Author: AIN Author

ಬೆಂಗಳೂರು: ಇಂದು ಬೆಳ್ಗೆಯಿಂದ ನಗರದಲ್ಲಿ ಪಿಎಸ್‌ ಐ ಮರು ಪರೀಕ್ಷೆ ನಡೆದಿದ್ದು ಸಂಜೆ ವೇಳೆಗೆ ಮುಕ್ತಾಯಗೊಂಡಿದೆ. 545 ಪಿಎಸ್ ಐ ಹುದ್ದೆಗಳ ಮರು ಪರೀಕ್ಷೆ ಮುಕ್ತಾಯ ಗೊಂಡಿದ್ದು  ಇಂದು ಬೆಳಗ್ಗೆ 10 – 30 ರಿಂದ ಆರಂಭವಾಗಿದ್ದ ಪರೀಕ್ಷೆ ಸಂಜೆಗೆ ಅಂತ್ಯಗೊಂಡಿದೆ. ಬೆಂಗಳೂರಿನ ಒಟ್ಟು 117 ಕೇಂದ್ರಗಳಲ್ಲಿ ಪಿಎಸ್​ಐ ನೇಮಕಾತಿ ಮರು ಪರೀಕ್ಷೆಯು ನಡೆದಿದ್ದು  ಈ ಹಿಂದೆ ನಡೆದ ಘಟನೆಗಳು ಮರುಕಳಿಸಬಾರದೆಂದು ಈ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗಿತ್ತು. ಬೆಂಗಳೂರಿನಲ್ಲಿ 117 ಕೇಂದ್ರಗಳಲ್ಲಿ ಇಂದು  ಪರೀಕ್ಷೆ ಮುಗಿಯುವವರೆಗೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್‌ ಅಂಗಡಿಗಳನ್ನು ಬಂದ್ ಮಾಡಲು ಆದೇಶದಲ್ಲಿ ಸೂಚಿಸಲಾಗಿತ್ತು. ಈ ಹಿಂದೆ ನಡೆದ ಘಟನೆಗಳು ಮರುಕಳಿಸಬಾರದೆಂದು ಈ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗಿತ್ತು. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಈಗಾಗಲೇ ಸೂಚಿಸಿರುವಂತೆ ಅಭ್ಯರ್ಥಿಗಳು ವಸ್ತ್ರಸಂಹಿತೆಯನ್ನು ಪಾಲಿಸಬೇಕೆಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್​ ರಮ್ಯಾ ಅವರು ತಿಳಿಸಿದ್ದರು.

Read More

ಬೆಳಗಾವಿ: ಪ್ರತಿಯೊಬ್ಬರು ಅಲ್ಪಮತಿಗೆ ಹೊಳೆದಷ್ಟು ಮಾತ‌ನಾಡುತ್ತಾರೆ. ಅಲ್ಪಮತಿಗಳ ಬಗ್ಗೆ ನಾನು ಹೆಚ್ಚು ಒತ್ತುಕೊಡುವುದಿಲ್ಲ” ಎಂದು ಶಾಸಕ ಲಕ್ಷ್ಮಣ ಸವದಿ ಪರೋಕ್ಷವಾಗಿ ರಮೇಶ್​ ಜಾರಕಿಹೊಳಿಗೆ ಅಲ್ಪಮತಿ ಎಂದು ಜರಿದರು. ಅಥಣಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, https://ainlivenews.com/do-you-sleep-less-than-6-hours-beware-of-this-deadly-disease/ ರಾಮ ಮಂದಿರ ಆಹ್ವಾನ ಬಂದಿದೆಯಾ? ನೀವು ದೇಣಿ ಕೊಟ್ಟಿದ್ದೀರಾ? ಅಂತ ಮಾಧ್ಯಮದವರು ಪ್ರಶ್ನಿಸಿದರು. ಅದಕ್ಕೆ ನಾನು ಬಿಜೆಪಿಯಲ್ಲಿದ್ದಾಗ 10 ಲಕ್ಷ ರೂ. ದೇಣಿಗೆ ಕೊಟ್ಟಿರುವೆ ಎಂದು ಹೇಳಿದೆ. ಇಲ್ಲಿ ಯಾರೋ ಒಬ್ಬರು ಕೋಟಿ ಕೊಟ್ಟವರಿಗೆ ಕರೆದಿಲ್ಲಾ ಹತ್ತು ಲಕ್ಷ ಕೊಟ್ಟವರು ಏನು ದೊಡ್ಡ ವಿಷಯ ಅಂದಿದ್ದಾರೆ. ಅದರ ಬಗ್ಗೆ ನನಗೆ ಬೇಸರವೆ ಇಲ್ಲ ಎಂದರು.  

Read More

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಮತ್ತೊಂದು  ಹಿಟ್ ಅಂಡ್ ರನ್ ಪ್ರಕರಣವೊಂದು ಬೆಳಕಿಗೆ ಬಂದಿದೆ. ಕಾರಿನ ಬ್ಯಾನೆಟ್ ಮೇಲೆ ಕುಳಿತವನನ್ನು 400 ಮೀಟರ್‌ನಷ್ಟು ದೂರ ಎಳೆದೊಯ್ದು ಹುಚ್ಚಾಟ ಮೆರೆದಿದ್ದಾರೆ. ಈ ಭಯಾನಕ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ  ಕಾರು ಚಲಾಯಿಸಿರೋ ಭಯಾನಕ ದೃಶ್ಯ ಸೆರೆಯಾಗಿದೆ.ʼ ನಗರದ ಸರ್ಕಲ್ ಮಾರಮ್ಮ ದೇವಸ್ಥಾನ ಬಳಿ ಮೊಹಮ್ಮದ್ ಮುನೀರ್ ಎಂಬಾತನಿಂದ ಕೃತ್ಯ ನಡೆದದಿದ್ದು 400 ಮೀಟರ್ ನಷ್ಟು ದೂರ ಬ್ಯಾನೆಟ್ ಮೇಲೆ ಎಳೆದೊಯ್ದ ಚಾಲಕ . ಕ್ಯಾಬ್ ಚಾಲಕ ಅಶ್ವತ್ಥ್ ನನ್ನ ಬ್ಯಾನೆಟ್ ಮೇಲೆ ಹೊತ್ತಯ್ದ ಮುನೀರ್ ಜನವರಿ 15 ರಂದು ನಡೆದ ಘಟನೆ ತಡವಾಗಿ ಬೆಳಕಿಗೆ. ಚಾಲಕ ಮುನೀರ್‌ ಅನ್ನು ಕಾರು ನಿಲ್ಲಿಸುವಂತೆ ಕ್ಯಾಬ್‌ ಡ್ರೈವರ್ ಅಶ್ವತ್ಥ್‌ ದುಂಬಾಲು ಬಿದ್ದಿದ್ದಾನೆ. ಈ ವೇಳೆ ಕಾರು ನಿಲ್ಲಸದೇ ಎಸ್ಕೇಪ್ ಆಗಲು ಯತ್ನಿಸಿದ್ದಾನೆ. ಕ್ಯಾಬ್ ಡ್ರೈವರ್ ಕಾರಿನ ಮುಂದೆ ನಿಂತು ಕೆಳಗೆ ಬರುವಂತೆ ಪಟ್ಟು ಹಿಡಿದಿದ್ದಾನೆ. ಆಗ ತಕ್ಷಣವೇ ಚಾಲಕ ಕಾರು ಚಲಾಯಿಸಿದ್ದಾನೆ. 18ನೇ ಕ್ರಾಸ್ ಸಿಗ್ನಲ್‌ವರೆಗೆ ಬ್ಯಾನೆಟ್ ಮೇಲೆ…

Read More

ದಿಸ್ಪುರ್‌: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ನ್ಯಾಯ ಯಾತ್ರೆಯು ಮಂಗಳವಾರ ಮೇಘಾಲಯದ ಬಳಿಕ ಅಸ್ಸಾಂಗೆ ಮರುಪ್ರವೇಶಿಸಿದೆ. ಈ ವೇಳೆ ಗುವಾಹಟಿಯ ಒಳ ರಸ್ತೆಗಳ ಮೂಲಕ ತೆರಳಲು ಅಸ್ಸಾಂ ಸರ್ಕಾರ (Assam Government) ಅನುಮತಿ ನಿರಾಕರಿಸಿದ್ದರಿಂದ ಕಾಂಗ್ರೆಸ್‌ ಕಾರ್ಯಕರ್ತರು (Congress workers) ಹಾಗೂ ಪೊಲೀಸರ ನಡುವೆ ಘರ್ಷಣೆ ಸಂಭವಿಸಿದೆ. ಇದರಿಂದ ಸ್ಥಳದಲ್ಲಿ ಉದ್ವಿಗ್ನತೆ ಸೃಷ್ಟಿಯಾಗಿದೆ. ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ನೇತೃತ್ವದ ಬಿಜೆಪಿ ಸರ್ಕಾರವು ಯಾತ್ರೆ ಅಸ್ಸಾಂ (Assam) ಪ್ರವೇಶಿಸದಂತೆ ನಿರ್ಬಂಧ ವಿಧಿಸಿತ್ತು. ಇದರ ಹೊರತಾಗಿಯೂ ಯಾತ್ರೆ ಬೈಪಾಸ್‌ ರಸ್ತೆ ಮೂಲಕ ಗುವಾಹಟಿ (Guwahati) ಪ್ರವೇಶಿಲು ಮುಂದಾದಾಗ ಮುಖಾಮುಖಿಯಾಗಿ ಘರ್ಷಣೆ ಸಂಭವಿಸಿದೆ. ಪೊಲೀಸರು ಯಾತ್ರೆಯನ್ನು ತಡೆದಿದ್ದರಿಂದ ರೊಚ್ಚಿಗೆದ್ದ ಕೈ ಕಾರ್ಯಕರ್ತರು ಬ್ಯಾರಿಕೇಡ್‌ಗಳನ್ನ ಮುರಿದು ಸಿಟ್ಟು ಹೊರಹಾಕಿದ್ದಾರೆ. https://ainlivenews.com/do-you-sleep-less-than-6-hours-beware-of-this-deadly-disease/ ಇದಕ್ಕೆ ಆಕ್ರೋಶ ವ್ಯಕ್ತಪಡಿಸಿ, ಬಜರಂಗದಳ, ಬಿಜೆಪಿ ನೇತೃತ್ವದ ರ‍್ಯಾಲಿಗಳನ್ನು ಇದೇ ಮಾರ್ಗವಾಗಿ ಕೊಂಡೊಯ್ಯಲಾಯಿತು. ಆದ್ರೆ ನಾವು ಕಾನೂನು ಉಲ್ಲಂಘಿಸುವುದಿಲ್ಲ ಅಂತ ಹೇಳಿದರೂ ನಮ್ಮನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದ್ದಾರೆ.…

Read More

ಬೆಂಗಳೂರು: ರಾಮಜನ್ಮ ಭೂಮಿ ಹೋರಾಟದಲ್ಲಿ ರಾಜ್ಯದ ಪಾತ್ರ ದೊಡ್ಡದಿದ್ದು, ಆಂಜನೇಯನ ಜನ್ಮಭೂಮಿ ಅಭಿವೃದ್ಧಿಪಡಿಸುವುದು ನಮ್ಮ ಮುಂದಿನ ಗುರಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಬೆಂಗಳೂರಿನ ಬಾಲಬ್ರೂಹಿ ಅತಿಥಿ ಗೃಹದ ಬಳಿ ಇರುವ ಮಾರುತಿ ಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ನಂತರ ಸುದ್ದಿಗಾರರ ಜತೆ ಮಾತನಾಡಿದರು. https://ainlivenews.com/siddaramaiah-himself-lord-rama-can-forgive-you-not-rama-devotees-bjp-spark/ ಭಾರತದ ಇತಿಹಾಸದಲ್ಲಿ ಮಹತ್ವದ ಭಕ್ತಿ ಭಾವದ ದಿನ, ಐತಿಹಾಸಿಕ ದಿನ. ಶ್ರೀರಾಮ ಚಂದ್ರನ ಪ್ರಾಣ ಪ್ರತಿಷ್ಠಾಪನೆ ದಿನ ಎಂದರು. ರಾಮನಿಗೂ ರಾಜ್ಯಕ್ಕೂ ದೊಡ್ಡ ನಂಟಿದೆ. ಆಂಜನೇಯ ಜನ್ಮಸ್ಥಳ ಅಂಜನಾದ್ರಿ ಕರ್ನಾಟಕದಲ್ಲೇ ಇದೆ. ಆಂಜನೇಯ ಇದ್ದರೆ ರಾಮ ಪರಿಪೂರ್ಣ. ಮುಂದಿನ ನಮ್ಮ ಗುರಿ ಆಂಜನೇಯ ಜನ್ಮ ಭೂಮಿ ಅಭಿವೃದ್ಧಿ ಮಾಡುವುದಾಗಿದೆ. ಮುಂದಿನ ದಿನಗಳಲ್ಲಿ ಸರ್ಕಾರ ಆಂಜನೇಯ ಕ್ಷೇತ್ರ ಅಭಿವೃದ್ಧಿ ಮಾಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

Read More

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ನೆನಪಿಡಿ.. ಪ್ರಭು ಶ್ರೀರಾಮ ನಿಮ್ಮನ್ನು ಕ್ಷಮಿಸಬಹುದು. ಆದರೆ, ರಾಮಭಕ್ತರಲ್ಲ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ. ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ, ಕಾಂಗ್ರೆಸ್‌ನವರಿಗೆ ಪ್ರಭು ಶ್ರೀರಾಮನನ್ನು ನೆನದರೆ ಯಾಕಿಷ್ಟು ದ್ವೇಷ ಎನ್ನುವುದು ಯಕ್ಷಪ್ರಶ್ನೆ ಎಂದು ಕುಟುಕಿದೆ. ಇಡೀ ವಿಶ್ವವೇ ಬಾಲರಾಮನ ಪ್ರಾಣ ಪ್ರತಿಷ್ಠಾಪನೆಗೆ ಧನ್ಯವಾಗಿದೆ, ಸಂಭ್ರಮಿಸಿದೆ, ದೇವಲೋಕವನ್ನೇ ಧರೆಗಿಳಿಸಿದೆ. ಆದರೆ, ತುಘಲಕ್‌ ಸರ್ಕಾರ ಸಿಎಂ ತವರೂರಲ್ಲಿ ಮಾತ್ರ ಶ್ರೀರಾಮನ ಸಂಭ್ರಮಾಚರಣೆಗೆ ನಿರ್ಬಂಧ ಹೇರಿ ಆಷಾಢಭೂತಿತನವನ್ನು ತೋರಿಸಿದೆ ಎಂದು ಛೇಡಿಸಿದೆ. 24 ದಿನ ಉರಿಯಬೇಕಿದ್ದ ಅಗರಬತ್ತಿಯನ್ನು ಕೇವಲ ಎರಡು ತಾಸಿಗೆ ನಂದಿಸಲಾಗಿದೆ. ಈ ಮೂಲಕ ಶ್ರೀರಾಮನಿಗೆ, ರಾಮಭಕ್ತರಿಗೆ ಅಪಮಾನ ಮಾಡಿ ತನ್ನ ಘನತೆಯನ್ನು ಕಾಂಗ್ರೆಸ್ ಸರ್ಕಾರ ಕಳೆದುಕೊಂಡಿದೆ ಎಂದು ಬಿಜೆಪಿ ಚಾಟಿ ಬೀಸಿದೆ.

Read More

ಬೆಂಗಳೂರು: ಹಿರೇಮಗಳೂರಿನ ಅರ್ಚಕರಿಗೆ ವೇತನ ತಡೆ ಹಿಡಿದು ನೋಟಿಸ್ ಕೊಟ್ಟ ವಿಚಾರಕ್ಕೆ  ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಂಬಳ ವಾಪಸ್ ಕೇಳಿ ನೋಟಿಸ್ ನೀಡಿರುವ ವಿಚಾರದಲ್ಲಿ ತಹಶೀಲ್ದಾರ್ ತಪ್ಪಿದೆ ಹೊರತು ಹಿರೇಮಗಳೂರು ಕಣ್ಣನ್ (Hiremagaluru Kannan) ತಪ್ಪಿಲ್ಲ ಎಂದು ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಸ್ಪಷ್ಟನೆ ನೀಡಿದ್ದಾರೆ. ಹಾಗೆ ಪ್ರತಿವರ್ಷ ದೇವಸ್ಥಾನಕ್ಕೆ ತಸ್ತಿಕ್ ಹಣ ಅಂತ ಕೊಡ್ತಾರೆ. ಮುಜರಾಯಿ ದೇವಸ್ಥಾನಗಳಿಗೆ ಈ ಹಣ ಕೊಡ್ತಾರೆ. 2013 ರಲ್ಲಿ 24 ಸಾವಿರ ತಸ್ತಿಕ್ ಹಣ ಇತ್ತು, ತಹಶೀಲ್ದಾರ್ 24 ಸಾವಿರ ಕೊಡುವ ಬದಲು 90 ಸಾವಿರ ಹಣ ನೀಡಿದ್ದಾರೆ. ತಹಶೀಲ್ದಾರ್ ತಪ್ಪು ಇದು.. ಕಣ್ಣನ್ ಅವ್ರ ತಪ್ಪಲ್ಲ ಎಂದು ಹೇಳಿದರು. ತಹಶೀಲ್ದಾರ್ ಬಳಿಯೇ ಹಣ ಪಡೆಯುತ್ತೇವೆ. ಕಣ್ಣನ್ ಅವರ ಬಳಿ ಹಣ ಕೇಳಲ್ಲ. ನಾನು ಆಯುಕ್ತರ ಜೊತೆ ಈ ಬಗ್ಗೆ ಮಾತನಾಡ್ತೇನೆ. ತಲೆ ಸರಿಯಿಲ್ಲದವರು ಈ ಬಗ್ಗೆ ಇಲ್ಲಸಲ್ಲದ ವಿಚಾರಗಳನ್ನ ಹೇಳ್ತಿದ್ದಾರೆ. 10 ವರ್ಷದ ಹಣವನ್ನ…

Read More

ಬೆಂಗಳೂರು:  ನಿಗಮ ಮಂಡಳಿ ನೇಮಕ ವಿಚಾರದಲ್ಲಿ ಹೈಕಮಾಂಡ್‌ ನಮ್ಮ ನಿರ್ಧಾರಗಳನ್ನ ತೆಗೆದುಕೊಂಡಿಲ್ಲ ಹಾಗೆ   ನಮ್ಮ ಅಭಿಪ್ರಾಯ ತೆಗೆದುಕೊಂಡು ಮಾಡದಿರುವುದಕ್ಕೆ ನಿಗಮ ಮಂಡಳಿ (Corporation Board) ನೇಮಕ ಇಷ್ಟು ಗೊಂದಲ ಆಗ್ತಿದೆ ಅಂತ ಗೃಹ ಸಚಿವ ಪರಮೇಶ್ವರ್ (G Parameshwara), ಹೈಕಮಾಂಡ್ ವಿರುದ್ಧವೇ ಅಸಮಾಧಾನ ಹೊರ ಹಾಕಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನಿಗಮ ಮಂಡಳಿ ನೇಮಕಾತಿಗೆ ನಮ್ಮ ಅಭಿಪ್ರಾಯವನ್ನೂ ಪಡೆಯಬೇಕು. ಆದ್ರೆ ನಮ್ಮನ್ನ ಯಾರೂ ಕೇಳಿಲ್ಲ. ಒಂದೆರಡು ಹೆಸರು ಕೊಡಿ ಅಂದಾಗ ಕೊಟ್ಟಿರಬಹುದು. ಆದರೆ ನಮ್ಮ ಜತೆ ಮಾತನಾಡಿ ಪಟ್ಟಿ ಮಾಡಿಲ್ಲ ಅಂತ ಬೇಸರ ವ್ಯಕ್ತಪಡಿಸಿದ್ದಾರೆ. ಕಾರ್ಯಕರ್ತರು ಯಾರ‍್ಯಾರು ಕೆಲಸ ಮಾಡಿದ್ದಾರೆ ಅಂತ ನನಗೆ ಗೊತ್ತಿದೆ. ಹತ್ತಾರು ವರ್ಷಗಳ ಕಾಲ ಪಕ್ಷಕ್ಕೆ ದುಡಿದಿದ್ದಾರೆ. ಅವರಿಗೆ ಅಧಿಕಾರ ಕೊಡಬೇಕು. ನಮ್ಮ ಅಭಿಪ್ರಾಯ ಪಡೆಯದೇ ಇರೋದಕ್ಕೆ ಹೀಗೆ ಆಗಿದೆ. ಕೆಲಸ ಮಾಡೋರಿಗೆ ಕೊಡದೇ ಹೋದ್ರೆ, ಕೆಲಸ ಮಾಡಿರೋರಿಗೆ ನೋವಾಗುತ್ತದೆ. ಅಸಮಾಧಾನ ಆಗುತ್ತದೆ, ಹೀಗಾಗಿ ಮುಖಂಡರು, ಜಿಲ್ಲಾ ಅಧ್ಯಕ್ಷರನ್ನ ಕೇಳಬೇಕಾಗುತ್ತದೆ ಎಂದು ಸಲಹೆ ನೀಡಿದ್ದಾರೆ.

Read More

ಬೆಂಗಳೂರು: ಬೆಂಗಳೂರಲ್ಲಿ ವರದಕ್ಷಿಣೆ ಕಾಟಕ್ಕೆ ಗೃಹಿಣಿಯೊಬ್ಬರು ನೇಣಿಗೆ ಶರಣಾಗಿದ್ದಾರೆ. ರಂಜಿತಾ (29) ಮೃತ ದುರ್ದೈವಿ. ದೊಡ್ಡ ಬಸ್ತಿ ರಸ್ತೆ ಬಳಿಯ ಬಸವೇಶ್ವರನಗರದ ಮನೆಯಲ್ಲಿ ಘಟನೆ ನಡೆದಿದೆ. ರಂಜಿತಾ ಮಧು ಎಂಬುವವರ ಜತೆ ವಿವಾಹವಾಗಿದ್ದರು. ಮೊದಮೊದಲು ಇವರಿಬ್ಬರು ಅನ್ಯೋನ್ಯವಾಗಿದ್ದರು. ಆದರೆ ದಿನ ಕಳೆದಂತೆ ಪತಿ ಮಧು ವರದಕ್ಷಿಣೆ ತರುವಂತೆ ಕಿರುಕುಳ ನೀಡುತ್ತಿದ್ದ. ವರದಕ್ಷಿಣೆ ಜತೆಗೆ ಮಾನಸಿಕ ಹಾಗೂ ದೈಹಿಕವಾಗಿ ಕಿರುಕುಳ ನೀಡುತ್ತಿದ್ದ ಬಗ್ಗೆ ಪೋಷಕರೊಟ್ಟಿಗೆ ಆಗಾಗ ರಂಜಿತಾ ಹೇಳಿಕೊಳ್ಳುತ್ತಿದ್ದಳು. ಪತಿ ಮಧು ಮನೆಯಲ್ಲಿ ಇರುವಾಗಲೇ ಈ ಘಟನೆ ನಡೆದಿದೆ. ಆತನೇ ಹತ್ಯೆ ಮಾಡಿ ನಂತರ ಆತ್ಮಹತ್ಯೆ ಎಂದು ಬಿಂಬಿಸುತ್ತಿದ್ದಾನೆ ಎಂದು ಗಂಭೀರ ಆರೋಪವನ್ನು ಮಾಡಿದ್ದಾರೆ. ರಂಜಿತಾ ಇಎಸ್‌ಎಸ್ ಶಾಲೆಯಲ್ಲಿ ಟೀಚರ್ ಆಗಿ ಕೆಲಸ ಮಾಡುತ್ತಿದ್ದಳು.ಸದ್ಯ ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ. ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಸಂಬಂಧ ದೂರು ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

Read More

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ವಿರುದ್ಧ ಟ್ವೀಟ್ ಮೂಲಕ ವಿಜಯೇಂದ್ರ‌ ವಾಗ್ದಾಳಿ ನಡೆಸಿದ್ದಾರೆ. ಹಿರೆಮಗಳೂರು ಕಣ್ಣನ್ ಗೆ ನೋಟೀಸ್ ನೀಡಿದ್ದಕ್ಕೆ ವಿಜಯೇಂದ್ರ‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಆಡಳಿತ ತುಘಲಕ್ ಹಾದಿಯಲ್ಲಿ ನಡೆದಿದೆ, ಹಿಂದೂ ಧರ್ಮಿಯರ ಧಾರ್ಮಿಕ ಕ್ಷೇತ್ರದಲ್ಲಿಯೂ ಆದಾಯ ಗಳಿಕೆಯನ್ನು ಮಾನದಂಡವನ್ನಾಗಿಸಿಕೊಂಡು ಹಿರೇಮಗಳೂರು ಕಣ್ಣನ್ ಅವರಂತಹ ನಾಡಿನ ಶ್ರೇಷ್ಠ ಕನ್ನಡ ವಿದ್ವಾಂಸ ಹಾಗೂ ಆಧ್ಯಾತ್ಮಿಕ ಮಾರ್ಗದರ್ಶಕರಿಗೆ ನೋಟಿಸ್ ನೀಡಿರುವ ಕ್ರಮ ಅತ್ಯಂತ ಹಾಸ್ಯಾಸ್ಪದ ಹಾಗೂ ಖಂಡನೀಯ ಎಂದಿದ್ದಾರೆ. https://x.com/BYVijayendra/status/1749706120757973228?t=yU6_emQXHokafBGTOWRPfw&s=08 ಹಿಂದೂ ಆಚಾರ-ವಿಚಾರ ಹಾಗೂ ಧಾರ್ಮಿಕ ಕೇಂದ್ರಗಳನ್ನೇ ಗುರಿಯನ್ನಾಗಿಸಿಕೊಂಡು ಕಾಂಗ್ರೆಸ್ ಸರ್ಕಾರ ಆಗಾಗ ಸರಣೀ ರೂಪದಲ್ಲಿ ಜನರ ಭಾವನೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ನಡೆದುಕೊಳ್ಳುತ್ತಿರುವುದು ಧರ್ಮನಿಷ್ಠರ ಸಹನೆಯನ್ನು ಕೆಣಕುವಂತಿದೆ. ಹಿರೇಮಗಳೂರು ಕಣ್ಣನ್ ಅವರಿಗೆ ನೀಡಿರುವ ನೋಟಿಸ್ ಅನ್ನು ಈ ಕೂಡಲೇ ಬೇಷರತ್ ಕ್ಷಮೆ ಯಾಚಿಸಿ ಸರ್ಕಾರ ವಾಪಸ್ ಪಡೆಯಬೇಕು, ಇಂಥಾ ಅಸಂಬದ್ಧ ನೋಟಿಸ್ ನೀಡಿದ ಅವಿವೇಕಿ ಅಧಿಕಾರಿಯನ್ನು ಕೂಡಲೇ ಅಮಾನತ್ತಿನಲ್ಲಿಡಲಿ ಎಂದು ಆಗ್ರಹಿಸಿದ್ದಾರೆ. ಚಿಕ್ಕಮಗಳೂರಿನ ಕೋದಂಡರಾಮ ದೇಗುಲದ ಅರ್ಚಕ ಹಿರೇಮಗಳೂರು ಕಣ್ಣನ್ ಅವರ…

Read More