ಬೆಂಗಳೂರು:- ರಾಜ್ಯದ ಉತ್ತರ ಒಳನಾಡಿನಲ್ಲಿ ಚಳಿ ಮುಂದುವರಿಯಲಿದ್ದು, ಉಳಿದೆಡೆ ಒಣಹವೆ ಇರಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಇರಲಿದೆ. ಬೆಳಗಾವಿ ವಿಮಾನ ನಿಲ್ದಾಣದಲ್ಲಿ 13.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬಳ್ಳಾರಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲೂ ಒಣಹವೆ ಮುಂದುವರೆಯಲಿದೆ. ರಾಜ್ಯಾದ್ಯಂತ ಕೆಲವು ಕಡೆಗಳಲ್ಲಿ ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಶುಭ್ರ ಆಕಾಶವಿರಲಿದೆ, ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 17 ಡಿಗ್ರಿ ಸೆಲ್ಸಿಯಸ್ ಇರಲಿದೆ. ಎಚ್ಎಎಲ್ನಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ…
Author: AIN Author
ಬೆಂಗಳೂರು:- ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ಅಬಕಾರಿ ಖಾತೆ ಸಚಿವ ಆರ್.ಬಿ.ತಿಮ್ಮಾಪುರ ವಿರುದ್ಧ ED ಗೆ ದೂರು ಸಲ್ಲಿಸಿದ್ದಾರೆ. ಅಬಕಾರಿ ಇಲಾಖೆ ಡಿಸಿ, ಡಿವೈಎಸ್ಪಿಗಳಿಂದ ಹಣ ಪಡೆದು ವರ್ಗಾವಣೆ ದಂಧೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ದೂರು ಸಲ್ಲಿಸಿದ್ದಾರೆ. ಸಚಿವ ತಿಮ್ಮಾಪುರ ಅವರು ಲೋಕಸಭಾ ಚುನಾವಣೆಗೆ ಹಣ ಹೊಂದಿಸಲು ಇಲಾಖಾಧಿಕಾರಿಗಳ ವರ್ಗಾವಣೆಗೆ ಲಂಚ ಸ್ವೀಕರಿಸಿದ್ದಾರೆ. ವರ್ಗಾವಣೆ ಹೆಸರಿನಲ್ಲಿ ದಂಧೆ ನಡೆಸುತ್ತಿದ್ದಾರೆ. ಇಲ್ಲಿವರೆಗೆ 18 ಕೋಟಿ ಲಂಚ ಸ್ವೀಕರಿಸಿದ್ದಾರೆ. ಲಂಚದ ಹಣದಲ್ಲಿ ಸಚಿವರಿಗೆ ಸಿಂಹಪಾಲು ನೀಡಲಾಗಿದೆ. 18 ಕೋಟಿ ಹಣದಲ್ಲಿ 13 ಕೋಟಿ ಸಚಿವರ ಖಾತೆಗೆ ಬಿದ್ದಿದೆ. ಉಳಿದ ಹಣ ಸಹಾಯಕ ಕಾರ್ಯದರ್ಶಿ ಸೇರಿದಂತೆ ಕೋಲಾರ ಅಬಕಾರಿ ಡಿಸಿ ಬಸವರಾಜ ಸಂದಿಗ್ವಾಡ್, ರಂಗಪ್ಪ, ಬೆಂಗಳೂರು ದಕ್ಷಿಣ ಅಬಕಾರಿ ಡಿಸಿ ವಿವೇಕ್ ಖಾತೆಗೆ ತಲುಪಿದೆ ಎಂದು ದಿನೇಶ್ ಕಲ್ಲಹಳ್ಳಿ ಅವರು ದೂರಿನಲ್ಲಿ ಗಂಭೀರ ಆರೋಪ ಮಾಡಿದ್ದಾರೆ. ಲಂಚದ ಹಣದಲ್ಲಿ ಅಧಿಕಾರಿಗಳು ಸಹ ಶಾಮೀಲಾಗಿದ್ದಾರೆ. ಅಬಕಾರಿ ಸಚಿವರ ಲಂಚಾವತಾರಕ್ಕೆ ಸರ್ಕಾರ…
ಮೊಸರು ತಿನ್ನುವುದರಿಂದ ಆರೋಗ್ಯಕ್ಕೆ ಹಲವಾರು ಪ್ರಯೋಜನಗಳಿವೆ. ಇದು ನಿಮ್ಮ ಮೂಳೆಗಳನ್ನು ಬಲಪಡಿಸುವುದರ ಜೊತೆಗೆ ಜೀರ್ಣಕ್ರಿಯೆಯನ್ನು ಉತ್ತಮವಾಗಿಸುತ್ತದೆ. ಇದೆಲ್ಲದರ ಜೊತೆಗೆ ನಮ್ಮ ಸೌಂದರ್ಯಕ್ಕೂ ಮೊಸರಿನ ಸೇವನೆಯಿಂದ ಸಾಕಷ್ಟು ಉಪಯೋಗಗಳಿವೆ. ಮೊಸರನ್ನು ಫೇಸ್ಪ್ಯಾಕ್, ಹೇರ್ ಪ್ಯಾಕ್, ಹೇರ್ ಕಂಡೀಷನರ್, ಟ್ಯಾನ್ ರಿಮೂವರ್ ರೂಪದಲ್ಲಿ ಬಳಸಬಹುದಾಗಿದೆ ಮೊಸರು ನೈಸರ್ಗಿಕವಾಗಿ ಚರ್ಮವನ್ನು ಎಕ್ಸ್ಫೋಲಿಯೇಟ್ ಮಾಡುತ್ತದೆ. ಮೊಸರಿನಲ್ಲಿರುವ ಲ್ಯಾಕ್ಟಿಕ್ ಆಮ್ಲ ಚರ್ಮವನ್ನು ಎಫ್ಫೋಲಿಯೇಟ್ ಮಾಡಲು ಸಹಾಯ ಮಾಡುವ ನೈಸರ್ಗಿಕ ಘಟಕಾಂಶವಾಗಿದೆ. ಇದು ಸತ್ತ ಚರ್ಮದ ಕೋಶಗಳು, ಕಲ್ಮಶಗಳು, ಕೊಳಕುಗಳನ್ನು ತೆಗೆದುಹಾಕುತ್ತದೆ. ಚರ್ಮವನ್ನು ಮಾಯಿಶ್ಚರೈಸ್ ಮಾಡುತ್ತದೆ. ನಿಮ್ಮ ತ್ವಚೆಗೆ ಮೊಸರನ್ನು ಹಚ್ಚುವುದರಿಂದ ನೈಸರ್ಗಿಕವಾಗಿ ತೇವವನ್ನು ನೀಡುತ್ತದೆ. ಹೈಡ್ರೇಟರ್ ಆಗಿ ಕಾರ್ಯನಿರ್ವಹಿಸುತ್ತದೆ. ಮೊಸರಿನಲ್ಲಿ ಕೊಬ್ಬಿನಾಂಶ ಸಮೃದ್ಧವಾಗಿದೆ. ಇದನ್ನು ಚರ್ಮಕ್ಕೆ ಹಚ್ಚಿದಾಗ ಮೊಸರು ನೈಸರ್ಗಿಕ ಹೈಡ್ರೇಟರ್ನಂತೆ ಕಾರ್ಯನಿರ್ವಹಿಸುತ್ತದೆ. ಮೊಸರು ನಿಮ್ಮ ಚರ್ಮದ ಕಾಲಜನ್ ಮತ್ತು ಎಲಾಸ್ಟಿನ್ ಮಟ್ಟವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇದರಿಂದ ನಿಮ್ಮ ತ್ವಚೆಯು ಯೌವನದಿಂದ ಕೂಡಿರುತ್ತದೆ. ಮೊಸರು ನಿಮ್ಮ ಚರ್ಮವನ್ನು ಪೋಷಿಸುತ್ತದೆ. ಇದರಲ್ಲಿ ವಿಟಮಿನ್ ಡಿ, ಪ್ರೋಟೀನ್ ಮತ್ತು ಪ್ರೋಬಯಾಟಿಕ್ಗಳಿವೆ.…
ಕನ್ನಡದ ನಟಿ ರುಕ್ಮಿಣಿ ವಸಂತ್ (Rukmini Vasanth) ಅವರು ನಟಿಸಿದ ‘ಸಪ್ತಸಾಗರದಾಚೆ ಎಲ್ಲೋ’ ಚಿತ್ರದ ಸಕ್ಸಸ್ ನಂತರ ತೆಲುಗಿನಲ್ಲಿ ಬಂಪರ್ ಆಫರ್ಸ್ ಅರಸಿ ಬರುತ್ತಿವೆ. ಟಾಲಿವುಡ್ ನಟ ವಿಜಯ್ ದೇವರಕೊಂಡಗೆ (Vijay Devarakonda) ರುಕ್ಮಿಣಿ ವಸಂತ್ ನಾಯಕಿಯಾಗಿದ್ದಾರೆ. ವಿಜಯ್ ದೇವರಕೊಂಡ ಅವರು ಮೃಣಾಲ್ ಠಾಕೂರ್ ಜೊತೆ ‘ಫ್ಯಾಮಿಲಿ ಸ್ಟಾರ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇದಾದ ಬಳಿಕ ಗೌತಮ್ ತಿಣ್ಣನುರಿ ಜೊತೆಗಿನ ವಿಜಯ್ ಚಿತ್ರಕ್ಕೆ ಚಾಲನೆ ಸಿಗಲಿದೆ. ಈಗಾಗಲೇ ಚಿತ್ರ ಮುಹೂರ್ತ ಕೆಲ ತಿಂಗಳುಗಳ ಹಿಂದೆ ಅದ್ಧೂರಿಯಾಗಿ ನಡೆಯಿತು. ವಿಜಯ್ಗೆ ಶ್ರೀಲೀಲಾ (Sreeleela) ನಾಯಕಿ ಎಂದು ಘೋಷಣೆ ಮಾಡಲಾಗಿತ್ತು. ಆದರೆ ಈಗ ಆ ಚಾನ್ಸ್ ನಟಿ ರುಕ್ಮಿಣಿಗೆ ಸಿಕ್ಕಿದೆ ಎನ್ನಲಾಗುತ್ತಿದೆ. ಸಪ್ತಸಾಗರದಾಚೆ ಎಲ್ಲೋ’ ತೆಲುಗು ವರ್ಷನ್ ಮೂಲಕ ಟಾಲಿವುಡ್ನಲ್ಲಿ ರುಕ್ಮಿಣಿ ವಸಂತ್ ಜನಪ್ರಿಯತೆ ಪಡೆದಿದ್ದಾರೆ. ಹಾಗಾಗಿ ಚಿತ್ರದ ನಿರ್ದೇಶಕ ಗೌತಮ್, ರುಕ್ಮಿಣಿ ಸಂಪರ್ಕಿಸಿದ್ದಾರೆ. ವಿಜಯ್ ದೇವರಕೊಂಡ ಜೊತೆ ನಟಿಸುವ ಅವಕಾಶ ರುಕ್ಮಿಣಿಗೆ ಸಿಕ್ಕಿದೆ ಎಂಬ ಸುದ್ದಿ ಹರಿದಾಡುತ್ತಿದೆ.ಚಿತ್ರತಂಡದಿಂದ ಅಧಿಕೃತ ಅಪ್ಡೇಟ್ ಸಿಗುವವರೆಗೂ ಕಾಯಬೇಕಿದೆ ‘ಸಪ್ತಸಾಗರದಾಚೆ…
ಚಿಕ್ಕಮಗಳೂರು:- ಜೈ ಶ್ರೀರಾಮ್ ಎಂಬ ಸಿದ್ದರಾಮಯ್ಯ ಘೋಷಣೆ ವಿಚಾರವಾಗಿ ಮಾಜಿ ಶಾಸಕ ಸಿಟಿ ರವಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ನಾನು ಸಿದ್ದರಾಮಯ್ಯ ಅಂತರಂಗವನ್ನು ತಿಳಿದಿಲ್ಲ. ಬಹಿರಂಗವಾಗಿ ಹೇಳುವಷ್ಟು ಹಿಂದುತ್ವಕ್ಕೆ ಸಾಮರ್ಥ್ಯ ಬಂದಿದೆ. ಅಯೋಧ್ಯೆ ರಾಮಮಂದಿರ ನಿರ್ಮಾಣವನ್ನು ವಿರೋಧಿಸಿದವರು ವಿಚಿತ್ರವಾಗಿ ಸಲಹೆ ಕೊಟ್ಟವರು. ನಮ್ಮ ಅಸ್ಮಿತೆ ಎಂದು ನಂಬಿದವರು ಇಂದು ಜೈ ಶ್ರೀರಾಮ್ ಎಂದು ಹೇಳುತ್ತಿದ್ದಾರೆ. ಮುಸಲ್ಮಾನರಿಗೂ ಪೂರ್ವಜ ರಾಮ ಎಂದರು. ಶ್ರೀರಾಮ ಭಕ್ತ ಹನುಮಂತನ ದೇವಾಲಯ ಮಸೀದಿಯಾಗಿದೆ. ಶ್ರೀರಂಗಪಟ್ಟಣದ ಹನುಮಂತನ ಮಂದಿರ ಮಸೀದಿಯಾಗಿದೆ. ಭಗವಂತ ಹಾಗೂ ಭಕ್ತನ ನಡುವೆ ಇರುವ ಸಂಬಂಧ ಗೊತ್ತು. ಸಿದ್ದರಾಮಯ್ಯನವರೇ ರಾಮನ ಹೆಸರನ್ನು ಇಟ್ಟುಕೊಂಡಿದ್ದೀರಾ ಜೈಹನುಮಾನ್ ಅಂತಾ ಹೇಳಿ ಮಂದಿರ ಪಡೆದುಕೊಳ್ಳೋಣ. ಆಗ ನಿಮ್ಮದು ನಿಜವಾದ ರಾಮ ಭಕ್ತಿ ಎಂದು ನಂಬುತ್ತೇವೆ ಎಂದು ಸ್ಪಷ್ಟಪಡಿಸಿದರು. ನಾವು ಮಾಡಿದ್ರೆ ಕೋಮುವಾದ, ನೀವು ಮಾಡಿದ್ರೆ ಕೋಮುವಾದ ಎನ್ನಲ್ಲ. ಅಡ್ವಾಣಿ, ಮೋದಿ ನೇತೃತ್ವದಲ್ಲಿ ರಾಮ ಮಂದಿರ ನಿರ್ಮಾಣವಾಗಿದೆ. ನಿಮ್ಮ ಹೋರಾಟದ ಮೂಲಕ ಮಸೀದಿಯಿಂದ ಹನುಮಂತನ ದೇವಾಲಯ ಪಡೆದುಕೊಳ್ಳೋಣ ನಿಮ್ಮ…
ಕರ್ನಾಟಕ ವಿರುದ್ಧ ನಡೆಯುತ್ತಿರುವ 2024 ನೇ ಸಾಲಿನ ರಣಜಿ ಟೂರ್ನಿಯ ಪಂದ್ಯದಲ್ಲಿ ಗೋವಾದ ಯುವ ಆಲ್ ರೌಂಡರ್ ಅರ್ಜುನ್ ತೆಂಡೂಲ್ಕರ್ 52 ರನ್ ಬಾರಿಸಿದರು. ಅಲ್ಲದೆ 9ನೇ ವಿಕೆಟ್ ಗೆ ಹೆರಾಂಬ್ ಪರಬ್ (53 ರನ್) ಜೊತೆಗೂಡಿ 93 ರನ್ ಕಲೆ ಹಾಕುವ ಮೂಲಕ ಗೋವಾ ಮೊದಲ ಇನಿಂಗ್ಸ್ ನಲ್ಲಿ 321 ರನ್ ಗಳಿಸಲು ನೆರವಾದರು. ಮೈಸೂರಿನ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅಂಗಣದಲ್ಲಿ ನಡೆಯುತ್ತಿರುವ ರಣಜಿ ಟೂರ್ನಿಯ ಎರಡನೇ ದಿನದಾಟ (ಜನವರಿ 20)ದಲ್ಲಿ ತನ್ನ ಬ್ಯಾಟಿಂಗ್ ಕೌಶಲ ಪ್ರದರ್ಶಿಸಿದ ಅರ್ಜುನ್ ತೆಂಡೂಲ್ಕರ್, ಕರ್ನಾಟಕದ ಬೌಲರ್ಗಳ ವಿರುದ್ಧ ಪ್ರಾಬಲ್ಯ ಮೆರೆದು ಎದುರಿಸಿದ 112 ಎಸೆತಗಳಲ್ಲಿ 3 ಮನಮೋಹಕ ಬೌಂಡರಿ ಹಾಗೂ ಒಂದು ಭರ್ಜರಿ ಸಿಕ್ಸರ್ ಮೂಲಕ ಆಕರ್ಷಕ ಅರ್ಧಶತಕ (52 ರನ್) ಗಳಿಸಿದರು. ಆದರೆ, ಎಡಗೈ ವೇಗಿ ವೆಂಕಟೇಶ್ ಬೌಲಿಂಗ್ನಲ್ಲಿ ದೊಡ್ಡ ಹೊಡೆತಕ್ಕೆ ಮುಂದಾಗಿ ವಿಕೆಟ್ ಕೀಪರ್ ಶರತ್ ಕ್ಯಾಚ್ ಕೊಟ್ಟು ವಿಕೆಟ್ ಒಪ್ಪಿಸಿದರು. ಪಂದ್ಯದ ಮೊದಲ ದಿನದಾಟದ ಅಂತ್ಯಕ್ಕೆ ಗೋವಾ 228…
ಬೆಳಗಾವಿ:- ರಾಮನ ಶಾಪದಿಂದ ದೇಶದಲ್ಲಿ ಕಾಂಗ್ರೆಸ್ ಧೂಳೀಪಟವಾಗಿದೆ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಕಾಂಗ್ರೆಸ್ನವರಿಗೆ ಅಧಿಕಾರ ಹಾಗೂ ಮುಸ್ಲಿಮರ ತುಷ್ಟೀಕರಣ ಬೇಕಿದೆ. ಮುಸ್ಲಿಮರಿಂದ ಗೆದ್ದಿದ್ದೇವೆ ಅನ್ನುವ ಸೊಕ್ಕು ರಜೆ ಕೊಡದಿರಲು ಕಾರಣ. ಈಗಾಗಲೇ ರಾಮನ ಶಾಪದಿಂದ ದೇಶದಲ್ಲಿ ಕಾಂಗ್ರೆಸ್ ಧೂಳೀಪಟವಾಗಿದೆ ಎಂದು ಕಿಡಿಕಾರಿದ್ದಾರೆ. ಅಯೋಧ್ಯೆಯಲ್ಲಿನ ಸಂಭ್ರಮ ಇಡೀ ದೇಶದಲ್ಲಿ ನಿರ್ಮಾಣವಾಗಿದೆ. ದೇಶ ಒಂದಾಗಿದೆ ಎನ್ನುವ ಸಂದೇಶ ರವಾನೆ ಆಗಿದೆ. ಇತಿಹಾಸದಲ್ಲಿ ಸುವರ್ಣ ಅಕ್ಷರದಲ್ಲಿ ಬರೆದಿಡುವ ಶ್ರೇಷ್ಠ ದಿನ ಇದು. 500 ವರ್ಷಗಳ ಹೋರಾಟಕ್ಕೆ ಫಲ ಸಿಕ್ಕಿದೆ. ರಾಮನ ಮೂರ್ತಿ ಪುನಃ ಪ್ರತಿಷ್ಠಾಪನೆ ಆಗಿದೆ. ಕಟ್ಟಿದೆವು ಕಟ್ಟಿದೇವು ರಾಮ ಮಂದಿರ ಕಟ್ಟಿದೇವು ಎನ್ನುವ ಘೋಷಣೆ ಪ್ರಾರಂಭವಾಗಿದೆ. ಇಡಿ ದೇಶದಲ್ಲಿ ಆನಂದದ ಸುನಾಮಿ ಹರಿಯುತ್ತಿದೆ ಎಂದಿದ್ದಾರೆ. ಜಾತಿ, ಪಕ್ಷ, ಬೇಧ ಬಿಟ್ಟು ಜೈ ಶ್ರೀ ರಾಮ ಘೋಷಣೆ ಮೊಳಗುತ್ತಿದೆ. ರಾಮ ನಮ್ಮನ್ನ ಎಲ್ಲರನ್ನ ಒಟ್ಟೂಗೂಡಿಸಿ ಬೇಧ ದೂರ ಮಾಡಿದ್ದಾನೆ ಎಂದು ಹೇಳಿದ್ದಾರೆ.
ಟೆಸ್ಟ್ ಕ್ರಿಕೆಟ್ನ ಪರಿಣತ ಬ್ಯಾಟರ್ ಆಗಿರುವ ಚೇತೇಶ್ವರ್ ಪೂಜಾರ ಭಾರತ ತಂಡದಲ್ಲಿ ಸ್ಥಾನ ಕಳೆದುಕೊಂಡಿದ್ದಾರೆ. ಕಳಪೆ ಲಯ ಕಾರಣ ಅವರನ್ನು ಟೀಮ್ ಇಂಡಿಯಾದ ಟೆಸ್ಟ್ ತಂಡದಿಂದ ಕೈಬಿಡಲಾಗಿದೆ. ಆದರೂ ತಂಡಕ್ಕೆ ಕಮ್ಬ್ಯಾಕ್ ಮಾಡುವ ಪಣ ತೊಟ್ಟಿರುವ 36 ವರ್ಷದ ಅನುಭವಿ ಬಲಗೈ ಬ್ಯಾಟರ್ ದೇಶಿ ಕ್ರಿಕೆಟ್ ಆಡಲು ಮುಂದಾಗಿದ್ದು, 2022-24ರ ಸಾಲಿನ ರಣಜಿ ಟ್ರೋಫಿ ಟೂರ್ನಿಯಲ್ಲಿ ಸೌರಾಷ್ಟ್ರ ತಂಡದ ಪರ ಬ್ಯಾಟ್ ಬೀಸುತ್ತಿದ್ದಾರೆ. ಅದರಲ್ಲೂ ವಿದರ್ಭ ಎದುರು ಭಾನುವಾರ ಮುಕ್ತಾಯಗೊಂಡ ಪಂದ್ಯದಲ್ಲಿ ಪೂಜಾರ ವಿಶೇಷ ದಾಖಲೆ ಒಂದನ್ನು ಬರೆದಿದ್ದಾರೆ. ವಿದರ್ಭ ಎದುರು ಮೊದಲ ಇನಿಂಗ್ಸ್ನಲ್ಲಿ 43 ಮತ್ತು ಎರಡನೇ ಇನಿಂಗ್ಸ್ನಲ್ಲಿ 66 ರನ್ ಬಾರಿಸಿದ ಪೂಜಾರ ಇದೇ ವೇಳೆ ಪ್ರಥಮದರ್ಜೆ ಕ್ರಿಕೆಟ್ 20 ಸಾವಿರ ರನ್ಗಳ ಗಡಿ ದಾಟಿದ್ದಾರೆ. ಈ ಮೂಲಕ ದಿಗ್ಗಜರಿರುವ ದಾಖಲೆ ಪಟ್ಟಿ ಸೇರುವ ಮೂಲಕ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರಿಗೂ ಮೊದಲು ಈ ಮೂಲುಗಲ್ಲು ಮುಟ್ಟಿದ ಸಾಧನೆ ಮೆರೆದಿದ್ದಾರೆ. ನಾಗ್ಪುರದಲ್ಲಿರುವ ವಿಸಿಎ ಕ್ರಿಕೆಟ್ ಸ್ಟೇಡಿಯಂನಲ್ಲಿ…
ಬೆಂಗಳೂರು:- ರಾಜಧಾನಿ ಬೆಂಗಳೂರಿನ ವೈಟ್ಫೀಲ್ಡ್ ಠಾಣಾ ವ್ಯಾಪ್ತಿಯಲ್ಲಿ ಟ್ಯೂಷನ್ಗೆ ತೆರಳಿದ್ದ 12 ವರ್ಷದ ಬಾಲಕ ನಿಗೂಢವಾಗಿ ನಾಪತ್ತೆ ಆಗಿರುವಂತಹ ಘಟನೆ ಜರುಗಿದೆ. ಪರಿನವ್ ನಾಪತ್ತೆ ಆದ ಬಾಲಕ ಎನ್ನಲಾಗಿದೆ. ಗುಂಜೂರಿನ ಡೆನ್ ಅಕಾಡೆಮಿ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಪರಿನವ್, ಭಾನುವಾರ ಮಧ್ಯಾಹ್ನ 12.15ರ ಸುಮಾರಿಗೆ ನಾಪತ್ತೆ ಆಗಿದ್ದಾನೆ. ವೈಟ್ಫೀಲ್ಡ್ನ ಅಲೆನ್ ಟೂಷನ್ ಸೆಂಟರ್ಗೆ ತಂದೆ ಡ್ರಾಪ್ ಮಾಡಿದ್ದಾರೆ. ಮಧ್ಯಾಹ್ನ ಕರೆತರಲು ಹೋಗುವುದು ತಡವಾಗಿದ್ದರಿಂದ ನಾಪತ್ತೆ ಆಗಿದ್ದಾನೆ. ಟ್ಯೂಷನ್ ಸೆಂಟರ್ನಿಂದ ಮಾರತ್ತಹಳ್ಳಿವರೆಗೆ ಬಾಲಕ ನಡೆದುಬಂದಿದ್ದು, ನಂತರ ಬಿಎಂಟಿಸಿ ಬಸ್ ಹತ್ತಿರುವ ಸಿಸಿಕ್ಯಾಮರಾ ದೃಶ್ಯ ಲಭ್ಯವಾಗಿದೆ. ಆನಂತರ ಬಾಲಕ ಪರಿನವ್ ಎಲ್ಲಿ ಹೋದನೆಂದು ಈವರೆಗೂ ಪತ್ತೆಯಾಗಿಲ್ಲ. ಬಾಲಕ ನಾಪತ್ತೆ ಬಗ್ಗೆ ವೈಟ್ಫೀಲ್ಡ್ ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿದ್ದು, ನಾಪತ್ತೆಯಾದ ಪರಿನವ್ಗಾಗಿ ವೈಟ್ಫೀಲ್ಡ್ ಠಾಣೆ ಪೊಲೀಸರು ಶೋಧ ಆರಂಭಿಸಿದ್ದಾರೆ.
ಈಗ ಮೊಬೈಲ್ ಫೋನ್ಗಳಲ್ಲಿ ಬಯೋಮೆಟ್ರಿಕ್ ದೃಢೀಕರಣ ಕೂಡಾ ಸ್ವಲ್ಪ ಸಮಯದಿಂದಲೇ ಇದೆ. ಹಳೆಯ ಶೈಲಿಯ ಅಥವಾ ಪಿನ್ ಹಾಗೂ ಪಾಸ್ವರ್ಡ್ ಅನ್ಲಾಕ್ಗಳ ಜಾಗಕ್ಕೆ ಈಗ ಫಿಂಗರ್ಪ್ರಿಂಟ್ ಮತ್ತು ಫೇಸ್ ಅನ್ಲಾಕಿಂಗ್ ವೈಶಿಷ್ಟ್ಯಗಳು ಬಂದಿವೆ. ಹಾಗೆ ಇನ್ ಡಿಸ್ಪ್ಲೇ ಫಿಂಗರ್ಪ್ರಿಂಟ್ ಸೆನ್ಸರ್ ಹೊಂದಿರುವ ಕೆಲ 5ಜಿ ಸ್ಮಾರ್ಟ್ಫೋನ್ಗಳ ಬಗ್ಗೆ ಇಲ್ಲಿ ನೋಡೋಣ. ಒಪ್ಪೊ ಎಫ್21 ಎಸ್ ಪ್ರೊ 5ಜಿ ನವೀಕರಣಗೊಂಡ ಒಪ್ಪೊ ಎಫ್21 ಎಸ್ ಪ್ರೊ 5ಜಿ ಬೆಲೆ 19,700 ರೂಪಾಯಿ. ಈ ಫೋನ್ ಇನ್ ಡಿಸ್ಪ್ಲೇ ಫಿಂಗರ್ಪ್ರಿಂಟ್ ಸೆನ್ಸರ್ನೊಂದಿಗೆ ಬರುತ್ತದೆ. ಇದು 8ಜಿಬಿ RAM, 128 ಜಿಬಿ ಸ್ಟೋರೇಜ್ ಅನ್ನು ಹೊಂದಿದೆ. ಟೆಕ್ನೋ ಕ್ಯಾಮನ್ 20 ಪ್ರೊ 5ಜಿ ಟೆಕ್ನೋ ಕ್ಯಾಮನ್ 20 ಪ್ರೊ 5ಜಿ ಈ ಸ್ಮಾರ್ಟ್ಫೋನ್ನ ಬೆಲೆ 19,999 ರೂಪಾಯಿ. ಇದು ಮೀಡಿಯಾಟೆಕ್ ಡಿಮೆನ್ಸಿಟಿ 8050 ಪ್ರೊಸೆಸರ್ನಿಂದ ಚಾಲಿತವಾಗಿದ್ದು, ಈ ಫೋನ್ ಕೂಡಾ ಇನ್ ಡಿಸ್ಪ್ಲೇ ಫಿಂಗರ್ಪ್ರಿಂಟ್ ಸೆನ್ಸರ್ನೊಂದಿಗೆ ಬರುತ್ತದೆ. ಲಾವಾ ಅಗ್ನಿ 2 5ಜಿ ಈ ಸ್ಮಾರ್ಟ್…