ತುಮಕೂರು: ತುಮಕೂರು ನಗರದ ನಜರಾಬಾದ್ ಬಡಾವಣೆ ವಾಸಿ ಆಝಮ್ ಪಾಷಾ (37) ಮೀಟರ್ ಬಡ್ಡಿ ದಂಧೆಕೋರರ ಕಾಟಕ್ಕೆ ಬೇಸತ್ತು ಸೆಲ್ಫೀ ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.ತುಮಕೂರಿನ ಸದಾಶಿವನಗರದಲ್ಲಿ 2 ತಿಂಗಳ ಹಿಂದೆ ಒಂದೇ ಕುಟುಂಬದ ಐದು ಮಂದಿ ಮೀಟರ್ ಬಡ್ಡಿ ದಂಧೆಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಸುವ ಮುನ್ನವೇ ಮತ್ತೊಂದು,ಮೀಟರ್ ಬಡ್ಡಿ ದಂಧೆಕೋರರ ದಬ್ಬಾಳಿಕೆಗೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಇನ್ನು ನಗರದಲ್ಲಿ ನಿರಂತರವಾಗಿ ಒಂದಲ್ಲ ಒಂದು ಮೀಟರ್ ಬಡ್ಡಿ ದಂಧೆ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಆತ್ಮಹತ್ಯೆಗೆ ಯತ್ನಿಸಿದ ನಜರಾಬಾದ್ ಬಡಾವಣೆಯ ನಿವಾಸಿ ಅಝಮ್ ಪಾಷಾ, ಖಾಸಗಿಯಾಗಿ ಕೈಸಾಲವನ್ನು ಪಡೆದಿದ್ದು ಮರು ಪಾವತಿಸಲಾರದೇ ಈ ನಿರ್ಧಾರ ತೆಗೆದು ಕೊಂಡಿದ್ದಾರೆ ಎನ್ನಲಾಗಿದೆ. ಇನ್ನು ಮೀಟರ್ ಬಡ್ಡಿ ದಂಧೆಕೋರರ ಕಾಟ ತಾಳಲಾರದೆ ಆತ್ಮಹತ್ಯೆಗೆ ಯತ್ನಿಸಿದ ಹಿನ್ನೆಲೆಯಲ್ಲಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ. ತಿಲಕ್ ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ…
Author: AIN Author
ಬಾಗಲಕೋಟೆ: ಅಯೋಧ್ಯೆಯಲ್ಲಿ ಶ್ರೀ ಶ್ರೀ ರಾಮ್ ಮಂದಿರ ಉದ್ಘಾಟನೆ ಹಾಗೂ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ನಿಮಿತ್ಯ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ನಾವಲಗಿಯ ಶ್ರೀ ಮಾರುತೇಶ್ವರ ಹಾಗೂ ಶ್ರೀ ರಾಮ್ ಮಂದಿರದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ತಾಪಂ ಮಾಜಿ ಸದಸ್ಯ ಗುರುಪಾದಯ್ಯ ಮರಡಿಮಠ ಮಾತನಾಡಿ ಶತಮಾನಗಳ ಕನಸು ಇಂದು ಈಡೇರುವ ಮೂಲಕ ಇಡೀ ಭಾರತ ದೇಶವೆ ಶ್ರೀ ರಾಮನ ಜಪದಲ್ಲಿ ತೊಡಗಿದ್ದು ನಿಜಕ್ಕೂ ಸಂತಸ ತಂದಿದೆ ಎಂದರು,ದೇಶದಲ್ಲಿ ಪ್ರತಿಯೊಂದು ಗ್ರಾಮ,ನಗರ ಹಾಗೂ ಪಟ್ಟಣಗಳಲ್ಲಿ ಶ್ರೀ ರಾಮ್ ದೇವರ ಪ್ರತಿಷ್ಠಾಪನೆ ನಿಮಿತ್ಯ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದಿದ್ದು ನಿಜಕ್ಕೂ ಇತಿಹಾಸ ನಿರ್ಮಾಣವಾಗಿದೆ ಎಂದರು, ಗ್ರಾಮದ ಶ್ರೀ ಮಾರುತೇಶ್ವರನ ಹಾಗೂ ಶ್ರೀ ರಾಮ್ ಮಂದಿರದಲ್ಲಿ ಅನ್ನಸಂತರ್ಪಣೆ,ಜಾಗರಣೆ ವಿವಿಧ ಪೂಜೆಗಳನ್ನು ನಡೆಸುವ ಮೂಲಕ ಗ್ರಾಮಸ್ಥರು ರಾಮ್ ನಾಮದಲ್ಲಿ ತೊಡಗುವ ಮೂಲಕ ಶ್ರೀ ದೇವರ ಕೃಪೆಗೆ ಪಾತ್ರರಾಗಿದ್ಧೇವೆ ಎಂದು ಹೇಳಿದರು ಸಾನಿಧ್ಯವನ್ನು ಬಂಡಿಗಣಿಯ ಶ್ರೀ ಅನ್ನದಾನೇಶ್ವರ ಸ್ವಾಮೀಜಿಯವರು ವಹಿಸಿದ್ದರು. ಈ…
ಎಲ್ಲೆಲ್ಲೂ ರಾಮನ ಜಪ ಜೋರಾಗಿದೆ. ಅಯೋಧ್ಯೆಯಲ್ಲಿ (Ayodhya) ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ನಡೆದಿದೆ. ಹಲವು ಸ್ಟಾರ್ಗಳು ಈ ಪ್ರಾಣ ಪ್ರತಿಷ್ಠಾಪನೆ ಕಾರ್ಯದಲ್ಲಿ ಭಾಗಿಯಾಗುವ ಮೂಲಕ ರಾಮನಿಗೆ ನಮನ ಸಲ್ಲಿಸಿದರು. ಇನ್ನೂ ಕೆಲವರು ಸೋಷಿಯಲ್ ಮೀಡಿಯಾದಲ್ಲಿ ರಾಮನ ಕುರಿತು ಅಭಿಪ್ರಾಯ ತಿಳಿಸಿದ್ದರು. ಇದೀಗ ಶ್ರೀರಾಮನ ನಮಿಸುತ್ತ ಸುದೀಪ್ (Sudeep), ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಬಗ್ಗೆ ತಿಳಿಸಿದ್ದಾರೆ. ರಾಮನ ಕುರಿತು ಕವಿತೆ ಬರೆದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. https://x.com/KicchaSudeep/status/1749356264105390133?s=20 ರಾಮ ಜಯ ರಾಮ ಆದಿ ಗುರು ಮಹರ್ಷಿ ಶ್ರೀ ವಾಲ್ಮೀಕಿ ಮೊದಲು ನಿಮ್ಮ ಕಥೆ ಹೇಳಿದರು. ವಾಲ್ಮೀಕಿಗಳು ರೂಪಿಸಿದ ಶ್ರೀ ರಾಮ ನೀನು ನಮ್ಮ ಎದೆಯಲ್ಲಿ ಶಾಶ್ವತವಾಗಿ ನಿಂತೆ. ವರ್ಷಗಳ ಕಾಯುವಿಕೆ ನಂತರ ಇಂದು ವಿರಾಜಮಾನನಾದೆ ಗುಡಿಯೊಳಗೆ. ನಿನ್ನ ಕಣ್ತುಂಬಿಕೊಳ್ಳಲು ಎರಡೇ ಕಣ್ಣನ್ನೇಕೆ ಕೊಟ್ಟೆ ನಿನ್ನ ಕೀರ್ತನೆಗೆ ಎರಡೇ ಕಿವಿಗಳು. ನಮ್ಮದು ಎಂತಹ ಪುಣ್ಯ, ಕರುನಾಡಿನಿಂದ ವಿಗ್ರಹವಾಗಿ ರೂಪುಗೊಂಡೆ. ಕರ್ನಾಟಕದ ಮಣ್ಣ ಗರ್ಭದಿಂದ ಎದ್ದು ಬಂದೆ ನಿನ್ನ ಆಲಯ ಕಟ್ಟಲು ಶ್ರೀ ವಿಶ್ವ…
ಬೆಂಗಳೂರು: ಹಳೆಯ ಕಾಲದ ಗತವೈಭವವನ್ನ ಸಾರುವ ಡಬಲ್ ಡೆಕ್ಕರ್ ಬಸ್ ಗಳನ್ನ ಮತ್ತೆ ರಸ್ತೆಮೇಲೆ ನೋಡುವ ದಿನಗಳು ಸನ್ನಿಹದಲ್ಲಿವೆ. ಬಿಎಂಟಿಸಿ ಬೆಂಗಳೂರಲ್ಲಿ ಡಬಲ್ ಡೆಕ್ಕರ್ ಬಸ್ ಗಳನ್ನ ರಸ್ತೆಗಿಳಿಸಲು ಗಂಭೀರ ಚಿಂತನೆ ನಡೆಸುತ್ತಿದ್ದು,. ಒಂದ್ ಕಾಲದಲ್ಲಿ ಮಿಂಚಿ ಮರೆಯಾದ ಬಸ್ ಗಳಿಗೆ ಟೆಂಡರ್ ಕರೆಯಲು ಮುಂದಾಗಿದೆ. ಹಾಗಾದ್ರೆ ಮತ್ತೆ ಯಾವಾಗ ಬರುತ್ವೆ ಡಬಲ್ ಡೆಕ್ಕರ್ ಬಸ್ ಗಳು ಅನ್ನೊ ಡೀಟೆಲ್ಸ್ ಇಲ್ಲಿದೆ. ಸಿಲಿಕಾನ್ ಸಿಟಿ ಬೆಂಗಳೂರಿನ ಮೂಲೆ ಮೂಲೆಗೆ ಬಸ್ ಸಂಚಾರ ಒದಗಿಸುತ್ತಿರುವ ಬಿಎಂಟಿಸಿ ಈಗ ಒಂದೆಜ್ಜೆ ಮುಂದೆ ಹೋಗಿದೆ. ನಗರದಲ್ಲಿ ಎಲೆಕ್ಟ್ರಿಕ್ ಡಬಲ್ ಡೆಕ್ಕರ್ ಬಸ್ ಗಳನ್ನ ರಸ್ತೆಗಿಳಿಸಲು ಪ್ಲಾನ್ ಮಾಡ್ತಾಯಿದೆ. ಡಬಲ್ ಡೆಕ್ಕರ್ ಬಸ್ ಗಳ ಖರೀದಿಗೆ ಟೆಂಡರ್ ಬಿಎಂಟಿಸಿ ಟೆಂಡರ್ ಕರೆಯಲು ಮುಂದಾಗಿದ್ದು, ಅಂದುಕೊಂಡಂತೆ ಆದ್ರೆ ಕೆಲ ತಿಂಗಳಲ್ಲೇ 10 ಬಸ್ ಗಳು ನಗರದ ರಸ್ತೆಗಿಳಿಯಲಿವೆ ಕೆಲ ದಿನಗಳಲ್ಲೇ ಟೆಂಡರ್ ಕರೆಯಲಿದ್ದು , ಟೆಂಡರ್ ರಿಪೋರ್ಟ್ ರೆಡಿ ಮಾಡ್ತಾಯಿದೆ. ಮೊದಲ ಹಂತದಲ್ಲಿ 10 ಡಬಲ್ ಡೆಕ್ಕರ್ ಬಸ್…
‘ಕಾಂತಾರ’ (Kantara) ಸಿನಿಮಾ ಮೂಲಕ ಕರ್ನಾಟಕದ ತುಳುನಾಡ ದೈವದ ಕಥೆಯನ್ನು ಇಡೀ ದೇಶಕ್ಕೆ ತಲುಪಿಸಿದ ರಿಷಬ್ ಶೆಟ್ಟಿ (Rishab Shetty) ಅವರು (ಜ.22) ಅಯೋಧ್ಯೆಯ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಪತ್ನಿ ಪ್ರಗತಿ ಜೊತೆ ಭಾಗಿಯಾಗಿದ್ದಾರೆ. ಈ ಕುರಿತ ಸುಂದರ ಫೋಟೋವನ್ನು ರಿಷಬ್ ಹಂಚಿಕೊಂಡಿದ್ದಾರೆ. 500 ವರ್ಷಗಳ ನಂತರ ಎಲ್ಲರ ಕನಸು ನನಸಾಗಿದೆ. ಇಂದು ಅಯೋಧ್ಯೆಯ (Ayodhya) ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿದೆ. ಈ ಸಂಭ್ರಮದಲ್ಲಿ ಭಾಗಿಯಾಗಿರೋದಕ್ಕೆ ರಿಷಬ್ ಫೋಟೋ ಹಂಚಿಕೊಂಡು ಸಂತಸ ವ್ಯಕ್ತಪಡಿಸಿದ್ದಾರೆ. ಶ್ರೀರಾಮಚಂದ್ರನ ಜನ್ಮಸ್ಥಳದಲ್ಲಿ ಪ್ರಾಣ ಪ್ರತಿಷ್ಠಾಪನೆ ಸಂಭ್ರಮದಲ್ಲಿ ಎಂದು ಶೀರ್ಷಿಕೆ ಕೊಟ್ಟು ರಾಮಮಂದಿರದ ಮುಂದೆ ನಿಂತು ಪತ್ನಿ ಪ್ರಗತಿ ಜೊತೆ ರಿಷಬ್ ಶೆಟ್ಟಿ ಕ್ಯಾಮೆರಾಗೆ ಪೋಸ್ ನೀಡಿದ್ದಾರೆ. ಈ ವೇಳೆ, ರಿಷಬ್ ದಂಪತಿ ಬಾಲಿವುಡ್ ನಟ ಅನುಪಮ್ ಖೇರ್ ಅವರನ್ನು ಕೂಡ ಭೇಟಿಯಾಗಿದ್ದಾರೆ. ಅಯೋಧ್ಯೆಯ ಇಂದಿನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಬಾಲಿವುಡ್ ನಟಿ ಕಂಗನಾ, ಆಲಿಯಾ- ರಣ್ಬೀರ್ ದಂಪತಿ, ರಜನಿಕಾಂತ್, ಮೆಗಾಸ್ಟಾರ್ ಚಿರಂಜೀವಿ, ಅಮಿತಾಭ್ ಬಚ್ಚನ್,…
ಮಂಡ್ಯ: ಶಾಲೆಗೆ ಹೋಗಿಬರುತ್ತೇನೆ ಎಂದು ಹೇಳಿಹೋಗಿದ್ದ ಶಿಕ್ಷಕಿ ಅನುಮಾನಾಸ್ಪದ ಸಾವಿಗೀಡಾಗಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಮೇಲುಕೋಟೆಯಲ್ಲಿ ನಡೆದಿದೆ. ನಾಪತ್ತೆಯಾದ ಮಹಿಳೆಯ ಶವ ಪತ್ತೆಯಾಗಿದೆ. ದುಷ್ಕರ್ಮಿಗಳು ಕೊಲೆಗೈದು ಮಣ್ಣಿನಲ್ಲಿ ಹೂತು ಹಾಕಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಮೃತ ಮಹಿಳೆಯನ್ನು ದೀಪಿಕಾ (28) ಎಂದು ಗುರುತಿಸಲಾಗಿದೆ. ಪಾಂಡವಪುರ ತಾಲ್ಲೂಕಿನ ಮಾಣಿಕ್ಯಹಳ್ಳಿ ಗ್ರಾಮದ ನಿವಾಸಿಯಗಿರುವ ದೀಪಿಕಾ ಮೇಲುಕೋಟೆಯ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಜನವರಿ 20 ರಂದು ದೀಪಿಕಾ ಶಾಲೆಗೆ ಹೋಗಿ ಬರುತ್ತೇನೆ ಎಂದು ಕೆಲಸಕ್ಕೆ ತೆರಳಿದ್ದರು. ಅದೇ ದಿನ ಮಧ್ಯಾಹ್ನದ ವೇಳೆಗೆ ನಾಪತ್ತೆಯಾಗಿದ್ದಾರೆ. ಈ ಸಂಬಂಧ ಅಂದು ಸಂಜೆ ಕುಟುಂಬಸ್ಥರು ಮೇಲುಕೋಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರು ದಾಖಲಿಸಿಕೊಂಡು ತನಿಖೆ ನಡೆಸಿದ್ದ ಪೊಲೀಸರು ಸೋಮವಾರ ಸಂಜೆ ಮೇಲುಕೋಟೆ ಬೆಟ್ಟದ ತಪ್ಪಲಿನಲ್ಲಿ ಶವ ಪತ್ತೆಹಚ್ಚಿದ್ದಾರೆ. ಸ್ಥಳಕ್ಕೆ ಮಂಡ್ಯ ಎಸ್ಪಿ ಯತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಿಕ್ಷಕಿ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಕ್ರಿಯಾಶೀಲರಾಗಿದ್ದರು ಎಂಬುದು ತಿಳಿದುಬಂದಿದೆ.
ನವದೆಹಲಿ: 15 ವರ್ಷದ ಬಾಲಕನೊಬ್ಬ ಹಣಕ್ಕಾಗಿ ಸ್ನೇಹಿತನೊಂದಿಗೆ ಸೇರಿ ತನ್ನ 77 ವರ್ಷದ ಅಜ್ಜಿಯನ್ನು ಕೊಲೆಗೈದ ಘಟನೆ ದೆಹಲಿಯಲ್ಲಿ (Delhi) ನಡೆದಿದೆ. ಬಾಲಕ ತನ್ನ ಅಜ್ಜಿ ಒಬ್ಬಳೇ ಮನೆಯಲ್ಲಿದ್ದಾಗ ಆಕೆಯ ಮನೆಗೆ ಸ್ನೇಹಿತನೊಂದಿಗೆ ಬಂದಿದ್ದ. ಬಳಿಕ ಮಲಗಿದ್ದ ವೃದ್ಧೆಯ ಮುಖಕ್ಕೆ ತಲೆದಿಂಬಿನಿಂದ ಒತ್ತಿ ಉಸಿರು ಕಟ್ಟಿಸಿ ಬಳಿಕ ತಲೆಯ ಮೇಲೆ ಇಬ್ಬರೂ ಸೇರಿ ಹಲ್ಲೆ ನಡೆಸಿದ್ದರು ಎಂದು ತಿಳಿದು ಬಂದಿದೆ. ಬಳಿಕ ಲಾಕರ್ ಒಪನ್ ಮಾಡಿ ಅದರಲ್ಲಿದ್ದ ಹಣ ಕದ್ದು ಅಲ್ಲಿಂದ ಪರಾರಿಯಾಗಿದ್ದರು. ಇತ್ತ ಮನೆಗೆ ಬಂದಿದ್ದ ಬಾಲಕನ ಅಜ್ಜ, ವೃದ್ಧೆಯ ಸಾವು ಸಹಜ ಎಂದು ಭಾವಿಸಿದ್ದರು. ಅಂತ್ಯಸಂಸ್ಕಾರಕ್ಕೆ ಸಿದ್ಧತೆ ವೇಳೆ ಸಂಬಂಧಿಕರು ಹಣೆಯ ಬಳಿ ಗಾಯವಾಗಿರುವುದನ್ನು ಗಮನಿಸಿದ್ದರು. ಇದನ್ನು ತೋರಿಸಿದ ಬಳಿಕ ವೃದ್ಧ ಲಾಕರ್ ಪರಿಶೀಲಿಸಿದ್ದು, ಅದರಲ್ಲಿದ್ದ ಹಣ ಕಳವಾಗಿರುವುದು ಬೇಳಕಿಗೆ ಬಂದಿದೆ. ಬಳಿಕ ಪೊಲೀಸರಿಗೆ ದೂರು ನೀಡಲಾಗಿತ್ತು. https://ainlivenews.com/good-news-for-those-going-to-ayodhya/ ತನಿಖೆ ವೇಳೆ ವೃದ್ಧ ದಂಪತಿಯ 15 ವರ್ಷದ ಮೊಮ್ಮಗ ಬಂದಿರುವುದು ತಿಳಿದು ಬಂದಿದೆ. ಆತನನ್ನು ವಿಚಾರಣೆಗೆ ಒಳಪಡಿಸಿದಾಗ ಅಜ್ಜಿಯನ್ನು ಕೊಲೆಗೈದು…
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಒಂದೆಡೆ PSI ಮರು ಪರೀಕ್ಷೆ ನಡೆಯುತ್ತಿದ್ದು ಮತ್ತೊಂದೆಡೆ ಫುಲ್ ಶರ್ಟ್ ಧರಿಸಿದ ಅಭ್ಯರ್ಥಿಯಿಂದ ಪರೀಕ್ಷೆ ಬರೆಯಲು ಹಿಂದೇಟು ಹಾಕಿದ್ದಾರೆ. ಫುಲ್ ಶರ್ಟ್ ನ ಕಟ್ ಮಾಡೋದಾದ್ರೆ ಪರೀಕ್ಷೆನೇ ಬರೆಯಲ್ಲವೆಂದು ಹಠ ಹಿಡಿದ ಅಭ್ಯರ್ಥಿ ಆದರೆ ಕಡೆಗೂ ಶರ್ಟ್ ನ ಕೈ ಕಟ್ ಮಾಡಲು ಕ್ಯಾಂಡಿಡೇಟ್ ಹಿಂದೇಟು ಹಾಕಿ ಪರೀಕ್ಷೆ ಬರೆಯದೆ ವಾಪಸ್ ನಡೆದಿದ್ದಾರೆ. ಈ ಬಾರಿ ಗುಲ್ಬರ್ಗ, ರಾಯಚೂರು ಭಾಗದ ಶಿಕ್ಷಕರನ್ನ ಪರೀಕ್ಷೆಗೆ ಬಳಕೆ ಮಾಡಿಲ್ಲ ಆ ಭಾಗದಲ್ಲಿ ಪರೀಕ್ಷಾ ಅಕ್ರಮ ನಡೆದ ಕಾರಣ ಶಿಕ್ಷಕರ ಬಳಕೆಯೂ ನಿಷೇಧ ಮಾಡಲಾಗಿದೆ. ಕೇವಲ ಮಂಡ್ಯ, ಮೈಸೂರು, ತುಮಕೂರು, ದಾವಣಗೆರೆ ಭಾಗದ ಶಿಕ್ಷಕರು ಮಾತ್ರ ಪರೀಕ್ಷೆಗೆ ಬಳಕೆ ಮಾಡಲಾಗಿದೆ. ಪೂರ್ಣ ತೋಳಿನ ಬಟ್ಟೆ ಧರಿಸಿದ ಅಭ್ಯರ್ಥಿಗೆ ಶಾಕ್ ಪೂರ್ಣ ತೋಳಿನ ಬಟ್ಟೆಯನ್ನ ಧರಿಸಿದ್ದ ಅಭ್ಯರ್ಥಿಯ ಬಟ್ಟೆಯನ್ನ ಬಿಚ್ಚಿಸಿದ ಸಿಬ್ಬಂದಿ ಬಟ್ಟೆ ಬಿಚ್ಚಿಸಿ ಶರ್ಟ್ ನ ಅರ್ಧ ತೋಳು ಕಟ್ ಮಾಡಿದ ಸಿಬ್ಬಂದಿ
ನವದೆಹಲಿ: ಅಯೋಧ್ಯೆಯಿಂದ (Ayodhya) ಹಿಂದಿರುಗಿದ ನಂತರ ನನ್ನ ಮೊದಲ ನಿರ್ಧಾರ ಎಂದು ಹೇಳಿರುವ ಪ್ರಧಾನಿ ನರೇಂದ್ರ ಮೋದಿ ಅವರು ಹೊಸ ಯೋಜನೆಯನ್ನು ಘೋಷಿಸಿದ್ದಾರೆ. ಪ್ರಧಾನಿ ಮೋದಿ (Narendra Modi) ಅಯೋಧ್ಯೆಯಿಂದ ಹಿಂದಿರುಗಿದ ನಂತರ, ಜನರು ತಮ್ಮ ಮನೆಗಳಲ್ಲಿ ಸೋಲಾರ್ ಪ್ಯಾನೆಲ್ (ಸೌರ ಫಲಕ) ಅಳವಡಿಸಿಕೊಳ್ಳಲು ಸಹಾಯ ಮಾಡುವ ಹೊಸ ಯೋಜನೆಯನ್ನು ಪ್ರಾರಂಭಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ. ಈ ನಿರ್ಧಾರವು ಎಲ್ಲಾ ಭಕ್ತರು ಸೂರ್ಯವಂಶಿ ಭಗವಾನ್ ಶ್ರೀರಾಮನ ಬೆಳಕಿನಿಂದ ಶಕ್ತಿಯನ್ನು ಪಡೆಯುತ್ತಾರೆ ಎಂಬ ಅರಿವಿನಿಂದ ಪ್ರೇರಿತವಾಗಿದೆ ಎಂದು ಮೋದಿ ಹೇಳಿದ್ದಾರೆ. https://ainlivenews.com/good-news-for-those-going-to-ayodhya/ ಅಯೋಧ್ಯೆಯಿಂದ ಹಿಂದಿರುಗಿದ ನಂತರ ನಾನು ತೆಗೆದುಕೊಂಡ ಮೊದಲ ನಿರ್ಧಾರವೆಂದರೆ, ನಮ್ಮ ಸರ್ಕಾರವು ‘ಪ್ರಧಾನಮಂತ್ರಿ ಸೂರ್ಯೋದಯ ಯೋಜನೆ’ಯನ್ನು (Pradhanmantri Suryodaya Yojana) 1 ಕೋಟಿ ಮನೆಗಳಿಗೆ ಮೇಲ್ಛಾವಣಿ ಸೌರ ಅಳವಡಿಸುವ ಗುರಿಯೊಂದಿಗೆ ಪ್ರಾರಂಭಿಸಲಿದೆ ಎಂದು ಪ್ರಧಾನಿ ಮೋದಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಇದು ಬಡ ಮತ್ತು ಮಧ್ಯಮ ವರ್ಗದವರ ವಿದ್ಯುತ್ ಬಿಲ್ ಅನ್ನು ಕಡಿಮೆ ಮಾಡುವುದಲ್ಲದೆ, ಇಂಧನ ಕ್ಷೇತ್ರದಲ್ಲಿ ಭಾರತವನ್ನು ಸ್ವಾವಲಂಬಿಯನ್ನಾಗಿ…
ಸ್ಯಾಂಡಲ್ವುಡ್ ನಟ ಗೋಲ್ಡನ್ ಸ್ಟಾರ್ ಗಣೇಶ್ (Golden Star Ganesh) ಅವರು ರಾಮನಾಮ ಪಠಿಸಿದ್ದಾರೆ. ಈ ಮೂಲಕ ಇನ್ನೂ ಇಬ್ಬರು ಸೆಲೆಬ್ರಿಟಿಗಳಿಗೂ ರಾಮನಾಮ (Ram Naam) ಪಠಿಸಲು ಆಹ್ವಾನ ನೀಡಿದ್ದಾರೆ. ಭಗವಾನ್ ಶ್ರೀರಾಮನ ನಾಮ ಪಠಿಸಿದ ವಿಡಿಯೋವೊಂದನ್ನು ಗಣೇಶ್ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಕನ್ನಡದ ಸಿನಿತಾರೆಯರು ಮತ್ತು ಬಾಲಿವುಡ್ ಕಲಾವಿದರು ಸೇರಿದಂತೆ ಅನೇಕರಿಗೆ ರಾಮಮಂದಿರ ಉದ್ಘಾಟನೆಗೆ ಆಹ್ವಾನ ನೀಡಲಾಗಿದೆ. ಶ್ರೀರಾಮ ಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಅಭಿಯಾನವೊಂದು ಶುರುವಾಗಿದೆ. ಬಿ.ವೈ ವಿಜಯೇಂದ್ರ ಅವರ ಆಹ್ವಾನ ಮೇರೆಗೆ ಗಣೇಶ್ ರಾಮನಾಮ ಪಠಿಸಿದ್ದಾರೆ. ಈ ಶ್ರೀರಾಮನ ನಾಮ ಜಪಿಸಲು ಇನ್ನೂ ಇಬ್ಬರು ಸ್ಟಾರ್ಗಳಿಗೆ ಆಹ್ವಾನ ನೀಡಿದ್ದಾರೆ ಶ್ರೀರಾಮನ ನಾಮ ಪಠಿಸಿ ರಿಯಲ್ ಸ್ಟಾರ್ ಉಪೇಂದ್ರ (Upendra) ಮತ್ತು ಅನಿಲ್ ಕುಂಬ್ಳೆ (Anil Kumble) ಅವರಿಗೆ ಗಣೇಶ್ ಆಹ್ವಾನ ನೀಡಿದ್ದಾರೆ. ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ನಟ ಗಣೇಶ್ ತಿಳಿಸಿದ್ದಾರೆ. ಈ ವಿಡಿಯೋ ನೋಡ್ತಿದ್ದಂತೆ ಅಭಿಮಾನಿಗಳು ಜೈ ಶ್ರೀರಾಮ ಎಂದು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.