Author: AIN Author

ಬ್ಯುಸಿ ಜೀವನ ಶೈಲಿಯಲ್ಲಿ ನಮ್ಮ ಆರೋಗ್ಯದ ಬಗ್ಗೆ ಕಾಳಜಿ ತೋರಿಸೋಕೆ ಸಮಯ ಸಿಗ್ತಿಲ್ಲ. ಅದರಲ್ಲೂ ಇತ್ತೀಚಿನ ಕಾಲಘಟ್ಟದಲ್ಲಿ ಆರೋಗ್ಯಕರ ಆಹಾರಕ್ಕಿಂತ ಫಾಸ್ಟ್ ಫುಡ್‍ಗಳ ಹಾವಳಿಯೇ ಹೆಚ್ಚಾಗಿದೆ. ಆದ್ದರಿಂದ ಆರೋಗ್ಯಕರ ಆಹಾರಗಳು ಯಾವುದು? ಅದರ ಲಾಭಗಳೇನು..? ಎನ್ನುವ ವಿಷಯವೇ ಅನೇಕರಿಗೆ ತಿಳಿದಿಲ್ಲ. ಫಾಸ್ಟ್ ಫುಡ್ಸ್ ಗಳ ರುಚಿಗೆ ಮನಸೋತ ಮಂದಿಗೆ ಅದರಿಂದ ಅಷ್ಟೇ ಫಾಸ್ಟಾಗಿ ಆಗುವ ದುಷ್ಪರಿಣಾಮಗಳ ಬಗ್ಗೆ ತಿಳಿದಿರಲ್ಲ. ಹೌದು, ಇಂತಹ ಆರೋಗ್ಯಕ್ಕೆ ಮಾರಕವಾದ ಜೀವನ ಶೈಲಿಯ ಮಧ್ಯೆ ಆರೋಗ್ಯಕರ ಆಹಾರಗಳನ್ನು ಜನ ಮರೆತಿದ್ದಾರೆ. ಸೊಪ್ಪು ತರಕಾರಿ, ಕಾಳುಗಳು ಆರೋಗ್ಯ ವೃದ್ಧಿಸುವಲ್ಲಿ ತುಂಬಾ ಉಪಯುಕ್ತ. ಅದರಲ್ಲೂ ಮೊಳಕೆ ಬಂದ ಕಾಳುಗಳ ಸೇವನೆಯಿಂದ ಎಷ್ಟು ಲಾಭ ಎನ್ನುವುದು ಹಲವರಿಗೆ ಗೊತ್ತಿರಲ್ಲ. ಕಾಳುಗಳನ್ನು ಹಾಗೆಯೇ ತಿನ್ನುವುದಕ್ಕಿಂತ ಅದನ್ನು ನೀರಲ್ಲಿ ನೆನಸಿಟ್ಟು, ಮೊಳಕೆ ಬಂದ ಮೇಲೆ ತಿಂದ್ರೆ ಅದರಲ್ಲಿ ಪೌಷ್ಟಿಕಾಂಶ ಜಾಸ್ತಿ ಇರುತ್ತದೆ. ಮೊಳಕೆ ಒಡೆದ ಕಾಳುಗಳನ್ನು ಬೇಯಿಸಿ ತಿನ್ನುವುದಕ್ಕಿಂದ ಹಸಿಯಾಗಿಯೇ ಸೇವಿಸುವುದು ಉತ್ತಮ. ಯಾಕೆಂದರೆ ಮೊಳಕೆ ಕಾಳುಗಳನ್ನು ಬೇಯಿಸಿದಾಗ ಅದರ ಪೌಷ್ಟಿಕತೆ ದೇಹಕ್ಕೆ ಸಿಗಲ್ಲ.…

Read More

ಬೆಂಗಳೂರು:- KRPP ಪಕ್ಷದ ಸಂಸ್ಥಾಪಕ ಗಾಲಿ ಜನಾರ್ಧನ್ ರೆಡ್ಡಿ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಸರ್ವ ಯತ್ನಗಳು ಬಿಜೆಪಿಯಿಂದ ನಡೆಯುತ್ತಿವೆ. ಇತ್ತೀಚೆಗಷ್ಟೇ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಕಟ್ಟಿ ಚುನಾವಣೆಯಲ್ಲಿ ಗೆದ್ದ ಗಾಲಿ ಜನಾರ್ಧನ್ ರೆಡ್ಡಿ ಅವರನ್ನು ಪಕ್ಷಕ್ಕೆ ಕರೆತರುವ ಮೂಲಕ ಮುಂದಿನ ಚುನಾವಣೆಗಳಲ್ಲಿ ಸ್ಥಾನ ಕೈತಪ್ಪದಂತೆ ಬಿಜೆಪಿ ಯೋಚಿಸಿದೆ. ಇದರಿಂದ ಕಾಂಗ್ರೆಸ್‌ಗು ತಕ್ಕ ಉತ್ತರ ನೀಡಿದಂತಾಗುತ್ತದೆ ಎಂದು ಬಿಜೆಪಿ ಲೆಕ್ಕಾಚಾರ ಹಾಕಿದೆ. ಅಕ್ರಮ ಗಣಿಗಾರಿಕೆ ಹಿನ್ನೆಲೆಯಲ್ಲಿ ದಶಕದಿಂದಲೂ ರಾಜಕೀಯದಿಂದ ದೂರ ಉಳಿದಿದ್ದ ಗಾಲಿ ಜನಾರ್ಧನ್ ರೆಡ್ಡಿ ಇದೇ 2023ರ ಚುನಾವಣೆ ವೇಳೆ ಸ್ವಂತ ಪಕ್ಷ ಕೆಆರ್‌ಪಿಪಿ ಕಟ್ಟುವ ಮೂಲಕ ಕಲ್ಯಾಣ ಬಿಜೆಪಿ ಸೇರಿದಂತೆ ರಾಜಕೀಯ ಪಕ್ಷಗಳಿಗೆ ಠಕ್ಕರ್ ಕೊಟ್ಟಿದ್ದರು. ಇದೇ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕೊಪ್ಪಳ ಜಿಲ್ಲೆ ಗಂಗಾವತಿಯಿಂದ ಸ್ಪರ್ಧಿಸಿ ಕೆಆರ್‌ಪಿಪಿಯಿಂದ ರೆಡ್ಡಿಯವರು ಮಾತ್ರವೇ ಗೆದ್ದರು. ಬಳ್ಳಾರಿ ನಗರ ಕ್ಷೇತ್ರದಿಂದ ಬಿಜೆಪಿಗೆ ವಿರುದ್ಧ ಪತ್ನ ಲಕ್ಷ್ಮೀ ಅರುಣಾ ಅವರನ್ನು ಅಖಾಡಕ್ಕಿಳಿಸಿ ಬಿಜೆಪಿಗೆ ಸೆಡ್ಡು ಹೊಡೆದಿದ್ದರು. ಇದೆಲ್ಲ ಗಮನಿಸಿರುವ ಬಿಜೆಪಿ ಮುಂದೆ…

Read More

ಬಿಗ್‌ಬಾಸ್‌ ಮನೆಯಿಂದ ಭಾಗ್ಯಶ್ರೀ ಔಟ್ ಆಗಿದ್ದಾರೆ. ತಮ್ಮ ಹೆಸರಿನಲ್ಲಿಯೇ ಭಾಗ್ಯವನ್ನು ಇರಿಸಿಕೊಂಡಿರುವ ಭಾಗ್ಯಶ್ರೀ ಅವರಿಗೆ ಬಿಗ್‌ಬಾಸ್‌ ಮನೆಯೊಳಗೂ ಅನೇಕ ಸಲ ಭಾಗ್ಯವೇ ಕೈ ಹಿಡಿದಿತ್ತು. ಮಾತು ಮಾತಿಗೂ ಕಣ್ಣೀರು ಸುರಿಸುವ ಅವರ ಸ್ವಭಾವದಿಂದ ಅಳುಮುಂಜಿಯಾಗಿ ಬಿಂಬಿತವಾಗಿದ್ದರೂ, ಅವರು ಇಷ್ಟು ವಾರಗಳ ಕಾಲ ಬಿಗ್‌ಬಾಸ್ ಮನೆಯಲ್ಲಿ ಉಳಿದುಕೊಂಡಿದ್ದರು. ಹಾಗೆ ನೋಡಿದರೆ ಎರಡು ವಾರಗಳ ಹಿಂದೆಯೇ ಅವರು ಬಿಗ್‌ಬಾಸ್ ಮನೆಯಿಂದ ಹೊರಗೆ ಹೋಗಬೇಕಾಗಿತ್ತು. ಸುದೀಪ್‌ ಅವರು, ಭಾಗ್ಯಶ್ರೀ ಎಲಿಮಿನೇಟ್ ಆಗಿರುವ ಸಂಗತಿಯನ್ನು ಘೋಷಿಸಿದ್ದರು ಕೂಡ. ಆದರೆ ಬಿಗ್‌ಬಾಸ್ ಮನೆಯ ಬಾಗಿಲು ತೆರೆದಿರಲಿಲ್ಲ. ಆ ವಾರ ಹಬ್ಬದ ಕಾರಣಕ್ಕಾಗಿ ಯಾರನ್ನೂ ಎಲಿಮಿನೇಟ್ ಮಾಡದೇ ಉಳಿಸಿಕೊಂಡಿದ್ದರು ಬಿಗ್‌ಬಾಸ್. ಅದರ ಮುಂದಿನ ವಾರ ಪ್ರತಾಪ್‌ ಅವರು ಭಾಗ್ಯಶ್ರೀಯನ್ನು ನಾಮಿನೇಷನ್‌ ಪಟ್ಟಿಯಿಂದಲೇ ಪಾರುಮಾಡಿದ್ದರು. ಅದಾದ ಮೇಲೆ, ವರ್ತೂರು ಸಂತೋಷ್‌ ಅವರ ಕಾರಣದಿಂದ ಇನ್ನೊಂದು ವಾರ ಎಲಿಮಿನೇಷನ್‌ ನಡೆದಿರಲಿಲ್ಲ. ಈ ವಾರ ಡಬಲ್‌ ಎಲಿಮಿನೇಷನ್‌ನೊಂದಿಗೆ ಕಿಚ್ಚ ವೀಕೆಂಡ್ ಎಪಿಸೋಡಿಗೆ ಬಂದಿದ್ದರು. ಅದರ ಪ್ರಕಾರ ಶನಿವಾರದ ಪಂಚಾಯ್ತಿಯಲ್ಲಿ ಇಶಾನಿ ಅವರು ಎಲಿಮಿನೇಟ್ ಆಗಿದ್ದರು.…

Read More

ನ್ಯೂಯಾರ್ಕ್: ಪೋರ್ನ್ ವೆಬ್‌ಸೈಟ್‌ನಲ್ಲಿ ವಿವಿಧ ವಿಡಿಯೋಗಳನ್ನು ನೋಡಿ ಎಂಜಾಯ್ ಮಾಡುತ್ತಿದ್ದ ವ್ಯಕ್ತಿ, ಆಕೆಯನ್ನು ಪೋರ್ನ್ ವೆಬ್‌ಸೈಟ್, ಪೋರ್ನ್ ಸಾಮಾಜಿಕ ಮಾಧ್ಯಮ ಖಾತೆಗಳಲ್ಲೂ ಫಾಲೋ ಮಾಡುತ್ತಿದ್ದ. ಅಚಾನಕ್ಕಾಗಿ ಇದೇ ಪೋರ್ನ್ ಸ್ಟಾರನ್ನು ಸಾರ್ವನಿಕ ಪ್ರದೇಶದಲ್ಲಿ ಮಹಿಳಾ ಪೊಲೀಸ್ ಆಗಿ ನೋಡಿದ್ದಾನೆ. ಒಂದು ಕ್ಷಣಕ್ಕೆ ತನ್ನ ಕಣ್ಣನ್ನು ತನಗೆ ನಂಬಲು ಸಾಧ್ಯವಾಗಿಲ್ಲ. ಕಾರಣ, ಸಿಗ್ನಲ್ ಜಂಪ್ ಮಾಡಿ ಸಾಗುತ್ತಿದ್ದ ಈ ವ್ಯಕ್ತಿಯನ್ನು ಇದೇ ಪೋರ್ನ್ ಸ್ಟಾರ್ ಪೊಲೀಸ್ ಅಧಿಕಾರಿಯಾಗಿ ತಡೆದು ನಿಲ್ಲಿಸಿದ್ದಾರೆ. ಬಂಧಿಸಲು ಮುಂದಾದ ಮಹಿಳಾ ಪೊಲೀಸ್‌ಗೆ ಚಾಲಕ ಹಾಕಿದ ಒಂದು ಅವಾಜ್‌ನಿಂದ ಸಂಪೂರ್ಣ ವೃತ್ತಾಂತ ಬಯಲಾಗಿದೆ. ಚಾಲಕ ಹಾಗೂ ಮಹಿಳಾ ಪೊಲೀಸ್ ನಡುವಿನ ಮಾತಿನ ಚಕಮಕಿಯಲ್ಲಿ ಮಹಿಳಾ ಪೊಲೀಸ್, ಪೊರ್ನ್ ಸೈಟ್‌ನಲ್ಲೂ ಸಕ್ರೀಯವಾಗಿರುವುದು ಬಹಿರಂಗವಾಗಿದೆ. ಈ ಘಟನೆ ನಡೆದಿರುವುದು ಅಮೆರಿದ ಮಿನ್ನೆಪೊಲಿಸ್ ಡಿಪಾರ್ಟ್‌ಮೆಂಟ್‌ನಲ್ಲಿ. ಮಿನ್ನೆಪೊಲಿಸ್ ಪೊಲೀಸ್ ವಿಭಾಗದಲ್ಲಿ ಮಹಿಳಾ ಪೊಲೀಸ್ ಆಗಿ ಕರ್ತವ್ಯದಲ್ಲಿದ್ದ ಈಕೆ, ಒನ್ಲಿ ಫ್ಯಾನ್ಸ್ ಪೋರ್ನ್ ವೆಬ್‌ಸೈಟ್‌ನಲ್ಲೂ ಸಕ್ರಿಯವಾಗಿದ್ದರು. ಇದು ಸೆಕ್ಸ್ ಸಂಬಂಧಿತ ಪೊರ್ನ್ ವಿಡಿಯೋಗಳ ಹಬ್. ಇಲ್ಲಿ ಪೊರ್ನ್ ನಟಿಯಾಗಿಯೂ…

Read More

ಆಸ್ಟ್ರೇಲಿಯ ನಾಯಕನಿಗೆ ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವಕಪ್ ಟ್ರೋಫಿ ನೀಡಿದ್ದಾರೆ. ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ 2023 ರ ಫೈನಲ್ ಪಂದ್ಯವನ್ನು ಗೆದ್ದ ನಂತರ ಆಸ್ಟ್ರೇಲಿಯ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್‌ ಅವರಿಗೆ ವಿಜೇತ ಟ್ರೋಫಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಆಸ್ಟ್ರೇಲಿಯ ಉಪಪ್ರಧಾನಿ ರಿಚರ್ಡ್ ಮಾರ್ಲ್ಸ್ ಅವರೊಂದಿಗೆ ನೀಡಿದರು. ಆಸ್ಟ್ರೇಲಿಯಾ 6 ವಿಕೆಟ್‌ಗಳಿಂದ ಗೆದ್ದು ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅವರು ಪಂದ್ಯವನ್ನು ವೀಕ್ಷಿಸಿದರು. ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ಭಾರತೀಯ ಆಟಗಾರರಿಗೆ ಆಯಾ ರನ್ನರ್ಸ್-ಅಪ್ ಪದಕಗಳನ್ನು ನೀಡಿ ಗೌರವಿಸಿದರು.

Read More

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ವಿಶ್ವಕಪ್ ಕೊನೆಯ ಲೀಗ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಸೋಲೊಪ್ಪಿದೆ. ಸೋಲಿನ ಬೆನ್ನಲ್ಲೇ ಸೋಶಿಯಲ್‌ ಮೀಡಿಯಾದಲ್ಲಿ ಫ್ಯಾನ್ಸ್‌ ವಿಮರ್ಶೆ ಶುರುವಾಗಿದೆ. ಈಗಿನ ಜಮಾನದ ಕ್ರಿಕೆಟ್‌ ಅಭಿಮಾನಿಗಳಿಗೆ 90ರ ದಶಕದ ಕ್ರಿಕೆಟ್‌ ಅಭಿಮಾನಿಗಳು 2003ರ ವಿಶ್ವಕಪ್‌ ಫೈನಲ್‌ ಸೋಲಿನ ಬಗ್ಗೆ ಮಾತನಾಡಿದಾಗ ಆ ಬಗ್ಗೆ ಅಷ್ಟೇನೂ ಆಸಕ್ತಿ ತೋರುತ್ತಿರಲಿಲ್ಲ. ಆದರೆ, ಅಂದು ತಂಡ ಎದುರಿಸಿದ ಸೋಲು ಹೇಗಿತ್ತು ಎನ್ನುವುದು ಈಗಿನ ಜಮಾನದ ಕ್ರಿಕೆಟ್‌ ಅಭಿಮಾನಿಗಳಿಗೆ 2023ರ ಕ್ರಿಕೆಟ್‌ ವಿಶ್ವಕಪ್‌ನ ಸೋಲು ತೋರಿಸಿದೆ. ಎರಡೂ ಬಾರಿ ಆಸ್ಟ್ರೇಲಿಯಾವೇ ನಮ್ಮ ಎದುರಾಳಿ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ತಂಡ 6 ವಿಕೆಟ್‌ ಸೋಲು ಕಂಡ ಬಳಿಕ ಸೋಶಿಯಲ್‌ ಮೀಡಿಯಾದಲ್ಲಿ ಸೋಲಿನ ಪೂರ್ವಾಪರದ ಬಗ್ಗೆ ಚರ್ಚೆಗಳು ಆಗುತ್ತಿದೆ. ಪಿಚ್‌ ಬ್ಯಾಟಿಂಗ್‌ ಸ್ನೇಹಿಯಾಗಿ ಇರದೇ ಇದ್ದರೂ, ಬ್ಯಾಟಿಂಗ್‌ ಮಾಡಲು ಕಷ್ಟವೇನೂ ಆಗುತ್ತಿರಲಿಲ್ಲ. ಆಸೀಸ್‌ ಬೌಲರ್‌ಗಳನ್ನು ಎದುರಿಸುವ ವೇಳೆಯಲ್ಲೇ ಭಾರತದ ಬ್ಯಾಟ್ಸ್‌ಮನ್‌ಗಳು ಮೆತ್ತಗಾಗಿದ್ದರು. ಸ್ಲಾಗ್‌ ಓವರ್‌ನಲ್ಲಿ ರನ್‌ ಬಾರಿಸಬೇಕಾಗಿದ್ದ ಸೂರ್ಯಕುಮಾರ್‌ ಯಾದವ್‌ ಅವರ…

Read More

ಅಹಮದಾಬಾದ್​ನ ನರೇಂದ್ರ ಮೋದಿ ಮೈದಾನದಲ್ಲಿ ಭಾನುವಾರ ಏಕದಿನ ವಿಶ್ವಕಪ್ ಕ್ರಿಕೆಟ್​ ಪಂದ್ಯಾವಳಿಯ ಫೈನಲ್​ ಪಂದ್ಯ ನಡೆದಿದ್ದು, ಇದರಲ್ಲಿ ಭಾರತ ಸೋತು, ವಿಶ್ವಕಪ್ ಆಸ್ಟ್ರೇಲಿಯಾದ ಪಾಲಾಗಿದೆ. ಪಂದ್ಯ ಮುಗಿಯುತ್ತಿದ್ದಂತೆ ಪ್ರಧಾನಿ ಮೋದಿ, ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂತಾದವರು ಭಾರತ ತಂಡದ ಕುರಿತು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಪ್ರೀತಿಯ ಭಾರತ ತಂಡದವರೇ.. ವಿಶ್ವಕಪ್ ಮೂಲಕ ನಿಮ್ಮ ಪ್ರತಿಭೆ ಮತ್ತು ಸಂಕಲ್ಪ ಗಮನ ಸೆಳೆಯಿತು. ನೀವು ಉತ್ತಮ ಉತ್ಸಾಹದಿಂದ ಆಡಿದ್ದೀರಿ ಮತ್ತು ರಾಷ್ಟ್ರಕ್ಕೆ ಅಪಾರ ಹೆಮ್ಮೆ ತಂದಿದ್ದೀರಿ. ನಾವು ಇಂದು ಮತ್ತು ಎಂದೆಂದೂ ನಿಮ್ಮೊಂದಿಗೆ ಇರುತ್ತೇವೆ ಎಂದು ಮೋದಿ ಹೇಳಿದ್ದಾರೆ. https://twitter.com/narendramodi/status/1726269827017515059?ref_src=twsrc%5Etfw%7Ctwcamp%5Etweetembed%7Ctwterm%5E1726269827017515059%7Ctwgr%5E6133977d7d266ce156d7a1af1e03e9d96afe50eb%7Ctwcon%5Es1_c10&ref_url=http%3A%2F%2Fapi-news.dailyhunt.in%2F ಟೀಮ್ ಇಂಡಿಯಾ.. ನೀವು ಪಂದ್ಯಾವಳಿಯಲ್ಲಿ ಉತ್ತಮವಾಗಿ ಆಡಿದ್ದೀರಿ. ಸೋಲು-ಗೆಲುವಿನಲ್ಲೂ ನಾವು ನಿಮ್ಮನ್ನು ಒಂದೇ ರೀತಿಯಲ್ಲಿ ಪ್ರೀತಿಸುತ್ತೇವೆ ಮತ್ತು ನಾವು ಮುಂದಿನ ಸಲ ಗೆಲ್ಲುತ್ತೇವೆ ಎಂದಿರುವ ರಾಹುಲ್ ಗಾಂಧಿ, ವಿಶ್ವಕಪ್ ಗೆಲುವಿಗಾಗಿ ಆಸ್ಟ್ರೇಲಿಯಾಕ್ಕೆ ಅಭಿನಂದನೆಗಳು ಎಂದೂ ತಿಳಿಸಿದ್ದಾರೆ. ವಿಶ್ವಕಪ್ ವಿಜೇತ ಆಸ್ಟ್ರೇಲಿಯಾ ತಂಡಕ್ಕೆ ಅಭಿನಂದನೆಗಳು. https://twitter.com/RahulGandhi/status/1726273182146113963?ref_src=twsrc%5Etfw%7Ctwcamp%5Etweetembed%7Ctwterm%5E1726273182146113963%7Ctwgr%5E6133977d7d266ce156d7a1af1e03e9d96afe50eb%7Ctwcon%5Es1_c10&ref_url=http%3A%2F%2Fapi-news.dailyhunt.in%2F ಇಡೀ ಪಂದ್ಯಾವಳಿಯಲ್ಲಿ ಭಾರತ…

Read More

ಮನುಷ್ಯ ದಿನನಿತ್ಯದ ಜೀವನದಲ್ಲಿ ಒಂದಲ್ಲ ಒಂದು ರೀತಿಯಾಗಿ ಎಐನ (Artificial Intelligence) ಜಾಲಕ್ಕೆ ಸಿಲಕಿದ್ದಾನೆ. ಈಗ ಎಐ (AI) ಬದುಕಿನ ಭಾಗವಾಗಿ ಹೋಗಿದೆ. ಉದಾಹರಣೆಗೆ ನಮ್ಮ ಆಸಕ್ತಿದಾಯಕ ವಿಚಾರಗಳೇ ನಮಗೆ ಇಂಟರ್‌ನೆಟ್‌ನಲ್ಲಿ ಲಭಿಸುತ್ತದೆ. ಯಾಕೆಂದರೆ ಕಾರಣ ಈ ಎಐ, ನಾವು ಗೂಗಲ್ ಅಥವಾ ಯೂಟ್ಯೂಬ್‍ನಲ್ಲಿ ನಮಗೆ ಬೇಕಾದ ಮಾಹಿತಿ ಹುಡುಕಿದಾಗ ಬೇರೆ ಏನನ್ನಾದರೂ ನೋಡುವಾಗಲೂ ಈ ಹಿಂದೆ ಹುಡುಕಿದ ವಿಚಾರಕ್ಕೆ ಸಂಬಂಧಿಸಿದ ಜಾಹಿರಾತುಗಳು, ಅದರ ವಿಧಗಳು ನಮಗೆ ಕಾಣಿಸುತ್ತವೆ. ಅಮೆರಿಕಾದ ಕಂಪ್ಯೂಟರ್ ವಿಜ್ಞಾನಿ ಜಾನ್ ಮೆಕಾರ್ತಿಯವರು 1956ರಲ್ಲಿ ಮೊದಲ ಬಾರಿಗೆ ಎಐ (ಆರ್ಟಿಫಿಷಿಯಲ್ ಇಂಟೆಲಿಜೆನ್ಸ್) ಪದವನ್ನು ಬಳಕೆ ಮಾಡುತ್ತಾರೆ. ನಂತರದ ಬೆಳವಣಿಗೆಯಲ್ಲಿ ಸಂಶೋಧನೆಗಳಿಂದ ಇಂದು ಎಐ ತಂತ್ರಜ್ಞಾನ ಜಗತ್ತಿಗೆ ಹಬ್ಬಿದೆ. ಮನುಷ್ಯ ದೈಹಿಕ ಅಥವಾ ಬೌದ್ಧಿಕವಾಗಿ (Human Intelligence) ನಿರ್ವಹಿಸಬಹುದಾದ ಕೆಲಸವನ್ನು ತಂತ್ರಜ್ಞಾನ ಆಧಾರಿತವಾದ ಸಾಧನಗಳ ಮೂಲಕ ಮಾಡುವಂತಹ ಅಥವಾ ಮಾಡಿಸುವಂತಹ ಆವಿಷ್ಕಾರವನ್ನೇ ಕೃತಕ ಬುದ್ಧಿಮತ್ತೆ (Artificial Intelligence) ಎಂದು ಕರೆಯಬಹುದು. ಉದಾಹರಣೆಗೆ ಕ್ಯಾಲ್ಕೂಲೇಟರ್‌, ಕಂಪ್ಯೂಟರ್ (Computer), ರೋಬೋಟ್ ಇತ್ಯಾದಿ. ಇತ್ತೀಚೆಗೆ…

Read More

ಮದ್ದೂರು: ಕುಮಾರಸ್ವಾಮಿಗೆ ನಮ್ಮನ್ನು ನೋಡಿ ಸಹಿಸೋಕಾಗುತ್ತಿಲ್ಲ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಮತ್ತು ನಾನು ಅಧಿಕಾರದಲ್ಲಿರುವುದನ್ನು ನೋಡಿ ಕುಮಾರಸ್ವಾಮಿ ಅವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಅವರು ಖುಷಿಯಾಗಿರಬೇಕು ಎಂದರೆ ನಾವು ರಾಜಕೀಯದಿಂದ ನಿವೃತ್ತಿಯಾಗಬೇಕು. ಆಗಲಾದರೂ ನೆಮ್ಮದಿಯಾಗಿರುತ್ತಾರೋ ನೋಡಬೇಕು ಎಂದು ಲೇವಡಿ ಮಾಡಿದರು. ಕುಮಾರಸ್ವಾಮಿಗೆ ಅಧಿಕಾರ ಸಿಕ್ಕಾಗ ಅದನ್ನು ಮುನ್ನಡೆಸೋಕೆ ಆಗೋಲ್ಲ. ಅಧಿಕಾರ ಬಿಟ್ಟು ಇರಲಾಗುವುದಿಲ್ಲ. ಅವರು ಒಂದು ರೀತಿಯಲ್ಲಿ ಹತಾಶರಾಗಿದ್ದಾರೆ. ಅಧಿಕಾರ ಸಿಕ್ಕಿದಷ್ಟು ದಿನ ಪೂರ್ಣ ಪ್ರಮಾಣದಲ್ಲಿ ಅಧಿಕಾರ ನಡೆಸಲು ಆಗಿಲ್ಲ. ನಮ್ಮ ಮಾಜಿ ಸ್ನೇಹಿತರನ್ನು ನೋಡಿದರೆ ನನಗೆ ಪಾಪ ಅನ್ನಿಸುತ್ತದೆ ಎಂದು ವ್ಯಂಗ್ಯವಾಡಿದರು. ಕುಮಾರಸ್ವಾಮಿಯವರು ಆರೋಗ್ಯವಾಗಿ, ನೆಮ್ಮದಿಯಿಂದ, ಖುಷಿಯಾಗಿರಬೇಕು ಅಂತ ಅಂದುಕೊಳ್ಳುತ್ತೇವೆ. ಅಧಿಕಾರದಲ್ಲಿರುವ ನಮ್ಮನ್ನು ನೋಡಿ ಅವರಿಗೆ ತಡೆದುಕೊಳ್ಳಲಾಗದೆ ಅವರಿವರನ್ನು ಬೈಯ್ಯುತ್ತಾ ಲಘುವಾಗಿ ಮಾತನಾಡುತ್ತಾರೆ. ಮಾಜಿ ಪ್ರಧಾನಿ ರಕ್ಷಣೆ ಇದೆ ಎಂದು ಬಾಯಿಗೆ ಬಂದಂತೆ ಮಾತನಾಡಬಾರದು. ಮಾತನಾಡುವುದಕ್ಕೂ ಒಂದು ಇತಿ-ಮಿತಿ ಇರುತ್ತದೆ ಎಂದರು

Read More

ಗಸಗಸೆಯು ಸಸ್ಯದಿಂದ ಪಡೆಯುವ ಈ ಎಣ್ಣೆಬೀಜ ಬೆಳ್ಳುಳ್ಳಿ ಮತ್ತು ಸಾಸಿವೆಯ ಹೊರತಾಗಿ, ಭಾರತೀಯ ಅಡಿಗೆಮನೆಯಲ್ಲಿ ಕಂಡುಬರುವ ಸ್ಥಿರ ಮಸಾಲೆ ಪದಾರ್ಥವಾಗಿದೆ. ಇದನ್ನು ಹಿಂದಿಯಲ್ಲಿ ಖುಸ್ ಖುಸ್ ಎಂದೂ, ತಮಿಳಿನಲ್ಲಿ ಕಸಕಸ ಎಂದೂ, ತೆಲುಗಿನಲ್ಲಿ ಗಸಗಸುಲು ಎಂದೂ ಕರೆಯಲಾಗುವ, ಹೂಗಳಿಂದ ತುಂಬಿರುವ ಸಸ್ಯವಾದ ಗಸಗಸೆಯನ್ನು ಆಗ್ನೇಯ ಯೂರೋಪ್ ಮತ್ತು ಪೂರ್ವ ಹಾಗೂ ದಕ್ಷಿಣ ಏಷ್ಯಾದಾದ್ಯಂತ ಹೆಚ್ಚು ಬೆಳೆಯಲಾಗುತ್ತದೆ. ​ಗಸಗಸೆಯ ಪ್ರಯೋಜನಗಳು ಪಾಪವಿರ್ ಸೊಮ್ನಿಫೆರಮ್ ಎನ್ನುವ ಸಸ್ಯಶಾಸ್ತ್ರೀಯ ಹೆಸರಿನ ಗಸಗಸೆ ಅಡಿಗೆಗೆ ಮಾತ್ರ ಪ್ರಯೋಜನವಷ್ಟೇ ಅಲ್ಲದೇ ಇದು ಹೃದಯ ರೋಗ, ಜೀರ್ಣ, ಕೂದಲು ಮತ್ತು ಚರ್ಮದ ಸಮಸ್ಯೆಗಳು, ನಿದ್ರಾಹೀನತೆ, ಮಧುಮೇಹ, ಮೂಳೆಗಳ ಅಸಹಜತೆ ಮತ್ತು ನರ ಸಮಸ್ಯೆಗಳಂತಹ ಅನೇಕ ಖಾಯಿಲೆಗಳಿಗೆ ಚಿಕಿತ್ಸೆ ನೀಡುವ ಆರೋಗ್ಯಕರ ಪ್ರಯೋಜನಗಳನ್ನು ಹೊಂದಿದೆ. ಮಧ್ಯಯುಗದಲ್ಲಿ, ಗಸಗಸೆಯನ್ನು ಹೆಚ್ಚಾಗಿ ಮಂಪರುಕಾರಕವಾಗಿ ಬಳಸಲಾಗುತ್ತಿತ್ತು. ಇದನ್ನು ಹಾಲು, ಅಫೀಮು ಅಥವಾ ಜೇನುತುಪ್ಪದ ಮಿಶ್ರಣದೊಂದಿಗೆ ಬಳಸಿ ಅಳುವ ಮಕ್ಕಳನ್ನು ಸಮಾಧಾನಗೊಳಿಸಲಾಗುತ್ತಿತ್ತು, ಇದು ನಿದ್ರೆ ಬರಿಸಲು ಮತ್ತು ಮಹಿಳೆಯರಲ್ಲಿ ಬಂಜೆತನದ ಸಮಸ್ಯೆಗಳನ್ನು ಸರಿಪಡಿಸಲು ಬಳಸಲಾಗುತ್ತಿತ್ತು. ​3 ವಿಧಗಳಿವೆ…

Read More