬುರಗಿಯಿಂದಲೇ ಬರ ಅಧ್ಯಯನ ಆರಂಭ ಮಾಡುವ ಮೂಲಕ ಸರ್ಕಾರದ ಕಣ್ಣು ತೆರೆಸಲು ಮುಂದಾಗಿದ್ದಾರೆ. ಗ್ರಾಮೀಣ ಮತಕ್ಷೇತ್ರದ ಮೊಕಿನ್ ತಾಂಡಾದ ರೈತರ ಹೊಲಗಳಿಗೆ ಭೇಟಿ ಕೊಟ್ರು ಇದೇವೇಳೆ ರೈತರಿಂದ ಮಾಹಿತಿ ಪಡೆದು ಹಾನಿಯಾದ ವಿವರ ಪಡೆದು ನಂತ್ರ ಅಳಂದ ತಾಲೂಕಿನ ಕಡಗಂಚಿಯ ಗ್ರಾಮದ ರೈತರೊಡನೆ ಚರ್ಚಿಸಿದ್ರು.

Read More

ತುಮಕೂರು: ಪೊಲೀಸರ 112 ವಾಹನವನ್ನೆ ಓಡಿಸಿಕೊಂಡು ಪರಾರಿಯಾದ ವ್ಯಕ್ತಿಯನ್ನು ಸಿನಿಮಾ ಸ್ಟೈಲಿ‌ನಲ್ಲಿ ಚೇಸ್ ಮಾಡಿ ಪತ್ತೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ನಾರಾನಹಳ್ಳಿಯಲ್ಲಿ ನಡೆದಿದೆ. ತಡರಾತ್ರಿ ಗ್ರಾಮದ ಸಿಎಸ್ ಪುರ ಪೊಲೀಸ್ ಠಾಣೆ ಯ ವ್ಯಾಪ್ತಿಯಲ್ಲಿ ಸಹೋದರಿಬ್ಬರ ನಡುವೆ ಗಲಾಟೆ ಆಗ್ತಿತ್ತು. ಈ ವೇಳೆ ಆರೋಪಿ ಸಹೋದರ 112 ಗೆ ಕರೆ ಮಾಡಿದ್ದರಿಂದ ಗ್ರಾಮಕ್ಕೆ ವಾಹನ ಬಂದಿತ್ತು.. ಈ ವೇಳೆ ಆರೋಪಿ ಹಿಂದೆ ಇದ್ದ 112 ಕಾರಿನ ಮೇಲೆ ಕಲ್ಲು ಎತ್ತಿಹಾಕಿದ್ದಾನೆ. https://ainlivenews.com/geo-scientist-statue-murder-case-explosive-issue-comes-to-light-during-investigation/  ಇದನ್ನ ಗಮನಿಸಲು 112 ಚಾಲಕ ಹಿಂದೆ ಬಂದಿದ್ದಾನೆ.. ಈ ವೇಳೆ ಮುಂದೆ ಹೋಗಿ ಕಾರು ತೆಗೆದುಕೊಂಡು ಆರೋಪಿ ಎಸ್ಕೇಪ್‌ ಆಗಿದ್ದಾನೆ. ಸತತ ಮೂರು ಗಂಟೆಗಳ ಕಾಲ ಹುಡುಕಾಟ ನಡೆಸಿ ಆರೋಪಿಯನ್ನೂ ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ತುಮಕೂರು ತಾಲೂಕಿನ ಹೆಬ್ಬೂರು ಬಳಿ ವಾಹನ ಪತ್ತೆಯಾಗಿದ್ದು, ಆರೋಪಿಯನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನೂ ಈ ಘಟನೆ ಸಂಭಂಧ ಹೆಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು: ಆರ್ ಅಶೋಕ್ ವಿಪಕ್ಷ ನಾಯಕನಾಗಿ ಆಯ್ಕೆಯಾದ ಬಳಿಕ ರಾಜ್ಯ ಬಿಜೆಪಿಗೆ ಬೇರೆಯದ್ದೇ ಖದರ್ ಬಂದಂತಿದೆ, ಪಕ್ಷದ ಶಾಸಕರಿಗೆ ಸಮನ್ವಯತೆಯ ಪಾಠ ಹೇಳುತ್ತಿರುವ ಸಾಮ್ರಾಣ ಹಿರಿಯ ನಾಯಕರ ಸಲಹೆ ಸೂಚನೆಗಳ ಜೊತೆ ಮಠಾಧೀಶರ ಆಶೀರ್ವಾದ ಪಡೆಯುತ್ತಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಮೇಲೆ ಕೆಂಡ ಕಾರುತ್ತಿರುವ ಕೇಸರಿ ಸಾಮ್ರಾಟ ಸಿದ್ದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದು ನಾಳೆಯಿಂದ ರಾಜ್ಯಾದ್ಯಂತ ಬರ ಪ್ರವಾಸ ಆರಂಭಿಸ್ತಿದ್ದಾರೆ. ಅಶೋಕ್ ಆಡುತ್ತಿರುವ ಮಾತುಗಳು ಕೈ ನಾಯಕರಿಗೆ ಎಚ್ಚರಿಕೆಯ ಕರೆಗಂಟೆಯಾಗ್ತಿವೆ. ಬಿಜೆಪಿಗೆ ಇಬ್ಬರು ಸಾರಥಿಗಳು ಸಿಕ್ಕಿದ್ದಾರೆ. ವಿರೋಧ ಪಕ್ಷದ ನಾಯಕನಾಗಿ ಆರ್.ಅಶೋಕ್ ಆಯ್ಕೆಯಾಗಿದ್ರೆ, ಬಿಜೆಪಿ ರಾಜ್ಯಾಧ್ಯಕ್ಷನಾಗಿ ಬಿವೈ ವಿಜಯೇಂದ್ರ ಪಕ್ಷ ಸಂಘಟನೆಗಾಗಿ ಸುತ್ತಾಡ್ತಿದ್ದಾರೆ. ಇಬ್ಬರು ನಾಯಕನ ಆಯ್ಕೆಯಿಂದ ಬಿಜೆಪಿ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಬಂದಿದ್ದು, ಸರ್ಕಾರದ ವಿರುದ್ಧ ಮೊದಲ ಪೂರ್ಣ ಪ್ರಮಾಣದ ಹೋರಾಟಕ್ಕೆ ಬೆಳಗಾವಿ ಅಧಿವೇಶನಲ್ಲಿ ವೇದಿಕೆಯೂ ಸಿದ್ದವಾಗಿದೆ. ರಾಜ್ಯಾಧ್ಯಕ್ಷ ಬದಲಾವಣೆ ಹಾಗೂ ವಿರೋಧ ಪಕ್ಷದ ನಾಯಕನ ಆಯ್ಕೆ ವಿಳಂಬದಿಂದ ಪಕ್ಷದ ಕಾರ್ಯಕರ್ತರಲ್ಲಿ ಹುಮ್ಮಸ್ಸು ಕುಗ್ಗಿತ್ತು. ಜೊತೆಗೆ ಆಂತರಿಕವಾಗಿ ಭಿನ್ನಾಭಿಪ್ರಾಯಗಳೂ ಪಕ್ಷಕ್ಕೆ…

Read More

ಶಾರುಖ್‌ ಖಾನ್‌ ನಟನೆಯ ಡಂಕಿ ಸಿನಿಮಾದ ಟೀಸರ್ ಈಗಾಗಲೇ ಭಾರೀ ಸದ್ದು ಮಾಡುತ್ತಿದೆ. ಶಾರುಖ್ ಖಾನ್ ಜನ್ಮದಿನಕ್ಕೆ ಡಂಕಿ ಡ್ರಾಪ್ 1 ಎಂಬ ಟೈಟಲ್‌ನಡಿ ಬಂದ ಝಲಕ್ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿಸಿದೆ. ಇದೀಗ ಡಂಕಿ ಸಿನಿಮಾದ ಮೊದಲ ಹಾಡು ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಡಂಕಿ ಸಿನಿಮಾದ ರೋಮ್ಯಾಂಟಿಕ್ ನಂಬರ್ ಇದೇ ತಿಂಗಳ‌ 22ರಂದು ರಿಲೀಸ್ ಆಗಲಿದೆ. ಲಪ್ ಪಟ್ ಗಯಾ ಎಂಬ ಸಾಹಿತ್ಯವುಳ್ಳ ಸುಮಧುರ ಹಾಡಿಗೆ ಪ್ರೀತಂ ಚಕ್ರವರ್ತಿ ಟ್ಯೂನ್ ಹಾಕಿದ್ದಾರೆ. ಹೇಗಿರಲಿ ಡಂಕಿ ಮೊದಲ ಗಾನಬಜಾನ ಎಂಬ ನಿರೀಕ್ಷೆ ಹೆಚ್ಚಿಸಿದೆ. ರಾಜ್ ಕುಮಾರ್ ಹಿರಾನಿ, ಅಭಿಜಿತ್ ಜೋಶಿ ಮತ್ತು ಕನಿಕಾ ಧಿಲ್ಲೋನ್ ಡಂಕಿಗೆ ಕಥೆ ಬರೆದರೆ, ರಾಜ್ ಕುಮಾರ್ ಹಿರಾನಿ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಹಾರ್ಡಿ ಪಾತ್ರದಲ್ಲಿ ಶಾರುಖ್ , ಮನು ಪಾತ್ರದಲ್ಲಿ ತಾಪ್ಸಿ, ರಾಜಕುಮಾರ್ ಹಿರಾನಿ ಫೇವರಿಟ್ ಆ್ಯಕ್ಟರ್ ಬೊಮನ್ ಇರಾನಿ ಇಲ್ಲಿ ಗುಲಾಟಿ ಅನ್ನುವ ಪಾತ್ರ ಮಾಡಿದ್ದಾರೆ. ಹೀಗೆ ಹೆಸರಾಂತ ಕಲಾವಿದರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.…

Read More

ಟೆಲ್ ಅವಿವ್: ಯುದ್ಧಪೀಡಿತ ಗಾಜಾ ಪಟ್ಟಿಯ (Gaza Strip) ಅತಿದೊಡ್ಡ ಆಸ್ಪತ್ರೆ ಅಲ್ ಶಿಫಾವನ್ನು (Al-Shifa hospital) ಹಮಾಸ್ (Hamas) ತಮ್ಮ ಉಗ್ರ ಚಟುವಟಿಕೆಗಳ ತಾಣವಾಗಿಸಿಕೊಂಡಿರುವುದಾಗಿ ಇಸ್ರೇಲ್ (Israel) ವೀಡಿಯೋ ಸಾಕ್ಷಿ ಸಮೇತ ತಿಳಿಸಿದೆ. ಅಲ್ ಶಿಫಾ ಆಸ್ಪತ್ರೆಯಲ್ಲಿ ಹಮಾಸ್ ಉಗ್ರರು ಒತ್ತೆಯಾಳುಗಳನ್ನು (Hostages) ಇಟ್ಟಿರುವ ವೀಡಿಯೋವೊಂದನ್ನು ಇಸ್ರೇಲ್ ಬಿಡುಗಡೆಗೊಳಿಸಿದೆ. ಹಮಾಸ್ ಉಗ್ರರ ಮತ್ತೊಂದು ಮುಖ ಬಯಲಾಗಿದೆ. ಅಕ್ಟೋಬರ್ 7ರಂದು ಇಸ್ರೇಲ್ ಮೇಲೆ ದಾಳಿ ಮಾಡಿದ ಹಮಾಸ್ ಉಗ್ರರು ನೇಪಾಳ, ಥಾಯ್ಲೆಂಡ್ ನಾಗರಿಕರನ್ನು ಒತ್ತೆಯಾಳುಗಳನ್ನಾಗಿ ಮಾಡಿಕೊಂಡಿದೆ. ಆ ಒತ್ತೆಯಾಳುಗಳನ್ನು ಅಲ್ ಶಿಫಾ ಆಸ್ಪತ್ರೆಯಲ್ಲಿಯೇ ಇರಿಸಿದೆ. ಇಸ್ರೇಲ್‌ನಲ್ಲಿದ್ದ ಇವರನ್ನು ಹಮಾಸ್ ಉಗ್ರರು ಅಪಹರಿಸಿ ಅವರ ಮೇಲೆ ಹಲ್ಲೆ ನಡೆಸಿ ಗಾಜಾ ಆಸ್ಪತ್ರೆಯಲ್ಲಿ ಇರಿಸಿದೆ ಎಂದು ವೀಡಿಯೋ ಸಮೇತ ಇಸ್ರೇಲ್ ಸೇನೆ ಎಕ್ಸ್‌ನಲ್ಲಿ ಪೋಸ್ಟ್ ಅನ್ನು ಹಂಚಿಕೊಂಡಿದೆ. https://twitter.com/IDF/status/1726319791865016493?ref_src=twsrc%5Etfw%7Ctwcamp%5Etweetembed%7Ctwterm%5E1726319791865016493%7Ctwgr%5E26a1097b952dd255050354de47f06b81f2459ea9%7Ctwcon%5Es1_&ref_url=https%3A%2F%2Fpublictv.in%2Fisrael-shares-video-of-hostages-at-gazas-al-shifa-hospital%2F ಇಷ್ಟು ಮಾತ್ರವಲ್ಲದೇ ಅಲ್ ಶಿಫಾ ಆಸ್ಪತ್ರೆಯಲ್ಲಿ ಸುರಂಗವೊಂದನ್ನು ಪತ್ತೆಹಚ್ಚಿರುವ ಮತ್ತೊಂದು ವೀಡಿಯೋವನ್ನು ಇಸ್ರೇಲ್ ಸೇನೆ ಹಂಚಿಕೊಂಡಿದೆ. ಅಲ್ ಶಿಫಾ ಆಸ್ಪತ್ರೆಯ ಸಂಕೀರ್ಣದ ಕೆಳಗಡೆ ಸುಮಾರು 55 ಮೀ.…

Read More

ಬೆಂಗಳೂರು: ನನ್ನನ್ನು ಅಮಾನತು ಮಾಡಿರೋ ಪಕ್ಷದ ನಿರ್ಧಾರವೇ ಕಾನೂನು ಬಾಹಿರ ಎಂದು ಮತ್ತೆ ದೇವೇಗೌಡ (HD Deve Gowda) ಹಾಗೂ ಕುಮಾರಸ್ವಾಮಿ (HD Kumaraswamy) ವಿರುದ್ಧ ಸಿಎಂ ಇಬ್ರಾಹಿಂ (CM Ibrahim) ವಾಗ್ದಾಳಿ ನಡೆಸಿದ್ದಾರೆ. ಅಮಾನತು ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ದೇವೇಗೌಡರು ಪ್ರಧಾನಿ ಆಗಿದ್ದರು. 70 ವರ್ಷ ರಾಜಕೀಯದಲ್ಲಿ ಇರೋರು. ದೇವೇಗೌಡರು ತಪ್ಪು ಮೇಲೆ ತಪ್ಪು ಮಾಡ್ತಿದ್ದಾರೆ. ನನ್ನನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ತೆಗೆದಿದ್ದೇ ತಪ್ಪು. ನನ್ನನ್ನು ತೆಗೆಯಬೇಕಾದ್ರೆ ಸಭೆ ಮಾಡಿ 2/3 ಮೆಜಾರಿಟಿಯಲ್ಲಿ ತೆಗೆಯಬೇಕು. ಇಲ್ಲದೆ ಹೋದ್ರೆ ಅವಧಿ ಮುಗಿಯಬೇಕು. ಇಲ್ಲ ನಾನು ಸಾಯಬೇಕು ಎಂದು ಹೇಳಿದರು. ಕೇರಳದಲ್ಲಿ ಮೀಟಿಂಗ್ ಕರೆದಿದ್ದು ನಾನು ಅಲ್ಲ. ರಾಷ್ಟ್ರೀಯ ಉಪಾಧ್ಯಕ್ಷ ಸಿಕೆ ನಾನು ಕರೆದಿದ್ದರು. 12 ರಾಜ್ಯದ ಜಿಲ್ಲಾ ಅಧ್ಯಕ್ಷರು ಆ ಸಭೆಯಲ್ಲಿ ಭಾಗವಹಿಸಿದ್ದರು. ಆ ಸಭೆಯಲ್ಲಿ ದೇವೇಗೌಡರು ಮಗನ ಮಾತು ಕೇಳಿ ಮೈತ್ರಿ ಮಾಡಿಕೊಂಡಿದ್ದಾರೆ. ಹೀಗಾಗಿ ದೇವೇಗೌಡರಿಗೆ ಮತ್ತೊಮ್ಮೆ ಅವಕಾಶ ಕೊಡೋಣ ಅಂತ ತೀರ್ಮಾನ ಆಗಿದೆ ಎಂದರು. ಕುಮಾರಸ್ವಾಮಿ ಏಕಾಏಕಿಯಾಗಿ ಮೈತ್ರಿ ಮಾಡಿಕೊಂಡಿದ್ದಾರೆ.…

Read More

ಬೆಂಗಳೂರು:- ಬೆಸ್ಕಾಂ ನಿರ್ಲಕ್ಷ್ಯಕ್ಕೆ ಕಳೆದ 5 ವರ್ಷದಲ್ಲಿ 81 ಜನರಿಗೆ ವಿದ್ಯುತ್​ ತಂತಿ ತಗುಲಿದ್ದು, ಇದರಲ್ಲಿ ಒಟ್ಟು 70 ಜನ ಮೃತಪಟ್ಟಿದ್ದಾರೆ. ಇದಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಆಮ್ ಆದ್ಮಿ ಪಕ್ಷ ದೂರಿದೆ. ನೆನ್ನೆಯಷ್ಟೇ ತಾಯಿ ಮತ್ತು ಮಗು ವಿದ್ಯುತ್ ತಂತಿ ತುಳಿದು ಸಾವನ್ನಪ್ಪಿದೆ. ಈ ಸಂಬಂಧ ಬ್ರ್ಯಾಂಡ್ ಬೆಂಗಳೂರಿನ ಕುರಿತು ಮಾತನಾಡುವ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಆಮ್ ಆದ್ಮಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಸವಾಲು ಹಾಕಿದ್ದಾರೆ. ಬ್ರ್ಯಾಂಡ್ ಬೆಂಗಳೂರು ಮುನ್ನ ನಮ್ಮೊಂದಿಗೆ ಪಾದಯಾತ್ರೆ ಮಾಡಿ ಎಂದು ಆಗ್ರಹಿಸಿದ್ದಾರೆ. ಈ ವರ್ಷ ಬೆಸ್ಕಾಂ ವಿದ್ಯುತ್‌ ತಂತಿ ಅವಘಡದಿಂದ 8 ಮಂದಿ ಮೃತಪಟ್ಟಿದ್ದಾರೆ. ಕಳೆದ ವರ್ಷ ಒಟ್ಟು 21 ಜನರಿಗೆ ಬೆಸ್ಕಾಂ ವಿದ್ಯುತ್​ ತಂತಿ ತಗುಲಿತ್ತು. ಈ ಪೈಕಿ 19 ಜನ ಸಾವೀಗೀಡಾಗಿದ್ದು, ಇಬ್ಬರು ಗಾಯಗೊಂಡಿದ್ದರು. ಅಧಿಕಾರಿಗಳ ಬೇಜವಾಬ್ದಾರಿಗಳಿಂದ ಸಂಭವಿಸುತ್ತಿರುವ ಸಾವು-ನೋವುಗಳು ಅಮಾನವೀಯವಾಗಿವೆ ಎಂದರು. ನಿರಂತರವಾಗಿ ಇಂತಹ ದುರಂತಗಳು ನಡೆಯುತ್ತಿದ್ದರೂ ಅಧಿಕಾರದಲ್ಲಿರುವವರು ಮೃತಪಟ್ಟ ದುರ್ದೈವಿಗಳ ಕುಟುಂಬ…

Read More

ತಮಿಳು ನಾಡಿನ ಹೆಸರಾಂತ ನಟ ಹಾಗೂ ಡಿಎಂಡಿಕೆ (DMDK) ಮುಖ್ಯಸ್ಥ ಕ್ಯಾಪ್ಟನ್ ವಿಜಯಕಾಂತ್ (Captain Vijayakanth) ಅನಾರೋಗ್ಯದಿಂದ ಬಳಲುತ್ತಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ (Hospital) ದಾಖಲಿಸಲಾಗಿದೆ. ಕಳೆದೆರಡು ದಿನಗಳಿಂದ ಅವರು ತೀವ್ರ ಜ್ವರದಿಂದ ಬಳಲುತ್ತಿದ್ದಾರೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ. ಕ್ಯಾಪ್ಟನ್ ವಿಜಯಕಾಂತ್ ಅವರ ಆರೋಗ್ಯ ಸ್ಥಿತಿ ತೀರಾ ಹದಗೆಟ್ಟಿದೆ ಎಂದು ಮಾಧ್ಯಮಗಳು ವರದಿ ಮಾಡಿದರೆ, ದೇಸಿಯ ಮುರ್ಪೊಕ್ಕು ದ್ರಾವಿಡ ಕಳಗಂ ಪಕ್ಷ ಅದನ್ನು ನಿರಾಕರಿಸಿದೆ. ಮಾಧ್ಯಮಗಳು ಪ್ರಸಾರ ಮಾಡುವಂತೆ ಕ್ಯಾಪ್ಟನ್ ಅವರ ಆರೋಗ್ಯ ತೀರಾ ಹದಗೆಟ್ಟಿಲ್ಲ. ಜ್ವರ ಮತ್ತು ಶೀತದಿಂದ ಅವರು ಬಳಲುತ್ತಿದ್ದಾರೆ. ಇನ್ನೆರಡು ದಿನಗಳಲ್ಲಿ ಅವರು ಮನೆಗೆ ಬರಲಿದ್ದಾರೆ ಎಂದು ಹೇಳಿದ್ದಾರೆ. ಹಲವಾರು ವರ್ಷಗಳ ಕಾಲ ನಟರಾಗಿ ಚಿತ್ರೋದ್ಯಮಕ್ಕೆ ಸೇವೆ ಸಲ್ಲಿಸಿರುವ ಕ್ಯಾಪ್ಟನ್ ವಿಜಯಕಾಂತ್ ಅವರಿಗೆ 71 ವರ್ಷ ವಯಸ್ಸಾಗಿದೆ. ವಯೋ ಸಹಜ ಕಾಯಿಲೆಗಳು ಅವರನ್ನೂ ಕಾಡುತ್ತಿವೆ. ಎರಡು ದಿನಗಳ ಹಿಂದೆ ಅವರು ರೆಗ್ಯುಲರ್ ತಪಾಸಣೆಗೆ ಖಾಸಗಿ ಆಸ್ಪತ್ರೆಯಲ್ಲಿ ದಾಖಲೆಯಾಗಿದ್ದಾರೆ ಎಂದು ಗೊಂದಲದ ಹೇಳಿಕೆಗಳನ್ನೂ ಪಕ್ಷ…

Read More

ದಾವಣಗೆರೆ: ಸ್ಪೀಕರ್ ಯು ಟಿ ಖಾದರ್ ಗೆ ಬಿಜೆಪಿಯ ಶಾಸಕರು ಕೈ ಮುಗಿದು ನಮಸ್ಕಾರ ಮಾಡಬೇಕು ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ಸಚಿವ ಜಮೀರ್ ಅಹ್ಮದ್ ಹೇಳಿಕೆಗೆ ಮಾಜಿ ಸಚಿವ ಎಂ ಪಿ ರೇಣುಕಾಚಾರ್ಯ ಖಂಡನೆ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಸಚಿವ ಜಮೀರ್ ಅಹ್ಮದ್ ರನ್ನು ಮುಲಾಜಿಲ್ಲದೇ ಸಚಿವ ಸ್ಥಾನದಿಂದ ವಜಾ ಮಾಡುವಂತೆ ಒತ್ತಾಯ ಮಾಡಿದ್ದಾರೆ. ನಗರದಲ್ಲಿ ಸಚಿವ ಜಮೀರ್ ಅಹ್ಮದ್ ಹೇಳಿಕೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ರೇಣುಕಾಚಾರ್ಯ, ಜಮೀರ್ ನೀವು ರಾಜ್ಯದ ಸಚಿವರಾ? ಕೇವಲ ಅಲ್ಪ ಸಂಖ್ಯಾತರ ಸಚಿವರಾ..? ಈ ಬಗ್ಗೆ ಸಚಿವ ಜಮೀರ್ ಸ್ಪಷ್ಟನೆ ನೀಡಬೇಕು. ಇಲ್ಲದಿದ್ದರೆ ಮುಲಾಜಿಲ್ಲದೇ ಅವರನ್ನ ಮುಖ್ಯಮಂತ್ರಿಗಳು ವಜಾ ಮಾಡಬೇಕು ಎಂದು ಒತ್ತಾಯ ಮಾಡಿದರು. https://ainlivenews.com/geo-scientist-statue-murder-case-explosive-issue-comes-to-light-during-investigation/ ಇನ್ನು, ಟೀ ಮಾರಿಕೊಂಡು ಜೀವನ ಮಾಡುತ್ತೇನೆಂಬ ಬಿಜೆಪಿ ಶಾಸಕ ಬಸನಗಡೌಡ ಪಾಟೀಲ್ ಯತ್ನಾಳ ಹೇಳಿಕೆಗೆ ರೇಣುಕಾಚಾರ್ಯ ಪ್ರತಿಕ್ರಿಯೆ ನೀಡಿದ್ದಾರೆ. ಬಿವೈ ವಿಜಯೇಂದ್ರರ ಆಯ್ಕೆಯನ್ನು ಸ್ವಾಗತ ಮಾಡಲಾಗಿದೆ. ಯತ್ನಾಳ ಜೊತೆ ಹಿರಿಯರು ಮಾತನಾಡುವುದಾಗಿ ಹೇಳಿದ್ದಾರೆ. ಈ ಸಂದರ್ಭದಲ್ಲಿ ನಾವೆಲ್ಲರು ಒಟ್ಟಾಗಿ…

Read More