ಸೋಮವಾರ ಅಯೋಧ್ಯಯಲ್ಲಿ ನಡೆದ ರಾಮನ ಪ್ರಾಣ ಪತ್ರಿಷ್ಠೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ದೇಶದ ನಾನಾ ಭಾಗಗಳಲ್ಲಿ ಕಲಾವಿದರು, ಗಣ್ಯರು ಆಗಮಿಸಿದ್ದರು. ನಾನಾ ಸಿನಿಮಾ ರಂಗದ ಕಲಾವಿದರು ಮತ್ತು ತಂತ್ರಜ್ಞರು ಭಾಗಿಯಾಗಿದ್ದರು. ಇವರೆಲ್ಲರ ಪೈಕಿ ಬಾಲಿವುಡ್ ನಟಿ ಆಲಿಯಾ ಭಟ್ (Alia Bhatt) ಸಖತ್ ವೈರಲ್ ಆಗಿದ್ದಾರೆ. ಅವರ ಧರಿಸಿದ್ದ ಸೀರೆ ಈಗ ರಾಮನ ಅಭಿಮಾನಿಗಳ ಸಂಭ್ರಮಕ್ಕೆ ಕಾರಣವಾಗಿದೆ. ಕಾರ್ಯಕ್ರಮದಲ್ಲಿ ಭಾಗಿಯಾಗಲು ಅಯೋಧ್ಯಗೆ ಬಂದಿದ್ದ ಆಲಿಯಾ ಭಟ್, ಹನುಮಾನ್, ಭಗವಾನ್ ರಾಮ ಹಾಗೂ ರಾಮಸೇತು ಚಿತ್ರಗಳನ್ನು ಇರುವಂತಹ ಸೀರೆಯನ್ನು ಅವರು ಧರಿಸಿದ್ದರು. ಈ ಸೀರೆ ಈಗ ರಾಮನ ಅಭಿಮಾನಿಗಳನ್ನು ಸೆಳೆದಿದೆ. ಆಲಿಯಾ ಭಟ್ ಅವರ ರಾಮನ ಬಗೆಗಿನ ಭಕ್ತಿಯನ್ನು ಎಲ್ಲರೂ ಕೊಂಡಾಡಿದ್ದಾರೆ. ಒಂದು ಕಡೆ ಆಲಿಯಾ ವೈರಲ್ ಆಗುತ್ತಿದ್ದರೆ, ಮತ್ತೊಂದು ಕಡೆ ಕನ್ನಡದಿಂದ ಹೋಗಿದ್ದ ರಿಷಬ್ ಶೆಟ್ಟಿ ಮತ್ತು ಪತ್ನಿ ಫೋಟೋಗಳನ್ನು ಅವರ ಅಭಿಮಾನಿಗಳು ಹಂಚಿಕೊಂಡಿದ್ದಾರೆ. ರಿಷಬ್ ಶೆಟ್ಟಿ (Rishab Shetty) ಅವರು ನಿನ್ನೆ ನಡೆದ (ಜ.22) ಅಯೋಧ್ಯೆಯ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಪತ್ನಿ…
Author: AIN Author
ಸ್ಯಾಂಡಲ್ವುಡ್ ಸ್ಟಾರ್ ನಟಿ ಆಶಿಕಾ ರಂಗನಾಥ್ (Ashika Ranganath) ಸಹೋದರಿ ಅನುಷಾ (Anusha) ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಶ್ರವಣ್ (Shravan) ಜೊತೆ ಅನುಷಾ ರಂಗನಾಥ್ ಇಂದು ಮದುವೆಯಾಗಿದ್ದಾರೆ. ‘ಗೋಕುಲದಲ್ಲಿ ಸೀತೆ’ ಸೀರಿಯಲ್ ಖ್ಯಾತಿಯ ಅನುಷಾ ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಖಾಸಗಿ ರೆಸಾರ್ಟ್ವೊಂದರಲ್ಲಿ ಇಂದು (ಜ.22) ಅನುಷಾ- ಶ್ರವಣ್ ಮದುವೆ ಅದ್ಧೂರಿಯಾಗಿ ನಡೆದಿದೆ. ವರ ಶ್ರವಣ್ ಹಿನ್ನೆಲೆ ಬಗ್ಗೆ ಮಾಹಿತಿ ರಿವೀಲ್ ಆಗಿಲ್ಲ ಆಶಿಕಾ ಸಹೋದರಿ ಅನುಷಾ ಮದುವೆಯಲ್ಲಿ ‘ದಿಯಾ’ ಖ್ಯಾತಿಯ ಖುಷಿ ರವಿ (Kushee Ravi), ಸಿರಿ, ತಪಸ್ವಿನಿ ಪೂಣಚ್ಚ,’ಲವ್ ಮಾಕ್ಟೈಲ್ 2′ ನಟಿ ಸುಶ್ಮಿತಾ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ಕಳೆದ ವಾರ ಅನುಷಾ ಅವರ ಬ್ರೈಡಲ್ ಪಾರ್ಟಿ ಗ್ರ್ಯಾಂಡ್ ಆಗಿ ನೆರವೇರಿತ್ತು. ದಿ ಗ್ರೇಟ್ ಸ್ಟೋರಿ ಆಫ್ ಸೋಡಾಬುಡ್ಡಿ’, ’10’, ‘ಕೌರವ’ ಸೇರಿದಂತೆ ಹಲವು ಸಿನಿಮಾಗಳಲ್ಲಿ ಅನುಷಾ ನಟಿಸಿದ್ದಾರೆ. ಆದರೆ ಚುಟು ಚುಟು ಬೆಡಗಿ ಆಶಿಕಾರಂತೆ ಅನುಷಾಗೆ ಚಿತ್ರರಂಗದಲ್ಲಿ ಹೇಳಿಕೊಳ್ಳುವಂತಹ ಅವಕಾಶ ಸಿಗಲಿಲ್ಲ. ಸದ್ಯ ದಾಂಪತ್ಯ…
ಚಂದ್ರಮುಖಿ ಪ್ರಾಣಸಖಿ ಸೇರಿದಂತೆ ಅನೇಕ ಚಿತ್ರಗಳ ಮೂಲಕ ಕನ್ನಡಿಗರ ಮನಗೆದ್ದಿರುವ ನಟಿ ಭಾವನಾ ರಾಮಣ್ಣ (Bhavana Ramanna) ಅತ್ಯುತ್ತಮ ನೃತ್ಯಗಾರ್ತಿಯೂ ಹೌದು. ಕನ್ನಡದ ಜನಪ್ರಿಯ ಕಾದಂಬರಿಕಾರ ತ.ರಾ.ಸುಬ್ಬರಾಯರ ‘ಹಂಸಗೀತೆ’ (Hamsageete) ಕಾದಂಬರಿಯನ್ನು ಜಿ.ವಿ.ಅಯ್ಯರ್ ಅವರು ಚಲನಚಿತ್ರವಾಗಿಸಿದ್ದರು. ಈಗ ನಟಿ ಭಾವನ ಹಂಸಗೀತೆಯನ್ನು ನೃತ್ಯ ರೂಪಕವಾಗಿ ತರುತ್ತಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ನೀಡಲು ಭಾವನ ರಾಮಣ್ಣ ತಮ್ಮ ಮನೆಯಲ್ಲೇ ಪತ್ರಿಕಾಗೋಷ್ಟಿ ಆಯೋಜಿಸಿದ್ದರು.ನಟಿ ಭಾವನಾ, ಅವರ ಸಹೋದರ ಅರವಿಂದ್ ರಾಮಣ್ಣ, ಸಹೋದರಿ ಶ್ಯಾಲಿನಿ ರಾಮಣ್ಣ ಹಾಗೂ ಬರಹಗಾರ ವಿಕ್ರಂ ಹತ್ವಾರ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು. ತಾವು ಚಿತ್ರರಂಗಕ್ಕೆ ಬರಲು ಕಾರಣರಾದವರನ್ನು ನೆನೆದು ಭಾವುಕರಾಗಿ ಮಾತು ಆರಂಭಿಸಿದ ಭಾವನ, ಹಿಂದೆ ತಮ್ಮ ಹೋಮ್ ಟೌನ್ ಬ್ಯಾನರ್ ನಲ್ಲಿ ನಿರುತ್ತರ ಚಿತ್ರವನ್ನು ನಿರ್ಮಿಸಿದ್ದನ್ನು ನೆನಪಿಸಿಕೊಂಡರು. ಮುಂದೆ ಕೂಡ ಚಿತ್ರ ನಿರ್ಮಿಸುವ ಆಸೆ ಇದೆ ಎಂದರು. ಹೂವು ಫೌಂಡೇಶನ್ ಮೂಲಕ ಅನೇಕ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿರುವದಾಗಿಯೂ ಭಾವನ ಹೇಳಿದರು. ನಂತರ ಹಂಸಗೀತೆ ನೃತ್ಯ ಕಾವ್ಯದ ಬಗ್ಗೆ ಭಾವನ ಮಾಹಿತಿ…
ಅಯೋಧ್ಯೆ: ಪ್ರಧಾನಿ ನರೇಂದ್ರ ಮೋದಿಯವರ ಸಾರಥ್ಯದಲ್ಲಿ ಶಾಸ್ತ್ರೋಕ್ತವಾಗಿ ಅಯೋಧ್ಯೆಯ ರಾಮಮಂದಿರದಲ್ಲಿ ಬಾಲರಾಮನ ಪ್ರಾಣಪ್ರತಿಷ್ಠಾಪನೆಯಾಗಿದೆ . ಇದಾದ ಬಳಿಕ ಸಾವರ್ಜನಿಕರ ದರ್ಶನಕ್ಕೆ ಅನುಮತಿ ನೀಡಲಾಯಿತು. ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ರಾಮಮಂದಿರದಲ್ಲಿ ಪ್ರತಿಷ್ಠಾಪನೆಯಾಗಿರುವ ರಾಮಲಲ್ಲಾನ ದರ್ಶನ ಪಡೆಯಲು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದ ಕಾರಣ, ನೂಕುನುಗ್ಗಲು ಉಂಟಾಗಿದ್ದು, ಮಂದಿರದ ಬಾಗಿಲನ್ನು ಮುಚ್ಚಲಾಗಿದೆ. ಪ್ರಧಾನಿ ನರೇಂದ್ರ ಮೋದಿ, ಭಾರತದ ಪ್ರಮುಖ ರಾಜಕಾರಣಿಗಳು, https://ainlivenews.com/do-you-know-how-much-ambani-family-donated-to-ayodhya-ram-mandir/ ಕ್ರೀಡಾಪಟುಗಳು, ಉದ್ಯಮಿಗಳು ಮತ್ತು ಚಿತ್ರರಂಗದ ಗಣ್ಯರ ಸಮ್ಮುಖದಲ್ಲಿ ಜನವರಿ 22 ರಂದು ಆಯೋಜಿಸಲಾದ ಭವ್ಯವಾದ ರಾಮಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭದ ನಂತರ ಅಯೋಧ್ಯೆ ರಾಮಮಂದಿರದಲ್ಲಿ ಸಾರ್ವಜನಿಕರ ದರ್ಶನಕ್ಕೆ ಅನುವು ಮಾಡಿಕೊಡಲಾಗಿತ್ತು. ಆದರೆ ಬೆಳಗ್ಗೆಯಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿರುವ ಕಾರಣ ರಾಮ ಮಂದಿರದ ಬಾಗಿಲನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ.
500 ವರ್ಷಗಳ ಹೋರಾಟ ಮತ್ತು ಕಾಯುವಿಕೆ ಇಂದು (ಜ.22) ಅಂತ್ಯವಾಗಿದೆ. ಅಯೋಧ್ಯೆಯ (Ayodhya) ರಾಮಮಂದಿರದಲ್ಲಿ (Ram Mandir) ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ನೆರವೇರಿದೆ. ಈ ಸಂದರ್ಭದಲ್ಲಿ ‘ಕೆಜಿಎಫ್ 2’ (Kgf 2) ಸ್ಟಾರ್ ಯಶ್ (Yash) ಅವರು ಶ್ರೀರಾಮನಿಗೆ ಜೈ ಎಂದಿದ್ದಾರೆ. ನಮ್ಮೆಲ್ಲರಿಗೂ ಮಹಾದಿನ, ಮರ್ಯದಾ ಪುರುಷೋತ್ತಮ ರಾಮನಿಗೆ ನಮನ ಎಂದು ಯಶ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಮರ್ಯಾದಾ ಪುರುಷೋತ್ತಮ ಭಗವಾನ್ ರಾಮನಿಗೆ ನಮನ, ಧಾರ್ಮಿಕ ಜೀವನದ ದ್ಯೋತಕ, ಉದಾಹರಣೆಯ ಮೂಲಕ ಮುನ್ನಡೆಸು, ಸಂಬಂಧಗಳಿಗೆ ಪೂಜ್ಯಭಾವನೆ, ಪ್ರತಿಕೂಲತೆಯಲ್ಲಿ ದೃಢತೆ ಮತ್ತು ಮಿತಿಯಿಲ್ಲದ ಸಹಾನುಭೂತಿ. ನಮಗೆಲ್ಲರಿಗೂ ನಿಜಕ್ಕೂ ಇಂದು ಮಹಾಕಾವ್ಯದ ದಿನ ಎಂದಿದ್ದಾರೆ. ಜೈ ಶ್ರೀ ರಾಮ್ ಎಂದು ನಟ ಯಶ್ (Yash) ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಅಯೋಧ್ಯೆಯ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಕನ್ನಡದ ರಿಷಬ್ ಶೆಟ್ಟಿ (Rishab Shetty), ಬಾಲಿವುಡ್ ನಟಿ ಕಂಗನಾ, ಅನುಪಮ್ ಖೇರ್, ಆಲಿಯಾ- ರಣ್ಬೀರ್ ದಂಪತಿ, ರಜನಿಕಾಂತ್, ಮೆಗಾಸ್ಟಾರ್ ಚಿರಂಜೀವಿ ಸೇರಿದಂತೆ ಅನೇಕರು ಭಾಗಿಯಾಗಿದ್ದಾರೆ. ಕನ್ನಡದ ನಟ…
ಬಿಗ್ಬಾಸ್ ಹತ್ತನೇ ಸೀಸನ್ನ (Bigg Boss Kannada) ಅಂತಿಮ ಏಳು ಸ್ಪರ್ಧಿಗಳಲ್ಲಿ ಒಬ್ಬರಾಗಿದ್ದ ನಮ್ರತಾ (Namrata Gowda) ಈ ವಾರ ಮನೆಯಿಂದ ಹೊರಬಿದ್ದಿದ್ದಾರೆ. ‘ಬಿಗ್ಬಾಸ್ ಈ ಸೀಸನ್ನಲ್ಲಿ ನಿಮ್ಮ ಕಾಂಟ್ರಿಬ್ಯೂಷನ್ ನಿಜಕ್ಕೂ ಮಹತ್ವದ್ದು. ನೀವು ಯಾರು ಎಂದು ನನಗೂ ತೋರಿಸಿಕೊಟ್ಟಿದ್ದೀರಿ’ ಎಂಬ ಮೆಚ್ಚುಗೆಯ ಮಾತನ್ನು ಕಿಚ್ಚನ ಬಾಯಿಂದಲೇ ಕೇಳಿಸಿಕೊಂಡಿರುವ ನಮ್ರತಾ ಅವರು ಮನೆಯಿಂದ ಹೊರಗೆ ಬಂದ ಕೂಡಲೇ ತಮ್ಮ ಜರ್ನಿಯ ಬಗ್ಗೆ ಜಿಯೊ ಸಿನಿಮಾಗೆ ಎಕ್ಸ್ಕ್ಲೂಸೀವ್ ಸಂದರ್ಶನ (Interview) ನೀಡಿದ್ದಾರೆ. ಅದರ ಅಕ್ಷರರೂಪ ಇಲ್ಲಿದೆ. ನಾನು ನಿಮ್ಮ ನಮೃತಾ. ಬಿಗ್ಬಾಸ್ ಹತ್ತನೇ ಸೀಸನ್ನ ಟಾಪ್ ಸೆವೆನ್ ಸ್ಪರ್ಧಿಗಳಲ್ಲಿ ಒಬ್ಬಳು ನಾನು. ನಿಜಕ್ಕೂ ಸಖತ್ ಬೇಜಾರಾಗ್ತಿದೆ. ಹತ್ತೊಂಬತ್ತು ಜನರಲ್ಲಿ ಏಳನೇ ಸ್ಥಾನದವರೆಗೂ ಬಂದಿರುವುದು ಖಂಡಿತ ಸುಲಭವ ಸಂಗತಿ ಅಲ್ಲ. ಮೂರು ದಿನಗಳ ಹಿಂದೆ ಹಳೆಯ ಸ್ಪರ್ಧಿಗಳೆಲ್ಲ ಬಂದು ಒಂದು ಬಾಂಬ್ ಹಾಕ್ತಾರೆ. ನಿಂಗೆ ಚಾನ್ಸ್ ಇಲ್ಲ ಅಂತ. ಆಗ ನನಗೆ ಓ ಎಂದು ನನ್ನ ಆತ್ಮವಿಶ್ವಾಸ ಕುಗ್ಗಲು ಶುರುವಾಯ್ತು. ಆದರೂ ನನ್ನನ್ನು ನಾನು…
ಚಿಕ್ಕಮಗಳೂರು: ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿರುವ ರಾಜ್ಯ ಸರ್ಕಾರ ಇದೀಗ ಅರ್ಚಕರಿಗೆ ನೀಡುತ್ತಿದ್ದ ಸಂಬಳವನ್ನು ವಾಪಸ್ ಕೇಳಿದೆ. ಈ ಸಂಬಂಧ ಚಿಕ್ಕಮಗಳೂರಿನ ಕೋದಂಡ ರಾಮ ದೇವಾಲ ಯದ ಪ್ರಧಾನ ಅರ್ಚಕರಾಗಿರುವ, ಕನ್ನಡದ ಪಂಡಿತ ಹಿರೇಮಗಳೂರು ಕಣ್ಣನ್ ಅವರಿಗೆ ಈಗಾಗಲೇ ನೋಟಿಸ್ ನೀಡಲಾಗಿದೆ. ಚಿಕ್ಕಮಗಳೂರು ಜಿಲ್ಲಾಡಳಿತವು ಕಣ್ಣನ್ ಅವರ ವೇತನ ತಡೆಹಿಡಿದು ಈ ನೋಟಿಸ್ ನೀಡಿದೆ. ನೋಟಿಸ್ನಲ್ಲೇನಿದೆ..?: ದೇವಾಲಯದ ಆದಾಯ ಕಡಿಮೆ ಇರುವುದರಿಂದ ಸರ್ಕಾರ ನೀಡಿದ ಸಂಬಳ ವಾಪಸ್ ನೀಡುವಂತೆ ತಿಳಿಸಲಾಗಿದೆ. ಕಣ್ಣನ್ ಅವರ ಖಾತೆಗೆ ಪ್ರತಿ ತಿಂಗಳು 7,500 ರೂ. ಜಮೆಯಾಗುತ್ತಿತ್ತು. ಇದೀಗ 7,500 ರೂ. ಸಂಬಳದಲ್ಲಿ 4,500 ವಾಪಸ್ ನೀಡಲು ಸೂಚನೆ ನೀಡಲಾಗಿದೆ. ಕಣ್ಣನ್ ಅವರು ಕಳೆದ 50 ವರ್ಷಗಳಿಂದ ದೇವಾಲಯದ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದೀಗ ಪ್ರತಿ ತಿಂಗಳು ಬರುತ್ತಿದ್ದ ಸಂಬಳವನ್ನು ಜಿಲ್ಲಾಡಳಿತ ತೆಡೆಹಿಡಿದಿದೆ. ಚಿಕ್ಕಮಗಳೂರು ತಹಶಿಲ್ದಾರ್ ಸುಮಂತ್ ನೀಡಿರುವ ನೋಟಿಸ್ ಕಂಡು ಕಣ್ಣನ್ ಅವರು ನೋಟಿಸ್ ನೋಡಿ ಆತಂಕಗೊಂಡಿದ್ದಾರೆ.
ಅಯೋಧ್ಯೆ: ರಾಮಮಂದಿರದಲ್ಲಿ ನಡೆದ ರಾಮಲಲ್ಲಾ ಪ್ರಾಣಪ್ರತಿಷ್ಠೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬಾಲರಾಮನ ದರ್ಶನ ಪಡೆದ ಉದ್ಯಮಿ ಮುಕೇಶ್ ಅಂಬಾನಿ ರಾಮಮಂದಿರಕ್ಕೆ 2.51 ಕೋಟಿ ರೂ. ದೇಣಿಗೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ರಾಮಮಂದಿರದ ಬಾಲರಾಮನ ಪ್ರಾಣಪ್ರತಿಷ್ಠೆ ಕಾರ್ಯಕ್ರಮ ನಿರ್ವಿಘ್ನವಾಗಿ ನೇರವೇರಿದೆ. ಈ ಐತಿಹಾಸಿಕ ಕ್ಷಣಕ್ಕೆ ಪ್ರಮುಖ ನಾಯಕರು ಸೇರಿದಂತೆ ಗಣ್ಯಾತಿಗಣ್ಯರು ಭಾಗಿಯಾಗುವ ಮೂಲಕ ಬಾಲರಾಮನ ಪ್ರಾಣಪ್ರತಿಷ್ಠೆಯನ್ನು ಕಣ್ತುಂಬಿಕೊಂಡರು. ಈ ಕಾರ್ಯಕ್ರಮದಲ್ಲಿ ಉದ್ಯಮಿ ಮುಕೇಶ್ ಅಂಬಾನಿ ಹಾಗೂ ಕುಟುಂಬಸ್ಥರು ಭಾಗಿಯಾಗಿದ್ದಲ್ಲದೇ ರಾಮಮಂದಿರಕ್ಕೆ 2.51 ಕೋಟಿ ರೂ. ದೇಣಿಗೆ ನೀಡಿದ್ದಾರೆ. https://ainlivenews.com/psi-re-examination-staff-shocked-candidate-wearing-full-shirt/ ಮುಕೇಶ್ ಅಂಬಾನಿ ದೇಣಿಗೆ ನೀಡಿರುವ ಕುರಿತು ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ತಿಳಿಸಿದೆ. ಪ್ರಾಣಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಮುಕೇಶ್ ಅಂಬಾನಿ, ಪತ್ನಿ ನೀತಾ ಅಂಬಾನಿ, ಮಗಳು ಇಶಾ ಮತ್ತು ಅಳಿಯ ಆನಂದ್ ಪಿರಾಮಲ್, ಪುತ್ರರಾದ ಆಕಾಶ್ ಮತ್ತು ಅನಂತ್, ಸೊಸೆ ಶ್ಲೋಕಾ ಮೆಹ್ತಾ ಮತ್ತು ರಾಧಿಕಾ ಮರ್ಚೆಂಟ್ ಭಾಗಿಯಾಗಿದ್ದರು.
ಬೆಂಗಳೂರು: ಇಂದು ರಾಜ್ಯದಲ್ಲಿ ಪಿಎಸ್ಐ ಮರು ಪರೀಕ್ಷೆ ನಡೆಯುತ್ತಿದ್ದು ಪರೀಕ್ಷೆ ಬರೆಯಲು ನಾನಾ ಕಡೆಯಿಂದ ನಾನಾ ಜಿಲ್ಲೆಗಳಿಂದ ನಗರಕ್ಕೆ ಬಂದಿದ್ದಾರೆ . ಹೌದು, ಇಲ್ಲೊಬ್ಬ ಮಹಿಳೆ ಪಿಎಸ್ ಐ ಪರೀಕ್ಷೆ ಬರೆಯಲು ತನ್ನ ಹಸುಗೂಸಿನ ಜೊತೆ ಬಂದಿದ್ದು ಮಗುವನ್ನು ಪತಿಯ ಕೈಲ್ಲಿ ಕೊಟ್ಟು ಪರೀಕ್ಷೆ ಬರೆಯಲು ಹೋಗಿದ್ದಾರೆ ತಾಯಿ ಪಿಎಸ್ ಐ ಎಕ್ಸಾಂ ಬರೆಯಲು ಹೋಗಿದ್ದಾರೆ ಹಾಗಾಗಿ ತಂದೆ ಮಗುವಿಗೆ ಜೋಲಿ ಕಟ್ಟಿ ಆಡಿಸುತ್ತಿದ್ದಾರೆ ಮರ ಹಾಗೂ ಅಪಾರ್ಟ್ ಮೆಂಟ್ ಗೇಟ್ ಗೆ ಜೋಲಿ ಕಟ್ಟಿರೋ ತಂದೆ ತನ್ನ ಮಗುವನ್ನು ಆಡಿಸುತ್ತಿದ್ದಾರೆ ಸೀರೆಯಲ್ಲಿ ಜೋಲಿ ಕಟ್ಟಿರೋ ತಂದೆ ಮಗುವಿನ ಲಾಲನೇ ಪಾಲನೇ ಮಾಡುತ್ತಿದ್ದು ಸಹಕಾರ ನಗರದ ಬಾಸ್ ಪಿಯು ಕಾಲೇಜ್ ಬಳಿ ಈ ದೃಶ್ಯ ಕಂಡು ಬಂದಿದೆ. ಪರೀಕ್ಷಾ ಕೇಂದ್ರದ ಸ್ವಲ್ಪ ದೂರದಲ್ಲೇ ಮಗುವನ್ನು ಆಡಿಸುತ್ತಿರೋ ತಂದೆ.
ಅಯೋಧ್ಯೆ: 500 ವರ್ಷಗಳ ಬಳಿಕ ಭಗವಾನ್ ರಾಮ ತನ್ನ ವಾಸಸ್ಥಾನಕ್ಕೆ ಮರಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಸಾರಥ್ಯದಲ್ಲಿ ಶಾಸ್ತ್ರೋಕ್ತವಾಗಿ ಅಯೋಧ್ಯೆಯ ರಾಮಮಂದಿರದಲ್ಲಿ ಬಾಲರಾಮನ ಪ್ರಾಣಪ್ರತಿಷ್ಠಾಪನೆಯಾಗಿದೆ . ಇದಾದ ಬಳಿಕ ಸಾವರ್ಜನಿಕರ ದರ್ಶನಕ್ಕೆ ಅನುಮತಿ ನೀಡಲಾಯಿತು. ಸಾರ್ವಜನಿಕರಿಗೆ ರಾಮಮಂದಿರದಲ್ಲಿ ಬಾಲರಾಮನ (Ram Lalla) ದರ್ಶನಕ್ಕೆ ಅವಕಾಶ ನೀಡುತ್ತಿದ್ದಂತೆಯೇ ಭಕ್ತರ ದಂಡೇ ಹರಿದು ಬರಲಾರಂಭಿಸಿದೆ. ಸೋಮವಾರ ರಾತ್ರಿಯಿಂದಲೇ ಅಯೋಧ್ಯಾಧಾಮದಲ್ಲಿ ಭಕ್ತರು ಸಾಲುಗಟ್ಟಿ ನಿಂತಿದ್ದಾರೆ. ಅಲ್ಲದೇ ತೀವ್ರ ಚಳಿಯನ್ನೂ ಲೆಕ್ಕಿಸದೇ ದೇವಸ್ಥಾನದ ಹೊರಗಡೆಯೂ ಸಾವಿರಾರು ಜನ ಜಮಾಯಿಸತೊಡಗಿದರು. https://ainlivenews.com/psi-re-examination-staff-shocked-candidate-wearing-full-shirt/ ತಡರಾತ್ರಿಯಿಂದಲೇ ರಾಮ ಮಂದಿರದ ಮುಖ್ಯ ದ್ವಾರದ ಹೊರಗೆ ಭಕ್ತಾದಿಗಳ ಉದ್ದನೆಯ ಸಾಲು ಆರಂಭವಾಗಿತ್ತು. ಬೆಳಗ್ಗಿನ ಜಾವ 2 ಗಂಟೆಯಿಂದಲೇ ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಲಾರಂಭಿಸಿದರು. ನೆರೆದಿದ್ದ ಜನರು ದ್ವಾರದ ಮುಂದೆ ʼಜೈ ಶ್ರೀ ರಾಮ್ʼ ಎಂದು ಘೋಷಣೆ ಕೂಗುತ್ತಾ ದೇಗುಲದೊಳಗೆ ಪ್ರವೇಶಿಸುತ್ತಿದ್ದಾರೆ. ದೇಶಾದ್ಯಂತ ಭಕ್ತರನ್ನು ಒಟ್ಟುಗೂಡಿಸುವ ಪ್ರಕ್ರಿಯೆ ಮುಂದುವರಿದಿದೆ. ಜೊತೆಗೆ ಅಯೋಧ್ಯೆಯ ಸ್ಥಳೀಯ ನಿವಾಸಿಗಳು ಕೂಡ ಬಾಲರಾಮನ ದರ್ಶನ ಮತ್ತು ಪೂಜೆಗಾಗಿ ಆಗಮಿಸುತ್ತಿದ್ದಾರೆ. ರಾಮಪಥದಲ್ಲಿ…