Author: AIN Author

ಮುಂಬೈ: ಮಹಿಳಾ ಪ್ರೀಮಿಯರ್‌ ಲೀಗ್‌ (Women’s Premier League) ನಲ್ಲಿ ಭಾರೀ ಮೊತ್ತಕ್ಕೆ ಬಿಡ್‌ ಆಗಿರುವ ಕನ್ನಡತಿ ವೃಂದಾ ದಿನೇಶ್ (Vrinda Dinesh) ಅವರು ತಮ್ಮ ಹೆತ್ತವರಿಗೆ ಕನಸಿನ ಕಾರನ್ನು ಉಡುಗೊರೆಯಾಗಿ ನೀಡುವುದಾಗಿ ಹೇಳಿದ್ದಾರೆ. ಯುಪಿ ವಾರಿಯರ್ಸ್‌ (UP Warriorz) ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ವೃಂದಾ ಅವರು, ಬೆಂಗಳೂರಿನಲ್ಲಿರುವ ತನ್ನ ತಾಯಿಗೆ ಕರೆ ಮಾಡಿರುವುದಾಗಿ ತಿಳಿಸಿದ್ದಾರೆ. ಸುದ್ದಿ ಕೇಳಿ ಅಮ್ಮ ತುಂಬಾ ಸಂತೋಷಪಟ್ಟರು. ನಾನು ಅವರನ್ನು ಹೆಮ್ಮೆಪಡಿಸಲು ಬಯಸುತ್ತೇನೆ. ಹೀಗಾಗಿ ಅವರು ಕನಸು ಕಂಡಿದ್ದ ಕಾರನ್ನು ನೀಡುತ್ತೇನೆ. ಇದೇ ನನ್ನ ಮೊದಲ ಗುರಿ ಎಂದು ತಿಳಿಸಿದ್ದಾರೆ. ದೇಶೀಯ ಪಂದ್ಯಗಳಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸುತ್ತಿರುವ 22 ವರ್ಷ ವೃಂದಾ ಇನ್ನೂ ಟೀಂ ಇಂಡಿಯಾವನ್ನು (Team India) ಪ್ರತಿನಿಧಿಸಿಲ್ಲ. https://ainlivenews.com/representative-traveled-330-km-on-a-rented-bike-and-went-to-the-assembly/ ಹೀಗಿದ್ದರೂ ದೇಶೀಯ ಪಂದ್ಯಗಳಲ್ಲಿ ನೀಡಿದ ಅಮೋಘ ಪ್ರದರ್ಶನವನ್ನು ಗಮನಿಸಿ ಯುಪಿ ತಂಡ ವೃಂದಾ ಅವರನ್ನು ಖರೀದಿಸಿದೆ. ಈ ಮೂಲಕ ಟೀಂ ಇಂಡಿಯಾ ಪ್ರತಿನಿಧಿಸದೇ ಅತಿ ಹೆಚ್ಚು ಮೊತ್ತಕ್ಕೆ ಮಾರಾಟವಾದ ಎರಡನೇ ಆಟಗಾರ್ತಿಯಾಗಿ…

Read More

SBI ಅಧಿಕೃತ ಅಧಿಸೂಚನೆಯ ಮೂಲಕ ಜೂನಿಯರ್ ಅಸೋಸಿಯೇಟ್ಸ್ (ಗ್ರಾಹಕ ಬೆಂಬಲ ಮತ್ತು ಮಾರಾಟ) ಪೋಸ್ಟ್‌ಗಳನ್ನು ಭರ್ತಿ ಮಾಡಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಭಾರತ ಸರ್ಕಾರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. SBI ನೇಮಕಾತಿ 2023 ಅರ್ಹತಾವಿವರಗಳು ಶೈಕ್ಷಣಿಕ ಅರ್ಹತೆ: ಎಸ್‌ಬಿಐ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು. ವಯಸ್ಸಿನ ಮಿತಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 01-Apr-2023 ರಂತೆ ಕನಿಷ್ಠ 20 ವರ್ಷಗಳು ಮತ್ತು ಗರಿಷ್ಠ 28 ವರ್ಷಗಳನ್ನು ಹೊಂದಿರಬೇಕು. ವಯೋಮಿತಿಸಡಿಲಿಕೆ: OBC ಅಭ್ಯರ್ಥಿಗಳು: 03 ವರ್ಷಗಳು SC/ST ಅಭ್ಯರ್ಥಿಗಳು: 05 ವರ್ಷಗಳು PwBD (Gen/EWS) ಅಭ್ಯರ್ಥಿಗಳು: 10 ವರ್ಷಗಳು PwBD (OBC) ಅಭ್ಯರ್ಥಿಗಳು: 13 ವರ್ಷಗಳು PwBD (SC/ST) ಅಭ್ಯರ್ಥಿಗಳು: 15 ವರ್ಷಗಳು ಅರ್ಜಿಶುಲ್ಕ: SC/ST/PwBD/ESM/DESM ಅಭ್ಯರ್ಥಿಗಳು: ಇಲ್ಲ…

Read More

ಪಠಾಣ್ ಮತ್ತು ಜವಾನ್ ಸಿನಿಮಾದ ಯಶಸ್ಸಿನ ಅಲೆಯಲ್ಲಿರುವ ಬಾಲಿವುಡ್ ಬಾದ್ಷಾ ಶಾರುಖ್ ಖಾನ್, ತಮ್ಮ ಮುಂದಿನ ಸಿನಿಮಾ “ಡಂಕಿ”ಗಾಗಿ ಎದುರು ನೋಡುತ್ತಿದ್ದಾರೆ. ಅಭಿಮಾನಿಗಳು ಕೂಡ ಕಾತರದಿಂದ ಕಾಯುತ್ತಿದ್ದಾರೆ. ರಾಜ್ಕುಮಾರ್ ಹಿರಾನಿ ನಿರ್ದೇಶನ ಡಂಕಿ ಸಿನಿಮಾ, ಡಿ.21ರಂದು ಬಿಡುಗಡೆಯಾಗಲಿದ್ದು, ಈಗಾಗಲೇ ಟ್ರೈಲರ್ನಿಂದಲೇ ಸಿನಿಮಾ ಸಾಕಷ್ಟು ಸದ್ದು ಮಾಡುತ್ತಿದೆ. ಡಂಕಿ ಡ್ರಾಪ್-3 ಬಳಿಕ ಡಂಕಿ ಡ್ರಾಪ್-4 ಬಿಡುಗಡೆ ಮಾಡಲು ಚಿತ್ರತಂಡ ಸಜ್ಜಾಗಿದೆ. ಅದಕ್ಕಾಗಿ ಭರದಿಂದ ಚಿತ್ರೀಕರಣ ನಡೆಸಲಾಗಿದೆ. ಬಿಡುಗಡೆ ಸಜ್ಜಾಗಿರುವ ಹೊತ್ತಲ್ಲೇ ಇದೀಗ ಚಿತ್ರೀಕರಣ ಅಂತಾ ಹುಬ್ಬೇರಿಸಬೇಡಿ. ಡಂಕಿ ಚಿತ್ರದ ಸ್ಪೆಷಲ್ ನಂಬರ್ ಇತ್ತೀಚಿಗಷ್ಟೇ ಅಬುದಬಿಯಲ್ಲಿ ಶೂಟ್ ಮಾಡಲಾಗಿದೆ. ಸುಹಾನಾ ಖಾನ್ ಡೆಬ್ಯು ಸಿನಿಮಾದ ಪ್ರೀಮಿಯರ್ ಮುಗಿಸಿ ಯುಎಇಗೆ ಹಾರಿದ ಶಾರುಖ್ ಅಂಡ್ ಟೀಂ, ಮೂರು ದಿನ ಸ್ಪೆಷಲ್ ನಂಬರ್ ಚಿತ್ರೀಕರಣ ನಡೆಸಿದೆ. ಶಾರುಖ್ ಖಾನ್ ಜತೆಗೆ ನಟಿ ತಾಪ್ಪಿ ಪನ್ನು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ನಟ ವಿಕ್ಕಿ ಕೌಶಲ್ ಗೆಸ್ಟ್ ರೋಲ್ ಮಾಡಿದ್ದಾರೆ. ಸಂಜು ಸಿನಿಮಾದ ಬ್ಲಾಕ್ ಬಸ್ಟರ್ ಸಕ್ಸಸ್ ಬಳಿಕ ನಿರ್ದೇಶಕ…

Read More

ಸಿಂಧನೂರು: ಅಧಿಕಾರಿಗಳ ವರ್ಗಾವಣೆಗಾಗಿ ಹಣ ಪಡೆದಿದ್ದೇನೆಂದು ವಿಪಕ್ಷಗಳು ಆರೋಪಿಸಿರುವುದರಲ್ಲಿ ಯಾವುದೇ ಹುರುಳಿಲ್ಲ. ಶಾಸಕರು ತಮಗೆ ಬೇಕಾದ ಅಧಿಕಾರಿಗಳನ್ನು ತಮ್ಮ ಕ್ಷೇತ್ರಗಳಿಗೆ ಹಾಕಿಕೊಳ್ಳುವುದು ವಾಡಿಕೆ. ಇದನ್ನೆ ತಿರುಚುವ ಕೆಲಸ ಮಾಡಬಾರದು. ಹಣ ಪಡೆದಿದ್ದರೆ ದಾಖಲೆ ತೋರಿಸಲಿ ಎಂದು ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು. ನಗರದ ಕಾಕತೀಯ ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಬಿ.ವೈ.ವಿಜಯೇಂದ್ರ ಸಿಎಂ ಎಂಬಂತೆ ವರ್ತಿಸುತ್ತಿದ್ದಾರೆಂದು ಬಿಜೆಪಿ ಶಾಸಕರೆ ಆರೋಪಿಸಿದ್ದರು. ಈಗ ನಾನು ಸೂಪರ್ ಸಿಎಂ ಆಗಿದ್ದೇನೆಂದು ಆರೋಪಿಸುತ್ತಿರುವುದು ಹತಾಶೆಯ ಹೇಳಿಕೆಯಾಗಿದೆ. ವಿರೋಧ ಪಕ್ಷಗಳು ಹತಾಶರಾಗಿ ಗೂಬೆ ಕೂರಿಸುವ ಕೆಲಸ ಮಾಡುತ್ತಿವೆ ಎಂದು ವ್ಯಂಗ್ಯವಾಡಿದರು. https://ainlivenews.com/kolar-people-of-border-villages-are-worried-about-forests/ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಘೋಷಿಸಿದ್ದ 5 ಗ್ಯಾರಂಟಿಗಳಲ್ಲಿ ಶಕ್ತಿ ಯೋಜನೆ, ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯದಡಿ 10 ಕೆಜಿ ಅಕ್ಕಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಲಾಗಿದೆ. 5ನೇ ಗ್ಯಾರಂಟಿ ಯುವನಿಧಿ ಯೋಜನೆ ಈ ತಿಂಗಳು ಅಥವಾ ಜನವರಿಯಲ್ಲಿ ಅನುಷ್ಠಾನಗೊಳ್ಳಲಿದೆ. ಶಕ್ತಿ ಯೋಜನೆಯಿಂದ…

Read More

ರೈತರ ಜಮೀನಿಗೆ ತೆರಳುವ ದಾರಿಗೆ ಅನ್ಯಭೂಮಾಲೀಕರು ಇನ್ನುಮುಂದೆ ಅಡ್ಡಿಪಡಿಸುವಂತಿಲ್ಲ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹೊಸ ಸುತ್ತೋಲೆಯನ್ನು ಹೊರಡಿಸಿದೆ. ರಾಜ್ಯಾದ್ಯಂತ ರೈತರಿಂದ ಈ ಸಂಬಂಧ ದೂರು ಬಂದ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮ ಕೈಗೊಂಡಿದೆ. ರಾಜ್ಯದಲ್ಲಿ ರೈತರು ವ್ಯವಸಾಯದ ಉದ್ದೇಶಗಳಿಗಾಗಿ ಬಳಸುವ ಕೃಷಿ ಸಲಕರಣೆಗಳನ್ನು ಸಾಗಿಸಲು ಅನ್ಯ ಭೂಮಾಲೀಕರ ಖಾಸಗಿ ಜಮೀನುಗಳಲ್ಲಿ ತಿರುಗಾಡಲು ದಾರಿಯ ಸಮಸ್ಯೆ ಇದೆ. ಇದರಿಂದ ರೈತರಿಗೆ ತೊಂದರೆಗಳಾಗುತ್ತಿರುವ ಬಗ್ಗೆ ಹಲವು ದೂರುಗಳು ಬಂದಿದ್ದವು. ಸರ್ಕಾರಕ್ಕೆ ಬಂದ ದೂರುಗಳು ಅಕ್ಕಪಕ್ಕದ ಜಮೀನುಗಳ ರೈತರು ಕೆಲವು ಖಾಸಗಿ ಜಮೀನುಗಳನ್ನು ದಾಟಿಕೊಂಡು ಕೃಷಿ ಪೂರಕ ಚಟುವಟಿಕೆಗಳನ್ನು ಮಾಡಲು ಹಾಗೂ ಬೆಳೆದ ಫಸಲನ್ನು ಹೊರತರಲಾಗದೆ ನಷ್ಟ ಹೊಂದುತ್ತಿರುವುದು ಸಾರ್ವಜನಿಕರಿಂದ ಮನವಿ/ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮ ಕೈಗೊಂಡಿದೆ ರಿಜಿಸ್ಟರ್‌ನಲ್ಲಿ ನಮೂದಿಗೂ ಅವಕಾಶ ಕರ್ನಾಟಕ ಭೂ ಕಂದಾಯ ನಿಯಮಗಳು, 1966ರ ನಿಯಮ 59 ರಲ್ಲಿ ದಾರಿಯ ಹಕ್ಕುಗಳು ಮತ್ತು ಇತರ, ಅನುಭೋಗದ ಹಕ್ಕುಗಳ ಬಗ್ಗೆ ತಿಳಿಸಲಾಗಿದ್ದು, ಸಂಬಂಧಪಟ್ಟ ಜಮೀನುಗಳ ಭಾಗಿದಾರರು ಒಪ್ಪಿರುವಂತಹ ಸಂದರ್ಭದಲ್ಲಿ…

Read More

ಕಳೆದ ವಾರದ ಕೋಲಾಹಲಗಳು, ಜಗಳಗಳು, ಟಾಸ್ಕ್‌ ಎಂಬುದು ವಿಕೋಪಕ್ಕೆ ತಿರುಗಿಕೊಂಡ ವಿಪರ್ಯಾಸಗಳು, ವಾರಾಂತ್ಯದ ಎಪಿಸೋಡ್‌ನಲ್ಲಿ ಕಿಚ್ಚ ತೆಗೆದುಕೊಂಡ ಕ್ಲಾಸ್‌… ಎಲ್ಲವೂ ಮುಗಿದು ಬಿಗ್‌ಬಾಸ್‌ ಮನೆಯೀಗ ಹೊಸ ವಾರದ ಹೊಸ ದಿನಕ್ಕೆ ಕಾಲಿರಿಸಿದೆ. ಈ ವಾರದ ಮೊದಲ ದಿನ ಹೇಗಿತ್ತು? ಅದರ ಸೂಚನೆ JioCinema ಬಿಡುಗಡೆ ಮಾಡಿರುವ ಪ್ರೋಮೊದಲ್ಲಿ ಸಿಕ್ಕಿದೆ. ಹೊಸ ವಾರದ ಮೊದಲ ದಿನ ಭಾವಪೂರ್ಣವಾಗಿತ್ತು. ಮನೆಯ ಸದಸ್ಯರೆಲ್ಲರೂ ಈ ಭಾವದ ಮಳೆಯಲ್ಲಿ ಭರಪೂರ ನೆನೆದಿದ್ದಾರೆ. ಇಂಥದ್ದೊಂದು ಎಮೋಷನಲ್‌ ಓಪನ್‌ಅಪ್‌ ಆಗುವ ಅವಕಾಶವನ್ನು ಕಲ್ಪಿಸಿದ್ದು ಬಿಗ್‌ಬಾಸ್‌. ಬಿಗ್‌ಬಾಸ್‌, ಮನೆಯ ಪ್ರತಿ ಸದಸ್ಯರನ್ನು ಕನ್ಫೆಷನ್‌ ರೂಮಿಗೆ ಕರೆದು ಅವರ ಮನದಾಳದ ಮಾತುಗಳಿಗೆ ಕಿವಿಯಾಗಿದ್ದಾರೆ. ಒಂಟಿಯಾಗಿ ಕನ್‌ಪೆಷನ್‌ ರೂಮಿನಲ್ಲಿ ಕೂತ ಸ್ಪರ್ಧಿಗಳು ತಮ್ಮ ಮನಸಲ್ಲಿ ಮುಚ್ಚಿಕೊಂಡಿದ್ದ ಹಲವು ಸಂಗತಿಗಳನ್ನು, ಕಾಡುವ ವಿಷಯಗಳನ್ನು, ಗಾಯದ ನೋವುಗಳನ್ನು ಮನಬಿಚ್ಚಿ ಮಾತಾಡಿದ್ದಾರೆ. ಹೊರಜಗತ್ತಿಗೆ ಇದುವರೆಗೆ ಒರಟು, ಸಂಚುಕೋರರು, ಅವಕಾಶವಾದಿ, ಚೇಲಾ, ಡಾಮಿನೆಂಟ್, ಉದ್ಧಟ, ನೆಗೆಟೀವ್, ಕುತಂತ್ರಿ, ಮಾತುಗಾರರು ಹೀಗೆ ಹತ್ತು ಹಲವು ಲೇಬಲ್‌ಗಳನ್ನು ಮನೆಯ ಉಳಿದ ಸದಸ್ಯರಿಂದಲೇ ಪಡೆದುಕೊಂಡು…

Read More

ಧಾರವಾಡ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ನೇತೃತ್ವದ ಕ್ಷಮತಾ ಸೇವಾ ಸಂಸ್ಥೆ ಹಾಗೂ ಎಸ್‌ಡಿಎಂ ವೈದ್ಯಕೀಯ ಮಹಾವಿದ್ಯಾಲಯದ ನೇತೃತ್ವದಲ್ಲಿ ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದ ಎಸ್‌ಜಿವಿ ಹೈಸ್ಕೂಲ್ ಮೈದಾನದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ ಅವರು ಸಸಿಗೆ ನೀರುಣಿಸುವ ಮೂಲಕ ಆರೋಗ್ಯ ಶಿಬಿರಕ್ಕೆ ಚಾಲನೆ ನೀಡಿದರು. ಉಪ್ಪಿನ ಬೆಟಗೇರಿ ಗ್ರಾಮವಷ್ಟೇ ಅಲ್ಲದೇ ಸುತ್ತಮುತ್ತ ಗ್ರಾಮಗಳ ಗ್ರಾಮಸ್ಥರೂ ಸಹ ಈ ಉಚಿತ ಆರೋಗ್ಯ ತಪಾಸಣಾ ಶಿಬಿರದ ಲಾಭ ಪಡೆದುಕೊಂಡರು. ಫಿಜಿಶಿಯನ್ನರು, ನೇತ್ರ ಶಸ್ತ್ರಚಿಕಿತ್ಸಕರು, ಶಸ್ತ್ರ ಚಿಕಿತ್ಸಕರು, ಚರ್ಮ ರೋಗ ತಜ್ಞರು, ಎಲುಬು ಮತ್ತು ಕೀಲು ತಜ್ಞರು, ಚಿಕ್ಕಮಕ್ಕಳ ತಜ್ಞರು, ಸ್ತ್ರೀ ರೋಗ ತಜ್ಞರು, ನರರೋಗ ತಜ್ಞರು, ದಂತ ವೈದ್ಯರು ಹಾಗೂ ಎಸ್‌ಡಿಎಂ ನಾರಾಯಣ ಹೃದಯಾಲಯದ ಹೃದಯ ರೋಗ ತಜ್ಞರು ಒಂದೇ ಸೂರಿನಡಿ ಲಭ್ಯವಿದ್ದು, ಗ್ರಾಮಸ್ಥರ ಆರೋಗ್ಯ ತಪಾಸಣೆ ಮಾಡುವ ಮೂಲಕ ಉಚಿತವಾಗಿ ಔಷಧಿ ಕೂಡ ವಿತರಣೆ ಮಾಡಿದರು. ಮಾಜಿ ಶಾಸಕರಾದ ಅಮೃತ ದೇಸಾಯಿ,…

Read More

ಬೆಂಗಳೂರು:- ಅನ್ನಭಾಗ್ಯ ಯೋಜನೆಯ ಯಜಮಾನಿ ಫಲಾನುಭವಿ ಖಾತೆಗೆ ಇದುವರೆಗೂ ಹಣ ಹೋಗದೇ ಇದ್ದಲ್ಲಿ ಇನ್ನು ಮುಂದೆ ಎರಡನೇ ಯಜಮಾನ/ನಿ ಖಾತೆಗೆ (ಅಂದರೆ ಸೀನಿಯರ್‌ ಖಾತೆಗೆ) ಹಣವನ್ನು ಡಿಬಿಟಿ ಮೂಲಕ ವರ್ಗಾವಣೆ ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಅನ್ನಭಾಗ್ಯದ ಹಣವನ್ನು ಇದುವರೆಗೂ ಪಡೆಯದೇ ಇದ್ದವರಿಗೆ ಈ ಡಿಸೆಂಬರ್‌ ತಿಂಗಳಿಂದ ಕೆಜಿ ಅಕ್ಕಿಗೆ ತಲಾ 30 ರೂಪಾಯಿಯಂತೆ ಒಬ್ಬರಿಗೆ 170 ರೂಪಾಯಿಯನ್ನು ರಾಜ್ಯ ಸರ್ಕಾರ ಜಮೆ ಮಾಡಲಿದೆ. ಇದುವರೆಗೆ ಪಡಿತರವನ್ನು ಸಮರ್ಪಕವಾಗಿ ಪಡೆದರೂ ಅನ್ನಭಾಗ್ಯ ಯೋಜನೆಯಡಿ ಬಾಕಿ 5 ಕೆಜಿ ಅಕ್ಕಿ ಸಿಗದೇ ಇದ್ದ ಕುಟುಂಬಕ್ಕೆ ಈ ಡಿಸೆಂಬರ್‌ ತಿಂಗಳಿಂದ ಹಣ ಜಮೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಮನೆ ಯಜಮಾನಿ ಖಾತೆಯಲ್ಲಿನ ತಾಂತ್ರಿಕ ಸಮಸ್ಯೆಯಿಂದ ಹಣ ಹಾಕಲು ಆಗಿರುವುದಿಲ್ಲ. ಹೀಗಾಗಿ ಅವರ ತರುವಾಯ ಸೀನಿಯರ್‌ ಇರುವವರ ಖಾತೆಗೆ ಅನ್ನಭಾಗ್ಯ ಯೋಜನೆಯ ಹಣವನ್ನು ಡಿಬಿಟಿ ಮೂಲಕ ವರ್ಗಾವಣೆ ಮಾಡಲು ರಾಜ್ಯ ಸಚಿವ ಸಂಪುಟ ಸಭೆ ಈಚೆಗೆ ತೀರ್ಮಾನವನ್ನು ತೆಗೆದುಕೊಂಡಿತ್ತು. ಈ ಹಿನ್ನೆಲೆಯಲ್ಲಿ ಡಿಸೆಂಬರ್‌ನಿಂದ…

Read More

ಹುಬ್ಬಳ್ಳಿ: ಕರ್ನಾಟಕದಲ್ಲಿ ಸರ್ಕಾರವನ್ನು ಅಭದ್ರಗೊಳಿಸಿ, ಅಭಿವೃದ್ಧಿ ಕೆಲಸಗಳಿಗೆ ಕೊಡಲಿ ಪೆಟ್ಟು ಹಾಕಬೇಕು ಅನ್ನೋದಾ ಕುಮಾರಸ್ವಾಮಿ ಅವರ ಉದ್ದೇಶ ಎಂದು ಕಾನೂನು ಹಾಗೂ ಪ್ರವಾಸೋದ್ಯಮ ಸಚಿವ ಎಚ್ .ಕೆ. ಪಾಟೀಲ್ ಕಿಡಿ ಕಾರಿದರು. ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು, ಶಾಸಕರನ್ನ ಖರೀದಿ ವಸ್ತುಗಳನ್ನಾಗಿ ಮಾಡುವ ವಾತಾವರಣ ಸೃಷ್ಟಿ ಮಾಡ್ತಾ ಇದ್ದಾರೆ ಲೋಕಸಭಾ ಚುನಾವಣೆ ಚುನಾವಣೆ ನಂತರ ಕಾದು ನೋಡಿ ಎಂದು ‌ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು ಸರ್ಕಾರವನ್ನು ಅಭದ್ರಗೊಳಿಸುವಂತ ಮಾತುಗಳು ಯಾವ ಪುರುಷಾರ್ಥಕ್ಕೆ, ಉದ್ದೇಶ ಏನು? ಕರ್ನಾಟಕದಲ್ಲಿ ಸರ್ಕಾರವನ್ನು ಅಭದ್ರಗೊಳಿಸಿ, ಅಭಿವೃದ್ಧಿ ಕೆಲಸಗಳಿಗೆ ಕೊಡಲಿ ಪೆಟ್ಟು ಹಾಕಬೇಕು ಅನ್ನೋದಾ ಇದಿಯಾ ಸರ್ಕಾರಗಳನ್ನ ಅಭದ್ರಗೊ ಳಿಸುವುದು ಒಂದು ರೀತಿ ಷಡ್ಯಂತ್ರ ಜನರಿಗೆ ಕೆಲಸ ಆಗಬೇಕು. ಅಭಿವೃದ್ಧಿ ಕಡೆ ಗಮನ ಹರಿಸಬೇಕು ಅದನ್ನು ಬಿಟ್ಟು ಮಾಧ್ಯಮಗಳ ಮೂಲಕ ಜನರ ಮನಸ್ಸನ್ನು ಅಭದ್ರಗೊಳಿಸುವ ಪ್ರಯತ್ನ ಯಶಸ್ವಿ ಆಗೋದಿಲ್ಲ ಇದು ಸರಿಯಲ್ಲ. ಜನರಿಗೆ ಎಲ್ಲವೂ ತಿಳಿಯೋಕೆ ಪ್ರಾರಂಭವಾಗಿದ್ದು…

Read More

ತೆಲುಗಿನ ಖ್ಯಾತ ನಟ ರಾಮ್ ಚರಣ್ (Ram Charan) ನಟನೆಯ ಸಿನಿಮಾದಲ್ಲಿ ನಟಿಸುವಂತೆ ತಮಗೆ ಆಫರ್ ಬಂದಿದ್ದು ನಿಜ ಎಂದಿದ್ದಾರೆ ಕನ್ನಡದ ಹೆಸರಾಂತ ಶಿವರಾಜ್ ಕುಮಾರ್ (Shivaraj Kumar). ಮೊದ ಮೊದಲು ಕನ್ನಡದ ಹೊರತಾಗಿ ಬೇರೆ ಸಿನಿಮಾಗಳಲ್ಲಿ ನಟಿಸಲ್ಲ ಎಂದು ಶಪಥ ಮಾಡಿದ್ದರು ಶಿವಣ್ಣ. ಯಾವಾಗ ಒಪ್ಪಿಕೊಳ್ಳೋಕೆ ಶುರು ಮಾಡಿದರೂ, ಅಲ್ಲಿಂದ ಅನೇಕ ಕರೆಗಳು ಅವರಿಗೆ ಬಂದಿವೆ. ಅದರಲ್ಲೂ ಜೈಲರ್ ಗೆಲುವಿನ ನಂತರ ಬೇಡಿಕೆ ಇನ್ನೂ ಹೆಚ್ಚಾಗಿದೆ. ಜೈಲರ್ ಒಪ್ಪಿಕೊಳ್ಳುವಾಗಲೇ ಧನುಷ್ (Dhanush) ನಟನೆಯ ಕ್ಯಾಪ್ಟನ್ ಮಿಲ್ಲರ್ ಚಿತ್ರಕ್ಕೂ ಸಹಿ ಮಾಡಿದ್ದರು ಶಿವರಾಜ್ ಕುಮಾರ್. ಇದೀಗ ರಾಮ್ ಚರಣ್ ಅವರ ಸಿನಿಮಾದಲ್ಲೂ ನಟಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇನ್ನೂ ಒಪ್ಪಿಗೆ ಸೂಚಿಸಿದೇ ಇದ್ದರೂ, ಆಫರ್ ಬಂದಿದ್ದು, ಮಾತುಕತೆ ನಡೆದಿದ್ದು ನಿಜ ಎಂಬುದು ಬಹಿರಂಗವಾಗಿದೆ. ಜೈಲರ್ ಸಿನಿಮಾದ ನಂತರ ಕ್ಯಾಪ್ಟನ್ ಮಿಲ್ಲರ್ ಸಿನಿಮಾದ ಬಗ್ಗೆಯೂ ಸಾಕಷ್ಟು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ.  ಈಗಾಗಲೇ ರಿಲೀಸ್ ಆಗಿರುವ ಪೋಸ್ಟರ್ ನಲ್ಲಿ ವಿವಿಧ ಬಗೆಯ ಬಂದೂಕು ಹಿಡಿದುಕೊಂಡಿರುವ…

Read More