Author: AIN Author

ಕೋಲಾರ‌ – ಬೆಂಗಳೂರಿನ ವೈಟ್‌ಫೀಲ್ಡ್ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಕಳುವಾಗಿದ್ದ ಟಯೋಟೋ ಕ್ವಾಲೀಸ್ ಕೋಲಾರದಲ್ಲಿ ಪತ್ತೆಯಾಗಿದ್ದು, ಕಳ್ಳತನ ಮಾಡಿದ್ದ ಆರೋಪಿ ಸದ್ದಾಂಹುಸೇನ್‌ (೨೪) ನನ್ನು ಕೋಲಾರ ಕ್ರೈಂ ಪೋಲಿಸರು ಬಂಧಿಸಿದ್ದಾರೆ. ನಗರದ ಟೊಮೆಟೋ ಮಾರ್ಕೆಟ್ ಬಳಿ ಗಸ್ತಿನಲ್ಲಿದ್ದ ಕ್ರೈಂ ಪೋಲಿಸರಿಗೆ ನಂಬರ್ ಇಲ್ಲದೇ ಇದ್ದ ಟಯೋಟೋ ಕ್ವಾಲೀಸ್ ವಾಹನ ಪತ್ತೆಯಾಗಿದೆ. https://ainlivenews.com/a-foreign-national-who-came-to-buy-chicken-was-murdered-over-a-trivial-matter/ ಪೋಲಿಸರನ್ನು ನೋಡಿ ಆರೋಪಿ ಕ್ವಾಲೀಸ್ ಸಮೇತ ಪರಾರಿಯಾಗಲು ಯತ್ನಿಸಿದ್ದಾನೆ. ಸುತ್ತುವರೆದ ಪೋಲಿಸರು ಆತನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಕಳೆದು 50 ದಿನಗಳ ಹಿಂದೆ ವೈಟ್‌ಫೀಲ್ಡ್ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಕ್ವಾಲೀಸನ್ನು ಕಳ್ಳತನ ಮಾಡಿಕೊಂಡು ತಾನೇ ಓಡಿಸಿಕೊಂಡು ಬಂದಿರುವುದಾಗಿ ಪೋಲಿಸರ ಮುಂದೆ ಒಪ್ಪಿಕೊಂಡಿದ್ದಾನೆ. ಕ್ವಾಲೀಸ್ ಕಳವು ಬಗ್ಗೆ ವೈಟ್‌ಫೀಲ್ಡ್‌ ಪೋಲಿಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದ್ದು, ಕ್ವಾಲೀಸ್‌ ನಂಬರ್ KA 03 M X 3166 ಆಗಿದೆ. ಆರೋಪಿ ಬೆಂಗಳೂರು ನಗರ ಎಂದು ಗೊತ್ತಾಗಿದೆ. ಕಾರ್ಯಚರಣೆಯಲ್ಲಿ ಪಿ.ಐ.ಸದಾನಂದ ಮತ್ತು ಪಿ.ಎಸ್.ಐ. ಸೈಯದ್ ಖಾಸಿಂ ರವರು ಮತ್ತು ಸಿಬ್ಬಂದಿ ಆರೋಪಿಯನ್ನು ಬಂಧಿಸಿ…

Read More

ಬೆಂಗಳೂರು:- ಬೆಂಗಳೂರಿನ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕ್ಷುಲ್ಲಕ ವಿಚಾರಕ್ಕೆ ಕಿರಿಕ್ ನಡೆದಿದ್ದು, ಚಿಕನ್‌ ಖರೀದಿಗೆ ಬಂದಿದ್ದ ನೈಜೀರಿಯಾ ಮೂಲದ ವಿದೇಶಿ ಪ್ರಜೆಯೊಬ್ಬನನ್ನ ಕೊಲೆ ಮಾಡಲಾಗಿದೆ. https://ainlivenews.com/we-have-only-one-question-why-did-muda-give-back-the-site-vijayendra/ ಕ್ಷುಲ್ಲಕ ಕಾರಣಕ್ಕೆ ಶುರುವಾದ ಗಲಾಟೆಯಲ್ಲಿ 40 ವರ್ಷ ವಯಸ್ಸಿನ ಅಡಿಯಾಕೋ ಮಸಾಲಿಯೋ ಎಂಬಾತನನ್ನ ಕೊಲೆ‌ ಬುಧವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ನಡೆದಿದೆ. ನೈಜೀರಿಯಾ ಪ್ರಜೆ ಅಡಿಯಾಕೋ ಮಸಾಲಿಯೋ ಚಿಕನ್ ಸೆಂಟರ್ ವೊಂದರಲ್ಲಿ ಚಿಕನ್ ಖರೀದಿಗೆ ಹೋಗಿದ್ದ. ಈ ವೇಳೆ ಆತನ ದೈತ್ಯ ದೇಹ, ಆತನ ಓಡಾಟ ನೋಡಿ ಸ್ಥಳೀಯರು ಅನುಮಾಸ್ಪದವಾಗಿ ಓಡಾಡ್ತಿದ್ದಾನೆ ಅಂತಾ ತಡೆದು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಸ್ಥಳೀಯರಿಗೂ ದೈತ್ಯ ಪ್ರಜೆಗೂ ಗಲಾಟೆ ಶುರುವಾಗಿದೆ. ಗಲಾಟೆ ನಡುವೆ ಯಾಸೀನ್ ಖಾನ್ ಎಂಬಾತನಿಗೆ ಅಡಿಯಾಕೋ ಮಸಾಲಿಯೋ ಒಂದೆರಡೇಟು ಹೊಡೆದಿದ್ದ ಅದಕ್ಕೆ ಕೋಪಗೊಂಡಿದ್ದ ಯಾಸೀನ್ ಖಾನ್ ಅಲ್ಲಿಯೇ ಇದ್ದ ಮರದ ತುಂಡು ಒಂದನ್ನ ಕೈಗೆತ್ತಿಕೊಂಡವನೇ ಸೀದಾ ಅಡಿಯಾಕೋ ತಲೆಗೆ ಬಿಟ್ಟಿದ್ದಾನೆ. ನಂತರ ಗಲಾಟೆ ಜೋರಾಗಿದೆ, ಗಲಾಟೆ ನಡುವೆ ಬೆಳ್ಳಹಳ್ಳಿ ಬಂಡೆ ಬಳಿ…

Read More

ಬೆಂಗಳೂರು:- ಮುಡಾ ಕೇಸ್‌ನಲ್ಲಿ ಬಿ ರಿಪೋರ್ಟ್ ಬಂದಿರುವ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪ್ರತಿಕ್ರಿಯೆ ಕೊಟ್ಟಿದ್ದಾರೆ. https://ainlivenews.com/bomb-threat-to-maharashtra-dcm-eknath-shinde-investigation-underway/ ಈ ಸಂಬಂಧ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಅಥವಾ ಲೋಕಾಯುಕ್ತ ಕೊಟ್ಟ ಬಿ ರಿಪೋರ್ಟ್ ನಮಗೆ ಆಶ್ಚರ್ಯವನ್ನು ಉಂಟು ಮಾಡಿಲ್ಲ ಎಂದರು. ಲೋಕಾಯುಕ್ತ ಸಂಸ್ಥೆ ತನಿಖೆ ಮಾಡುತ್ತಿರುವಾಗ ರಾತ್ರಿ 8-9 ಗಂಟೆಗೆ ಮುಖ್ಯಮಂತ್ರಿಗಳ ಕುಟುಂಬಸ್ಥರು ಮಾವನ ಮನೆಗೆ ಹೋದ ಮಾದರಿಯಲ್ಲಿ ಲೋಕಾಯುಕ್ತ ಸಂಸ್ಥೆ ಕಚೇರಿಗೆ ಭೇಟಿ ಕೊಡುತ್ತಿದ್ದರು. ಮೈಸೂರಿನ ಮುಡಾ ಹಗರಣದಲ್ಲಿ ಸುಮಾರು 5,000 ಕೋಟಿಯ ಅಕ್ರಮ ನಡೆದಿದೆ. ಮುಡಾದಲ್ಲಿ ಯಾವುದೇ ರೀತಿಯ ಹಗರಣ ಆಗಿಲ್ಲ ಎಂದು ಸಿದ್ದರಾಮಯ್ಯನವರು ಆರಂಭದಲ್ಲಿ ಹೇಳಿದ್ದರು. ತಮ್ಮ ಕುಟುಂಬಕ್ಕೆ ಕಾನೂನುಬಾಹಿರವಾಗಿ 14 ನಿವೇಶನಗಳು ಬಂದಿಲ್ಲ ಎಂದು ತಿಳಿಸಿದ್ದಾಗಿ ಗಮನ ಸೆಳೆದರು. ಬಿಜೆಪಿ- ಜೆಡಿಎಸ್ ಈ ವಿಷಯ ಮುಂದಿಟ್ಟು ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಮಾಡಿತ್ತು. ಸಿದ್ದರಾಮಯ್ಯನವರು ನಮ್ಮ ಹೋರಾಟದ ಒತ್ತಡಕ್ಕೆ ಮಣಿದು 14 ನಿವೇಶನಗಳನ್ನು ರಾತ್ರೋರಾತ್ರಿ ಹಿಂದಿರುಗಿಸುವುದಾಗಿ ಮುಡಾಕ್ಕೆ ಪತ್ರ ಬರೆದಿದ್ದರು ಎಂದು ಟೀಕಿಸಿದರು.

Read More

ಮುಂಬೈ:- ಮಹರಾಷ್ಟ್ರದ ಡಿಸಿಎಂ ಏಕನಾಥ್ ಶಿಂಧೆಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಮುಂಬೈ ಪೊಲೀಸರಿಂದ ತನಿಖೆ ಶುರುವಾಗಿದೆ. https://ainlivenews.com/muda-scam-high-court-extends-stay-order-issued-by-parvati-siddaramaiah-on-ed-investigation/ ಗೋರೆಗಾಂವ್, ಜೆ.ಜೆ ಮಾರ್ಗ್ ಪೊಲೀಸ್ ಠಾಣೆ ಮತ್ತು ರಾಜ್ಯ ಸರ್ಕಾರದ ಪ್ರಧಾನ ಕಚೇರಿಯಾದ ಮಂತ್ರಾಲಯದ ನಿಯಂತ್ರಣ ಕೊಠಡಿಗೆ ಬೆದರಿಕೆ ಸಂದೇಶಗಳು ಬಂದಿವೆ. ಈ ಬೆನ್ನಲ್ಲೇ ಪ್ರಕರಣ ದಾಖಲಿಸಿಕೊಂಡಿರುವ ಮುಂಬೈ ಪೊಲೀಸರು ಇಮೇಲ್‌ ವಿಳಾಸ ಪತ್ತೆ ಹೆಚ್ಚುವ ಕಾರ್ಯದಲ್ಲಿ ತೊಡಗಿದ್ದಾರೆ. ಶಿಂಧೆ ಅವರ ಕಾರನ್ನು ಸ್ಫೋಟಿಸುವುದಾಗಿ ಅಪರಿಚಿತ ವ್ಯಕ್ತಿ ಬೆದರಿಕೆ ಹಾಕಿದ್ದಾನೆ. ಈ ಹಿನ್ನೆಲೆ ಏಕನಾಥ್ ಶಿಂಧೆ ಅವರ ನಿವಾಸದಲ್ಲಿ ಬಿಗಿ ಭದ್ರತೆ ನಿಯೋಜಿಸಲಾಗಿದೆ. ಅಲ್ಲದೇ ಸಾರ್ವಜನಿಕರು ಎಚ್ಚರಿಕೆಯಿಂದಿರುವಂತೆ ಪೊಲೀಸರು ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

Read More

ಬೆಂಗಳೂರು:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪಾರ್ವತಿ ಸಿದ್ದರಾಮಯ್ಯ ಇಡಿ ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ವಿಸ್ತರಣೆ ಮಾಡಿದೆ. https://ainlivenews.com/do-you-want-your-luck-to-change-so-before-you-go-to-bed-at-night-say-this-and-go-to-sleep/ ಪ್ರಕರಣದಲ್ಲಿ ಸಿಎಂ ಪತ್ನಿ ಪಾರ್ವತಿ ಅವರಿಗೆ ಇಡಿ ಸಮನ್ಸ್ ನೀಡಿದ್ದ ಹಿನ್ನೆಲೆಯಲ್ಲಿ ಸಮನ್ಸ್ ರದ್ದು ಕೋರಿ ಪಾರ್ವತಿ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಲಾಗಿದೆ. ಜಾರಿ ನಿರ್ದೇಶನಾಲಯದಿಂದ ಸಿಎಂ ಪತ್ನಿ ಅರ್ಜಿಗೆ ಆಕ್ಷೇಪಣೆ ಸಲ್ಲಿಕೆ ಮಾಡಲಾಗಿತ್ತು. ಸಿಎಂ ಪತ್ನಿ ಪಾರ್ವತಿ ಪರ ಹಿರಿಯ ವಕೀಲ ಸಂದೇಶ್ ಚೌಟ ವಾದ ಮಂಡಿಸಿದ್ದು, ಮುಡಾದ 14 ಸೈಟ್ ಗಳನ್ನು ಈಗಾಗಲೇ ಮರಳಿಸಲಾಗಿದೆ. ಸೈಟ್ ಗಳನ್ನು ಮರಳಿಸಿರುವುದಿರಂದ ಇಡಿಗೆ ತನಿಖೆ ವ್ಯಾಪ್ತಿ ಇಲ್ಲ. ಅಪರಾಧದಿಂದ ಗಳಿಸಿದ ಸಂಪತ್ತಿದ್ದರೆ ಮಾತ್ರ ಇಡಿ ತನಿಖೆ ನಡೆಸಬಹುದು. ಆದರೆ ಸೈಟ್ ಗಳನ್ನು ಮರಳಿಸಿದ ನಂತರ ಇಡಿ ತನಿಖೆ ಆರಂಭಿಸಿದೆ. ಅಪರಾಧದಿಂದ ಗಳಿಸಿದ ಹಣ ಚಟುವಟಿಕೆಗೆ ಬಳಕೆಯಾಗಬೇಕು. ಇಲ್ಲವಾದರೆ ಪಿಎಂಎಲ್‌ಎ ಕಾಯ್ದೆಯ ಅಂಶಗಳು ಅನ್ವಯವಾಗುವುದಿಲ್ಲವೆಂದು ವಾದಿಸಿದ್ದರು. 2024ರ ಅಕ್ಟೋಬರ್ 1ರಂದೇ 14 ಸೈಟ್ ಗಳನ್ನು ಪಾರ್ವತಿ ಹಿಂತಿರುಗಿಸಿದ್ದಾರೆ. ಮುಡಾ ನೀಡಿದ ಸೈಟ್…

Read More

ಜ್ಯೋತಿಷ್ಯದ ದೃಷ್ಟಿಕೋನದಿಂದ, ನಿಮ್ಮ ಅದೃಷ್ಟವು ನಿಮ್ಮನ್ನು ಬೆಂಬಲಿಸದಿದ್ದರೆ, ನೀವು ಮಲಗುವ ಮೊದಲು ಈ ಪ್ರಮುಖ ಕೆಲಸಗಳನ್ನು ಮಾಡಬೇಕು. ಆಗ ನಿಮ್ಮ ಅದೃಷ್ಟವು ರಾತ್ರೋರಾತ್ರಿ ಹೇಗೆ ಬದಲಾಗುತ್ತೆ ಎಂದು ನೀವೇ ನೋಡಿ. https://ainlivenews.com/if-your-next-toe-is-longer-than-your-big-toe-read-this-news-first/ ಯಾವುದೇ ಮಂತ್ರ ಆದ್ರೂ ಸರಿ ಒಬ್ಬ ವ್ಯಕ್ತಿಯ ಬೆಳವಣಿಗೆಗೆ ಬಹುಮುಖ್ಯ ಪಾತ್ರವಹಿಸುತ್ತದೆ. ಅದು ಯಾವುದೇ ಮಂತ್ರವಾದರೂ ಸರಿ. ಮಂತ್ರಗಳ ಪದಗಳು, ಅರ್ಥ, ಶಬ್ದ ಮತ್ತು ಲಯವು ಮನಸ್ಸು, ದೇಹ ಮತ್ತು ಆತ್ಮದಲ್ಲಿ ಆಳವಾದ ಬದಲಾವಣೆಗಳನ್ನು ತರಬಹುದು. ಮಂತ್ರಗಳ ಮೂಲಕ ಆಧ್ಯಾತ್ಮಿಕ ಶಕ್ತಿಯನ್ನು ಸಹ ಹೆಚ್ಚಿಸಬಹುದು. ಜ್ಯೋತಿಷ್ಯದ ಪ್ರಕಾರ, ಪ್ರತಿದಿನ ಒಂದು ಅಥವಾ ಹೆಚ್ಚಿನ ಮಂತ್ರಗಳನ್ನು ಪಠಿಸುವುದರಿಂದ ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿ ಬರುತ್ತದೆ ಎನ್ನಲಾಗಿದೆ. ಈ ಮಂತ್ರ ಪಠಿಸುವುದರಿಂದ ಬಡತನದಿಂದಲೂ ಮುಕ್ತಿ ಪಡೆಯಬಹುದು. ಮಂತ್ರಗಳನ್ನು ಪಠಿಸುವುದರಿಂದ ಜೀವನದ ಅದೃಷ್ಟವೇ ಬದಲಾಗಲಿದೆ. ಮಂತ್ರಗಳನ್ನು ಪಠಿಸುವುದರಿಂದ ಏಕಾಗ್ರತೆ ಹೆಚ್ಚಾಗುತ್ತದೆ, ಮಾನಸಿಕ ಒತ್ತಡ ಕಡಿಮೆಯಾಗುತ್ತದೆ ಮತ್ತು ಮನಸ್ಸಿನಲ್ಲಿ ಏನೋ ಉತ್ತಮ ಭಾವನೆ ಮೂಡುತ್ತದೆ. ಪ್ರತಿದಿನ ಮಂತ್ರಗಳನ್ನು ಪಠಿಸುವುದರಿಂದ ಆತಂಕವನ್ನು ಸಹ ಕಡಿಮೆ ಮಾಡುತ್ತದೆ…

Read More

ನಿಮ್ಮ ಪಾದದ ಬೆರಳುಗಳನ್ನು ನೀವು ಎಂದಾದರೂ ಸರಿಯಾಗಿ ಗಮನಿಸಿದ್ದೀರಾ? ಸಾಮಾನ್ಯವಾಗಿ ಮಹಿಳೆಯರಾಗಿರಲಿ ಅಥವಾ ಪುರುಷರಾಗಿರಲಿ ಕಾಲ್ಬೆರಳುಗಳು ಕೆಲವರಲ್ಲಿ ಒಂದೇ ಸಮವಾಗಿರುತ್ತದೆ, ಇನ್ನು ಕೆಲವರಲ್ಲಿ ಮೊದಲ ಎರಡು ಅಥವಾ ಮೂರು ಬೆರಳು ಸಮಾನವಾಗಿರುತ್ತದೆ ಕೊನೆಯ ಬೆರಳು ಚಿಕ್ಕದಾಗಿರುತ್ತವೆ. ಆದರೆ ಕೆಲವರಲ್ಲಿ ತೋರುಬೆರಳು ಹೆಬ್ಬೆರಳಿಗಿಂತ ದೊಡ್ಡದಾಗಿರುತ್ತದೆ ಅಂತವರು ಎಲ್ಲದರಲ್ಲೂ ಪ್ರಾಬಲ್ಯ ಸಾಧಿಸುತ್ತಾರೆ ಎಂದು ಹೇಳಲಾಗುತ್ತದೆ. ಹಾಗಾದರೆ ಇದು ನಿಜವೇ? ಸಾಮುದ್ರಿಕಾ ಶಾಸ್ತ್ರದಲ್ಲಿ ಈ ಬಗ್ಗೆ ಏನು ಹೇಳಿದ್ದಾರೆ? ಇಲ್ಲಿದೆ ಮಾಹಿತಿ. ನಿಮ್ಮ ಕಾಲಿನ ಹೆಬ್ಬೆರಳಿಗಿಂತ ಪಕ್ಕದ ಬೆರಳು ಉದ್ದ ಇದ್ರೆ ಮಾತ್ರವಲ್ಲ ವ್ಯಕ್ತಿ ಕಾಲಿನ ಬೆರಳುಗಳೇ ಆತನ ವ್ಯಕ್ತಿತ್ವ ಎಂತಹದ್ದು ಎಂದು ತಿಳಿಸುತ್ತದೆ. ಹಾಗಿದ್ರೆ ಜ್ಯೋತಿಷ್ಯದ ಪ್ರಕಾರ ವ್ಯಕ್ತಿತ ಕಾಲಿನ ಬೆರಳಿನ ಆಧಾರದಲ್ಲಿ ವ್ಯಕ್ತಿತ್ವ ಹೇಗಿರಲಿದೆ ಎಂಬುದನ್ನು ಈ ಸುದ್ದಿಯಲ್ಲಿ ತಿಳಿಯೋಣ. ಜ್ಯೋತಿಷ್ಯದಲ್ಲಿ ಅನೇಕ ಅಂಗಗಳಿವೆ. ಅವುಗಳಲ್ಲಿ ಒಂದು ಸಾಮುದ್ರಿಕಾಶಾಸ್ತ್ರ. ಈ ಸಾಮುದ್ರಿಕಾ ಶಾಸ್ತ್ರದಲ್ಲಿ ಮುಖ, ಹಸ್ತ ಸಾಮುದ್ರಿಕಾ, ಅಂಗ ಸಾಮುದ್ರಿಕಾ ಹಾಗೂ ಪಾದ ಸಾಮುದ್ರಿಕಾ ಎಂಬೆಲ್ಲಾ ಅಂಗಳಿದ್ದು, ಅವುಗಳ ಮೂಲಕ ನಾವು ನಮ್ಮ…

Read More

ಬ್ಯಾಂಕ್ ನಲ್ಲಿ ಕೆಲಸ ಮಾಡೋ ಆಸಕ್ತಿ ಇರುವ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಸರ್ಕಾರಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಮಾರ್ಚ್​​ 11 ಅಥವಾ ಅದಕ್ಕಿಂತ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. https://ainlivenews.com/what-are-the-symptoms-of-thyroid-cancer-is-it-life-threatening/ ಅರ್ಹತಾ ವಿವರಗಳು: ಶೈಕ್ಷಣಿಕ ಅರ್ಹತೆ: BOB ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು ವಯೋಮಿತಿ: ಬ್ಯಾಂಕ್ ಆಫ್ ಬರೋಡಾ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 01-02-2025 ರಂತೆ ಕನಿಷ್ಠ 20 ವರ್ಷಗಳು ಮತ್ತು ಗರಿಷ್ಠ 28 ವರ್ಷಗಳನ್ನು ಹೊಂದಿರಬೇಕು. ವಯೋಮಿತಿ ಸಡಿಲಿಕೆ: ಒಬಿಸಿ ಅಭ್ಯರ್ಥಿಗಳು: 3 ವರ್ಷಗಳು SC/ST ಅಭ್ಯರ್ಥಿಗಳು: 5 ವರ್ಷಗಳು ಪಿಡಬ್ಲ್ಯೂಬಿಡಿ (ಸಾಮಾನ್ಯ) ಅಭ್ಯರ್ಥಿಗಳು: 10 ವರ್ಷಗಳು ಪಿಡಬ್ಲ್ಯೂಬಿಡಿ (ಒಬಿಸಿ) ಅಭ್ಯರ್ಥಿಗಳು: 13 ವರ್ಷಗಳು ಪಿಡಬ್ಲ್ಯೂಬಿಡಿ (ಎಸ್‌ಸಿ/ಎಸ್‌ಟಿ) ಅಭ್ಯರ್ಥಿಗಳು: 15 ವರ್ಷಗಳು ಅರ್ಜಿ ಶುಲ್ಕ: ಸಾಮಾನ್ಯ, ಒಬಿಸಿ, ಇಡಬ್ಲ್ಯೂಎಸ್ ಅಭ್ಯರ್ಥಿಗಳು: ರೂ. 800/- ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳು: ರೂ.…

Read More

ಥೈರಾಯ್ಡ್ ಕ್ಯಾನ್ಸರ್ ನಿಮ್ಮ ಕುತ್ತಿಗೆಯ ಬುಡದಲ್ಲಿರುವ ಆಡಮ್ಸ್ ಆಪಲ್‌ನ ಕೆಳಗೆ ಇರುವ ಚಿಟ್ಟೆ ಆಕಾರದ ಗ್ರಂಥಿಯಾದ ಥೈರಾಯ್ಡ್‌ನ ಜೀವಕೋಶಗಳಲ್ಲಿ ಬೆಳೆಯುತ್ತದೆ. ನಿಮ್ಮ ಥೈರಾಯ್ಡ್‌ನಿಂದ ಉತ್ಪತ್ತಿಯಾಗುವ ಹಾರ್ಮೋನುಗಳು ನಿಮ್ಮ ಹೃದಯ ಬಡಿತ, ರಕ್ತದೊತ್ತಡ, ದೇಹದ ಉಷ್ಣತೆ ಮತ್ತು ತೂಕವನ್ನು ನಿಯಂತ್ರಿಸುತ್ತವೆ. ಥೈರಾಯ್ಡ್ ಕ್ಯಾನ್ಸರ್ ಆರಂಭದಲ್ಲಿ ಯಾವುದೇ ಚಿಹ್ನೆಗಳು ಅಥವಾ ಲಕ್ಷಣಗಳನ್ನು ತೋರಿಸದಿರಬಹುದು. ಆದಾಗ್ಯೂ, ಅದು ವಿಸ್ತರಿಸಿದಾಗ, ಅದು ಕುತ್ತಿಗೆ ನೋವು ಮತ್ತು ಊತವನ್ನು ಉಂಟುಮಾಡಬಹುದು. ಥೈರಾಯ್ಡ್ ಕ್ಯಾನ್ಸರ್ ವಿವಿಧ ರೂಪಗಳಲ್ಲಿ ಬರುತ್ತದೆ. ಕೆಲವು ನಿಧಾನವಾಗಿ ಬೆಳೆಯುತ್ತದೆ, ಆದರೆ ಇತರವು ಸಾಕಷ್ಟು ಆಕ್ರಮಣಕಾರಿಯಾಗಿದೆ. ಥೈರಾಯ್ಡ್ ಕ್ಯಾನ್ಸರ್ ಅನ್ನು ಸಾಮಾನ್ಯವಾಗಿ ಔಷಧಿಗಳಿಂದ ಗುಣಪಡಿಸಬಹುದು. https://ainlivenews.com/jammer-in-hindalaga-jail-network-problem-for-people-around/ ಆಧುನಿಕ ಜೀವನಶೈಲಿ, ಆಹಾರ ಪದ್ಧತಿ ಮತ್ತು ಮಾಲಿನ್ಯದಂತಹ ಅಂಶಗಳಿಂದಾಗಿ ಚಿಕ್ಕ ವಯಸ್ಸಿನಲ್ಲಿಯೇ ಕ್ಯಾನ್ಸರ್ನಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಥೈರಾಯ್ಡ್ ಕ್ಯಾನ್ಸರ್ ವಿಶೇಷವಾಗಿ ಮಹಿಳೆಯರಲ್ಲಿ ಕಂಡು ಬರುತ್ತದೆ. ಥೈರಾಯ್ಡ್ ಕ್ಯಾನ್ಸರ್ ಶ್ವಾಸಕೋಶ, ಸ್ತನ ಮತ್ತು ಗರ್ಭಕಂಠದ ಕ್ಯಾನ್ಸರ್‌ಗಳ ಜೊತೆಗೆ ಹೆಚ್ಚು ಪ್ರಚಲಿತವಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಥೈರಾಯ್ಡ್ ಕ್ಯಾನ್ಸರ್ ಪ್ರಕರಣಗಳು ಹೆಚ್ಚುತ್ತಿವೆ ಎಂದು…

Read More

ಏರ್ಟೆಲ್​ನ ರೀಚಾರ್ಜ್ ದರಗಳು ಗರಿಷ್ಠ ಎನಿಸಿದರೂ ಅದರ ನೆಟ್ವರ್ಕ್ ಸರ್ವಿಸ್ ಉತ್ಕೃಷ್ಟವಾಗಿರುತ್ತದೆ. ಅದರ ವಿವಿಧ ಪ್ರೀಪೇಯ್ಡ್ ಮತ್ತು ಪೋಸ್ಟ್ ಪೇಯ್ಡ್ ಪ್ಲಾನ್​ಗಳ ದರಗಳನ್ನು ಕಳೆದ ತಿಂಗಳು ಹೆಚ್ಚಿಸಲಾಗಿದೆ. ಬಹುತೇಕ ಎಲ್ಲಾ ಪ್ಲಾನ್​ಗಳ ಬೆಲೆ ಏರಿಕೆ ಮಾಡಲಾಗಿದೆ. ಏರ್ಟೆಲ್​ನ ರೀಚಾರ್ಜ್ ಪ್ಲಾನ್​ಗಳು ತುಸು ದುಬಾರಿ ಎನಿಸಿದರೂ ವಿವಿಧ ಒಟಿಟಿಗಳ ಸಬ್​ಸ್ಕ್ರಿಪ್ಷನ್ ಅನ್ನು ಉಚಿತವಾಗಿ ಕೊಡುತ್ತವೆ. https://ainlivenews.com/if-there-is-no-son-in-a-house-full-of-daughters-who-will-light-the-fathers-pyre/ ಅದರಂತೆ ದೇಶದ ಎರಡನೇ ಅತಿದೊಡ್ಡ ಟೆಲಿಕಾಂ ಕಂಪನಿಯಾದ ಏರ್‌ಟೆಲ್ ತನ್ನ ಗ್ರಾಹಕರಿಗೆ ಗುಡ್ ನ್ಯೂಸ್ ಕೊಟ್ಟಿದೆ. ಭಾರತದಲ್ಲಿ ಗ್ರಾಹಕರ ನಂಬಿಕೆಗೆ ಅರ್ಹವಾದ ಸಿಮ್‌ಗಳಲ್ಲಿ ಕೆಲವೇ ಕೆಲವು ಆಯ್ಕೆಗಳಿರುವುದರಿಂದ ಬಹುತೇಕರು ಏರ್‌ಟೆಲ್ ನೆಟ್‌ವರ್ಕ್‌ಅನ್ನೇ ಬಳಸುತ್ತಿದ್ದಾರೆ. ಬಳಕೆದಾರರ ಸಂಖ್ಯೆ ಹೆಚ್ಚಿದಂತೆ ದರ ಏರಿಕೆ ಸಮಾನ್ಯ. ಆದರೆ ಇತ್ತೀಚಿಗೆ ಏರ್‌ಟೆಲ್ ರೀಚಾರ್ಜ್ ಬೆಲೆಯನ್ನು ಏಕಾಏಕಿ ಹೆಚ್ಚಿಸಲಾಗಿತ್ತು. ಈ ಡಿಜಿಟಲ್‌ ಯುಗದಲ್ಲಿ ಮೊಬೈಲ್‌ ಹಾಗೂ ನೆಟ್‌ವರ್ಕ್ ಅತ್ಯಗತ್ಯವಾದ ಕಾರಣ ಜನ ರೀಚಾರ್ಜ್ ಬೆಲೆ ಏರಿಕೆಯನ್ನು ಹೆಚ್ಚಾಗಿ ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ. ಬದಲಿಗೆ ತಿಂಗಳ ರೀಚಾರ್ಜ್ ಖಾಲಿಯಾಗುತ್ತಿದ್ದಂತೆ ಹೊಸ ರೀಚಾರ್ಜ್ ಮಾಡಿಯೇ ಮಾಡುತ್ತಾರೆ. ಇತ್ತೀಚಿಗಷ್ಟೇ…

Read More