ಜನನ ದಿನಾಂಕ ಮತ್ತು ಸಮಯದ ಆಧಾರ ಮೇಲೆ ನಿಮ್ಮ ಜನ್ಮಜಾತಕ ಬರೆದು ಅದನ್ನು ಸರಿಯಾಗಿ ಪರೀಕ್ಷಿಸಿ ಈ ಕೆಳಕಂಡ ಮಾಹಿತಿಗಳು ಇದ್ದರೆ”ಲಕ್ಷ್ಮಿ ಯೋಗ” ಉಂಟಾಗುತ್ತದೆ. ರಾಶಿಚಕ್ರದ ಚಿಹ್ನೆಯು ಏರಿಕೆಯ ಸ್ಥಾನದಲ್ಲಿ ಯೋಗವನ್ನು ಪಡೆದುಕೊಂಡರೆ ಉತ್ತಮ ಅದೃಷ್ಟದಿಂದ ಕೂಡಿರುತ್ತದೆ. ಲಕ್ಷ್ಮಿ ದೇವಿಯು ತ್ರಿಕೋನ ಭಾವ ದೇವತೆ ಆಗಿರುತ್ತಾಳೆ. ಭಗವಾನ್ ವಿಷ್ಣು ಕೇಂದ್ರ ಭವನದ ದೇವರು. ಕೇಂದ್ರ ತ್ರಿಕೋನ ರಾಜ ಯೋಗದಲ್ಲಿ ಒಂತ್ತನೇ ಮನೆಯ ಅಧಿಪತಿ ಉದಾತ್ತನಾಗಿದ್ದರೆ ಉತ್ತಮ ಅದೃಷ್ಟವು ಪಡೆದುಕೊಳ್ಳುವವರು. ಈ ಯೋಗದಲ್ಲಿ ವಿವಿಧ ಮನೆಗಳಲ್ಲಿ ಗ್ರಹಗಳ ಸ್ಥಾನ ಹೇಗಿದೆ ಎನ್ನುವುದನ್ನು ಪರಿಗಣಿಸಿ, ಅದೃಷ್ಟದ ತೀರ್ಪು ತಿಳಿಸಲಾಗುವುದು. ಈ ಯೋಗ ಅಥವಾ ಕುಂಡಲಿಯ ಲೆಕ್ಕಾಚಾರವನ್ನು ಪಾಶ್ಚಾತ್ಯ ಜ್ಯೋತಿಷ್ಯದಲ್ಲಿ ತಿಳಿಯಬಹುದು. ಒಂಬತ್ತನೇ ಮನೆ ಅದು “ಭಾಗ್ಯಸ್ಥಾನ”. ಒಂಬತ್ತನೇ ಮನೆಯಲ್ಲಿ ತ್ರಿಕೋನ ಉಂಟಾದರೆ ಅದನ್ನು “ಶುಭ ಲಕ್ಷ್ಮಿ ಯೋಗ” ಎಂದು ಪರಿಗಣಿಸಲಾಗುತ್ತದೆ. ಈ ಯೋಗದಿಂದ ಸಂಪತ್ತಿನ ಆದಾಯ ಉಂಟಾಗುವುದು. ಐಷಾರಾಮಿ ಜೀವನ ನಡೆಸುವರು. ಐಷಾರಾಮಿ ವಸ್ತುಗಳ ಬಳಕೆ ಮತ್ತು ಸಂತೋಷವನ್ನು ಪಡೆದುಕೊಳ್ಳುವರು. ಕೇಂದ್ರ ತ್ರಿಕೋನ ರಾಜ…
Author: AIN Author
ಸೋಮಶೇಖರ್B.Sc ಜಾತಕ ಬರೆಯುವುದು, ಜಾತಕ ವಿಶ್ಲೇಷಣೆಗಾರರು, ರಾಶಿ ಹರಳು ತಿಳಿಸುವುದು. ವಂಶಪಾರಂಪರಿಕ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು. Mob.9353488403 ಒಂದು ಹೆಣ್ಣು ತನ್ನ ತವರು ಮನೆಯಲ್ಲಿ ತಿಂದು ಉಂಡು ಸಂತೋಷವಾಗಿ ಬೆಳೆದಿರುತ್ತಾಳೆ. ಅದೇ ಹೆಣ್ಣು ತನ್ನ ತಂದೆ-ತಾಯಿ, ಅಣ್ಣ-ತಮ್ಮ ,ಅಕ್ಕ-ತಂಗಿ, ಎಲ್ಲರಿಗೂ ಮುದ್ದಿನ ಮಗುವಾಗಿ ಬೆಳೆದಿರುತ್ತಾಳೆ . ಅದೇ ಹೆಣ್ಣು ಮದುವೆ ವಯಸ್ಸಿಗೆ ಬಂದಿದ್ದು ಮದುವೆ ಮಾಡಿಕೊಂಡು ಗಂಡನ ಮನೆಗೆ ಕಳಿಸುತ್ತಾರೆ. ಗಂಡನ ಮನೆಯಲ್ಲಿ ಎಲ್ಲರ ಪ್ರೀತಿಯ ಪ್ರೇಮಕ್ಕಿಂತ ಗಂಡನ ಪ್ರೀತಿ ಪ್ರೇಮ ಸುಖ ನೆಮ್ಮದಿ ಬಹಳ ಪ್ರಮುಖವಾದದ್ದು. ಜಾತಕವನ್ನು ನೋಡದೆ ಆಗಿರುವ ಮದುವೆ ಕಾರ್ಯ ಅಥವಾ ಪರಸ್ಪರ ಪ್ರೀತಿಸಿ ಆದ ಮದುವೆ ಕಾರ್ಯದಲ್ಲಿ ಗಂಡ-ಹೆಂಡತಿ ಮಧ್ಯೆ ನಿರಂತರವಾಗಿ ಜಗಳ, ಕಿರಿಕಿರಿ ,ಮನಸ್ತಾಪ, ಅನುಮಾನ ಎದುರಿಸುವ ಪ್ರಸಂಗ ಬರುತ್ತದೆ . ವಧು ವರರ ಸಾಲಾವಳಿ ಪರೀಕ್ಷಿಸುವಾಗ ಗಣ ಕೂಟ, ರಾಶಿ ಕೂಟ ,ನಾಡಿ ಇತ್ಯಾದಿ ತಾಳಿ ಆದರೆ ಸಾಕು, ಎಂದು ಜ್ಯೋತಿಷ್ಯಗಳು ವಿವಾಹ ನಿಶ್ಚಯಿಸಲು ಅನುಮತಿ ಕೊಡುತ್ತಾರೆ. ಜನ್ಮಂಗ ಲಗ್ನ…
ಸೂರ್ಯೋದಯ: 06.21 AM, ಸೂರ್ಯಾಸ್ತ : 05.50 PM ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078 ಕಾರ್ತೀಕ ಮಾಸ, ಶುಕ್ಲ ಪಕ್ಷ, ದಕ್ಷಿಣಾಯಣ, ಶರತ್ ಋತು, ತಿಥಿ: ಇವತ್ತು ಅಷ್ಟಮಿ 03:16 AM ತನಕ ನಂತರ ನವಮಿ ನಕ್ಷತ್ರ: ಇವತ್ತು ಶತಭಿಷ 08:01 PM ತನಕ ನಂತರ ಪೂರ್ವಾ ಭಾದ್ರ ಯೋಗ: ಇವತ್ತು ವ್ಯಾಘಾತ05:41 PM ತನಕ ನಂತರ ಹರ್ಷಣ ಕರಣ: ಇವತ್ತು ಬವ 03:16 AM ತನಕ ನಂತರ ಬಾಲವ 02:12 PM ತನಕ ನಂತರ ಕೌಲವ ರಾಹು ಕಾಲ: 03:00 ನಿಂದ 04:30 ವರೆಗೂ ಯಮಗಂಡ: 09:00 ನಿಂದ 10:30 ವರೆಗೂ ಗುಳಿಕ ಕಾಲ: 12:00 ನಿಂದ 01:30 ವರೆಗೂ ಅಮೃತಕಾಲ: 01.15 PM to 02.45 PM ಅಭಿಜಿತ್ ಮುಹುರ್ತ: ಬೆಳಗ್ಗೆ.11:39 ನಿಂದ ಮ.12:24 ವರೆಗೂ ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ. “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು” ಸೋಮಶೇಖರ್ ಗುರೂಜಿB.Sc ಜ್ಯೋತಿಷ್ಯ ಶಾಸ್ತ್ರ,…
ಮಂಡ್ಯ :- ಅನಧಿಕೃತವಾಗಿ ಖಾಸಗಿ ಕ್ಲಿನಿಕ್ ನಡೆಯುತ್ತಿದೆ ಎಂಬ ದೂರಿನ ಮೇರೆಗೆ ದಾಳಿ ಮಾಡಿರುವ ಆರೋಗ್ಯ ಇಲಾಖೆ ಅಧಿಕಾರಿಗಳು ಕ್ಲಿನಿಕ್ ಅನ್ನು ಮುಚ್ಚಿಸಿದ್ದಾರೆ. ಮದ್ದೂರು ತಾಲೂಕಿನ ಕೊಪ್ಪ ಗ್ರಾಮದಲ್ಲಿ ಕಾಲುವೆ ರಸ್ತೆಯಲ್ಲಿ ಉತ್ತರಪ್ರದೇಶ ಮೂಲದ ಡಾ.ಧೀರಜ್ಕುಮಾರ್ ಎಂಬುವರು ಅನಧಿಕೃತವಾಗಿ ವೆಂಕಟೇಶ್ವರ ಖಾಸಗಿ ಕ್ಲಿನಿಕ್ ಅನ್ನು ನಡೆಸುತ್ತಿದ್ದರು ಈ ಸಂಬಂಧ ಡಿಎಚ್ಓ ಅವರಿಗೆ ಸಾರ್ವಜನಿಕರು ದೂರು ನೀಡಿದ್ದರು. ಡಿಎಚ್ಓ ಸೂಚನೆ ಮೇರೆಗೆ ಸೋಮವಾರ ಕ್ಲಿನಿಕ್ಗೆ ದಿಡೀರ್ ಭೇಟಿ ನೀಡಿ ಪರಿಶೀಲಿನೆ ನಡೆಸಿದ ತಾಲೂಕು ವೈದ್ಯಾಧಿಕಾರಿ ಡಾ.ರವೀಂದ್ರ ಬಿ.ಗೌಡ, ಯಾವುದೇ ದಾಖಲೆಗಳಿಲ್ಲದೆ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಕ್ಲಿನಿಕ್ ಅನ್ನು ಮುಚ್ಚಿಸಿದ್ದಾರೆ. ಅನಧಿಕೃತವಾಗಿ ಕ್ಲಿನಿಕ್ ನಡೆಸುತ್ತಿದ್ದ ವೈದ್ಯರ ಬಳಿ ಬಿ.ಎ.ಎಂ.ಎಸ್. ಪದವಿ ಸರ್ಟಿಫಿಕೇಟ್, ಕ್ಲಿನಿಕ್ ನೋಂದಣಿ ಪತ್ರ ಇಲ್ಲದಿರುವುದು ಪತ್ತೆಯಾಗಿದೆ. ಬಯೋ ಮೆಡಿಕಲ್ ವೇಸ್ಟ್ ಅನ್ನು ವಿಲೇವಾರಿ ಮಾಡುವ ಬಗ್ಗೆಯೂ ವೈದ್ಯರ ಬಳಿ ಮಾಹಿತಿ ಇಲ್ಲ ಎಂದು ರವೀಂದ್ರ ಡಾ.ಗೌಡ ತಿಳಿಸಿದ್ದಾರೆ. ಈ ವೇಳೆ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ತಮ್ಮೆಗೌಡ, ಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದ ಅಧಿಕಾರಿಗಳು,…
ಕಲಬುರ್ಗಿ:- ಸಾಲಸೂಲ ಮಾಡಿ ಬೆಳೆದಿದ್ದ ಮೂರುವರೆ ಎಕರೆ ಕಬ್ಬು ಸುಟ್ಟು ಕರಕಲಾದ ಘಟನೆ ಕಲಬುರಗಿಯ ಕಡಣಿ ಗ್ರಾಮದಲ್ಲಿ ನಡೆದಿದೆ. ರೈತ ಹಣಮಂತರಾಯಗೆ ಸೇರಿದ ಹೊಲದಲ್ಲಿ ಶಾಟ್ ಸರ್ಕ್ಯೂಟ್ ಆಗಿ ಬೆಳೆದು ನಿಂತಿದ್ದ ಇಡೀ ಕಬ್ಬು ಹೊತ್ತಿ ಉರಿದಿದೆ. ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ದಳ ಬೆಂಕಿ ನಂದಿಸಿದೆ..ಆದ್ರೆ 2 ಲಕ್ಷಕ್ಕೂ ಅಧಿಕ ಮೌಲ್ಯದ ಕಬ್ಬು ಹಾನಿಯಾಗಿದ್ದು ಸರ್ಕಾರ ನೆರವಿಗೆ ಬರಬೇಕು ಅನ್ನೋದು ಅನ್ನದಾತನ ಅಳಲು.
ಮಂಡ್ಯ :- ಮದ್ದೂರು ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಕ್ರಿಯಾಯೋಜನೆ ರೂಪಿಸಿದ್ದು, ಶೀಘ್ರದಲ್ಲೇ ಎಲ್ಲಾ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ದೊರೆಯಲಿದೆ ಎಂದು ಶಾಸಕ ಕೆ.ಎಂ.ಉದಯ್ ಹೇಳಿದರು. ಮದ್ದೂರು ವಿಧಾನಸಭಾ ಕ್ಷೇತ್ರದ ಹನುಮಂತಪುರ, ಅಡಗನಹಳ್ಳಿ, ಮಾಲಗಾರನಹಳ್ಳಿ, ಸಾದೊಳಲು ಗ್ರಾಮಗಳಲ್ಲಿ 3 ಕೋಟಿ ರೂ.ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಸೋಮವಾರ ಮಾತನಾಡಿದರು. ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ಆಗಬೇಕಾಗಿದೆ. ರಸ್ತೆ, ಚರಂಡಿ, ಕುಡಿಯುವ ನೀರು, ಸಾರಿಗೆ, ಇಂಧನ, ಶಿಕ್ಷಣ ಸೇರಿದಂತೆ ಮೂಲ ಸೌಕರ್ಯಗಳಿಗೆ ಆದ್ಯತೆ ನೀಡಬೇಕಿದೆ, ಆದಷ್ಟು ಬೇಗ ಸರ್ಕಾರದಿಂದ ಹೆಚ್ಚಿನ ಅನುದಾನ ತಂದು ಎಲ್ಲಾ ಅಭಿವೃದ್ಧಿ ಕಾರ್ಯಗಳನ್ನ ಮಾಡಲಾಗುವುದು ಎಂದು ಭರವಸೆ ವ್ಯಕ್ತಪಡಿಸಿದರು. ಮುಖ್ಯಮಂತ್ರಿಗಳು ಮದ್ದೂರಿಗೆ ಬಂದಾಗ ಸ್ವಾಗತ ಮಾಡುವುದು ನಮ್ಮ ಕರ್ತವ್ಯ. ಹಾಗಾಗಿ ನಮ್ಮ ಮನೆಗೆ ಬಂದು ಆತಿಥ್ಯ ಸ್ವೀಕರಿಸಿದ್ದಾರೆ. ರಾಜಕೀಯ ವಿದ್ಯಮಾನಗಳ ಬಗ್ಗೆಯೂ ಚರ್ಚಿಸಿದ್ದಾರೆ. ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅನುದಾನವನ್ನು ಕೇಳಿದ್ದೇನೆ. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಅನುದಾನ ನೀಡುವ ಭರವಸೆ ನೀಡಿದ್ದು, ಜಿಲ್ಲಾ, ತಾಲೂಕು ಪಂಚಾಯಿತಿ…
ಜೈಪುರ:- ಕಾಂಗ್ರೆಸ್ ಪಕ್ಷ ಬುಡಸಮೇತ ಕಿತ್ತೊಗೆಯಲು ಜನತೆ ನಿರ್ಧರಿಸಿದ್ದಾರೆ ಎಂದು ಪ್ರಲ್ಹಾದ ಜೋಶಿ ಹೇಳಿದ್ದಾರೆ. ರಾಜಸ್ಥಾನ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಉಸ್ತುವಾರಿ ವಹಿಸಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಚುನಾವಣೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದಾರೆ. ಚುನಾವಣೆ ಸಂದರ್ಭದಲ್ಲಿನ ಕಾಂಗ್ರೆಸ್ ನಡೆಯೊಂದನ್ನು ಟೀಕಿಸಿರುವ ಅವರು ಅದಕ್ಕೆ ಸಂಬಂಧಿಸಿದಂತೆ ತಮ್ಮ ಅನಿಸಿಕೆ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಅಲೆ ಇದೆ ಎಂದು ಅವರು ಇಂದು ಒಂದು ಜಾಹೀರಾತು ನೀಡಿದ್ದಾರೆ. ಆದರೆ ಮುಖ್ಯಮಂತ್ರಿಯ ಸಾರ್ವಜನಿಕ ಸಭೆಗೇ ಜನರು ಬರುತ್ತಿಲ್ಲ. ಐದು ವರ್ಷಗಳಿಂದ ನಿದ್ರೆ ಮಾಡುತ್ತಿರುವ ಕಾಂಗ್ರೆಸ್ ಜನರಿಗೆ ಕೊಟ್ಟ ಒಂದು ಭರವಸೆಯನ್ನು ಕೂಡ ಈಡೇರಿಸಿಲ್ಲ ಎಂದು ಜೋಶಿ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದ ಜನತೆಗೆ ಸುಳ್ಳು ಹೇಳುವುದರಿಂದ ಅಲೆ ಸೃಷ್ಟಿಸಬಹುದು ಎಂಬುದು ಕಾಂಗ್ರೆಸ್ನವರ ಯೋಚನೆ. ಆದರೆ ಜನರು ಅವರನ್ನು ಬುಡಸಮೇತ ತೊಲಗಿಸಲು ನಿರ್ಧರಿಸಿದ್ದಾರೆ ಎಂಬುದಾಗಿ ರಾಜಸ್ಥಾನ ಕಾಂಗ್ರೆಸ್ ನಡೆ ವಿರುದ್ಧ ಸಚಿವ ಪ್ರಲ್ಹಾದ ಜೋಶಿ ಕಿಡಿಕಾರಿದ್ದಾರೆ.
ಚಾಮರಾಜನಗರ:- ತಾಲೂಕಿನ ಕಿಲಗೆರೆ ಗ್ರಾಮದ ಶ್ರೀ ಸಿದ್ದಪ್ಪಾಜಿ ದೇವಸ್ಥಾನದಲ್ಲಿ ಮೊದಲ ಕಾರ್ತೀಕ ಸೋಮವಾರದ ಅಂಗವಾಗಿ ೧೦೧ ದೀಪಗಳನ್ನು ಹಚ್ಚುವ ಮೂಲಕ ಸಡಗರದಿಂದ ಮೊದಲ ಕಾರ್ತೀಕ ಮಹೋತ್ಸವವನ್ನು ಆಚರಿಸಲಾಯಿತು. ಮಂಟೇಸ್ವಾಮಿ, ಸಿದ್ದಪ್ಪಾಜಿ, ರಾಚಪ್ಪಾಜಿ, ದೊಡ್ಡಮ್ಮತಾಯಿ, ಚೆನ್ನಾಜಮ್ಮ ದೇವರುಗಳಿಗೆ ತಮಟೆ, ಜಾಗಟೆ ಸದ್ದಿನೊಂದಿಗೆ ಪೂಜೆ ಸಲ್ಲಿಸಿ, ನಂತರ ಬಸವನಿಗೆ ಪೂಜೆ ಸಲ್ಲಿಸಿದ ಬಳಿಕ ಸಿದ್ದಪ್ಪಾಜಿ, ಮಂಟೇಸ್ವಾಮಿ ಕಂಡಾಯಗಳನ್ನು ಸತ್ತಿಗೆ, ಸೂರಪಾನಿ, ಛತ್ರಿ ಚಾಮರಗಳೊಂದಿಗೆ ದೇವಸ್ಥಾನದ ಸುತ್ತ ಮೂರು ಸುತ್ತು ಬರಲಾಯಿತು. ತದನಂತರ ದೇವಸ್ಥಾನದ ಮುಂದೆ ಜೋಡಿಸಿದ್ದ ೧೦೧ ದೀಪಗಳನ್ನು ಹಚ್ಚುವ ಮೂಲಕ ಮೊದಲ ಕಾರ್ತೀಕ ಮಹೋತ್ಸವವನ್ನು ಆಚರಿಸಿದರು. ಈ ವೇಳೆ ಗ್ರಾಮದ ಜನತೆ ಹಾಗೂ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಭಕ್ತಾದಿಗಳು ಪೂಜೆ ಸಲ್ಲಿಸಿ ದೇವರ ಕೃಪೆಗೆ ಪಾತ್ರರಾದರು. ಬಳಿಕ ಪ್ರಸಾದ ವಿನಿಯೋಗ ಮಾಡಲಾಯಿತು.
ಬೆಂಗಳೂರು:- ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ಬಸನಗೌಡ ಯತ್ನಾಳ್ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. NEP ಬಾಲ್ಯದ ಆರೈಕೆ ಮತ್ತು ಶಿಕ್ಷಣದ ಪ್ರಾಮುಖ್ಯತೆಯನ್ನು ಗುರುತಿಸುತ್ತದೆ. ಇದು ಅಧಿಕಾರಾವಧಿ, ಬಡ್ತಿ ಮತ್ತು ಸಂಬಳ ರಚನೆಯ ದೃಢವಾದ ಅರ್ಹತೆ ಆಧಾರಿತ ರಚನೆಯನ್ನು ಹೈಲೈಟ್ ಮಾಡುವ ಗುರಿಯನ್ನು ಹೊಂದಿದೆ ಎಂದು ನೂತನ ಶಿಕ್ಷಣ ನೀತಿಯ ಮಹತ್ವ ತಿಳಿಸಿದರು. ರಾಷ್ಟ್ರೀಯ ಶಿಕ್ಷಣ ನೀತಿಯು ಶಾಲೆಗಳಲ್ಲಿ ಬೋಧನಾ ಮಾಧ್ಯಮವಾಗಿ ಸ್ಥಳೀಯ ಭಾಷೆಗಳ ಬಳಕೆಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ. ಈ ನೀತಿ ಅಡಿಯಲ್ಲಿ ವಿದ್ಯಾರ್ಥಿಗಳು ಹೆಚ್ಚು ಆರಾಮದಾಯಕ ಮತ್ತು ಉತ್ತಮವಾಗಿ ಪಠ್ಯವನ್ನು ಅರ್ಥಮಾಡಿಕೊಳ್ಳುತ್ತಾರೆ ಎಂದು ಅವರು ಅಭಿಪ್ರಾಯಪಟ್ಟರು. ಈ NEP ಜಾರಿಯಾದ ಬಳಿಕ ಶಿಕ್ಷಣದಲ್ಲಿ ತಂತ್ರಜ್ಞಾನದ ಬಳಕೆ ಮತ್ತು ಶಿಕ್ಷಣ ವ್ಯವಸ್ಥೆಯಲ್ಲಿ ವೃತ್ತಿಪರ ಮತ್ತು ಕೌಶಲ್ಯ ಆಧಾರಿತ ತರಬೇತಿಯ ಏಕೀಕರಣಕ್ಕೆ ಆದ್ಯತೆ ನೀಡಲಾಗುತ್ತದೆ. ಹೀಗೆ ನಮ್ಮ ಪದವೀಧರರು ಹೆಚ್ಚು ಉದ್ಯೋಗಶೀಲರು ಮತ್ತು ಕೌಶಲ್ಯಪೂರ್ಣರಾಗುತ್ತಾರೆ. ನಮ್ಮ ಶಿಕ್ಷಣ ವ್ಯವಸ್ಥೆಯನ್ನು ಪರಿವರ್ತಿಸಲು ಎನ್ಇಪಿ ಸಮಯದ ಅವಶ್ಯಕತೆ ಇದೆ ಎಂದು ತಿಳಿಸಿದ್ದಾರೆ.
ಬೆಂಗಳೂರು:- ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಸೋಮವಾರದಿಂದ ಅನಿರ್ಧಿಷ್ಟಾವಧಿ ಧರಣಿ ಆರಂಭಿಸಿದ್ದಾರೆ. ನಗರ ಜಿಲ್ಲೆ ವ್ಯಾಪ್ತಿಯಲ್ಲಿ 2,877 ಅಂಗನವಾಡಿ ಕೇಂದ್ರಗಳಿವೆ. ಇದರಲ್ಲಿ 430 ಕಾರ್ಯಕರ್ತೆಯರು ಹಾಗೂ 1,198 ಸಹಾಯಕಿಯರ ಹುದ್ದೆಗಳು 3-4 ವರ್ಷಗಳಿಂದ ಖಾಲಿ ಇವೆ. ಸಹಾಯಕಿಯರ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿರುವ ಕಾರಣ ವಿಳಂಬವಾಗಿದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಅಕ್ರಮ ನಡೆದಿದ್ದರೆ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಂಡು ನ್ಯಾಯಯುತವಾಗಿ ಇರುವವರಿಗೆ ಆದೇಶ ಪತ್ರ ನೀಡಬೇಕು ಎಂದು ಫೆಡರೇಷನ್ ಕಾರ್ಯದರ್ಶಿ ಎಂ. ಜಯಮ್ಮ ಒತ್ತಾಯಿಸಿದರು. ಅಂಗನವಾಡಿ ಕಾರ್ಯಕರ್ತೆಯರು ಬೆಳಗ್ಗೆ 9.30ರಿಂದ ಸಂಜೆ 4ರವರೆಗೆ ಉಪಹಾರ ಸಿದ್ಧಪಡಿಸುವುದು, ಶಾಲಾ ಚಟುವಟಿಕೆ, ಗೃಹಲಕ್ಷ್ಮೀ ಯೋಜನೆ, ಆರೋಗ್ಯ ಸಮೀಕ್ಷೆ ಸೇರಿ ಅನೇಕ ಕೆಲಸಗಳನ್ನು ಮಾಡುತ್ತಿದ್ದಾರೆ. ಬಹುತೇಕ ಕಡೆಗಳಲ್ಲಿ ಒಬ್ಬರೇ ಕಾರ್ಯನಿರ್ವಹಿಸಬೇಕಿದ್ದು, ಕೆಲಸದ ಒತ್ತಡ ಹೆಚ್ಚಾಗಿದೆ. ಹೀಗಾಗಿ, ಕೂಡಲೇ ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಪ್ರತಿಭಟನಾನಿರತರು ಆಗ್ರಹ ಮಾಡಿದ್ದಾರೆ.